Author: admin
ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವು ಜುಲೈ 27 ರಂದು ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನದಲ್ಲಿ ನೆರವೇರಿತು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಲಯನ್ ಎನ್.ಎಮ್ ಹೆಗ್ಡೆ ಎಮ್.ಜೆ.ಎಫ್ ಇವರು ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಅತ್ಯುತ್ತಮ ರೀತಿಯಲ್ಲಿ ನೆರವೇರಿಸಿ, ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ನೂತನ ಅಧ್ಯಕ್ಷರಾದ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿಯವರು ಅಧ್ಯಕ್ಷೀಯ ಭಾಷಣ ಮಾಡಿದರು. ಲಯನ್ಸ್ ಜಿಲ್ಲಾ ಚೀಫ್ ಡಿಸ್ಟ್ರಿಕ್ಟ್ ಎಡ್ಮಿನಿಸ್ಟ್ರೇಟರ್ ಲಯನ್ ಯಡಾಡಿ ಅರುಣ್ ಕುಮಾರ್ ಹೆಗ್ಡೆ, ರೀಜನ್ ಚೇರ್ ಪರ್ಸನ್ ಲಯನ್ ರಜತ್ ಹೆಗ್ಡೆ, ಝೋನ್ ಚೇರ್ ಪರ್ಸನ್ ಲಯನ್ ಸಂತೋಷ್ ಶೆಟ್ಟಿ, ರೀಜನ್ ಸೆಕ್ರೆಟರಿ ಲಯನ್ ಏಕನಾಥ್ ಬೋಳಾರ್ ಶುಭ ಶಂಸನೆಗೈದರು. ಮಾಜಿ ಜಿಲ್ಲಾ ಗವರ್ನರ್ ಲಯನ್ ಮಹಮ್ಮದ್ ಹನೀಫ್, ಕ್ಲಬ್ ನ ನೂತನ ಕೋಶಾಧಿಕಾರಿ ಲಯನ್ ನಿತೀಶ್ ಆಚಾರ್ ಮಧುವನ ಮತ್ತು ನಿಕಟಪೂರ್ವ ಕಾರ್ಯದರ್ಶಿ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿಯವರು ಉಪಸ್ಥಿತರಿದ್ದರು.…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಸಂಸ್ಥೆಯ ಅಧ್ಯಕ್ಷರ ಹುಟ್ಟು ಹಬ್ಬವನ್ನು ಅತ್ಯಂತ ಸಂಭ್ರಮದಿ0ದ ಆಚರಿಸಲಾಯಿತು. ಶಾಲಾ ಸಂಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗಿ, ಕೇಕ್ ಕತ್ತರಿಸಿ ಮಾತನಾಡಿ ನಾನು ತುಂಬಾ ಅದೃಷ್ಟವoತ. ಇಷ್ಟೊಂದು ಪ್ರೀತಿ, ಗೌರವ ಎಲ್ಲರಿಗೂ ಸಿಗಲು ಸಾಧ್ಯವಿಲ್ಲ. ನಾನು ಪ್ರತಿನಿತ್ಯ ನನ್ನ ತಂದೆ- ತಾಯಿಯರನ್ನು ಸ್ಮರಿಸಿ ದಿನಚರಿಯನ್ನು ಪ್ರಾರಂಭಿಸುತ್ತೇನೆ. ನೀವೆಲ್ಲರೂ ನಿಮ್ಮ ಪೋಷಕರನ್ನು ಪ್ರೀತಿಸಿ, ಗೌರವಿಸಿ, ನಿಮ್ಮ ಕೆಲಸಗಳನ್ನು ಇಷ್ಟಪಟ್ಟು ಮಾಡಿ. ಮುಂದಿನ ದಿನಗಳಲ್ಲಿ ನಿಮ್ಮ ಜೀವನದ ಯಶೋಗಾಥೆಯನ್ನು ನಮ್ಮ ಜೊತೆ ಹಂಚಿಕೊಳ್ಳಿ ಎoದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಮಾತನಾಡಿ ತಾವು ಕಟ್ಟಡಗಳನ್ನು ನಿರ್ಮಾಣ ಮಾಡುವುದರ ಮೂಲಕ ವೃತ್ತಿ ಜೀವನವನ್ನು ಪ್ರಾರಂಭಿಸಿ ಇಂದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ಕಟ್ಟುತ್ತಿದ್ದೀರಿ. ನಿಮ್ಮ ಈ ಕಾರ್ಯ ವೈಖರಿ ನಮಗೆಲ್ಲರಿಗೂ ಸ್ಫೂರ್ತಿ ಎಂದರು. ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು ಸಿಬ್ಬಂದಿವರ್ಗ ಗ್ರೀಟಿಂಗ್ಸ್, ಹೂವಿನ ಗುಚ್ಛವನ್ನು ನೀಡಿ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ…
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆಸಿಐ ಪುತ್ತೂರು ಹಾಗೂ ಚಿಣ್ಣರ ಅಂಗಳ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಆಗಸ್ಟ್ 10 ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಯಿಂದ ಕೃಷ್ಣ ವೇಷ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆಯಲಿದ್ದು, 01 ವರ್ಷದಿಂದ 03 ವರ್ಷದೊಳಗಿನ ಮಕ್ಕಳು ಹಾಗೂ 03 ವರ್ಷದಿಂದ 06 ವರ್ಷದೊಳಗಿನ ಮಕ್ಕಳಿಗೆ ಸ್ಪರ್ಧೆ ಆಯೋಜನೆಗೊಂಡಿದೆ. ಪ್ರಥಮ ಬಹುಮಾನವಾಗಿ ರೂ. 3000, ದ್ವಿತೀಯ ಬಹುಮಾನ ರೂ. 2000, ತೃತೀಯ ಬಹುಮಾನ ರೂ. 1000 ದೊರೆಯಲಿದೆ. ಅಲ್ಲದೇ ಭಾಗವಹಿಸುವ ಎಲ್ಲಾ ಮುದ್ದು ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ಪದಕ ನೀಡಲಾಗುವುದು. ಎರಡೂ ವಿಭಾಗಗಳಿಗೂ ಪ್ರತ್ಯೇಕವಾಗಿ ಬಹುಮಾನಗಳನ್ನು ನೀಡಲಾಗುತ್ತದೆ. ಸ್ಪರ್ಧೆಗೆ ಹಾಜರಾಗುವ ಸಂದರ್ಭದಲ್ಲಿ ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಒಂದು ಭಾವಚಿತ್ರ ಕಡ್ಡಾಯವಾಗಿ ತರತಕ್ಕದ್ದು, ಹೆಸರನ್ನು ಈ ಕೆಳಗಿನ ಸಂಖ್ಯೆಗೆ ಆಗಸ್ಟ್ 07 ರ ಒಳಗಡೆ ಕರೆಯ ಮೂಲಕ ನೋಂದಾಯಿಸಲು ಪ್ರಕಟಣೆ ತಿಳಿಸಿದೆ. ಹೆಚ್ಚಿನ…
ಬಂಟರ ಯಾನೆ ನಾಡವರ ಸಂಘ ಬೈಂದೂರು : ಬಂಟರ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂಡಬಿದಿರೆ ಬಂಟರ ಸಂಘ ದ್ವಿತೀಯ
ಬಂಟರ ಯಾನೆ ನಾಡವರ ಸಂಘ ಬೈಂದೂರು ಇದರ ೩೦ನೇ ವಾರ್ಷಿಕ ಸಂಭ್ರಮದ ಪ್ರಯುಕ್ತ ಬಂಟರ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶದ ಹಲವಾರು ಬಂಟರ ಸಂಘಗಳ ತಂಡಗಳು ಭಾಗವಹಿಸಿದ್ದ ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಮೂಡಬಿದಿರೆ ಬಂಟರ ಸಂಘವು ಅಮೋಘ ಪ್ರದರ್ಶನವನ್ನು ನೀಡಿ ದ್ವಿತೀಯ ಸ್ಥಾನವನ್ನು ಗಳಿಸಿ 75,000 ರೂಪಾಯಿಯನ್ನು ತನ್ನದಾಗಿಸಿಕೊಂಡಿತು. ಗುರುಪುರ ಬಂಟರ ಮಾತೃ ಸಂಘವು ಪ್ರಥಮ ಪ್ರಶಸ್ತಿಯನ್ನು, ಬ್ರಹ್ಮಾವರ ಬಂಟರ ಸಂಘವು ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಈ ಕಾರ್ಯಕ್ರಮದ ಪ್ರಶಸ್ತಿ ವಿತರಣೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಬೈಂದೂರು ಬಂಟರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ, ಜಾಗತಿಕ ಬಂಟರ ಸಂಘದ ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ ಮತ್ತು ಬೈಂದೂರು ಬಂಟರ ಸಂಘದ ಪದಾಧಿಕಾರಿಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು.
ಗುತ್ತುದ ಬಂಟೆದಿನ ಗತ್ತ್ ಗ್ ನನಾತ್ ಐಸ್ರ ದಿಂಜಾವುನ ಒಡ್ಡಿ ಉಂಗಿಲ. ಬಂಟೆರೆ ಪಾಲ್ಗ್ ಗುರ್ತ ಪತ್ತುನ ಸೂಚಿಲಾ ಅಂದ್, ಪ್ರತಿಷ್ಠೆಲಾ ಅಂದ್. ಒಡಿದ್ ಅತಂಡ ಮೋನೆ ಮೋನೆ ಒಡ್ಡ್ ದ್ ಅತಂಡ ಬಗ್ಗ್ ದ್ ಉಪ್ಪುನೆಡ್ದಾದ್ ಒಡ್ಡಿ ಉಂಗಿಲ ಪನ್ಪೆರ್. ತಾರಾಯಿದ ಅತ್ತಂಡ ಪೆತ್ತದ ಪೇರ್ ಡ್ ಪಾಡ್ದ್ ದೀದ್ ಮದಿಮಲ್ ಪೊಣ್ಣಗ್ ದೀಪಿನೆಡ್ ಪೇರ್ ಉಂಗಿಲ ಪನ್ಪೆರ್. ಅಳಿಯಕಟ್ಟ್ ದ ಬಂಟೆರೆನ ಪೊಣ್ಣು ಮಗಳ್ ಪಂಡ ಆಲ್ ಅಪ್ಪೆ ಇಲ್ಲ್ ಬೊಕ್ಕ ಕುಟುಂಬ ಬೆಳಗವುನ ದೀಪ. ಆಲ್ ಪುಟ್ಟಿ ಇಲ್ಲ್ ಬುಡ್ದ್ ಕಂಡನಿಲ್ಲಗ್ ಪೋಂಡಲಾ ಆಲೆಗ್ ಅಪ್ಪೆ ಇಲ್ಲಡ್ ಅಪ್ಪೆ ಕುಟುಮಡ್ ಪರಿಪೂರ್ಣ ಹಕ್ಕ್ ಉಂಡು. ಆಲ್ನ, ಆಲ್ನ ಜೋಕುಲ್ನ ಕುಟುಮ ಅಪ್ಪೆನವೇ ಆದುಪ್ಪುಂಡು. ದುಂಬು ಮದಿಮೆ ಆಣನ ಇಲ್ಲಡ್ ನಾಡತೊಂದು ಇತ್ತ್ ದ್, ಅಲ್ಪ ಕಾಲಿ ದಾರೆ ಏರಾವುನ ಕ್ರಮ ಮಾತ್ರ ಇತ್ತಿನಿ. ಅದಗ ಪೊಣ್ಣು ಮಗಳ್ ಅಪ್ಪೆ ಇಲ್ಲ್ ಜತ್ತ್ ದಿಬ್ಬಣ ಪಿಡಾಡ್ದ್ ಪೋಪಿನ ಪೊರ್ತುಡು…
ಗಣಿತನಗರ : ಎನ್.ಎಸ್.ಎಸ್ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ರಾಷ್ಟಿçÃಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನುವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಸೇವಕ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಅವಿನಾಶ್ ಜಿ. ಶೆಟ್ಟಿ ನೆರವೇರಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ. ಕೊಡವೂರ್, ಸಹಯೋಜನಾಧಿಕಾರಿ ಶ್ರೀ ಪ್ರಸಾದ್ ಆಚಾರ್ಯ ಎಚ್, ಘಟಕದ ವಿದ್ಯಾರ್ಥಿ ನಾಯಕರಾದ ಭವಿಷ್ ಎಸ್ ಶೆಟ್ಟಿ ಹಾಗೂ ಸೃಷ್ಟಿ ಶೆಟ್ಟಿ ರೆಂಜಾಳ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಶ್ರೀಮತಿ ಉಷಾ ರಾವ್ ಯು, ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ವಾಣಿಜ್ಯ ವಿಭಾಗದ ಮುಖ್ಯಸ್ಥೆ…
ಮೂಡುಬಿದಿರೆ: ಶಿಕ್ಷಣ ವ್ಯಕ್ತಿಗಳಿಗೆ ಉದ್ಯೋಗ ಪಡೆಯಲು ಅರ್ಹರನ್ನಾಗಿಸುವುದರ ಜತೆಗೆ ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ವೈಯಕ್ತಿಕವಾಗಿ ಸಶಕ್ತರನ್ನಾಗಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊAಡಿರುವ `ಆಳ್ವಾಸ್ ಪ್ರಗತಿ&#೩೯; ೨ ದಿನಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಳ್ವಾಸ್ ವಿದ್ಯಾರ್ಥಿಗಳ ಭವಿಷ್ಯದ ದಾರಿಯನ್ನು ಸುಗಮಗೊಳಿಸಲು ವಿನೂತನ ಸಾಧ್ಯತೆಗಳನ್ನು ಪ್ರತಿ ವರ್ಷವೂ ತೆರೆದಿಡುತ್ತದೆ. ಶಿಕ್ಷಣ ವ್ಯವಸ್ಥೆಯನ್ನು ವ್ಯಾಪಾರವಾಗಿ ಕಾಣದೆ ಸಮಾಜದ ಒಳಿತಿಗೆ ಶ್ರಮಿಸುವ ಸಂಸ್ಥೆಯ ಬದ್ಧತೆ ನಿಜಕ್ಕೂ ಪ್ರೇರಣೀಯ. ಉತ್ತಮ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವುದು ಸರ್ಕಾರದ ಹಾಗೂ ಸಮಾಜದ ಕರ್ತವ್ಯ. ಉದ್ಯೋಗ ಗಳಿಸಿ ಸ್ವಂತಿಕೆಯಿ0ದ ಬೆಳೆೆಯುವವರು ಇತರರನ್ನೂ ಬೆಳೆಸಿ ಸಮಾಜಕ್ಕೆ ಅಮೂಲ್ಯ ಆಸ್ತಿಯಾಗುತ್ತಾರೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹಾಕಲು ಸಾಧ್ಯವಾಗದೇ ಇದ್ದಾಗ ಸಮಾಜಕ್ಕೆ ಹೊರೆಯಾಗಿ ಕಾಣುತ್ತಾರೆ. ಈ ಸಂಖ್ಯೆಯನ್ನು ಕಡಿಮೆಗೊಳಿಸುವ ಜವಾಬ್ದಾರಿ ಹೆಚ್ಚಾಗಬೇಕು. ದೇಶದಲ್ಲಿರುವ ಮಾನವ ಸಂಪನ್ಮೂಲವನ್ನು ಸದ್ಬಳಕೆ…
ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 3 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲರಾದ ಡಾ ಮಂಜುಳಾ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ದ.ಕ ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಹೆಜಮಾಡಿ ಶಾರದಾ ಡೆವಲಪರ್ಸ್ ನ ಮಾಲಕ ಪ್ರೇಮನಾಥ್ ಎಂ ಶೆಟ್ಟಿ, ಮಲ್ಲಿಕಾ ಯಶವಂತ ಶೆಟ್ಟಿ ಬಳ್ಕುಂಜೆಗುತ್ತು ಬಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ…
ಮಕ್ಕಳ ಭವಿಷ್ಯ ಕಟ್ಟುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿದ್ದರೆ ಮಾತ್ರ ವಿದ್ಯಾರ್ಥಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬೋಧಕರು ನಿರಂತರ ಅಭ್ಯಾಸದಲ್ಲಿ ತೊಡಗಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬಹುದು. ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾರಣಕ್ಕೂ ನಿಲಕ್ಷ್ಯ ಧೋರಣೆ ಸಲ್ಲದು. ಇಂತಹ ಕಾರ್ಯಾಗಾರಗಳು ಬೋಧನಾ ವೃತ್ತಿಯಲ್ಲಿ ಇರುವವರಿಗೆ ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜನ್ನಾಡಿಯ ಫೇವರೇಟ್ ಕ್ಯಾಶ್ಯೂ ಇಂಡಸ್ಟೀಸ್ ನ ಎಚ್ ಶಂಕರ ಹೆಗ್ಡೆ ಅವರು ಮಾತನಾಡಿ, ಬದುಕಿನಲ್ಲಿ ಸವಾಲುಗಳು ಸಾಧನೆಯ ಶಿಖರವೇರಲು ಸಹಾಯ ಮಾಡುತ್ತವೆ. ಗುರು ಸ್ಥಾನದಲ್ಲಿರುವವರು ವಿದ್ಯಾರ್ಥಿಗಳ ಶಕ್ತಿಯನ್ನು…
ವಿಶ್ವವನ್ನೇ ತಲ್ಲಣಗೊಳಿಸುತ್ತಿರುವ ಗಂಭೀರ ಸಮಸ್ಯೆಯಾಗಿರುವ ತಾಪಮಾನದ ಏರುವಿಕೆಗೆ ಕಡಿವಾಣವನ್ನು ಹಾಕುವುದರೊಂದಿಗೆ ಪರಿಸರವನ್ನು ರಕ್ಷಿಸಿ ಅದನ್ನು ಕಾಪಾಡಿಕೊಳ್ಳುವುದು ಪ್ರಜ್ಞಾವಂತ ನಾಗರೀಕರಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಾವು ಪರಿಸರವನ್ನು ಉಳಿಸಿದರೆ ಮಾತ್ರ ನಮ್ಮನ್ನು ಪರಿಸರ ಉಳಿಸುತ್ತದೆ. ಇಂದು ವನಮಹೋತ್ಸವ ಆಚರಣೆಯ ನಿಮಿತ್ತ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಬಂಟರ ಸಂಘ ಮುಂಬಯಿ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯು ಪರಿಸರ ಸಂರಕ್ಷಣೆ ಬಗ್ಗೆ ಮಾಡುತ್ತಿರುವ ಸೇವೆಯನ್ನು ಮುಖ್ಯ ಅತಿಥಿ ಡಾ| ಪಿ.ವಿ ಶೆಟ್ಟಿಯವರು ಶ್ಲಾಘಿಸಿದರು. ಅವರು ಬಂಟರ ಸಂಘ ಮುಂಬಯಿ, ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯು ಜುಲೈ 30 ರಂದು ದಹಿಸರ್ ಪೂರ್ವದ ಛತ್ರಪತಿ ಶಿವಾಜಿ ಮಹಾರಾಜ್ ಉದ್ಯಾನವನ, ಎನ್ಎಲ್ ಕಾಂಪ್ಲೆಕ್ಸ್ ನಲ್ಲಿ ಹಮ್ಮಿಕೊಂಡ ವನಮಹೋತ್ಸವ ಆಚರಣೆಯ ಅಂಗವಾಗಿ ಸಸಿ ನೆಡುವ ಅಭಿಯಾನದ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡುತ್ತಿದ್ದರು. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೌರವ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಮಾಜಿ ಕಾರ್ಪೊರೇಟರ್ ಜಗದೀಶ್ ಕೃಪಾಶಂಕರ್ ಓಝಾ…















