Author: admin

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಾರ್ಷಿಕ ಸಮಾವೇಶ ಆಗಸ್ಟ್ 24ರಂದು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಂಗಣದಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್ ಸಂದರ್ಭೋಚಿತ ಮಾತುಗಳನ್ನಾಡಿದರು. ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಪನ್ಯಾಸಕಿ ಸುಧಾರಾಣಿಯವರು ಬಂಟ ಸಮುದಾಯದ ಹಿನ್ನೆಲೆ, ಸಂಪ್ರದಾಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಂಬೈಯ ಉದ್ಯಮಿ ಕೃಷ್ಣ ಶೆಟ್ಟಿ ಕಾಪಿಕೆರೆ ನಂದಳಿಕೆ, ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ನಿಕಟಪೂರ್ವ…

Read More

ಬೇರೆಯವರಲ್ಲಿ ನಿರೀಕ್ಷಿಸುವ ಗುಣಮಟ್ಟ ನಮ್ಮಲ್ಲೂ ಇರಬೇಕು. ಜೀವನದಲ್ಲಿ ಒಮ್ಮೆಯಾದರೂ ಸತ್ಯ, ನ್ಯಾಯ, ಆದರ್ಶ ಮೌಲ್ಯಕ್ಕಾಗಿ ದೃಢವಾಗಿ ನಿಂತರೆ ನಿಮ್ಮ ಜೀವನ ಸಾರ್ಥಕ ಎಂದು ಜಿಲ್ಲಾ ಎಸ್ ಪಿ ಹರಿರಾಮ್ ಶಂಕರ್ ಹೇಳಿದರು. ಆಗಸ್ಟ್ 24 ರಂದು ಕುಂದಾಪುರ ಬಂಟರ ಭವನದ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆದ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ, ದಿ. ಎಂ ಗೋಪಾಲಕೃಷ್ಣ ಶೆಟ್ಟಿ ಸಂಸ್ಮರಣ ಪ್ರಗತಿಪರ ಕೃಷಿಕ ಪ್ರಶಸ್ತಿ, ಹಿರಿಯ ಸಾಧಕ ಗಣ್ಯರಿಗೆ ಗೌರವಾರ್ಪಣೆ, ದಿ. ಡಾ| ಮಧುಕರ ಶೆಟ್ಟಿ ಸಂಸ್ಮರಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಮತ್ತು ಮನಿಷ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಸಿಎಂಡಿ ಜಯಶೀಲ ಶೆಟ್ಟಿ ಘಟಪ್ರಭಾ, ಹೆರಂಭ ಗ್ರೂಪ್ ನ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನೀರ್ಕೋಡ್ಲು ಚಂದ್ರಶೇಖರ ಶೆಟ್ಟಿ ಅವರಿಗೆ ದಿ. ಎಂ…

Read More

ಎಲ್ಲಾ ಜಾತಿ, ಮತ, ಧರ್ಮದವರನ್ನು ಗೌರವಿಸುವ ಸಾಮರಸ್ಯದ ಮನೋಭಾವನೆ ಬೆಳೆಸಿಕೊಂಡಿರುವುದೇ ಇಂದು ಬದುಕಿಗೆ ಶಕ್ತಿ ತುಂಬಿದೆ. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದ ಪರಿಣಾಮ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಛೇರ್ಮನ್ ಡಾ. ಎಂ. ಮೋಹನ ಆಳ್ವ ಹೇಳಿದರು. ನಗರದ ಎ.ಜೆ.ಗ್ರಾೃಂಡ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಅವರು ಮಾತನಾಡಿದರು. ಬಾಲ್ಯದಿಂದಲೇ ಕಲೆ ಮತ್ತು ಕ್ರೀಡೆಯಲ್ಲಿ ಆಸಕ್ತಿ ಹೊಂದಿದೆ. ಸಾಂಸ್ಕೃತಿಕ ಕ್ಷೇತ್ರ ಬದುಕಿಗೆ ಒಳ್ಳೆಯ ಮೌಲ್ಯಗಳನ್ನು ನೀಡಿದರೆ, ಕ್ರೀಡೆಯ ಮೇಲಿನ ಆಸಕ್ತಿ ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಯಿತು ಎಂದು ಡಾ. ಆಳ್ವ ಹೇಳಿದರು. ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ. ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ ‘ಡಾ. ಎಂ. ಮೋಹನ ಆಳ್ವ ಅವರ ಸಾಧನೆ ಬಂಟ ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದೆ’…

Read More

ಉಡುಪಿ ಜಿಲ್ಲೆ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಉಡುಪಿ ಇವರು ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್- 23 ಅಥ್ಲೆಟಿಕ್ ಮೀಟ್- 2025ರಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಜಾವೆಲಿನ್ ಎಸೆತದಲ್ಲಿ ಮೂರನೇ ಸ್ಥಾನ ಗಳಿಸಿದ್ದಾನೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿ, ಅರುಣ್ ಮಾನೆ ತರಬೇತಿ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

Read More

ಪ್ರತಿಯೊಂದು ಹೊಸ ಕಾರ್ಯಕಾರಿ ಸಮಿತಿ ರಚನೆಯಾದಾಗ ಅನುಸರಿಸಿಕೊಂಡು ಬರುವಂತೆ ಈ ಸಾರಿಯೂ ಭಾವಚಿತ್ರದೊಂದಿನ ನಿರ್ದೇಶಿಕ ಪುಸ್ತಕವನ್ನು ಮುದ್ರಿಸಿ, ಪ್ರತಿಯೊಬ್ಬ ಸಮಿತಿ ಸದಸ್ಯರಿಗೆ, ಪೋಷಕರಿಗೆ ಮತ್ತು ಹಿತ್ಯೇಷಿಗಳಿಗೆ ಹಂಚುವ ಕಾರ್ಯಕ್ರಮ ನಡೆಯಿತು. ಭಾವಚಿತ್ರದೊಂದಿಗೆ ಮುದ್ರಿತವಾದ ನಿರ್ದೇಶಿಕ ಪುಸ್ತಕವನ್ನು ಶ್ರೀಧರ ಶೆಟ್ಟಿ (ಕಾರ್ಯದಕ್ಷರು, ಶೈಕ್ಷಣಿಕ ಸಮಿತಿ ಹಾಗೂ ನಿರ್ದೇಶಿಕ ಪುಸ್ತಕದ ಉಸ್ತುವಾರಿ) ಅವರ ದಿವ್ಯ ಹಸ್ತದಿಂದ, ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ, ಪದಾಧಿಕಾರಿಗಳು, ವಿಶ್ವಸ್ಥ ಮಂಡಳಿ ಮತ್ತು ಸಮಿತಿ ಸದಸ್ಯರ ಸಮಕ್ಷಮದಲ್ಲಿ ಆಗಸ್ಟ್ 23 ರಂದು ನಿತ್ಯಾನಂದ ಸಭಾಗೃಹ ಸಯನ್ ಇಲ್ಲಿ ಬಿಡುಗಡೆಗೊಳಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿಯವರು ಶ್ರೀಧರ ಶೆಟ್ಟಿಯವರಿಗೆ ಹೂಗುಚ್ಚವನ್ನು ಕೊಟ್ಟು ಗೌರವಿಸಿ ಮಾತನಾಡಿ, ಅವರು ಮಾಡಿದ ಘನತರದ ಕೆಲಸ ಅಂದರೆ ಎಲ್ಲಾ ಸದಸ್ಯರ ಮಾಹಿತಿಯನ್ನು ಸಂಗ್ರಹಿಸಿ, ನಿಪುಣತೆಯಿಂದ, ಅಚ್ಚುಕಟ್ಟಾಗಿ ಸೂಕ್ಷ್ಮತೆಯಿಂದ ಮುದ್ರಿಸಿದ ವಿಚಾರವಾಗಿ ಶ್ಲಾಘನೆ ಮಾಡಿದರು. ಈ ಪುಸ್ತಕದಲ್ಲಿ ವಿಘ್ನ ನಿವಾರಕ ಶ್ರೀ ಗಣಪತಿಯ ಚಿತ್ರದೊಂದಿಗೆ ಪ್ರಾರಂಭವಾಗಿ, ಮುನ್ನುಡಿ, ವಿಶ್ವ ಬಂಟಗೀತೆ, ಬಂಟರ ಉಪನಾಮಗಳ ಹೆಸರು…

Read More

ಕಾರ್ಕಳ : ಓದುಗರಿಗೆ ಸುವರ್ಣಾವಕಾಶವನ್ನು ನೀಡಲು ‘ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್ ಘೋಷಿಸಿದೆ. ಆಗಸ್ಟ್ 23 ಮತ್ತು 24 ರಂದು ಕೇವಲ ಎರಡು ದಿನಗಳ ಕಾಲ ನಡೆಯುವ ಈ ಆಫರ್‌ನಲ್ಲಿ ಆಯ್ಕೆ ಮಾಡಿದ ಪುಸ್ತಕಗಳ ಖರೀದಿಗೆ 50% ರಿಯಾಯಿತಿ ಲಭ್ಯವಿರಲಿದೆ. ‘ಮಹಾ ಓದು’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಈ ಆಫರ್‌ನಲ್ಲಿ ಓದುಗರು ಕನಿಷ್ಠ ಐದು ಪುಸ್ತಕಗಳನ್ನು ಖರೀದಿಸಿದರೆ ಮಾತ್ರ ರಿಯಾಯಿತಿಯ ಸೌಲಭ್ಯ ಪಡೆಯಬಹುದು. MAHA50 ಎಂಬ ಕೂಪನ್ ಕೋಡ್ ಬಳಸಿ ಆನ್‌ಲೈನ್ ಖರೀದಿ ಮಾಡುವವರಿಗೆ ರಿಯಾಯಿತಿ ಅನ್ವಯವಾಗಲಿದೆ. ‘ಪುಸ್ತಕ ಮನೆ’ ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಲು ಅವಕಾಶ ಕಲ್ಪಿಸಿದ್ದು, ಗ್ರಾಹಕರು https://pustakamane.com/product-category/pustakamane/ ಮೂಲಕ ನೇರವಾಗಿ ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಜೊತೆಗೆ ವಾಟ್ಸಪ್ ಮೂಲಕವೂ ( ‪+91 96064 74289‬ ) ತಮ್ಮ ಆರ್ಡರ್ ಅನ್ನು ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಸತತ ೧೨ನೇ ಬಾರಿಗೆ ರಾಜ್ಯಮಟ್ಟದ ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆ ‘ಜಿ ಎಮ್ ಕ್ವಿಜ್ ಫೆಸ್ಟ್’ ನ್ನು ಆಯೋಜಿಸಲಾಗಿತ್ತು. ತ್ರಾಸಿ ಡಾನ್ ಬಾಸ್ಕೋ ಸ್ಕೂಲಿನ ಪ್ರಾಂಶುಪಾಲರಾದ ಫಾ. ಮ್ಯಾಕ್ಸಿಮ್ ಡಿಸೋಜಾ ‘ಜಿ ಎಮ್ ಕ್ವಿಜ್ ಫೆಸ್ಟ್’ ಉದ್ಘಾಟಿಸಿ ಮಾತನಾಡಿ ಗೆಲ್ಲುವುದಕ್ಕಿಂತ ಜ್ಞಾನ ಸಂಪಾದನೆ ಮುಖ್ಯವಾದದ್ದು, ಸಾಕಷ್ಟು ಸ್ಪರ್ಧಾ ಸಿದ್ಧತೆಗಳಿದ್ದರೂ ಕೆಲವೊಮ್ಮೆ ಸ್ಪರ್ಧಿಗಳು ಅತೀ ಸರಳವಾದ ಪ್ರಶ್ನೆಗಳಿಗೆ ಉತ್ತರಿಸುವಲ್ಲಿ ವಿಫಲರಾಗುತ್ತಾರೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ಕ್ರಿಯಾತ್ಮಕ ಕಲಿಕೆಗೆ ಉತ್ತೇಜನ ನೀಡುತ್ತದೆ. ಜಿ ಎಮ್ ಕಲಿಕೆಗೆ ಉತ್ತಮ ಸ್ಥಳವಾಗಿದ್ದು ಪ್ರತೀ ವರ್ಷವೂ ವಿದ್ಯಾರ್ಥಿಗಳಿಗಾಗಿ ಹೊಸ ಹೊಸ ಕಲಿಕಾ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದರು. ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಡಿಡಿಪಿಐ ಲೋಕೇಶ್ ಸಿ ಅವರು ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪ್ರದಾನ ಮಾಡಿ, ರಸಪ್ರಶ್ನೆಯು ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನವನ್ನು ಅಭಿವೃದ್ಧಿಪಡಿಸುತ್ತದೆ. ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳ ಜೊತೆ ಸ್ಪರ್ಧೆ ನಡೆಸುವುದರಿಂದ ಆಯಾ ಜಿಲ್ಲೆಗಳ ವಿದ್ಯಾರ್ಥಿಗಳ…

Read More

ಬಂಟರ ಸಂಘ ಮುಂಬಯಿಯ ಗೌರವ ಪ್ರಧಾನ ಕಾರ್ಯದರ್ಶಿ, ಸಂಜೀವಿನಿ ಟ್ರಸ್ಟ್ ಸಂಸ್ಥಾಪಕ, ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ| ಆರ್.ಕೆ ಶೆಟ್ಟಿ ಅವರು ಆಗಸ್ಟ್ 24 ರ ರವಿವಾರದಂದು ಚೀನಾದ ಮಾಕಾವ್ ನಲ್ಲಿ ನಡೆಯಲಿರುವ ಎಮ್.ಡಿ.ಆರ್.ಟಿ ಗ್ಲೋಬಲ್ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಗತ್ತಿನ ಅತ್ಯುತ್ತಮ ವಿಮಾ ಮತ್ತು ಹಣಕಾಸು ತಜ್ಞರನ್ನು ಪ್ರತಿನಿಧಿಸುವ ಪ್ರಖ್ಯಾತ ಜಾಗತಿಕ ಸಂಘಟನೆ ಆಯೋಜಿಸಿರುವ ಸಭೆಯಲ್ಲಿ ಸ್ವೀಕರ್ ಆಗಿ ಮಾತನಾಡಲಿದ್ದಾರೆ. ಪ್ರತಿಯೊಬ್ಬ ಕ್ರಿಕೆಟ್ ಆಟಗಾರನಿಗೂ ಲಾರ್ಡ್ಸ್‌ನಲ್ಲಿ ಆಡುವುದು ಕನಸು ಇದ್ದಂತೆ. ಪ್ರತಿಯೊಬ್ಬ ವಿಮಾ ಸಲಹೆಗಾರನಿಗೂ ಎಮ್‌.ಡಿ.ಆರ್‌.ಟಿ ಸದಸ್ಯರಾಗುವುದು ಶ್ರೇಷ್ಠತೆ, ನೈತಿಕತೆ ಮತ್ತು ಸಾಧನೆಯ ಸಂಕೇತವಾಗಿದೆ. ಅಂತಹ ಸದಸ್ಯತನದಲ್ಲಿ ನಿರಂತರವಾಗಿ 21 ವರ್ಷಗಳಲ್ಲಿ ಎಂ.ಡಿ.ಆರ್.ಟಿ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ| ಆರ್ ಕೆ ಶೆಟ್ಟಿಯವರು ವಿಮಾ ಮತ್ತು ಹಣಕಾಸು ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟ ಸಾಧಕರು. ಡಾ| ಆರ್.ಕೆ ಶೆಟ್ಟಿ ಅವರ ವೃತ್ತಿಪರ ಸಾಧನೆಗಳನ್ನು ಹೆಸರಿಸುವುದಾದರೆ, ಎಮ್‌.ಡಿ.ಆರ್‌.ಟಿ ಸದಸ್ಯತ್ವ 28 ಬಾರಿ (USA), ಕೋರ್ಟ್…

Read More

ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ ‘ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರ ಶನಿವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜರುಗಿತು. ಮಂಗಳೂರು ವಿವಿ ಕಾಲೇಜಿನ ಡಾ. ಮಾಧವ ಎಂಕೆ ಮಾತನಾಡಿ, ಗ್ರಂಥಾಲಯ ವಿಭಾಗದಲ್ಲಿ ಕೆಲಸ ಮಾಡುವವರು ಸರಸ್ವತಿಯ ದಾಸೋಹಿಗಳು. ಅವರ ಸೇವೆ ಅಕ್ಷರಶಃ ಮಾನವ ಸಮಾಜದ ಬೆಳಕಿನ ದೀಪ. ಜ್ಞಾನ ಹಂಚುವ ಕಾರ‍್ಯದಲ್ಲಿ ತೊಡಗಿರುವ ಅವರು ನಿಜಕ್ಕೂ ಪುಣ್ಯವಂತರು ಎಂದರು. ಈ ಜಗತ್ತಿನಲ್ಲಿ ಭಗವಂತನು ಮಾನವನಿಗೆ ನೀಡಿರುವ ಅತ್ಯಂತ ಅಮೂಲ್ಯವಾದ ವರವೇ ಸಮಯ. ಧನ, ಪದವಿ, ಸ್ಥಾನಮಾನದಲ್ಲಿ ವ್ಯತ್ಯಾಸಗಳಿರಬಹುದು. ಆದರೆ ಸಮಯ ಮಾತ್ರ ಎಲ್ಲರಿಗೂ ಸಮಾನವಾಗಿ ಹಂಚಲ್ಪಟ್ಟಿದೆ. ಈ ಸಮಯವನ್ನು ಹೇಗೆ ಬಳಸುತ್ತೇವೆ ಎಂಬುದರ ಮೇಲೆಯೇ ಜೀವನದ ಸಾಧನೆ ನಿರ್ಧಾರವಾಗುತ್ತದೆ ಎಂದರು. ಕಲಿಕೆಯ ದೇಗುಲವಾದ ಗ್ರಂಥಾಲಯದಲ್ಲಿ ಸಮಯ ಕಳೆಯುವವರು…

Read More

ಬಂಟರ ಸಂಘ ಕೇಪು ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಇತ್ತೀಚೆಗೆ ವಿಟ್ಲ ಗಾರ್ಡನ್ ಆಡಿಟೋರಿಯಂ ಕರವೀರ ಮೈರದಲ್ಲಿ ನಡೆಯಿತು. ಬೆಳಗ್ಗೆ 10 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ನೃತ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ 10.45 ರಿಂದ ಪದಗ್ರಹಣ ಮತ್ತು ಸಭಾ ಕಾರ್ಯಕ್ರಮ ಸಂಪನ್ನಗೊಂಡಿತು. ಸಮಾರಂಭದ ಅಧ್ಯಕ್ಷತೆಯನ್ನು ಕೇಪು ಬಂಟರ ಸಂಘದ ಅಧ್ಯಕ್ಷ ಜಗಜೀವನ್ ರಾಮ್ ಶೆಟ್ಟಿ ಬೇಡೆಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಯರಾಮ್ ರೈ ಅವರು ಮಾತನಾಡಿ, ಸಂಘದ ಪದಾಧಿಕಾರಿಗಳು ಸದಾ ಕ್ರಿಯಾಶೀಲರಾಗಿದ್ದಾಗ ಸಂಘದ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತದೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಸಾಧ್ಯ ಎಂದು ನುಡಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ಶೆಟ್ಟಿ ವಿಟ್ಲ, ವಿಟ್ಲ ವಲಯ ಬಂಟರ ಸಂಘದ ಗೌರವಾಧ್ಯಕ್ಷ ರಾಧಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಜೀವ ಭಂಡಾರಿ ಕುಂಡಕೋಳಿ, ಕೇಪು ಗ್ರಾಮ ಬಂಟರ ಸಂಘದ ನಿಯೋಜಿತ ಅಧ್ಯಕ್ಷ ತಾರಾನಾಥ ಆಳ್ವ, ಬಂಟ್ವಾಳ…

Read More