Author: admin
ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ನ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ. ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ| ದೀಪಕ್ ಶೆಟ್ಟಿ ಮಾಹಿತಿ ನೀಡಿದರು. ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಬಾರಿ 5 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮಗಳಿದ್ದು, ಮತ್ತೊಂದು ಅದ್ಧೂರಿಗೆ ಈ ಸಮಾರಂಭ ಸಾಕ್ಷಿಯಾಗಲಿದೆ. ಎರಡೂ ದಿನ ಕುಂದಾಪುರ ಮೂಲದ ಒಬ್ಬೊಬ್ಬರು ಅತಿಗಣ್ಯ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು.…
ಯಕ್ಷಗಾನ ಕಲೆಯು ನಮ್ಮ ದೇಶದ ಬಹುದೊಡ್ಡ ಕಲೆಯಾಗಿದೆ. ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಯಕ್ಷಗಾನವನ್ನು ನಾನು ವೀಕ್ಷಿಸಿದ್ದೇನೆ. ಈ ರಾಜ್ಯಗಳಲ್ಲಿ ಯಕ್ಷಗಾನ ಕಲೆ ಆರಾಧನಾ ಕಲೆಯಾಗಿದೆ. ಈ ಕಲೆಯು ಪ್ರಪಂಚದಾದ್ಯಂತ ಪಸರಿಸಿದೆ. ಈ ಪ್ರಾಚೀನ ಕಲೆಯನ್ನು ಹೊರ ರಾಜ್ಯ ಗೋವಾದಲ್ಲಿಯೂ ಮುಂದುವರೆಸಿಕೊಂಡು ಹೋಗುವ ಕಾರ್ಯವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಭಾರತ ಪ್ರವಾಸೋದ್ಯಮ ಮತ್ತು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯ್ಕ ನುಡಿದರು. ಜೂನ್ 22ರಂದು ಭಾನುವಾರ ಸಂಜೆ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯಕ್ಷಗಾನ ಕಲೆಯ ನಮ್ಮ ಸಂಸ್ಕೃತಿ ಈ ಕಲೆಯನ್ನು ಮುಂದಿನ ಪೀಳಿಗೆಗೆ ಈ ಸಂಸ್ಕಾರವನ್ನು ಮುಂದುವರಿಸಿಕೊಂಡು ಹೋಗಬೇಕಿದೆ. ಮಕ್ಕಳಿಗೆ ಶಿಕ್ಷಣದೊಂದಿಗೆ ಇಂತಹ ಕಲೆಯನ್ನು ಕೂಡಾ ಮುಂದುವರೆಸಿಕೊಂಡು ಹೋಗುವ ಅಗತ್ಯವಿದೆ. ನಾವು ಭಾರತದ ಬೇರೆ ಬೇರೆ ರಾಜ್ಯದವರಾಗಿದ್ದರೂ ಕೂಡ ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಎಲ್ಲಾ…
ಕೋಟೇಶ್ವರ ಯಡಾಡಿ ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಯೋಗ ದಿನಾಚರಣೆಗೆ ಚಾಲನೆ ನೀಡಿದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ “ಜಾಗತಿಕ ಲೋಕಕ್ಕೆ ಯೋಗ ಭಾರತದ ಬಹುದೊಡ್ಡ ಕೊಡುಗೆಯಾಗಿದ್ದು ಹಲವು ರೋಗಗಳಿಗೂ ಉತ್ತಮವಾದ ಔಷಧವಾಗಿ ಪರಿಣಮಿಸಿದೆ. ಪ್ರಾಚೀನ ಕಾಲದಲ್ಲಿಯೇ ಋಷಿ ಮುನಿಗಳಿಂದ ಪರಿಚಿತವಾದ ಯೋಗ ಕಲೆಯು ಇಂದು ನಮ್ಮ ಭಾರತದ ಭವ್ಯ ಸಂಸ್ಕೃತಿಯ ಒಂದು ಅಂಗವಾಗಿದೆ. ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವು ಉತ್ತಮ ಸಾಧನವಾಗಿದ್ದು, ಪ್ರತಿನಿತ್ಯ ಯೋಗ ಮಾಡುವುದರಿಂದ ಆರೋಗ್ಯವಂತರಾಗಿ ಉತ್ತಮ ವ್ಯಕ್ತಿತ್ವ ಹೊಂದಬಹುದು. ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಯೋಗ ಅಭ್ಯಾಸ ಮಾಡುವುದರಿಂದ ಕಲಿಕೆಯಲ್ಲಿ ಏಕಾಗ್ರತೆಯನ್ನು ಕಂಡುಕೊಂಡು ಸರ್ವಾಂಗೀಣ ಪ್ರಗತಿಗೆ ಸಹಾಯವಾಗುತ್ತದೆ. ಇಂದು ಆಧುನಿಕ ವೈದ್ಯಕೀಯ ಪದ್ದತಿಯು ಗುಣಪಡಿಸಲಾಗದ ಹಲವಾರು ರೋಗಗಳಿಗೆ ಯೋಗವು ರಾಮಬಾಣವಾಗಿರುವುದರಿಂದ ವಿಶ್ವ ಮಾನ್ಯತೆಯನ್ನು ಪಡೆದಿದೆ” ಎಂದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸತೀಶ್ ಕುಮಾರ್ ಮತ್ತು ಸೂರ್ಯ…
ಇವೆಂಟ್ ಮ್ಯಾನೇಜ್ ಮೆಂಟ್ ನಲ್ಲಿ ವಿಶೇಷ ಪ್ರಸಿದ್ದಿ ಮಾಡಿರುವ ಮಂಗಳೂರಿನ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ರ ನಾಲ್ಕನೇ ಆವೃತ್ತಿಯು ಮೂಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೋಲ್ನಾಡ್ ಇಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ತುಳು ಚಿತ್ರರಂಗ ಬೆಳವಣಿಗೆಗೆ ಇಂತಹ ಕಾರ್ಯಕ್ರಮ ಅಗತ್ಯ. ಯಾವುದೇ ಸಿನಿಮಾ ರಂಗಕ್ಕೂ ಕಡಿಮೆ ಇಲ್ಲದೆ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಶಾಸಕ ವೇದವ್ಯಾಸ ಕಾಮತ್, ಚಿತ್ರನಟ ಅಶೋಕ್ ಬೆಂಗಳೂರು, ಶಿವಧ್ವಜ್ ಶೆಟ್ಟಿ, ಸಾಹಿತಿ ರಾಮ ಎಲ್ ಅಂಚನ್, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಹರೀಶ್ ಶೇರಿಗಾರ್, ಪಮ್ಮಿ ಕೊಡಿಯಾಲ್ ಬೈಲ್, ಕ್ಯಾಟ್ಕದ ಅಧ್ಯಕ್ಷ ಲಂಚುಲಾಲ್ ಕೆಎಸ್ , ಗಿರೀಶ್ ಎಂ ಶೆಟ್ಟಿ ಕಟೀಲು, ನಿಶಾಂತ್ ಭಂಡಾರಿ, ಹರಿಪ್ರಸಾದ್ ರೈ, ಬೋಳ ಪ್ರಕಾಶ್ ಕಾಮತ್, ಶಶಿಧರ್…
ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 21 ಜೂನ್ 2025 ರಂದು ಮನಃಶಾಂತಿಗೆ ಯೋಗ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ತನುಶ್ರೀರವರು 'ತನು ಯೋಗ ಭೂಮಿ' ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ ಯೋಗವು ಕೇವಲ ವ್ಯಾಯಾಮವಲ್ಲ. ಅದು ಬದುಕುವ ಒಂದು ಶೈಲಿ. ನಾವು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಮತ್ತು ಸಂತುಷ್ಟ ಜೀವನವನ್ನು ಬದುಕಬಹುದು ಎನ್ನುತ್ತಾ ಯೋಗದ ಮಹತ್ವವನ್ನು ಕುರಿತು ತಿಳಿಸಿದರು. ಕಾರ್ಯಕ್ರಮದ ಕೊನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತನುಶ್ರೀಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಮೂಡುಬಿದಿರೆ: ಅಂತರಾಷ್ಟಿಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟಿಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಯೋಗ ಸಂಗಮ -2025’ ಕರ್ಯಕ್ರಮ ನಡೆಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1500 ವಿದ್ಯಾರ್ಥಿಗಳು ಏಕಕಾಲದಲ್ಲಿ sಸಾಮಾನ್ಯ ಯೋಗ ಪ್ರೋಟೋಕಾಲನ್ನು ಅನುಸರಿಸಿ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶನವನ್ನು ನೀಡಿದರು. ದೇಶದ ಒಂದು ಲಕ್ಷಕ್ಕೂ ಅಧಿಕ ಭಾಗಗಳಲ್ಲಿ ಈ ಯೋಗ ಸಂಗಮ ಕರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಾದ ಅನಂತ ಕೃಷ್ಣ ಸಿ. ವಿ ಮತ್ತು ತ್ರಿಶಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ನ್ಯಾಚುರೋಪತಿ ವಿಭಾಗದ ಪ್ರಾಂಶುಪಾಲ ಡಾ. ವನಿತಾ ಶೆಟ್ಟಿ, ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ, ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ.ಸಜಿತ್ ಎಂ, ಆಳ್ವಾಸ್ ಫಾರ್ಮಸಿ ಕಾಲೇಜಿನ ಪ್ರಾಚರ್ಯ ಡಾ.ಮಂಜುನಾಥ ಸೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಸ್ನಾತಕೋತ್ತರ…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ಶಿಕ್ಷಕಿ ಪ್ರಿಯಾಂಕ ದೀಕ್ಷಿತ್ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಮಾತನಾಡಿ ಯೋಗಾಸನವು ನಮ್ಮ ದೈಹಿಕ ಹಾಗೂ ಮಾನಸಿಕ ಸ್ಥಿತಿಯನ್ನು ನಿಯಂತ್ರಿಸುವ ಉತ್ತಮ ಮಾರ್ಗವಾಗಿದೆ. ಯೋಗಾಭ್ಯಾಸವು ಕೇವಲ ಆಚರಣೆಯ ಸಲುವಾಗಿ ಅದು ಒಂದು ದಿನಕ್ಕೆ ಸೀಮಿತವಾಗಿರದೇ ಪ್ರಿತಿನಿತ್ಯ ಯೋಗಾಸನವನ್ನು ಮಾಡಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ಯೋಗದ ಇತಿಹಾಸ, ಆಚರಣೆಯ ಮಹತ್ವವನ್ನು ತಿಳಿಸಿ ಉತ್ತಮ ಅರೋಗ್ಯಕ್ಕೆ, ನೆಮ್ಮದಿಗೆ ಯೋಗ ಅನಿವಾರ್ಯವೆಂದರು. ಸಂಸ್ಥೆಯ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅತಿಥಿಗಳ ನಿರ್ದೇಶನದಲ್ಲಿ ಯೋಗಾಸನಗಳನ್ನು ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಿಂದ ಕೆ. ಬಿ. ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ
ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಕೆ. ಜೈರಾಜ್ ಬಿ. ರೈಯವರು ತಿಳಿಸಿದ್ದಾರೆ. ಸಂಘದ ಸದಸ್ಯರ ಮಕ್ಕಳಿಗೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 95 ಹಾಗೂ ಅದಕ್ಕಿಂತ ಹೆಚ್ಚು ಅಂಕ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ 2024-25ನೇ ಸಾಲಿನಲ್ಲಿ ಪಿ.ಯು.ಸಿ ಉತ್ತೀರ್ಣರಾಗಿ, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ / ಸ್ನಾತಕೋತ್ತರ ಪದವಿಗೆ ನೀಟ್ ಪರೀಕ್ಷೆಯ ಮುಖೇನ ಮತ್ತು ಇಂಜಿನಿಯರಿಂಗ್ / ಗಿeಣeಡಿಟಿಚಿಡಿಥಿ ಪದವಿ / ಸ್ನಾತಕೋತ್ತರ ಪದವಿಗೆ ರಾಜ್ಯ ಸಿ.ಇ.ಟಿ. ಪರೀಕ್ಷೆ ಮುಖೇನ ಸರಕಾರಿ ಕಾಲೇಜಿನಲ್ಲಿ ಎಡ್ಮಿಶನ್ ಪಡೆದ ವಿದ್ಯಾರ್ಥಿಗಳು ಹಾಗೂ ಕಾನೂನು ಪದವಿಯನ್ನು ಅಐಇಖಿ ಪರೀಕ್ಷೆ ಮುಖೇನ ಐಚಿತಿ ಕಾಲೇಜಿನಲ್ಲಿ ಮೆರಿಟ್ ಸೀಟ್ನಲ್ಲಿ ಎಡ್ಮಿಶನ್ ಪಡೆದ ವಿದ್ಯಾರ್ಥಿಗಳಿಂದ ಅಲ್ಲದೆ ಎಂ.ಎ/ಎಂ.ಕಾಂ./ಎಂ.ಬಿ.ಎ/ಎಂ.ಎಸ್.ಎಸ್ಸಿ/ಎಂ.ಇಡಿ ಪದವಿಯಲ್ಲಿ, ಪಾಲಿಟೆಕ್ನಿಕ್ ಡಿಪ್ಲೋಮಾ /ಐ.ಟಿ.ಐ/ಬಿ.ಪಿ.ಇ.ಡಿ/ಬಿ.ಇ.ಡಿ./ಡಿ.ಇ.ಡಿ…
ಯಕ್ಷಧ್ರುವ ಪಟ್ಲ ಫೌಂಡೇಶನ್, ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜೂನ್ 22 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಪಣಜಿಯ ಮಿನೇಜಸ್ ಬೃಗಾನ್ಸ ಸಭಾಗೃಹದಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಭಾರತದ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ ನಾಯಕ್ ಉದ್ಘಾಟಿಸಲಿದ್ದಾರೆ. ಪರ್ವರಿಯ ಸಿದ್ಧಾರೂಢ ಮಠದ ಶ್ರೀ ಗಣೇಶಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಗೋವಾ ಇದರ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋವಾ ರಾಜ್ಯದ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ಗೋವಾ ವಿಧಾನಸಭೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕದ ವಿಧಾನಸಭೆಯ ನಿವೃತ್ತ ಕಾರ್ಯದರ್ಶಿ ಟಿಎಂ ಧ್ರುವ ಕುಮಾರ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷರಾದ ಸತೀಶ್ ಶೆಟ್ಟಿ ಪಟ್ಲರವರು ಉಪಸ್ಥಿತರಿರುವರು. ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಸದಾನಂದ ಶೆಟ್ಟಿ ಬೆಳವಾಯಿ, ಗೋವಾ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಅಮೀನ್ ಬಂಟ್ವಾಳ, ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ…
ಪ್ರತಿಯೊಂದು ಮಗುವಿನಲ್ಲೂ ಸೂಕ್ತ ಪ್ರತಿಭೆಗಳಿವೆ. ಅಂಥಹ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿದಾಗ ಆ ಮಗು ಹಾಗೂ ಸಮಾಜ ಅದರ ಪ್ರಯೋಜನ ಪಡೆಯಲು ಸಹಕರಿಯಾಗಬಲ್ಲದು. ಈ ನಿಟ್ಟಿನಲ್ಲಿ ಜ್ಞಾನ ಸಂಪಾದನೆಯ ಜೊತೆಗೆ ವಿದ್ಯಾವಂತರಾಗಿ ಒಳ್ಳೆಯ ಸಂಸ್ಕಾರ ಬೆಳೆಸಿಕೊಳ್ಳಿ ಎಂದು ಶ್ರೀ ವಿಧುಶೇಖರ ಭಾರತಿ ಶ್ರೀ ನುಡಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ ಮತ್ಯಾಡಿ ಕುಂದಾಪುರ ಇಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ಭಾರತೀತೀರ್ಥ ಶ್ರೀಗಳ ಅನುಗ್ರಹದಿಂದ ನಡೆದ ಅಕ್ಷರಾಭ್ಯಾಸ ಮತ್ತು ಸುವಿದ್ಯಾರಂಭ, ವಾಣಿವಿಲಾಸ ವಿದ್ಯಾರ್ಥಿ ನಿಲಯ ಹಾಗೂ ನೂತನ ಕಟ್ಟಡದಲ್ಲಿ ದೀಪ ಪ್ರಜ್ವಲಿಸಿ ಆಶೀರ್ವದಿಸಿದರು. ಸ್ವಾಮೀಜಿಯವರು ವೀಣಾಧಾರಿಣಿ ಜಗನ್ಮಾತೆ ಶ್ರೀ ಶಾರದಾಂಬೆಯ ಮೂರ್ತಿಯನ್ನು ಸ್ಥಾಪಿಸಿ, ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಸಂಸ್ಥೆಯ ಸುಮಾರು 1900 ವಿದ್ಯಾರ್ಥಿಗಳಿಗೆ ಶಾಸ್ತ್ರೋಕ್ತವಾಗಿ ವಿದ್ಯಾರಂಭವನ್ನು ನೆರವೇರಿಸಿದರು. ಕಟ್ಟಡ ನಿರ್ಮಾಣದಲ್ಲಿ ಶ್ರಮಿಸಿದವರನ್ನು ಗೌರವಿಸಲಾಯಿತು. ಉಡುಪಿ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ…















