Author: admin

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಆಳ್ವಾಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ್ಯಕ್ರಮ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ- ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ. ಅದನ್ನು ಅವರು ಅರಿತುಕೊಳ್ಳಬೇಕು ಎಂದರು. ಸಿಎಯನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಆರಂಭಿಕ ಹಂತದಲ್ಲೇ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಎಲ್ಲಾ ಅವಕಾಶಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪದವಿ ಪೂರ್ವ ಹಂತದಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸಿಎ ಕಾರ್ತಿಕೇಯ ಶೆಣೈ ಮಾತನಾಡಿ ಸಿಎ ಆರಂಭಿಕ ಹಂತದಿಂದ ಹಿಡಿದು ಕೊನೆಯ ತನಕ ಎಲ್ಲಾ ಪರೀಕ್ಷೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಸಿಎ ಗೌತಮ್ ನಾಯಕ್ ಮಾತನಾಡಿ ಈ ಕಾರ್ಯಕ್ರಮವನ್ನು…

Read More

ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ವಿಶೇಷ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ 14 ಸಾಧಕರಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಕಾರ್ಯಕ್ರಮ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಪುತ್ತೂರು ತಾಲೂಕಿನ ಎಲ್ಲಾ ಬಂಟರ ಸಂಪೂರ್ಣ ಸಹಕಾರದಿಂದ ಇದು ಸಾಧ್ಯವಾಯಿತು. ಈ ಕಾರ್ಯಕ್ರಮ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಇದಕ್ಕಾಗಿ ಎಲ್ಲರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ್ ಶೆಟ್ಟಿ ಯವರು ಹೇಳಿದರು. ಬಂಟ ಜನಗಣತಿ ಕೆಲಸ ನಡೆಯುತ್ತಿದೆ. ಅದನ್ನು ಆದಷ್ಟು ಬೇಗ ಮುಗಿಸಬೇಕು. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು. ಕಷ್ಟದಲ್ಲಿರುವ ಬಂಟರ ಕೈ ಹಿಡಿದು ಮೇಲೆತ್ತುವ ಪ್ರಯತ್ನ ಮಾಡೋಣವೆಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮಾತೃ ಸಂಘದ ತಾಲೂಕು ಸಂಚಾಲಕರಾದ ಕುಂಬ್ರ ದುರ್ಗಾಪ್ರಸಾದ್ ರೈ, ನಿಕಟಪೂರ್ವ ಸಂಚಾಲಕ ದಯಾನಂದ ರೈ ಮನವಳಿಕೆಯವರು ಸಂದರ್ಭೋಚಿತವಾಗಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ ವರದಿ ವಾಚಿಸಿದರು. ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜರವರು “ಆಟಿಡೊಂಜಿ ಬಂಟೆರೆ ಸೇರಿಗೆ”…

Read More

ಹಳ್ಳಿಯ ಹಳೆಯ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ವಿಶ್ವದಲ್ಲಿ ಗುರುತಿಸಿಕೊಂಡಿದ್ದಾರೆ. ಕಾರಣ ಅವರು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸಿಕೊಳ್ಳುತ್ತಿದ್ದರು. ಈಗಿನ ಮಕ್ಕಳಿಗೆ ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದರೂ ಧೈರ್ಯ, ಆತ್ಮಸ್ಥೈರ್ಯ ಕಡಿಮೆಯಾಗುತ್ತಿದೆ. ನನ್ನ ಮಾತಾ ಪಿತರ ಸದ್ಗುಣದ ಭಾವದಿಂದ ತಾನು ಉನ್ನತ ಶಿಕ್ಷಣವನ್ನು ಪಡೆದೆ. ಅದಕ್ಕೆ ನನ್ನ ತಾಯಿ ಕಾರಣ. ಹಳ್ಳಿಯ ಜೀವನದಲ್ಲಿ ಉನ್ನತ ಶಿಕ್ಷಣ ನೀಡುವುದು ಬಹಳಷ್ಟು ಕಷ್ಟಕರ. ಆದರೆ ನನಗೆ ಮುಂಬಯಿ ಮತ್ತು ಊರಿನ ಬಂಟರ ಸಂಘಗಳು ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಕಾರಣ ನನ್ನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿಲ್ಲ. ನಾನಿಂದು ಉನ್ನತ ಮಟ್ಟದಲ್ಲಿ ಉದ್ಯಮವನ್ನು ಕಟ್ಟಿಕೊಂಡು ರಾಜ್ಯ ದೇಶದ ಪ್ರಶಸ್ತಿಗಳು ನನಗೆ ಲಭಿಸಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಸಮಾಜ ನನಗೆ ನೀಡುತ್ತಿರುವ ಗೌರವ, ಸನ್ಮಾನಗಳು ಎಲ್ಲಾ ಪ್ರಶಸ್ತಿಗಿಂತಲೂ ಉನ್ನತ ಮಟ್ಟದಲ್ಲಿದೆ. ನಾನಿಂದು ಬಂಟರ ಸಂಘಗಳಿಗೆ, ದೇವಸ್ಥಾನಗಳಿಗೆ, ಶಿಕ್ಷಣಕ್ಕೆ ಎಲ್ಲಾ ರೀತಿಯಲ್ಲಿ ಆದಾಯದ ಪಾಲನ್ನು ಸಮಾಜಕ್ಕೆ ನೀಡುತ್ತಾ ಬಂದಿದ್ದೇನೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ನ…

Read More

ಯುವ ಬಂಟರ ಸಂಘ (ರಿ) ಕಂಬಳಕಟ್ಟ ಕೊಡವೂರು ಆಯೋಜಿಸಿದ್ದ “ಆಟಿ ಒಂಜಿ ನೆಂಪು – ವನಸ್ ತಿನಸ್ ಪಿರಾಕುದ ಗೊಬ್ಬುಲು ಕಾರ್ಯಕ್ರಮವು ಆಗಸ್ಟ್ 11 ರಂದು ರವಿವಾರ ಕಂಬಳಕಟ್ಟ ಕಂಬಳಮನೆ ಹಾಗೂ ತೆಂಕುಮನೆ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಇವರು ಗಿಡ ನೆಡುವುದರ ಮುಖೇನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಕೃತೀಯ ವಸ್ತುಗಳೆಲ್ಲವೂ ಉಪಯೋಗಕ್ಕೆ ಬಾರದೇ ಇರದು. ಪ್ರಕೃತಿಯಲ್ಲಿ ದೊರೆಯುವ ವಸ್ತುಗಳ ಔಷಧೀಯ ಗುಣಗಳನ್ನು ನಾವು ತಿಳಿಯುವುದೇ ಈ ಆಟಿ ತಿಂಗಳಿನ ಆಹಾರ ಪದ್ಧತಿಯಿಂದ. ಆದರೇ ನಮ್ಮ ಈಗಿನ ಪ್ರಕೃತಿ ಬಗೆಗಿನ ನಿರ್ಲಕ್ಷ್ಯವೇ ಈಗ ನಡೆಯುತ್ತಿರುವ ಹಲವು ಪ್ರಕೃತಿ ವಿಕೋಪಗಳಿಗೆ ಕಾರಣ ಎಂದರು. ಇನ್ನೋರ್ವ ಮುಖ್ಯ ಅತಿಥಿ ಡಾ| ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರ ನಿಟ್ಟೆ ಪರಿಗಣಿತ ವಿಶ್ವ ವಿದ್ಯಾನಿಲಯ ಇದರ ಪ್ರಭಾರ ಮುಖ್ಯಸ್ಥರಾದ ಡಾ| ಸಾಯಿ ಗೀತಾ ಅವರು, ತುಳು ಸಂಸ್ಕೃತಿ…

Read More

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಯುವ ಸಂಗೀತ ನಿರ್ದೇಶಕರೊಬ್ಬರು ಸದ್ದಿಲ್ಲದೆ ಮಿಂಚುತ್ತಿದ್ದಾರೆ. ಅವರು ಬೇರೆ ಯಾರೂ. ಅಲ್ಲ ಮೂಲತಃ ಸಂಪ್ಯ ಕುಕ್ಕಾಡಿ ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲ್ಲಾಜೆ ಎಂಬಲ್ಲಿ ನೆಲೆಸಿರುವ ಪ್ರಸಾದ್ ಕೆ ಶೆಟ್ಟಿ. ಬಾಲ್ಯದಿಂದಲೇ ಸಂಗೀತ ಕ್ಷೇತ್ರದ ಬಗ್ಗೆ ವಿಪರೀತ ಆಸಕ್ತಿ ಹೊಂದಿದ್ದ ಇವರು ವಿಜ್ಞಾನ ವಿಭಾಗದಲ್ಲಿ ತನ್ನ ಪದವಿ ಪೂರ್ವ ಶಿಕ್ಷಣವನ್ನು ಪಡೆದಿದ್ದರೂ, ಸಂದೇಶ ಲಲಿತ ಕಲಾ ಕಾಲೇಜು, ಮಂಗಳೂರಿನಲ್ಲಿ ವೆಸ್ಟರ್ನ್ ಹಾಗೂ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್ ನಲ್ಲಿ ಪದವಿಯನ್ನು ಮಾಡಿದ್ದಾರೆ. ಹೆಚ್ಚುವರಿ ಸಂಗೀತ ಶಿಕ್ಷಣಕ್ಕಾಗಿ ಚೆನ್ನೈನಲ್ಲಿ ಮ್ಯೂಸಿಕ್ ಪ್ರೊಡಕ್ಷನ್ ಮತ್ತು ಸೌಂಡ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕರಾದ ಮಣಿಕಾಂತ್ ಕದ್ರಿ ಅವರ ಸಹಾಯಕರಾಗಿ 2 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ನಂತರ ತೆಲುಗು ಸಿನಿಮಾ ಸಂಗೀತ ನಿರ್ದೇಶಕ ಶಕ್ತಿಕಾಂತ್ ಕಾರ್ತಿಕ್ ಅವರೊಂದಿಗೆ 3 ವರುಷ ಹಲವಾರು ತೆಲುಗು ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಆನಂತರ ಇನ್ನಷ್ಟು ಸಂಗೀತ ಜ್ಞಾನವನ್ನು ಪಡೆದುಕೊಂಡು…

Read More

ಮೂಡುಬಿದಿರೆ: ಅಂತಾರಾಷ್ಟ್ರೀಯ ಕ್ರೀಡಾ ಭೂಪಟದಲ್ಲಿ ಮೊದಲ ಬಾರಿಗೆ ಭಾರತ ಮಿನುಗುವಂತೆ ಮಾಡಿದ, ಸ್ವಾತಂತ್ರ್ಯ ಪೂರ್ವದಲ್ಲೇ ಭಾರತಕ್ಕೆ ಮೂರು ಒಲಿಂಪಿಕ್ಸ್ ಚಿನ್ನದ ಪದಕವನ್ನು ಗೆದ್ದುಕೊಟ್ಟ ಕ್ರೀಡಾ ಲೋಕದ ದಿಗ್ಗಜ ಮೇಜರ್ ಧ್ಯಾನ್‍ಚಂದ್ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ, ಗುರುವಾರ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಹಾಗೂ ಆಳ್ವಾಸ್ ಕಾಲೇಜು ಜಂಟಿಯಾಗಿ ರಾಷ್ಟೀಯ ಕ್ರೀಡಾ ದಿನದ ಹಿನ್ನಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶವೇ ಹೆಮ್ಮೆ ಪಡುವಂಥ ಸಾಧನೆ ತಮ್ಮ ಅದ್ಭುತ ಕ್ರೀಡಾ ಕೌಶಲದ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಮುಖ್ಯ ಉದ್ದೇಶ ಕ್ರೀಡೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿಯನ್ನುಂಟು ಮಾಡುವುದಾಗಿದೆ ಎಂದರು. ಆಳ್ವಾಸ್‍ನಲ್ಲಿ ಕ್ರೀಡಾಪಟುಗಳಿಗೆ ಪ್ರತೀ ದಿನ ಹಬ್ಬ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಅಸ್ತಿತ್ವ ಹೊಂದುವ ಮೊದಲೇ ಆಳ್ವಾಸ್‍ನಲ್ಲಿ ಏಕಲವ್ಯ ಸ್ಪೋಟ್ಸ್ ಕ್ಲಬ್‍ನ…

Read More

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಗೋವಾ ತುಳುಕೂಟದ ಸ್ಥಾಪಕಾಧ್ಯಕ್ಷರಾಗಿ ಹೋಟೆಲ್ ಉದ್ಯಮಿ ಕಾರ್ಕಳ ಇರ್ವತ್ತೂರಿನ ಗಣೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಗೋವಾದಲ್ಲಿ ಸುಮಾರು 2 ಸಾವಿರ ಮಂದಿ ತುಳುವರು ವಿವಿಧ ಉದ್ಯಮ, ಉದ್ಯೋಗದಲ್ಲಿದ್ದು ಅವರೆಲ್ಲರನ್ನೂ ಒಟ್ಟು ಸೇರಿಸುವ ನಿಟ್ಟಿನಲ್ಲಿ ತುಳುಕೂಟ ರಚನೆಯಾಗಿದೆ. ಗೋವಾದ ರಾಜಧಾನಿ ಪಣಜಿಯಲ್ಲಿ ಆಗಸ್ಟ್ 27 ರಂದು ನಡೆದ ಸಭೆಯಲ್ಲಿ ಗಣೇಶ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಗಣೇಶ್ ಶೆಟ್ಟಿ ಅವರು ಕಾರ್ಕಳ ಹಾಗೂ ಗೋವಾದಲ್ಲಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಟ್ಲ ಫೌಂಡೇಶನ್ ಗೋವಾ ಇದರ ಅಧ್ಯಕ್ಷರಾಗಿರುವ ಇವರು ಗೋವಾ ಬಂಟರ ಸಂಘದ ಮಾಜಿ ಕಾರ್ಯದರ್ಶಿಯಾಗಿ, ಇರ್ವತ್ತೂರು ಶಾಲಾ ಶತಮಾನೋತ್ಸವ ಸಮಿತಿ ಮುಂಬಯಿಯ ಕಾರ್ಯದರ್ಶಿಯಾಗಿ, ಸಾಣೂರು ಗರಡಿ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 27 ವರ್ಷಗಳಿಂದ ಮುರತ್ತಂಗಡಿ ಭಕ್ತವತ್ಸಲ ಸಮಿತಿಯ ಅಧ್ಯಕ್ಷರಾಗಿ ಪ್ರತೀ ವರ್ಷ ಸಾಧಕರಿಗೆ ಸನ್ಮಾನ, ಶಾಲಾ ಮಕ್ಕಳಿಗೆ ಶೈಕ್ಷಣಿಕ ನೆರವು, ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ಮತ್ತಿತರ ಸಮಾಜಮುಖಿ ಕಾರ್ಯಗಳನ್ನು…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನ ಎರಡನೇ ತರಗತಿಯ ವಿದ್ಯಾರ್ಥಿ ವಿಹಾನ್ ಹತ್ವಾರ್ ಚೆಸ್ ಪಂದ್ಯದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ ಚೆಸ್ ಅಕಾಡೆಮಿ ಹಾಗೂ ಬಿಜಿಎಸ್-ಎನ್‍ಪಿಎಸ್ ಸ್ಕೂಲ್ ಬೆಂಗಳೂರು ಇದರ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ನಡೆದ ಏಳು ವರ್ಷದೊಳಗಿನ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಯ ಈ ಸಾಧನೆಗೆ ಜಿ ಎಮ್ ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಸಂಸ್ಥೆಯ ಪರವಾಗಿ ಅಭಿನಂದಿಸಿ ಶುಭಹಾರೈಸಿದರು. ಇವರು ಉಡುಪಿಯ ಶಿಶಿರ್ ಹಾಗೂ ಶ್ರೀದೇವಿಯವರ ಪುತ್ರರಾಗಿದ್ದಾರೆ.

Read More

ಮೂಡುಬಿದಿರೆ: ಓರ್ವ ಸಮಾಜ ಸುಧಾರಕರಾಗಿ ನಾರಾಯಣ ಗುರು ಒಂದು ಜಾತಿ ಧರ್ಮದ ಗುರುವಲ್ಲ. ಅವರು ಹೇಳಿದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವುದು ಮನುಷ್ಯ ಧರ್ಮದ ಸಾರ. ಚತುರ್ವರ್ಣ ಕರಾಳ ವ್ಯವಸ್ಥೆಯ ವಿರುದ್ಧದ ಹೋರಾಟವೇ ನಾರಾಯಣ ಗುರುಗಳ ಸಮಾಜ ಸುಧಾರಣೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ನುಡಿದರು. ಯುವವಾಹಿನಿ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಆಯೋಜಿಸಿದ್ದ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಶ್ರೀ ನಾರಾಯಣ ಗುರುಗಳ ಭಾವಚಿತ್ರ ರಚನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ 'ಗುರು ಸ್ಮರಣೆ ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾರಾಯಣ ಗುರುಗಳ ಧಾರ್ಮಿಕ ಸುಧಾರಣಾ ಚಳುವಳಿಗಳು ಬೇರೆ ಚಳುವಳಿಗಾರರ ಚಳುವಳಿಗಿಂತ ಭಿನ್ನವಾಗಿದ್ದವು. ಯುದ್ಧಕ್ಕೆ ಬಂದವರನ್ನು ಶಾಸ್ತ್ರವಿಲ್ಲದೆ ಹಿಮ್ಮೆಟ್ಟಿದ ಕೀರ್ತಿ ಅವರದು. ಪೂಜೆಗಾಗಿ ಕೆಳಜಾತಿಯವರನ್ನು ನೇಮಿಸಿದ ಅವರು, ವಿವಾಹಗಳನ್ನು ಸರಳಗೊಳಿಸಿ, ಮಧ್ಯಪಾನದ ವಿರುದ್ಧ ಹೋರಾಟ ನಡೆಸಿದರು. ಅವರ ಜೀವನದಲ್ಲಿ…

Read More

ಪ್ರಪಂಚವನ್ನು ನಡೆಸುವ ನಿಯಮಗಳ ಹಾಗೆ ಅಧ್ಯಾತ್ಮದಲ್ಲೂ ಧರ್ಮ ತತ್ವಗಳಿವೆ. ಸನಾತನ ಧರ್ಮದ ಪ್ರಕಾರ ಆಧ್ಯಾತ್ಮಿಕ ಎಂದರೆ ಆತ್ಮಕ್ಕೆ ಆಧ್ಯತೆಯನ್ನು ನೀಡುವ ಜೊತೆಯಲ್ಲಿ ಪ್ರೀತಿಯನ್ನು ಕೊಡುತ್ತದೆ. ಶರೀರದ ಪಂಚೇದ್ರಿಯಾ ಮೂಲಕ ಷಡ್ವೈರಿಗಳನ್ನು ಹೊಡೆದೋಡಿಸಿ ಸನ್ಮಾರ್ಗದ ಮೂಲಕ ಸತ್ಕರ್ಮಗಳನ್ನೂ ಮಾಡುವುದರಿಂದ ಆತ್ಮ ಶುದ್ದಿಕರಣವಾಗುತ್ತದೆ. ಕರ್ಮ ಸಿದ್ದಾಂತದ ಪ್ರಕಾರ ನಾವು ಮಾಡುವ ಯಾವುದೇ ಕಾರ್ಯವಿರಲಿ ಅದಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ ಹೊರತು ನಾವು ಎಣಿಸಿದಂತೆ ಸಿಗಲು ಸಾದ್ಯವಿಲ್ಲ. ಧರ್ಮದ ನೆಲೆಯಲ್ಲಿ ವಿವೇಕವನ್ನು ಬಳಸಿ ಮಾಡಿದ ಕರ್ಮಕ್ಕೆ ಪೂರ್ಣತೆ ಬರುವುದು ದೈವೀ ಕೃಪೆಯಿಂದ ಮಾತ್ರ. ಧರ್ಮ ಮಾರ್ಗ, ಕರ್ಮ ಮಾರ್ಗ, ಜ್ಞಾನ ಮಾರ್ಗ, ಭಕ್ತಿ ಮಾರ್ಗದಿಂದ ದೇವರನ್ನು ಒಲಿಸಬಹುದು ಎಂಬುವುದೇ ಶ್ರೀನಿವಾಸ ಕಲ್ಯಾಣೋತ್ಸವ ಮಾಡುವ ಚಿಂತನೆಯ ನಮ್ಮ ಈ ಆರಾಧನೆಯ ಮೂಲ ಉದ್ದೇಶ. ನಿರ್ಮಲ ಮನಸ್ಸಿನಿಂದ, ಶ್ರದ್ದೆ ಭಕ್ತಿಯಿಂದ ದೇವರನ್ನು ಅರಾದಿಸಿದರೆ ನಮ್ಮ ಸಕಲ ಇಷ್ಟಾರ್ಥ ಸಿದ್ದಿಗಳು ಫಲಿಸಬಹುದು ಎಂದು ಆಧ್ಯಾತ್ಮಿಕ ಚಿಂತಕ, ಧಾರ್ಮಿಕ ಪ್ರವಚನಕಾರ ಮುಲುಂಡ್ ಬಂಟ್ಸ್ ನ ಮಾಜಿ ಅಧ್ಯಕ್ಷ ಡಾ. ಸತ್ಯಪ್ರಕಾಶ್ ಶೆಟ್ಟಿ…

Read More