Author: admin
ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು. ಅವರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಯುವಕರು ವಿಮರ್ಶೆಗಿಂತ ಕ್ರಿಯೆಗೆ ಆದ್ಯತೆ ನೀಡಬೇಕು. ಸಮಾಜದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಹುಡುಕಿ, ಆವಿಷ್ಕಾರಾತ್ಮಕ ಚಿಂತನೆ ಮೂಲಕ ಬದಲಾವಣೆ ತರಬೇಕು. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪ್ರಗತಿಯ ಕೀಲಿಕೈ ಎಂದರು. ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್ಸಿಸಿ, ಎನ್ಎಸ್ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಘಟನೆಗಳಲ್ಲಿ…
ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆ : ವಿದ್ಯಾರಣ್ಯದ ಕೆ. ಅದ್ವಿಕ್ ಶೆಟ್ಟಿ ಹಾಗೂ ದ್ರಿಶಾ ಎಚ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ
ಮೂಡುಬಿದ್ರಿಯ ಆಳ್ವಾಸ್ ಪಿಯು ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮನೋ ಅಂಕಗಣಿತ (ಮೆಂಟಲ್ ಅರಿಥ್ ಮೆಟಿಕ್) ಸ್ಪರ್ಧೆಯಲ್ಲಿ ವಿದ್ಯಾರಣ್ಯ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ. 5ನೇ ತರಗತಿಯ ಕೆ. ಅದ್ವಿಕ್ ಶೆಟ್ಟಿ, 6ನೇ ತರಗತಿಯ ದ್ರಿಶಾ ಎಚ್ ಶೆಟ್ಟಿ ಒಂದನೇ ವಿಭಾಗದ ಸ್ಪರ್ಧೆಯಲ್ಲಿ ಮೊದಲ ಸ್ಥಾನದೊಂದಿಗೆ ವಿಜೇತರಾದ ವಿದ್ಯಾರ್ಥಿಗಳು. ಕೆ. ಅದ್ವಿಕ್ ಶೆಟ್ಟಿ ಹೆಸ್ಕತ್ತೂರು ಕೃಷ್ಣ ಶೆಟ್ಟಿ ಹಾಗೂ ದೀಪಾ ದಂಪತಿಯ ಪುತ್ರ. ದ್ರಿಶಾ ಎಚ್ ಶೆಟ್ಟಿ ಜನ್ನಾಡಿಯ ಹರ್ಷವರ್ಧನ್ ಶೆಟ್ಟಿ ಹಾಗೂ ಸೌಮ್ಯ ಹೆಚ್ ಶೆಟ್ಟಿ ದಂಪತಿಯ ಪುತ್ರಿ. ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ ಲಿ. ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ ವಿಜೇತ…
ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ತನ್ನ ಪಾದರಕ್ಷೆಗಳನ್ನು ನೀಡಿ ಹೇಳಿದ “ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯಕ್ರಿಯೆ ನೆರವೇರಿಸು!” ಎಂದು ಹೇಳುತ್ತಾನೆ. ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ. ಆದರೆ ಪಂಡಿತರು ಸಾಧ್ಯವೇ ಇಲ್ಲ. ಇದು ನಮ್ಮ ಅಂತ್ಯಕ್ರಿಯೆ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರೂ ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ. ಈ ವಿಚಾರವಾಗಿ ಸಂಬಂಧಿಕರು,…
ವಿದ್ಯಾರ್ಥಿ ಜೀವನದಲ್ಲಿ ಸಮುದಾಯ ಪ್ರಜ್ಞೆಯನ್ನು ಬೆಳೆಸಿಕೊಂಡು ಬದುಕನ್ನು ರೂಪಿಸುವಲ್ಲಿ ಸಹಕಾರಿಯಾಗಿ, ತನ್ನ ವ್ಯಕ್ತಿತ್ವದ ವಿಕಸನದೊಂದಿಗೆ ಜೀವನವನ್ನು ಪ್ರಕಾಶಗೊಳಿಸುವ ಮೌಲ್ಯಯುತ ಯೋಜನೆ ರಾ.ಸೇ.ಯೋ ಆಗಿದೆ ಉಪನ್ಯಾಸಕ ಶ್ರೀ ಸಂತೋಷ್ ನೆಲ್ಲಿಕಾರು ಹೇಳಿದರು. ಮಡಿಬೆಟ್ಟು ಅನುದಾನಿತ ಹಿ.ಪ್ರಾ.ಶಾಲೆ ಕಣಜಾರಿನಲ್ಲಿ ನಡೆಯುತ್ತಿರುವ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾ.ಸೇ.ಯೋ.ಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಾಧಿಕಾರಿ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ ಕೊಡವೂರು ಮಾತನಾಡಿ, ಈ ಶಿಬಿರದಲ್ಲಿ ಕಳೆದ ಅನುಭವಗಳು ಜೀವಮಾನವಿಡಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು. ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟಿನ ಟ್ರಸ್ಟಿಯವರಾದ ಶ್ರೀ ವಿಕ್ರಂ ಹೆಗ್ಡೆಯವರು ಮಾತನಾಡಿ, ಶಿಬಿರವು ಮೌಲ್ಯಯುತ ಜೀವನಕ್ಕೆ ದಾರಿ ಮಾಡಿ ಕೊಡುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ತೆರೆದಿದೆ. ಇದರ ಸದುಪಯೋಗವನ್ನು ಶಿಬಿರಾರ್ಥಿ ಪಡೆದುಕೊಂಡಲ್ಲಿ ಯಶಸ್ವಿ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ನೀರೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಪ್ರಭುಗಳು ಧ್ವಜಾರೋಹಣವನ್ನು…
ಕನ್ನಡ ರಾಜ್ಯೋತ್ಸವದ ಶುಭಾವಸರದಲ್ಲಿ ಕನ್ನಡ ಸಂಸ್ಕೃತಿಯ ಪ್ರಚಾರ ಹಾಗೂ ಓದುಗರಲ್ಲಿ ಪುಸ್ತಕಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಕಳ ಹಾಗೂ ಮೂಡುಬಿದಿರೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ಸಾಹಿತ್ಯ, ಕಾದಂಬರಿ, ಪ್ರಬಂಧ, ಜೀವನ ಚರಿತ್ರೆ, ಮಕ್ಕಳ ಸಾಹಿತ್ಯ ಸೇರಿದಂತೆ ವಿವಿಧ ವಿಷಯಗಳ ನೂರಾರು ಪುಸ್ತಕಗಳು ವಿಶೇಷ ರಿಯಾಯಿತಿ ದರದಲ್ಲಿ ಲಭ್ಯವಿರಲಿವೆ. ಕನ್ನಡ ಸಾಹಿತ್ಯ ಕ್ಷೇತ್ರದ ಮಹನೀಯರ ಕೃತಿಗಳ ಜೊತೆಗೆ ಯುವ ಲೇಖಕರ ಹೊಸ ಕೃತಿಗಳು, ಹೊಸ ಪ್ರಕಾಶನಗಳು ಹಾಗೂ ಜನಪ್ರಿಯ ಪುಸ್ತಕಗಳು ಈ ಮೇಳದ ಆಕರ್ಷಣೆಯಾಗಿದೆ. 10% ನಿಂದ 50%ನ ವರೆಗೆ ರಿಯಾಯಿತಿ ಸಿಗಲಿದೆ. ಈ ವಿಶೇಷ ಮೇಳವು ದಿನಾಂಕ 01-11-2025 ರಿಂದ 09-11-2025 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ ಸಮಯ 9.00 ರಿಂದ ಸಂಜೆ ಸಮಯ 9.00ರ ವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ಎಲ್ಲಾ ಪುಸ್ತಕ ಪ್ರೇಮಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಾಶಕರು ಕೋರಿದ್ದಾರೆ. ಕನ್ನಡದ ನಾಡು ನುಡಿ ಮತ್ತು…
ಪ್ರತಿಷ್ಠಿತ ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಕೆಪಿಸಿಸಿ ಕೋ ಆರ್ಡಿನೇಟರ್, ಹೋಟೆಲು ಉದ್ಯಮಿ, ಮುಂಬೈ ಶಿವಾಯ ಫೌಂಡೇಶನ್ ನ ಗೌರವ ಸಲಹೆಗಾರ ನವೀನ್ ಚಂದ್ರ ಜೆ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳ ವಿವರ ಇಂತಿದೆ : ಅನಂತ ಪಟ್ಟಾಭಿ ರಾವ್ (ಗೌರವಾನ್ವಿತ ನಿರ್ದೇಶಕರು), ರಾಜೇಶ್ ಕೋಟ್ಯಾನ್, ಸವಿತಾ ಆಚಾರ್ಯ, ಸತೀಶ್ ಆಚಾರ್ಯ (ಉಪಾಧ್ಯಕ್ಷರು), ರಮಾಕಾಂತ ರಾವ್ (ಪ್ರಧಾನ ಕಾರ್ಯದರ್ಶಿ), ರಾಜೇಶ್ ಶೇರಿಗಾರ್, ಹಿಮಕರ (ಜತೆ ಕಾರ್ಯದರ್ಶಿಗಳು), ಕಸ್ತೂರಿ ರಾಮಚಂದ್ರ (ಖಜಾಂಚಿ), ಪೂರ್ಣಿಮಾ ಆಚಾರ್ಯ, ಮಕರಂದ ಸಾಲ್ಯಾನ್ (ಜತೆ ಕೋಶಾಧಿಕಾರಿ), ಶಶಿಧರ ಗುಜರಾನ್, ಹರೀಶ್ ಕುಮಾರ್ (ಸಾಂಸ್ಕೃತಿಕ ಕಾರ್ಯದರ್ಶಿಗಳು), ಶಮನ್ ಕೋಟ್ಯಾನ್, ಪ್ರಸಾದ್ ಪಿ. ಎಸ್ (ಕ್ರೀಡಾ ಕಾರ್ಯದರ್ಶಿಗಳು), ಸೂರಜ್ ಕುಮಾರ್, ಸ್ನೇಹಾ, ಪ್ರಜ್ವಲ್ ಕುಮಾರ್ ಸಹಿತ ಇತರರನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಮುಂಬಯಿ ಮಹಾನಗರದಲ್ಲಿ ಮುಂಚೂಣಿಯಲ್ಲಿರುವ ಜಾತೀಯ ಸಂಘಟಣೆಗಳಲ್ಲೊಂದಾದ ಬೋಂಬೆ ಬಂಟ್ಸ್ ಅಸೋಸಿಯೇಷನ್, ಪ್ರತಿ ಬಾರಿ ಎರಡು ವರ್ಷಗಳಿಗೊಮ್ಮೆ ಬದಲಾವಣೆಗೊಳ್ಳುವ, ಆಡಳಿತ ಕಾರ್ಯಕಾರಿ ಸಮಿತಿ, ಆಡಳಿತ ಸಮಿತಿ ಸದಸ್ಯರ, ಮಾಜಿ ಅಧ್ಯಕ್ಷರುಗಳು, ವಿಶ್ವಸ್ಥರ ಹಾಗೂ ಮಹಿಳಾ ವಿಭಾಗ, ಯುವ ವಿಭಾಗ, ಕಾರ್ಯಕಾರಿ ಸಮಿತಿಗಳ ಗುಂಪು ಛಾಯಾಚಿತ್ರ ತೆಗೆಯುವ ರೂಢಿಯನ್ನು ಹಲವಾರು ವರ್ಷಗಳಿಂದ ಅನುಸರಿಸುತ್ತಾ ಬಂದಿದೆ. ಆ ಪರಿಕ್ರಮ, ಚುನಾಯಿತಗೊಂಡ ಪ್ರತಿಯೊಂದು ಆಡಳಿತ ಸಮಿತಿಯಿಂದ ನಡೆಯುವ ವಾರ್ಷಿಕ ಮಹಾಸಭೆಯ ಮುಂಚಿತವಾಗಿ ನಡೆಯುತ್ತದೆ. ಅದೇ ರೀತಿ ಈ ಬಾರಿಯ ಆಡಳಿತ ಸಮಿತಿಯ (2024 -2026) ವಾರ್ಷಿಕ ಮಹಾಸಭೆಯು ನವೆಂಬರ್ 16 ರಂದು ನಡೆಯಲಿರುವುದರಿಂದ, ಗುಂಪು ಛಾಯಾಚಿತ್ರದ ಕಾರ್ಯಕ್ರಮವನ್ನು ಅಕ್ಟೋಬರ್ 18 ರಂದು ಸಂಜೆ 4.00 ಗಂಟೆಗೆ ಸಯನ್ ನಿತ್ಯಾನಂದ ಸಭಾಗೃಹದಲ್ಲಿ ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಡಳಿತ ಸಮಿತಿ ಕಾರ್ಯಕಾರಿ ಸದಸ್ಯರು, ಮಾಜಿ ಅಧ್ಯಕ್ಷರು, ವಿಶ್ವಸ್ಥರು, ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ಮಹಿಳಾ ವಿಭಾಗ ಮತ್ತು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿಯ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಮತ್ತು ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ ಇವರು ಭೇಟಿ ನೀಡಿದ ಸಂದರ್ಭ ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸೂರ್ಯಕಾಂತ್ ಜೆ ಸುವರ್ಣ ಅವರು ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸಿವಿಲ್ ಕಂಟ್ರಾಕ್ಟರ್ ಶಿವಪ್ರಸಾದ ರೈ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಸೂರ್ಯಕಾಂತ್ ಸುವರ್ಣರವರ ಅಭಿಮಾನಿಗಳಾದ ಮೋಹನ್ ಕೋಟ್ಯಾನ್, ಯೋಗೀಶ್ ಕೋಟ್ಯಾನ್,…
ಸಾಮಾಜಿಕ ಜೀವನದ ಜೊತೆ ಜೊತೆಗೆ ಆರ್ಥಿಕ ಸ್ವಾವಲಂಬನೆಯ ಕಡೆಗೆ ಗಮನ ಹರಿಸಬೇಕು – ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು
ಯುವ ಜನತೆ ಉದ್ಯೋಗಾಸಕ್ತಿಗಿಂತ ಹೆಚ್ಚು ಉದ್ಯಮಶೀಲತೆಯ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಜೀವನದ ಜೊತೆ ಜೊತೆಗೆ ಆರ್ಥಿಕ ಸ್ವಾವಲಂಬನೆಯ ಕಡೆಗೆ ಗಮನ ಹರಿಸಬೇಕು ಎಂದು ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಅಭಿಪ್ರಾಯ ಪಟ್ಟರು. ಅವರು ಅ. 27 ರಂದು ಕಾರ್ಕಳದ ಕಟೀಲ್ ಇಂಟರ್ನ್ಯಾಷನಲ್ ಹೋಟೆಲ್ ನಲ್ಲಿ ಶುಭಾರಂಭಗೊಂಡ ಕೌಟುಂಬಿಕ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯ ಶಕ್ತಿ ಇವೆಂಟ್ಸ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಂಗಳೂರು ಮತ್ತು ಮಂಗಳೂರು ಭಾಗದಲ್ಲಿ ಹೆಚ್ಚಿನ ಇವೆಂಟ್ ಕಂಪನಿಗಳು ಕಾರ್ಯಾಚರಿಸುತ್ತಿದ್ದು, ಕಾರ್ಕಳದಲ್ಲಿ ಶಕ್ತಿ ಇವೆಂಟ್ಸ್ ಸಂಸ್ಥೆ ಆರಂಭವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಯಶಸ್ವಿಯಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಬೋಳ ಶ್ರೀನಿವಾಸ್ ಕಾಮತ್, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು ಮತ್ತು ನಿತ್ಯಾನಂದ ಪೈ ಉಪಸ್ಥಿತರಿದ್ದರು. ಸಂಸ್ಥೆಯ ಪಾಲುದಾರರಾದ ಗುರುಪ್ರಸಾದ್ ನಾರಾವಿ, ಶ್ರೀಕಾಂತ್ ಶೆಟ್ಟಿ ಮತ್ತು ಸಂತೋಷ್ ಸ್ವಾಗತಿಸಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಸಮಾಜದ ಸಂಕಷ್ಟದ ಸಮಯದಲ್ಲಿ ಸ್ವಯಂ ಸ್ಫೂರ್ತಿಯಿಂದ ಮುನ್ನುಗ್ಗಿ ಕಾರ್ಯಪ್ರವೃತ್ತರಾಗುವ ತೀರಾ ಅಪರೂಪದ ವ್ಯಕ್ತಿಗಳಲ್ಲಿ ದಿ| ಜಲಂಧರ ರೈ ಪ್ರಮುಖರು. ಅವರು ಓರ್ವ ನಿಸ್ಪೃಹ ಸರ್ವ ಸಮರ್ಪಿತ ಕಾರ್ಯಕರ್ತ. ಕಾರ್ಕಳದ ಅಜೆಕಾರು ಮತ್ತು ಕೋಟೆಕಾರಿನ ಆನಂದಾಶ್ರಮ ಪ್ರೌಢ ಶಾಲೆಗಳಲ್ಲಿ ಜನಮನ ಗೆದ್ದ ಅಧ್ಯಾಪಕರಾಗಿ, ಸಾಮಾಜಿಕ ಸಂಘಟಕರಾಗಿ, ಕ್ರೀಡಾ ತರಬೇತುದಾರರಾಗಿ, ಯಕ್ಷಗಾನ ಕಲಾವಿದರಾಗಿ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಬಹುಮುಖೀ ಸಾಧಕರಾಗಿ ಸಾವಿರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಅವರು ನಾಡಿನಾದ್ಯಂತ ಸಂಚರಿಸಿದ ಧೀಮಂತ ನಾಯಕ. ಶ್ರೇಷ್ಠ ಮಾನವತಾವಾದಿ ಎಂದು ದಿ| ಜಲಂಧರ ರೈ ಅವರ ನಿಕಟವರ್ತಿ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಬೀರಿ ಕೋಟೆಕಾರ್ ಮತ್ತು ಶ್ರೀ ಗಣೇಶ ಭಜನಾ ಮಂದಿರ ಬೀರಿ ಆಶ್ರಯದಲ್ಲಿ ಆನಂದಾಶ್ರಮ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಹಿತೈಷಿಗಳ ಸಹಕಾರದೊಂದಿಗೆ ದಿ| ಎಸ್. ಜಲಂಧರ ರೈ ಅವರ 25 ನೇ ವರ್ಷದ ಪುಣ್ಯ ಸ್ಮರಣೆಗಾಗಿ ಸಂಕೊಳಿಗೆಯ ಶಕ್ತಿ…














