Author: admin

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಟೀಲು ದುರ್ಗಾಪರಮೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು, ಇಂದು ಮೂರು ವೇದಿಕೆಗಳಲ್ಲಿ ನಿರಂತರ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮ ಇಷ್ಟೊಂದು ಯಶಸ್ವಿಯಾಗಿ ನಡೆಯಬೇಕಾದರೆ ಕೇಂದ್ರೀಯ ಸಮಿತಿಯ ಪ್ರತೀ ಪದಾಧಿಕಾರಿಗಳು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಶ್ರಮವಿದೆ. ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪಟ್ಲ ಫೌಂಡೇಶನ್ ದಾನಿಗಳ ನೆರವಿನಿಂದ ಇನ್ನಷ್ಟು ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಲ್ಲರ ಒಗ್ಗಟ್ಟಿನಲ್ಲಿ ಮಾತ್ರ ಸಾಧ್ಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, ನನಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಭಾಗವಾಗಿರಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಇದಕ್ಕಾಗಿ ಎಲ್ಲಾ ಪದಾಧಿಕಾರಿಗಳು, ದೇಶ ವಿದೇಶದಲ್ಲಿರುವ ಘಟಕದ ಪದಾಧಿಕಾರಿಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ. ಪಾರ್ತಿಸುಬ್ಬರಿಂದ…

Read More

ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು.ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಭಾರತೀಯ ಸಂಸ್ಕೃತಿಯ ನೆಲೆಯಲ್ಲಿ ಜೀವನಕ್ಕಾಗಿ ಶಿಕ್ಷಣವನ್ನು ನೀಡುವುದು ನಮ್ಮ ಗುರಿಯಾಗಿದೆ. ಪೋಷಕರು ಜಿ ಎಮ್‍ನ ಮೇಲೆ ಇಟ್ಟ ಭರವಸೆಯನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇವೆ. ಪೋಷಕರು ಮನೆಯಲ್ಲಿ ಮಕ್ಕಳಿಗೆ ಪ್ರೀತಿಯ ಜೊತೆಗೆ ಹೆಚ್ಚಿನ ಸಮಯವನ್ನು ಕೊಡಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಮಕ್ಕಳ ಆಸಕ್ತಿಯ ವಿಷಯಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದು ಸುಸಂಸ್ಕೃತರನ್ನಾಗಿಸುವುದು ಪೋಷಕರ, ಶಿಕ್ಷಕರ ಕರ್ತವ್ಯವಾಗಿದೆ. ಎಲ್ಲರೂ ಮಕ್ಕಳ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಜಿ ಎಮ್ ಮಕ್ಕಳಿಗೆ ಜೀವನ ಕೌಶಲ್ಯದ ಜೊತೆಗೆ ವ್ಯಕ್ತಿತ್ವ ಬೆಳವಣಿಗೆಗೆ ಪ್ರಾಮುಖ್ಯತೆ ನೀಡುತ್ತದೆ ಎಂದರು. ಶಾಲಾ ವಿಭಾಗದ ಮುಖ್ಯಸ್ಥರು ಶಾಲಾ ಚಟುವಟಿಕೆಗಳು, ಪೋಷಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ,…

Read More

ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ಚೇತನ್ ಗೌಡ ಎನ್. ಎಸ್. ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್‌ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್‌, ಸಾನಿಕ ಕೆ. ಎನ್. ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ. ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ‍್ಯಾಂಕ್‌, ಎಂ. ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ 20743ನೇ ರ‍್ಯಾಂಕ್‌, ಸಾಚಿ ಶಿವಕುಮಾರ್ ಕಡಿ 24728ನೇ ರ‍್ಯಾಂಕ್‌ , ಶ್ರೀರಕ್ಷಾ 28163ನೇ ರ‍್ಯಾಂಕ್‌ , ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ‍್ಯಾಂಕ್‌ , ಹರ್ಷಿತ್ ರಾಜು ಹೆಚ್. ಎಂ.. ಸಾಮಾನ್ಯ ವಿಭಾಗದಲ್ಲಿ 31140ನೇ ರ‍್ಯಾಂಕ್‌ , ಪ್ರೀತಿ ಸಿ. ಎಲ್. ಸಾಮಾನ್ಯ ವಿಭಾಗದಲ್ಲಿ 31939ನೇ ರ‍್ಯಾಂಕ್‌…

Read More

ಕೆ.ಸಿ.ಇ.ಟಿ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ತರುಣ್ ಸುರಾನಾನಿಗೆ ರಾಷ್ಟ್ರ ಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ 2403 ನೇ ರ್ಯಾಂಕ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇ.ಅಡ್ವನ್ಸ್ಡ್ 2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ್ಯಾಂಕ್ ಗಳಿಸಿದ್ದಾರೆ. ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( ಕೆಟಗರಿಯಲ್ಲಿ429 ರ್ಯಾಂಕ್),ಮನೋಜ್ ಕಾಮತ್( 3911 ) (ಜನರಲ್ ಇ.ಡಬ್ಲು.ಎಸ್ 394ರ್ಯಾಂಕ್). ಆಕಾಶ್ ಪ್ರಭು (5105 ), ಚಿಂತನ್ ಮೇಗಾವತ್ (6375 ) (ಕೆಟಗರಿಯಲ್ಲ್ಲಿ142 ರ್ಯಾಂಕ್),ವಿಷ್ಣು ಧರ್ಮಪ್ರಕಾಶ್ (8565) ರ್ಯಾಂಕ್ ಗಳಿಸಿದ್ದಾರೆ. ಒಟ್ಟು ಹನ್ನೆರಡು ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎ.ಪಿ.ಜಿ.ಇ.ಟಿ ಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Read More

ಪುಣೆ ಬಂಟರ ಸಂಘದ ನೂತನ ಸಮಿತಿಯ ಪ್ರಥಮ ಸಭೆಯು ಮೇ 27ರಂದು ಪುಣೆ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಸುಲತಾ ಎ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳಾದ ಮೋಹನ್ ಶೆಟ್ಟಿ, ಸತೀಶ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ ಎರ್ಮಾಳ್, ಪ್ರಭಾಕರ್ ಶೆಟ್ಟಿ, ಗಣೇಶ್ ಶೆಟ್ಟಿ, ಮಾಧವ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ನಿಟ್ಟೆ, ವಿವೇಕಾನಂದ ಶೆಟ್ಟಿ, ಶೇಖರ್ ಶೆಟ್ಟಿ, ಗಣೇಶ್ ಪೂಂಜಾ, ರವಿ ಶೆಟ್ಟಿ ಕಾಪು, ಉದಯ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ಮಹಿಳಾ ವಿಭಾಗದ ಪ್ರಮುಖರಾದ ನೀನಾ ಬಿ ಶೆಟ್ಟಿ, ವೀಣಾ ಪಿ ಶೆಟ್ಟಿ, ಗೀತಾ ಅರ್…

Read More

ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ.ಎಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ನೆತ್ತರೆಕೆರೆ’ ತುಳು ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು, ಸಿನಿಮಾ ರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದ್ದು ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಹೀಗಾಗಿ ಸಿನಿಮಾವನ್ನು ಜೂನ್ ಕೊನೆಯ ವಾರದಲ್ಲಿ ತೆರೆ ಕಾಣಿಸಲು ಚಿತ್ರ ತಂಡ ಸಿದ್ದತೆ ಮಾಡಿಕೊಂಡಿದೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ , ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಸುಮನ್ ತಲ್ವಾರ್, ಲಂಚುಲಾಲ್ ಕೆ.ಎಸ್ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಪೃಥ್ವಿನ್ ಪೊಳಲಿ, ಯುವ ಶೆಟ್ಟಿ, ಅನಿಲ್ ಉಪ್ಪಳ, ಪುಷ್ಪರಾಜ್ ಬೊಳ್ಳಾರು, ವಿಜಯ ಮಯ್ಯ, ನೀತ್ ಪೂಜಾರಿ, ಉತ್ಸವ್ ವಾಮಂಜೂರು, ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ, ಭವ್ಯಾ ಪೂಜಾರಿ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು,…

Read More

ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ. ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು. ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಹೇಳಿದರು. ಇವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇ 26 ,27 ಮತ್ತು 28ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ ಕೌಶಲಗಳನ್ನು ಕಲಿಸಲಾಯಿತು. ಮೊದಲ ದಿನದ…

Read More

ಬೆಂಗಳೂರಿನ ಎಂ.ವಿ ಆಡಿಟೋರಿಯಂನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ 70 ನೇ ವಾರ್ಷಿಕೋತ್ಸವದಲ್ಲಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಪುಣೆಗಳಲ್ಲಿ ಹೋಟೆಲ್ ಉದ್ಯಮ ಸ್ಥಾಪಿಸಿರುವ ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ರಾಜೇಂದ್ರ ವಿ ಶೆಟ್ಟಿ ಅವರಿಗೆ ಪ್ರತಿಷ್ಠಿತ ಹೋಟೆಲ್ ಉದ್ಯಮದ ಶ್ರೇಷ್ಠ ಪ್ರಶಸ್ತಿಯಾದ ಆತಿಥ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ| ನಿರ್ಮಲಾನಂದನಾಥ ಶ್ರೀ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಶಾಸಕ ಡಾ. ಅಶ್ವಥ್ ನಾರಾಯಣ, ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಮಧುಕರ್ ಶೆಟ್ಟಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More

ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನೆಮಾದ ಟೀಸರನ್ನು ನಟ, ನಿರ್ದೇಶಕ ಡಾ|ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ಟೀಸರನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನೆಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ. ಟೀಸರ್ ನಮ್ಮನ್ನು ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ. ಸಿನೆಮಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ ಎಂದು ಅವರು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ತುಳು ಕಲಾಭಿಮಾನಿಗಳು ಈ ಸಿನೆಮಾವನ್ನು ನೋಡಿ ಚಿತ್ರ ತಂಡವನ್ನು ಬೆಂಬಲಿಸಬೇಕೆಂದು ಚಿತ್ರತಂಡ ವಿನಂತಿಸಿದೆ. ನಿರ್ಮಾಪಕ ಪ್ರತೀಕ್ ಯು. ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ಹಾಗೂ ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಈ ಸಂಧರ್ಭ ಉಪಸ್ಥಿತರಿದ್ದರು.

Read More