Author: admin
ಮಂಗಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ 40,000 ಮಂದಿಗೆ ಉದ್ಯೋಗವಕಾಶ ಕಲ್ಪಿಸುವ ಯೋಜನೆ ಹಾಕಿಕೊಳ್ಳಲಾಗಿದ್ದು, ಪ್ರಥಮ ಹಂತದಲ್ಲಿ 10,000 ಮಂದಿಗೆ ಉದ್ಯೋಗ ನೀಡುವ ಯೋಜನೆಯನ್ನು ಶೀಘ್ರದಲ್ಲಿ ಕಾರ್ಯಗತ ಮಾಡಲಾಗುವುದು ಎಂದು ಎಂಆರ್ ಜಿ ಗ್ರೂಪ್ ಸಿಎಂಡಿ ಡಾ| ಕೆ. ಪ್ರಕಾಶ್ ಶೆಟ್ಟಿಯವರು ಹೇಳಿದರು. ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್, ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಪಡುಬಿದ್ರಿ ಬಂಟರ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಯುವಕರಿಗೆ, ಯುವತಿಯರಿಗೆ ಒಂದು ದಿನದ ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಎಂ.ಆರ್ ಜಿ ಗ್ರೂಪ್ ನಲ್ಲಿ 4 ಸಾವಿರ ಮಂದಿ ಉದ್ಯೋಗಿಗಳಿದ್ದು, 4 ವರ್ಷದಲ್ಲಿ 8 ಸಾವಿರಕ್ಕೆ ಏರಿಸುವ ಗುರಿ ಹೊಂದಲಾಗಿದೆ. ದೇಶದ ಆಸ್ತಿಯಾಗಿರುವ ಯುವ ಪೀಳಿಗೆ ವಿದ್ಯೆಯೊಂದಿಗೆ ಪ್ರಜ್ಞಾವಂತಿಗೆ ಬೆಳೆಸಿಕೊಳ್ಳಬೇಕು. ಸವಾಲು ಸ್ವೀಕರಿಸಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುವ ಆತ್ಮವಿಶ್ವಾಸ ವೃದ್ಧಿಸಿಕೊಳ್ಳಬೇಕು ಎಂದರು. ಮಂಗಳೂರಿನ ಉದ್ಯಮಿ ಮೈತ್ರಿ ಮಲ್ಲಿ,…
ಬೆಂಗಳೂರಿನ ಉದ್ಯಮಿ, ಚಲನಚಿತ್ರ ನಿರ್ಮಾಪಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕುಂಬ್ರ ರಘುನಾಥ ರೈ (71 ವರ್ಷ)ರವರು ಹೃದಯಾಘಾತದಿಂದ ಆಗಸ್ಟ್ 26 ರಂದು ನಿಧನರಾದರು. ಬಾಳಿಲ ಗ್ರಾಮದ ದೋಳ್ತೋಡಿ ದಿ. ಸುಬ್ಬಯ್ಯ ರೈಯವರ ಪುತ್ರ ಕುಂಬ್ರ ರಘುನಾಥ ರೈ ಅವರು ‘ಕಂಚಿಲ್ದ ಬಾಲೆ’, ‘ಮಾರಿ ಬಲೆ’ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಕುಂಬ್ರ ರಘುನಾಥ ರೈ ಅವರ ನಿಧನಕ್ಕೆ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಸಮಾಜಸೇವಕ ಅಗರಿ ನವೀನ್ ಭಂಡಾರಿ, ಬೆಂಗಳೂರು ಬಂಟರ ಸಂಘದ ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿಯವರು ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಸಹೋದರರನ್ನು ಅಗಲಿದ್ದಾರೆ.
ಮೂಡುಬಿದಿರೆ: ಎಲ್ಲರೂ ಒಂದೇ ಮನಸ್ಸಿನಿಂದ ಒಂದು ನಿಗದಿತ ಗುರಿಯೆಡೆಗೆ ಹೆಜ್ಜೆ ಹಾಕಿದಾಗ ಯಶಸ್ಸು ನಮ್ಮದಾಗುತ್ತದೆ ಎಂದು ಮಾಜಿ ವಿಧಾನ ಪರಿಷತ ಸದಸ್ಯ ಗಣೇಶ್ ಕಾರ್ಣಿಕ್ ತಿಳಿಸಿದರು. ಅವರು ಸೋಮವಾರ, ಆಳ್ವಾಸ್ನ ಶಿವರಾಮ್ ಕಾರಂತ ವೇದಿಕೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ- ದಿ ಮ್ಯಾಟ್ರಿಕ್ಸ್ ಗ್ರೂಪ್ ಆಯೋಜಿಸಿದ್ದ- ‘’ಒನ್ ಟೀಮ್, ಒನ್ ಡ್ರೀಮ್’’- ಸಾಮೂಹಿಕ ಯಶಸ್ಸಿನ ಹಾದಿ ವಿಷಯದ ಕುರಿತು ಮಾತನಾಡಿದರು. ಪ್ರತಿಯೊಬ್ಬರು ತಮ್ಮ ಸಾಮಾಥ್ರ್ಯ ಹಾಗೂ ದೌರ್ಬಲ್ಯಗಳನ್ನು ಅರಿತು, ತಮ್ಮಲ್ಲಿರುವ ನ್ಯೂನತೆಗಳನ್ನು ಮಣಿಸಲು ಆರಂಬಿಸಿದಾಗ ಸಾಧಿಸಲು ಹೊರಟ ಕೆಲಸದಲ್ಲಿ ಜಯ ಲಭಿಸಲು ಸಾಧ್ಯ. ಇದರ ಜೊತೆಗೆ ಪ್ರತಿಯೊಬ್ಬರು ತಂಡದಲ್ಲಿ ಕೆಲಸಮಾಡುವ ಅಗತ್ಯತೆಯನ್ನು ಅರಿಯಬೇಕು. ಇಲ್ಲಿ ವೈಯಕ್ತಿಕ ಹಿತಾಸಕ್ತಿಗಳಿಗೆ ಪ್ರಾಶಸ್ತ್ಯವಿರುವುದಿಲ್ಲ. ತಂಡದ ಶ್ರೇಯಸ್ಸೇ ಪ್ರತಿಯೊಬ್ಬರ ಗುರಿಯಾಗಿರುತ್ತದೆ. ಈ ಹಂತದಲ್ಲಿ ನಾವು ಪಡೆಯುತ್ತಿರುವ ಶಿಕ್ಷಣ ಈ ಪ್ರಕ್ರಿಯೆಗೆ ಎಷ್ಟು ಪರಿಣಾಮಕಾರಿಯಾಗಿ ಸ್ಪಂದಿಸುತ್ತಿದೆ ಎಂಬುದು ಮುಖ್ಯ. ಶಿಕ್ಷಣ ನಮ್ಮನ್ನು ಜವಾಬ್ದಾರಿಯುತ ಹಾಗೂ ಉತ್ತರದಾಯಿತ್ವದ ವಿದ್ಯಾರ್ಥಿಗಳನ್ನಾಗಿಬೇಕು. ಈ ಹಂತದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸಿಕೊಂಡು ಬೆಳವಣಿಗೆ ಹೊಂದುವತ್ತಾ ಶ್ರಮಿಸಬೇಕು ಎಂದರು.…
ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ ಸುಧಾಕರ್ ಶೆಟ್ಟಿ ‘ಹೇ ಪ್ರಭು’ ಬಹುಭಾಷಾ ಚಿತ್ರದ ವೈದ್ಯಕೀಯ ಪ್ರೊಫೆಸರ್ ಪಾತ್ರದಿಂದ ಸಿನಿಮಾ ರಂಗಕ್ಕೆ ಎಂಟ್ರಿ
ಹೊರನಾಡ ಕನ್ನಡ ರತ್ನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ ಶೆಟ್ಟಿ ಅವರ ಹೆಸರು ಕೇಳದವರು ತುಂಬಾ ಕಡಿಮೆ. ಮೂಡುಬಿದಿರೆ ಮೂಲದವರಾಗಿರುವ ಡಾ.ಸುಧಾಕರ ಶೆಟ್ಟಿ ಪುಣೆಯಲ್ಲಿ ಖ್ಯಾತ ಮಕ್ಕಳ ತಜ್ಞರಾಗಿ ಕಳೆದ ಮೂರು ದಶಕಗಳ ಅವರ ಸೇವೆಗಾಗಿ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಲಭಿಸಿದೆ. ಮೂಡುಬಿದಿರೆಯಲ್ಲೂ ಅವರು ಕಳೆದೊಂದು ವರ್ಷದಿಂದ ಬೇಬಿ ಫ್ರೆಂಡ್ ಎಂಬ ಸಂಚಾರಿ ಕ್ಲಿನಿಕ್ ನಡೆಸುತ್ತಿದ್ದು, ನೂರಾರು ಕಡೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಿ ಮನೆಮಾತಾಗಿದ್ದಾರೆ. ವೈದ್ಯಕೀಯ, ಸಮಾಜ ಸೇವೆ ಮೂಲಕ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನೆ ಮಾತಾಗಿರುವ ಇವರು ದಕ್ಷಿಣ ಕನ್ನಡದ ಮೂಡುಬಿದಿರೆಯ ಪ್ರತಿಷ್ಠಿತ ಬಂಟ ಮನೆತನದ ಹಿನ್ನಲೆ ಹೊಂದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಪುಣೆಯಲ್ಲಿದ್ದ ಒಂದೂವರೆ ಸಾವಿರಕ್ಕೂ ಅಧಿಕ ಮಂದಿ ಕನ್ನಡಿಗರಿಗೆ ಚಿಕಿತ್ಸೆ ನೀಡಿದ ಡಾ. ಸುಧಾಕರ್ ಶೆಟ್ಟಿಯವರ ವೈದ್ಯಕೀಯ ತಂಡಕ್ಕೆ ಸತತ 4 ಬಾರಿ ಕೇಂದ್ರ ಸರಕಾರದ ರಕ್ಷಾ ಮಂತ್ರಿ ಅವಾರ್ಡ್ ಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಹೊರನಾಡ…
‘ತುಳುನಾಡು ಸಂಸ್ಕೃತಿ ಸಂಸ್ಕಾರಗಳಿಗೆ ಹೆಸರಾಗಿದೆ. ಇಲ್ಲಿನ ಜನರಲ್ಲಿ ಜಾತಿ ಸಂಕಟವಿಲ್ಲ. ಮತ- ಧರ್ಮಗಳ ಸಂಘರ್ಷವಿಲ್ಲ. ಆದ್ದರಿಂದ ತುಳುವರ ಸಾಹಿತ್ಯ ಕೃತಿಗಳಲ್ಲಿ ಸಮಕಾಲೀನ ಸಂಗತಿಗಳೊಂದಿಗೆ ಸಹಬಾಳ್ವೆ – ಸಮಭಾವಗಳ ಸಂದೇಶವಿರುತ್ತದೆ. ಭಾಸ್ಕರ ರೈಯವರ ಗದ್ಯ ಮತ್ತು ಕಾವ್ಯ ಕೃತಿಗಳಲ್ಲಿ ಇದು ಹಾಸು ಹೊಕ್ಕಾಗಿರುವುದರಿಂದ ನಾಡು – ಹೊರನಾಡುಗಳಲ್ಲಿ ಅವರದೇ ಆದ ಅಭಿಮಾನಿ ವರ್ಗ ಸೃಷ್ಟಿಯಾಗಿದೆ’ ಎಂದು ಮುಂಬಯಿಯ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ಹೇಳಿದರು. ವಿದ್ಯಾ ವಿಹಾರ್ ಪೂರ್ವದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ಮಂದಿರದಲ್ಲಿ ಆಗಸ್ಟ್ 24ರಂದು ಕವಿ, ಲೇಖಕ ಮತ್ತು ಯಕ್ಷಗಾನ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಎರಡು ಕವನ ಸಂಕಲನಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗದ 2024 ನೇ ಸಾಲಿನ ಯಕ್ಷಗಾನ ತಾಳಮದ್ದಳೆ ಸರಣಿಯನ್ನು ಅಂಬಿಕಾ ಮಂದಿರದ ಧರ್ಮದರ್ಶಿ ವೇದಮೂರ್ತಿ ಪೆರ್ಣಂಕಿಲ ಹರಿದಾಸ ಭಟ್ ದೇವಿ ಸನ್ನಿಧಿಯಲ್ಲಿ ದೀಪ ಬೆಳಗಿಸಿ…
ಮುಂಬಯಿಯ ಪ್ರತಿಷ್ಠಿತ ಜಾತಿಯ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಪ್ರತೀ ವರ್ಷ ನೀಡುತ್ತಿರುವ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ ಕಾರ್ಯಕ್ರಮವು ಆಗಸ್ಟ್ 25 ರಂದು ರವಿವಾರ ಜುಯಿ ನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ ಕಾಂಪ್ಲೆಕ್ಸ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಷನ್ನಿನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಾಂಬೆ ಬಂಟ್ಸ್ ಅಸೋಸಿಯೇಷನ್ನಿನ ಟ್ರಸ್ಟಿ, ಹೇರಂಬ ಕೆಮಿಕಲ್ಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿಯವರು ಭಾಗವಹಿಸಲಿರುವರು. ಗೌರವ ಅತಿಥಿಗಳಾಗಿ ಬಾಂಬೆ ಬಂಟ್ಸ್ ಅಸೋಸಿಯೇಷನ್ನಿನ ಟ್ರಸ್ಟಿ ವಿ.ಕೆ ಗ್ರೂಪ್ ಆಫ್ ಕಂಪನಿ ಸಿಎಂಡಿ ಕೆ.ಎಂ ಶೆಟ್ಟಿ, ಕೃಷ್ಣ ಪ್ಯಾಲೆಸ್ ಗ್ರೂಪ್ ಹೋಟೆಲ್ ಸಿಎಂಡಿ ಕೃಷ್ಣ ವೈ ಶೆಟ್ಟಿ, ಆನಂದ ಶೆಟ್ಟಿ ಮುಖ್ಯಸ್ಥರು ನೊವೊ ನೊರ್ಡಿಸ್ಕ್ ಆಗ್ನೇಯ ಏಷ್ಯಾ ಸಿಂಗಾಪುರ, ತುಂಗಾ ಆಸ್ಪತ್ರೆಯ ನಿರ್ದೇಶಕ ಜವಾಬ್ ಸಂಸ್ಥೆಯ ಅಧ್ಯಕ್ಷ ರಾಜೇಶ್ ಶೆಟ್ಟಿ, ಬಾಂಬೆ ಬಂಟ್ಸ್…
ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಆಗಸ್ಟ್ 25 ರಂದು ಭಾನುವಾರ ಒಂದು ದಿನದ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ “ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ” ನಡೆಯಲಿದೆ. ಈ ಕಾರ್ಯಕ್ರಮ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ನಡೆಯಲ್ಲಿದ್ದು, ಇದರ ಉದ್ಘಾಟನೆಯನ್ನು ಎಂ.ಆರ್.ಜಿ ಗ್ರೂಪ್ ನ ಛೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿಯವರು ಮಾಡಲಿದ್ದು, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ಧಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಎರ್ಮಾಳ್ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ್ ಜಿ ಹೆಗ್ಡೆ, ಸುರೇಶ್ ಶೆಟ್ಟಿ, ಸಾಂತೂರು ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ…
ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬನ್ನಾಡಿ : ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಠಮಿ ಹಾಗೂ ಅಗಸ್ಟ್ 27 ರಂದು ಮುದ್ದುಕೃಷ್ಣ ಸ್ಪರ್ಧೆ
ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬನ್ನಾಡಿ ಗ್ರಾಮದ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಆಗಸ್ಟ್ 26 ರಂದು ಆಚರಿಸಲಿದ್ದು, ಆಗಸ್ಟ್ 27 ರಂದು ಸಮಯ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯ ತನಕ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಮುದ್ದುಕೃಷ್ಣ ಸ್ಪರ್ಧೆಯು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆಯವರ ಮುಂದಾಳತ್ವದಲ್ಲಿ ನಡೆಯಲಿದೆ. ಸ್ಪರ್ಧೆಯು 0 ರಿಂದ 2 ವರ್ಷ, 2 ರಿಂದ 4 ವರ್ಷ ಮತ್ತು 4 ರಿಂದ 6 ವರ್ಷದೊಳಗಿನ ಮಕ್ಕಳಿಗೆ 3 ವಿಭಾಗಗಳಿದ್ದು, ಪ್ರತೀ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಪ್ರತೀ ಮಕ್ಕಳಿಗೂ ಪ್ರಶಂಸನಾ ಪತ್ರ ನೀಡಲಾಗುವುದು. ಸ್ಪರ್ಧಾಳುಗಳಿಗೆ 1 ನಿಮಿಷದ ಕಾಲಾವಕಾಶ ನೀಡಲಾಗುವುದು. ವಿನೂತನ ಮಾದರಿಯ ವೇಷಭೂಷಣವನ್ನು ಸ್ಪರ್ಧಾಳುಗಳಿಗೆ ರಿಯಾಯಿತಿ ದರದಲ್ಲಿ (ರೂ.150/- ರಿಂದ ಪ್ರಾರಂಭ) ವ್ಯವಸ್ಥೆ ಮಾಡಲಾಗುವುದು. ಇಲ್ಲವೇ ಸ್ವತಃ ಪೋಷಕರೇ ಮಾಡಿಸಿಕೊಂಡು ಬರಬಹುದು. ಆಗಸ್ಟ್ 27 ರಂದು ಬೆಳಿಗ್ಗೆ ಗಂಟೆ 8:30…
ವಿದ್ಯಾಗಿರಿ: ಆಳ್ವಾಸ್ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 3.36 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2023-24 ನೇ ಸಾಲಿನ 8ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 150 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 50 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.20 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 3876 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಆಳ್ವಾಸ್ ಸಂಸ್ಥೆಯು ಖಾಸಗಿ ದೋರಣೆಯೊಂದಿಗೆ ಕೆಲಸ ನಿರ್ವಹಿಸಿದರೂ, ಸಮಾಜದ ಪರಿಕಲ್ಪನೆಯಲ್ಲಿ ಸರ್ವರ ಹಿತ…
ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 18 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೆಲ್ ನ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ಜರಗಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟೆಂಬರ್ 7ರಿಂದ 9ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, 20 ವರ್ಷಗಳ ಹಿಂದೆ ಆರಂಭಗೊಂಡ ಇಲ್ಲಿನ ಗಣೇಶೋತ್ಸವ ದೇವರ ಆಶೀರ್ವಾದ ಹಾಗೂ ನೂರಾರು ಕಾರ್ಯಕರ್ತರ ಸಹಕಾರದಿಂದ ಜಿಲ್ಲೆಯ ಮಾದರಿ ಗಣೇಶೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿಯ ಗಣೇಶೋತ್ಸವವೂ ಎಂದಿನಂತೆ ಶೃದ್ದಾ ಭಕ್ತಿಯಿಂದ ಜರಗಲಿದ್ದು ಯಶಸ್ವಿಯಾಗಿ ನಡೆಯಲು ಸರ್ವರ ಸಹಕಾರ ಯಾಚಿಸಿದರು. ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಅವರು 3 ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮಗಳ…