Author: admin

ತುಳುವರ ಹೊಸ ವರ್ಷ ಬಿಸುವಿನ ಸಂಭ್ರಮದ ಬಗ್ಗೆ ಪ್ರಖ್ಯಾತ ಕವಿ, ವಾಗ್ಮಿ ಭಾಸ್ಕರ್ ರೈ ಕುಕ್ಕುವಳ್ಳಿ ಇವರ ಅದ್ಭುತ ಸಾಹಿತ್ಯದ ಬಿಸುವಿನ ಹಾಡು ”ಬಿಸುತ ದಿನ” ಏಪ್ರಿಲ್ ಹದಿಮೂರು ರಾತ್ರಿ ಎಂಟು ಗಂಟೆಗೆ ಝೂಮ್ ಡಿಜಿಟಲ್ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ತುಳುನಾಡಿನ ಹೆಮ್ಮೆಯ ಚಲನ ಚಿತ್ರ ಸಂಗೀತ ನಿರ್ದೇಶಕ ವಿ ಮನೋಹರ್ ಅವರ ಸಂಗೀತ ಸಂಯೋಜನೆಯಲ್ಲಿ ಹಾಡು ಇಂಪಾಗಿ ಮೂಡಿ ಬಂದಿದ್ದು ಬಿಸುವಿನ ಪ್ರಾಕೃತಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಭಾಸ್ಕರ ರೈ ಕುಕ್ಕುವಳ್ಳಿಯವರ ಸಾಹಿತ್ಯ ಎಲೆ ಎಳೆಯಾಗಿ ವಿವರಿಸಲಿದೆ. ಹಾಡನ್ನು ಖ್ಯಾತ ಹವ್ಯಾಸಿ ಹಿಂದೂಸ್ತಾನಿ ಸಂಗೀತ ಕಲಾವಿದ, ತಬಲಾ ವಾದಕ ವಿಪ್ರೊ ಸಂಸ್ಥೆಯ ಉನ್ನತ ಉದ್ಯೋಗಿ ಹರಿದಾಸ್ ಎಸ್ ಪಿ ಆಚಾರ್ಯ ಬಿಡುಗಡೆಗೊಳಿಸಲಿದ್ದು ಮನೋಹರ್ ನಿರ್ದೇಶನದಲ್ಲಿ ಮುಂಬೈಯ ಉದಯೋನ್ಮುಖ ಗಾಯಕಿ ಐಲೇಸಾ ತುಳು ಸಿರಿ ಪ್ರಶಸ್ತಿ ವಿಜೇತೆ ಶ್ರದ್ಧಾ ಬಂಗೇರಾ ಹಾಡಿದ್ದು, ಸುಮಾರು ಏಳು ಜನ ಸಮೂಹ ಗಾಯಕಿಯರಿಂದ ವಿಶಿಷ್ಟವಾಗಿ ಧ್ವನಿಗ್ರಹಿಸಲಾಗಿದೆ. ಬೆಂಗಳೂರಿನ ಅಶ್ವಿನಿ ರೆಕಾರ್ಡಿಂಗ್ ಮ್ಯೂಸಿಕ್ ಕಂಪೆನಿಯಲ್ಲಿ ಧ್ವನಿಗ್ರಹಣಗೊಂಡ ಈ ಹಾಡನ್ನು…

Read More

2024-25 ರ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿಸಿ ರೋಡ್ ನಿವಾಸಿ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜು ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿಯ ವಿದ್ಯಾರ್ಥಿನಿ ಶ್ರಾವ್ಯ ಎಸ್ ಶೆಟ್ಟಿಗೆ ವಿಜ್ಞಾನ ವಿಭಾಗದಲ್ಲಿ ಶೇ 96 ಅಂಕ ಲಭಿಸಿದೆ. ಈಕೆ ಉಡುಪಿ ಕರಂಬಳ್ಳಿ ಶ್ರೀ ‘ದುರ್ಗಾನುಗ್ರಹ’ ಶರದ್ ಚಂದ್ರ ಎನ್ ಶೆಟ್ಟಿ ಮತ್ತು ಕಾರ್ಕಳ ಕೌಡೂರು ರಂಗನಪಲ್ಕೆ ‘ಪುಷ್ಪಾ ನಿಲಯ’ದ ವಿದ್ಯಾ ಎಸ್ ಶೆಟ್ಟಿ ದಂಪತಿಗಳ ಪುತ್ರಿ.

Read More

ಬೈಂದೂರು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗವು 2024-25 ರ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 592 ಅಂಕ ಪಡೆದ ಕುಮಾರಿ ಸನ್ನಿಧಿ ಎಂ ಶೆಟ್ಟಿಯವರ ಸಾಧನೆ ಪರಿಗಣಿಸಿ ಅಭಿನಂದಿಸಿತು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ನಿತಿನ್ ಬಿ ಶೆಟ್ಟಿ, ಉಪಾಧ್ಯಕ್ಷ ಎನ್ ಕರುಣಾಕರ ಶೆಟ್ಟಿ, ಬಂಟರ ಭವನದ ಸಂಚಾಲಕ ವಾದಿರಾಜ ಶೆಟ್ಟಿ, ಪದಾಧಿಕಾರಿಗಳಾದ ಸಂತೋಷ್ ಶೆಟ್ಟಿ, ಗೌರವ್ ಗಾರ್ಮೆಂಟ್ಸ್ ನ ಮನೋಹರ್ ಶೆಟ್ಟಿ ಉಪ್ಪುಂದ, ಜಯರಾಮ್ ಶೆಟ್ಟಿ ಗಂಟೆಹೊಳೆ, ಉದಯ ಕುಮಾರ್ ಶೆಟ್ಟಿ ಬಿಜೂರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸನ್ನಿಧಿ ಶೆಟ್ಟಿ ಕಾಲ್ತೋಡು ಗ್ರಾಮದ ಹಳೆ ಕಾಲ್ತೋಡು ನಿವಾಸಿ ವಿನೋದ ಮತ್ತು ಮಂಜುನಾಥ್ ಶೆಟ್ಟಿ ದಂಪತಿಗಳ ಪುತ್ರಿ.

Read More

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಸತತ 4ನೇ ವರ್ಷವೂ ಶೇಖಡಾ 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಪರೀಕ್ಷೆ ಬರೆದ ಎಲ್ಲಾ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು. ವೈ 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಅಮೃತ ಬಸವರಾಜ್ ಬಣಕಾರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್. ಎನ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ. ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 692 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು 97% ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು 95%ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ, ಹಾಗೂ 557 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ…

Read More

ತುಳುನಾಡಿನಲ್ಲಿ 1975ರ ಮೊದಲು ನಾಗಬೆರ್ಮೆರ ಶಾಸ್ತಾರವನ ಮತ್ತು ಗುಳಿಗ ಬನ (ವನ)ಗಳು ಮೂಲ ಸ್ವರೂಪದಲ್ಲೇ ಇದ್ದವು. ಇಲ್ಲಿನ ಎಲ್ಲಾ ಜಾತಿ ಸಮುದಾಯಸ್ಥರ ಕುಟುಂಬದಲ್ಲಿ ಹಿಂದೆರಡು ಬನಗಳು ತಮ್ಮ ಬಯಲಿನ ಬದಿಯಲ್ಲಿ ನೆಲೆಯಾಗಿದ್ದವು. ಕೇವಲ ವರ್ಷದಲ್ಲಿ ಒಂದೆರಡು ಸರ್ತಿ ಹಾಲು ಸೀಯಾಳದ ಅಭಿಷೇಕ ತಂಬಿಲಾದಿಗಳು ಕುಟುಂಬಸ್ಥರಿಂದಲೇ ನಡೆಯುತ್ತಿದ್ದವು. 70 ರ ದಶಕದಿಂದ ಇಲ್ಲಿನ ಜನರು ಕೃಷಿಯೇತರ ವೃತ್ತಿ ಮಾಡಿ ಅನ್ಯದಾರಿಯಲ್ಲಿ ಹಣ ಸಂಪಾದಿಸಿದರು. ಆಗ ಪ್ರಾರಂಭದಲ್ಲಿ ಇಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯಗಳು ನಡೆದವು. ಅದರಂತೆ ಕುಟುಂಬದ ನಾಗದೈವ ಶಕ್ತಿಗಳ ಪುನರುತ್ಥಾನ ಚಿಂತನೆ ನಡೆಯಿತು. ಇಲ್ಲಿ ಮೂಲ ಪದ್ಧತಿ ಸಂಸ್ಕಾರವನ್ನು ತಿಳಿಯದೆ ವನಗಳನ್ನು ಕೆಡವಿ ನಾಗ ಬೆರ್ಮರಿಗೆ, ಗುಳಿಗ ದೈವಗಳಿಗೆ ಬನದ ಬದಲಾಗಿ ಕಟ್ಟೆ ಸಂಪ್ರದಾಯ ಪ್ರಾರಂಭದ ನಂತರದಲ್ಲಿ ಕೆಲವೇ ವರ್ಷಗಳಲ್ಲಿ ನಾಗದೈವಗಳು ಕೋಪಿಸಿಕೊಂಡಿದ್ದಾರೆಂದು ಹೆಚ್ಚಿನ ಕುಟುಂಬಸ್ಥರ ಕೂಗು. ಎಷ್ಟೋ ಪ್ರಶ್ನೆ ಚಿಂತನೆ ಪರಿಹಾರ ಮಾಡಿದರೂ ದಾರಿ ಕಾಣಲಿಲ್ಲ. ಇದಕ್ಕೆ ಕಾರಣ ತೌಳವ ನೆಲದ ಮೂಲ ಆರಾಧನಾ ಪದ್ದತಿಯನ್ನೇ ನಾಶ ಮಾಡಿದ್ದಾಗಿದೆ. ಅದು ಏನೇ…

Read More

ಮಂಗಳೂರು : ಅಗಲಿದ ಹಿರಿಯ ಯಕ್ಷಗಾನ ಕಲಾವಿದ, ಐತಿಹಾಸಿಕ ಕರ್ನಾಟಕ ಮೇಳದಲ್ಲಿ ಸುದೀರ್ಘ ತಿರುಗಾಟ ಮಾಡಿದ ನವರಸ ನಾಯಕ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ `ಪುಳಿಂಚ ಪ್ರಶಸ್ತಿ’ಗೆ ಈ ಬಾರಿ ಯಕ್ಷಗಾನದ ಮೂವರು ಪ್ರಸಿದ್ಧ ಕಲಾವಿದರು ಆಯ್ಕೆಯಾಗಿದ್ದಾರೆ. ತೆಂಕುತಿಟ್ಟಿನ ಹಿರಿಯ ಕಲಾವಿದರಾದ ಬೋಳಾರ ಸುಬ್ಬಯ್ಯ ಶೆಟ್ಟಿ, ಗೋಣಿಬೀಡು ಸಂಜಯಕುಮಾರ್ ಶೆಟ್ಟಿ ಮತ್ತು ಮಿಜಾರು ತಿಮ್ಮಪ್ಪ ಅವರುಗಳನ್ನು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪುಳಿಂಚ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು ಇದರ ಅಧ್ಯಕ್ಷರಾದ ನ್ಯಾಯವಾದಿ ಪುಳಿಂಚ ಶ್ರೀಧರ ಶೆಟ್ಟಿ ಪ್ರಕಟಿಸಿದ್ದಾರೆ. ಇದೇ ಸಂದರ್ಭದಲ್ಲಿ ದಿ. ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದವರು ತಿಳಿಸಿದ್ದಾರೆ. ಬೋಳಾರ ಸುಬ್ಬಯ್ಯ ಶೆಟ್ಟಿ ಕಾಸರಗೋಡು ಜಿಲ್ಲೆಯ ಮೂಡಂಬೈಲಿನಲ್ಲಿ ದಿ. ತ್ಯಾಂಪಣ್ಣ ಶೆಟ್ಟಿ ಮತ್ತು ಮಾನಕ್ಕೆ ದಂಪತಿಗೆ 1940ರಲ್ಲಿ ಜನಿಸಿದ ಸುಬ್ಬಯ್ಯ ಶೆಟ್ಟರು ಮುಂದೆ ಹೊಟೇಲ್ ವ್ಯಾಪಾರಕ್ಕಾಗಿ ಮಂಗಳೂರಿನ ಬೋಳಾರದಲ್ಲಿ ನೆಲೆಸಿ ಬೋಳಾರ ತಿಮ್ಮಯ್ಯ…

Read More

ಹಿರಿಯ ಹೃದಯ ಶಸ್ತ್ರಚಿಕಿತ್ಸಕ, ಪುತ್ತೂರಿನ ಬೆಳ್ಳಿಪಾಡಿ ಮನೆತನದ ಡಾ. ಬೆಳ್ಳಿಪಾಡಿ ಶ್ಯಾಮಪ್ರಸಾದ್ ಶೆಟ್ಟಿ ಅವರು ಮೈಸೂರಿನಲ್ಲಿ ನೂತನವಾಗಿ ಆರಂಭವಾಗಿರುವ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಶನ್, ಹಾಸ್ಪಿಟಲ್ ಆಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ (ಫೇಮ್)ನ ಮೆಡಿಕಲ್ ಡೈರೆಕ್ಟರ್ ಆಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಮೈಸೂರಿನ ಜೆ.ಎಸ್.ಎಸ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ನಿರ್ದೇಶಕ ಹಾಗೂ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಪುತ್ತೂರಿನ ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ, ಸಂತ ಫಿಲೋಮಿನಾ ಹೈಸ್ಕೂಲ್ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ. ಅವಿಭಜಿತ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ದಿ. ಕೆ.ಎನ್. ಮಹಾಬಲ ಶೆಟ್ಟಿ ಅವರ ಪುತ್ರ.

Read More

ಉಡುಪಿ : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಶೇ.93.90ರ ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಸಾಧನೆಗೆ ಜಿಲ್ಲಾಡಳಿತದ ಮಾರ್ಗದರ್ಶನ, ಉಪನಿರ್ದೇಶಕರ ನಿರ್ದೇಶನ, ಕಾಲೇಜು ಆಡಳಿತ ಮಂಡಳಿಗಳ ಹಾಗೂ ಪೋಷಕರ ಸಹಕಾರ ಮತ್ತು ಪ್ರಾಂಶುಪಾಲರ ಸಂಘದ ಕಾರ್ಯವೈಖರಿಯು ಕಾರಣೀಭೂತವಾಗಿದೆ. ವಿಜ್ಞಾನ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ (596), ವಾಣಿಜ್ಯ ವಿಭಾಗದಲ್ಲಿ ಕ್ರೈಸ್ಟ್‍ಕಿಂಗ್ ಕಾಲೇಜಿನ ಸುಧೀಕ್ಷಾ ಶೆಟ್ಟಿ ಮತ್ತು ವಿದ್ಯೋದಯ ಕಾಲೇಜಿನ ಪ್ರಣವಿ ಎಚ್ ಸುವರ್ಣ(595) ಹಾಗೂ ಕಲಾ ವಿಭಾಗದಲ್ಲಿ ಎಂ.ಜಿ.ಎಂ ಕಾಲೇಜಿನ ದಿವ್ಯ (586) ಅಂಕ ಪಡೆದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಗಳಾಗಿ ಹೊರಹೊಮ್ಮಿದ್ದಾರೆ. ವಿಜ್ಞಾನ ವಿಭಾಗದಲ್ಲಿ 595 ಅಂಕಗಳೊಂದಿಗೆ ಎಂ.ಜಿ.ಎಂ ಕಾಲೇಜಿನ ಭೂಮಿಕಾ ಆರ್ ಹೆಗ್ಡೆ, ಕಾರ್ಕಳ ಜ್ಞಾನಸುಧಾದ ಶ್ರೀ ರಕ್ಷಾ ಬಿ. ನಾಯಕ್, ವಿಶ್ವಾಸ್ ಆರ್ ಆತ್ರೇಯಾಸ್ ಮತ್ತು ಉಡುಪಿ ಜ್ಞಾನಸುಧಾದ ಅಪೂರ್ವ್ ವಿ ಕುಮಾರ್ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ, ವಾಣಿಜ್ಯ ವಿಭಾಗದಲ್ಲಿ 594 ಅಂಕಗಳೊಂದಿಗೆ ಕಾರ್ಕಳ ಜ್ಞಾನಸುಧಾ ಕಾಲೇಜಿನ ಸಹನಾ…

Read More

ಕಾರ್ಕಳ/ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024- 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ತಾನಿಗಳಾದ ಕಾರ್ಕಳ ಜ್ಞಾನಸುಧಾಧದ ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಕು.ಸಹನಾ ನಾಯಕ್ ಮತ್ತು ತನ್ವಿ ರಾವ್ ಇವರೊಂದಿಗೆ…

Read More

ಶತಾಯುಷಿ ಪರೀಕ ಚೆನ್ನಿಬೆಟ್ಟು ಸರಸ್ವತಿ ಸೂರಪ್ಪ ಹೆಗ್ಡೆ ಅವರಿಗೆ ಆತ್ರಾಡಿ ಪರೀಕ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನುಡಿನಮನ ಕಾರ್ಯಕ್ರಮ ನಡೆಸಲಾಯಿತು. ಕಲ್ಲಾಡಿ ಶಂಕರ ಟಿ. ಶೆಟ್ಟಿ ಓಂತಿಬೆಟ್ಟು ಅವರು, ಸರಸ್ವತಿಯವರ ಪ್ರೀತಿ, ಮಮತೆ, ಅತಿಥಿ ಸತ್ಕಾರ, ದಾನ, ಧರ್ಮ ಹಾಗೂ ಅವರ ಸದ್ಗುಣಗಳ ಬಗ್ಗೆ ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕ ಪ್ರೊ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಸರಸ್ವತಿಯವರ ಪುತ್ರ ಸರ್ವೋತ್ತಮ ಶೆಟ್ಟಿ ಅಬುಧಾಬಿ ನುಡಿನಮನ ಸಲ್ಲಿಸಿದರು. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಅಂಜಾರು ತೆಂಕಬಿಲ್ ಭಾರತಿ ಹೆಗಡೆ ಸ್ವಾಗತಿಸಿದರು.

Read More