Author: admin
ಮೂಡುಬಿದಿರೆ: ಖಾಸಗಿ ಚಿಂತನೆಯಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಯಾಗುತ್ತಿದೆ ಎಂದು ಕುಷ್ಮಾದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು. ಆಳ್ವಾಸ್ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಪ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇಕಡಾ 50ರಷ್ಟು ಮಕ್ಕಳು ಖಾಸಗಿ ವ್ಯವಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಸರಕಾರಿ ಸಂಸ್ಥೆಗಳಿಗೆ ಹೋಲಿಸಿದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಫಲಿತಾಂಶ ಉತ್ತಮವಾಗಿದೆ. ಕಳೆದ ಬಾರಿಯ ಬೋರ್ಡ್ ಪರೀಕ್ಷೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು 75 ಶೇಕಡಾ ಫಲಿತಾಂಶ ದಾಖಲಿಸಿದರೆ, ಅನುದಾನಿತ ಸಂಸ್ಥೆಗಳಲ್ಲಿ 79 ಶೇಕಡಾ ಫಲಿತಾಂಶ ಲಭಿಸಿದರೆ ಹಾಗೂ ಖಾಸಗಿ ಸಂಸ್ಥೆಗಳು 90.46 ಶೇಕಡಾ ಫಲಿತಾಂಶ ನೀಡಿವೆ.ಇವುಗಳ ಜೊತೆಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲೂ ಖಾಸಗಿ ಸಂಸ್ಥೆಗಳು ಅಗ್ರಗಣ್ಯ ಸ್ಥಾನದಲ್ಲಿ ನಿಂತಿವೆ. ಇದು ರಾಜ್ಯದ ಒಟ್ಟು ಫಲಿತಾಂಶದ ಉನ್ನತಿಗೆ ದೊಡ್ಡ…
ಮೆಹಬೂಬ್ ನಗರ ಹೋಟೆಲ್ ಉದ್ಯಮಿಗಳಿಂದ ಸಂಘಟನಾ ಚತುರ ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹೋಟೆಲ್ ಹಿಮಾಲಯ ಮೆಹಬೂಬ್ ನಗರದಲ್ಲಿ ಹಿರಿಯ ಹೋಟೆಲ್ ಉದ್ಯಮಿಗಳಾದ ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಮತ್ತು ಹೊಸೂರು ಚಂದ್ರಶೇಖರ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ಪ್ರವೀಣ್ ಶೆಟ್ಟಿ ಗುಡ್ರಿ, ಪ್ರಸಾದ್ ಶೆಟ್ಟಿ ಹಂದಕುಂದ ಮತ್ತು ಗಿರೀಶ್ ಉಪಸ್ಥಿತರಿದ್ದರು.
ಒಬ್ಬ ವ್ಯಕ್ತಿ, ಆತ ಬೇರೆಯವರನ್ನು ಟೀಕಿಸುತ್ತಾ ದೂಷಿಸುತ್ತಾ ಇರದಿದ್ದರೆ ಅವನಿಗೆ ತಿಂದ ಅನ್ನವೇ ಜೀರ್ಣವಾಗುತ್ತಿರಲಿಲ್ಲ. ಯಾವಾಗಲೂ ಅದೇ ಅವನ ಕೆಲಸ. ಒಂದು ಸಲ ಊರಲ್ಲಿ ಕಳ್ಳತನವಾದಾಗ, ತಾನೇ ಸ್ವತಃ ನೋಡಿದವನ ಹಾಗೆ, ತಮ್ಮ ಪಕ್ಕದ ಮನೆಯ ಯುವಕನೇ ಕಳ್ಳ ಎಂದು ಸುದ್ದಿ ಹಬ್ಬಿಸಿದ. ಆ ಯುವಕನನ್ನು ಕಂಡರೆ ಇವನಿಗೆ ಆಗುತ್ತಿರಲಿಲ್ಲ. ಆ ತರುಣನನ್ನು ಪೊಲೀಸರು ಬಂಧಿಸಿದರು. ವಿಚಾರಣೆಯೆಲ್ಲಾ ನಡೆದು, ಕೆಲವು ದಿನಗಳ ನಂತರ ನಿಜವಾದ ಕಳ್ಳ ಸಿಕ್ಕಿದ ನಂತರ, ಈ ಯುವಕನನ್ನು ನಿರಪರಾಧಿ ಎಂದು ಬಿಡುಗಡೆ ಮಾಡಿದರು. ಅವಮಾನಿತನಾದ ಈ ಯುವಕ ತನ್ನ ಮೇಲೆ ಸುಳ್ಳು ಆಪಾದನೆ ನೀಡಿದ ತನ್ನ ಪಕ್ಕದ ಮನೆಯ ವ್ಯಕ್ತಿಯ ಮೇಲೆ ಮಾನನಷ್ಠ ಮೊಕದ್ದಮೆಯನ್ನು ಹೂಡಿದ. ನ್ಯಾಯಾಲಯದಲ್ಲಿ ಈ ವ್ಯಕ್ತಿ, ನಾನು ಸುಮ್ಮನೆ ಅವನು ಇದ್ರೂ ಇರಬಹುದು ಎಂದು ಅನುಮಾನದಿಂದ ಹೇಳಿದ್ದು, ಅದರಿಂದ ಈಗ ಅವನಿಗೇನೂ ತೊಂದರೆಯಾಗಿಲ್ಲವಲ್ಲ, ಹೇಗೂ ಬಿಡುಗಡೆಯಾದನಲ್ಲ ಎಂದ. ವಿಚಾರಣೆಯೆಲ್ಲಾ ಮುಗಿಯಿತು. ಎಲ್ಲರೂ ಎದ್ದು ಹೋಗುವ ಮುಂಚೆ ನ್ಯಾಯಾಧೀಶರು, ಈ ವ್ಯಕ್ತಿಯನ್ನು ಕರೆದು, ನೀನು…
ವಿದ್ಯಾಗಿರಿ: ‘ಪ್ರಭಾವಿ ಸಂವಹನವೇ ಇಂದಿನ ಸವಾಲು ಮತ್ತು ಅವಶ್ಯಕತೆ’ ಎಂದು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವಾಸುದೇವ ಕಾಮತ್ ಹೇಳಿದರು. ಇಲ್ಲಿನ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಿಮ್ಮ ಕಲಿಕೆಯೇ (ಶಿಕ್ಷಣ) ಅದರ ವೇಗವರ್ಧಕವಾಗಿದೆ ಎಂದ ಅವರು, ಪರೀಕ್ಷೆಯೇ ಕಲಿಕೆಯ ಅಂತ್ಯವಲ್ಲ. ಬದುಕಿನಲ್ಲಿ ಪ್ರತಿನಿತ್ಯ ಕಲಿಕೆ ಅನಿವಾರ್ಯ ಎಂದರು. ಕೃತಕಬುದ್ಧಿಮತ್ತೆ (ಎಐ) ಎಂಬುದು ಮಿಥ್ಯೆ ಅಲ್ಲ. ಔದ್ಯೋಗಿಕ ಬದುಕಿನ ಅನಿವಾರ್ಯತೆ ಎಂದು ಅವರು ವಿವರಿಸಿದರು. ನೀವು ಉದ್ಯಮಶೀಲತೆಯನ್ನು ಮೈಗೂಡಿಸಿಕೊಂಡು ಯಶಸ್ವಿ ಆಗಬಹುದು ಎಂದ ಅವರು, ಕೋಟ್ಯಧಿಪತಿಗಳಾದ ಕರಾವಳಿ ಸಾಧಕರು ಇದ್ದಾರೆ ಎಂದು ಉದಾಹರಣೆ ನೀಡಿದರು. ನಿಮ್ಮ ಅಂತರAಗವನ್ನು ಆಲಿಸಿ. ಹೃದಯದ ಮಾತು ಕೇಳಿ.ನಿಮಗೆ ಅತ್ಯುತ್ತಮ ಅವಕಾಶವನ್ನು ‘ಆಳ್ವಾಸ್’ ನೀಡಿದೆ. ನೀವು ಇತರರಿಗೂ ತಿಳಿಸಿ, ಇತರರ ಏಳ್ಗೆಗೆ ನೆರವಾಗಿ ಎಂದು ಸಲಹೆ ನೀಡಿದರು.…
ಕರಾವಳಿ ಸೌಹಾರ್ದ ಪತ್ತಿನ ಸಹಕಾರ ಸಂಘದ 2025-30 ರ ಅವಧಿಗೆ ಅಧ್ಯಕ್ಷರಾಗಿ ಸಿಎ ಉಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಎಸ್ ಸೀತಾರಾಮ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಶ್ರೀಮತಿ ಜಯಲಕ್ಷ್ಮಿ ಪಿ. ಶೆಟ್ಟಿ, ಶ್ರೀಮತಿ ವಿಮಲಾ ಎಸ್. ಶೆಟ್ಟಿ, ಮಹೇಶ್ ಆರ್. ಶೆಟ್ಟಿ, ರವೀಂದ್ರ ಎಸ್ ಶೆಟ್ಟಿ, ಡಾ. ಸುಭೋದ್ ಎಸ್. ಶೆಟ್ಟಿ, ಮೋಹನ್ ದಾಸ್ ಶೆಟ್ಟಿ, ಸದಾಶಿವ ಶೆಟ್ಟಿ ಬಿ, ವೆಂಕಟೇಶ್ ಅವಿರೋದವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಚುನಾವಣಾ ಅಧಿಕಾರಿಯಾದ ಮಂಜುನಾಥ್ ಸ್ವಾಮಿಯವರು ಘೋಷಣೆ ಮಾಡಿದ್ದಾರೆ. ಕರಾವಳಿ ಸೌಹಾರ್ದ ಪತ್ತಿನ ಸಹಕಾರ ಸಂಘವು ನವೆಂಬರ್ 2000 ರಂದು ಪ್ರಾರಂಭವಾಗಿದ್ದು, ದಿವಂಗತ ಡಾ. ಶ್ಯಾಮಸುಂದರ್ ಶೆಟ್ಟಿಯವರು ಸ್ಥಾಪಕ ಅಧ್ಯಕ್ಷರಾಗಿದ್ದರು. ದಾವಣಗೆರೆಯಲ್ಲಿ ಸ್ವಂತ ಕಟ್ಟಡ ಹೊಂದಿರುವ ಸಂಘ 10 ಕೋಟಿ ರೂಪಾಯಿಗೂ ಮಿಕ್ಕಿ ವಿವಿಧ ನಿಧಿಗಳನ್ನು ಹೊಂದಿದ್ದು ದಾವಣಗೆರೆ ಜಿಲ್ಲೆಯಲ್ಲಿ ಮುಂಚೂಣಿಯ ಸೌಹಾರ್ದ ಸಹಕಾರ ಸಂಘಗಳಲ್ಲಿ ಒಂದಾಗಿದೆ. ಹೊಸ ಪದಾಧಿಕಾರಿಗಳು ಹಾಗೂ…
‘ನಮ್ಮ ಕಣ್ಣಿಂದ ಮರೆಯಾಗುತ್ತಿರುವ ತುಳು ಪರಿಸರ, ಜನಪದ ಸಂಸ್ಕೃತಿ, ಇತಿಹಾಸದ ಕುರುಹುಗಳು, ಆಚಾರ ವಿಚಾರ, ಕಟ್ಟು ಕಟ್ಟಳೆಗಳು ಉಳಿಯಬೇಕಾದರೆ ಯುವ ಜನರು ಅದರಲ್ಲಿ ಆಸಕ್ತಿ ತೋರಬೇಕು. ಶಾಲಾ ಕಾಲೇಜುಗಳಲ್ಲಿ ತುಳು ಕಾರ್ಯಕ್ರಮಗಳಿಗೆ ಹೆಚ್ಚಿನ ಅವಕಾಶ ಸಿಕ್ಕಿದಾಗ ಅದು ಸಾಧ್ಯ. ತುಳುವನ್ನು ತಲೆಮಾರಿಗೆ ತಲುಪಿಸುವಲ್ಲಿ ಉತ್ಸಾಹೀ ಯುವಕ ಯುವತಿಯರು ಶ್ರಮಿಸಬೇಕಾಗಿದೆ’ ಎಂದು ತುಳು ಕನ್ನಡ ಸಾಹಿತಿ, ಕರ್ನಾಟಕ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ನಗರದ ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ‘ಸಿರಿ ಚಾವಡಿ’ ತುಳುಕೂಟವನ್ನು ತೆಂಗಿನ ಕೊಂಬು ಅರಳಿಸುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿ ಬಳಿಕ ಅವರು ಮಾತನಾಡಿದರು. ‘ತುಳು ಸಮೃದ್ಧವಾದ ಭಾಷೆ. ಅಗಾಧವಾದ ಜನಪದ ಸಾಹಿತ್ಯ, ಮೌಖಿಕ ಕಾವ್ಯ, ಸಂಧಿ ಪಾಡ್ದನ, ಗಾದೆ ಒಗಟುಗಳ ಕಣಜವಾಗಿರುವ ತುಳು ಭಾಷೆಯಲ್ಲಿ ಇತ್ತೀಚೆಗೆ ಸಾಕಷ್ಟು ಕೃತಿಗಳು ಹಾಗೂ ಸಂಶೋಧನಾತ್ಮಕ ಗ್ರಂಥಗಳು ಪ್ರಕಟವಾಗಿವೆ. ದೈವಾರಾಧನೆ, ನಾಗಾರಾಧನೆ ಮತ್ತು ಯಕ್ಷಾರಾಧನೆಗಳ ಮೂಲಕ ತೌಳವ ಸಂಸ್ಕೃತಿಯನ್ನು…
‘ತ್ರೇತಾ ಯುಗದ ರಾಮನ ನಡೆಯನ್ನು, ದ್ವಾಪರ ಯುಗದ ಕೃಷ್ಣನ ನುಡಿಯನ್ನು ಕಲಿಯುಗದ ಜನಮಾನಸಕ್ಕೆ ಪ್ರಸ್ತುತ ಪಡಿಸುವ ಶಕ್ತಿಯಿರುವುದು ಯಕ್ಷಗಾನಕ್ಕೆ ಮಾತ್ರ. ಈ ಕಾರಣದಿಂದ ಅದು ವಿಶ್ವದ ಏಕೈಕ ಸಮೃದ್ದ ಕಲೆ’ ಎಂದು ಹೈಕೋರ್ಟ್ ಹಿರಿಯ ವಕೀಲ ಎಂ.ಸುಧಾಕರ ಪೈ ಅಭಿಪ್ರಾಯ ಪಟ್ಟಿದ್ದಾರೆ. ಮಾ. 22ರಂದು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ 33ನೇ ವರ್ಷದ ಅಂತರ್ಕಾಲೇಜು ಯಕ್ಷಗಾನ ಸ್ಪರ್ಧೆ ಯಕ್ಷೋತ್ಸವ- 2025 ಉದ್ಘಾಟಿಸಿ, ಅವರು ಮಾತನಾಡಿದರು. ಕೇರಳದ ಕಥಕ್ಕಳಿ, ಆಂದ್ರಪ್ರದೇಶದ ಭಾಮಾ ವಿಲಾಸ ಮೊದಲಾದ ಸಮಕಾಲೀನ ಕಲೆಗಳಂತೆ ಕರಾವಳಿಯಲ್ಲಿ ಯಕ್ಷಗಾನ ಮೆರೆಯುತ್ತಾ ಬಂದಿದೆ. ಮೇಳಗಳು ದೇವಾಲಯಗಳ ಹೆಸರಿನಲ್ಲಿ ಹೊರಡುವ ಕಾರಣದಿಂದಾಗಿ ಯಕ್ಷಗಾನಕ್ಕೆ ದೈವಿಕ ನೆಲೆ ಇದೆ. ಶುದ್ಧ ಕನ್ನಡ ಭಾಷೆಯನ್ನು ಕಲಿಸುವ ಜತೆಗೆ ಸಂಸ್ಕೃತಿ, ಸಂಸ್ಕಾರ ಮೈಗೂಡಿಸಿಕೊಳ್ಳಲು ಅದು ಪೂರಕವಾಗಿದೆ ಎಂದವರು ಹೇಳಿದರು.ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ, ಸಾಹಿತಿ ಪ್ರೊ ಭಾಸ್ಕರ ರೈ ಕುಕ್ಕುವಳ್ಳಿ ಅವರು ಕಳೆದ ಒಂದು ವರ್ಷ ಅವಧಿಯಲ್ಲಿ ಅಗಲಿದ ಯಕ್ಷಗಾನ ಕಲಾವಿದರನ್ನು ಸ್ಮರಿಸಿದರು. 2024 ಎಪ್ರಿಲ್…
ಮೂಡುಬಿದಿರೆ: ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ (EDaaS) ಮೂಲಕ ಸಂಸ್ಥೆಯಲ್ಲಿನ ದತ್ತಾಂಶಗಳ ವ್ಯವಸ್ಥಿತ ನಿರ್ವಹಣೆಗಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮಾಹಿತಿ ತಂತ್ರಜ್ಞಾನದ ಮೂಲಸೌಕರ್ಯಗಳನ್ನು ಒದಗಿಸುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್ನ ಜೊತೆಗೆ (CompCloud IT Services) ಮುಂದಿನ ೫ ವರ್ಷಗಳಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ವ್ಯವಸ್ಥೆಯ ನೆರವಿನಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನ ಸಂಸ್ಥೆಗಳಲ್ಲಿ ವರ್ಚುವಲ್ ಡೆಸ್ಕ್ ಟಾಪ್ ಸೌಕರ್ಯವನ್ನು ಪ್ರತಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಒದಗಿಸಿದ್ದು, ಈ ಮೂಲಕ ಸಾಫ್ಟ್ವೇರ್ ಡಿಫೈನ್ಡ್ ನೆಟ್ವರ್ಕ್ಜ (SDN) ಜೊತೆಗೆ ಕೇಂದ್ರೀಕೃತ ಗಣಕ ನಿರ್ವಹಣಾ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಂಪ್ರದಾಯಿಕ ಡೆಸ್ಕಟಾಪ್ಗಳಿಗೆ ಹೋಲಿಸಿದರೆ, ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ ವ್ಯವಸ್ಥೆಯ ಮೂಲಕ ೮೦% ವಿದ್ಯುತ್ ಉಳಿತಾಯವಾಗಲಿದೆ. ಸ್ಕಾಟ್ಲೆಂಡ್ನಲ್ಲಿ ನೆಲೆಸಿರುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಪೈ, ಆ ದೇಶದಲ್ಲಿನ ಶಿಕ್ಷಣ ಕ್ಷೇತ್ರದಲ್ಲಿನ ಅತ್ಯಾಧುನಿಕ ಗುಣಮಟ್ಟದ ಮಾಹಿತಿ ತಂತ್ರಜ್ಞಾನದ ಸೇವೆಯನ್ನು ಈ ವ್ಯವಸ್ಥೆಯ ಮೂಲಕ ನೀಡಲಿದ್ದಾರೆ. ಒಡಂಬಡಿಕೆಯ ಕುರಿತು ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್…
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿAಗ್ ಕಾಲೇಜಿನ ರೀಡರ್ಸ್ ಕ್ಲಬ್ ವತಿಯಿಂದ “ಸಂಘರ್ಷ(ಕಾನ್ಫಿಕ್ಟ್) ಪತ್ರಕರ್ತನಾಗಿದ್ದಾಗ ಅಹಿತಕರ ಘಟನೆಗಳಿಂದ ಕಲಿತ ಪಾಠಗಳು” ವಿಷಯದ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಆಳ್ವಾಸ್ ಎಂಬಿಎ ಸೆಮಿನಾರ್ನಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಸಂಘರ್ಷ ವರದಿಗಾರ, ಲೇಖಕ ಮತ್ತು ಸಿನಿಮಾ ನಿರ್ಮಾಪಕ ಅವಲೋಕ್ ಲ್ಯಾಂಗರ್ ಪತ್ರಿಕೋದ್ಯಮ ವೃತ್ತಿಯಲ್ಲಿ ಊಹೆ ಸಲ್ಲದು. ರವಾನಿಸುವ ಪ್ರತಿ ಸುದ್ದಿಯನ್ನು ಸೂಕ್ಶ್ಮತೆಯಿಂದ ಅವಲೋಕಿಸಿ.ಜಾಲತಾಣದಲ್ಲಿ ಬರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಹೊಸ ಆವಿಷ್ಕಾರ, ಪ್ರಯೋಗಗಳ ಕಡೆಗೆ ಹೆಚ್ಚು ಗಮನ ನೀಡುವುದರೊಂದಿಗೆ ಸತ್ಯವನ್ನು ಶೋಧಿಸುವ ಮಾರ್ಗದಲ್ಲಿ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿ ದಿನಗಳಲ್ಲೇ ಬೆಳೆಸಿಕೊಳ್ಳಿ. ಲಭಿಸಿದ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ , ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನವನ್ನು ಹೆಚ್ಚಿಸಲು ರೀಡರ್ಸ್ ಕ್ಲಬ್ ಕೈಗೊಳ್ಳುತ್ತಿರುವ ಕರ್ಯಗಳು ಶ್ಲಾಘನೀಯ. ಇಂದಿನ ಯುವಜನತೆಯಲ್ಲಿ ಆಲೋಚನಾ ಶಕ್ತಿಯ ಕೊರತೆ ಇದೆ. ಎಲ್ಲ ಮಾಹಿತಿಗಳನ್ನು…
ವಿದ್ಯಾಗಿರಿ: ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ವಿಲೀನಗೊಂಡು ಸಂಶೋಧನಾ ಅಧ್ಯಯನ ನಡೆಸಲು ಪೂರಕ ವಾತವರಣ ನಿರ್ಮಾಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಣಿಪಾಲ ಕೆಎಂಸಿಯ ಔಷಧಶಾಸ್ತ್ರ ವಿಭಾಗದ ಸಂಶೋಧನಾ ಸಹಾಯಕಿ ಡಾ. ರಮ್ಯಾ ಕಟೀಲ್ ಹೇಳಿದರು. ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಜೈವಿಕ ವಿಜ್ಞಾನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇದರ ಸಹಯೋಗದೊಂದಿಗೆ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡ “ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು” ಕುರಿತು ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ವಿಚಾರ ಸಂಕಿರಣವು ಸಂಶೋಧನಾರ್ಥಿಗಳಿಗೆ ಸೃಜನಾತ್ಮಕ ಜ್ಞಾನ, ವಿಚಾರ ವಿನಿಮಯ ಮತ್ತು ಅಧ್ಯಯನದಲ್ಲಿ ಪಾಲ್ಗೊಳ್ಳಲು ಸಹಕಾರಿ ಎಂದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇಲ್ಲಿನ ಪರಿಸರ ಅಧಿಕಾರಿ ಡಾ. ಎಚ್. ಲಕ್ಷ್ಮಿಕಾಂತ, ಸಂಶೋಧನಾ ಪ್ರಬಂಧಗಳನ್ನು ತಯಾರಿಸುವ ಸಂದರ್ಭಗಳಲ್ಲಿ ಹಲವಾರು ಬಾರಿ ನಿರಾಕರಣೆಯಾಗುವ ಸಂಭವ ಎದುರಾಗಬಹುದು. ಪರಿಶ್ರಮ ಮತ್ತು ಸ್ಥಿರತೆಯಿಂದ ಅಧ್ಯಯನವನ್ನು ಪೂರ್ಣಗೊಳಿಸಿ. ಪ್ರತಿ ಅಧ್ಯಯನದಲ್ಲಿಯೂ ಕುತೂಹಲ ಮತ್ತು ಪ್ರಶ್ನಿಸುವ…















