Author: admin

ವಿದ್ಯಾಗಿರಿ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನಾ ಕ್ರಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಕಳೆದ ಬಾರಿ ವಿವಿಧ ಸಮುದಾಯಗಳ ಸಹಯೋಗದಲ್ಲಿ 9 ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗಿತ್ತು. ಇದರಲ್ಲಿ 1478 ಜನರು ಪಾಲ್ಗೊಂಡು, 784 ಜನರಿಗೆ ಉಚಿತ ಕನ್ನಡಕ ಹಾಗೂ 109 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಲಾಗಿದೆ ಎಂದರು. ಜೂನ್ 16ಕ್ಕೆ ಮುಂದಿನ ಹಂತದ ಉಚಿತ ನೇತ್ರ ತಪಾಸಣಾ ಶಿಬಿರವು ನಡೆಯಲಿದೆ ಎಂದು ತಿಳಿಸಿದರು. ಈ ಬಾರಿಯ ಒಟ್ಟು ಮೂರು ಹಂತದ ಶಿಬಿರಗಳಲ್ಲಿ 348 ಮಂದಿ ಭಾಗಿಯಾಗಿ 178 ಜನರು ಉಚಿತ ಕನ್ನಡಕ ಪಡೆಯಲು ಹಾಗೂ 39 ಜನರು ಶಸ್ತç ಚಿಕಿತ್ಸೆಯನ್ನು ಪಡೆಯಲು ಹೆಸರು ನೋಂದಾಯಿಸಿಕೊ0ಡರು.ಕಾರ್ಯಕ್ರಮದಲ್ಲಿ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 618 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 8ನೇ ಸ್ಥಾನ ಪಡೆದ ಯರುಕೋಣೆ ಸಂತೋಷ್ ಶೆಟ್ಟಿ ಮತ್ತು ಜನ್ನಾಲು ಚಂದ್ರಾವತಿ ಶೆಟ್ಟಿ ದಂಪತಿಗಳ ಪುತ್ರ ಚಿತ್ತೂರು ಪ್ರೌಢಶಾಲೆಯ ವಿದ್ಯಾರ್ಥಿ ರವಿತೇಜ ಶೆಟ್ಟಿ ಇವರನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೈಂದೂರು ಬಂಟರ ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರ್ ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಯ ಮನೆಗೆ ತೆರಳಿದ ತಂಡದಲ್ಲಿ ಸಂಘದ ಕಾರ್ಯಕಾರಿ ಸದಸ್ಯ ಕೊಲ್ಲೂರು ದೇಗುಲದ ಮಾಜಿ ಧರ್ಮದರ್ಶಿ ವಂಡವಳ್ಳಿ ಜಯರಾಮ ಶೆಟ್ಟಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕುದ್ರುಕೋಡು ಜಗದೀಶ ಶೆಟ್ಟಿ ನಗದು ಪುರಸ್ಕಾರ ವಿತರಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ, ಜನ್ನಾಲು ಶೇಷು ಶೆಟ್ಟಿ ಹಾಗೂ ಸಾಧಕ ವಿದ್ಯಾರ್ಥಿ ರವಿತೇಜ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು.

Read More

ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಲಯನ್ ಹರಿಪ್ರಸಾದ್ ರೈ ನಿರ್ಮಾಣದಲ್ಲಿ, ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾವನ್ನು ನಿರ್ಮಿಸಿದ್ದರು. ಇದೀಗ ಇದೇ ಜೋಡಿ ಮತ್ತೊಂದು ಹೊಸ ಬಗೆಯ ಸಿನಿಮಾವನ್ನು ತುಳು ಸಿನಿಮಾರಂಗಕ್ಕೆ ನೀಡಲು ಸಿದ್ದತೆ ನಡೆಸಿದ್ದಾರೆ.‌ ಮಳೆಯ ಕಾರಣದಿಂದ ಜಿಂಗಾಲಾಲ ಸಿನಿಮಾಕ್ಕೆ ಮೊದಲ ಹಂತದ ಚಿತ್ರೀಕರಣ ನೀಡಿ ಬ್ರೇಕ್ ನೀಡಲಾಗಿದೆ. ಸಿನಿಮಾಕ್ಕೆ ಕ್ಯಾಮಾರ ಮಯೂರ್ ಆರ್ ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಡಿಬಿಸಿ ಶೇಖರ್, ಗೀತಾ ಸಾಹಿತ್ಯ ಮಯೂರ್ ಆರ್ ಶೆಟ್ಟಿ, ಕೀರ್ತನ್ ಭಂಡಾರಿ, ಕಲಾ ನಿರ್ದೇಶನ ಹರೀಶ್ ನಾಯ್ಕ್ ಬಜಪೆ, ಸ್ಥಿರ ಚಿತ್ರಣ ಕರುಣಾಕರ ಮಂಜೇಶ್ವರ, ಮ್ಯಾನೇಜರ್ ಪ್ರಜ್ವಲ್ ಶೆಟ್ಟಿ, ವಿಶ್ವನಾಥ, ಪಿಆರ್ ಒ ಬಾಳ…

Read More

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ 28 ನೇ ಹಿರಿಯಡ್ಕ ಶಾಖೆಯನ್ನು ಜೂನ್ 09 ರಂದು ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗಣ್ಯರಾದ ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ ಜೈರಾಜ್ ಬಿ ರೈ, ಲಾವಣ್ಯ ಕೆ ಆರ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಶಾಂತರಾಮ್ ಸೂಡ, ರವೀಂದ್ರ ಪೂಜಾರಿ, ಕೆ ರಾಜಾರಾಮ್ ಹೆಗ್ಡೆ, ರವೀಂದ್ರನಾಥ ಜಿ ಹೆಗ್ಡೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

Read More

ವಿದ್ಯಾವಂತ ಯುವಕರಿಗೆ ಅವರು ಪಡೆದ ಶಿಕ್ಷಣಕ್ಕೆ ಅನುಸಾರ ಅವರ ಕುಶಲತೆ ಜಾಣ್ಮೆಗಳನ್ನು ಪರೀಕ್ಷೆಗೆ ಒಳಪಡಿಸಿ ಯೋಗ್ಯ ಮಾರ್ಗದರ್ಶನ ತರಬೇತಿ ನೀಡಿ, ಅವಶ್ಯಕತೆ ಇರುವ ಕಂಪನಿಗಳಿಗೆ ಸಂದರ್ಶನಕ್ಕೆ ಕಳುಹಿಸಿ ಆಯ್ಕೆ ಪ್ರಕ್ರಿಯೆ ನಡೆಸಿ ನೇಮಕಾತಿಗಳಿಗೆ ಸಹಕರಿಸುವ ವಿಶೇಷ ವ್ಯಕ್ತಿತ್ವ ಶ್ರೀ ಲಕ್ಷ್ಮೀ ನಾರಾಯಣ ಶೆಟ್ಟಿ ಅವರು ಈ ಕ್ಷೇತ್ರದಲ್ಲಿ ದೀರ್ಘ ಕಾಲದ ಅನುಭವ ಹೊಂದಿದ ಶೆಟ್ಟರು ಒಂದರ್ಥದಲ್ಲಿ ನಿರುದ್ಯೋಗ ವಿದ್ಯಾವಂತರಿಗೆ ಅವರು ಯೋಗ್ಯತೆಗನುಸಾರ ಉದ್ಯೋಗ ದೊರೆಯುವಂತೆ ಸಹಕರಿಸಿ ಮಹಾದುಪಕಾರ ಮಾಡುತ್ತಾರೆ. ಹಣಕಾಸು ಕ್ಷೇತ್ರ, ವಿಮೆ ಆಡಿಟಿಂಗ್ ಬುಕ್ ಕೀಪಿಂಗ್ ಹೀಗೆ ಒಂದು ಉತ್ತಮ ಗುಣಮಟ್ಟದ ಕಾರ್ಯ ನಿರ್ವಹಣೆ ಕುರಿತ ಜ್ಞಾನ ಹೊಂದಿದ ಶೆಟ್ಟರು ಸಮರ್ಥ ಹಾಗೂ ಉದ್ಯೋಗಾಕಾಂಕ್ಷಿಗಳ ನಿರೀಕ್ಷೆಯಲ್ಲಿದ್ದು ಅಭ್ಯರ್ಥಿಗಳ ಅರ್ಜಿ ಕರೆದು ಉದ್ಯೋಗಾವಕಾಶ ಒದಗಿಸಿ ಕೊಡುವ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ. ಅವರಿಗೆ ಪೂರ್ವಭಾವಿ ತರಬೇತಿಯನ್ನೂ ನೀಡಲಾಗುತ್ತದೆ. ಸೇಲ್ಸ್ ಟ್ರೇಡಿಂಗ್ ಫೈನಾನ್ಸ್ ಕಂಪನಿಗಳ ಸಲಹೆಗಾರರಾಗಿ ಕಾರ್ಯ ನಿರ್ವಹಿಸುವ ಇವರು ಅನೇಕ ವಿಷಯಗಳ ಡಿಪ್ಲೋಮಾ ಜೊತೆಗೆ ಮುಂಬಯಿ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು. ಒಬ್ಬ ಹವ್ಯಾಸಿ ಮಾಧ್ಯಮ…

Read More

ಮೇ 10 ರಂದು ಶಾಲಿನಿ ಶೆಟ್ಟಿ ಸಚ್ಚೇರಿಗುತ್ತು ಇವರ ನಿಸ್ವಾರ್ಥ ಸಮಾಜ ಸೇವೆಯನ್ನು ಮೆಚ್ಚಿ ದಿನೇಶ್ ಜಯ ಶೆಟ್ಟಿ ಬೆಳ್ಳೂರು ಇವರು ಅಧ್ಯಕ್ಷರಾಗಿರುವ ನಾಯರ್ ಕೋಡಿ ಫ್ರೆಂಡ್ಸ್ ಸರ್ಕಲ್ (ರಿ) ಕೋಟೆ ಸೂರಿಂಜೆ ಇದರ ಅದ್ದೂರಿಯ ರಜತ ಮಹೋತ್ಸವ ಸಮಾರಂಭದಲ್ಲಿ ಹಲವಾರು ಬಿರುದುಗಳ ಮುಕುಟಕ್ಕೆ ನವಿಲ ಗರಿ ಎಂಬಂತೆ ವೇದಿಯಲ್ಲಿ ಆಸೀನರಾಗಿದ್ದ ಅತಿಥಿ ಗಣ್ಯರ ಸಮ್ಮುಖದಲ್ಲಿ “ತೌಳವ ಸಿರಿ” ಎಂಬ ಬಿರುದನ್ನು ನೀಡಿ ಗೌರವಿಸಿವೆ. ಶಾಲಿನಿ ಸತೀಶ್ ಶೆಟ್ಟಿಯವರು ಬಹುಮುಖ ಪ್ರತಿಭಾ ಶಾಲಿನಿ. ಸದಾ ಸಮಾಜ ಸೇವೆಯ ತುಡಿತದಲ್ಲಿದ್ದು ಮುಂಬಯಿಯಲ್ಲಿ ಮುಖ್ಯವಾಗಿ ಮೀರಾ ಭಾಯಂಧರ್ ಪರಿಸರದ ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಇಲ್ಲವೇ ಸದಸ್ಯೆಯಾಗಿ ಹಾಗೂ ಪ್ರಾದೇಶಿಕ ಬಂಟರ ಸಂಘ ಮೀರಾ ಭಾಯಂಧರ್ ಇದರ ಮಾಜಿ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿಯೂ ಸಮಾಜ ಸೇವೆಯಲ್ಲಿ ನಿರತರಾಗಿರುವುದು ಹೆಚ್ಚಿನವರು ಬಲ್ಲ ವಿಷಯ. ಸಮಾಜ ಸೇವೆಗಾಗಿಯೇ ಸಂಸ್ಥೆಯೊಂದು ಬೇಕೆಂಬ ಆಶಯ ಹೊಂದಿದ್ದ ಇವರು ಸಮಾನ ಮನಸ್ಕ ಮಹಿಳೆಯರನ್ನು ಒಗ್ಗೂಡಿಸಿ ಶ್ರೀ ಶಕ್ತಿ ಫೌಂಡೇಷನ್ ಮುಂಬೈ ಮಹಾರಾಷ್ಟ್ರ…

Read More

ಬಂಟರ ಸಂಘ ಮುಂಬಯಿ ವತಿಯಿಂದ ಜೂನ್ 07 ರಂದು ನಡೆದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿಯವರು ಉಪಸ್ಥಿತರಿದ್ದರು.

Read More

ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉದಯ್ ಶೆಟ್ಟಿಯವರ ಅಭಿಮಾನಿ ಬಳಗ ಜಂಟಿಯಾಗಿ ಸಮಾಜಸೇವಕ, ಉದ್ಯಮಿ ಉದಯ್ ಶೆಟ್ಟಿ ಮುನಿಯಾಲು ಇವರ ಹುಟ್ಟುಹಬ್ಬದ ಪ್ರಯುಕ್ತ ಜೂನ್ 08 ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಸಾದನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಮುಸ್ಲಿಂ ಧರ್ಮಗುರುಗಳಾದ ಮೌಲಾನ ಹಪೀಜ್, ಅತ್ತೂರು ಚರ್ಚ್ ಸಹಾಯಕ ಧರ್ಮಗಳಾದ ರೆ.ಫಾ. ರಾಬಿನ್ ಸಾಂತ್ಮಯರ್ ಹಾಗೂ ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಪವರ್ ಟಿವಿ ಮುಖ್ಯಸ್ಥರಾದ ರಾಕೇಶ್ ಶೆಟ್ಟಿ, ಕಾರ್ಕಳ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶುಭದ್ ರಾವ್, ಗೋಪಿನಾಥ ಭಟ್, ಜಿಲ್ಲಾ ವಕ್ತಾರರಾದ ಬಿಪಿನ್ ಚಂದ್ರಪಾಲ್ ನಕ್ರೆ, ಸುರೇಂದ್ರ ಶೆಟ್ಟಿ ಸಹನಾ, ಅಜಿತ್ ಹೆಗ್ಡೆ ಮಾಳ, ಸುಧಾಕರ ಕೋಟ್ಯಾನ್, ಸುಭಿತ್ ಎನ್.ಆರ್, ನವೀನ್ ಅಡ್ಯಾಂತಾಯ, ಉದಯ ಶೆಟ್ಟಿ…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಜೂ. 7 ರಂದು ಶಿಕ್ಷಕರಿಗೆ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಶ್ರೀ ಲಕ್ಷ್ಮೀ ಜನಾರ್ಧನ್ ಇಂಟರ್‍ನ್ಯಾಶನಲ್ ಸ್ಕೂಲ್ ಬೆಳ್ಮಣ್‍ನ ಪ್ರಾಂಶುಪಾಲರಾದ ಭುಜಂಗ ಪಿ ಶೆಟ್ಟಿ ಹಾಗೂ ಸುರತ್ಕಲ್ ನ ವಿದ್ಯಾದಾಯಿನಿ ಆಂಗ್ಲಮಾಧ್ಯಮ ಶಾಲೆಯ ಶುಭಲಕ್ಷ್ಮಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಕಾರ್ಯಾಗಾರದಲ್ಲಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು 2023ರ ಗುರಿ, ಉದ್ದೇಶ, ಬೋಧನಾ ಕಲಿಕಾ ವಿಧಾನ, ಪಠ್ಯವಿಷಯಗಳ ಮಾಹಿತಿಯನ್ನು ನೀಡಿ ಬೋಧನಾ ಸಾಮರ್ಥ್ಯ ವೃದ್ಧಿಯ ತರಬೇತಿಯನ್ನು ನೀಡಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮುಗ್ಧ ಮನಸ್ಸಿನ ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ನಿರಂತರ ತಮ್ಮನ್ನು ತಾವು ಆಧುನೀಕರಿಸಿಕೊಳ್ಳಬೇಕು. ಇಲ್ಲಿ ಕಲಿತ ಕೌಶಲ್ಯಗಳನ್ನು ತರಗತಿಯಲ್ಲಿ ಅನುಷ್ಠಾನಗೊಳಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಎಲ್ಲಾ ಶಿಕ್ಷಕರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಕುರಿತು ಅರಿವನ್ನು ಹೊಂದಿರಬೇಕೆಂದರು. ಕಾರ್ಯಾಗಾರದಲ್ಲಿ ಸಂಸ್ಥೆಯ ಶಿಕ್ಷಕ ವೃಂದದವರು ಪ್ರಾತ್ಯಕ್ಷಿಕ ಅನುಭವವನ್ನು ಪಡೆದುಕೊಂಡರು.

Read More

ಜೂನ್‌: 21 ಕರ್ನಾಟಕ ಬೆಟಾಲಿಯನ್‌ NCC ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್‌ ಆನ್ಯುವಲ್‌ ಟ್ರೈನಿಂಗ್‌ ಕ್ಯಾಂಪ್‌ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್‌ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ, ದೈಹಿಕ ತರಬೇತಿ (ಕಸರತ್ತು) , ಫೈರಿಂಗ್‌, ಅಡೆತಡೆಗಳನ್ನೆದುರಿಸುವ ಕೋರ್ಸಿನ ತರಬೇತಿಯ ಪ್ರಯೋಜನ ಪಡೆದುಕೊಂಡರು. ಯುವ ಆಪದ ಮಿತ್ರ ಯೋಜನೆಯಡಿಯಲ್ಲಿ ಜಿಲ್ಲಾ ವಿಪತ್ತು ಪರಿಹಾರ ನಿರ್ವಹಣಾ ಪ್ರಾಧಿಕರ ಪ್ರತಿನಿಧಿಗಳಿಂದ ಆಯ್ದ ಕೆಡೆಟ್‌ಗಳಿಗೆ ವಿಪತ್ತು ಪರಿಹಾರ ನಿರ್ವಹಣೆಯ ತರಬೇತಿಯನ್ನು ನೀಡಲಾಯಿತು. ಮಂಗಳೂರಿನ ಪೋಲಿಸ್‌ ಕಮಿಷನರ್‌ (ಆಯುಕ್ತ) ಕಛೇರಿಯ ವತಿಯಿಂದ ಜೂನ್‌ 5,2025 ರಂದು ನಕ್ರೆಯಲ್ಲಿರುವ ಫೈರಿಂಗ್‌ ರೇಂಜ್‌ನಲ್ಲಿ”ಸ್ಟನ್‌ and ಸ್ಮೋಕ್‌ ಗ್ರೆನೇಡ್‌ ಫೈರಿಂಗ್‌ “ ಮತ್ತು ಗಲಭೆ ನಿಯಂತ್ರಣ ಡ್ರಿಲ್‌ಗಳ ನೇರಾ ಪ್ರಾತ್ಯಕ್ಷತೆಯನ್ನು ಕೂಡಾ ನೀಡಲಾಯಿತು.CATC ಯನ್ನು ಎನ್.ಸಿ.ಸಿ ಗ್ರೂಪ್‌ ಪ್ರಧಾನ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದು , ಮಂಗಳೂರು ಗ್ರೂಪ್ ಕಮಾಂಡರ್‌ ಕರ್ನಲ್‌ ವಿರಾಜ್‌ ಕಾಮತ್ ಕ್ಯಾಡೆಟ್‌ಗಳೊಂದಿಗೆ ಸಂವಹನ ನಡೆಸಿ…

Read More