Author: admin
ಸಂಘಟನಾತ್ಮಕ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವುದರ ಮೂಲಕ ಸಮಾಜ ಬಲಿಷ್ಠವಾಗಲು ಸಾಧ್ಯ ಎಂದು ಶ್ರೀಮತಿ ಪ್ರಿಯಾ ಗಿರೀಶ್ ಶೆಟ್ಟಿ ಕಟೀಲು ನುಡಿದರು. ಅವರು ಸುರತ್ಕಲ್ ಬಂಟರ ಭವನದಲ್ಲಿ ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ವತಿಯಿಂದ ಜಯಲಕ್ಷ್ಮಿ ಸಿಲ್ಕ್ ಉದ್ಯಾವರ ಉಡುಪಿ ವತಿಯಿಂದ ನಡೆದ ಸಾರಿ ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸುರತ್ಕಲ್ ಬಂಟರ ಸಂಘವು ಹಲವಾರು ಜನಪರ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಇತರ ಸಂಘಗಳಿಗೆ ಮಾದರಿಯಾಗಿದೆ ಎಂದರು. ವೇದಿಕೆಯಲ್ಲಿ ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯಾ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷೆ ಚಿತ್ರಾ ಜೆ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಉಪಾಧ್ಯಕ್ಷ ಪುಷ್ಷರಾಜ್ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ನಿಕಟಪೂರ್ವಾಧ್ಯಕ್ಷ ಸುಧಾಕರ ಪೂಂಜ, ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ, ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷೆಯರಾದ ಬೇಬಿ ಶೆಟ್ಟಿ, ಚಂದ್ರಕಲಾ ಶೆಟ್ಟಿ, ಉಪಾಧ್ಯಕ್ಷೆ ಸರೋಜ ಶೆಟ್ಟಿ, ಪ್ರಧಾನ…
ಮುಂಬಯಿ ಮಹಾನಗರ ಹಾಗೂ ತವರು ನೆಲದಲ್ಲಿ ಕಮನೀಯ ಕಲೆ ಯಕ್ಷಗಾನ ಹಾಗೂ ಅದರ ವಾಚಿಕ ಪ್ರದಾನ ಅಂಗ ತಾಳಮದ್ದಳೆಯ ಕಂಪನ್ನು ವ್ಯಾಪಕ ರೀತಿಯಲ್ಲಿ ಪಸರಿಸುವಲ್ಲಿ ಮಹತ್ತರ ಶ್ರಮ ವಹಿಸುತ್ತಿರುವ ಅಜೆಕಾರು ಬಾಲಕೃಷ್ಣ ಶೆಟ್ಟಿ ಹಾಗೂ ಅಜೆಕಾರು ಕಲಾಭಿಮಾನಿ ಬಳಗದ ಸದಸ್ಯರು ಸೆಪ್ಟೆಂಬರ್ 29ರಂದು ಭಾನುವಾರ ಅಪರಾಹ್ನ 3.00 ರಿಂದ ಸಂಭ್ರಮೋಲ್ಲಾಸದಿಂದ ನಡೆಯಲಿರುವ ತ್ರಯೋವಿಂಶತಿ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಯಕ್ಷಗಾನ ಕಲಾ ಬಾಂಧವರಿಗೆ ಪತ್ರಿಕಾ ಪ್ರಕಟನೆ ಮೂಲಕ ಆತ್ಮೀಯ ಆಮಂತ್ರಣ ನೀಡಿದ್ದಾರೆ. ಬಂಟರ ಸಂಘ ಮುಂಬಯಿ ಕುರ್ಲಾ ಪೂರ್ವದಲ್ಲಿ ನಡೆಯಲಿರುವ ಈ ಅದ್ದೂರಿ ಕಾರ್ಯಕ್ರಮದಲ್ಲಿ ಯಕ್ಷಗಾನ ಸಂಬಂಧಿ ಸಾಧಕರು ಪ್ರೋತ್ಸಾಹಕರುಗಳಿಗೆ ಪ್ರಶಸ್ತಿ ಪ್ರದಾನದ ಜೊತೆಗೆ ಮಾತೃ ಶ್ರೀ ಸಂಸ್ಮರಣ ಪ್ರಶಸ್ತಿ, ಕೃತಿ ಪ್ರಕಟನೆ ಗೌರವ ಪ್ರಶಸ್ತಿಗಳನ್ನು ಪ್ರದಾನಿಸಲಾಗುತ್ತದೆ. ಪ್ರತಿಷ್ಠಿತ ಯಕ್ಷರಕ್ಷ ಪ್ರಶಸ್ತಿ, ಗೌರವ ಯಕ್ಷ ರಕ್ಷ ಸಾಧಕ ಪ್ರಶಸ್ತಿ ಇತ್ಯಾದಿ ಪುರಸ್ಕಾರ ಇದ್ದು ಮನರಂಜನೆಯಂಗವಾಗಿ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಪ್ರದರ್ಶನವನ್ನೂ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮಲಾಡ್ ಕರ್ನಾಟಕ ಸಂಘದ ಅಧ್ಯಕ್ಷ ಅಡ್ವಕೇಟ್…
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಹಿಂದೂ ಪದವಿಪೂರ್ವ ಕಾಲೇಜು ಶಿರ್ವ ಜಂಟಿ ಆಯೋಜನೆಯಲ್ಲಿ ಸೆಪ್ಟೆಂಬರ್ 19 ರಂದು ಶಿರ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಹುಡುಗರ ವಿಭಾಗದ ತ್ರೋಬಾಲ್ ಪಂದ್ಯಾವಳಿಯಲ್ಲಿ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜು ಕಾರ್ಕಳ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಎಸ್ ಎನ್ ವಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ತೇಜಸ್ ಶೆಟ್ಟಿ ರೆಂಜಾಳರವರು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಪಂದ್ಯಾವಳಿಯಲ್ಲಿ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜು ಕಾರ್ಕಳ ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ತೇಜಸ್ ಶೆಟ್ಟಿಯವರನ್ನು ಎಸ್.ಎನ್.ವಿ ಪಿಯು ಕಾಲೇಜಿನ ಆಡಳಿತ ಸಮಿತಿ, ಪ್ರಾಂಶುಪಾಲರು, ಅಧ್ಯಾಪಕ ವೃಂದದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ. ಕಲಿಕೆ ಮತ್ತು ಕ್ರೀಡೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ತೇಜಸ್ ಶೆಟ್ಟಿಯವರು ರೆಂಜಾಳ ಕಡಂಬಾಕ್ಯಾರ್ ಮನೆಯ ಶ್ರೀಮತಿ ಮಮತಾ ಶೆಟ್ಟಿಯವರ ಪುತ್ರರಾಗಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಕೋಟೇಶ್ವರ ಸಹನಾ ಗ್ರೂಪ್ ಆಫ್ ಕಂಪನಿಯ ಸಿಎಂಡಿ ಸುರೇಂದ್ರ ಶೆಟ್ಟಿಯವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಒಟ್ಟು 9 ಮಂದಿಯನ್ನು ವ್ಯವಸ್ಥಾಪನಾ ಸಮಿತಿಗೆ ಸರಕಾರ ಆಯ್ಕೆ ಮಾಡಿದೆ. ಸಮಾಜಸೇವಕ ಸುರೇಂದ್ರ ಶೆಟ್ಟಿಯವರು ಕಾರ್ಕಳ ಹಿರಿಯಂಗಡಿ ನಿವಾಸಿ ಆಗಿದ್ದು ಕೋಟೇಶ್ವರದಲ್ಲಿ ತನ್ನ ಉದ್ಯಮವನ್ನು ಹೊಂದಿದ್ದಾರೆ. ಸುಮಾರು 15 ವರ್ಷಗಳಿಂದ ಅವರು ಕುಂದಾಪುರದಲ್ಲಿ ಉದ್ಯಮ ನಡೆಸುತ್ತಿದ್ದಾರೆ. ಕಾರ್ಕಳ ಶಿವತಿಕೆರೆ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಕೂಡಾ ಅವರು ಸೇವೆ ಸಲ್ಲಿಸಿದ್ದರು.
ಸಿನೇಮಾ ತಲುಬು ಬಿಟ್ಟು ದಶಕಗಳು ಕಳೆದಿವೆ. ಪ್ರತೀ ಕನ್ನಡ ಸಿನೇಮಾಗಳ ಪ್ರೀಮಿಯರ್ ಶೋ ನೋಡುತ್ತಿದ್ದ ಕಾಲವಿತ್ತು. ಕಸುಬೇ ಹಾಗಿತ್ತು. ಮೊನ್ನೆ ರಾನಿ ಸಿನೇಮಾ ನೋಡಿ ಬಂದೆ. ಬಂದ ತಕ್ಷಣ ಅದಕ್ಕೇ ಯಾವುದೇ ರಿಯಾಕ್ಟ್ ಮಾಡಿಲ್ಲ. ಈ ವಾರವೇ ಹತ್ತಕ್ಕೂ ಹೆಚ್ಚು ಕನ್ನಡ ಸಿನೇಮಾ ಬಿಡುಗಡೆಯಾಗಿದೆ. ಅದೆಲ್ಲದರ ನಡುವೆ ಮಾಸ್ ಸಿನೇಮ ರಾನಿ ಸ್ಪರ್ಧೆಯಲ್ಲಿದೆ. ಚಾಕ್ಲೇಟ್ ಹೀರೋನಂತೆ ಕಾಣಿಸುವ ಕಿರಣ್ ರಾಜ್ ಫೇಸು ಮಾಸ್ ಸಿನೇಮಾಕ್ಕೂ ಪೋಸು ಕೊಡಬಲ್ಲದು ಎನ್ನುವುದನ್ನ ನಿರ್ದೇಶಕ ಗುರುತೇಜ್ ಶೆಟ್ಟಿ ಅದ್ಭುತವಾಗಿ ತೋರಿಸಿದ್ದಾರೆ. ಕ್ಯಾಮರಾ ಕೈ ಚಳಕದ ರಾಘವೇಂದ್ರ ಕೋಲಾರ ಪ್ರತೀ ಫ್ರೇಮಿನಲ್ಲೂ ಇಷ್ಟವಾಗುತ್ತಾರೆ. ಇದು ಪಕ್ಕಾ ಫ್ಯಾಮಿಲಿ ಆಕ್ಷನ್ ಜಾನರ್. ಬಹುತೇಕ ನಿರ್ದೇಶಕರು ಹೀರೋ ಕೈಗೆ ಮಚ್ಚು ನೀಡೋಕೆ ಅದೇ ಹಳೆ ಕಾರಣದ ಕಥೆ ಹೆಣೆಯುತ್ತಾರೆ. ಪ್ರತೀ ಸೀನುಗಳನ್ನೂ ಕುಂತಲ್ಲೇ ನಿರ್ಧರಿಸಿ ಬಿಡಬಹುದು. ಆದರೆ ರಾನಿ ಹಾಗಲ್ಲ! ನಟನಾಗಬೇಕು ಎನ್ನುವ ಉತ್ಕಟ ಕನಸಿರಿಸಿಕೊಂಡ ಹುಡುಗನೊಬ್ಬ ಬದುಕಿನ ಮಾಯಾಜಾಲಕ್ಕೆ ಸಿಲುಕಿ ಡಾನ್ ಆಗಿ ಬಿಡುವ ಕಥೆಯಿದು. ಕ್ಷಣ ಕ್ಷಣಕ್ಕೂ…
ಮಂಗಳೂರಿನ ಕುಲಶೇಖರ ಕೋರ್ಡೆಲ್ ಹಾಲ್ ನಲ್ಲಿ ಸೆಪ್ಟೆಂಬರ್ 18 ರಂದು ನಡೆದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ 38 ನೇ ವಾರ್ಷಿಕ ಸಭೆಯಲ್ಲಿ ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು 2023-24 ರ ಸಾಲಿನ ಉಡುಪಿ ಜಿಲ್ಲೆಯ ದ್ವಿತೀಯ ಅತ್ಯುತ್ತಮ ಸಂಘವೆಂದು ಘೋಷಿಸಿದರು. ದ.ಕ. ಸ. ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿಯವರು ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಶಿವರಾಮ ಶೆಟ್ಟಿ ಹಾಗೂ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಎನ್. ಭಟ್ ರವರಿಗೆ ಪ್ರಶಸ್ತಿ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷ ಕೆ ರವಿರಾಜ್ ಹೆಗ್ಡೆ, ಉಪಾಧ್ಯಕ್ಷರಾದ ಎಸ್ ಬಿ ಜಯರಾಮ್ ರೈ, ಕೆಎಂಎಫ್ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್ ಡಿ, ವ್ಯವಸ್ಥಾಪಕರಾದ ಡಾ. ರವಿರಾಜ ಉಡುಪ, ಮಾಜಿ ಅಧ್ಯಕ್ಷರುಗಳು, ನಿರ್ದೇಶಕರುಗಳು, ಉಪ ವ್ಯವಸ್ಥಾಪಕರುಗಳು, ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮಪಾಲನಾ ಸಮಿತಿ ಹಾಗೂ ಆಂತರಿಕ ಸಮಿತಿ ಆಶ್ರಯದಲ್ಲಿ ಕಾಲೇಜಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ‘ಮಹಿಳೆಯರ ಯೋಗ ಕ್ಷೇಮದ ಅನ್ವೇಷಣೆ’ ವಿಷಯದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಆಳ್ವಾಸ್ ಸೆಂಟರ್ ಫಾರ್ ವೆಲ್ನೆಸ್ ಟ್ರೈನಿಂಗ್ನ ನಿರ್ದೇಶಕಿ ಡಾ ದೀಪ ಕೊಠಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ಹಲವು ಮಹಿಳಾ ಸಾಧಕರನ್ನು ಪರಿಚಯಿಸುತ್ತಾ, ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹುರಿದುಂಬಿಸಿದರು. ವಿದ್ಯಾರ್ಥಿಗಳು ಹೆಚ್ಚು ಸಕರಾತ್ಮಕ ವಿಷಯಗಳನ್ನು ಹೇಗೆ ವಿಸ್ತರಿಸಿಕೊಳ್ಳಬೇಕು, ತಮ್ಮಲ್ಲಿರುವ ಭಾವನೆಗಳನ್ನು ಒಪ್ಪಿಕೊಂಡು ಅದರೊಂದಿಗೆ ಬದುಕುವ ಮನೋಸ್ಥೈರ್ಯ ಹೇಗೆ ಬೆಳೆಸಿಕೊಳ್ಳಬೇಕು ಎಂದು ವಿವರಿಸಿದರು. ಏಕಾಗ್ರತೆ ಮತ್ತು ಸ್ಥಿರತೆಯನ್ನು ಹೇಗೆ ಉಳಿಸಿಕೊಳ್ಳುವುದು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಜೀವನದಲ್ಲಿ ಕೃತಜ್ಞತೆ ಮತ್ತು ನಿರಂತರ ಕಲಿಕೆ ಎಷ್ಟು ಮುಖ್ಯ ಎಂದು ಉದಾಹರಣೆ ಸಹಿತ ಮಕ್ಕಳಿಗೆ ಮನವರಿಗೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ. ಎನ್ ಮಾತನಾಡಿ ಮಹಿಳೆಯರು…
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ ಕುಲಶೇಖರ ಇಲ್ಲಿ 14 ರ ವಯೋಮಾನದ ಬಾಲಕಿಯರ ನೆಟ್ ಬಾಲ್ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸರಕಾರಿ ಪ್ರೌಢಶಾಲೆ, ಬಡಗ ಎಕ್ಕಾರು ಶಾಲಾ ವಿದ್ಯಾರ್ಥಿನಿಯಾದ ಮೌಲ್ಯ ಆರ್ ಶೆಟ್ಟಿ (ಎಂಟನೇ ತರಗತಿ) ಇವಳು ರಾಜ್ಯ ಮಟ್ಟದ ನೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾಲತ ತರಬೇತಿ ನೀಡುತ್ತಿದ್ದಾರೆ.
ಸೆಪ್ಟೆಂಬರ್ 13 ರಂದು ಶುಕ್ರವಾರ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಕರ್ನಾಟಕ ಸಂಘದ ವತಿಯಿಂದ ನಡೆಸಿಕೊಂಡು ಬರುತ್ತಿರುವ ವಾರಾಂತ್ಯದ ಕನ್ನಡ ತರಗತಿ ಪುನರಾರಂಭೋತ್ಸವ ಸರಳ ರೀತಿಯಲ್ಲಿ ಸುಂದರವಾಗಿ ಜರುಗಿತು. ಮೊದಲಿಗೆ ಪ್ರಸಕ್ತ ಸಾಲಿನ ಕರ್ನಾಟಕ ಸಂಘದ ಕನ್ನಡ ಅಭಿವೃದ್ಧಿ ಕಾರ್ಯದರ್ಶಿಗಳಾದ ಭೀಮಪ್ಪ ಖೋತ ಅವರ ಸಂಕ್ಷಿಪ್ತ ಪ್ರಾಸ್ತವಿಕ ನುಡಿಗಳಿಂದ ಆರಂಭಿಸಿ, ಮಕ್ಕಳನ್ನು, ಪಾಲಕರನ್ನು ಸ್ವಾಗತಿವುದರೊಂದಿಗೆ, ಹೊಸದಾಗಿ ಕನ್ನಡ ಕಲಿಸುವ ಆಸಕ್ತಿ ತೋರಿಸಿ ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥದಿಂದ, ಮಕ್ಕಳಿಗೆ ಕನ್ನಡ ಹೇಳಿಕೊಡಲು ಸ್ವಯಂ ಪ್ರೇರಣೆಯಿಂದ ಮುಂದೆ ಬಂದಿರುವ ಕನ್ನಡ ಶಿಕ್ಷಕಿ ವೇದಾವತಿ ಅವರನ್ನು ಸಭೆಗೆ ಪರಿಚಯಿಸಿದರು. ಹಾಗೇ ತರಗತಿಯ ಪುನರಾರಂಭದಲ್ಲಿ ವಿಳಂಬಕ್ಕೆ ಕಾರಣ ನೀಡಿ ವಿಷಾದ ವ್ಯಕ್ತಪಡಿಸಿದರು. ಕನ್ನಡ ನಮ್ಮ ಹೆಮ್ಮೆಯ ಅಸ್ಮಿತೆ. ಅದನ್ನು ದಿನ ನಿತ್ಯ ಬಳಸೋಣ, ಬೆಳೆಸೋಣ. ಆ ಮೂಲಕ ಕನ್ನಡ ಉಳಿಸೋಣವೆಂದು ಕೋರಿದರು ಹಾಗೂ ಈ ನಿಟ್ಟಿನಲ್ಲಿ ಪಾಲಕರ ಸಲಹೆ ಸಹಕಾರ ಮುಕ್ತವಾಗಿ ತಿಳಿಸಲು ಕೋರುತ್ತಾ, ಸರ್ವರಿಗೂ ಸಂಘದ ಸದಸ್ಯರಾಗಲು ಪ್ರೇರೇಪಿಸಿ, ಸಂಘದ ಬೆಳ್ಳಿ ಹಬ್ಬದ ಈ…
ಕಾರ್ಕಳ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಇದರ ಪದಗ್ರಹಣ ಮತ್ತು ಇಂಜಿನಿಯರ್ಸ್ ಡೇ ಆಚರಣೆ ಸ್ಥಳೀಯ ಹೋಟೆಲ್ ಪ್ರಕಾಶ್ ನ ಸಂಭ್ರಮ ಸಭಾಂಗಣದಲ್ಲಿ ಜರಗಿತು. ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಉದ್ಘಾಟಿಸಿ, ಸ್ವಂತ ಕಟ್ಟಡದ ಅಗತ್ಯವಿದ್ದು ಸಿವಿಲ್ ಇಂಜಿನಿಯರ್ ಗಳಿಗೆ ಮಾನವೀಯತೆ ಅಗತ್ಯ ಎಂದರು. ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಸಿವಿಲ್ ಇಂಜಿನಿಯರ್ ಗಳಿಂದ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಸ್ವರ್ಣ ಕಾರ್ಕಳ ಎಂಬ ಹೊಸ ಕಲ್ಪನೆಯೊಂದಿಗೆ ಕಾರ್ಕಳ ಬೆಳೆಯುತ್ತಿದ್ದು ಅದರ ಮುಂದಿನ ಯೋಜನೆಗಳಿಗೆ ಅಸೋಸಿಯೇಷನ್ ನ ಸಹಕಾರ ಅಗತ್ಯ ಎಂದರು. ಮಂಗಳೂರು ಯೆಯ್ಯಾಡಿ ಮಂಜೇಶ್ವರ ಟೆಕ್ನೋ ಟ್ರೇಡರ್ಸ್ ನ ಅನಿಲ್ ಬಾಳಿಗ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೂತನ ಅಧ್ಯಕ್ಷ ವಿಜಯರಾಜ್ ಶೆಟ್ಟಿ ಮಾತನಾಡಿ, ಪೂರ್ವಾಧ್ಯಕ್ಷರ ಸಹಕಾರದಿಂದ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ನಡೆಸುವುದಾಗಿ ತಿಳಿಸಿದರು. ಮಂಗಳೂರು ಎಂ.ಸಿ.ಎಫ್ ನ ಜಾಯಿಂಟ್ ಜನರಲ್ ಮ್ಯಾನೇಜರ್ ಕೆ.ಬಿ. ಕೀರ್ತನ್ ಕುಮಾರ್, ಟೆಕ್ನಿಕಲ್ ಕಸ್ಟಮರ್ ಸೊಲ್ಯೂಷನ್ಸ್ ನ…