Author: admin
ತುಳುನಾಡಿನ ಕಲೆ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ತ್ರಿರಂಗ ಸಂಗಮದ ಪಾತ್ರ ಬಹಳವಿದೆ. ಇದರ ರೂವಾರಿಗಳಾದ ಕಲಾ ಸಂಘಟಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ ಬಾಳಿಕೆ ಅವರು ನಿರಂತರ ಕಲೆ ಹಾಗೂ ಕಲಾವಿದರಿಗಾಗಿ ವೇದಿಕೆ ಒದಗಿಸುವುದರೊಂದಿಗೆ ನಮ್ಮ ಧರ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ. ಇಂತಹ ಕಲಾವಿದರಿಗೆ ನಾವು ಪ್ರೋತ್ಸಾಹ ನೀಡಬೇಕು. ಇವರಿಂದ ಕಲಾ ಸೇವೆ ನಿರಂತರ ನಡೆಯುತ್ತಿರಲಿ ಎಂದು ಉದ್ಯಮಿ ವೆಲ್ಕಂ ಪ್ಯಾಕೇಜ್ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ರವೀಂದ್ರನಾಥ್ ಭಂಡಾರಿ ತಿಳಿಸಿದರು. ಕುರ್ಲಾ ಪೂರ್ವಾದ ಬಂಟರ ಭವನದಲ್ಲಿ ಫೆಬ್ರವರಿ 9ರಂದು ಜರಗಿದ ಮುಂಬೈಯ ಕಲಾ ಸಂಘಟಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ ಬಾಳಿಕೆ ನೇತೃತ್ವದ ತ್ರಿರಂಗ ಸಂಗಮ ಮುಂಬೈ ಇದರ ಮೂರನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ಪ್ರಭು ದ್ವೀಪ ಪ್ರಜ್ವಲಿಸಿ ಆಶೀರ್ವಚಿಸಿ, ನಮ್ಮ ಸಂಸ್ಕೃತಿ,…
ಮೂಡುಬಿದಿರೆ: ವೈದ್ಯಕೀಯ ನಿರ್ಧಾರಗಳು ಕ್ಲಿನಿಕಲ್ ಲ್ಯಾಬೋರೇಟರಿ ಫಲಿತಾಂಶಗಳ ಮೇಲೆ ಆಧಾರಿತವಾಗಿರುವುದರಿಂದ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ ವಿಷಯದಲ್ಲಿ ಜ್ಞಾನವರ್ಧನೆ ಅಗತ್ಯವಿದೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್ನ ಹೃದ್ರೋಗ ತಜ್ಞ ಡಾ. ಸದಾನಂದ್ ನಾಯ್ಕ ಹೇಳಿದರು. ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ವಿಭಾಗದ ವತಿಯಿಂದ `ಮೆಡಿಕಲ್ ಲ್ಯಾಬೋರೇಟರಿ ತಂತ್ರಜ್ಞಾನದಲ್ಲಿ ಆಗುತ್ತಿರುವ ನವೀಕರಣದ ಕುರಿತು ಕುವೆಂಪು ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯಕೀಯ ಸೇವೆಗಳು ನೈತಿಕತೆ ಉಳಿಸಿಕೊಂಡು ಸಾಮಾನ್ಯರಿಗೂ ಕೈಗೆಟಕುವಂತಿರಬೇಕು.ವಿದ್ಯಾರ್ಥಿಗಳು ತಂತ್ರಜ್ಞಾನಗಳ ಕುರಿತು ಹೆಚ್ಚಿನ ಅಧ್ಯಯನ ಮಾಡಿ ವೈದ್ಯಕೀಯ ಕ್ಷೇತ್ರದ ನಿರ್ಧಾರಗಳನ್ನು ಅತ್ಯಂತ ವಿಶ್ವಾಸಾರ್ಹಗೊಳಿಸುವಲ್ಲಿ ಸಹಕರಿಸಬೇಕು ಎಂದರು. ಸAಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಎಜೆ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಅರವಿಂದ್, ಟ್ರಾನ್ಸ್ಫ್ಯೂಷನ್ ಮೆಡಿಸಿನ್ನಲ್ಲಿ ವಿಶೇಷವಾಗಿ ರಕ್ತ ನಿಧಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಗತ್ಯವಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಬಯೋಕೆಮಿಸ್ಟಿç ವಿಭಾಗದ ಮುಖ್ಯಸ್ಥ ಡಾ.…
ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 15ರವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ನೇತೃತ್ವದಲ್ಲಿ ನವೋದಯ ಸ್ವಸಹಾಯ ಸಂಘ ಮತ್ತು ಊರ ಸಮಸ್ತರಿಂದ 17ನೇ ವರ್ಷದ ಹೊರೆ ಕಾಣಿಕೆ ಸಮರ್ಪಣೆ ಭಾನುವಾರ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ, ಮೊಕ್ತೇಸರ ಶ್ರೀನಿವಾಸ ಶೆಟ್ಟಿ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ ಶೆಟ್ಟಿ, ನವೋದಯ ಸ್ವಸಹಾಯ ಸಂಘದ ಜಿಲ್ಲಾ ಮೇಲ್ವಿಚಾರಕ ಹರಿನಾಥ, ತಾಲೂಕು ಮೇಲ್ವಿಚಾರಕ ಕೃಷ್ಣ, ಮಂದಾರ್ತಿ ವಲಯ ಪ್ರೇರಕಿ ಶೋಭ ಭಾಗವಹಿಸಿದ್ದರು.
ತುಳುನಾಡಿನಲ್ಲಿ ಧಾರ್ಮಿಕ, ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಭಾಷೆಯ ಜಾಗೃತಿ ಮೂಡಿಸಲಾಗುತ್ತದೆ. ನಾಲ್ಕು ಕಾಲ ಬದುಕುವ, ಉಳಿಯುವಂತಹ ಸಾಹಿತ್ಯ ರಚನೆಯಾಗಬೇಕು. ನೆಲ ಮೂಲದ ಗ್ರಾಮ ಸಂಸ್ಕೃತಿಯತ್ತ ಬರಹಗಾರರು ಗಮನಿಸಬೇಕು. ತುಳುವರನ್ನು ಓದಿನೆಡೆಗೆ ಆಕರ್ಷಿಸುವಂತಹ ರಚನಾತ್ಮಕ ಕೆಲಸಗಳು ಸಾಹಿತ್ಯದಲ್ಲಿ ನಡೆಯಬೇಕು ಎಂದು ತುಳು ಕನ್ನಡ ಸಾಹಿತಿ, ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕರೆ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ರಥೋತ್ಸವ ಹಾಗೂ ತುಳುನಾಡು ಜಾತ್ರೆಯ ಸಂದರ್ಭದಲ್ಲಿ ‘25ನೇ ತುಳು ಸಾಹಿತ್ಯ ಸಮ್ಮೇಳನ’ ದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಂಗಾರದ ಬಟ್ಟಲಾಗಿದ್ದ ತುಳುನಾಡು ಈಗ ಬರಡು ನೆಲವಾಗುತ್ತಿದೆ. ಯುವಕರು ಕೃಷಿ ತ್ಯಜಿಸಿ ಪೇಟೆ ಕಡೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ವಿಚಾರ. ಇಂದು ತುಳು ಸಾಹಿತ್ಯ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಆಗುತ್ತಿದ್ದು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ತುಳು ಭಾಷೆಗೆ ಮಾನ್ಯತೆ ಸಿಗುತ್ತಿಲ್ಲ ಎಂದವರು ವಿಷಾದಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ…
ವ್ಯಕ್ತಿತ್ವ ವಿಕಸನ ಹಾಗೂ ತರಬೇತಿಗಾಗಿಯೇ ಇರುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗ್ಯೇಶ್ ರೈಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕುರಿತಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಕರ್ನಾಟಕ ಪೊಲೀಸ್, ಆರೋಗ್ಯ ಇಲಾಖೆಗಳ ಸಹಕಾರದೊಂದಿಗೆ ಪುತ್ತೂರು ತಾಲೂಕು ವ್ಯಾಪ್ತಿಯ 100 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಪುತ್ತೂರಿನ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನ ಕೊಂಬೆಟ್ಟು ಇಲ್ಲಿ ಚಾಲನೆಯನ್ನು ನೀಡಲಾಯಿತು. ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದ ಅವರು ಜೆಸಿಐ ಪುತ್ತೂರಿನ ವಿಭಿನ್ನ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್. ಆರ್, ತಾಲೂಕು ವೈದ್ಯಾಧಿಕಾರಿ ದೀಪಕ್ ರೈ, ಪುತ್ತೂರು ನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಅವರು ಮಾದಕ…
ಮೂಡುಬಿದಿರೆ: ಬಳ್ಳಾರಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಶ್ರವಣ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ನಡೆದ ಶ್ರವಣ ಕಪ್ ಅಖಿಲ ಭಾರತ ಆಹ್ವಾನಿತ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡವು ಪ್ರಶಸ್ತಿಯನ್ನು ಪಡೆದುಕೊಂಡಿತು. ರಾಷ್ಟ್ರದ 10 ಆಹ್ವಾನಿತ ತಂಡಗಳು ಭಾಗವಹಿಸಿದ್ದ ಈ ಟೂರ್ನಿಯ ಫೈನಲ್ನಲ್ಲಿ ಆಳ್ವಾಸ್ ತಂಡವು ತಮಿಳುನಾಡಿನ ಪಿಎಸ್ಎನ್ಎ ದಿಂಡಿಗಲ್ ತಂಡವನ್ನು 35-31, 35-18 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಸೆಮಿಫೈನಲ್ಸ್ ಪಂದ್ಯಗಳಲ್ಲಿ ಆಳ್ವಾಸ್ ತಂಡ ಶ್ರವಣ ಬಳ್ಳಾರಿ ತಂಡವನ್ನ ನೇರ ಸೆಟ್ಟುಗಳಿಂದ ಸೋಲಿಸಿ ಫೈನಲ್ಸಿಗೆ ಅರ್ಹತೆಯನ್ನು ಪಡೆದಿತ್ತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ಧರ್ಮ ಶಿಕ್ಷಣ ಸಿಗುವ ಜಾಗದಲ್ಲಿ ಜಾತ್ರೆಗೆ ಮಾರ್ಗದರ್ಶನ ಸಿಗಬೇಕು. ಜಾತ್ರೆಯಲ್ಲಿ ಸಾಗುವ ರಥ ಜೀವನ ಪಯಣಕ್ಕೆ ಸ್ಪೂರ್ತಿ ನೀಡಬೇಕು. ಸಂಪತ್ತಿನ ಸದ್ಬಳಕೆಯಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು. ಸಮಾಜದಲ್ಲಿ ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕದ ಸಂಗತಿ. ಸಂಸ್ಕಾರಭರಿತ ಶಿಕ್ಷಣ ಕೊಡುವ ವ್ಯವಸ್ಥೆ ಆಗಬೇಕು. ಸಾಮಾಜಿಕ ಸಮತೋಲಕ್ಕೆ ಆಧ್ಯಾತ್ಮಕ ಹಾದಿಯೇ ಸೂಕ್ತ ಎಂದರು. ದಿವ್ಯ ಸಾನಿದ್ಯ ವಹಿಸಿದ್ದ ಶ್ರೀ ಸಾಧ್ವಿ ಮಾತಾನಂದಮಯಿ ಆಶೀರ್ವಚನ ನೀಡಿ, “ಗುರುಗಳ ಕೃಪೆಯಿಂದ ಎಲ್ಲವೂ ಸಾಧ್ಯ. ಗುರುಗಳ ಸಾನಿಧ್ಯದಲ್ಲಿ ಆಧ್ಯಾತ್ಮಿಕ ಚಿತ್ತಹರಿಸಿ ಆನಂದ ಹೊಂದೋಣ. ಒತ್ತಡ ರಹಿತ ಸಂತೃಪ್ತ ಜೀವನ ಸಾಗಿಸೋಣ” ಎಂದರು. ನಾನಾ ಕ್ಷೇತ್ರಗಳ ಗಣ್ಯರಾದ ವೀರೇಂದ್ರ ಮೋಹನ್ ಜೋಶಿ, ಡಾ. ಅವಿನ್ ಆಳ್ವ, ಮಲ್ಲಿಕಾ ಪ್ರಶಾಂತ ಪಕ್ಕಳ, ತಮನ್ನಾ ಪ್ರಭಾಕರ ಶೆಟ್ಟಿ, ಶ್ವೇತಾ ಸಿ. ರೈ, ಪಿ.…
ಕಾವಡಿ ಶ್ರೀವಾಣಿ ಯಕ್ಷಗಾನ ಕಲಾಮಂಡಳಿಯ ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಚಂದ್ರ ಶೆಟ್ಟಿಯವರು ಇತ್ತೀಚಿಗೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳ್ಳಾರಿಯ ಉದ್ಯಮಿ, ಸಮಾಜಸೇವಕ ರೇಣುಕಾ ಬೇಕರಿ ಮಾಲೀಕ ವಸಂತ ಶೆಟ್ಟಿ, ಕಲಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂತರ ಮಾತನಾಡಿದ ವಸಂತ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಒಂದು ಅದ್ಭುತವಾದ ಕಲೆ, ಯಕ್ಷಗಾನವನ್ನು ಉಳಿಸಿ ಬೆಳೆಸೋಣ ಎಂದು ನೂತನ ಸಂಸ್ಥೆಗೆ ಶುಭ ಹಾರೈಸಿದರು.
ಆಹ್ವಾನ ಪತ್ರ (ಇನ್ವಿಟೇಶನ್ ಕಾರ್ಡ್) ಮದುವೆಗೆಂದು ಆಹ್ವಾನಿಸಲು ನೀಡುವ ಪತ್ರಕ್ಕೆಂದೇ ಸಾವಿರಾರು ರೂಪಾಯಿಗಳ ಖರ್ಚು ಮಾಡಿ ಕೊಡುವ ಕಾರ್ಡ್ ಗಳನ್ನು ಬಹುತೇಕರು ತೆರೆದು ಕೂಡಾ ನೋಡುವುದಿಲ್ಲ. ಇಲ್ಲಿಂದ ಶುರುವಾಗುವ ಈ ದುಂದು ವೆಚ್ಚ ಹೇಗಿರುತ್ತದೆ ನೀವೇ ನೋಡಿ. ಸಾವಿರಾರು ಜನರನ್ನು ಮದುವೆಗೆ ಕರೆಯುವುದು (ಕರೆದವರಿಗೆ ಯಾರು ಬಂದಿದ್ದಾರೆ ಎಂದು ಗಮನಿಸಲೂ ಸಮಯವಿಲ್ಲ. ಹಾಜರಾದವರಿಗೆ 6 ತಿಂಗಳ ನಂತರ ಯಾವ/ಯಾರ ಮದುವೆಗೆ ಹೋಗಿರುವುದು ಸಹ ನೆನಪಿರುವುದಿಲ್ಲ) ನಿಶ್ಚಿತಾರ್ಥದ ಹೆಸರಿನಲ್ಲಿ ವಿವಾಹವಾಗುವ ಮೊದಲೇ ಭವಿಷ್ಯದ ವಧು ವರರನ್ನು ಅಕ್ಕ ಪಕ್ಕ ಕೂರಿಸಿ ಇನ್ನಿಲ್ಲದ ಆರ್ಭಾಟ ಮಾಡುವುದು, ಮದುವೆಯ ಮೊದಲು ನಡೆಸುವ ಪ್ರೀ ವೆಡ್ ಫೋಟೋ ಶೂಟ್ ಒಂದು ಚಲನಚಿತ್ರ ಮಟ್ಟದಲ್ಲಿದ್ದು, ವಧು ಮತ್ತು ವರರು ವಿಚಿತ್ರ ಮತ್ತು ಪ್ರಜ್ಞಾಹೀನ ಭಂಗಿಗಳಲ್ಲಿ ಫೋಟೋಗಳಿಗೆ ಪೋಸ್ ನೀಡುತ್ತಾರೆ. ಅಲ್ಲದೆ, ಆ ಫೋಟೋಗಳನ್ನು (ಕೆಲವು ನಿಕಟವಾದವುಗಳು) ಮದುವೆ ಸಮಾರಂಭದಲ್ಲಿ ದೊಡ್ಡ ಟಿವಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಮದುವೆಗೆ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿದ ಹೂವಿನ ಅಲಂಕಾರ, ಬಗೆ…
ಪುಣೆ ಬಂಟ್ಸ್ ಅಸೋಸಿಯೇಷನ್ ನ 12ನೇ ವಾರ್ಷಿಕೋತ್ಸವ ಸಮಾರಂಭವು ಫೆಬ್ರವರಿ 8ರ ಶನಿವಾರದಂದು ಬಂಟರ ಭವನ, ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಭವನ, ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ಅಪರಾಹ್ನ ಗಂಟೆ 2:30 ರಿಂದ ವಿವಿಧ ಸಾಂಸ್ಕೃತಿಕ ನೃತ್ಯ ವೈಭವ, ‘ಬಲೆ ತೆಲಿಪುಲೆ’ ಹಾಸ್ಯ ಪ್ರದರ್ಶನ, ಸಭಾ ಕಾರ್ಯಕ್ರಮ ಸಾಧಕರಿಗೆ ಸತ್ಕಾರಗಳೊಂದಿಗೆ ಜರಗಲಿದೆ. ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಅಧ್ಯಕ್ಷತೆಯಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಂಭ್ರಮದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭವಾನಿ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಮುಂಬೈಯ ಕಾರ್ಯಾಧ್ಯಕ್ಷ ಕೆ.ಡಿ. ಶೆಟ್ಟಿ, ಗೌರವ ಅತಿಥಿಗಳಾಗಿ ಕರ್ನಾಟಕ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬಾಲಿವುಡ್ ನ ಹೆಸರಾಂತ ನಟಿ ಅಮೃತಾ ರಾವ್ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ ಬಂಟ ಸಮಾಜದ ಸಾಧಕರಿಗೆ ಸತ್ಕಾರ ನಡೆಯಲಿದೆ. ಬಂಟ್ಸ್ ಅಸೋಸಿಯೇಷನ್ ನ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಅಪರಾಹ್ನ ಗಂಟೆ 2:30 ರಿಂದ ಆರಂಭಗೊಳ್ಳಲಿದ್ದು, ಸಾಂಸ್ಕೃತಿಕ…














