Author: admin

ಪುತ್ತೂರು ತಾಲೂಕು ಯುವ ಬಂಟರ ಸಂಘದ ಸಾರಥ್ಯದಲ್ಲಿ ಸಹಕಾರಿ ಧುರೀಣ ದಿ. ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಫೆಬ್ರವರಿ 22 ಮತ್ತು 23ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಪುತ್ತೂರ್ದ ಬಂಟ ಜವನೆರೆ ಗೊಬ್ಬು ಬಂಟ್ಸ್ ಪ್ರೀಮಿಯರ್ ಲೀಗ್ – 2025, ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರ ಬಿಡುಗಡೆ ಫೆಬ್ರವರಿ 15ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವುರವರು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ದಯಾನಂದ ರೈ ಕೊರ್ಮಂಡ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ…

Read More

ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಚ್ಚಿದಾನಂದ ಶೆಟ್ಟಿ ಹಾಗೂ ಉಪಾದ್ಯಕ್ಷರಾಗಿ ವಾಣಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 15ರಂದು ಸಂಘದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ನಿರ್ದೇಶಕರಾದ ನರೇಂದ್ರ ಶೆಟ್ಟಿ, ಸುಜಾತ ಶೆಟ್ಟಿ, ರವೀಂದ್ರನಾಥ, ಶರತ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಜಗದೀಶ, ಕರುಣಾಕರ ಶೆಟ್ಟಿ, ರತ್ನಾಕರ ಶೆಟ್ಟಿ, ಸುಂದರ ರಾಣೆರ, ಸುರೇಶ್ ಕೋಟೆಕಾರ್ ಹಾಗೂ ಸಂಘದ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಆರ್.ಬಿ.ಐ ಮಾಜಿ ನಿರ್ದೇಶಕರಾಗಿರುವ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರು ಬೆಂಗಳೂರಿನ ಅನ್ವೇಷಣೆ ಅಕಾಡೆಮಿಯವರು ನೀಡುವ ಸಮಾಜಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಅಭೂತಪೂರ್ವವಾದ ಸೇವೆಯನ್ನು ಮಾಡುತ್ತಿರುವ ನವೀನ್ ಭಂಡಾರಿಯವರ ಸಮಾಜ ಸೇವಾ ಕ್ಷೇತ್ರದ ಅವಿರತ ಸಾಧನೆಗಾಗಿ ಸಮಾಜಶ್ರೀ ರಾಜ್ಯ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Read More

ಸಂಘ ಸಂಸ್ಥೆಗಳಲ್ಲಿ ಮಹಿಳೆಯರು ಕ್ರಿಯಾಶೀಲರಾದಾಗ ಆ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತದೆ. ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಮಹಿಳಾ ವಿಭಾಗವು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸದಾ ಕ್ರಿಯಾಶೀಲವಾಗಿದೆ. ಹಳದಿ ಕುಂಕುಮದಂತಹ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕಾರ್ಯಕ್ರಮಗಳು ಸಂಘ ಸಂಸ್ಥೆಗಳಲ್ಲಿ ನಿರಂತರ ನಡೆಯುತ್ತಿರಬೇಕು. ಆಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ಆಡಳಿತ ನಿರ್ದೇಶಕ ಮಹೇಶ್ ಎಸ್. ಶೆಟ್ಟಿ ತಿಳಿಸಿದರು. ಘಾಟ್ಕೋಪರ್ ಪೂರ್ವದ ಕನ್ನಡ ವೆಲ್ಫೇರ್ ಸೊಸೈಟಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಫೆಬ್ರವರಿ 13 ರಂದು ಜರಗಿದ ಅರಶಿನ ಕುಂಕುಮ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕನ್ನಡ ವೆಲ್ಫೇರ್ ಅಸೋಸಿಯೇಷನ್ ಘಾಟ್ಕೋಪರ್ ಸಂಸ್ಥೆಯ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆಯವರು ನಾಡು ನುಡಿ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ವರ್ಷಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದರು.ಅತಿಥಿಯಾಗಿದ್ದ ಖ್ಯಾತ…

Read More

ಒಂದು ಕಾಲದಲ್ಲಿ, ಒಂದು ಸಣ್ಣ ಹಳ್ಳಿಯಲ್ಲಿ ಒಬ್ಬ ಸರಳ ಮನುಷ್ಯ ವಾಸಿಸುತ್ತಿದ್ದ. ಅವನು ಪ್ರತಿದಿನ ಬೆಳಗ್ಗೆ ಎದ್ದು, ತನ್ನ ತೋಟದಿಂದ ತಾಜಾ ತರಕಾರಿಗಳನ್ನು ಕೊಯ್ದು, ಅದನ್ನು ಕೈಯಲ್ಲಿ ಹಿಡಿದು, ಮನೆಯಲ್ಲಿ ಸರಳವಾದ ಊಟ ಮಾಡುತ್ತಿದ್ದ. ಅವನು ಊಟ ಮಾಡುವಾಗ, ಪ್ರತಿ ಬೆರಳು ಆಹಾರವನ್ನು ಸ್ಪರ್ಶಿಸುವಾಗ, ಅವನಿಗೆ ಅನುಭವವಾಗುತ್ತಿತ್ತು. ಆಹಾರವು ಅವನ ದೇಹಕ್ಕೆ ಪೋಷಣೆ ನೀಡುತ್ತಿದೆ ಎಂಬುದಕ್ಕಿಂತ ಹೆಚ್ಚಾಗಿ, ಅದು ಅವನ ಆತ್ಮಕ್ಕೆ ಶಾಂತಿ ನೀಡುತ್ತಿದೆ. ಒಮ್ಮೆ, ಅವನ ಹಳ್ಳಿಗೆ ಒಬ್ಬ ವಿದೇಶಿಯೊಬ್ಬ ಬಂದ. ಅವನು ಚಮಚ ಮತ್ತು ಫೋರ್ಕ್ ಬಳಸಿ ಊಟ ಮಾಡುತ್ತಿದ್ದ. ಗ್ರಾಮಸ್ಥರು ಅವನನ್ನು ವಿಚಿತ್ರವಾಗಿ ನೋಡುತ್ತಿದ್ದರು. ಆ ವಿದೇಶಿಯು ಚಮಚ ಮತ್ತು ಫೋರ್ಕ್ ಬಳಸುವುದು ಏಕೆ ಎಂದು ಕೇಳಿದಾಗ, ಗ್ರಾಮಸ್ಥನು, “ಕೈಗಳಿಂದ ತಿನ್ನುವುದು ನಮ್ಮ ಸಂಸ್ಕೃತಿ. ಕೈಗಳು ಆಹಾರವನ್ನು ಪವಿತ್ರಗೊಳಿಸುತ್ತವೆ ಮತ್ತು ನಮ್ಮ ಆತ್ಮಕ್ಕೆ ನೇರವಾಗಿ ಸಂಪರ್ಕ ಕಲ್ಪಿಸುತ್ತವೆ” ಎಂದು ಹೇಳಿದ. ವಿದೇಶಿಯು ಇದನ್ನು ಕೇಳಿ ಆಶ್ಚರ್ಯಚಕಿತನಾದ. ಅವನು ಕುತೂಹಲದಿಂದ ಗ್ರಾಮಸ್ಥನೊಂದಿಗೆ ಊಟ ಮಾಡಲು ಕುಳಿತ. ಅವನು ಕೈಗಳಿಂದ…

Read More

ಗಣಿತನಗರ : ತುಳುನಾಡಿನ ಅವಳಿವೀರರಾದ ಕೋಟಿ ಚೆನ್ನಯ್ಯರು ಅಧರ್ಮದ ವಿರುದ್ಧ, ನ್ಯಾಯದ ಪರವಾಗಿ ಹೋರಾಡಿದ ವೀರಪುರುಷರು. ಹಿರಿಯರಿಗೆ ಗೌರವವನ್ನು, ಶಿಷ್ಟರ ರಕ್ಷಣೆಯನ್ನು ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡ ಕೋಟಿ-ಚೆನ್ನಯ್ಯರ ಮೌಲ್ಯಯುತ ಜೀವನ ಇಂದಿಗೂ ಎಂದೆಂದಿಗೂ ಮೌಲ್ಯಯುತ ಎಂದು ಜ್ಞಾನಭಾರತ್-ಬಾಲಸಂಸ್ಕಾರದ ಕಾರ್ಯದರ್ಶಿ ಶ್ರೀಮತಿ ಸಂಗೀತಾ ಕುಲಾಲ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಈ ಸಂದರ್ಭ ವೃಂದದ ಸದಸ್ಯರಾದ ಶ್ರೀಮತಿ ಉಷಾ ರಾವ್ ಯು, ಶ್ರೀಮತಿ ಗಾಯತ್ರಿ ನಾಗೇಶ್, ಶ್ರೀಮತಿ ಚೇತನಾ ಸಂದೀಪ್, ಶ್ರೀಮತಿ ಅಕ್ಷತಾ ಹಾಗೂ ಶ್ರೀಮತಿ ಲಕ್ಷ್ಮೀ ಉಪಸ್ಥಿತರಿದ್ದರು. ಬಾಲಸಂಸ್ಕಾರದ ಬಾಲಕ ಬ್ರಿಜೇಶ್ ಕಾರ್ಯಕ್ರಮ ನಿರೂಪಿಸಿ, ಆಯುಶ್ ಯು ಶೆಟ್ಟಿ ವಂದಿಸಿದರು. ಆರಾಧ್ಯ ಶ್ರೀ ರಾಮರಕ್ಷಾಸ್ತೋತ್ರವನ್ನು ಹಾಗೂ ಪ್ರೇರಣಾ ಬೋರ್ಕರ್ ಭಗವದ್ಗೀತೆಯ ಮೊದಲ ಹತ್ತು ಶ್ಲೋಕವನ್ನು ವಾಚಿಸಿದರು. ಬಾಲ-ಸಂಸ್ಕಾರಕ್ಕೆ ಸೇರಲಿಚ್ಚಿಸುವ ಕಾರ್ಕಳ ತಾಲೂಕಿನ ಮಕ್ಕಳ ಪೋಷಕರು ಸಂಸ್ಥೆಯನ್ನು ಸಂಪರ್ಕಿಸಿ ಮಕ್ಕಳ ಹೆಸರನ್ನು…

Read More

ವಿದ್ಯಾಗಿರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿ ಪಡೆದಿರುವ ಸ್ನಾತಕ ಮತ್ತು ಸ್ನಾತಕೋತ್ತರ ವಿಜ್ಞಾನ ವಿಷಯಗಳ ವಿದ್ಯಾರ್ಥಿಗಳಿಗೆ ಆಳ್ವಾಸ್ ಪದವಿ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರವರ್ತಿತ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ದಲ್ಲಿ ಈ ಶೈಕ್ಷಣಿಕ ಸಾಲಿನಿಂದ ಪ್ರವೇಶಾತಿ ಪಡೆಯುವ ಅಭ್ಯರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ರಾಜ್ಯದಲ್ಲಿ ಕಲಬುರಗಿ, ದಾವಣಗೆರೆ, ಬೆಂಗಳೂರು ಹಾಗೂ ಮೈಸೂರು ಜಿಲ್ಲೆಯನ್ನು ಹೊರತು ಪಡಿಸಿದರೆ, ಕರಾವಳಿ ಕರ್ನಾಟಕದಲ್ಲಿ ಆಳ್ವಾಸ್ ಕಾಲೇಜು ಮಾತ್ರ ವಿಜ್ಞಾನ ವಿಷಯದ ಪ್ರಾಯೋಗಿಕ ತರಗತಿ ನಡೆಸಲು ಅವಕಾಶ ಪಡೆದಿರುವ ಕೇಂದ್ರವಾಗಿದೆ.

Read More

ಮಿಜಾರು: ‘ಸೂಕ್ತ ಚಿಕಿತ್ಸೆ ಮತ್ತು ಕುಟುಂಬಸ್ಥರ ಸಹಕಾರದಿಂದ ಯಾವುದೇ ವ್ಯಕ್ತಿ ವ್ಯಸನ ಮುಕ್ತರಾಗಲು ಸಾಧ್ಯ’ ಎಂದು ತಜ್ಞ ಮನೋವೈದ್ಯೆ ಡಾ.ಕ್ಯಾರೋಲಿನ್ ಡಿ’ಸೋಜಾ ಹೇಳಿದರು. ಶೋಭಾವನದ ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಸಭಾಂಗಣದಲ್ಲಿ ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದ ಐದನೇ ವರ್ಷದ ವಾರ್ಷಿಕೋತ್ಸವ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ, ಮನೋಸಮೃದ್ಧಿ-ಆಳ್ವಾಸ್ ಸೈಕಾಲಜಿ ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವ್ಯಸನವು ಕೇವಲ ಒಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬಿರುವುದಿಲ್ಲ. ಬದಲಾಗಿಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ ಎಂದರು. ಅಪರೂಪಕ್ಕೆ ಮದ್ಯಪಾನ ಮಾಡುವುದು ಆರೋಗ್ಯಕ್ಕೆ ಹಾನಿಕರ ಅಲ್ಲ ಎಂಬುದು ಕೆಲವರ ವಾದ. ಆದರೆ ವ್ಯಸನವು ತನ್ನಿಂದತಾನೆ ಬೆಳೆದುಕೊಳ್ಳುತ್ತದೆ.ಒಮ್ಮೆ ಮದ್ಯಪಾನಕ್ಕೆ ಆಕರ್ಷತಾರಾದರೆ ನಮ್ಮ ಸ್ನೇಹಿತರು, ಸುತ್ತಮುತ್ತಲಿನವರ ಸಂಘದಿAದ ವ್ಯಸನಕ್ಕೆ ಒಳಗಾಗಬಹುದು ಎಂದು ಅವರು ಹೇಳಿದರು. ಸಮಾಜವು ವ್ಯಕ್ತಿಯನ್ನು ಗುಣಕ್ಕಿಂತ ಹೆಚ್ಚಾಗಿ ಚಟದ ಮೂಲಕ ಗುರುತಿಸುತ್ತದೆ. ಹೀಗಾಗಿ ವ್ಯಕ್ತಿ ವ್ಯಸನ ಮುಕ್ತಾರಾದರೂ ಸಾಧಾರಣ ಬದುಕಿಗೆ ಬರಲು ಹೆಚ್ಚಿನ ಸವಾಲುಗಳನ್ನು ಎದುರಿಸುತ್ತಾರೆ ಎಂದರು. ಜನಜಾಗೃತಿ…

Read More

ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯಾದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ 2024-25ನೇ ಸಾಲಿನ ಬಜೆಟ್ ನಲ್ಲಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಥಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಇವರು ಘೋಷಿಸಿದ ರೂ 10.00 ಲಕ್ಷದ ಪ್ರೋತ್ಸಾಹ ಧನವನ್ನು ಮೇಯರ್ ಮನೋಜ್ ಕುಮಾರ್ ಇವರು ಪಟ್ಲ ಫೌಂಡೇಶನ್ನಿನ ಕೇಂದ್ರೀಯ ಸಮಿತಿಯ ಜತೆಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಇವರ ಮೂಲಕ ಟ್ರಸ್ಟಿಗೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಭಾನುಮತಿ, ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ವಿಪಕ್ಷ ನಾಯಕರಾದ ಅನಿಲ್ ಕುಮಾರ್, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಮನೋಹರ್ ಶೆಟ್ಟಿ, ಸುಮಿತ್ರ ಕರಿಯ, ಸರಿತಾ ಶಶಿಧರ್, ವೀಣಾ ಮಂಗಳ, ಮಾಜಿ ಮೇಯರ್ ಶಶಿಧರ ಹೆಗ್ಡೆ ಉಪಸ್ಥಿತರಿದ್ದರು. ಪಟ್ಲ ಫೌಂಡೇಶನ್…

Read More

ಶ್ರೀ ರಾಜರಾಜೇಶ್ವರಿ ಭಜನಾ ವೃಂದ ದುಬೈ ಕಳೆದ 20 ವರುಷಗಳಿಂದ ಕೊಲ್ಲಿ ರಾಷ್ಟ್ರ ಯುಎಇಯಲ್ಲಿ ಸಹಸ್ರಾರು ಮನೆಗಳ ಹಾಗೂ ಸಂಘ ಸಂಸ್ಥೆಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ಪ್ರತಿಫಲ ಆಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಭಜನಾ ಸೇವೆ ಮಾಡುತ್ತಾ ಬಂದಿದ್ದು ಈ ನಿಸ್ವಾರ್ಥ ಭಜನಾ ಸಂಘಟನೆಗೆ ಈಗ ವಿಂಶತಿಯ ಸಂಭ್ರಮ. ಈ ಸಂಭ್ರಮವನ್ನು ಸಧ್ಭಕ್ತ ಬಾಂಧವರ ಜೊತೆ ಹಂಚಿಕೊಳ್ಳಲು, ನಮ್ಮ ಮುಂದಿನ ಪೀಳಿಗೆಗೆ ಭಜನಾ ಸಂಸ್ಕೃತಿಯನ್ನು ಪರಿಚಯಮಾಡಲು ವಿಶೇಷ ಕಾರ್ಯಕ್ರಮವನ್ನು ಫೆ.22 ರಂದು ದುಬಾಯಿಯ ಅಲ ನಾಸರ್ ಲೀಸಲ್ಯಾಂ೯ಡ್ ಅನ್ನೋ ಬೃಹತ್ ಸಭಾಂಗಣದಲ್ಲಿ “ವಿಂಶತಿ ಭಜನಾಟ್ಯ ಸಂಭ್ರಮ-2025“ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖ್ಯಸ್ಥರಾದ ರಾಜೇಶ್ ಕುತ್ತಾರ್ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಈ ಕಾರ್ಯಕ್ರಮದ ವಿಶೇಷತೆಯಾಗಿ ಕುಣಿತ ವಿಂಶತಿ, ಗಾನ ವಿಂಶತಿ, ನೃತ್ಯ ವಿಂಶತಿ, ಕುಣಿತ ವಿಂಶತಿ ಅನ್ನುವ ಭಕ್ತಿಪ್ರಧಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಯುಎಇ ಯಲ್ಲಿ ನಮ್ಮಂತೆ ಸೇವೆ ಮಾಡುವ ಹಲವಾರು ಉತ್ತಮ ಭಜನಾ ತಂಡಗಳಿವೆ. ಆ ತಂಡಗಳಲ್ಲಿ…

Read More