Author: admin
ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ “ಆಟಿದ ಪೊರ್ಲು” ಮತ್ತು ಅಭಿನಂದನಾ ಕಾರ್ಯಕ್ರಮ ಆಗೋಸ್ಟ್ 3 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲರಾದ ಡಾ ಮಂಜುಳಾ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ದ.ಕ ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಹೆಜಮಾಡಿ ಶಾರದಾ ಡೆವಲಪರ್ಸ್ ನ ಮಾಲಕ ಪ್ರೇಮನಾಥ್ ಎಂ ಶೆಟ್ಟಿ, ಮಲ್ಲಿಕಾ ಯಶವಂತ ಶೆಟ್ಟಿ ಬಳ್ಕುಂಜೆಗುತ್ತು ಬಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಾಳ ಜಗನ್ನಾಥ…
ಮಕ್ಕಳ ಭವಿಷ್ಯ ಕಟ್ಟುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿದ್ದರೆ ಮಾತ್ರ ವಿದ್ಯಾರ್ಥಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಾರುತಿ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಒಂದು ದಿನದ ಕನ್ನಡ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಬೋಧಕರು ನಿರಂತರ ಅಭ್ಯಾಸದಲ್ಲಿ ತೊಡಗಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬಹುದು. ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾರಣಕ್ಕೂ ನಿಲಕ್ಷ್ಯ ಧೋರಣೆ ಸಲ್ಲದು. ಇಂತಹ ಕಾರ್ಯಾಗಾರಗಳು ಬೋಧನಾ ವೃತ್ತಿಯಲ್ಲಿ ಇರುವವರಿಗೆ ಹೊಸ ವಿಷಯಗಳನ್ನು ಕಲಿಯಲು ಸಹಾಯ ಮಾಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜನ್ನಾಡಿಯ ಫೇವರೇಟ್ ಕ್ಯಾಶ್ಯೂ ಇಂಡಸ್ಟೀಸ್ ನ ಎಚ್ ಶಂಕರ ಹೆಗ್ಡೆ ಅವರು ಮಾತನಾಡಿ, ಬದುಕಿನಲ್ಲಿ ಸವಾಲುಗಳು ಸಾಧನೆಯ ಶಿಖರವೇರಲು ಸಹಾಯ ಮಾಡುತ್ತವೆ. ಗುರು ಸ್ಥಾನದಲ್ಲಿರುವವರು ವಿದ್ಯಾರ್ಥಿಗಳ ಶಕ್ತಿಯನ್ನು…
ವಿಶ್ವವನ್ನೇ ತಲ್ಲಣಗೊಳಿಸುತ್ತಿರುವ ಗಂಭೀರ ಸಮಸ್ಯೆಯಾಗಿರುವ ತಾಪಮಾನದ ಏರುವಿಕೆಗೆ ಕಡಿವಾಣವನ್ನು ಹಾಕುವುದರೊಂದಿಗೆ ಪರಿಸರವನ್ನು ರಕ್ಷಿಸಿ ಅದನ್ನು ಕಾಪಾಡಿಕೊಳ್ಳುವುದು ಪ್ರಜ್ಞಾವಂತ ನಾಗರೀಕರಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಾವು ಪರಿಸರವನ್ನು ಉಳಿಸಿದರೆ ಮಾತ್ರ ನಮ್ಮನ್ನು ಪರಿಸರ ಉಳಿಸುತ್ತದೆ. ಇಂದು ವನಮಹೋತ್ಸವ ಆಚರಣೆಯ ನಿಮಿತ್ತ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಬಂಟರ ಸಂಘ ಮುಂಬಯಿ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯು ಪರಿಸರ ಸಂರಕ್ಷಣೆ ಬಗ್ಗೆ ಮಾಡುತ್ತಿರುವ ಸೇವೆಯನ್ನು ಮುಖ್ಯ ಅತಿಥಿ ಡಾ| ಪಿ.ವಿ ಶೆಟ್ಟಿಯವರು ಶ್ಲಾಘಿಸಿದರು. ಅವರು ಬಂಟರ ಸಂಘ ಮುಂಬಯಿ, ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯು ಜುಲೈ 30 ರಂದು ದಹಿಸರ್ ಪೂರ್ವದ ಛತ್ರಪತಿ ಶಿವಾಜಿ ಮಹಾರಾಜ್ ಉದ್ಯಾನವನ, ಎನ್ಎಲ್ ಕಾಂಪ್ಲೆಕ್ಸ್ ನಲ್ಲಿ ಹಮ್ಮಿಕೊಂಡ ವನಮಹೋತ್ಸವ ಆಚರಣೆಯ ಅಂಗವಾಗಿ ಸಸಿ ನೆಡುವ ಅಭಿಯಾನದ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡುತ್ತಿದ್ದರು. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗೌರವ ಅತಿಥಿಗಳಾಗಿ ಆಗಮಿಸಿದ ಸ್ಥಳೀಯ ಮಾಜಿ ಕಾರ್ಪೊರೇಟರ್ ಜಗದೀಶ್ ಕೃಪಾಶಂಕರ್ ಓಝಾ…
ಕರ್ನಾಟಕ ರಾಜ್ಯ ಬೇಕರಿ, ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರ ಒಕ್ಕೂಟದ 3 ನೇ ಸಭೆಯು ಕೆಂಗೇರಿ ಉಪನಗರದ ಶ್ರೀಕೃಷ್ಣ ಗ್ರ್ಯಾಂಡ್ ಹೋಟೆಲ್ ನ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಡಿ.ಬಿ ಪ್ರತಾಪ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅದ್ಧೂರಿಯಾಗಿ ನಡೆಯಿತು. ಪ್ರಧಾನ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಹಟ್ಟಿಯಂಗಡಿಯವರ ಪ್ರಾರ್ಥನೆಯೊಂದಿಗೆ ಆಗಮಿಸಿದ ಎಲ್ಲರಿಗೂ ಸ್ವಾಗತ ಕೋರಿದರು. ಕಾರ್ಯಾಧ್ಯಕ್ಷರಾದ ವಸಂತ ಶೆಟ್ಟಿಯವರು ಮಾತನಾಡಿ, ವಾಣಿಜ್ಯ ತೆರಿಗೆ ಇಲಾಖೆಯು ಬೇಕರಿ, ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರಿಗೆ ನೀಡಿದ ಜಿ.ಎಸ್.ಟಿ ನೋಟಿಸ್ ಬಗ್ಗೆ ನಡೆದ ಹೋರಾಟದಲ್ಲಿ ಅಭೂತಪೂರ್ವ ಜಯಗಳಿಸಲು ಸಹಕರಿಸಿದ ಮುಖಂಡರಿಗೆ, ಕಾರ್ಮಿಕರಿಗೆ, ಮಾಧ್ಯಮದವರಿಗೆ ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಕಡಿಮೆ ದರದೊಂದಿಗೆ ಉತ್ತಮವಾಗಿ ಆಂಬುಲೆನ್ಸ್ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ಗೀತಾ ಶೆಟ್ಟಿಯವರು ಆಗಮಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಸಭೆಯಲ್ಲಿ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಮುಖಂಡರು ತಮ್ಮತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಭೆಗೆ 150ಕ್ಕೂ ಹೆಚ್ಚು ಮುಖಂಡರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಿದರು.
ಬಂಟರ ಯಾನೆ ನಾಡವರ ಸಂಘ ಬೈಂದೂರು : ಬಂಟರ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಗುರುಪುರ ಬಂಟರ ಮಾತೃ ಸಂಘ ಪ್ರಥಮ
ಬಂಟರ ಯಾನೆ ನಾಡವರ ಸಂಘ ಬೈಂದೂರು ಇದರ ೩೦ನೇ ವಾರ್ಷಿಕ ಸಂಭ್ರಮದ ಪ್ರಯುಕ್ತ ಬಂಟರ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶದ ಹಲವಾರು ಬಂಟರ ಸಂಘಗಳ ತಂಡಗಳು ಭಾಗವಹಿಸಿದ್ದ ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಗುರುಪುರ ಬಂಟರ ಮಾತೃ ಸಂಘವು ಅಮೋಘ ಪ್ರದರ್ಶನವನ್ನು ನೀಡಿ ಪ್ರಥಮ ಸ್ಥಾನವನ್ನು ಗಳಿಸಿ ೧,೧೦,೦೦೦/- ರೂಪಾಯಿಯನ್ನು ತನ್ನದಾಗಿಸಿಕೊಂಡಿತು. ಮೂಡಬಿದ್ರೆ ಬಂಟರ ಸಂಘವು ದ್ವಿತೀಯ ಪ್ರಶಸ್ತಿಯನ್ನು, ಬ್ರಹ್ಮಾವರ ಬಂಟರ ಸಂಘವು ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಈ ಕಾರ್ಯಕ್ರಮದ ಪ್ರಶಸ್ತಿ ವಿತರಣೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಬೈಂದೂರು ಬಂಟರ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ, ಜಾಗತಿಕ ಬಂಟರ ಸಂಘದ ಕೋಶಾಧಿಕಾರಿ ಮತ್ತು ಬೈಂದೂರು ಬಂಟರ ಸಂಘದ ಪದಾಧಿಕಾರಿಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಗುರುಪುರ ಬಂಟರ ಮಾತೃ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಶೆಡ್ಡೆ, ಸುದರ್ಶನ್ ಶೆಟ್ಟಿ ಪೆರ್ಮಂಕಿ, ಕಾರ್ಯದರ್ಶಿ ಜಯರಾಮ್ ರೈ ಉಳಾಯಿಬೆಟ್ಟುಗುತ್ತು, ಕೋಶಾಧಿಕಾರಿ ಸತ್ಯಾನಂದ ಶೆಟ್ಟಿ ಗುರುಪುರ,…
ಜಾತಿ ಸಂಘಟನೆಗಳಲ್ಲಿ ಯುಎಇಯ ಅತೀ ಹಿರಿಯ ಸಂಸ್ಥೆ ಯುಎಇ ಬಂಟ್ಸ್ ನ ವತಿಯಿಂದ ಜುಲೈ 27 ರಂದು ಪ್ರಥಮ ಬಾರಿಗೆ ಯುಎಇಯ ಈ ಮರಳು ಭೂಮಿಯಲ್ಲಿ “ದುಬೈ ಬಂಟೆರ್ನ ಆಟಿಡೊಂಜಿ ದಿನ” ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದಲ್ಲಿ ಯುಎಇಯ ಎಲ್ಲಾ ರಾಜ್ಯದ ಬಂಟ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿ ಕಾರ್ಯಕ್ರಮವೆಂದು ಸಾಬೀತು ಪಡಿಸಿಕೊಟ್ಟರು. ಬೆಳಿಗ್ಗೆ ಹತ್ತು ಗಂಟೆಗೆ ಯುಎಇಯ ಬಂಟ್ಸ್ ನ ಮಹಿಳೆಯರು ದೀಪವನ್ನು ಬೆಳಗಿಸಿ ಪ್ರಾರ್ಥನೆ ಗೀತೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಂಡಿತು. ನಂತರ ಯುಎಇಯ ಬಂಟ ಬಂಧು ಭಗಿಣಿಯರಿಂದ ಸಂಗೀತ ರಸಮಂಜರಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಸಭಾ ವೇದಿಕೆಯಲ್ಲಿ ದುಬೈ ಬಂಟೆರ್ನ ಆಟಿಡೊಂಜಿ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಯುಎಇ ಬಂಟ್ಸ್ ನ ಹಿರಿಯ ಮಹಾ ಪೋಷಕರಾದ ಡಾ. ಬಿ.ಆರ್ ಶೆಟ್ಟಿ, ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಮುಖ್ಯ ಪ್ರಾಯೋಜಕರಾದ ರಾಮೀ ಗ್ರೂಪ್ ಆಫ್ ಹೋಟೆಲ್ಸ್ ಆಂಡ್ ರೆಸಾರ್ಟ್ಸ್ ಇದರ ಆಡಳಿತ ನಿರ್ದೇಶಕರಾದ ವರದರಾಜ್ ಎಮ್ ಶೆಟ್ಟಿ, ಸಹ ಪ್ರಾಯೋಜಕರಾದ…
ಮನುಷ್ಯನಿಗೆ ಎಲ್ಲಾ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಅತೀ ಮುಖ್ಯವಾಗಿದ್ದು, ಆರೋಗ್ಯ ಕಾಳಜಿ ಬಹಳ ಮುಖ್ಯ. ಆರೋಗ್ಯ ಕಾಪಾಡಿಕೊಳ್ಳಲು ಉಪಯೋಗವಾಗುವಂತಹ ಇಂತಹ ಉಚಿತ ವೈದ್ಯಕೀಯ ವಿಚಾರ ಸಂಕಿರಣಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಬೋಂಬೆ ಬಂಟ್ಸ್ ಅಸೋಸಿಯೇಷನ್ ನ ಸಮಾಜ ಸೇವೆ, ಶಿಕ್ಷಣ, ವೈದ್ಯಕೀಯ ಮೊದಲಾದ ಸಮಾಜಪರ ಕಾರ್ಯಗಳಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ ಅವರು ತಿಳಿಸಿದರು. ಬೋಂಬೆ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಜುಲೈ 26ರಂದು ಜೂಯಿ ನಗರದ ಬಂಟ್ಸ್ ಸೆಂಟರ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದ ಭಾರತಿ ಡಾ. ವೈ. ಶಿವಾನಂದ ಶೆಟ್ಟಿ ವೇದಿಕೆಯಲ್ಲಿ ನಡೆದ ವೈದ್ಯಕೀಯ ವಿಚಾರ ಸಂಕಿರಣದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಎಲ್ಲಾ ವೈದ್ಯರು ತಮ್ಮ ಅಮೂಲ್ಯ ಸಮಯ ಮತ್ತು ಪರಿಣಿತ ಜ್ಞಾನವನ್ನು ಸಮಾಜ ಬಾಂಧವರೊಂದಿಗೆ ಮುಕ್ತವಾಗಿ ಹಂಚಿಕೊಂಡಿರುವುದು ಅಭಿನಂದನೀಯ. ಅದಕ್ಕಾಗಿ ಅವರೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಸಮಾಜ ಬಾಂಧವರ ಆರೋಗ್ಯದ ಬಗ್ಗೆ ಕಾಳಜಿ…
ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿಎಂಶ್ರೀ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಡಿ ಇಕೋಕ್ಲಬ್, ಸ್ಕೌಟ್ ಆಂಡ್ ಗೈಡ್, ಸಾಹಿತ್ಯ ಕ್ಲಬ್ ಸೇವಾದಳ, ಸಾಂಸ್ಕೃತಿಕ ಕ್ಲಬ್ ಆಯೋಜಿಸಿದ ತುಳುನಾಡಿನ ಸಂಸ್ಕೃತಿಗಳ ಪರಿಚಯವನ್ನು ಮಾಡುವ ಉದ್ದೇಶದಿಂದ ಸಂಪನ್ಮೂಲ ವ್ಯಕ್ತಿಗಳಿಂದ ಮಾತುಕತೆ, ತುಳುನಾಡಿನ ಆಷಾಡ ಮಾಸದ ತಿನಿಸುಗಳು ಹಾಗೂ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿಚಂದ್ರ ಇವರು ನೆರವೇರಿಸಿದರು. ತಾಸೆ ಡೋಳು ಬಾರಿಸಿ ತುಳು ಸಂಸ್ಕೃತಿಯನ್ನು ಉದ್ಘಾಟಿಸಿ ಮಾತನಾಡಿದ ರಾಕೇಶ್ ರೈ ಕೆಡೆಂಜಿಯವರು, ತುಳುನಾಡು ಬಾರ್ಕೂರಿನಿಂದ ಕಾಸರಗೋಡಿನ ತನಕ ವ್ಯಾಪಿಸಿದೆ. ಇಲ್ಲಿಯ ಆಚರಣೆಗಳು, ಇಲ್ಲಿನ ಜನರ ಪ್ರೀತಿ, ನಂಬಿಕೆಗಳು, ಆರಾದನೆಗಳು, ಜಾಗತೀಕರಣದ ಜಂಜಾಟದಲ್ಲಿ ಬದುಕು ಮರೆಯಾಗಿ ಯಾಂತ್ರಿಕತೆಗೆ ವಾಲುತ್ತಿರುವ ದಿನಮಾನಗಳಲ್ಲಿ ತುಳು ಸಂಸ್ಕೃತಿಯ ಬದುಕು ಕಟ್ಟಿಕೊಳ್ಳುವ ಕಾಯಕ ಶಾಲೆಗಳಲ್ಲಿ ಆಗುತ್ತಿರುವುದು ಸ್ತುತ್ಯಾರ್ಹ್ಯ ಎಂದರು. ಶಾಲೆಯಲ್ಲಿ ಸಿದ್ಧಗೊಳಿಸಿದ ತುಳು ಆಹಾರ ಖಾದ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಭಾಗ್ಯೇಶ್ ರೈಯವರು, ಆಹಾರಗಳು ಮನುಷ್ಯನ ಮೇಲೆ ವಿಶೇಷವಾದ…
ಬಂಟರ ಸಂಘ ಅಳಿಕೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಅಷ್ಟಾವದಾನ ದುರ್ಗಾ ಪೂಜೆಯು ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾ ಭವನದಲ್ಲಿ ಬಹಳ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ನಡೆಯಿತು. ಪ್ರಾರಂಭದಲ್ಲಿ ವಿಷ್ಣುಮಂಗಲ ದೇವಸ್ಥಾನದಲ್ಲಿ ಸಂಕಲ್ಪ ಮಾಡಿ, ಸಭಾಭವನದಲ್ಲಿ ದೀಪ ಬೆಳಗಿಸುವ ಮೂಲಕ ಬಾಲಕೃಷ್ಣ ಕಾರಂತರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಂಟ ಬಾಂಧವರಿಂದ ಭಜನೆ, ನಂತರ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ರೈ ಪಡಿಬಾಗಿಲು ಇವರು ನೂತನ ಕಮಿಟಿಗೆ ಅಧಿಕಾರ ಹಸ್ತಾಂತರಿಸಿದರು. ಬಂಟರ ಮಹಿಳಾ ವಿಭಾಗ, ಯುವ ಬಂಟರ ವಿಭಾಗ ಅಳಿಕೆ ಮತ್ತು ಬಂಟರ ಸಂಘ ಅಳಿಕೆಯ ಪದಗ್ರಹಣ ಸಮಾರಂಭ ಹಿರಿಯರ ಸಮ್ಮುಖದಲ್ಲಿ ನಡೆಯಿತು. ಬಂಟರ ಸಂಘ ಅಳಿಕೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೋಹನದಾಸ್ ರೈಯವರು ಮುಂದಿನ ಮೂರು ವರ್ಷದ ಕಾಲಾವಧಿಯಲ್ಲಿ ಎಲ್ಲರ ಸಂಪೂರ್ಣ ಸಹಕಾರವಿರಲೆಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಇಬ್ಬರು ಮಕ್ಕಳನ್ನು ಸನ್ಮಾನಿಸಲಾಯಿತು. ಬಳಿಕ ಅಷ್ಟಾವದಾನ ಸೇವೆ…
ಯುನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪ ಪ್ರಾಂಶುಪಾಲರಿಗಾಗಿ ವಿಶೇಷವಾಗಿ ನಾಯಕತ್ವ ಹಾಗೂ ಚಿಂತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 2 ರಂದು ಬೆಳಗ್ಗೆ 11ರಿಂದ ಸಂಜೆ 4.30 ರವರೆಗೆ ಕೆಂಗೇರಿಯಲ್ಲಿರುವ ಯುನಿವರ್ಸಲ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಕೀರ್ಣದ ಕೋಲೂರು ಶಾಖೆಯಲ್ಲಿ ಕಾರ್ಯಾಗಾರ ನಡೆಯಲಿದೆ. ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ನೇತೃತ್ವ ವಹಿಸಲಿದ್ದು, ‘ಶೈಕ್ಷಣಿಕ ಕ್ಷೇತ್ರದಲ್ಲಿನ ಪ್ರಸ್ತಕ ಸವಾಲುಗಳು ಹಾಗೂ ಶೈಕ್ಷಣಿಕ ಆಡಳಿತದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ’ ಕುರಿತು ಕಾರ್ಯಕ್ರಮ ನಡೆಯಲಿದೆ.ಕೃತಕ ಬುದ್ಧಿಮತ್ತೆ ಮೂಲಕ ಶೈಕ್ಷಣಿಕ ಆಡಳಿತ ಮತ್ತು ನಿರ್ಧಾರಗಳ ಯಶಸ್ಸಿಗೆ ಸಹಾಯ ಮಾಡುವುದರ ಜತೆಗೆ ಶಿಕ್ಷಣ ಸಂಸ್ಥೆಗಳು ಹೊಸ ಸವಾಲು ಎದುರಿಸುವುದರ ಕುರಿತು ಚರ್ಚೆ ನಡೆಯಲಿದೆ. ನೋಂದಣಿ ಉಚಿತವಾಗಿದ್ದು, ಶೈಕ್ಷಣಿಕ ಆಡಳಿತದಲ್ಲಿ ಎಐ ಕುರಿತು ತಜ್ಞರ ಭಾಷಣ, ಪಿಯು ಕಾಲೇಜು ಮುಖ್ಯಸ್ಥರೊಂದಿಗೆ ನೆಟ್ ವರ್ಕಿಂಗ್ ಅವಕಾಶ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9686664985 ಗೆ ಸಂಪರ್ಕಿಸಬಹುದು.