Author: admin

ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ(84) ಶ್ರೀ ವಿಶ್ವನಾಥ ರೈ ಇವರು ಮೇ 30 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಶ್ರೀಯುತರು ಪುತ್ತೂರು ಸರ್ವೆ, ನೇರಳಕಟ್ಟೆ, ಅನಂತಾಡಿ ಸರಕಾರಿ ಶಾಲೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ, ಅನಂತಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು. ಜನಾನುರಾಗಿ, ಪರೋಪಕಾರಿಯಾಗಿ ಜೀವನ ನಡೆಸುತ್ತಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡದ್ದಿರು. ಪುತ್ರರಾದ ಶಶಿಧರ್ ರೈ ಹಾಗೂ ಬಿ.ಸಿ. ರೋಡಿನ ಪ್ರಸಿದ್ದ ದಂತ ವೈದ್ಯರಾದ ಮುರಳೀಧರ ರೈ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ವಿವಿಧ ಫಲಾನುಭವಿಗಳಿಗೆ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ ಜೂನ್ 6 ರಂದು ಸಂಘದ ಆಡಳಿತ ಕಛೇರಿ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿ ಮಾತನಾಡಿದ ಸಂಘದ ದಶಮ ಸಂಭ್ರಮದ ಪೋಷಕರು, ಕುಂದಾಪುರದ ಉದ್ಯಮಿಗಳಾದ ಸಟ್ವಾಡಿ ವಿಜಯ ಶೆಟ್ಟಿ, ಯುವ ಬಂಟರ ಸಂಘ ಆರೋಗ್ಯ ಭಾಗ್ಯ ಯೋಜನೆಯಡಿ ಜಾತೀಯತೆಯನ್ನು ಮೀರಿ ಎಲ್ಲಾ ಸಮುದಾಯದ ಅನಾರೋಗ್ಯ ಪೀಡಿತರಿಗೆ ಧನ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇವರು ನಡೆಸಿಕೊಂಡ ಬರುತ್ತಿರುವ ಆರೋಗ್ಯ ಭಾಗ್ಯ ಯೋಜನೆಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ ಪೋಷಕರು, ಸಮತಾ ಮೋಟರ್ಸ್ ನ ಮಾಲಕರಾದ ಜೆಡ್ಡಾಡಿ ವಿಜಯಕುಮಾರ್ ಶೆಟ್ಟಿ ಗಿಳಿಯಾರು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಸಂಘ ಮಾಡಿಕೊಂಡು ಬರುತ್ತಿರುವ ಕಾರ್ಯಕ್ರಮಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಪ್ರತಿಯೊಂದು ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾದದ್ದು. ಹಾಗಾಗಿ ಸಂಘದ…

Read More

ಹಲವಾರು ಸಂಘ ಸಂಸ್ಥೆಗಳಿಗೆ ತನ್ನ ಶ್ರಮದಿಂದ ದುಡಿದ ದುಡಿಮೆಯ ಪಾಲನ್ನು ದಾನವಾಗಿ ನೀಡಿರುವ, ಸಮಾಜಮುಖಿ ಚಿಂತನೆಯ ನಿವೃತ್ತ ಅರಣ್ಯ ಉಪ ಸಂರಕ್ಷಣಾಧಿಕಾರಿ ಪ್ರಕಾಶ್ ಶೆಟ್ಟಿಯವರನ್ನು ಸಾಗರ ಬಂಟರ ಸಂಘದ ವತಿಯಿಂದ ಶಿರಸಿಯ ಸ್ವಗೃಹದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಶೆಟ್ಟಿ ಹಕ್ಲಾಡಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ, ಶ್ರೀಧರ್ ಶೆಟ್ಟಿ ಹಾಗೂ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.

Read More

ಅತಿಯಾದ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಯಾಗದಿದ್ದರೆ ಪೃಥ್ವಿಯ ಅವನತಿಯೂ ಸನಿಹವಾಗಲಿದೆ. ಪರಿಸರ ಸಂರಕ್ಷಣೆಯಾದಲ್ಲಿ ಮಾತ್ರ ಮನುಷ್ಯನ ಆರೋಗ್ಯ ಸಂರಕ್ಷಣೆ ಸಾಧ್ಯ ಎಂದು ಪರಿಸರವಾದಿ, ಗುಜರಾತ್ ನ ಸ್ಮೃತಿ ವನದ ರೂವಾರಿ ಡಾ| ಆರ್.ಕೆ ನಾಯರ್ ಹೇಳಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಗುರುವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಯುವಜನತೆ, ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಗೆ ಆಂದೋಲನದ ರೀತಿಯಲ್ಲಿ ಪಣ ತೊಡಬೇಕು. ರೆಡ್ ಕ್ರಾಸ್ ಸಂಸ್ಥೆ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ ಎಂದರು. ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಡಾ. ಸತೀಶ್ ರಾವ್, ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಡಾ. ಸಚ್ಚಿದಾನಂದ ರೈ, ಎ.ವಿಠ್ಠಲ, ಡಾ.ಸುಮನಾ ಬೋಳಾರ್, ಸಲಹೆಗಾರರಾದ ಪ್ರಭಾಕರ ಶರ್ಮ, ಕೆ.ಎನ್. ಸುಧಾಕರ, ಸದಸ್ಯರಾದ ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ದ.ಕ.…

Read More

ಯಕ್ಷಗಾನದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಪಟ್ಲ ದಶಮ ಸಂಭ್ರಮ – 2025 ರಾಷ್ಟ್ರೀಯ ಕಲಾ ಸಮ್ಮೇಳನವು ಜೂನ್ 1ರಂದು ಮಂಗಳೂರು ಅಡ್ಯಾರ್ ಗಾರ್ಡನ್ ನಲ್ಲಿ ಯಶಸ್ವಿಯಾಗಿ ನಡೆಯಿತು. ದಶಮ ಸಂಭ್ರಮದ ವೈಭವ ಮೂರು ವೇದಿಕೆಗಳಲ್ಲಿ ಪ್ರಸ್ತುತಗೊಂಡಿದ್ದು ಭರತನಾಟ್ಯ, ಓಡಿಸ್ಸಿ, ಕಥಕ್, ಮೋಹಿನಿಯಾಟ್ಟಂ ಸಹಿತ ದೇಶದ ಎಂಟು ವಿಧದ ಶಾಸ್ತ್ರೀಯ ನೃತ್ಯ ಪ್ರಕಾರಗಳ ಪ್ರದರ್ಶನ, ಭಾರತೀಯ ಕಲೆಗಳ ಛಾಯಾಚಿತ್ರಗಳ ಪ್ರದರ್ಶನ ನಡೆಯಿತು. ಯಕ್ಷಗಾನ ಸ್ಪರ್ಧೆಯಲ್ಲಿ ತೆಂಕು ಮತ್ತು ಬಡಗು ತಿಟ್ಟಿನ ಯುವ ಕಲಾವಿದರ 8 ತಂಡಗಳು ಭಾಗವಹಿಸಿದ್ದವು. ವಿವಿಧ ತಂಡಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಕುಣಿತ ಭಜನೆ ಸ್ಪರ್ಧೆ ಆಯೋಜನೆಗೊಂಡಿತು. ವಿವಿಧ ಕ್ಷೇತ್ರದ ಸುಮಾರು 3,500 ಕಲಾವಿದರಿಗೆ ಅಪಘಾತ ವಿಮಾಯೋಜನೆಗೆ ನೋಂದಣಿ ನಡೆಯಿತು. ವೈದ್ಯಕೀಯ ಆರ್ಥಿಕ ನೆರವು ನೀಡಲಾಯಿತು. ಯಕ್ಷಾಶ್ರಯ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಿಸಿ ವಿವಿಧ ಸಾಧಕರಿಗೆ ಯಕ್ಷದ್ರುವ ಕಲಾ ಗೌರವ ಪ್ರಧಾನಿಸಲಾಯಿತು. ಯಕ್ಷಧ್ರುವ ಪಟ್ಲ ದಶಮ ಸಂಭ್ರಮದ…

Read More

ಶಿವಮೊಗ್ಗದ ಪ್ರಖ್ಯಾತ ಉದ್ಯಮಿ ಪಿಂಗಾರ ಹೋಟೆಲ್ ಮಾಲೀಕರಾದ ಕೊಡುಗೈ ದಾನಿ ರಾಜಮೋಹನ್ ಹೆಗ್ಡೆ ಅವರು ಸಾಗರ ಬಂಟರ ಸಂಘದ ಕಟ್ಟಡ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ವತಿಯಿಂದ ರಾಜಮೋಹನ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ ಹಾಗೂ ಆನಂದ್ ಶೆಟ್ಟಿಯವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Read More

ತುಲುವೆರೆ ಕಲ ಕೂಟೊದ ರಡ್ಡನೇ ವರ್ಷೋಚ್ಚಯ ಲೇಸ್ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮಡ್ ತುಲುವೆರೆ ಕಲತ್ತ ಗುರ್ಕಾರ್ದಿ ಗೀತಾ ಲಕ್ಷ್ಮೀಶ್ ಗುರ್ಕಾರ್ಮೆಡ್ ನಡತ್ಂಡ್. ಕೊಂಡೆವೂರು ಮಠತ್ತ ಸ್ವಾಮೀಜಿ ಲೇಸ್ ಉದಿಪನ ಮಲ್ತ್ ಎಡ್ಡೆಪುದ ಸಿರಿ ಮದಿಪು ಬಾಮಿಯೆರ್. ಮಿತ್ತರ್ಮೆಡ್ ಶ್ರೀ ಧರ್ಮಸ್ಥಳ ತುಳು ಪೀಠದ ಸಂಯೋಜಕೆರ್ ಡಾ. ಮಾಧವ ಎಂ ಕೆ, ಕುಡ್ಲ ಪ್ರೆಸ್ ಕ್ಲಬ್‌ದ ಗುರ್ಕಾರ್ರ್ ಪಿ.ಬಿ ಹರೀಶ್ ರೈ, ಕೋಟಿ ಚೆನ್ನಯ ಸೇವಾ ಬ್ರಿಗೇಡ್‌ದ ಗುರ್ಕಾರ್ಲು ಕಿರಣ್ ಕುಮಾರ್ ಕೊಡಿಕಲ್, ಪೆರಿಯ ಪತ್ರಕರ್ತೆ ಮಲಾರ್ ಜಯರಾಮ್ ರೈ ಪಾಲ್ ಪಡೆದ್ ಲೇಸ್‌ಗೆಡ್ಡೆಪು ಬಾಮಿಯೆರ್. ಗೇನದ ಮಂಟಮೆಡ್ ತುಳುನಾಡ್ದ ಸಾಹಿತ್ಯ ಪರಂಪರೆದ ಬಗೆಟ್ ಮಹಿ ಮುಲ್ಕಿ, ತುಳು ನಾಡ್, ನುಡಿ, ಸಂಸ್ಕೃತಿ ಒರಿಪುನಲ್ಪ ಬಾಸೆದ ಮಹತ್ವದ ಬಗೆಟ್ ಡಾ. ಅರುಣ್ ಉಳ್ಳಾಲ್ ಪಾತೆರಿಯೆರ್. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಾಜೇಶ್ ಶೆಟ್ಟಿ ದೋಟ ಬೊಕ್ಕ ತುಳುನಾಡ್ದ ಗೇನದ ಪಿಂಗಾರ ಬಿರುದಾಂಕಿತ ಶ್ರೀಶಾವಾಸವಿ ತುಳುನಾಡ್ ಕಲತ್ತ ಬೊಲ್ಲಿ ಮಾನಾದಿಗೆ…

Read More

ಶಿವಮೊಗ್ಗದ ಪ್ರಖ್ಯಾತ ಉದ್ಯಮಿ ಶುಭಂ ಹೋಟೆಲ್ ಮಾಲೀಕರಾದ ಕೊಡುಗೈ ದಾನಿ ಉದಯ್ ಕಡಂಬ ಅವರು ಸಾಗರ ಬಂಟರ ಸಂಘದ ಕಟ್ಟಡ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ವತಿಯಿಂದ ಉದಯ್ ಕಡಂಬ ದಂಪತಿಗಳನ್ನು ಸನ್ಮಾನಿಸಲಾಯಿತು.ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ ಹಾಗೂ ಆನಂದ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Read More

ತುಳು ಒಂದು ಸಮೃದ್ಧ ಭಾಷೆ. ಅದರ ಸಮೃದ್ಧತೆ, ಹಿರಿಮೆ, ಗರಿಮೆಯನ್ನು ಸುಂದರವಾಗಿ ತನ್ನ ಕೃತಿಗಳಲ್ಲಿ ಮೂಡಿಸುವ ಕಲೆ ಶ್ರೀಶಾವಾಸವಿಯವರಿಗೆ ಕರಗತವಾಗಿದೆ. ಅವರ ಕೃತಿಗಳಲ್ಲಿ ಜೀವಂತಿಕೆಯಿದೆ ಎಂದು ಪುತ್ತೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ವೆಂಕಟರಮಣ ಗೌಡ ಕಳುವಾಜೆ ಹೇಳಿದರು. ಅವರು ಶುಕ್ರವಾರ ಪುತ್ತೂರು ಪತ್ರಿಕಾ ಭವನದಲ್ಲಿ ಸಿರಿಗಂಗೆ ಪ್ರಕಾಶನ ತುಳುನಾಡ್‌ ಪ್ರಕಟಿತ ಶ್ರೀಶಾವಾಸವಿ ತುಳುನಾಡ್‌ರವರ ‘ಗೇನೊದ ಬುಲೆ’ ಲೇಖನ ಮಾಲೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೈಲಾಸ ನಮ್ಮ ಕೈಯಲ್ಲೇ ಇದೆ. ನಿರ್ಮಲ ಮತ್ತು ನಿಷ್ಕಲ್ಮಶ ಭಕ್ತಿಗೆ ಶಿವ ಒಲಿದು ಬರುತ್ತಾನೆ. ಅಲ್ಲದೆ ಮುಕ್ತಿ ನೀಡುವುದರೊಂದಿಗೆ ಬದುಕನ್ನು ಪಾವನಗೊಳಿಸಲು ಶಿವಧ್ಯಾನವೇ ಸುಲಭ ಮಾರ್ಗ. ದೈವ ಭಕ್ತಿ, ದೇವೆರಲ್ಲಿ ಅಚಲ ನಂಬಿಕೆ ಬೇಕು. ಶಿವ ತತ್ವವೇ ಸತ್ಯ ಎಂದು ಪಟ್ಟೆ ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಶಂಕರಿ ಪಟ್ಟೆ ಹೇಳಿದರು. ಅವರು ಸಿರಿಗಂಗೆ ಅರ್ಪಿಸುವ ಧೃತೀಜ್ ತುಳುನಾಡ್ ನಿರ್ಮಾಣದಲ್ಲಿ ಮೂಡಿಬಂದ ಶ್ರೀಶಾವಾಸವಿ ತುಳುನಾಡ್ ಸಾಹಿತ್ಯದ, ಶರತ್ ಬಿಳಿನೆಲೆ ರಾಗಸಂಯೋಜನೆ ಮತ್ತು…

Read More

ಶಿವಮೊಗ್ಗ ಬಂಟರ ಸಂಘದ ಬಂಟರ ಭವನಕ್ಕೆ ಹಾಗೂ ಕಚೇರಿಗೆ ಸಾಗರ ಬಂಟರ ಸಂಘದ ಪದಾಧಿಕಾರಿಗಳು ಇತ್ತೀಚಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಶೆಟ್ಟಿ ಅವರು ಸಾಗರ ಬಂಟರ ಸಂಘದ ಸದಸ್ಯರನ್ನು ಸ್ವಾಗತಿಸಿದರು. ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ತಾಲೂಕು ಮಟ್ಟದ ಬಂಟರ ಸಂಘ ಸಾಗರದಲ್ಲಿ ನಿರ್ಮಾಣವಾಗುತ್ತಿದ್ದು, ಜಿಲ್ಲೆಯ ಬಂಟರ ಸಂಘದಿಂದ ನಮಗೆ ಆದಷ್ಟು ಧನಸಹಾಯವನ್ನು ನೀಡಬೇಕೆಂದು ವಿನಂತಿಸಿಕೊಂಡರು. ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಮುಂದಿನ ಪದಾಧಿಕಾರಿಗಳ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಾವು ಸಾಗರ ಬಂಟರ ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡಲು ಸರ್ವ ಪ್ರಯತ್ನ ಮಾಡುವುದಾಗಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ, ಆನಂದ ಶೆಟ್ಟಿ, ಸುನೀಲ್ ಶೆಟ್ಟಿ ಯಡೆಹಳ್ಳಿ ಉಪಸ್ಥಿತರಿದ್ದರು. ಶಿವಮೊಗ್ಗ ಬಂಟರ…

Read More