Author: admin
ಕುಂಬ್ಳೆ ಸುಂದರ ರಾವ್ ಅವರು ಯಕ್ಷಗಾನ, ಧಾರ್ಮಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಸರ್ವ ಕ್ಷೇತ್ರದ ಸಾಧಕರಾಗಿದ್ದರು ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ್ ರಾವ್ ಸಂಸ್ಮರಣ ವೇದಿಕೆ ಜಂಟಿಯಾಗಿ ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ ಆಯೋಜಿಸಿದ ಕುಂಬ್ಳೆ ಸುಂದರ ರಾವ್ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಂಬ್ಳೆ ಅವರು ಸಾಹಿತಿ, ವಿದ್ವಾಂಸ, ಕಲಾವಿದರು ಅವರ ಮಾತುಗಾರಿಕೆಯಲ್ಲಿ ಸಾಹಿತ್ಯಕ ಅಂಶ ಅಡಗಿತ್ತು. ತಾಳಮದ್ದಳೆಯಲ್ಲಿ ಅವರ ಮಾತುಗಾರಿಕೆ ಅಸಾಧಾರಣ ಹವ್ಯಾಸಿ, ವೃತ್ತಿ ಕಲಾವಿದರೊಂದಿಗೆ ಒಡನಾಟ ಹೊಂದಿದ್ದ ಅವರು ಸಾಮಾಜಿಕ ಜೀವನದಲ್ಲಿ ಸರಳ ವ್ಯಕ್ತಿತ್ವ, ಅವರ ಪಾತ್ರದಲ್ಲಿ ಸಮಾಜಕ್ಕೆ ಸಂದೇಶ ನೀಡುವ ಅಂಶ ಅಡಗಿತ್ತು. ಯುವಕರಿಗೆ ಪ್ರೇರಣದಾಯಕ ವ್ಯಕ್ತಿತ್ವ ಹೊಂದಿದ್ದ ಅವರು ಯಕ್ಷಗಾನದ ಎಲ್ಲಾ ಪ್ರಕಾರಗಳಲ್ಲಿ ತೊಡಗಿಸಿ ಕುಂಬ್ಳೆತನವನ್ನು ಎತ್ತಿ ತೋರಿಸಿದ್ದಾರೆ ಎಂದರು. ಕುಂಬ್ಳೆ ಸುಂದರ್…
ಮೂಡುಬಿದಿರೆ: ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಮತ್ತು ಶಿಕ್ಷಕರ ಕೊಡುಗೆ ಅಪಾರ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪೋಷಕರ ಮತ್ತು ಶಿಕ್ಷಕರ ತ್ಯಾಗವನ್ನು ಮರೆಯಬಾರದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಅವರು ಮಂಗಳವಾರ ವಿದ್ಯಾಗಿರಿಯ ವಿ.ಎಸ್ ಆಚರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪ.ಪೂ ಕಾಲೇಜಿನ ಸಾಂಸ್ಕೃತಿಕ ಸಂಘದ ಪ್ರತಿಭಾ ಪುರಸ್ಕಾರ ಕರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿ ಕೆಲಸವನ್ನು ಶ್ರದ್ಧೆಯಿಂದ, ಮನಸ್ಸಿಟ್ಟು ನಿರ್ವಹಿಸಿ. ಆಗ ಅಭ್ಯುದಯ ಸಹಜವಾಗಿ ನಮ್ಮಲ್ಲಿ ಮೂಡುತ್ತದೆ. ಕೆಲವು ಸಂಧರ್ಭದಲ್ಲಿ ನಮ್ಮ ನಡುವೆ ಇರುವ ವ್ಯವಸ್ಥೆ ನಮಗೆ ಕಟ್ಟುನಿಟ್ಟಾಗಿ ಇದ್ದಾಗ ಕಷ್ಟವೆನಿಸಿದರೂ, ಅವುಗಳು ನಮ್ಮ ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ತರ ಪಾತ್ರವಹಿಸುತ್ತವೆ. ಆಳ್ವಾಸ್ನ ವಿದ್ಯಾರ್ಥಿಗಳು ಅದೃಷ್ಟಶಾಲಿಗಳು. ಡಾ ಎಂ ಮೋಹನ್ ಆಳ್ವರವರಂತವರ ಮಾರ್ಗದರ್ಶನ, ನಿಮ್ಮನ್ನು ಶ್ರೇಷ್ಠ ವಿದ್ಯಾರ್ಥಿಗಳನ್ನಾಗಿಸುತ್ತದೆ. ಎಳವೆಯಲ್ಲಿಯೆ ಇಂಗ್ಲೆಂಡ್ನ ಆಕ್ಸಫರ್ಢ್ ವಿವಿಯಿಂದ ಅತ್ಯುತ್ತಮ ವಿದ್ಯಾರ್ಥಿ ಎಂಬ ಪ್ರಶಸ್ತಿಯನ್ನು ಪಡೆದವರು ಡಾ ಆಳ್ವರು. ಆಳ್ವಾಸ್ನಲ್ಲಿ 5 ಗಂಟೆಯ ನಂತರ ಆರಂಭವಾಗುವ ಕಲಿಕೆ ಹೆಚ್ಚು ಪರಿಣಾಮಕಾರಿಯಾಗಿದೆ. ಈ ಯೋಚನೆ ಮತ್ತು ಯೋಜನೆಯ…
ಕೊಲ್ಲಿ ರಾಷ್ಟ್ರದ ಯು.ಎ.ಇ. ಬಂಟ್ಸ್ ಅಧ್ಯಕ್ಷರಾಗಿ ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಅಧಿಕಾರ ಸ್ವೀಕಾರ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಕರ್ನಾಟಕ ಪರ ಸಂಘಟನೆಗಳು ಕಾರ್ಯೊನ್ಮುಕವಾಗಿದೆ. ಇವುಗಳಲ್ಲಿ ಅತ್ಯಂತ ಹಿರಿಯ ಸಂಘಟನೆಗಳಲ್ಲಿ 47 ವರ್ಷಗಳಿಂದ ಯಶಸ್ವಿ ಹೆಜ್ಜೆಗುರುತುಗಳನ್ನು ಮೂಡಿಸಿರುವ ಯು.ಎ.ಇ. ಬಂಟ್ಸ್ ಎಕ್ಸಿಕ್ಯೂಟ್ ಬೋರ್ಡ್ ನ ವಾರ್ಷಿಕ ಮಹಾಸಭೆ ದುಬಾಯಿ ಕರಾಮದಲ್ಲಿರುವ ಫಾರ್ಚೂನ್ ಆಟ್ರಿಯಂ ಹೋಟೆಲ್ ಸಭಾಂಗಣದಲ್ಲಿ 2024 ಡಿಸೆಂಬರ್ 14ನೇ ತಾರೀಕಿನಂದು ಮಧ್ಯಾಹ್ನ 3.00 ಗಂಟೆಯಿಂದ ನಡೆಯಿತು. ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ. ಯು.ಎ.ಇ. ಬಂಟ್ಸ್ ಉಪಾಧ್ಯಕ್ಷರಾಗಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷರಾಗಿರುವ ಶ್ರೀ ಸರ್ವೋತ್ತಮ ಶೆಟ್ಟಿಯವರಿಂದ ಅಧಿಕಾರ ಹಸ್ತಾಂತರ ಸ್ವೀಕರಿಸಿದ ನಂತರ ನೂತನ ಆಡಳಿತ ಮಂಡಳಿಯ ಸರ್ವ ಸದಸ್ಯರಿಂದ ಪ್ರಮಾಣ ವಚನ ಸ್ವೀಕರಿಸಿದರು. 2025-26 ನೆ ಸಾಲಿನ ಯು.ಎ.ಇ. ಬಂಟ್ಸ್ ನ ಕಾರ್ಯಕಾರಿ ಸಮಿತಿಯವರು ಸಹ ಉಪಸ್ಥಿತರಿದ್ದರು. ನೂತನ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀ…
ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ| ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷರಾಗಿ ಡಾ| ಗಣನಾಥ ಶೆಟ್ಟಿ ಎಕ್ಕಾರ್ ಅವರನ್ನು ಸರ್ಕಾರ ನೇಮಕಗೊಳಿಸಿದೆ. ಸದಸ್ಯರಾಗಿ ಉಲ್ಲಾಸ್ ಕಾರಂತ, ಆತ್ರಾಡಿ ಅಮೃತ ಶೆಟ್ಟಿ, ಡಾ| ಭಾರತಿ ಮರವಂತೆ, ಡಾ ಪ್ರಸಾದ್ ರಾವ್, ಸತೀಶ್ ಕೊಡವೂರು, ಮಂಚಿ ರಮೇಶ್, ಸಂತೋಷ್ ನಾಯಕ್ ಪಟ್ಲ, ಚೇತನ ತೆರಾಡಿ, ಜಿ ಎಂ ಶರೀಫ್ ಹೂಡೆ, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿದೆ.
ಮೂಡುಬಿದಿರೆ: ಕರ್ನಾಟಕ ಬಾಲ್ ಬ್ಯಾಡ್ಮಿಂಟನ್ ಅಸೋಸಿಯನ್ ಹಾಗೂ ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇವುಗಳ ಜಂಟಿ ಆಶ್ರಯದಲ್ಲಿ ಮಧುಗಿರಿ ಸ್ಪೋಟ್ಸ್ ಕ್ಲಬ್ ಮಧುಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಜ್ಯೂನಿಯರ ಬಾಲಕ ಹಾಗೂ ಬಾಲಕಿಯರ ಎರಡು ವಿಭಾಗದ ಪ್ರಥಮ ಪ್ರಶಸ್ತಿ ಹಾಗೂ ಬಾಲಕಿಯರ ದ್ವಿತೀಯ ಪ್ರಶಸ್ತಿಯನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಬಾಲಕರ ವಿಭಾಗದ ಪೈನಲ್ಸ್ನಲ್ಲಿ ಆಳ್ವಾಸ್ ಬಾಲಕರ ತಂಡ ಬೆಂಗಳೂರಿನ ರಾಜೇಶ್ವರಿ ಯುತ್ ಕ್ಲಬ್ (ಆರ್ವೈಸಿ) ತಂಡವನ್ನು 35-31 ಹಾಗೂ 35-27 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗಳಿಸಿತು. ಆಳ್ವಾಸ್ ಬಾಲಕಿಯರ ತಂಡ ಫೈನಲ್ಸ್ ಹಣಾಹಣಿಯಲ್ಲಿ ಆಳ್ವಾಸ್ನ ಎ ತಂಡವನ್ನು, ಆಳ್ವಾಸ್ನ ಬಿ ತಂಡವು 35-29 ಹಾಗೂ 35-33 ನೇರ ಸೆಟ್ಗಳಿಂದ ಸೋಲಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದುಕೊಂಡವು. ಬಾಲಕರ ವಿಭಾಗದಲ್ಲಿ ರಾಜ್ಯದ ಸುಮಾರು 24 ತಂಡಗಳು ಹಾಗೂ ಬಾಲಕಿಯರ ವಿಭಾದಲ್ಲಿ 16 ತಂಡಗಳು ಭಾಗವಹಿಸಿದ್ದವು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ…
ವಿದ್ಯಾಗಿರಿ: ದೇಶ ಬಿಟ್ಟು ಗಾಂಧಿಯಿಲ್ಲ, ಗಾಂಧಿ ಬಿಟ್ಟು ಭಾರತವಿಲ್ಲ ಎಂಬುದನ್ನು ಎಲ್ಲರು ಅರಿತುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ ಕೃಷ್ಣ ಹೇಳಿದರು . ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಕನ್ನಡ ವಿಭಾಗ ಮತ್ತು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಂಯುಕ್ತಾಶ್ರಯದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ನಡೆದ ‘ ಮಹಾತ್ಮರನ್ನು ಅರ್ಥ ಮಾಡಿಕೊಳ್ಳಲು ಕೆಲವು ಪ್ರಶ್ನೆಗಳು ‘ ಎರಡು ದಿನಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಂತಿಯುತವಾಗಿ ಸ್ವಾತಂತ್ರ್ಯವನ್ನು ತಂದುಕೊಟ್ಟು, ನೈತಿಕತೆಯ ಉತ್ತುಂಗದಲ್ಲಿ ಬದುಕಿ ಬಾಳಿದ ಕೀರ್ತಿ ಗಾಂಧಿಯವರಿಗೆ ಸಲ್ಲುತ್ತದೆ ಎಂದರು. ಗಾಂಧೀಜಿ ಅವರ ಬಗ್ಗೆ ಅಧಿಕೃತ ಸಾಹಿತ್ಯ ಓದಿ ಅರ್ಥೈಸಿಕೊಳ್ಳಿ. ನಂತರ ಪ್ರಶ್ನಿಸಿ. ಆದರೆ ಗೊತ್ತಿಲ್ಲದೇ ಟೀಕಿಸಬೇಡಿ ಎಂದರು. ಅಹಿಂಸಾತ್ಮಕ ಮತ್ತು ಸಾಮುದಾಯಿಕ ಸಮಾಜದ ಪರಿಕಲ್ಪನೆಯ ಆಲೋಚನೆಯನ್ನು ಮೈಗೂಡಿಸಿ ಬದುಕಿದರೆ ಗಾಂಧಿಗೆ ಸಲ್ಲಿಸುವ ಗೌರವವಾಗುತ್ತದೆ ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ…
ಬಂಟರ ಸಂಘ ಬೆಂಗಳೂರು ಯುವ ವಿಭಾಗವು ಈ ಬಾರಿ ಹೊಸ ವರ್ಷಾಚರಣೆಯನ್ನು ಬಂಟರ ಸಂಘದ ಆವರಣದಲ್ಲಿ ಡಿಸೆಂಬರ್ 31ರಂದು ಆಚರಿಸಲು ಉದ್ದೇಶಿಸಿದೆ. ಯುವ ವಿಭಾಗವು ಈಗಾಗಲೇ ಸಂಪೂರ್ಣ ಸಿದ್ಧತೆಯಲ್ಲಿ ತೊಡಗಿದ್ದು, 22ನೇ ನವಂಬರ್ 20204 ರಂದು ಹೊಸ ವರ್ಷ ಆಚರಣೆಯ ಪೋಸ್ಟರ್ ಅನಾವರಣ ಕಾರ್ಯಕ್ರಮವನ್ನು ಸಂಘದ ಆಶಾ ಪ್ರಕಾಶ್ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾನ್ವಿತ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿಯವರು ವಹಿಸಿದ್ದು, ಸಂಜೆ 7 ಕ್ಕೆ ಸರಿಯಾಗಿ ಸಂಘದ ಶ್ರೀ ವರಸಿದ್ಧಿ ವಿನಾಯಕ ಪ್ರಾರ್ಥನಾ ಮಂದಿರದಲ್ಲಿ ಪೂಜೆ ಸಲ್ಲಿಸಿ ನಂತರ ಗಣ್ಯರೊಡಗೂಡಿ ಪೋಸ್ಟರನ್ನು ಅನಾವರಣಗೊಳಿಸಲಾಯಿತು. ಗೌರವ ಕಾರ್ಯದರ್ಶಿಗಳಾದ ವಿಜಯ್ ಜೆ ಶೆಟ್ಟಿ ಹಾಲಾಡಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯಶ್ರೀ ಸಿ ರೈ, ಯುವ ವಿಭಾಗದ ಚೇರ್ ಪರ್ಸನ್ ಅಜಿತ್ ವಿ ಶೆಟ್ಟಿ, ಸಂಚಾಲಕರಾದ ಪ್ರಸಾದ್ ಶೆಟ್ಟಿ ಅರೆಹೊಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂಧರ್ಭ ಸಂಘದ ಪದಾಧಿಕಾರಿಗಳು, ಯುವ ವಿಭಾಗದ…
ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕಥಾವಚನ, ಪ್ರವಚನ ಕಾರ್ಯಕ್ರಮವು ಡಿಸೆಂಬರ್ 15 ರಂದು ಪುತ್ತೂರು ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ವಿಶೇಷ ಮಂಟಪ ಹಾಗೂ ಅಲಂಕಾರದೊಂದಿಗೆ ದೇವರ ಪೂಜೆಯನ್ನು ನೆರವೇರಿಸಲಾಯಿತು. ವೇದಮೂರ್ತಿ ನಾಗರಾಜ್ ಭಟ್ ರವರಿಂದ ವೈದಿಕ ಕಾರ್ಯಕ್ರಮಗಳು ಜರಗಿತು. ಕಿರಣ್ ಕುಮಾರ್ ಪಡುಪಣಂಬೂರು, ಗೀತಾ ಹಾಗೂ ಡಾ. ಸತ್ಯನಾರಾಯಣ ಪುಣಿಚಿತ್ತಾಯರವರು ಶ್ರೀ ಸತ್ಯನಾರಾಯಣ ಪೂಜೆಯ ಕಥಾವಚನ ಮತ್ತು ಪ್ರವಚನವನ್ನು ನಡೆಸಿಕೊಟ್ಟರು. ಅಬುದಾಬಿಯ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ನ ಅಧ್ಯಕ್ಷ ಮಿತ್ರಂಪಾಡಿ ಜಯರಾಮ್ ರೈರವರು ಅನ್ನ ಸಂತರ್ಪಣೆಯ ಸೇವಾಕರ್ತರಾಗಿ ಸಹಕರಿಸಿದರು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ದಯಾನಂದ ರೈ ಮನವಳಿಕೆ, ಲಕ್ಷ್ಮೀನಾರಾಯಣ ರೈ ಅರಿಯಡ್ಕ, ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಗುತ್ತು, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ,…
ಬೆಂಗಳೂರು: ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಕ್ರಿಯೇಟಿವ್ಪುಸ್ತಕ ಮನೆ ವತಿಯಿಂದ 6 ಪುಸ್ತಕಗಳ ಅನಾವರಣ ಹಾಗೂ 'ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024 ಪ್ರದಾನ ಸಮಾರಂಭದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ನ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿಗಳಾದ ಜೋಗಿ, ಬಿ. ಆರ್. ಲಕ್ಷ್ಮಣ್ ರಾವ್, ಡಾ.ನಾ.ಸೋಮೇಶ್ವರ ಅವರು 6 ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಕ್ರಿಯೇಟಿವ್ ಕಾಲೇಜು ಹಾಗೂ ಪುಸ್ತಕ ಮನೆ ಸಂಸ್ಥಾಪಕರಲ್ಲಿ ಒಬ್ಬರಾದ ಅಶ್ವಥ್ ಎಸ್ ಎಲ್ ಪ್ರಾಸ್ತವಿಕ ಮಾತನಾಡಿ, ಕರಾವಳಿಯಿಂದ ರಾಜಧಾನಿಗೆ ನಮ್ಮ ಪುಸ್ತಕ ಪಯಣಕ್ಕೆ ಇದು ಸಂಭ್ರಮದ ಕ್ಷಣ. ಪುಸ್ತಕ ಮನೆಯನ್ನು ರಾಜ್ಯ ಮಟ್ಟಕ್ಕೆ ತರುವ ಜತೆಗೆ ಪುಸ್ತಕ ಓದುವ ಬೆಳೆಸುವ, ಯುವ ಜನತೆಗೆ ಪುಸ್ತಕವನ್ನು ಓದುವ ಬೆಳೆಸುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ,…
ಮೂಡುಬಿದಿರೆ: ಜಪಾನ್ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು. ಶಿಕ್ಷಣ, ಸಂಶೋಧನೆ, ಬೋಧಕ, ಆಡಳಿತ ವರ್ಗ, ಸಂಶೋಧನಾ ಪ್ರಕಟಣೆಗಳು ಸೇರಿದಂತೆ ವಿವಿಧ ವಲಯದಲ್ಲಿ ಪರಸ್ಪರ ಸ್ವಾತಂತ್ರ್ಯವನ್ನು ಕಾಯ್ದುಕೊಂಡು ವಿನಿಮಯ, ಬೌದ್ಧಿಕ ಆಸ್ತಿಗಳ ರಕ್ಷಣೆ ಸೇರಿದಂತೆ ಶೈಕ್ಷಣಿಕ ಅಭ್ಯುದಯದ ದೃಷ್ಟಿಯ ಐದು ವರ್ಷಗಳ ಒಪ್ಪಂದಕ್ಕೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಹಾಗೂ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಡಾ.ನಗಾಟೊ ಒನೊ ಸಹಿ ಮಾಡಿದರು. ಶೈಕ್ಷಣಿಕ ವಿನಿಮಯಕ್ಕೆ ಸಂಬಂಧಿಸಿದ ಬೋಧನೆ, ವಸತಿ ಸೌಕರ್ಯ, ಆರ್ಥಿಕ ಜವಾಬ್ದಾರಿ, ಬೌದ್ಧಿಕ ಆಸ್ತಿ ರಕ್ಷಣೆ, ಅವಧಿ, ತಿದ್ದುಪಡಿ ಸೇರಿದಂತೆ ಪ್ರಮುಖ ವಿಚಾರಗಳನ್ನು ಒಡಂಬಡಿಕೆ ಒಳಗೊಂಡಿದೆ. ಜಪಾನ್ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ನ ಪರಿಣಾಮಕಾರಿ ಎಂಜಿನಿಯರಿಂಗ್ ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ…