Author: admin
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್ಎಲ್ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್ಎಲ್ಬಿ…
ಬಂಟರ ಯಾನೆ ನಾಡವರ ಮಾತೃ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೇ ಮಾದರಿ ಎಂಬ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲಾ ಜಾತಿ, ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ದ್ವಿತೀಯ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಯಶಪಾಲ್ ಸುವರ್ಣ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಸಿಎ ಎನ್.ಬಿ. ಶೆಟ್ಟಿ, ಬ್ಯಾಂಕ್ ಆಫ್ ಬರೋಡದ ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನ, ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ಕರ್ನಾಟಕ ಧಾರ್ಮಿಕ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಶಿಕ್ಷಕ ದಂಪತಿಗಳಿಗೆ ಸನ್ಮಾನಿಸುವ ಮೂಲಕ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕ ದಂಪತಿಗಳಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ದಿನಕರ್ ಆರ್ ಶೆಟ್ಟಿ ಮತ್ತು ಅವರ ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಸವಿತಾ ಶೆಟ್ಟಿ ಅವರನ್ನು ಬಸ್ರೂರಿನ ಅವರ ಸ್ವಗೃಹದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿದರು. ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಶೆಟ್ಟಿ ಹುಯ್ಯಾರು, ಖಜಾಂಚಿ ಭರತರಾಜ್ ಶೆಟ್ಟಿ ಜಾಂಬೂರು, ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುಕುಮಾರ್ ಶೆಟ್ಟಿ ಹೇರಿಕುದ್ರು ಉಪಸ್ಥಿತರಿದ್ದರು. ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ ಪ್ರಸ್ತಾವಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬೆಳ್ಮಣ್ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿಯ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಕಾಪು ಪುರಸಭೆಯ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರೇಷ್ಮಾ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅವಿನಾಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನ ಕಾನೂನು ಮಹಾವಿದ್ಯಾಲಯ ಅರಂಭ 5 ವರ್ಷಗಳ ಬಿಕಾಂ ಎಲ್ಎಲ್ಬಿ ಹಾಗೂ 3 ವರ್ಷಗಳ ಎಲ್ಎಲ್ಬಿ ಪದವಿ 2024-25 ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್ಎಲ್ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್ಎಲ್ಬಿ…
ಎಚ್ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಉದ್ಘಾಟಿಸಿದರು. ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ. ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸ ಬೇಕೆಂದರು. ತುಳು ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ, ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು. ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ, ಹಾಸ್ಯ ಸಿನಿಮಾದ ಜೊತೆಗೆ ಸದಭರುಚಿಯ ಸಮಾಜಕ್ಕೆ…
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಿರುವ ಇಲ್ಲಿನ ಗಣೇಶೋತ್ಸವ ಇನ್ನಷ್ಟು ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದರು. ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪ್ರಕೃತಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದು, ಗಣೇಶೋತ್ಸವದ ಸಂದರ್ಭದಲ್ಲಿ ತೆನೆ ವಿತರಣೆ ಮಾಡುವ ಮೂಲಕ ದೇವರ ಆರಾಧನೆ ಜೊತೆಗೆ ಪ್ರಕೃತಿಯೊಂದಿಗೆ ನಮ್ಮ ಬದುಕನ್ನು ಜೋಡಿಸಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದರು. ಸಾಂಕೇತಿಕ ತೆನೆ ವಿತರಿಸಿದ ಮೋಹನ್ ದೇವ ಆಳ್ವ ಅವರು ಮಾತನಾಡಿ,…
ಭಾರತ ದೇಶವು ವಿವಿಧ ಸಂಸ್ಕ್ರತಿ, ಸಂಸ್ಕಾರಗಳ ನೆಲೆವೀಡಾಗಿದ್ದು, ಹಬ್ಬ, ಉತ್ಸವಗಳು ಪರಸ್ಪರ ಬಾಂಧವ್ಯ ಬೆಳೆಸಲು ಪೂರಕವಾಗಿದೆ ಎಂದು ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೊದಲ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು. ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ, ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ಶೀಘ್ರದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಾಣಗೊಳ್ಳಲಿದ್ದು, ಸಮಗ್ರ ಸಮಾಜಕ್ಕೆ ನೂತನ ಕಟ್ಟಡದ ಪ್ರಯೋಜನ ಸಿಗಲಿದೆ ಎಂದರು. ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಾತನಾಡಿ, ಬಂಟರ ನೂತನ ಕಟ್ಟಡಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಅಪೂರ್ವ ನಾಯಕತ್ವ ಗುಣ ಹೊಂದಿರುವ ಬಂಟ ಸಮಾಜ ಬಾಂಧವರು ಅತ್ಯಂತ…
ಎಚ್ ಪಿ ಆರ್ ಪ್ರೊಡಕ್ಷನ್ ಲಾಂಛನದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನ ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತಯಾರಾಗುತ್ತಿರುವ “ಕಂಕನಾಡಿ” ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಸೆಪ್ಟೆಂಬರ್ 8 ಭಾನುವಾರ ಬೆಳಿಗ್ಗೆ 9.30 ಕ್ಕೆ ಉರ್ವ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿದೆ. ತ್ರಿಶೂಲ್ ಶೆಟ್ಟಿ ಅವರು ಸಿನಿಮಾ ರಂಗದಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡಿದ್ದಾರೆ. ಪುಳಿಮುಂಚಿ ತುಳು ಸಿನಿಮಾವನ್ನು ನಿರ್ದೇಶಿಸಿ ಯಶಸ್ವಿಯಾದವರು.ಉದ್ಯಮಿ, ಸಮಾಜಸೇವಕ ಹರಿಪ್ರಸಾದ್ ರೈ ಸಿನಿಮಾ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಲು ರೂಪುರೇಶೆ ಸಿದ್ದಪಡಿಸಿದ್ದಾರೆ. ತಾರಾಗಣದ ಆಯ್ಕೆ ನಡೆಯುತ್ತಿದೆ. ದಿಗ್ಗಜ ಕಲಾವಿದರೂ ಕಂಕನಾಡಿ ಸಿನಿಮಾದಲ್ಲಿದ್ದಾರೆ. ತ್ರಿಶೂಲ್ ಶೆಟ್ಟಿ ನಿರ್ದೇಶಿಸಿರುವ ಸಿನಿಮಾಕ್ಕೆ ಛಾಯಾಗ್ರಾಹಣ ಮಯೂರ್ ಆರ್ ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಭಾಷಣೆ ಡಿಬಿಸಿ ಶೇಖರ್, ಕಲಾ ನಿರ್ದೇಶನ ಹರೀಶ್ ನಾಯಕ್, ಸಂಕಲನ ಗಣೇಶ್ ನಿರ್ಚೇಲ್, ಪಬ್ಲಿಸಿಟಿ ಡಿಸೈನರ್ ದೇವಿ ರೈ, ಸಾಹಸ ಚಂದ್ರು ಬಂಡೆ, ನೃತ್ಯ ದೀಕ್ಷಿತ್ ಕುಮಾರ್ ಮತ್ತು ನವೀನ್ ಇದ್ದಾರೆ.…
ಸೆಪ್ಟೆಂಬರ್ 10 ರಂದು ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ
ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ವೀಡಿಯೋ ಸಾಂಗ್ ಸೆಪ್ಟೆಂಬರ್ 10 ರಂದು ಮಂಗಳವಾರ ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಹಿಂದೆಂದೂ ನಡೆಯದ ರೀತಿಯಲ್ಲಿ ವಿಜೃಂಭಣೆಯಿಂದ ಸಾರ್ವಜನಿಕರ ಹಾಗೂ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಆಗಲಿದೆ. ತುಳು ಸಿನಿಮಾ ರಂಗದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾದ ಹಾಡೊಂದು ಸಿಂಗಲ್ ಥಿಯೇಟರ್ ನಲ್ಲಿ ಬಿಡುಗಡೆಗೊಳ್ಳುತ್ತಿರುವುದು ಇದೇ ಮೊದಲನೇ ಬಾರಿಯಾಗಿದೆ. ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ ದುಡಿದಿದ್ದಾರೆ. ಮುಖ್ಯವಾಗಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಇಲ್ಲೂ ನಿರ್ದೇಶಕರಾಗಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ ಪಡೀಲ್,…