Author: admin
ಪುಣೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಕಾತ್ರಜ್ ವತಿಯಿಂದ 2024 ರ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ, ಅಹ್ಮದ್ ನಗರದ ಖ್ಯಾತ ಉದ್ಯಮಿ ಶಬರಿ ಇಂಡಸ್ಟ್ರಿಯಲ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ, ಅಹ್ಮದ್ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಕುಂಬಳೆ ಮುಂಡುಪಳ್ಲ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಸಂಸ್ಥಾಪಕರಾದ ಕೊಡುಗೈ ದಾನಿ, ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸೇವಾಕರ್ತ, ಕಲಾ ಪೋಷಕರಾಗಿರುವ ಕೆ.ಕೆ ಶೆಟ್ಟಿಯವರನ್ನು ಇವರನ್ನು ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಸುಭಾಷ್ ಶೆಟ್ಟಿ ಮತ್ತು ಪದಾಧಿಕಾರಿಗಳು ಸತ್ಕರಿಸಿದರು. ಈ ಸಂದರ್ಭದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ರಘುರಾಮ್ ರೈ, ಮಾಜಿ ಅಧ್ಯಕ್ಷ ಶೇಖರ್ ಪೂಜಾರಿ, ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಕೋಶಾಧಿಕಾರಿ ಸಚ್ಚಿದಾನಂದ ಶೆಟ್ಟಿ, ಉಪ ಕೋಶಾಧಿಕಾರಿ ಬಾಲಕೃಷ್ಣ ಗೌಡ, ಸಲಹೆಗಾರರಾದ ಜಗದೀಶ್ ಶೆಟ್ಟಿ, ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಜಗದೀಪ್ ಶೆಟ್ಟಿಯವರು ಉಪಸ್ಥಿತರಿದ್ದರು. ವರದಿ : ಹರೀಶ್ ಮೂಡಬಿದ್ರಿ ಪುಣೆ
ನಮ್ಮ ದೇಶದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೆಚ್ಚಿದ ಸಂದರ್ಭ ನಮ್ಮ ಕರಾವಳಿ ಕರ್ನಾಟಕವೂ ಮುಂಚೂಣಿಯ ಜವಾಬ್ದಾರಿಯನ್ನೇ ವಹಿಸಿತ್ತು. ಆಗ ಕರಾವಳಿಯ ಹೋರಾಟದ ನಿರ್ಣಾಯಕ ಹೊಣೆಯನ್ನು ಹೊತ್ತದ್ದು ಯಾವುದೇ ಫಲಾಪೇಕ್ಷೆ ಇಲ್ಲದ ಅವಿಭಜಿತ ಕಾರ್ಕಳ ತಾಲೂಕಿನ ಪಡುಕುಡೂರು ಬೀಡು ಧರ್ಮರಾಜ ಅಧಿಕಾರಿ (ಎಂ.ಡಿ.ಅಧಿಕಾರಿ) ಮಹಾನ್ ರಾಷ್ಟ್ರಪ್ರೇಮಿಯಾಗಿ ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದರು. 1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿ ನಡೆಯುತ್ತಿದ್ದರೆ, ಇತ್ತ ಇಡೀ ದೇಶದಲ್ಲಿ ಮಹಾತ್ಮ ಗಾಂಧೀಜಿ ಅವರ ಕರೆಯಂತೆ ಪ್ರತಿಭಟನಾ ಸಭೆಗಳು ನಡೆಯುತ್ತಿದ್ದವು. ಮಂಗಳೂರಿನ ಕೇಂದ್ರ ಮೈದಾನದಲ್ಲಿ 10 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಮುಗಿಲು ಮುಟ್ಟುವ “ವಂದೇ ಮಾತರಂ” ಮೊಳಗುತ್ತಿತ್ತು. ಬಿಸಿರಕ್ತದ 27 ರ ತರುಣ ದೇಶಕ್ಕಾಗಿ ಆವೇಶದಿಂದ ಭಾಷಣ ಮಾಡುತ್ತಿದ್ದರು. ಅಷ್ಟೊತ್ತರಲ್ಲಿ ಪೊಲೀಸರು ಲಾಟಿ ಬೀಸಿ ಮೈದಾನಕ್ಕೆ ನುಗ್ಗಿದರು. ಆ ಕ್ಷಣದಲ್ಲಿ ಹಲವರು ಕಾಲ್ಕಿತ್ತರೆ, ಹಲವರು ಎದೆಯೊಡ್ಡಿ ನಿಂತರು. ಆದರೇ ತರುಣ ಮಾತ್ರ ತನ್ನ ಅಬ್ಬರದ ಮಾತು ಮುಂದುವರಿಸಿದ್ದ. ವೇದಿಕೆ ಏರಿದ ಪೊಲೀಸರು ಆ ತರುಣನ…
ಪುಣೆ ತುಳುಕೂಟದ 25 ನೇ ವಾರ್ಷಿಕೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 15 ರಂದು ಅಪರಾಹ್ನ 2 ಗಂಟೆಗೆ ಗಣೇಶ್ ನಗರದ ಎರಾಂಡವನದ ಪುಣೆ ಕನ್ನಡ ಸಂಘದ ಶ್ರೀಮತಿ ಶಕುಂತಲಾ ಜಗನ್ನಾಥ್ ಶೆಟ್ಟಿ ಆಡಿಟೋರಿಯಂನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ತುಳುಕೂಟ ಪುಣೆ ಇದರ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಾಜ್ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಸದಾನಂದ ಕೆ. ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರು, ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ಸ್ ನ ಸಿಎಂಡಿ ರಾಜೇಂದ್ರ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಸಾಮಾಜಿಕ ಸೇವೆಗೈದ ಗಣ್ಯರಾದ ಅಹ್ಮದ್ ನಗರದ ಉದ್ಯಮಿ ಶಬರಿ ಇಂಡಸ್ಟ್ರಿಯಲ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ನ ಆಡಳಿತ…
ಶ್ರೀ ಕ್ಷೇತ್ರ ಕಟೀಲಿನ ಗೋಪಾಲಕೃಷ್ಣ ಅಸ್ರಣ್ಣರ 24 ನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ಬಂಟರ ಸಂಘ ಮುಂಬಯಿಯ ಬಂಟರ ಭವನದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಒಳಿತಿಗಾಗಿ ಶ್ರಮಿಸಿದ ಐಕಳ ಹರೀಶ್ ಶೆಟ್ಟಿಯವರನ್ನು ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು. ಅಲ್ಲದೇ ಹಲವಾರು ಕಲಾವಿದರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟವು ಜರಗಿತು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ದಾನಿಗಳಾದ ಡಾ| ಆರ್ ಕೆ ಶೆಟ್ಟಿ, ರತ್ನಾಕರ್ ಶೆಟ್ಟಿ ಮುಂಡ್ಕೂರು, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಪದ್ಮನಾಭ ಕಟೀಲು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಬಂಟರ ಸಂಘ ಕಟಪಾಡಿ ಮತ್ತು ಬಂಟರ ಮಹಿಳಾ ವೇದಿಕೆ ಜಂಟಿಯಾಗಿ ನಡೆಸಿದ ಆಟಿಡೊಂಜಿ ದಿನ ಕಾರ್ಯಕ್ರಮ ಆಗಸ್ಟ್ 11 ರಂದು ಆದಿತ್ಯವಾರ ಎಸ್. ವಿ. ಎಸ್ ಸಭಾಂಗಣದಲ್ಲಿ ನಡೆಯಿತು. ಕಾಪು ಕ್ಷೇತ್ರದ ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಟಿದ ವಿಶೇಷತೆಯ ಬಗ್ಗೆ ಬೆಳಕು ಚೆಲ್ಲಿ ಶುಭ ಹಾರೈಸಿದರು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅಶ್ವಿನ್ ಬಲ್ಲಾಳ್ ಕಟಪಾಡಿ ಬೀಡು ಅವರು ಸಂಘದ ಅಭಿವೃದ್ಧಿಗೆ ತನ್ನ ವಿಶೇಷ ಕೊಡುಗೆಯನ್ನು ನೀಡುತ್ತೇನೆ ಎಂದು ತಿಳಿಸಿದರು. ಅತಿಥಿಗಳಾಗಿ ಬಂಟರ ಸಂಘ ಉಡುಪಿ ತಾಲೂಕು ಸಮಿತಿಯ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾದ ದಿನೇಶ್ ಹೆಗ್ಡೆ, ನಿರ್ದೇಶಕರಾದ ಇಂದಿರಾ ಸುಬ್ಬಯ್ಯ ಹೆಗ್ಡೆ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ವೀಣಾ ಶೆಟ್ಟಿ, ಇಂದು ಶೆಟ್ಟಿ, ಜಯ. ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಟಪಾಡಿ ಬಂಟರ ಸಂಘದ ಅಧ್ಯಕ್ಷರಾದ ದಯಾನಂದ ಆರ್ ಶೆಟ್ಟಿಯವರು ಎಲ್ಲರನ್ನೂ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ವರದಿಯನ್ನು ವಾಚಿಸಿದರು. ಮಹಿಳಾ ಕಾರ್ಯದರ್ಶಿ…
ಹತ್ತು ಹಲವು ಬಗೆಯ ಜಾತ್ರೆ, ಸಂಕ್ರಾಂತಿ, ಹಬ್ಬ ಹರಿದಿನಗಳು ನಮ್ಮ ನಾಡಿನ ನೆಲದ ಮಣ್ಣಿನಲ್ಲಿ ಘಮ ಘಮಿಸುತ್ತಿರುವುದು ಸತ್ಯ. ಹಬ್ಬಗಳ ನಾಡು ನಮ್ಮದು. ಭಾರತೀಯ ಪರಂಪರೆಯಲ್ಲಿ ಪ್ರತಿಯೊಂದು ಸಂವತ್ಸರಕ್ಕೂ, ಋತುಮಾಸಕ್ಕೂ, ಎಲ್ಲಾ ಹಬ್ಬಗಳಿಗೂ ಅದರದ್ದೇ ಆದ ಮಹತ್ವ, ಐತಿಹಾಸಿಕ ಹಿನ್ನಲೆ, ಧಾರ್ಮಿಕ ನಂಬಿಕೆ, ಸಾಮಾಜಿಕ ಕಾಳಜಿ ಹಾಗೂ ಆರೋಗ್ಯದ ವಿಚಾರಗಳು ಅಡಗಿರುತ್ತದೆ. ಅಂತಹದ್ದೇ ಒಂದು ವಿಶಿಷ್ಟತೆಗೆ ಪ್ರತೀಕವಾಗಿ ಸಿಂಹ ಸಂಕ್ರಮಣದಂದು ಉಡುಪಿ ಜಿಲ್ಲೆಯ ಪೆರ್ಡೂರಿನ ಕದಳೀ ಪ್ರಿಯ ಖ್ಯಾತಿಯ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜರುಗುವ “ಮದುಮಕ್ಕಳ ಜಾತ್ರೆ”ಯು ಜಗತ್ಪ್ರಸಿದ್ಧ. ಅಂದು ದೇವಸ್ಥಾನದ ಆವರಣದ ಸುತ್ತೆಲ್ಲಾ ನವ ದಂಪತಿಗಳು ತುಂಬಿರುತ್ತಾರೆ. ಸಿಂಹ ಸಂಕ್ರಮಣದ ಆಚರಣೆಗಳಲ್ಲಿ ಇಲ್ಲಿ “ಮದುಮಕ್ಕಳ ಜಾತ್ರೆ” ಎಂದೇ ಖ್ಯಾತಿ ಪಡೆದುದಾಗಿದೆ. ನವ ವಧು ಆಷಾಢದಲ್ಲಿ ಅತ್ತೆಯ ಮನೆಯಿಂದ ತವರು ಮನೆಗೆ ತೆರಳಿದವಳು ಮಳೆಯ ಅಬ್ಬರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿ ಆಷಾಢದ ವಿರಹ ತಪ್ಪಿ ಶ್ರಾವಣಕ್ಕೆ ಪುನಃ ಅತ್ತೆಯ ಮನೆಗೆ ಬರುವ ಕಾಲ. ಆಷಾಢ ಮಾಸದ ಬಳಿಕ ಬರುವ ಸಿಂಹ ಸಂಕ್ರಮಣದಂದು…
ಸಮಾಜವನ್ನು ಆರೋಗ್ಯ ಪೂರ್ಣವಾಗಿಸಲು ಆಟಿಡೊಂಜಿ ದಿನದ ಕಾರ್ಯಕ್ರಮ ಸಹಕಾರಿ. ಆ ನಿಟ್ಟಿನಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘವು ತುಳುನಾಡಿನ ಆಚಾರ, ವಿಚಾರ, ಸಂಪ್ರದಾಯಗಳ ಅರಿವು ಮೂಡಿಸುವಲ್ಲಿ ನಡೆಸಿದ ಆಟಿಡೊಂಜಿ ದಿನ ಅರ್ಥಪೂರ್ಣ ಎಂದು ಉಡುಪಿ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಹೇಳಿದರು. ಅವರು ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸಭಾಂಗಣದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಮ್ಮ ಪೂರ್ವಜರ ಆರೋಗ್ಯಯುತ ಆಹಾರ ಪದ್ಧತಿಯ ಗುಟ್ಟು ಆಟಿ ಕೂಟದಲ್ಲಿ ಅಡಗಿದೆ. ಯುವ ಪೀಳಿಗೆಗೂ ನಮ್ಮ ತುಳುನಾಡಿನ ಆಚಾರ, ವಿಚಾರ, ಆಟಿಡೊಂಜಿ ದಿನದ ಮಹತ್ವದ ಬಗ್ಗೆ ತಿಳಿಸುವಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಪರಿಣಾಮಕಾರಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಚಿಂತಕ ಡಾ. ವೈ.ಎನ್. ಶೆಟ್ಟಿ ದಿಕ್ಸೂಚಿ ಭಾಷಣಗೈದು ಸಾಂಸ್ಕೃತಿಕ…
ಗೋವಾದಲ್ಲಿ ಕನ್ನಡ ಉಳಿಯಬೇಕು. ಕನ್ನಡ ಬೆಳೆಯಬೇಕು. ಇದಕ್ಕಾಗಿ ಗೋವಾದಲ್ಲಿ ದೊಡ್ಡದಾಗಿ ಶಿಕ್ಷಣ ಕಾಂತ್ರಿಯಾಗಬೇಕಿದೆ. ಎಲ್ಲೆಲ್ಲಿ ಕನ್ನಡಿಗರಿಗೆ ಆರ್ಥಿಕ ಅವಶ್ಯಕತೆಯಿದೆ ಅಲ್ಲಿ ನಾವು ನೀವೆಲ್ಲ ಸೇರಿ ಕನ್ನಡಿಗರ ಒಳಿತಿಗಾಗಿ ಶ್ರಮಿಸಬೇಕು ಎಂದು ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವಿನರ್ ಮುರಳಿ ಮೋಹನ್ ಶೆಟ್ಟಿ ನುಡಿದರು. ಗೋವಾ ವಾಸ್ಕೊದ ಜುವಾರಿನಗರದ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಮೋಹನ್ ಶೆಟ್ಟಿಯವರು ಉಚಿತ ಸಮವಸ್ತ್ರ, ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ ಎಂದರೆ ಹೆಚ್ಚಾಗಿ ಬಡವರ ಮಕ್ಕಳು ಇರುತ್ತಾರೆ. ಇಂತಹ ಶಾಲೆಗಳಲ್ಲಿ ಇಂತಹ ಶೈಕ್ಷಣಿಕ ಕಾರ್ಯಕ್ರಮ ಮಾಡಿದಾಗ ಪ್ರೋತ್ಸಾಹ ಮಾಡುವ ಅಗತ್ಯವಿದೆ ಎಂದು ಮುರಳಿ ಮೋಹನ್ ಶೆಟ್ಟಿ ನುಡಿದರು. ಮಕ್ಕಳಿಗೆ ನಮ್ಮ ಭಾರತೀಯ ಸಂಸ್ಕಾರ ನೀಡಬೇಕು. ಮಕ್ಕಳು ಆಧ್ಯಾತ್ಮಕ ಕಡೆಗೆ ಆಸಕ್ತಿ ಬೆಳೆಸುವ ಹಾಗೆ ಪ್ರೋತ್ಸಾಹ ನೀಡಬೇಕು ಎಂದು ಮಕ್ಕಳ ಪಾಲಕರಿಗೆ ಮೋಹನ್ ಶೆಟ್ಟಿ ಕರೆ ನೀಡಿದರು. ಉದ್ಯಮಿ ವಿಜಯ್ ಶೆಟ್ಟಿ, ವಿನೋದ ರಾಹಿರವರು ಬ್ಯಾಗ್, ಪುಸ್ತಕ, ಕಂಪಾಸ ಖರೀದಿಸುವಲ್ಲಿ ಆರ್ಥಿಕ ಸಹಾಯ ಮಾಡಿದ್ದರು.…
ಮುಂಬಯಿಯ ಹೆಸರಾಂತ ನ್ಯಾಯವಾದಿ, ಬೋಂಬೆ ಬಂಟ್ಸ್ ಎಸೋಸಿಯೇಷನ್ನಿನ ಮಾಜಿ ಅಧ್ಯಕ್ಷ ಸುಭಾಷ್ ಬಾಲಕೃಷ್ಣ ಶೆಟ್ಟಿ (70) ಅವರು ಆಗಸ್ಟ್ 9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ತಮ್ಮ ಮನೆಯ ಪಕ್ಕದಲ್ಲಿ ಶಿರ್ಡಿ ಸಾಯಿಬಾಬಾರ ಮಂದಿರವೊಂದನ್ನು ಕಟ್ಟಿಸಿ ಪರಿಸರದ ಭಕ್ತಾದಿಗಳನ್ನು ಒಗ್ಗೂಡಿಸಿ ಉತ್ಸವವನ್ನು ಆಚರಿಸುತ್ತಾ ಧಾರ್ಮಿಕ ಪ್ರಜ್ಞೆಯನ್ನು ಮೆರೆದಿದ್ದರು. ಬೋಂಬೆ ಬಂಟ್ಸ್ ಎಸೋಸಿಯೇಶನ್ ನಲ್ಲಿ ಹಲವಾರು ವರ್ಷಗಳಿಂದ ಪದಾಧಿಕಾರಿಯಾಗಿದ್ದು, ಅಧ್ಯಕ್ಷರಾಗಿದ್ದು, ಸಾಮಾಜಿಕ ಚಿಂತಕರಾಗಿದ್ದರು. ನ್ಯಾಯವಾದಿಯಾಗಿ ತನ್ನಲ್ಲಿ ಬಂದವರಿಗೆ ನ್ಯಾಯ ಒದಗಿಸಿ ಕೊಡುತ್ತಿದ್ದರು. ಅವರು ಯಕ್ಷಗಾನದ ವೇಷಧಾರಿಯಾಗಿ, ಅರ್ಥದಾರಿಯಾಗಿದ್ದರು. ಅಡ್ವಕೇಟ್ ಸುಭಾಷ್ ಶೆಟ್ಟಿಯವರು ಬಂಟ್ಸ್ ಲಾ ಫೋರಮ್ ನ ಸಲಹೆಗಾರರಾಗಿದ್ದರು. ಮೃತರು ಪತ್ನಿ ಉಳೆಪಾಡಿ ಮಂಜಲಗುತ್ತು ಭಾರತಿ ಶೆಟ್ಟಿ, ಪುತ್ರ ಶಶಾಂಕ್ ಶೆಟ್ಟಿ, ಪುತ್ರಿ ಶ್ರೇಯಾ ಶೆಟ್ಟಿ, ಅಳಿಯ, ಸೊಸೆ, ಮೊಮ್ಮಕ್ಕಳು, ಕುಟುಂಬಿಕರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬೋಂಬೆ ಬಂಟ್ಸ್ ಎಸೋಸಿಯೇಷನ್ ನ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ, ಮಾಜಿ ಅಧ್ಯಕ್ಷರುಗಳು ಮತ್ತು ಸರ್ವ ಪದಾಧಿಕಾರಿಗಳು, ಸದಸ್ಯರು ಸಂತಾಪ…
‘ಭಾರತೀಯ ಸೇನೆ ಇಂದು ಸಶಕ್ತವಾಗಿದ್ದು ಯಾವುದೇ ಶತ್ರು ರಾಷ್ಟ್ರವನ್ನು ಬಗ್ಗು ಬಡಿಯಲು ಸಮರ್ಥವಾಗಿದೆ. ಸೇನಾ ಸಾಧನಗಳ ತಯಾರಿಯ ಸಂಶೋಧನೆ, ಅಭಿವೃದ್ಧಿ ಹಾಗೂ ಉತ್ಪಾದನೆಯಲ್ಲಿ ದೇಶ ಶೇ.75 ರಷ್ಟು ಸ್ವಾವಲಂಬಿಯಾಗಿದೆ’ ಎಂದು ಮೇಜರ್ ಜನರಲ್ ಸತೀಶ್ ಭಂಡಾರಿ ಹೇಳಿದರು. ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 28 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಮಾತನಾಡಿದ ಅವರು ‘ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಸಹಜವಾಗಿಯೇ ಕಠಿಣ ಸವಾಲುಗಳನ್ನು ಎದುರಿಸಬೇಕಾಗುತ್ತಿದೆ. ಆದರೆ ದೇಶಕ್ಕಾಗಿ ಸೇವೆ ಸಲ್ಲಿಸಿದ ಅನುಭವ ಸದಾ ಸ್ಮರಣೀಯ’ ಎಂದರು. ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಉದ್ಯಮಿ ಎಂ.ಆರ್.ಜಿ.ಗ್ರೂಪಿನ ಡಾ| ಕೆ ಪ್ರಕಾಶ್ ಶೆಟ್ಟಿ ಅವರನ್ನು ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಡಾ| ಕೆ ಪ್ರಕಾಶ್ ಶೆಟ್ಟಿ ‘ಹಿರಿಯರ ಸಾಧನೆಯಿಂದ ಪ್ರೇರಿತನಾಗಿ ಜೀವನದಲ್ಲಿ ಏನಾದರೂ ಸಾಧಿಸಬೇಕೆಂದು ಬಯಸಿದ್ದೆ. ಹಾದಿ ಕಠಿಣವಾಗಿತ್ತು. ಆದರೆ ಇಂದು ಕನಸು…