Author: admin
ಮೂಡುಬಿದಿರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೈಸೂರು ವಿಭಾಗ ಮಟ್ಟವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಅಥ್ಲೆಟಿಕ್ಸ್, ಬಾಲ್ ಬ್ಯಾಡ್ಮಿಂಟನ್, ವೇಯ್ಟ್ ಲಿಫ್ಟಿಂಗ್, ಕಬಡ್ಡಿ, ಕುಸ್ತಿ, ಯೋಗ ಸ್ಪರ್ಧೆಯಲ್ಲಿ ಪಾರಮ್ಯ ಮೆರೆಯಿತು. ಅಥ್ಲೆಟಿಕ್ಸ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 08 ಚಿನ್ನ, 06 ಬೆಳ್ಳಿ, 05 ಕಂಚಿನ ಪದಕಗಳೊಂದಿಗೆ ಒಟ್ಟು 19 ಪದಕ ಪಡೆಯಿತು. ಮಹಿಳೆಯರ ವಿಭಾಗದಲ್ಲಿ: ದೀಪಾಶ್ರೀ-4*100ರಿಲೇ (ಪ್ರಥಮ), 4*400ರಿಲೇ (ಪ್ರಥಮ), ಪ್ರಿಯಾಂಕ- 4*100ರಿಲೇ (ಪ್ರಥಮ), ಪ್ರಜ್ಞಾ 4*100ರಿಲೇ (ಪ್ರಥಮ), 4*400ರಿಲೇ (ಪ್ರಥಮ), ರೀತುಶ್ರೀ 4*100ರಿಲೇ (ಪ್ರಥಮ), 4*400ರಿಲೇ (ಪ್ರಥಮ), ಗೀತಾ- 4*400ರಿಲೇ (ಪ್ರಥಮ) ಹಾಗೂ ಎರಡೂ ರಿಲೇಯಲ್ಲಿ ಹೊಸ ಕೂಟ ದಾಖಲೆಯನ್ನು ನಿರ್ಮಿಸಿರುತ್ತಾರೆ. ಸುಷ್ಮಾ-ಚಕ್ರ ಎಸೆತ (ದ್ವಿತೀಯ), ಸಿಂಚನಾ-ಜಾವೆಲಿನ್ ಎಸೆತ(ತೃತೀಯ), ರೇಖಾ ಬಸಪ್ಪ-800ಮೀ (ತೃತೀಯ), ರೂಪಾಶ್ರೀ-3000ಮೀ(ತೃತೀಯ), 1500ಮೀ(ತೃತೀಯ), ಪ್ರಿಯಾಂಕ-ಉದ್ದ ಜಿಗಿತ(ತೃತೀಯ) ಸ್ಥಾನ ಪಡೆದಿದ್ದಾರೆ. ಪುರುಷರ ವಿಭಾಗದಲ್ಲಿ: ದಯಾನಂದ- 400ಮೀ(ದ್ವಿತೀಯ) 4*400ಮೀ ರಿಲೇ(ದ್ವಿತೀಯ), ರಾಮು-…
ತ್ಯಾಗ ಮತ್ತು ಸೇವೆಯ ಆಚರಣೆ ಶಿವಾಯ ಫೌಂಡೇಶನ್ ನಿಂದ ಆಗುತ್ತಿದೆ. ಕೆಲವರು ತೋರಿಕೆಗೆ ಸೇವೆ ಮಾಡುವವರಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಸೇವೆ ಸಲ್ಲಿಸುವವರು ಬಹಳ ವಿರಳ. ಆದರೆ ಶಿವಾಯ ಫೌಂಡೇಶನ್ ಹಾಗಲ್ಲ. ಅರ್ಹರನ್ನು, ಅಶಕ್ತರನ್ನು ಗುರುತಿಸಿ ಮಾಡುವ ಅವರ ಸೇವೆಯು ಎಲ್ಲರಿಗೂ ಮಾದರಿ. ಬಡವರ ಕಣ್ಣೀರು ಒರೆಸುವ ಸೇವೆಯೇ ಭಗವಂತನ ಸೇವೆ. ಅಂತಹ ಸೇವೆಯ ಮುಖಾಂತರ ಶಿವಾಯ ಫೌಂಡೇಶನ್ ಯುವ ಜನಾಂಗಕ್ಕೆ ಸಂಸ್ಕಾರದ ಪಾಠವನ್ನು ಕಲಿಸುತ್ತಿದೆ. ಸಂಸ್ಕಾರಯುತವಾಗಿ ಬದುಕುವ ತಿಳುವಳಿಕೆ ಮನೋಭಾವನೆ ನಮ್ಮಲ್ಲಿ ಬೆಳೆದಲ್ಲಿ ನಾವು ಇತರರಿಗೆ ಆದರ್ಶ ವ್ಯಕ್ತಿ ಶಕ್ತಿಯಾಗ ಬಲ್ಲೆವು. ಇದನ್ನು ಶಿವಾಯ ಫೌಂಡೇಶನ್ ತಮ್ಮ ಸಮಾಜ ಪರ ಕಾರ್ಯ ವೈಖರಿಯನ್ನು ತೋರಿಸಿಕೊಟ್ಟಿದೆ. ನಮ್ಮ ಸೇವೆಯೇ ಸಾಧನೆಯಾಗಬೇಕು ಎಂದು ಒಡಿಯೂರು ಮಹಾ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಆಗಸ್ಟ್ 02 ಬುಧವಾರದಂದು ಜೂಹಿನಗರ ಬಾಂಬೆ ಬಂಟ್ಸ್ ಅಸೋಸಿಯೇಷನ್, ಬಂಟ್ಸ್ ಸೆಂಟರ್ ನಲ್ಲಿ ಶಿವಾಾಯ ಪೌಂಡೇಶನ್ (ರಿ.) ಮುಂಬೈನ ಆರನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭದಲ್ಲಿ ದೀಪವನ್ನು ಪ್ರಜ್ವಲಿಸಿ,…
ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವ ಆಗಸ್ಟ್ 3ರಂದು ಆರಂಭಗೊಂಡಿದ್ದು, ಅಕ್ಷರ ಯಜ್ಞ ಸೇವೆಗಾಗಿ ನೀಡಲಾಗುವ ಪುಸ್ತಕದ ಕುರಿತು ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈಯವರ ಪುಸ್ತಕದ ಪ್ರಾಯೋಜಕತ್ವ ವಹಿಸಿದ್ದರು ಭಾಗ್ಯೇಶ್ ರೈಯವರ ಪುತ್ರಿ ದೇವಿದ್ಯಾ ಮಕ್ಕಳಿಗೆ ಪುಸ್ತಕ ನೀಡುವ ಮೂಲಕ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಈ ಪುಸ್ತಕದಲ್ಲಿ ಮಕ್ಕಳಿಂದ ‘ಶ್ರೀ ಶಾರದಾಂಬೆಯೈ ನಮಃ’ ಎಂದು 108 ಬಾರಿ ಬರೆಸಿ ಆಗಸ್ಟ್ 8ರ ಶಾರದಾ ದೇವಿಯ ಪ್ರತಿಷ್ಠೆ ದಿನದಂದು ಶ್ರೀ ದೇವಿಗೆ ಸಮರ್ಪಿಸಿ ಸರಸ್ವತಿ ಪೂಜೆ ನಡೆದ ಬಳಿಕ ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ನೀಡಲಾಗುವುದು. ಭಜನಾ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿ ಗುತ್ತು ಸೀತಾರಾಮ ರೈ, ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಕೋಶಾಧಿಕಾರಿ ತಾರಾನಾಥ್ ಹೆಚ್, ಉಪಾಧ್ಯಕ್ಷ ಯಶವಂತ ಆಚಾರ್ಯ, ರಾಜೇಶ್ ಬನ್ನೂರು, ಐತ್ತಪ್ಪ ನಾಯ್ಕ್ ಯೋಗಾನಂದ ರಾವ್, ಪುಷ್ಪರಾಜ್ ಉರ್ಲಾಂಡಿ,…
ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹವರ್ತಿ ಸಂಸ್ಥೆಯಾದ ಕರ್ನಾಟಕ ಸಂಘ ಕತಾರ್ ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತನ್ನ ಸದಸ್ಯರಿಗಾಗಿ ಮೊದಲ ಬಾರಿಗೆ “ದಂತ ಆರೋಗ್ಯ ಜಾಗೃತಿ ಶಿಬಿರ” ವನ್ನು ಆಯೋಜಿಸಿತು. ಈ ಕಾರ್ಯಕ್ರಮವನ್ನು 2024 ರ ಸೆಪ್ಟೆಂಬರ್ 27 ರಂದು ದೋಹಾದ ವೈಬ್ರೆಂಟ್ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ “ಎಲ್ಲರೂ ಮನಸಾರೆ ನಕ್ಕುಬಿಡಿ” ಎಂಬ ಟ್ಯಾಗ್ ಲೈನ್ ಅಡಿಯಲ್ಲಿ ನಡೆಸಲಾಯಿತು. ದಂತ ಜಾಗೃತಿ ಶಿಬಿರವು ಬಾಯಿಯ ನೈರ್ಮಲ್ಯ, ಹಲ್ಲಿನ ಖಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಮಿತ ದಂತ ತಪಾಸಣೆಯ ಪ್ರಾಮುಖ್ಯತೆಯ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿತ್ತು. ದೋಹಾದ ಪ್ರಮುಖ ದಂತ ಆರೋಗ್ಯ ಕೇಂದ್ರಗಳಲ್ಲಿ ಒಂದಾದ “ಕಿಂಗ್ಸ್ ಡೆಂಟಲ್ ಸೆಂಟರ್” ನ ವೈದ್ಯರು ಸ್ವಯಂಪ್ರೇರಿತರಾಗಿ ಶಿಬಿರದಲ್ಲಿ ಭಾಗವಹಿಸಿದರು. ಕರ್ನಾಟಕ ಸಂಘ ಕತಾರ್ ನ ಸುಮಾರು 100 ಸದಸ್ಯರು ನೋಂದಾಯಿಸಿಕೊಂಡರು ಮತ್ತು ಜಾಗೃತಿ ಶಿಬಿರದಿಂದ ಪ್ರಯೋಜನ ಪಡೆದರು. ಡಾ.ಸಫೀರಾ ಮೊಯಿದ್ದೀನ್ ಕುಟ್ಟಿ, ಡಾ.ರಾಜು ನಾಗರದ ಜಯಣ್ಣ, ಡಾ.ರುಕ್ಶನ್ ಅಂಜುಮ್…
ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸಹಯೋಗದಲ್ಲಿ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದ ದ್ವಾರಕಾ ಕನ್ಸ್ಟ್ರಕ್ಷನ್ ಇದರ ಆಡಳಿತ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ರವರು ಭವಿಷ್ಯದ ಯೋಧರಿಗೆ ಭದ್ರ ಬುನಾದಿ ಹಾಕುತ್ತಿರುವ ವಿದ್ಯಾಮಾತಾ ಅಕಾಡೆಮಿಗೆ ಸದಾ ನಾವು ಬೆನ್ನೆಲುಬಾಗಿ ನಿಂತು ಗ್ರಾಮೀಣ ಪ್ರದೇಶದ ಯುವ ಜನತೆ ದೇಶ ಸೇವೆಗೆ ಸೇರುವ ಕನಸನ್ನು ನನಸಾಗಿಸಲು ಬದ್ದರಾಗಿದ್ದೆವೆ ಎಂದು ವಿ. ಅಕಾಡೆಮಿಯ ಕಾರ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾದ ರೋಟರಿ ಕ್ಲಬ್ ಯುವ ಪುತ್ತೂರು ಇದರ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಕೃಷ್ಣ ಮುಳಿಯರವರು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದರ ಮೂಲಕ ತನ್ನದೇ ಆದ ಮೈಲುಗಲ್ಲನ್ನು ಸ್ಥಾಪಿಸಿರುವ ವಿದ್ಯಾಮಾತ ಅಕಾಡೆಮಿಯು ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಕೂಡ ತರಬೇತಿ ನೀಡಿ ಯಶಸ್ವಿಯಾಗಿರುವುದು ಶ್ಲಾಘನೀಯ.…
ವಿದ್ಯಾಗಿರಿ: ಶಿಬಿರಾರ್ಥಿಗಳು ರಾಷ್ಟೀಯ ಸೇವಾ ಯೋಜನೆಯ ಧ್ಯೇಯವನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ರೆಂಜಾಳ ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಹಾವೀರ ಹೆಗ್ಡೆ ಹೇಳಿದರು . ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರೆಂಜಾಳದ ಸಂಯುಕ್ತ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ” ನಮ್ಮ ಭಾರತಕ್ಕಾಗಿ ನಮ್ಮ ಯುವಜನತೆ ” ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು . ಸಾರ್ವಜನಿಕ ಸೇವೆಯ ಮೂಲಕ ವ್ಯಕ್ತಿತ್ವವನ್ನು ವೃದ್ಧಿಗೊಳಿಸುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡ ರಾಷ್ಟೀಯ ಸೇವೆ ಯೋಜನೆಯು ವಿದ್ಯಾರ್ಥಿಗಳನ್ನು ಲೋಕ ಸೇವೆಯ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ. ರಾಷ್ಟ್ರಪ್ರೇಮ ಮತ್ತು ಸೇವಾಭಾವನೆಗಳನ್ನು ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸಿ, ಮತ್ತಷ್ಟು ಪ್ರೇರಣೆ ನೀಡಬೇಕು ಎಂದು ಆಶಿಸಿದರು. ಒಂದು ವಾರದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಂಪನ್ಮೂಲ ವ್ಯಕ್ತಿಗಳ ಹಿತವಚನಗಳನ್ನು ಆಲಿಸುವ ಮನೋಭಾವದ ಜೊತೆಗೆ, ಸ್ಥಳೀಯರ ಜೊತೆ ಉತ್ತಮ ರೀತಿಯಲ್ಲಿ…
ಹೆಣ್ಣು ಅಬಲೆ ಅವಳ ರಕ್ಷಣೆಗಾಗಿ ಗಂಡು ಜೊತೆಗಿರಲಿ ಎಂಬ ವಾದ ಎಷ್ಟರ ಮಟ್ಟಿಗೆ ಸರಿ ಎನ್ನುವುದು ನನಗಿನ್ನೂ ಅರ್ಥ ಆಗಲಿಲ್ಲ. ಪುರಾಣದ ಪುಟಗಳನ್ನು ತೆರೆದಂತೆ ಜಗತ್ತಿನ ಬಲಶಾಲಿ ಯೋಧರ ಸಾಲಿನಲ್ಲಿ ನನಗೆ ಹೆಚ್ಚಾಗಿ ಕಾಣುವುದು ಹೆಣ್ಣೇ. ಅದೆಷ್ಟೋ ಧರ್ಮ ಯುದ್ಧಗಳಿಗೆ ಪಾಂಚಜನ್ಯ ಆಗಿರುವುದು ಕೂಡ ಹೆಣ್ಣೇ. ಧರ್ಮ ಕಾರ್ಯದ ಆರಂಭ ಕೊನೆ ಎಲ್ಲವೂ ಒಂದಲ್ಲ ಒಂದು ರೀತಿಯಲ್ಲಿ ಹೆಣ್ಣೇ. ಮಂಥರೆಯ ಕುತಂತ್ರಕ್ಕೆ ರಾಮಾಯಣ ಶುರುವಾದರೆ, ಶೂರ್ಪನಖಿಯ ಸೇಡು, ಕೈಕೇಯಿಯ ಕೇಡು, ಸೀತೆಯ ಪಾಡು, ಇದುವೇ ಅಲ್ವಾ ರಾಮಾಯಣದ ಯುದ್ಧಕ್ಕೆ ಜಾಡು. ಇನ್ನು ಮಹಾಭಾರತ ನಡೆದದ್ದೇ ಜಾರಿದ ಹೆಣ್ಣಿನ ಸೆರಗಿನಿಂದ ಅಂದರೆ ತಪ್ಪಲ್ಲ. ಮಹಾಭಾರತದಲ್ಲೂ ಹೆಣ್ಣಿನದ್ದೇ ಮೇಲುಗೈ. ಕುಂತಿಯ ಕುತೂಹಲ, ದ್ರೌಪದಿಯ ಸೇಡು, ಗಾಂಧಾರಿಯ ಕಣ್ಕಟ್ಟು, ಇವೆಲ್ಲಾ ಧರ್ಮಕಾರ್ಯಕ್ಕೆ ಹೆಣ್ಣುತೆತ್ತ ಬೆಲೆ, ತ್ಯಾಗ ಇರಬಹುದೇನೋ. ಧರ್ಮ ರಕ್ಷಣೆಯ ಅದೆಷ್ಟೋ ಸಂದರ್ಭದಲ್ಲಿ, ಸಾವನ್ನು ಗೆದ್ದೇ ಎಂದು ಮೆರೆಯುತ್ತಿದ್ದ ಅದೆಷ್ಟೋ ರಾಕ್ಷಸ ಸಂಹಾರ ಹೆಣ್ಣಿನಿಂದಲೇ ಆಗಿದೆ. ಹುಟ್ಟಿಸಿ ಜೀವ ನೀಡುವ ತಾಯಿ ಒಡಲ ಬಸಿದು ಕೊಲ್ಲುವ…
ಬಂಟರ ಯಾನೆ ನಾಡವರ ಮಾತೃ ಸಂಘ ಬಂಟ್ಸ್ ಹಾಸ್ಟೆಲ್ ಮಂಗಳೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾ ಮಟ್ಟದ ಬಂಟರ ಕ್ರೀಡಾಕೂಟ ‘ಬಂಟರ ಕ್ರೀಡೋತ್ಸವ 2024’ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಕ್ರೀಡಾಂಗಣದಲ್ಲಿ ಜರಗಿತು. ಈ ಕ್ರೀಡಾಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘವು ಎಲ್ಲಾ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ 9 ಪ್ರಥಮ, 6 ದ್ವಿತೀಯ, 3 ತೃತೀಯ ಬಹುಮಾನಗಳನ್ನು ಪಡೆದು ಸತತ ಮೂರನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಕ್ರೀಡಾಕೂಟವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ. ಸುಂದರ್ ಶೆಟ್ಟಿ ಉದ್ಘಾಟಿಸಿ, ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಹೊರಗೆ ಬರಲಿ ಎಂದರು. ಸಂಜೆ ನಡೆದ ಸಮಾರೋಪದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ವಹಿಸಿದ್ದರು. ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಬಿ…
ಸೆಪ್ಟೆಂಬರ್ 28 ರಂದು ಬಂಟರ ಯಾನೆ ನಾಡವರ ಮಾತೃ ಸಂಘ ಬಂಟ್ಸ್ ಹಾಸ್ಟೆಲ್ ಇದರ ಆಶ್ರಯದಲ್ಲಿ ಗಣೇಶೋತ್ಸವದ ಪ್ರಯುಕ್ತ ನಡೆದ “ಬಂಟ ಕ್ರೀಡೋತ್ಸವ – 2024” ರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಮಂಜೇಶ್ವರ ಬಂಟರ ಸಂಘವು ಪುರುಷರ ವಿಭಾಗದಲ್ಲಿ ಜಯಗಳಿಸಿ ಸತತ ಎರಡನೇ ಬಾರಿಗೆ ಪ್ರಥಮ ಬಹುಮಾನ ಪಡೆದು ಇತಿಹಾಸವನ್ನು ದಾಖಲಿಸಿತು. ಮಂಜೇಶ್ವರ ಹಗ್ಗ ಜಗ್ಗಾಟದ ಪುರುಷರ ಹಾಗೂ ಮಹಿಳಾ ತಂಡಗಳಿಗೆ ಉತ್ತಮ ತರಬೇತಿಯನ್ನು ನೀಡಿ ಬಲಿಷ್ಠ ತಂಡ ರಚನೆಯಲ್ಲಿ ಸಹಕರಿಸಿದ ಆಂಜನೇಯ ಕ್ಲಬ್, ಕಣ್ವತೀರ್ಥ ಅಧ್ಯಕ್ಷರು ಮತ್ತು ಸರ್ವ ಸದಸ್ಯರಿಗೆ ಈ ಸಂಧರ್ಭದಲ್ಲಿ ಬಂಟರ ಸಂಘದ ಪರವಾಗಿ ಧನ್ಯವಾದಗಳನ್ನು ಸಮರ್ಪಿಸಿದರು.
ವಿದ್ಯಾಗಿರಿ: ‘ವೈದ್ಯರು ಮತ್ತು ಎಂಜಿನಿಯರ್ಗಳಿಗೆ ಮಾತ್ರಜಗತ್ತಿನಲ್ಲಿ ಬೇಡಿಕೆಇರುವುದಲ್ಲ, ಎಲ್ಲ ಕ್ಷೇತ್ರಗಳ ಪರಿಣತರಅವಶ್ಯಕತೆಇದೆ. ಸೂಕ್ಷ್ಮಜೀವವಿಜ್ಞಾನವು ವಿಜ್ಞಾನ ವಿದ್ಯಾರ್ಥಿಗಳಿಗೂ ನವೀನ’ ಎಂದು ಸೈಂಟ್ಅಲೋಷಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ಸೂಕ್ಷ್ಮಜೀವ ವಿಜ್ಞಾನ ವಿಭಾಗದ ಮುಖ್ಯ ಸ್ಥೆಡಾ. ವೈಶಾಲಿ ರೈ ಹೇಳಿದರು. ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಸೂಕ್ಷ್ಮ ಜೀವವಿಜ್ಞಾನ ವಿಭಾಗವು ಆಯೋಜಿಸಿದ ಪಿಯು ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ‘ಮೈಕ್ರೋಸ್ಪಾರ್ಕ್’ (ಕಾಣದಜಗತ್ತನ್ನು ಅನ್ವೇಷಿಸಿ) ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದ ಹೊಸ ಸಾಧ್ಯತೆ ಮತ್ತು ಆಯಾಮಗಳನ್ನು ಅನ್ವೇಷಿಸಬೇಕು. ನಿಮ್ಮ ಮಾತು ಮತ್ತು ಆಯ್ಕೆಗಳಲ್ಲಿ ಜವಾಬ್ದಾರಿ ಇರಬೇಕು ಎಂದರು. ಥಾಮಸ್ ಆಲ್ವಾಎಡಿಸನ್ ವಿದ್ಯುತ್ ದೀಪ ಕಂಡು ಹಿಡಿಯುವ ಪ್ರಯೋಗದಲ್ಲಿ ಸಾವಿರ ಬಾರಿ ವಿಫಲರಾಗಿರಬಹುದು. ಆದರೆ, ಅದು ವೈಫಲ್ಯವಲ್ಲ, ಸಾವಿರ ಸಾಧ್ಯತೆಗಳು ಎಂದು ಅವರು ವಿಶ್ಲೇಷಿಸಿದರು. ಸುಸ್ಥಿರತೆ ಇಂದಿನ ಅಗತ್ಯವಾಗಿದೆ. ಉದ್ಯಮ ಶೀಲತಾ ಕ್ಷೇತ್ರದಲ್ಲಿ ಸೂಕ್ಷ್ಮಜೀವವಿಜ್ಞಾನಕ್ಕೆ ಬೇಡಿಕೆಇದೆ. ಇಂತಹ ಪ್ರಾಯೋಗಿಕ ಕಾರ್ಯಾಗಾರಗಳು ಜ್ಞಾನದ ಹಂಚಿಕೆಗೆ ಸಹಕಾರಿಎಂದು ವಿವರಿಸಿದರು. ನಿಮ್ಮ…