Author: admin
ನೆಲ್ಲಿಕಾರು : ನೆಲ್ಲಿಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶತಮಾನೋತ್ಸವದ ಸಂಭ್ರಮ. 2025ರ ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಎರಡು ದಿನಗಳ ‘ಶತಮಾನೋತ್ಸವ ಸಂಭ್ರಮ’ ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಶಾಲೆಯ ಗತ ವರ್ಷದ ನೆನಪಿನಲ್ಲಿ ಶಾಲಾ ಶತಮಾನೋತ್ಸವ ಸಮಿತಿಯು ಸ್ಮರಣ ಸಂಚಿಕೆಯನ್ನು ಪ್ರಕಟಿಸುವ ಆಶಯವನ್ನು ಹೊಂದಿದೆ. ಇದಕ್ಕಾಗಿ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಬರಹಗಳನ್ನು ಆಹ್ವಾನಿಸುತ್ತಿದೆ. ಶಾಲೆಯಲ್ಲಿ ಓದಿದ ಊರ-ಪರ ಊರುಗಳಲ್ಲಿ ನೆಲೆಸಿರುವ ಇಲ್ಲಿ ಕಲಿತ ಬಾಲ್ಯದ ನೆನಪುಗಳನ್ನು, ಪ್ರಭಾವ ಬೀರಿದ ಶಿಕ್ಷಕರನ್ನು ಕುರಿತಂತೆ, ಊರಿನ ಜೀವನ ಪ್ರೀತಿಯನ್ನು ಪದಪುಂಜಗಳಲ್ಲಿ ವ್ಯಕ್ತಪಡಿಸುವುದಕ್ಕೆ ಅವಕಾಶವಿದೆ. ಹಾಗೆಯೇ ತಮ್ಮಲ್ಲಿ ಶಾಲೆಗೆ ಸಂಬಂಧ ಪಟ್ಟಂತೆ ಸ್ಮರಣೀಯ ಭಾವಚಿತ್ರಗಳಿದ್ದಲ್ಲಿ ಶತಮಾನೋತ್ಸವ ಸ್ಮರಣಾ ಸಂಚಿಕೆ ಸಂಪಾದಕರಿಗೆ ಕಳುಹಿಸಿ ಕೊಡಲು ಕೋರಲಾಗಿದೆ. 2024ರ ಡಿಸೆಂಬರ್ 31ರ ಒಳಗೆ nellikarusanthosh92@gmail.com ಅಥವಾ 9449444240 ಈ ಸಂಪರ್ಕ ಸಂಖ್ಯೆಗೆ ಕಳುಹಿಸಿಕೊಡಲು ತಮ್ಮಲ್ಲಿ ವಿನಂತಿಸುತ್ತಿದ್ದೇವೆ.
ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, “ಪಿಲಿಪಂಜ” ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ಇತ್ತೀಚೆಗೆ ನಡೆಯಿತು. ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿ ಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ. ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್…
ಶಿಕ್ಷಣ ತಜ್ಞ, ಸಂಘಟನಾ ಚತುರ, ತುಂಬೆ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ.ಎನ್ ಗಂಗಾಧರ ಆಳ್ವರಿಗೆ 2024-25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಶಿಕ್ಷಕ ವೃತ್ತಿಯಲ್ಲಿದ್ದ ಕುಟುಂಬದಲ್ಲಿ ಜನಿಸಿರುವ ಗಂಗಾಧರ ಅಳ್ವರ ತಂದೆ ಕೇಪು ನಾರಾಯಣ ಆಳ್ವ ಹಾಗೂ ತಾಯಿ ಕೇಪು ಸುಶೀಲ ಎನ್ ಆಳ್ವ ತಮ್ಮ ತಂದೆ ಹಾಗೂ ಅಜ್ಜಿ ಶಿಕ್ಷಕರಾಗಿದ್ದರು. ಪ್ರಾಥಮಿಕ ಶಿಕ್ಷಣವನ್ನು ಅನಂತಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಕಾಲೇಜನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿ ಪೂರೈಸಿದರು. ಪದವಿ ಶಿಕ್ಷಣವನ್ನು ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿ ಮಂಗಳೂರು ವಿಶ್ವವಿದ್ಯಾನಿಲಯದಿಂದ 1966ರಲ್ಲಿ ಅರ್ಥಶಾಸ್ತ್ರದ ಸ್ನಾತಕೋತ್ತರ ಪದವಿಯನ್ನು ಪಡೆದರು. ಬಿ.ಎಡ್. ಪದವಿಯನ್ನು ಅಣ್ಣಾಮಲೈ ವಿ.ವಿ.ಯಿಂದ ಪಡೆದು ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಸಾಮಾಜಿಕ,…
ನವೆಂಬರ್ 1: ಎಲ್ಲೆಡೆ ಕನ್ನಡಗೀತೆಗಳ ಮಾರ್ದನಿ, ಹಳದಿ ಕೆಂಪು ಬಣ್ಣಗಳಿಂದ ಅಲಂಕೃತಗೊಂಡ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಕನ್ನಡ ಧ್ವಜವನ್ನು ಅರಳಿಸಿ ಮಾತನಾಡಿ, ಕರುನಾಡು ಸಂಸ್ಕೃತಿಯ ಬೀಡು, ಕನ್ನಡ ಸಾಹಿತ್ಯವನ್ನು ಮಕ್ಕಳು ಓದಬೇಕು. ಕನ್ನಡ ಕಂಪನ್ನು ಎಲ್ಲೆಡೆ ಪಸರಿಸಬೇಕು. ಕುವೆಂಪುರವರ ವಿಶ್ವಮಾನವ ಸಂದೇಶವನ್ನು ಪಾಲಿಸಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭ ಹಾರೈಸಿ ಮಾತನಾಡಿ ನಾವು ನಮ್ಮ ನಾಡಿನ ನೆಲ, ಜಲ ಶ್ರೀಮಂತ ಸಂಸ್ಕೃತಿಯನ್ನು ತಿಳಿಯಬೇಕು. ಇಂದಿನ ತಂತ್ರಜ್ಞಾನದ ಯುಗದಲ್ಲಿ ಕನ್ನಡದ ಜೊತೆಗೆ ಅನ್ಯ ಭಾಷೆಗಳ ಕಲಿಕೆ ಅನಿವಾರ್ಯವಾಗಿದೆ. ಆದರೆ ಯಾವಾಗಲೂ ಕನ್ನಡಿಗರು ಎನ್ನುವ ಆತ್ಮಾಭಿಮಾನ, ಹೆಮ್ಮೆ ನಮ್ಮಲ್ಲಿ ಇರಬೇಕೆಂದರು. ಕಾರ್ಯಕ್ರಮದಲ್ಲಿ ವಿಶ್ವನಾಥ್ ಪ್ರಭು, ತ್ಯಾಗೀಶ್ಚಂದ್ರ ಶೆಟ್ಟಿ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿರಿದ್ದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ, ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಾಳ ಜಗನ್ನಾಥ ಶೆಟ್ಟಿ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳು ಸಿನಿಮಾ ರಂಗದ ಸಮಗ್ರ ಮಾಹಿತಿಯುಳ್ಳ ತುಳು ಸಿನಿಮಾವಲೋಕನ ಕೃತಿಯನ್ನು ರಚಿಸಿರುವುದನ್ನು ಸನ್ಮಾನ ಸಮಾರಂಭದಲ್ಲಿ ನೆನಪಿಸಲಾಯಿತು.
ಮೂಡುಬಿದಿರೆ: ಅರೆ ವೈದ್ಯಕೀಯ ರಾಷ್ಟ್ರೀಯ ಆಯೋಗದ ಕರ್ನಾಟಕ ರಾಜ್ಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ, ಅರೆ ವೈದ್ಯಕೀಯ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಪ್ರವೇಶಗಳನ್ನು ಪ್ರಮಾಣೀಕರಿಸುವುದು, ಶೈಕ್ಷಣಿಕ ಮತ್ತು ಸೇವಾ ಗುಣಮಟ್ಟವನ್ನು ಖಾತ್ರಿಪಡಿಸುವುದು, ಗರಿಷ್ಠ ದಾಖಲಾತಿಯನ್ನು ನಿರ್ಧರಿಸುವುದು ಹಾಗೂ ಮೂಲಸೌಕರ್ಯಗಳನ್ನು ಭದ್ರಪಡಿಸುವುದರ ಜೊತೆಗೆ ಪದವಿಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಕೌನ್ಸಿಲ್ನಲ್ಲಿ ನೋಂದಣಿಗೆ ಅವಕಾಶ ನೀಡುವುದು ಇವರ ಪ್ರಮುಖ ಆದ್ಯತೆಗಳಾಗಿವೆ ಎಂದು ತಿಳಿಸಿದರು. ಮೂಡುಬಿದಿರೆಯ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ, ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್, ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ಸ್ ಮತ್ತು ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳ ‘ವಾರ್ಷಿಕ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅರೆ ವೈದ್ಯಕೀಯ ಕ್ಷೇತ್ರವು ವ್ಯಾಪಕವಾದ ವೃತ್ತಿ ಅವಕಾಶಗಳನ್ನು ಹೊಂದಿದೆ. 51ಕ್ಕೂ ಹೆಚ್ಚು ಕೋರ್ಸ್ಗಳನ್ನು ಇದು ಒಳಗೊಂಡಿದೆ. ಕಾಲೇಜಿನ ಅವಧಿಯಲ್ಲಿ ಕಲಿಯುವ ತಾಂತ್ರಿಕ ಕೌಶಲ್ಯಗಳು, ಸಂಘಟನಾ ಚತುರತೆ ಹಾಗೂ ಮೌಲ್ಯಗಳನ್ನು…
ಉಡುಪಿ : ದ ನ್ಯಾಶನಲ್ ಸ್ಪೋರ್ಟ್ಸ್ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಫುಟ್ ಬಾಲ್ ಟೂರ್ನ್ಮೆಂಟ್ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣೀತ್ ಯು. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ ಹಾಗೂ ಪ್ರಮೀಳಾ ದಂಪತಿಗಳ ಸುಪತ್ರ.
ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 29 ಮತ್ತು 30ರಂದು ನಡೆದ ಎರಡು ದಿನಗಳ ಕ್ರೀಡಾಕೂಟವು ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ಪುತ್ತಿಗೆ ಮಠದ ದಿವಾನರಾದ ಶ್ರೀ ರಮಣಾಚಾರ್ಯರು ಮಾತನಾಡಿ, ಜಿಲ್ಲೆಯು ಧಾರ್ಮಿಕ, ಶೈಕ್ಷಣಿಕ, ವ್ಯಾಪಾರ, ವ್ಯವಹಾರ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಡುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿಯೂ ಭವ್ಯ ಭವಿಷ್ಯವಿದೆ ಎಂದರು. ಪುತ್ತಿಗೆ ಮಠದ ಪರ್ಯಾಯದ ಅವಧಿಯಲ್ಲಿ ನಡೆಯುತ್ತಿರುವ ಸ್ವಾಮೀಜಿಯವರ ಮಹತ್ವಾಕಾಂಕ್ಷೆಯ ಕೋಟಿ ಗೀತಾ ಯಜ್ಞ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ವರನ್ನು ಆಹ್ವಾನಿಸಿದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಶ್ರೀ ದಿನೇಶ್ ಎಂ. ಕೊಡವೂರ್ ಮಾತನಾಡಿ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಳ್ಳಲಿ ಸಹಕರಿಸಿದ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕ ಸಂಘವನ್ನು,…
ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಶತಸಾರ್ಥಕ್ಯ ನವಂಬರ್ 3ರಂದು ಬೆಳಿಗ್ಗೆ 10:30 ರಿಂದ ಮಂದಾರ್ತಿ ರಥಬೀದಿಯಲ್ಲಿ ಜರಗಲಿದೆ. ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೆಂಗಳೂರು ವಿ.ವಿ. ಕುಲಪತಿ ಡಾ. ಜಯಕರ ಶೆಟ್ಟಿ ಎಂ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿರುವರು. ನೂರು ವರ್ಷಗಳ ಹಿಂದೆ 1925 ರ ಜನವರಿ 14 ರಂದು ಊರಿನ ಹಿರಿಯರು ಕಟ್ಟಿ ಬೆಳೆಸಿದ ಸಹಕಾರಿ ಸಂಘವು ಶಿರೂರು ಗ್ರಾಮದಲ್ಲಿ ಪ್ರಾರಂಭಿಸಿ, ಆನಂತರ ಹೆಗ್ಗುಂಜೆ ಗ್ರಾಮದ ಮಂದಾರ್ತಿಗೆ ಸ್ಥಳಾಂತರಗೊಂಡು ಮಂದಾರ್ತಿ ಸೇವಾ ಸಹಕಾರಿ ಸಂಘ ಎನ್ನುವ ಹೆಸರಿನಿಂದ ಬೆಳೆದು…
ಭಾಷೆ ಎಂದರೆ ಬರೀ ಮಾತಲ್ಲ. ಒಂದು ಭಾಷೆಯೊಂದಿಗೆ ಆ ಪ್ರದೇಶದ ಸಂಸ್ಕೃತಿ, ಆಚಾರ ವಿಚಾರ, ಇತಿಹಾಸ, ಪರಂಪರೆ, ಜನ ಜೀವನ ಎಲ್ಲವೂ ಬೆಸೆದುಕೊಂಡಿರುತ್ತದೆ. ಹೀಗಾಗಿ ತಿಳಿದವರು ಒಂದು ಭಾಷೆ ಸತ್ತರೆ ಅದು ಬರೀ ಭಾಷೆಯ ಅಳಿವಲ್ಲ. ಅದರ ಜೊತೆಗೆ ಒಂದು ಭವ್ಯ ಸಂಸ್ಕೃತಿ ಮತ್ತು ಪರಂಪರೆಯೂ ಸಾಯುತ್ತದೆ ಎಂದು ಹೇಳಿದ್ದಾರೆ. ಈ ಮಾತು ಈಗ ನಮ್ಮ ತುಳು ಭಾಷೆಯ ವಿಚಾರದಲ್ಲಿ ನಿಜವಾಗುತ್ತಿರುವ ಅಪಾಯ ಗೋಚರಿಸುತ್ತಿದೆ. ಇನ್ನೇನು ಒಂದು ತಿಂಗಳಲ್ಲಿ ನಾವು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಲಿದ್ದೇವೆ. ಕನ್ನಡ ಭಾಷೆಯ ಬಗ್ಗೆ ಎಲ್ಲೆಡೆ ಅಭಿಮಾನ ಉಕ್ಕೇರುತ್ತದೆ. ಕನ್ನಡ ನಮ್ಮ ರಾಜ್ಯದ ಅಧಿಕೃತ ಭಾಷೆ ಹೀಗಾಗಿ ಭಾಷೆ ಬಗ್ಗೆ ಅಭಿಮಾನ ಪಟ್ಟುಕೊಳ್ಳುವುದರಲ್ಲಿ ತಪ್ಪಿಲ್ಲ. ಆದರೆ ಇದೇ ವೇಳೆ ಕರ್ನಾಟಕದಲ್ಲಿ ಕನ್ನಡದ ಬಳಿಕ ಅತಿ ಹೆಚ್ಚು ಜನರು ಮಾತನಾಡುವ ತುಳು ಭಾಷೆಯ ಸ್ಥಾನಮಾನದ ಬಗ್ಗೆ ಅವಲೋಕಿಸಿದರೆ ಖೇದವಾಗುತ್ತಿದೆ. ದಕ್ಷಿಣ ಭಾರತದ ಐದು ಪ್ರಮುಖ ಭಾಷೆಗಳನ್ನು ಪಂಚ ದ್ರಾವಿಡ ಭಾಷೆಗಳು ಎನ್ನುತ್ತಾರೆ. ತಮಿಳು, ಕನ್ನಡ, ಮಲಯಾಳಂ, ತೆಲುಗು…