Author: admin
ಚದುರಂಗ ಆಟಗಾರರ ಮೆದುಳನ್ನು ಜಾಗೃತಿಗೊಳಿಸುವ, ಬುದ್ಧಿಮತ್ತೆಯನ್ನು ಹೆಚ್ಚಿಸುವ ಕ್ರೀಡೆಯಾಗಿದೆ ಎಂದು ಪಡುಬಿದ್ರಿಯ ಆಸ್ಟ್ರಿನ್ ಇನ್ಫ್ರಾ ಪ್ರೈವೇಟ್ ಲಿ. ಸಂಸ್ಥೆಯ ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಉಡುಪಿ ಮತ್ತು ಕಾಪು ಇವರ ಆಶ್ರಯದಲ್ಲಿ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ -22ನೇ ಶ್ರೀ ನಾರಾಯಣ ಗುರು ಟ್ರೋಫಿ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಶ್ರೀಧರ್ ಶೆಣೈ ಪಂದ್ಯಾಟ ಉದ್ಘಾಟಿಸಿದರು. ಮಂಗಳೂರು ಎಫಿಲೆನ್ಸ್ ಟೆಕ್ನಾಲಜೀಸ್ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯ ಸ್ಥಾಪಕ ಅವಿನಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಸ್ಟ್ರಿನ್ ಇನ್ಫ್ರಾ ಪ್ರೈವೇಟ್ ಲಿ. ನ ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಕೈಪುಂಜಾಲು ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ರಮೇಶ್ ಆರ್. ಪೂಜಾರಿ ಚೆಸ್ ಕಾಯಿಯನ್ನು…
ಮಾಲಿನಿ ಶೆಟ್ಟಿ ಇನ್ನಂಜೆ ಅವರು ಶಂಕರಪುರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ. ಕಾಪು ಪರಿಸರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಮಾಲಿನಿ ಶೆಟ್ಟಿಯವರು ಇನ್ನಂಜೆ ಯುವತಿ ಮಂಡಲ ಇದರ ಪೂರ್ವ ಅಧ್ಯಕ್ಷೆಯಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇನ್ನಂಜೆ ಒಕ್ಕೂಟದ ಮಾಜಿ ಅಧ್ಯಕ್ಷೆಯಾಗಿ, ಕಾಪು ಬಂಟರ ಸಂಘ ಇದರ ಸದಸ್ಯೆಯಾಗಿ, ರೋಟರ್ಯಾಕ್ಟ್ ಕ್ವೀನ್ ಆಗಿ ಮೂಡಿ ಬಂದ ಇವರು 2018-19 ರಲ್ಲಿ ರೋಟರ್ಯಾಕ್ಟ್ ಡಿಸ್ಟ್ರಿಕ್ಟ್ -3182 ರ ಮೊದಲ ಮಹಿಳಾ ಜಿಲ್ಲಾ ಪ್ರತಿನಿಧಿಯಾಗಿ (ಡಿ ಆರ್ ಆರ್) ಸುಮಾರು 42 ಕ್ಲಬ್ ಗಳನ್ನು ಮಾಡಿ ಯಶಸ್ವಿ ಪರಿಚಯ ಕಾನ್ಫರೆನ್ಸ್ ಮಾಡಿದ ಹೆಗ್ಗಳಿಕೆ ಇವರದ್ದು. 2015 ರಲ್ಲಿ ರಾಜಕೀಯ ಜೀವನಕ್ಕೆ ಕಾಲಿಟ್ಟ ಇವರು ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರಾಗಿ, 5 ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಪ್ರಸ್ತುತ ಇನ್ನಂಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. 2023 ರಲ್ಲಿ ಜೇಸಿಐ ಶಂಕರಪುರ ಜಾಸ್ಮಿನ್ ನ ಬೆಳ್ಳಿ ಹಬ್ಬದ…
ಯಕ್ಷಗಾನ ಮತ್ತು ಯಕ್ಷಗಾನ ತಾಳಮದ್ದಳೆ ಕ್ಷೇತ್ರವು ಉಳಿಯಬೇಕು, ಬೆಳೆಯಬೇಕು, ಹೊಸ ಹೊಸ ಕಲಾವಿದರು ಈ ರಂಗದಲ್ಲಿ ಸೃಷ್ಟಿಯಾಗಬೇಕು ಎನ್ನುವ ಉದ್ದೇಶವನ್ನಿರಿಸಿಕೊಂಡು ಮುಂಬಯಿ ನಗರದಾದ್ಯಂತ ಅಲ್ಲಲ್ಲಿ ಯಕ್ಷಗಾನ ಆಸಕ್ತರಿಗಾಗಿ ಶಿಬಿರವನ್ನು ಆಯೋಜಿಸಿ ಈ ಮೂಲಕ ಯುವ ಜನಾಂಗಕ್ಕೆ ಯಕ್ಷಗಾನ ಬಗ್ಗೆ ತಿಳುವಳಿಕೆ ಮತ್ತು ದೀಕ್ಷೆಯನ್ನು ನೀಡುತ್ತಾ ಬಂದಿರುವುದೇ ಅಲ್ಲದೇ ನಗರದ ಅನೇಕ ನಾಮಾಂಕಿತ ಕಲಾಪೋಷಕ ಗಣ್ಯ ಕನ್ನಡಿಗ ಉದ್ಯಮಿಗಳಿಗೂ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳಿಗೂ ಯಕ್ಷಗಾನ ದೀಕ್ಷೆಯನ್ನು ನೀಡಿ ಅವರೆಲ್ಲರೂ ಕಲಾವಿದರ ಸಾಲಿನಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಹಿರಿತನ ಯಕ್ಷಗುರು ಬಾಲಕೃಷ್ಣ ಶೆಟ್ಟಿಯವರಿಗೆ ಹಾಗೂ ಅವರ ಸಂಚಾಲಕತ್ವದಲ್ಲಿ ಕಳೆದ ಸುಮಾರು 23 ವರ್ಷಗಳಿಂದ ಕಾರ್ಯರೂಪದಲ್ಲಿರುವ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿಗೆ ಸಲ್ಲುವಂತಿದೆ. ಅದೇ ರೀತಿ ತವರೂರ ಅನೇಕ ಪ್ರಸಿದ್ಧ ನಾಮಾಂಕಿತ ಹಾಗೂ ಪ್ರತಿಭೆ ಇದ್ದರೂ ಸೂಕ್ತ ವೇದಿಕೆಯ ಮತ್ತು ಅವಕಾಶದ ಕೊರತೆ ಅನುಭವಿಸುತ್ತಿರುವ ತೆರೆಯ ಮರೆಯ ಯುವ ಪ್ರತಿಭಾವಂತ ಕಲಾಕಾರರನ್ನು ಆಯ್ದು ಅವರನ್ನು ತವರೂರಿನಿಂದ ಮುಂಬಯಿ ಮಹಾನಗರಕ್ಕೆ ಆಹ್ವಾನಿಸಿ, ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಯೋಗ್ಯ…
ವಿದ್ಯಾಗಿರಿ: ‘ಸಾಹಿತಿಕ ಕಥನದ ನಿರೂಪಣೆ ಮತ್ತು ಸಿನಿಮಾದ ನಿರೂಪಣೆಯು ವಿಭಿನ್ನ’ ಎಂದು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ಸಹಪ್ರಾಧ್ಯಾಪಕ ಸಾತ್ವಿಕ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ‘ಆಳ್ವಾಸ್ ಸಿನಿಮಾ ಸಮಾಜ’ದ ಆಶ್ರಯದಲ್ಲಿ ಮಂಗಳವಾರ ನಡೆದ ‘ನಿರೂಪಣಾ ತಲ್ಲೀನತೆ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಿನಿಮಾಕ್ಕೆ ನಿರ್ದಿಷ್ಟ ಕತೆ ಮುಖ್ಯವಾಗುವುದಿಲ್ಲ. ಸಿನಿಮಾ ನಿರೂಪಣೆಯ ಕಥನ ಶೈಲಿಯೇ ಪ್ರಮುಖವಾಗುತ್ತದೆ. ಸಾಹಿತ್ಯಿಕ ಭಾಷೆ ಹಾಗೂ ಸಿನಿಮಾ ಭಾಷೆಗಳೆರಡೂ ವಿಭಿನ್ನ ಎಂದು ಪ್ರಾತ್ಯಕ್ಷಿಕೆ ಸಹಿತ ವಿವರಿಸಿದರು. ಪ್ರತಿ ಸಿನಿಮಾವೂ ನೋಡುಗನ ದೃಷ್ಟಿಕೋನದಲ್ಲಿ ಬೇರೆ ಬೇರೆ ಅರ್ಥ ಕಲ್ಪಿಸಬಹುದು. ಆದರೆ, ಯಶಸ್ವಿ ನಿರ್ದೇಶಕನೊಬ್ಬ ತನ್ನ ಕಥಾ ಹಂದರವನ್ನು ಪರಿಣಾಮಕಾರಿಯಾಗಿ ನೋಡುಗರಿಗೆ ತಲುಪಿಸಿದಾಗ ಯಶಸ್ವಿ ಎನಿಸಿಕೊಳ್ಳುತ್ತಾನೆ ಎಂದರು. ಸಾಮಾನ್ಯ ವೀಕ್ಷಣೆಯಿಂದ ಸಿನಿಮಾ ಸೂಕ್ಷ್ಮತೆಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಸಿನಿಮಾವನ್ನು ಇತರ ಮಾಧ್ಯಮಕ್ಕೆ ಬದಲಾಯಿಸಿದರೆ ಸ್ವಾರಸ್ಯ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಿನಿಮಾಗಳು ವಿಭಿನ್ನ ವಿಚಾರಗಳ ಸಮೀಕರಣ ಎಂದರು. ಸಿನಿಮಾ ಎಂದರೇನು? ಸಿನಿಮಾವನ್ನು ನೋಡುವುದು ಹೇಗೆ?…
ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯ ವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತ ಡಾ. ಎಂ ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಮೂಡುಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಬುಧವಾರ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರುಮಾತನಾಡಿದರು. ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು. ಜಿಲ್ಲೆಯ…
ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ದೇಶಭಕ್ತ ಎನ್.ಎಸ್. ಕಿಲ್ಲೆ ಪ್ರತಿಷ್ಠಾನಗಳ ಸಹಯೋಗದೊಂದಿಗೆ ‘ಫಿಲೋ ಯಕ್ಷಾಮೃತ’ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮವು ಇತ್ತೀಚೆಗೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಭವನದಲ್ಲಿ ನಡೆಯಿತು. ಯಕ್ಷಾಮೃತ ಸರ್ಟಿಫಿಕೇಟ್ ಕೋರ್ಸ್ ನಲುವತ್ತು ಗಂಟೆಗಳ ಪಠ್ಯವನ್ನು ಹೊಂದಿದ್ದು, ಲಿಖಿತ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ವಂದನೀಯ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ ‘ಕಲೆಯು ವಿಶ್ವ ಮಾನ್ಯ. ಅದು ಜಾತಿ ಅಂತಸ್ತುಗಳ ಪರಿಧಿಯನ್ನು ಮೀರಿ ಪ್ರತಿಭಾ ಸಂಪನ್ನರಾದ ಸರ್ವರಿಗೂ ಒಲಿಯುವ ವಿಶೇಷ ವಿದ್ಯೆ. ಅದಕ್ಕೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳಗಿಸುವ ಅಪೂರ್ವ ಶಕ್ತಿ ಇದೆ’ ಎಂದರು. ಯಕ್ಷಗಾನ ರಂಗ ಪ್ರಯೋಗ ಕಲೆಯ ಸರ್ಟಿಫಿಕೇಟ್ ಕೋರ್ಸ್ ‘ಯಕ್ಷಾಮೃತ’ ದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು. ದೇಶಭಕ್ತ ಎನ್.ಎಸ್. ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್ ರೈ ಅವರು ಪ್ರಮಾಣ ಪತ್ರ ವಿತರಣೆ ಮಾಡಿ,…
ಮಳೆಗಾಲದಲ್ಲಿ ಮಳೆ ಬಂದರೇನೇ ಚಂದ. ಹಾಗೆಯೇ ಈ ಭೂಮಿ ಸಸ್ಯ ಶ್ಯಾಮಲೆಯಾಗಿರಬೇಕಾದರೆ, ನಾವೆಲ್ಲಾ ತಿನ್ನುವ ತುತ್ತು ಅನ್ನವೂ ಬೆಳೆಯಬೇಕಾದರೆ ಈ ಮಳೆ ಎಂಬ ಅಮೃತ ಸಿಂಚನವಾಗಲೇ ಬೇಕು. ಆದರೆ ಈ ಪರಿವೆ ಈಗಿನ ಜನಕ್ಕಾಗಲೀ ಜನಪ್ರತಿನಿಧಿಗಳಿಗಾಗಲೀ ಅಥವಾ ಮಂಗಳೂರಿನ ಮಹಾನಗರ ಪಾಲಿಕೆಗಾಗಲೀ ಇಲ್ಲ ಎಂದರೆ ಆಶ್ಚರ್ಯ ಪಡಬೇಕಾಗಿಲ್ಲ. ಎಲ್ಲರೂ ಅವರವರ ಸ್ವಾರ್ಥ ಸಾಧನೆಯಲ್ಲಿ ನಗರದ ನಾಳೆಯ ಭವಿಷ್ಯಕ್ಕೆ ಕೊಡಲಿಯೇಟು ಹಾಕುವುದರಲ್ಲೇ ನಿತ್ಯ ನಿರತರಾಗಿದ್ದಾರೆ. ಕಾರಣ ನಮ್ಮೆಲ್ಲರ ಕಣ್ಣ ಮುಂದೆಯೇ ಇದೆ. ಇದ್ದಲ್ಲೆಲ್ಲಾ ಅಗೆದು ಅಗೆದು ಹಿರಣ್ಯ ಕಶ್ಯಪುವಿನ ಉದರವನ್ನು ನರಸಿಂಹ ಬಗೆದುದಕ್ಕಿಂತಲೂ ಭೀಕರವಾಗಿ ಮಂಗಳೂರಿನ ರಸ್ತೆಯನ್ನೆಲ್ಲಾ ಅಗೆದು ಬಗೆದು ರಂಪ ರಾಡಿ ಮಾಡಿ ಹಾಕಿದ್ದಾರೆ. ಅಲ್ಲ ವಿಚಿತ್ರ ಅನಿಸೋದು!!! ಎಷ್ಟೊಂದು ಸಿಮೆಂಟ್, ಜಲ್ಲಿ, ಹೊಯಿಗೆ, ಕೆಲಸಗಾರರ ಶ್ರಮದ ಮಜೂರಿ ಇತ್ಯಾದಿಗಳನ್ನು ಬಳಸಿ ಮಾಡಿದ ಅಷ್ಟು ಸುಂದರ ಕಾಂಕ್ರೀಟನ್ನು ಕೇಕ್ ಕತ್ತರಿಸಿದ ಹಾಗೆ ತುಂಡು ತುಂಡು ಮಾಡುವಾಗ ಒಂದು ಚೂರೂ ಬೇಸರ ಅನಿಸುವುದಿಲ್ಲವೋ?!. ಈ ಮಂದಿಗೆ. ಅಯ್ಯೋ ಮಂಗಳೂರು ತುಂಬಾ ಇದನ್ನು ನೋಡಿ…
ಕೆರಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಯ್ಯಂಗಾರ್ ನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು-300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ಸ್ಥಾಪಕರಾದ ಜಡ್ಕಲ್ ನಾಗರಾಜ ಶೆಟ್ಟಿಯವರು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ, ಪ್ರಮುಖರಾದ ಕೆರಾಡಿ ಪಂಚಾಯತ್ ಅಧ್ಯಕ್ಷರಾದ ಸುದರ್ಶನ ಶೆಟ್ಟಿ, ಸದಸ್ಯರಾದ ರಾಘು ಕೊಠಾರಿ ಕೆರಾಡಿ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸುಮಿತ್ರಾ ಡಿ ಪಡುಕೋಣೆ, ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಉಪಸ್ಥಿತರಿದ್ದರು. ಹಯ್ಯಂಗಾರ್ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮೊಬೈಲ್, ಇಂಟರ್ನೆಟ್ ಸೌಲಭ್ಯವಿಲ್ಲದ ಕಡು ಗ್ರಾಮೀಣ ಪ್ರದೇಶವಾದ ಹಯ್ಯಂಗಾರ್ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್ ಶಿಕ್ಷಣ ಒದಗಿಸಲು ಕಂಪ್ಯೂಟರ್ ಮತ್ತು ಪೀಠೋಪಕರಣಗಳು, ಗ್ರಂಥಾಲಯದ ವ್ಯವಸ್ಥೆ, ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಗಿದೆ. ಇವೆಲ್ಲವುಗಳ ಸದುಪಯೋಗವನ್ನು ಎಲ್ಲಾ…
ಜಡ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ LKG ಹಾಗೂ UKG ತರಗತಿಗಳ ಶುಭಾರಂಭವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ನ ನಾಗರಾಜ ಶೆಟ್ಟಿ ಜಡ್ಕಲ್ ಉದ್ಘಾಟಿಸಿದರು. ಶಾಲೆಗೆ ಬೆಂಚುಗಳನ್ನು, ವಿದ್ಯಾರ್ಥಿಗಳಿಗೆ ಸಮವಸ್ತ್ರ, ನೋಟ್ ಪುಸ್ತಕ, ಪೆನ್ನು, ಐಡಿ ಕಾರ್ಡ್ ಗಳನ್ನು ವಿತರಿಸಲಾಯಿತು. ಜಡ್ಕಲ್ ಪಂಚಾಯತ್ ಅಧ್ಯಕ್ಷರಾದ ಪಾರ್ವತಿ, ಸದಸ್ಯರಾದ ಭಾರತಿ ಶೆಟ್ಟಿ, ಲಕ್ಷ್ಮಿ, ದೇವಿದಾಸ್ ವಿ ಜೆ, SDMC ಅಧ್ಯಕ್ಷರಾದ ಮಂಜುನಾಥ್ ನಾಯ್ಕ್, ಸ್ವಯಂಸ್ಪೂರ್ತಿ ಫೌಂಡೇಷನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ರೋಶಮ್ಮ, ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಉಪಸ್ಥಿತರಿದ್ದರು. ಜಡ್ಕಲ್ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ನಾಗರಾಜ ಶೆಟ್ಟಿ ಜಡ್ಕಲ್ ಅವರು ಉದ್ಘಾಟನಾ ಭಾಷಣದಲ್ಲಿ ತಾನು ಕಲಿತ ಜಡ್ಕಲ್ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ LKG ಹಾಗೂ UKG ತರಗತಿಗಳನ್ನು 2024 – 25 ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಿದ್ದು ಪಠ್ಯ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್ಸ್, ಬೆಂಚುಗಳು, ನೋಟ್…
ಉತ್ತರ ಕರ್ನಾಟಕದ ಪ್ರತಿಷ್ಠಿತ ರೋಟರಿ ಕ್ಲಬ್ ಹುಬ್ಬಳ್ಳಿ ಮಿಡ್ ಟೌನ್ ನ 2024-25 ರ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ದರ್ಖಾಸ್ತು ಶ್ರೀ ಸಂಜೀವ ಶೆಟ್ಟಿ, ಶ್ರೀಮತಿ ಶಶಿಕಲಾ ಶೆಟ್ಟಿ ಇವರ ಪುತ್ರ, ಪ್ರಸ್ತುತ ಹುಬ್ಬಳಿಯ ಗ್ಲೋಬಲ್ ಮೀಡಿಯಾದ ಪಾಲುದಾರರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಯಶಸ್ವೀ ಉದ್ಯಮಿಯಾಗಿರುವ ದಿನೇಶ್ ಶೆಟ್ಟಿಯವರು ಸಮಾಜ ಸೇವಕರಾಗಿಯೂ ಗುರುತಿಸಿಕೊಂಡು ಹುಬ್ಬಳಿ ಧಾರವಾಡ ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದಾರೆ. ಕ್ಲಬ್ ನ ಕಾರ್ಯದರ್ಶಿಯಾಗಿ ಪ್ರವೀಣ ಭನಸಾಲಿ ಹಾಗೂ ಖಜಾಂಚಿಯಾಗಿ ಸಂಗಮೇಶ ಹಂದಿಗೋಳ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.