Author: admin
ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ “ನವೋದಯ ಸ್ವ ಸಹಾಯ ಗುಂಪುಗಳ 25ನೇ ವರ್ಷದ ರಜತ ಸಂಭ್ರಮ”ದ ಕಾರ್ಯಕ್ರಮವು ಮೇ 10 ರಂದು ಗೋಲ್ಡ್ ಫಿಂಚ್ ಸಿಟಿ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರದ ಥಾವರ್ ಚಂದ್ ಗೆಹ್ಲೊಟ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಡಿ.ಕೆ. ಶಿವಕುಮಾರ್, ಡಾ.ವೀರೇಂದ್ರ ಹೆಗ್ಗಡೆ, ಡಾ. ಎಂ.ಎನ್ ರಾಜೇಂದ್ರಕುಮಾರ್, ಯು ಟಿ. ಖಾದರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಶೋಕ್ ಕುಮಾರ್ ರೈ ಪುತ್ತೂರು, ವೇದವ್ಯಾಸ್ ಕಾಮತ್, ಐವನ್ ಡಿಸೋಜ, ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ರಮಾನಾಥ್ ರೈ, ಮಿಥುನ್ ರೈ, ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಇವರುಗಳು ಜೊತೆಗಿದ್ದರು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಟ್ರಸ್ಟ್ ನ ಸಂಸ್ಥಾಪಕರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ರವರು ಗೌರವಿಸಿದರು. ಈ ಸಂದರ್ಭದಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು,…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ನೂತನ ಕಿನ್ನಿಗೋಳಿ ಘಟಕದ ಉದ್ಘಾಟನೆಯು ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಟಪದ ಬಳಿ ನಡೆಯಿತು. ಕಟೀಲು ಕ್ಷೇತ್ರದ ಅರ್ಚಕರಾದ ವೇದಮೂರ್ತಿ ಲಕ್ಷ್ಮೀನಾರಾಯಣ ಅಸ್ರಣ್ಣರವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ನೂತನ ಕಿನ್ನಿಗೋಳಿ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಡ್ಕೂರು ಕ್ಷೇತ್ರದ ಅರ್ಚಕ ರಾಮದಾಸ ಆಚಾರ್ಯ, ಸುರಗಿರಿ ಕ್ಷೇತ್ರದ ಪ್ರಧಾನ ಅರ್ಚಕ ವಿಶ್ವೇಶ್ವರ ಭಟ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ, ಮಲ್ಲಿಕಾ ಯಶವಂತ ಶೆಟ್ಟಿ ಬಳಕುಂಜಗುತ್ತು, ಧನಂಜಯ ಶೆಟ್ಟಿಗಾರ ದುಬೈ, ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಯಾದವ ದೇವಾಡಿಗ, ಧನಪಾಲ ಶೆಟ್ಟಿ ತಾಳಿಪಾಡಿ…
ಮಂಗಳೂರಿನ ಬಳ್ಳಾಲ್ ಬಾಗ್ ಪತ್ತುಮಡಿ ಸೌಧದಲ್ಲಿ ನೂತನವಾಗಿ ರಚಿತವಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ಸಭೆಯು ಅಧ್ಯಕ್ಷರಾದ ರಾಜಾರಾಮ ಹೊಳ್ಳ ಕೈರಂಗಳ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಹವ್ಯಾಸಿ ಘಟಕದಿಂದ ಪ್ರತಿ ತಿಂಗಳಲ್ಲಿ ಒಂದು ಕಾರ್ಯಕ್ರಮವನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವ ಬಗ್ಗೆ, ಯಕ್ಷಗಾನ ಸಂಘಗಳ ಅರ್ಹ ಸದಸ್ಯರನ್ನು ಘಟಕಕ್ಕೆ ಸೇರ್ಪಡೆಗೊಳಿಸುವುದರೊಂದಿಗೆ ಆಯಾಯ ಪರಿಸರದಲ್ಲಿ ಯಕ್ಷಗಾನೀಯ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚರ್ಚಿಸಲಾಯಿತು. ಜೂನ್ 1ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದು ಮತ್ತು ಹವ್ಯಾಸಿ ಕಲಾವಿದರ ಮಾಹಿತಿ ಸಂಗ್ರಹಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಘಟಕದ ಗೌರವಾಧ್ಯಕ್ಷರಾದ ಮಧುಕರ ಭಾಗವತ ಕುಳಾಯಿ, ಉಪಾಧ್ಯಕ್ಷರಾದ ತೋನ್ಸೆ ಪುಷ್ಕಲ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕೋಶಾಧಿಕಾರಿ ವಿಜಯ ಶಂಕರ ಆಳ್ವ ಮಿತ್ತಲಿಕೆ, ಸಹ ಕಾರ್ಯದರ್ಶಿ ಗಣೇಶ್ ಬಿ ಕುಂಜತ್ತೂರು, ಸಹ ಸಂಚಾಲಕರಾದ ಹರಿಶ್ಚಂದ್ರ ನಾಯ್ಗ ಮಾಡೂರು ಭಾಗವಹಿಸಿದ್ದರು. ಘಟಕದ ಸಂಚಾಲಕರಾದ ಸದಾಶಿವ…
ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಮ್ಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿ ಜಿಲ್ಲೆಯಲ್ಲಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು ನೂರು ದಿನ ಪೂರೈಸಿದೆ. ಸಿನಿಮಾಕ್ಕೆ ಬಹುತೇಕ ಎಲ್ಲಾ ಟಾಕೀಸ್ ಗಳಲ್ಲಿ ಅಭೂತಪೂರ್ವ ಸ್ಪಂದನೆ ಸಿನಿಮಾಗೆ ಸಿಕ್ಕಿದೆ. ಈಗಾಗಲೇ ಗಲ್ಫ್ ದೇಶಗಳಲ್ಲಿ ಪ್ರೀಮಿಯರ್ ಶೋ ನಡೆದಿದ್ದು, ಮತ್ತೆ ಮತ್ತೆ ಈ ಸಿನಿಮಾ ಬಿಡುಗಡೆಗೆ ಗಲ್ಪ್ ದೇಶಗಳಿಂದ ಬೇಡಿಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈ, ಮಸ್ಕತ್, ಬೆಹರಿನ್ , ಸೌದಿ ಅರೇಬಿಯಾಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. 100 ದಿನ ಪೂರೈಸಿದ ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ತಂಡದ ಮತ್ತೊಂದು ಕೊಡುಗೆ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ಯು ಪ್ರೇಕ್ಷಕರ ಮನ ಗೆದ್ದು ಭರ್ಜರಿ 100 ದಿನ ಪೂರೈಸಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ದೇಶಕ ರಾಹುಲ್ ಅಮೀನ್ ‘ರಾಜ್ ಸೌಂಡ್ಸ್…
ಚೇಳ್ಯಾರ್ ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವ ಮೇ 14 ಮತ್ತು ಮೇ 15 ರಂದು ಜರಗಲಿದೆ. ಮೇ 14 ರಂದು ಬೆಳಿಗ್ಗೆ 7-00 ಗಂಟೆಗೆ ಮೀನು ಹಿಡಿಯುವಿಕೆ, ನಂತರ ಮೂಲಸ್ಥಾನದಲ್ಲಿ ಗಣಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 5-00 ರಿಂದ ಯಕ್ಷಗಾನ ಬಯಲಾಟ, ರಾತ್ರಿ 9-00 ಕ್ಕೆ ಬ್ರಹ್ಮಸ್ಥಾನದಲ್ಲಿ ತಂಬಿಲ, ಕುಮಾರ ಸಿರಿಗಳ ದರ್ಶನ, ದೈವಗಳ ಭಂಡಾರ ಮೂಲಸ್ಥಾನಕ್ಕೆ ಹೋಗುವುದು. ಮೇ 15 ರಂದು ಬೆಳಿಗ್ಗೆ 5-00 ಕ್ಕೆ ಧರ್ಮರಸು ಉಳ್ಳಾಯ, ಇಷ್ಟದೇವತೆ, ಬಬ್ಬರ್ಯ, ಪರಿವಾರ ದೈವಗಳಿಗೆ ನೇಮೋತ್ಸವ, ನಂತರ ನಾಗದೇವರಿಗೆ ತಂಬಿಲ, ಜಾರಂದಾಯ ಕೊಡಮಣಿತ್ತಾಯ ದೈವಗಳಿಗೆ ಜೋಡಿ ನೇಮೋತ್ಸವ, ಕೋರ್ದಬ್ಬು ದೈವದ ಭೇಟಿ, ದೈವಗಳಿಗೆ ಸಾಮೂಹಿಕ ಹೂವಿನ ಪೂಜೆ, ಅನ್ನಸಂತರ್ಪಣೆ, ರಾತ್ರಿ 8-00 ಕ್ಕೆ ಪ್ರಸನ್ನ ಶೆಟ್ಟಿ ಬೈಲೂರು ರಚಿಸಿ ನಿರ್ದೇಶಿಸಿದ “ಅಷ್ಟಮಿ” ನಾಟಕ ಪ್ರದರ್ಶನ ನಡೆಯಲಿದೆ. ವಿಶೇಷವಾಗಿ “ತುಳುನಾಡ ಸಂತೆ” ಎರಡು ದಿನ ಜರಗಲಿದೆ ಎಂದು ದೈವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ತೋಕೂರುಗುತ್ತು…
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಫರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಸೆಮಿಫೈನಲ್ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್ಗೆ ಅರ್ಹತೆ ಪಡೆದುಕೊಂಡಿತು. ಫೈನಲ್ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಮಹಿಳಾ ತಂಡವು ಸೆಮಿಫೈನಲ್ ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ವತಿಯಿಂದ ಅಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಒಂದು ದಿನದ ರಾಷ್ಟ್ರಿಯ ಸಮ್ಮೇಳನ ‘’ಆಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್-ಗ್ಲೋಬಲ್ ಥ್ರೆಟ್ಸ್, ಲೋಕಲ್ ಆ್ಯಕ್ಷನ್ಸ್, ಒನ್ ಹೆಲ್ತ್ ಸೊಲ್ಯೂಷನ್ಸ್-2025’’ (ಎಎಂಆರ್-ಜಿಎಲ್ಒಎಚ್) ನಡೆಯಿತು. ಕರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತುಮಕೂರು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಿ ಪ್ರಕಾಶ್, ಆಂಟಿಮೈಕ್ರೋಬಿಯಲ್ ರೆಸಿಸ್ಟೆನ್ಸ್ ಎಂಬುದು ವೈರಸ್, ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಪರೋಪಜೀವಿಗಳು ಮೊದಲಾದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧವನ್ನು ತೋರಿಸುವ ಸಾಮರ್ಥ್ಯವನ್ನು ಹೊಂದಿದ ಸ್ಥಿತಿಯಾಗಿದೆ. 2011 ರಲ್ಲಿಯೇ ವಿಶ್ವ ಆರೋಗ್ಯ ಸಂಸ್ಥೆಯು “ಆಂಟಿ ಮೈಕ್ರೊಬಿಯಲ್ ಪ್ರತಿರೋಧವನ್ನು-ಇಂದು ಕ್ರಮವಿಲ್ಲದಿದ್ದರೆ, ನಾಳೆ ಚಿಕಿತ್ಸೆ ಇಲ್ಲ’’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಿತ್ತು. ಇಂದು ಆಳ್ವಾಸ್ ಸಂಸ್ಥೆಯು ಆಂಟಿ ಮೈಕ್ರೊಬಿಯಲ್ ಪ್ರತಿರೋಧದ ಕುರಿತು ಹೆಚ್ಚಿನ ಜ್ಞಾನವನ್ನು ನೀಡುವ ಸಲುವಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ. ಆರೋಗ್ಯವೃತ್ತಿಪರರಾಗಿ ನಾವು ಈ ಎಲ್ಲಾ ಆಂಟಿ ಮೈಕ್ರೊಬಿಯಲ್ ಪ್ರತಿರೋಧದ ಸಮಗ್ರ ಮಾಹಿತಿಯನ್ನು ಪಡೆದುಕೊಂಡು, ಅದು ಹೇಗೆ ಪರಿಣಾಮ…
ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ 8ನೇ ಪುಣ್ಯ ಸಂಸ್ಮರಣೆ : 40 ಅಶಕ್ತರಿಗೆ, 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ರೂ 10 ಲಕ್ಷ ಆರ್ಥಿಕ ಸಹಾಯ ವಿತರಣೆ
ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ ಚಾರಿಟೇಬಲ್ ಫೌಂಡೇಶನ್, ಪಾಪ್ಯುಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆ ಆಶ್ರಯದಲ್ಲಿ ಸಂಸ್ಥೆಯ ಸ್ಥಾಪಕ ಕಾರ್ಯಾಧ್ಯಕ್ಷ ಹಾಗೂ ಸಂಚಾಲಕರಾಗಿದ್ದ ದಿ. ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ ಅವರ 8ನೇ ಪುಣ್ಯ ಸಂಸ್ಮರಣಾ ಕಾರ್ಯಕ್ರಮವು ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಫೌಂಡೇಷನ್ ಹಾಗೂ ಪ್ರೌಢಶಾಲೆಯ ಸಂಚಾಲಕರಾದ ಕೆ. ಕರುಣಾಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪಾಪ್ಯುಲರ್ ಜಗದೀಶ ಸಿ ಶೆಟ್ಟಿಯವರ ಪ್ರತಿಮೆಗೆ ಹೂ ಹಾರ ಹಾಗೂ ಪುಷ್ಪ ನಮನ ಸಲ್ಲಿಸಿದರು. ಬಳಿಕ 40 ಮಂದಿ ಆಶಕ್ತರಿಗೆ ಹಾಗೂ 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒಟ್ಟು 10 ಲಕ್ಷರೂ. ಸಹಾಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಂಟ್ಸ್ ವೆಲ್ಫೇರ್ ಟ್ರಸ್ಟಿನ ಹಾಗೂ ಪಾಪ್ಯುಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲಾ ಕಾರ್ಯದರ್ಶಿ ಗೋಪಿನಾಥ ಹೆಗ್ಡೆ ಪಾಪ್ಯುಲರ್ ಜಗದೀಶ ಸಿ.ಶೆಟ್ಟಿಯವರ ಆದರ್ಶ, ಮಾರ್ಗದರ್ಶನ ನಮಗೆ ದಾರಿದೀಪ. ಉತ್ತಮ ಶಿಕ್ಷಣ ಸಂಸ್ಥೆಯಾಗಬೇಕು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಆಶಕ್ತರಿಗೆ ಧನ ಸಹಾಯ ಅವರ ಕನಸು ಈಡೇರಿಸುವ ಪ್ರಾಮಾಣಿಕ…
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಶ್ರೀ ಅರಸು ಮುಂಡಿತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮಂಗಳೂರಿನ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಹೊರಡಿಸಿರುತ್ತಾರೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಪಜೀರು ಅಜೆಕಳಗುತ್ತು ಪ್ರದೀಪ್ ಆಳ್ವ ಕದ್ರಿ ಆಯ್ಕೆ ಮಾಡಲಾಗಿದೆ. ಸದಸ್ಯರಾಗಿ ಸುಬ್ರಾಯ ಪೂಜಾರಿ ಭಂಡಾರಮನೆ, ಜಗದೀಶ್ ಆಳ್ವ ಕುವೆತ್ತಬೈಲು, ವಿಶ್ವಾಸ್ ರೈ ಬಂಗದಾರೆಗುತ್ತು, ಪುರಂದರ ವಜಲಗುಡ್ಡೆ, ಸರಸ್ವತಿ ಅಡ್ಕ, ಭಾರತಿ ಗಟ್ಟಿ ಕೊರಂತೋಡಿ, ರಂಗನಾಥ ಪೂಂಜ ಅಜೆಕಳಗುತ್ತು, ರಮೇಶ್ ಸಪಲ್ಯ ಗಾಣದಮನೆ ಇವರುಗಳನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮದ ಕುರಿತು ಬಲ್ಲಾಲ್ ಬಾಗ್ ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಲ ದಶಮ ಸಂಭ್ರಮದ ಹಿನ್ನಲೆಯಲ್ಲಿ ಎಲ್ಲಾ ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿ ಕೊಡಲಾಗುವುದು. ಕಳೆದ 10 ವರ್ಷಗಳಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ 15 ಕೋಟಿ ರೂಪಾಯಿ ಮೊತ್ತದ ಸೇವಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಪ್ರತೀ ವರ್ಷ ಹಣ ಸಂಗ್ರಹಿಸುವುದನ್ನು ಬಿಟ್ಟು 10 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸುವ ಗುರಿ ಹೊಂದಿದೆ. ಎಲ್ಲಾ ಘಟಕಗಳು ಕನಿಷ್ಠ ಹತ್ತು ಮಂದಿ ಟ್ರಸ್ಟಿಗಳನ್ನು ಮಾಡಿ ಫೌಂಡೇಶನ್ ಟ್ರಸ್ಟ್ ಗೆ…