Author: admin

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಉಡುಪಿ ಘಟಕ ವತಿಯಿಂದ ಗೌರವಾರ್ಪಣಾ ಕಾರ್ಯಕ್ರಮ ಉಡುಪಿ ಪುರಭವನದಲ್ಲಿ ನಡೆಯಿತು. ಪ್ರೊ. ಪವನ್ ಕಿರಣ್ ಕೆರೆ ಇವರು ಫೌಂಡೇಷನ್’ನ ಕಾರ್ಯವೈಖರಿಯ ಬಗ್ಗೆ ಆಶಯ ಭಾಷಣದಲ್ಲಿ ನುಡಿದರು. ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರಾದ ಟಿ. ಶ್ಯಾಮ್ ಭಟ್ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಮಾಹೆ ಮಣಿಪಾಲ ಇದರ ಡಾ. ಹೆಚ್. ಯಸ್ ಬಲ್ಲಾಳ್, ಪ್ರೊ ಎಂ. ಎಲ್. ಸಾಮಗ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಡಿ, ಉಡುಪಿ ಘಟಕದ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಸಂಚಾಲಕರಾದ ಸುಧಾಕರ ಆಚಾರ್ಯ, ಮಹಿಳಾ ಘಟಕದ ಸದಸ್ಯೆಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರೀಯ ಘಟಕಕ್ಕೆ ಗೌರವನಿಧಿಯನ್ನು ಸಮರ್ಪಿಸಲಾಯಿತು. ಉಡುಪಿ ಘಟಕದ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಇವರು ಸ್ವಾಗತಿಸಿ, ಶಿಲ್ಪಾ ಜೋಷಿ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ತೆಂಕು ಬಡಗುತಿಟ್ಟಿನ ಕಲಾವಿದರಿಂದ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ ನಡೆಯಿತು.

Read More

ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ, ಹಲವಾರು ಸರಕಾರಿ ನೇಮಕಾತಿಗಳಲ್ಲಿ ನೇಮಕಗೋಳ್ಳುವಂತೆ ಮಾಡಿದ ಕೀರ್ತಿಯನ್ನು ಹೊತ್ತು ಮುನ್ನಡೆಯುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳು ಪ್ರಾರಂಭಗೊಂಡವು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿತಾರಾಗಿದ್ದ ಜೆ.ಸಿ.ಐ ಪುತ್ತೂರು ಇದರ ಸದಸ್ಯರು, ಶಿಶು ಮಂದಿರ ಪುತ್ತೂರು ಇದರ ಶ್ರೀ ಕೃಷ್ಣ ಜನ್ಮಾಷ್ಠಮಿ 2025ರ ಉಪಾಧ್ಯಕ್ಷರು, ಲಶ್ ಪ್ಯಾಶನ್ ಇದರ ಮಾಲಿಕರಾದ ಮಾಲಿನಿ ಕಶ್ಯಪ್ ರವರು ಮಾತನಾಡಿ, ಸ್ಥಳೀಯ ಮಟ್ಟದಲ್ಲಿ ಚಿಕ್ಕ ವಯಸ್ಸಿನ ಮಕ್ಕಳಿಗೆ ಪೂರಕವಾದ ತರಬೇತಿ ನೀಡಿ ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಿರುವ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದ್ದು, ನಾವೆಲ್ಲರೂ ವಿದ್ಯಾಮಾತಾ ಅಕಾಡೆಮಿಯ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾಮಾತಾ ಅಕಾಡೆಮಿಯ ಆಡಳಿತ…

Read More

ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 06 ಜುಲೈ 2025 ರಂದು ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಪೂರ್ಣ ಭಟ್ ಕೆ.ಎಲ್, ಸೃಜನ್ ಎಸ್. ಭಟ್, ಅಫ್ಸರ್ ಫಾಹಿಮ್, ಬಸವ ಪ್ರಸಾದ್ ಕಾಜಿ, ಪ್ರಭವ್ ಗೋಪಾಲ್ ಶೆಟ್ಟಿ, ಸೌರವ್ ರವಿ ಶೇಟ್, ಆರ್ಯ ಬಿ.ವಿ, ಹೆಗ್ಡೆ ಪ್ರತ್ವಿಕ್, ಶ್ರದ್ಧಾ ಪ್ರಕಾಶ್ ಅಂಗಡಿ, ರೇಷ್ಮ ಜಿ.ಕೆ, ಶ್ರೀಕಾರ್ ದುಬೀರ ರವರು ಕ್ರಮವಾಗಿ 264, 249, 238, 238, 233, 225, 212, 212, 210, 204, 202, ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ಪರೀಕ್ಷೆ ಬರೆದಿರುವ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಅರ್ಹತೆಯನ್ನು ಗಳಿಸಿರುತ್ತಾರೆ. ರಾಷ್ಟ್ರೀಯ ಮಟ್ಟದ ಒಟ್ಟು ಫಲಿತಾಂಶದಲ್ಲಿ 15% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ ಕ್ರಿಯೇಟಿವ್ ವಿದ್ಯಾ ಸಂಸ್ಥೆಯಲ್ಲಿ ಪರೀಕ್ಷೆ ತೆಗೆದುಕೊಂಡ ಒಟ್ಟು ವಿದ್ಯಾರ್ಥಿಗಳಲ್ಲಿ 55% ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು…

Read More

ಕಾರ್ಕಳ : ಯೋಜನಾ ಬದ್ಧ ಅಧ್ಯಯನ, ಶಿಸ್ತುಬದ್ದ ಕಲಿಕೆಯಿಂದ ಉನ್ನತ ಗುರಿಗಳನ್ನು ತಲುಪಲು ವಾಣಿಜ್ಯ ವಿದ್ಯಾರ್ಥಿಗಳಿಗೆ ಬಹು ಅವಕಾಶಗಳಿವೆ. ಜಾಗತೀಕರಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದ ವಾಣಿಜ್ಯ ಕ್ಷೇತ್ರದಲ್ಲಿ ಇಂದು ಉದ್ಯೋಗಾವಕಾಶಗಳು ಹೆಚ್ಚಿನ ಯುವಜನತೆಯನ್ನು ಆಕರ್ಷಿಸುತ್ತಿವೆ ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸAಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ವೃತ್ತಿಪರ ಕೋರ್ಸುಗಳ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿ.ಕಾಂ ಪದವಿಯ ಜೊತೆಗೆ ಸಿ.ಎ ಮಾಡಬಹುದು. ವಾಣಿಜ್ಯ ಶಾಸ್ತçದ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅತ್ಯಂತ ಪ್ರತಿಷ್ಠಿತ ಮತ್ತು ಹೆಚ್ಚು ಪ್ರತಿಫಲ ನೀಡುವ ವೃತ್ತಿ ಆಯ್ಕೆಗಳಲ್ಲಿ ಚಾರ್ಟಡ್ ಅಕೌಂಟೆoಟ್, ಕoಪೆನಿ ಸೆಕ್ರೆಟರಿ, ಎ.ಸಿ.ಸಿ.ಎ, ಸಿ.ಐ,ಎಂ,ಎ, ಎನ್.ಸಿ.ಎಫ್.ಎಂ, ಸಿ.ಎಂ.ಎ ಈ ಎಲ್ಲಾ ಕೋರ್ಸುಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಉಷಾ ರಾವ್ ಯು, ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಡೀನ್ ಶ್ರೀ ಮಿಥುನ್ ಯು, ವಾಣಿಜ್ಯ ವಿಭಾಗದ…

Read More

ಮೂಡುಬಿದಿರೆ: ೨೦೨೫ ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಸ್ನೇಹಲ್ ಜೆ, ವಿಲ್ಸನ್, ಈಶ್ವರ್, ಸುಹಾನ್ ಶಿವಯೋಗಿ, ದೀಕ್ಷಾ, ಪವನ್ ಕುಮಾರ್, ಗುರುಪ್ರಸಾದ್ ಹೆಗ್ಡೆ, ಶೆಟ್ಟಿ ನಿಶಾ, ನವೀನ್ ಪೈ, ಶ್ರೀಸಮರ್ಥ್, ಸುಪ್ರಿಯಾ, ಭಾಸ್ಕರ್ ಪೂಜಾರಿ, ಉಮಾಂಗ್ ಇನಾನಿ, ವೆಂಕಟೇಶ್ ಪ್ರಸಾದ್, ಸೃಷ್ಟಿ ಎಸ್. ಪ್ರಭು, ಮಧುರಾ, ಗೌತಮಿ, ರಕ್ಷಾ ಆರ್ ಶೆಟ್ಟಿ, ಸಂಗೀತಾ ಹೆಗ್ಡೆ, ಸೋಮನಾಥ್, ಸ್ವಾತಿ, ಚೈತನ್ಯಾ, ಆದಿತ್ಯಾ ರಾವ್, ಕೌಶಿಕ್ ಯು.ಪಿ., ಅಕ್ಷತ್ ಕೆ ಮತ್ತು ಚಿನ್ಮಯ ಯು.ಎಲ್. ಸೇರಿದಂತೆ ಒಟ್ಟು ೨೬ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊoದಿಗೆ ಉತ್ತೀರ್ಣರಾಗಿ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು. ಅವರು ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಛೇರಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಕಳೆದ ಮೂರು ವರ್ಷಗಳಲ್ಲಿ ೧೧೫ ವಿದ್ಯಾರ್ಥಿಗಳು ಸಿಎ ಅಂತಿಮ ಪರೀಕ್ಷೆ ಉತ್ತೀರ್ಣರಾಗುವ ಮೂಲಕ ಆಳ್ವಾಸ್‌ನ…

Read More

ಸರಕಾರಿ ಪ್ರೌಢಶಾಲೆ ನಾಲ್ಯಪದವು ಶಕ್ತಿನಗರದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಣ ಅಭಿಯಾನವು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಸಹಯೋಗದಲ್ಲಿ 2025 – 26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆಯು ಜೂನ್ 28 ರಂದು ಶನಿವಾರ ಬೆಳಗ್ಗೆ ಗಂಟೆ 9.30ಕ್ಕೆ ಸರಿಯಾಗಿ ನೆರವೇರಿತು. ಪಟ್ಲ ಟ್ರಸ್ಟಿನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಲಯನ್ ಪ್ರದೀಪ್ ಆಳ್ವ ಕದ್ರಿ, ಮಂಗಳೂರು ಘಟಕದ ಅಧ್ಯಕ್ಷರಾದ ಲಯನ್ ತಾರಾನಾಥ ಶೆಟ್ಟಿ, ಕೋಶಾಧಿಕಾರಿ ಶ್ರೀ ಗೋಪಿನಾಥ ಶೆಟ್ಟಿ, ಪದಾಧಿಕಾರಿಗಳಾದ ಶ್ರೀ ಸಂತೋಷ್ ಶೆಟ್ಟಿ, ಯಕ್ಷಗುರು ಶ್ರೀ ವಿಶ್ವನಾಥ ಶೆಟ್ಟಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಜೆ, ಪದವು ಫ್ರೆಂಡ್ಸ್ ಅಧ್ಯಕ್ಷರಾದ ಕುಶಲ್ ಕುಮಾರ್, ವಿದ್ಯಾ ದೀವಿಗೆ ಟ್ರಸ್ಟ್ ಅಧ್ಯಕ್ಷರಾದ ದೇವಾನಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಟೋನಿ ಪಿಂಟೋ, ಶಾಲಾ ಸಂಚಾಲಕರದ ಅಶೋಕ್ ನಾಯ್ಕ್, ಶಾಲಾ ಮುಖ್ಯೋಪಾಧ್ಯಾಯನಿ ದಾಕ್ಷಯಣಿ ಈ ಸಂಧರ್ಭ ಉಪಸ್ಥಿತರಿದ್ದರು.

Read More

ಚಿಣ್ಣರಬಿಂಬ ಸಂಸ್ಥೆಯು ಮಹಾರಾಷ್ಟ್ರದ ಮರಾಠಿ ಮಣ್ಣಿನಲ್ಲಿ ಕನ್ನಡದ ಕಲರವವನ್ನು ಮಾಡುತ್ತಾ, ಚಿಣ್ಣರ ಮುಖೇನ ಕನ್ನಡದ ತೇರನ್ನು ಎಳೆಯುವುದರ ಜೊತೆಗೆ ಅದರ ಕಂಪನ್ನು ಎಲ್ಲೆಡೆ ಪಸರಿಸುತ್ತಿರುವ ಕೆಲಸವನ್ನು ಮಾಡುತ್ತಿದೆ. ಇದು ತುಳು ಕನ್ನಡಿಗರಾದ ನಮಗೆಲ್ಲಾ ಹೆಮ್ಮೆಯ ವಿಷಯ. ಚಿಣ್ಣರಬಿಂಬ ಚಿಣ್ಣರಿಗೆ ಸಂಸ್ಕೃತಿ ಸಂಸ್ಕಾರವನ್ನು ಕಲಿಸುವ ಒಂದು ವಿದ್ಯಾಲಯ ಎಂದರೂ ತಪ್ಪಾಗಲಾರದು. ಮಕ್ಕಳಿಗೆ ನಾಡು, ನುಡಿ, ಸಂಪ್ರದಾಯದ ಜೊತೆಗೆ ಗುರು ಹಿರಿಯರಿಗೆ ಗೌರವ, ಭ್ರಾತೃತ್ವದ ಭಾವ, ಶಿಸ್ತು, ಸಮಯ ಪರಿಪಾಲನೆ, ರಾಷ್ಟ್ರಪ್ರೇಮ, ಧಾರ್ಮಿಕತೆ, ಆಧ್ಯಾತ್ಮಿಕತೆಯ ಅರಿವು, ಹಬ್ಬ ಹರಿದಿನಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸುವುದು ಈ ಸಂಸ್ಥೆಯ ವೈಶಿಷ್ಟ್ಯತೆಯಾಗಿದೆ. ಇಲ್ಲಿ ಯಾವುದೇ ಜಾತಿ, ಧರ್ಮಗಳ ಭೇದವಿಲ್ಲ. ಸುಮಾರು 6 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಮುಕ್ತ ವಾತಾವರಣದಲ್ಲಿ ಬೆಳೆಯುವ ನೆಮ್ಮದಿಯ ತಾಣವೆಂದರೂ ಅತಿಶಯೋಕ್ತಿಯಾಗಲಾರದು. ಸುಮಾರು 23 ವರ್ಷಗಳ ಮೊದಲು ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿರುವ ತುಳು ಕನ್ನಡಿಗರ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವ ಆ ಸಮಯದಲ್ಲಿ ಮಕ್ಕಳ ಹಿತಾಸಕ್ತಿಯ ಬಗ್ಗೆ ಯೋಚನೆಯನ್ನು ಮಾಡುತ್ತಾ ಅವರ ಭವಿಷ್ಯದ…

Read More

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ (ಎನ್‌ಜಿಒ) ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಎಂ ಶೆಟ್ಟಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಒತ್ತಾಯಿಸಿ ಮನವಿ ಪತ್ರವನ್ನು ಮಂಗಳೂರು ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್‌ವಿ ಐಎಎಸ್ ಮತ್ತು ಪೊಲೀಸ್ ಆಯುಕ್ತ ಶ್ರೀ ಸುಧೀರ್ ಕುಮಾರ್ ರೆಡ್ಡಿ ಐಪಿಎಸ್ ಅವರಿಗೆ ಸಲ್ಲಿಸಿದರು.ಸಮಿತಿಯ ರಾಜ್ಯ ಸಂಯೋಜಕ ಶ್ರೀ ಜಗದೀಶ್ ಅಧಿಕಾರಿ ಕೆ ಪಿ ಮತ್ತು ಉಪಾಧ್ಯಕ್ಷ ಶ್ರೀ ಅರುಣ್‌ ಪ್ರಕಾಶ್ ಶೆಟ್ಟಿ ಮತ್ತು ಸದಸ್ಯ ಶ್ರೀ ಶಕೀಬ್ ಈ ಸಂದರ್ಭದಲ್ಲಿ ಹಾಜರಿದ್ದರು.

Read More

ಸಮಾಜದ ಸರ್ವ ವರ್ಗ ಗೌರವಿಸುವ ವೃತ್ತಿ ಅದು ಶಿಕ್ಷಕ ವೃತ್ತಿ. ಕಾರಣ ಒಂದು ಆರೋಗ್ಯವಂತ ಸಮಾಜ ತನ್ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಬಹುದೊಡ್ಡ ಪಾತ್ರ ಉತ್ತಮ ಶಿಕ್ಷಕರದ್ದು. ಇಂದಿನ ಮಕ್ಕಳು ನಾಳಿನ ಜನಾಂಗ ಅವರನ್ನು ಯೋಗ್ಯ ನಾಗರೀಕರನ್ನಾಗಿ ರಾಷ್ಟ್ರದ ಯೋಗ್ಯ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರಿಗಿದೆ. ಹೀಗೆ ತನ್ನ ವೃತ್ತಿ ಗೌರವ ಹಾಗೂ ಸಾಮಾಜಿಕ ಹೊಣೆಗಳನ್ನು ಅರ್ಥ ಮಾಡಿಕೊಂಡು ತನ್ನ ಜೀವನದ ಮೂರೂವರೆ ದಶಕಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ಸಾರ್ಥಕ ಸೇವೆ ಸಲ್ಲಿಸಿ, ನಿವೃತ್ತರಾದ ಮೇಲೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡು ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಹಾಗೂ ರಾಜ್ಯಸ್ತರದ ಪ್ರಶಸ್ತಿಗಳಿಗೆ ಭಾಜನರಾದ ಅಪರೂಪದ ನಿವೃತ್ತ ಶಿಕ್ಷಕ ಕೆ. ರವೀಂದ್ರ ರೈಯವರು ಪ್ರತಿಷ್ಠಿತ ಉಳ್ಳಾಲ ವಲಯ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಸಾಹಿತಿಯಾಗಿ, ಸಂಘಟಕರಾಗಿ, ಕಾರ್ಯಕ್ರಮ ಸಂಯೋಜಕರಾಗಿ, ನಿರ್ವಾಹಕರಾಗಿ, ಕೃಷಿಕರಾಗಿ ಬಹುಮುಖಿ ಸಾಧನೆಯ ಮುಖಾಂತರ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ ಹರೇಕಳದ ರಾಮಕೃಷ್ಣ ಫ್ರೌಢ ಶಾಲೆಯ…

Read More

ಯಕ್ಷ ಶಿಕ್ಷಣವು ವಿದ್ಯಾರ್ಥಿಗಳಿಗೆ ಮೊಳಕೆಯಿಂದಲೇ ಲಭ್ಯವಾದರೆ ಅದು ಹೆಮ್ಮರವಾಗಿ ಬಹುಕಾಲ ಉಳಿಯುತ್ತದೆ. ಲಕ್ಷಾಂತರ ಜನರು ಯಕ್ಷಗಾನ ಕಲೆಯ ಅಭಿಮಾನಿಗಳು ಅದರ ಸೇವೆಯ ಆರಾಧಕರು ಯಕ್ಷಗಾನದಲ್ಲಿ ಅರ್ಥಗಾರಿಕೆ ಮಾತುಗಾರಿಕೆ ಮೊದಲಾದ ನೀತಿ ನಿಯಮಗಳಿವೆ. ಶಿಕ್ಷಣ ರಂಗದಲ್ಲಿ ನೀಡುವ ಶಿಸ್ತಿನ ಜೊತೆಗೆ ಯಕ್ಷಗಾನವು ದೈಹಿಕ ವ್ಯಾಯಾಮವನ್ನು ಹೆಚ್ಚಿಸುತ್ತದೆ. ಇದರಿಂದ ಕಲಿಕೆಯಲ್ಲಿ ಏಕಾಗ್ರತೆ ಶಿಸ್ತು ಸ್ಮರಣೆ ಹೆಚ್ಚಾಗುತ್ತದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಇದರ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡುತ್ತಾ ಅನೇಕ ಕಲಾವಿದರು, ಶಿಕ್ಷಣ ಸಂಸ್ಥೆಗಳು ಇದರಿಂದ ಸಹಾಯವನ್ನು ಪಡೆದುಕೊಂಡು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಆದ್ದರಿಂದ ‘ಯಕ್ಷ ಶಿಕ್ಷಣ’ ವಿದ್ಯಾರ್ಥಿಗಳಿಗೆ ಬಹು ಅಗತ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕದ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ಹೇಳಿದರು. ಯಕ್ಷಗಾನ ಜ್ಞಾನ ವೃದ್ಧಿಸುವ ಕಲೆಯಾಗಿ, ಸಾಂಸ್ಕೃತಿಕ ಸಾಂಪ್ರದಾಯಿಕ ಪರಂಪರೆಯಾಗಿ, ಬದುಕಿಗೆ ವೃತ್ತಿ ಮತ್ತು ಪ್ರವೃತ್ತಿಯ ಶಕ್ತಿಯಾಗಿ, ನಮ್ಮ ಇರುವಿಕೆಯ ಬದುಕಿನ ತೇಜಸ್ಸನ್ನು ಹೆಚ್ಚಿಸಲು ಸಹಕಾರಿ. ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯ ಬೆಳೆಸುವ ಕಲೆಯಾಗಿ…

Read More