Author: admin

ಬಂಟರ ಸಂಘ ಕಟಪಾಡಿ ವತಿಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮವು ಕಟಪಾಡಿ ಎಸ್ ವಿ ಎಸ್ ಕಾಲೇಜು ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ದಯಾನಂದ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಚಾಲನೆಯನ್ನು ನೀಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ ಮಾತನಾಡಿ, ಪೂರ್ವಜರ ಆಟಿಯ ದಿನಗಳು ಇಂದು ಆಚರಿಸುವ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿದ್ದ ಪಡುಬಿದ್ರಿ ಆಸ್ಟಿನ್ ಸೆಜ್ ಸೀನಿಯರ್ ಜನರಲ್ ಮ್ಯಾನೇಜರ್, ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಪಡುಬಿದ್ರಿ, ಉಡುಪಿ ಶ್ರೀ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರತಿಭಾವಂತೆ ಸುಹನಾ ಶೆಟ್ಟಿ ಹಾಗೂ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಹಿರಿಯ ವೈದ್ಯ ಡಾ.…

Read More

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಕಳವಳ ಮೂಡಿಸುತ್ತಿದೆ. ಧರ್ಮಸ್ಥಳ ಎನ್ನುವುದು ಕೇವಲ ಒಂದು ಊರಲ್ಲ, ಅದು ನಮ್ಮ ನಂಬಿಕೆ, ಅದು ನಮ್ಮ ಭಕ್ತಿಯ ಕ್ಷೇತ್ರ. ಪರಂಪರೆ, ಅಲ್ಲಿಗೆ ನಡೆದುಕೊಳ್ಳುವುದು ನಮ್ಮ ಪೂರ್ವ ಹಿರೀಕರಿಂದ ಬಂದ ಪರಂಪರೆ. “ಎಸ್‌ಐಟಿ ತನಿಖೆ” ನೆಪದಲ್ಲಿ ಶ್ರದ್ಧಾ ಕೇಂದ್ರದ ಮೂಲ ಸ್ಥಾನದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಗೊಂದಲ ಸೃಷ್ಟಿಸುವ ದುಷ್ಕೃತ್ಯ ಖಂಡನೀಯ. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಯುತ್ತಿದೆ. ಸರ್ಕಾರವಾಗಲಿ, ಸಚಿವರಾಗಲಿ, ಎಸ್‌ಐಟಿ ಮುಖ್ಯಸ್ಥರಾಗಲಿ ಬುರುಡೆ ಪ್ರಕರಣದ ಕುರಿತು ಇದುವರೆಗೂ ಅಧಿಕೃತ ಮಾಹಿತಿ ಸಾರ್ವಜನಿಕವಾಗಿ ಹಂಚಿಕೊಂಡಿಲ್ಲ. ಹೀಗಿರುವಾಗ ಕೆಲವೊಂದು ಮಾಧ್ಯಮಗಳು, ಯೂಟ್ಯೂಬರ್‌ಗಳು “ಹೆಣದ ರಾಶಿ, ಮೂಳೆಯ ರಾಶಿ, 10 ಹೆಣ, ನೂರಾರು ಶವ, ಧರ್ಮಸ್ಥಳ ಗಢಗಢ, 13 ನೇ ಗುಂಡಿಯಲ್ಲಿ ಹತ್ತಾರು ಶವ, ಧರ್ಮಸ್ಥಳ ಕರ್ಮಸ್ಥಳ, ದೇವಸ್ಥಾನಕ್ಕೆ ಬರಬೇಡಿ ಕೊಲೆಯಾಗುತ್ತೀರಿ, ಅತ್ಯಾಚಾರವಾಗುತ್ತೀರಿ, ಹೆಂಗಸಿನ ಶವ ಪತ್ತೆ, ಬಾಲಕಿಯ ಶವ ಪತ್ತೆ” ಎಂದೆಲ್ಲಾ ನಿರಂತರವಾಗಿ ಸುಳ್ಳು ಮಾಹಿತಿ ಪಸರಿಸುವ ಮೂಲಕ ನಮ್ಮ ಧಾರ್ಮಿಕ ನಂಬಿಕೆಯನ್ನು ಕೆಡಿಸುವ ಕೆಲಸಕ್ಕೆ ಕೈ…

Read More

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಪುಣೆ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಆಗಸ್ಟ್ 9 ರಂದು ನಡೆಯಲಿದೆ. ಶ್ರೀ ಸತ್ಯನಾರಾಯಣ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ನೇತೃತ್ವದಲ್ಲಿ ಅಪರಾಹ್ನ 4ಕ್ಕೆ ಆರಂಭಗೊಳ್ಳಲಿದ್ದು, 5.30ಕ್ಕೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ದೇವಸ್ಥಾನದ ರಂಗಮಂಟಪದಲ್ಲಿ ಪ್ರವೀಣ್ ಶೆಟ್ಟಿ ಪುತ್ತೂರು ಸಾರಥ್ಯದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಕಲಾವಿದರು ಮತ್ತು ಊರ ಪರವೂರ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಸ್ವಾಮಿ ಕೊರಗಜ್ಜ ಎಂಬ ತುಳು ಪೌರಾಣಿಕ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಯಕ್ಷಗಾನದ ಬಳಿಕ ಮಹಾಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸತ್ಯನಾರಾಯಣ ದೇವರು, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಸುಭಾಷ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಅಧ್ಯಕ್ಷ…

Read More

ಶ್ರೀ ವನದುರ್ಗಾದೇವಿ ದೇವಸ್ಥಾನ ಮೂಡುಬೆಟ್ಟು ಕಾಳಾವರ ಇಲ್ಲಿನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಶೆಟ್ಟಿ ವಳಬ್ಬಿ ಮೆಲ್ಮನೆ ಸಳ್ವಾಡಿ ಇವರು ಆಯ್ಕೆಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಗೋಪಾಲ ಜೋಗಿ ಕಾಳಾವರ ಮೂಡುಬೆಟ್ಟು, ಶಿವರಾಮ ಮೂಡುಬೆಟ್ಟು, ಶ್ರೀಮತಿ ರೆಷ್ಮಾ ಜೋಗಿ, ಶ್ರಿಮತಿ ಸುರೇಖಾ ಕಾಳಾವಾರ, ಗಿರೀಶ್ ಶೆಟ್ಟಿ ಕೋಡಿಮನೆ, ಸಂಜೀವ್ ಯಾನೆ ಮಾಣಿ ಸಳ್ವಾಡಿ, ಸುಕುಮಾರ ಶೆಟ್ಟಿ ಬೀಡಿನಮನೆ, ರತ್ನಾಕರ ಶೆಟ್ಟಿ ಏನಕೆರೆಮನೆ ಆಯ್ಕೆಯಾಗಿದ್ದಾರೆ.

Read More

ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಕೃತಿ ಪಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಗೆ ಸಮಾರೋಪ ಸಮಾರಂಭದಲ್ಲಿ ವಿಜಯ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಇನ್ನು ಹೆಚ್ಚಿನ ಸಾಧನೆಗೆ ಹಾರೈಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಸ್ಪೂರ್ತಿ ತಂಡ ವ್ಯವಸ್ಥಾಪಕಿಯಾಗಿ ಕಾರ್ಯವನ್ನು ನಿರ್ವಹಿಸಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ತಂಡವನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ…

Read More

ಬದುಕಿನ ಔನ್ನತ್ಯಕ್ಕೆ ಗುರು ಹಿರಿಯರ ಮಾರ್ಗದರ್ಶನ ಪ್ರೇರಣೆಯೆ ಕಾರಣ. ಸಂಸ್ಕೃತಿ, ಸಂಸ್ಕಾರ ಕಲಿಸಿಕೊಟ್ಟು ಬದುಕು ರೂಪಿಸುವ ಶಿಕ್ಷಣ ಸಂಸ್ಥೆಗಳ ಮೇಲೆ ಅಭಿಮಾನವಿರಿಸಿ ಬೆಂಬಲಿಸಬೇಕು ಎಂದು ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ಜನರಲ್ ಮ್ಯಾನೇಜರ್ ಪ್ರಕಾಶ್ ಕುಮಾರ್ ಪಟ್ನಾಯಕ್ ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ವತಿಯಿಂದ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬಾಲಕರ ಮತ್ತು ಬಾಲಕಿಯರ ಶೌಚಾಲಯ ಹಾಗೂ ಕೊಳವೆ ಬಾವಿಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸರಕಾರಿ ಶಾಲೆಯು ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶಾಲೆಯಾಗಿರುವುದು ಶ್ಲಾಘನೀಯ. ಮುಂದೆಯೂ ನಮ್ಮ ಸಂಸ್ಥೆಯ ವತಿಯಿಂದ ಈ ಶಾಲೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ವೇದಿಕೆಯಲ್ಲಿ ಎಚ್.ಪಿ.ಸಿ.ಎಲ್ ಸಂಸ್ಥೆಯ ಆಪರೇಷನ್ ವಿಭಾಗದ ಸೀನಿಯರ್ ಮ್ಯಾನೇಜರ್ ವೆಂಕಟೇಶ್ ಚಿಂತಾಕಿಂಡಿ, ಮ್ಯಾನೇಜರ್ ಸೃಷ್ಠಿ, ಎಚ್.ಆರ್ ವಿಭಾಗದ ಅಸಿಸ್ಟೆಂಟ್ ವಾಸು ನಾಯಕ್ ಎಸ್, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್…

Read More

ಹೃದಯ ಪೂರ್ವಕವಾಗಿ ಸಮಯಕ್ಕೆ ಸರಿಯಾಗಿ ಮತ್ತು ಅವಶ್ಯಕತೆಗೆ ಅನುಗುಣವಾಗಿ ನಾವು ಮಾಡುವ ಸೇವೆ ಸರಿಯಾದ ವ್ಯಕ್ತಿಗೆ ತಲುಪಿಸುವ ಸೇವಾಧರ್ಮ ನಮ್ಮಿಂದ ಆಗಬೇಕು. ಅದೇ ರೀತಿ ಯಾವುದೇ ವ್ಯಕ್ತಿಯ ಕಷ್ಟ ಸಮಯದಲ್ಲಿ ಅವಶ್ಯಕತೆಗೆ ಸಹಾಯ ಮಾಡಲು ಯಾರಾದರೂ ಸಿಕ್ಕೇ ಸಿಗುತ್ತಾರೆ ಇದು ನಿಯಮ. ಪುಣೆ ಬಂಟರ ಭವನದ ರೂವಾರಿ ಸಂತೋಷ್ ಶೆಟ್ಟಿಯವರ ಮಹತ್ವಾಕಾಂಕ್ಷೆಯ ಯೋಜನೆ ಕಲ್ಪ ವೃಕ್ಷದಲ್ಲಿ ಅದೆಷ್ಟೋ ಸಮಾಜದ ಅಶಕ್ತರಿಗೆ ಸಹಾಯ ಆಗಿದೆ. ಇದರಲ್ಲಿ ಸೇವಾ ಕಾರ್ಯ ಮಾಡುವ ಭಾಗ್ಯ ನನಗೂ ಸಿಕ್ಕಿದೆ. ಇದು ನನ್ನ ಸಮಾಜಕ್ಕಾಗಿ ನಾನು ಮಾಡುವ ಸೇವೆಯೆಂದೇ ಪರಿಗಣಿಸಿದ್ದೇನೆ. ಸಮಾಜದ ಮಕ್ಕಳು ಯಾರೂ ಕೂಡಾ ವಿದ್ಯೆಯಿಂದ ವಂಚಿತರಾಗಬಾರದು. ಸೃಷ್ಟಿಕರ್ತ ಪ್ರತಿಯೊಬ್ಬನ ಬದುಕಿನಲ್ಲಿ ಏನಾದರು ಬರೆದಿಡುತ್ತಾನೆ. ಅದನ್ನು ಸಾದಿಸುವ ಇಚ್ಚಾ ಶಕ್ತಿ ನಮ್ಮಲ್ಲಿರಬೇಕು. ಇದೇ ನನ್ನ ಜೀವನದಲ್ಲಿ ಕೂಡಾ ಬಂದಿದೆ. ವಿಚಾರಧಾರೆ ಸರಿಯಾಗಿದ್ದು ಒಂದೇ ದೃಡ ನಿರ್ಧಾರ, ಇಳಿದ ಕಾರ್ಯದಲ್ಲಿ ಸಾಧನೆ ಮಾಡಿ ಗುರಿ ಮುಟ್ಟಬೇಕು ಎಂಬ ಛಲ ಕಠಿನ ಪರಿಶ್ರಮ ಇದ್ದಿದರಿಂದ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ದೇಶ…

Read More

ಪ್ರಜ್ವಲ್‌ ದೇವರಾಜ್‌ ನಟನೆಯ ‘ಕರಾವಳಿ’ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಮಹತ್ವದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್‌ ಗಾಣಿಗ ನಿರ್ದೇಶನದ ಈ ಚಿತ್ರದ ರಾಜ್‌ ಬಿ ಶೆಟ್ಟಿ ಪಾತ್ರದ ಫಸ್ಟ್‌ ಲುಕ್ ಇದೀಗ ಬಿಡುಗಡೆಯಾಗಿದೆ. ಅದ್ದೂರಿಯಾಗಿ ಗಮನ ಸೆಳೆಯುವಂತೆ ಫಸ್ಟ್‌ ಲುಕ್‌ ಟೀಸರ್‌ ಕೂಡ ಮೂಡಿಬಂದಿದೆ. ರಾಜ್‌ ಬಿ ಶೆಟ್ಟಿ ನಟನೆ, ನಿರ್ಮಾಣದ ‘ಸು ಫ್ರಂ ಸೋ’ ಭಾರಿ ಜನಪ್ರಿಯತೆ ಪಡೆದ ಬೆನ್ನಲ್ಲಿಯೇ ಈ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಚಿತ್ರತಂಡ ರಾಜ್‌ ಬಿ ಶೆಟ್ಟಿ ನಟಿಸುತ್ತಿರುವ ಸಂಗತಿಯನ್ನು ಗುಟ್ಟಾಗಿ ಇಟ್ಟಿತ್ತು. ಈ ಚಿತ್ರದ ಫಸ್ಟ್‌ ಲುಕ್‌ ಹೊರತಾಗಿ ಬೇರೆ ಯಾವುದೇ ಮಾಹಿತಿಯನ್ನು ಚಿತ್ರತಂಡ ನೀಡಿಲ್ಲ. ಮಾವೀರ ಎಂಬ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕತೆಯನ್ನು ಒಳಗೊಂಡಿರುವ ಸಿನಿಮಾವಾಗಿದ್ದು, ಪ್ರಜ್ವಲ್‌ ದೇವರಾಜ್‌ ವಿಶಿಷ್ಟ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಎಕ್ಕ’ ಚಿತ್ರದಲ್ಲಿ ಜನಪ್ರಿಯತೆ ಗಳಿಸಿದ್ದ ಸಂಪದಾ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.…

Read More

ತಂತ್ರಜ್ಞಾನ ಬೆಳೆದ ಬಳಿಕ ಮಾಧ್ಯಮ ಕ್ಷೇತ್ರ ವಿಸ್ತಾರವಾಗಿದೆ. ಸಮಾಜದ ವಾಸ್ತವದ ಸತ್ಯ ಸಂಗತಿಗಳನ್ನು ಜನರ ಮುಂದಿಡುವ ಕೆಲಸ ಆಗಬೇಕು. ಮಾಧ್ಯಮ ಶಕ್ತಿಯ ಸದ್ಭಳಕೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳ ಅವ್ಯಾಹತ ಬಳಕೆಯಿಂದ ಸಮಾಜದ ಸ್ವಾಸ್ಥೃ ಹಾಳಾಗುತ್ತಿದೆ. ಮಾಧ್ಯಮಗಳು ವಾದ, ಪ್ರತಿವಾದ, ತೀರ್ಪು ನೀಡದೆ ತೀರ್ಮಾನ ಕೈಗೊಳ್ಳಲು ಓದುಗರ, ವೀಕ್ಷಕರಿಗೆ ಅವಕಾಶ ಕಲ್ಪಿಸಬೇಕು. ವಸ್ತುನಿಷ್ಠ, ನಿಪ್ಷಕ್ಷಪಾತವಾಗಿ ಮಾಧ್ಯಮಗಳು ಕೆಲಸ ಮಾಡಿದಾಗ ಪ್ರಭಾವ ಶಾಲಿಯಾಗಲು ಸಾಧ್ಯ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರಿಗೆ ಸುವರ್ಣ ಸಂಭ್ರಮ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮತ್ತು ಪತ್ರಿಕೋದ್ಯಮ ಪರಸ್ಪರ ಸಂಬಂಧ ಹೊಂದಿದ್ದು, ಸಾರ್ವಜನಿಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಪ್ರತಿಯೊಂದು…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯಲ್ಲಿ “ಕನ್ನಡ ಸಾಹಿತ್ಯ ಪ್ರೇರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬ್ರಹ್ಮಾವರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಜಿ ರಾಮಚಂದ್ರ ಐತಾಳ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಶಾಲಾ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕನ್ನಡ ಭಾಷೆಯ ಮಹತ್ವವನ್ನು ವಿವರಿಸಿ ಅದನ್ನು ಉಳಿಸಿ ಬೆಳೆಸುವಲ್ಲಿ ನಾವೆಲ್ಲರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂಬ ಸಂದೇಶವನ್ನು ನೀಡಿದರು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಹನಿಗವನ ರಚನೆ, ಕವನ ಪಠಣ, ಜ್ಞಾಪಕಶಕ್ತಿ ಪರೀಕ್ಷೆ ಹೀಗೆ ಅನೇಕ ಚಟುವಟಿಕೆಗಳನ್ನು ಆಯೋಜಿಸಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ವೈಯಕ್ತಿಕ ಕಲ್ಪನೆಗಳನ್ನು ಕನ್ನಡದಲ್ಲಿ ಸಮರ್ಥವಾಗಿ ಮಂಡಿಸಿದರು. ಹಲವರು ತಮ್ಮದೇ ಆದ ಕವನಗಳನ್ನು ರಚಿಸಿ ಸವಿನಯವಾಗಿ ಪಠಿಸಿದರು. ಉತ್ತಮ ಪ್ರತಿಭೆಯನ್ನು ತೋರ್ಪಡಿಸಿದ ವಿದ್ಯಾರ್ಥಿಗಳನ್ನು ಸಂಪನ್ಮೂಲ ವ್ಯಕ್ತಿಗಳು ಗೌರವಿಸಿದರು. ಜೊತೆಗೆ ಅಭಿನಯ ಗೀತೆಯನ್ನು ವಿದ್ಯಾರ್ಥಿಗಳ ಮೂಲಕ ಮಾಡಿಸಿದರು. ಕನ್ನಡ ಸಾಹಿತ್ಯದ ವಿವಿದ ಪ್ರಕಾರಗಳಾದ ಯಕ್ಷಗಾನ, ಜನಪದ ಗೀತೆ, ನಾಟಕ, ಏಕಪಾತ್ರ ಅಭಿನಯವನ್ನು ಸಂಪನ್ಮೂಲ ವ್ಯಕ್ತಿಗಳು ಮಾಡುವುದರ ಮೂಲಕ ಮಕ್ಕಳಿಗೆ…

Read More