Author: admin
ವಿದ್ಯಾಗಿರಿ: ಗೋದಲಿಯಲ್ಲಿ ಬಾಲ ಯೇಸು ಜನನದ ದರ್ಶನ, ಕ್ಯಾರೆಲ್ ಹಾಡಿದ ವಿದ್ಯಾರ್ಥಿಗಳ ಗುಂಪು, ನಡುವೆ ಬಂದ ಸಂತ ಕ್ಲಾಸ್, ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದ ಕ್ರಿಸ್ ಮಸ್ ಮರ- ಸಭಾಂಗಣ, ಏಂಜೆಲ್ಸ್, ಜಿಂಗಲ್ ಬೆಲ್ ಸಂಗೀತ, ಪುಟಾಣಿಗಳ ಬಾಯಿ ಸಿಹಿ ಮಾಡಿದ ಕೇಕ್… ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ , ಆರಾಧನೆಯ ಸಂಪ್ರೀತಿಯು ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗುರುವಾರ ಸಂಜೆ ಮೂಡಿತು. ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ. ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ.ಪೀಟರ್ ಪಾವ್ಲ್ ಸಲ್ಡಾನಾ, ‘ಭರವಸೆ ನಿರಾಶೆ ಮೂಡಿಸುವುದಿಲ್ಲ. ಬದುಕು ಪ್ರೀತಿಯ ಪಥ. ಜೀವನದಲ್ಲಿ ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ’ ಎಂದರು. ‘ಹ್ಯಾಪಿ ಕ್ರಿಸ್ ಮಸ್’ ಎಂದು ಶುಭಕೋರಿ ಮಾತು ಆರಂಭಿಸಿದ ಅವರು, ‘ಇಲ್ಲಿಗೆ ಕ್ರಿಸ್ ಮಸ್ ಬಂದಿದೆ. ಸತ್ಯ ಮತ್ತು ಬದುಕು ನಮ್ಮದಾಗಲಿ. ನಮ್ಮೆಲ್ಲ ಒಳಿತಿಗಾಗಿ ದೈವಿಕ ಮನುಷ್ಯನಾದರು. ಅವರ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಡಿಸೆಂಬರ್ 31 ಜನವರಿ 03 ರವರೆಗೆ ಪ್ರತಿದಿನ ಸಂಜೆ 6.45 ಕ್ಕೆ ಮೂಡುಬಿದ್ರೆ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನೀನಾಸಂ ತಿರುಗಾಟ ತಂಡದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ. ಡಿ.31 ಮತ್ತು ಜ.01 ರಂದು ಮೂಲ ಭವಭೂತಿಯ, ಅಕ್ಷರ ಕೆ.ವಿ.ಇವರು ನಿರ್ದೇಶಿಸಿದ ಮಾಲತಿ ಮಾಧವ ಹಾಗೂ ಜ.02 ಮತ್ತು 03 ರಂದು ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿದ, ಮೂಲ ಅಭಿರಾಮ್ ಭಡ್ಕಮ್ಕರ್ ರಚಿಸಿದ, ವಿದ್ಯಾನಿಧಿ ವನಾರಸ್ ನಿರ್ದೇಶಿಸಿದ ಅಂಕದ ಪರದೆ ನಾಟಕಗಳ ಪ್ರದರ್ಶನ ನಡೆಯಲಿದೆ. ಈ ವರ್ಷದ ಅತ್ಯುತ್ತಮ ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀನಾಸಂ ತಿರುಗಾಟದ ನಾಟಕಗಳ್ನು ಹೆಚ್ಚು ಜನರು ನೋಡಬೇಕೆಂಬ ಕಾರಣಕ್ಕೆ ಎರಡೆರಡು ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ತಿಳಿಸಿದ್ದಾರೆ.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್ನಲ್ಲಿ 22 ಡಿಸೆಂಬರ್ 2024 ಆದಿತ್ಯವಾರದಂದು ನಡೆಯಲಿದೆ. ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. ಫೌಂಡೇಶನ್ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಪ್ರತಿ ಎಂ.ಬಿ.ಬಿ.ಎಸ್ ಸೀಟ್ಗೆ (155) ರೂ,2000/- ದಂತೆ ಭಾರತೀಯ ಸೇನೆಗೆ ರೂ,3,10,000/ ವನ್ನು ದೇಣಿಗೆಯಾಗಿ ನಿಡಲಾಗುವುದು. ಒಟ್ಟು 3 ನೇ ಹಂತದಲ್ಲಿಇದೀಗ 7,47,500 ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಗುವುದು. ಈ…
ಹೋಟೆಲ್ ಉದ್ಯಮದಲ್ಲಿ ಅಪಾರ ಅನುಭವ ಹೊಂದಿದ ಪ್ರವೀಣ್ ಶೆಟ್ಟಿ ತಮ್ಮ ಅನುಭವವನ್ನು ಧಾರೆಯೆರೆದು ವಿಶ್ವ ದರ್ಜೆಯ ರೆಸಾರ್ಟ್ ನಿರ್ಮಿಸಿದ್ದಾರೆ. ಇದು ಹುಟ್ಟೂರಿಗೆ ಅವರು ನೀಡಿದ ಬಹುದೊಡ್ಡ ಕೊಡುಗೆ. ಅಚ್ಚುಕಟ್ಟುತನದಿಂದ ನಿರ್ಮಿಸಿದ ಈ ರೆಸಾರ್ಟ್ ಗೆ ಉತ್ತಮ ಭವಿಷ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ ಮೋಹನ ಆಳ್ವ ಹೇಳಿದರು. ಪುಣೆಯ ಅತಿಥಿ ಗ್ರೂಪ್ ಆಫ್ ರೆಸ್ಟೋರೆಂಟ್ಸ್ ನ ಸಹ ಸಂಸ್ಥೆಯಾಗಿ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ನಿರ್ಮಿಸಲಾದ ಸಂಪಿಗೆ ರೆಸಾರ್ಟ್ ಅನ್ನು ಉದ್ಘಾಟಿಸಿ ಮಾತನಾಡಿದರು. ಶಾಸಕ ಉಮಾನಾಥ್ ಕೋಟ್ಯಾನ್ ಮಾತನಾಡಿ, ಮೂಡಬಿದಿರೆಗೆ ಭೇಟಿ ನೀಡುವವರಿಗೆ ಸ್ಟಾರ್ ಹೋಟೆಲ್ ಸೌಲಭ್ಯ ಸಿಗಲಿದೆ. ಇದು ಮೂಡಬಿದಿರೆ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದು ಇಲ್ಲಿನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. ಸಂಪಿಗೆ ರೆಸಾರ್ಟ್ ನ ಆಡಳಿತ ನಿರ್ದೇಶಕ ಪ್ರವೀಣ್ ಶೆಟ್ಟಿ ಮಾತನಾಡಿ, ಹುಟ್ಟೂರಿನಲ್ಲಿ ಸುಸಜ್ಜಿತ ರೆಸಾರ್ಟ್ ನಿರ್ಮಿಸಬೇಕೆಂಬ ಬಹುಕಾಲದ ಕನಸು ನನಸಾಗಿದೆ ಎಂದರು. ಈ ಸಂದರ್ಭದಲ್ಲಿ ಡಾ| ಸುಧಾಕರ ಶೆಟ್ಟಿ ಪುಣೆ, ಮಾಜಿ ಸಚಿವರಾದ ಕೃಷ್ಣ ಜೆ…
ವಿದ್ಯಾಗಿರಿ: ಅಹಿಂಸೆಯು ಹಿಂಸೆಯ ಬದಲಿ ಅಥವಾ ಪ್ರತಿ ಅಲ್ಲ. ಅದು ಪರಿಪೂರ್ಣ ಜೀವನ ದರ್ಶನ. ಮನುಷ್ಯ ಜೀವನ ನಿರ್ವಹಿಸುವ ವಿಧಾನ ಎಂದು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜಾರಾಮ ತೋಳ್ಪಾಡಿ ವಿಶ್ಲೇಷಿಸಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಕನ್ನಡ ವಿಭಾಗ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಆಶ್ರಯದಲ್ಲಿ ನಡೆದ ‘ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು’ ವಿಚಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಅಹಿಂಸೆ ಎನ್ನುವುದು ಅಧ್ಯಾತ್ಮ. ಆದರೆ, ಅದಕ್ಕೆ ಲೋಕ ಹಾಗೂ ವಾಸ್ತವದ ಸ್ಪರ್ಶ ಇದೆ ಎಂದು ಉಲ್ಲೇಖಿಸಿದ ಅವರು, ಹಿಂಸೆಯ ಮೂಲಕ ಸ್ವಾತಂತ್ರ್ಯ ಗಾಂಧಿಗೆ ಬೇಕಾಗಿರಲಿಲ್ಲ. ಉಗ್ರ ಹೋರಾಟಗಾರರು ಜನರ ಜೊತೆ ಬೆರೆತು ಹೋರಾಡುತ್ತಿರಲಿಲ್ಲ. ಜನರ ಭಾಗವಹಿಸುವಿಕೆ ಗಾಂಧೀಜಿಗೆ ಬಹುಖ್ಯವಾಗಿತ್ತು ಎಂದರು. ಮಾಂಸಾಹಾರ ಮಾಡುವುದೇ ಹಿಂಸೆಯ ಭಾಗ ಅಲ್ಲ. ಹಿಂಸೆ ಎಂಬುದು ಬದುಕಿನಲ್ಲಿ ಹಾಸುಹೊಕ್ಕ ಅನೇಕ ವರ್ತನೆಗಳು ಎಂದರು. ಅಹಿಂಸೆ ಎಂದರೆ ಒಂದು ಬಾಂಧವ್ಯ. ಹಿಂಸೆ ಮಾಡದೇ ಇರುವುದು ಅಹಿಂಸೆ ಅಲ್ಲ. ಅಹಿಂಸೆ…
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ನೆಟ್ಲಮುಡ್ನೂರು ಗ್ರಾಮ ನೇರಳಕಟ್ಟೆ. ಈ ಶಾಲೆಯು ಸುಮಾರು 105 ವರ್ಷಗಳನ್ನು ಪೂರೈಸಿದ ಶಾಲೆಯಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ನೀಡಿದೆ. ಈ ಶಾಲೆಯ ಕಟ್ಟಡಗಳು ದುಸ್ಥಿರವಾಗಿದ್ದನ್ನು ಮನಗಂಡ ಊರಿನ ಶಿಕ್ಷಣ ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಸೇರಿ ಶತಮಾನೋತ್ಸವದ ಕನಸನ್ನು ಕಂಡು ಒಂದು ಸಮಿತಿಯನ್ನು ರಚಿಸಿದ್ದರು. ಈ ಸಮಿತಿಯ ಮುಖಾಂತರ ಶಾಲೆಗೆ ನೂತನ ಕಟ್ಟಡದ ಅವಶ್ಯಕತೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆಯನ್ನು ಇಟ್ಟಿತು. ಮುಂದೆ ಎಂ.ಆರ್.ಪಿ.ಎಲ್, ಎನ್.ಎಂ.ಪಿ.ಟಿ, ಇನ್ನಿತರ ಸಂಸ್ಥೆಗಳಿಗೆ ತಮ್ಮ ಕಟ್ಟಡದ ಅವಶ್ಯಕತೆಯನ್ನು ಮನವಿ ಮೂಲಕ ತಿಳಿಸಿದಾಗ ಎಂ.ಆರ್.ಪಿ.ಎಲ್ ಮತ್ತು ಎನ್.ಎಂ.ಪಿ.ಟಿ ಸಂಸ್ಥೆ ತನ್ನ ಸಿಎಸ್ಆರ್ ಅನುದಾನದಿಂದ ಕ್ರಮವಾಗಿ 42 ಲಕ್ಷ ಮತ್ತು 20 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿತ್ತು. ಇದರಿಂದ ನೂತನ ಕೊಠಡಿಗಳ ನಿರ್ಮಿಸಲು ಶಂಕುಸ್ಥಾಪನೆಯು ಡಿಸೆಂಬರ್ 9 ರಂದು ಸೋಮವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ…
ಎಸ್.ಬಿ ಗ್ರೂಪ್ ಅರ್ಪಿಸುವ “ಶಿಯಾನ ಪ್ರೊಡಕ್ಷನ್ ಹೌಸ್” ಅವರ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಾಣದ, ನವ ನಿರ್ದೇಶಕ ಭರತ್ ಶೆಟ್ಟಿಯವರ ಕಥೆ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದಿಂದ ಕೂಡಿದ, ವಿಭಿನ್ನ ಕಥಾ ಹಂದರದ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಕೊಕ್ಕಡ ಸುತ್ತಮುತ್ತ ನಡೆಯಿತು. ಒಟ್ಟು ಮೂವತ್ತು ದಿನದ ಚಿತ್ರೀಕರಣದ ಈ ಸಿನಿಮಾ ಎರಡು ಹಂತದಲ್ಲಿ ಚಿತ್ರೀಕರಿಸಲ್ಟಟ್ಟಿತ್ತು. ತುಳು ಸಿನಿಮಾ ರಂಗದಲ್ಲಿ ಪ್ರಪ್ರಥಮ ಬಾರಿಗೆ ವಿಭಿನ್ನ, ವಿಶೇಷ ತಂತ್ರಜ್ಞಾನವನ್ನು ಈ ಸಿನಿಮಾದ ಮೂಲಕ ಪರಿಚಯಿಸುತ್ತಿದೆ. ಉತ್ತಮ ಕಥಾವಸ್ತು ಇರುವ ಈ ಚಿತ್ರದಲ್ಲಿ ಹಾಸ್ಯಕ್ಕೂ ಅಷ್ಟೇ ಒತ್ತು ಕೊಟ್ಟಿದೆ. ಇರಾ, ಮುಡಿಪು, ವರ್ಕಾಡಿ, ಕೂಟತ್ತಾಜೆ, ಬೋಳಿಯಾರ್, ಕೊಕ್ಕಡ ಮುಂತಾದ ಕಡೆ ಚಿತ್ರೀಕರಿಸಲಾಗಿತ್ತು. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿ ರಾಮಕುಂಜ, ಶಿವಪ್ರಕಾಶ್ ಪೂಂಜ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳೂರು, ರಕ್ಷಣ್ ಮಾಡೂರು, ಪ್ರಕಾಶ್ ಶೆಟ್ಟಿ ಧರ್ಮನಗರ, ವಿಜಯಹರಿ…
ಸಮಾಜ ಸೇವೆಯನ್ನು ಪರಿಗಣಿಸಿ ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಶೋಕ್ ಕೃಷ್ಣ ಶೆಟ್ಟಿ ಅವರಿಗೆ ಗೋವಾ ವಿಮೋಚನ ದಿನದ ಅಂಗವಾಗಿ ಡಿಸೆಂಬರ್ 19ರಂದು ಉತ್ತಮ ಸಮಾಜ ಸೇವಕ ಪ್ರಶಸ್ತಿಯನ್ನು ಪಡೆದುಕೊಂಡರು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಮುಡಾರು ಗ್ರಾಮದ ಅನಂತಬೆಟ್ಟುವಿನ ಅಶೋಕ್ ಶೆಟ್ಟಿಯವರು 1987ರಲ್ಲಿ ಉದ್ಯೋಗ ಅರಸಿ ಗೋವಾ ತೆರಳಿದರು. ಆರ್.ಎಸ್.ಎಸ್.ಎಸ್ ಮುಖಂಡರಾಗಿರುವ ಅಶೋಕ್ ಶೆಟ್ಟಿ ಅವರು ಉದ್ಯಮ, ರಾಜಕೀಯ, ಸಾಮಾಜಿಕ ರಂಗದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಟ್ಲ ಫೌಂಡೇಶನ್ ಗೋವಾ ಹಾಗೂ ತುಳುಕೂಟ ಗೋವಾ ಇದರ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ನಿ ಶೈಲಜಾ ಶೆಟ್ಟಿ, ಪುತ್ರರಾದ ಅಶ್ವಿತ್ ಶೆಟ್ಟಿ ಹಾಗೂ ಅನ್ವಿತ್ ಶೆಟ್ಟಿ ಅವರೊಂದಿಗೆ ಅಶೋಕ್ ಶೆಟ್ಟಿ ಅವರು ಪಣಜಿಯಲ್ಲಿ ಪೊರ್ವೋರಿಮ್ ವಾಸವಾಗಿದ್ದಾರೆ
ಮಿಜಾರು: ಇದು ಗೂಗಲ್ ಮಾಹಿತಿ ಸುನಾಮಿಯ ಕಾಲ, ಆದರೆ, ಶಿಕ್ಷಕರ ಸ್ಥಾನ ತುಂಬಲು ಗೂಗಲ್ ಗೆ ಸಾಧ್ಯವಿಲ್ಲ. ವಿದ್ಯಾರ್ಥಿಗಳು ನಮ್ಮ ತರಗತಿಯಲ್ಲಿ ಏಕೆ ಕುಳಿತುಕೊಳ್ಳಬೇಕು ಎಂದು ಶಿಕ್ಷಕರು ತಮ್ಮಲ್ಲಿ ಪ್ರಶ್ನಿಸಿಕೊಳ್ಳಬೇಕು. ಆಗ ತರಗತಿಯ ಎಲ್ಲ ವಿದ್ಯಾರ್ಥಿಗಳು ಬುದ್ಧಿವಂತರಾಗುತ್ತಾರೆ ಎಂದು ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ. ರಾಮಚಂದ್ರ ಸೆಟ್ಟಿ ಹೇಳಿದರು. ಆಳ್ವಾಸ್ ಪ್ರಕೃತಿಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಲ್ಲಿ ಗುರುವಾರ ಅವರು ಮಾತನಾಡಿದರು. ಈ ಪೀಳಿಗೆಯಲ್ಲಿ ಶಿಕ್ಷಕರು ಸಹ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕಾದ ಅವಶ್ಯಕತೆಯಿದೆ. ಇಲ್ಲದಿದ್ದರೆ ಅವರು ಪ್ರಸ್ತುತ ತಂತ್ರಜ್ಞಾನದಿಂದ ಮತ್ತು ಪ್ರಸ್ತುತ ಕಲಿಕಾ ಮಾಧ್ಯಮದಿಂದ ಹಿಂದುಳಿಯುತ್ತಾರೆ. ಆದ್ದರಿಂದ ತರಬೇತಿಯ ಅಗತ್ಯವಿದೆ ಎಂದರು.ವಿದ್ಯಾರ್ಥಿಗೆ ಹೊಸ ವಿಷಯಗಳ ಕುರಿತು ಕಲಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಒಬ್ಬ ಶಿಕ್ಷಕ ತನ್ನನ್ನು ತಾನು ನವೀಕರಿಸಿಕೊಳ್ಳಲು ಪ್ರಶ್ನಾರ್ಥಕ ಮನೋಭಾವ ಬೆಳೆಸಿಕೊಳ್ಳಬೇಕು. ಯಾವುದೇ ವಿಷಯದ…
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ನಡೆಸಲ್ಪಡುವ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ ಡಿಸೆಂಬರ್ 14 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಯ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ದಕ್ಷಿಣ ಕನ್ನಡದಲ್ಲಿ ಸಾಂಸ್ಕೃತಿಕ ಸಂಪತ್ತು ಹೇರಳವಾಗಿದೆ, ಇಲ್ಲಿ ಆಧುನಿಕತೆ ಸೊಗಡಿನೊಂದಿಗೆ ಹಿಂದಿನ ಕಾಲದಿಂದ ನಡೆದು ಬಂದಿರುವ ಯಕ್ಷಗಾನ, ಕಂಬಳವನ್ನು ಜನ ಬಹಳ ಪ್ರೀತಿಯಿಂದ ಸ್ವೀಕಾರ ಮಾಡುತ್ತಾರೆ. ಒಳ್ಳೆಯ ವ್ಯಕ್ತಿಯಾಗಿ ಸಮಾಜದಲ್ಲಿ ಬದುಕಬೇಕು, ಯಾವುದೇ ಒತ್ತಡವನ್ನು ನಾವು ತಲೆಗೆ ಹಾಕಿಕೊಳ್ಳಬಾರದು, ಖುಷಿಯಾಗಿ ಬದುಕಬೇಕು ಎಂದು ಹೇಳಿದ ಅವರು, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಾಧನೆಯ ಬಗ್ಗೆ ಹೆಮ್ಮೆಯಾಯಿತು. ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ ನಾಯಕತ್ವದಲ್ಲಿ ಶಾಲೆಯು ಅತ್ಯುತ್ತಮವಾದ ಪ್ರಗತಿಯನ್ನು ಸಾಧಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯು ದಾಖಲೆಯನ್ನು ನಿರ್ಮಿಸಿದೆ.…