Author: admin

ಮೂಡುಬಿದಿರೆ: ಆಳ್ವಾಸ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ `ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಕೆನಡಾದ ಖ್ಯಾತ ಹೋಮಿಯೋಪತಿ ವೈದ್ಯರು ಹಾಗೂ ಕೆಐಐಎ ಮತ್ತು ಕೆಎಐಎ ಸಂಸ್ಥೆಗಳ ಸಂಸ್ಥಾಪಕರಾದ ಡಾ| ವಲರ್ಮತಿ ರೇಚೆಲ್ ಫೆನಾರ್ಂಡಿಸ್ ಮಾತನಾಡಿ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಇತರ ಕ್ಷೇತ್ರಗಳ ಉನ್ನತ ಸಾಧನೆಗಳನ್ನು ಶ್ಲಾಘಿಸಿದರು. ಜೊತೆಗೆ ವೈದ್ಯಕೀಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಹಾಗೂ ವೈದ್ಯಕೀಯ ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಇನ್ನೋರ್ವ ಅತಿಥಿ ಯಎಇನ ಪ್ರಖ್ಯಾತ ಹೋಮಿಯೋಪತಿ ವೈದ್ಯ ಡಾ। ಆಲ್ಫೋನ್ಸ್ ಡಿಸೋಜ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣದೊಂದಿಗೆ ಕೌಶಲ್ಯಹಾಗೂ ವೈದ್ಯರು ಸಹಾನುಭೂತಿ ಮತ್ತು ಸೇವಾ ಮನೋಭಾವಗಳನ್ನು ತಮ್ಮ ವೃತ್ತಿಯಲ್ಲಿ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಅತಿಥಿಗಳನ್ನು ತಮ್ಮ ವೈದ್ಯಕೀಯ ಕ್ಷೇತ್ರದಲ್ಲಿನ ಸಾಧನೆಗಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ತ್ರೈಮಾಸಿಕ ಡಿಜಿಟಲ್  ಪತ್ರಿಕೆ ಇ- ಬುಲೆಟಿನ್ ‘ಹೋಮಿಯೋ ಇನ್‍ಸೈಟ್ ಅನ್ನು ಬಿಡುಗಡೆಗೊಳಿಸಲಾಯಿತು. ಕಾಲೇಜಿನ 2024-25ನೇ…

Read More

ಮುಲುಂಡ್ ಬಂಟ್ಸ್ ನ 16 ನೇ ವಾರ್ಷಿಕ ಮಹಾಸಭೆ ಶಾಂತಾರಾಮ್ ಬಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜೂನ್ 28 ರ ಶುಕ್ರವಾರ ಸಂಜೆ ಥಾಣೆ ಚೆಕ್ ನಾಕ ಸಮೀಪದ ಶಿಲ್ಪಾ ರೆಸಿಡೆನ್ಸಿ ಹೋಟೆಲ್ ನಲ್ಲಿ ಜರಗಿತು. ಈ ಸಂದರ್ಭದಲ್ಲಿ ಮುಲುಂಡ್ ಬಂಟ್ಸ್ ನ 2024-26 ನೇ ಸಾಲಿನ ನೂತನ ಅಧ್ಯಕ್ಷರನ್ನಾಗಿ ಕಳೆದೆರಡು ವರ್ಷದಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಥಾಣೆ ಮತ್ತು ಮುಲುಂಡ್ ಪರಿಸರದ ಜನಪ್ರಿಯ ಸಂಘಟಕ, ಲೆಕ್ಕ ಪರಿಶೋಧಕ ಸಿಎ ಕರುಣಾಕರ್ ಶೆಟ್ಟಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಿಎ ಕರುಣಾಕರ್ ಶೆಟ್ಟಿ ಮೂಲತಃ ಉಡುಪಿಯ ಅಂಬಲ್ಪಾಡಿಯವರು. ಅಂಬಲ್ಪಾಡಿ ಗುಜ್ಜಿ ಹೌಸ್ ಅಪ್ಪು ಶೆಟ್ಟಿ ಮತ್ತು ಅಂಬಲ್ಪಾಡಿ ಮೇಲ್ಮನೆ ಕಮಲಾ ಶೆಟ್ಟಿ ದಂಪತಿಯ ಸುಪುತ್ರ. ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಆದಿ ಉಡುಪಿಯ ಸ್ಕೂಲ್ ನಿಂದ ಮಾಧ್ಯಮಿಕ ಹಾಗೂ ಉಚ್ಛ ಮಾಧ್ಯಮಿಕ ಶಿಕ್ಷಣವನ್ನು ಉಡುಪಿ ಬೋರ್ಡ್ ಹೈಸ್ಕೂಲ್ ನಲ್ಲಿ ಪೂರೈಸಿರುವರು. ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಬಿಕಾಂ ಪದವಿ ಪೂರೈಸಿ ಮುಂಬಯಿಗೆ ಆಗಮಿಸಿದರು. ಮುಂದಿನ ಶಿಕ್ಷಣ ಮುಂಬಯಿಯ…

Read More

ಅಂತಾರಾಷ್ಟ್ರೀಯ ಸೇವಾ ಲಯನ್ಸ್ ಜಿಲ್ಲೆ 317 ಇದರ ಪ್ರಾಂತ್ಯ 6 ರ ವಲಯ ಅಧ್ಯಕ್ಷೆಯಾಗಿ ಲಯನ್ ರೂಪಶ್ರೀ ಜೆ.ರೈ ನಿಯುಕ್ತಿಗೊಂಡಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್ ನ 50 ನೇ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿರುವ ಇವರು, ಸೀಮಾ ಡಿಜಿಟಲ್ ಆರ್ಟ್ಸ್ ಪ್ರಿಂಟರ್ಸ್ ನ ಮಾಲಕರಾದ ಲಯನ್ ಜಯಂತ್ ರೈಯವರ ಪತ್ನಿ.

Read More

ಜುಲೈ 9ನೇ ತಾರೀಕು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ) USA ಇದರ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯುಎಸ್ಎ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮುಂತಾದ ಪ್ರಮುಖರು ನಮ್ಮ ಯಕ್ಷಗಾನ ತಂಡದ ಕಾರ್ಯಕ್ರಮಗಳನ್ನು ಅಮೇರಿಕಾದ 20 ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಂಡದಲ್ಲಿ ಹಿಮ್ಮೇಳದ ಕಲಾವಿದರಾಗಿ ಪಟ್ಲ ಸತೀಶ್ ಶೆಟ್ಟಿ, ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣ ಪದ್ಯಾಣ ಹಾಗೂ ಮುಮ್ಮೇಳದಲ್ಲಿ ಪ್ರೊ.ಎಂಎಲ್ ಸಾಮಗ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ,…

Read More

ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಧರ್ಮದೈವ ತುಳು ಸಿನಿಮಾ ಜುಲೈ 5 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಪುಣೆ, ಮುಂಬೈನಲ್ಲಿ ನಡೆದ ಪ್ರೀಮಿಯರ್ ಶೋ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. “ಧರ್ಮ ದೈವ” ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ನಟರಾಜ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ರಮೇಶ್ ರೈ ಕುಕ್ಕುವಳ್ಳಿ ಅವರು, “ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಸೇರಿದಂತೆ ಅನೇಕ ಸಾನಿಧ್ಯ ಸ್ಥಳಗಳು, ದೈವಾರಾಧನೆ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿವೆ. ಇಂದು ತುಳುನಾಡು, ತುಳು ಭಾಷೆ, ದೇಶ ವಿದೇಶ ತುಂಬಾ ಮಾನ್ಯತೆ ಪಡೆದಿದೆ. ಸಿನಿಮಾ ಮಾಧ್ಯಮ ಇಂದು ಪರಿಣಾಮಕಾರಿ ಶ್ರೀಮಂತ ಮಾಧ್ಯಮವಾಗಿ…

Read More

ಜೂನ್ 29: ಬ್ರಹ್ಮಾವರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಫ್ರೆಶರ್ಸ್ ಡೆ’ಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಬಿಗ್ ಮೆಡಿಕಲ್ ಸೆಂಟರ್‍ನ ವೈದ್ಯೆ ಡಾ. ಶ್ರುತಿ ಬಲ್ಲಾಳ್ ಆಗಮಿಸಿದ್ದರು. ಅವರು ಮಾತನಾಡಿ ದುರಭ್ಯಾಸಗಳು ನಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಆದ್ದರಿಂದ ನಾವು ಒಳ್ಳೆಯ ಆಹಾರ ಪದ್ಧತಿ, ಉತ್ತಮ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಜಿ ಎಮ್ ಸಂಸ್ಥೆ ಯೋಗ, ಕರಾಟೆ ವಿಭಿನ್ನ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದು ಮಕ್ಕಳೆಲ್ಲರೂ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಜಿ ಎಮ್ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಶುಭಹಾರೈಸಿ ಮಕ್ಕಳೆಲ್ಲರೂ ಕಲಿಕೆಯ ಜೊತೆಗೆ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಪ್ರೆಶರ್ಸ್ ಡೇ ಎಲ್ಲರೂ ಸ್ನೇಹ ಭಾವದಿಂದ ಜೊತೆಯಾಗಿ ಸೇರಿ ಸಂಭ್ರಮಿಸುವ ದಿನವೆಂದರು. ಹೊಸ ಶಿಕ್ಷಕರ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನೃತ್ಯ, ಗಾಯನ, ಪ್ರಹಸನ, ಮೂಕಾಭಿನಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋರಂಜನೆಯ…

Read More

ಕಾಲ್ತೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಪ್ಪಾಡಿ, ಮೂರೂರುವಿನಲ್ಲಿ ಸ್ವಯಂಸ್ಪೂರ್ತಿ ಫೌಂಡೆಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು-300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಬೈಂದೂರು ಶಾಸಕರ ಪ್ರತಿನಿಧಿಯಾಗಿ ಉದ್ಯಮಿ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಲ್ತೋಡು ಪಂಚಾಯತ್ ಅಧ್ಯಕ್ಷರಾದ ಅಣ್ಣಪ್ಪ ಶೆಟ್ಟಿ, ಪ್ರಮುಖರಾದ ಆದಿರಾಜ್ ಜೈನ್, ಗೋಪಾಲ್ ಶೆಟ್ಟಿ ಮೂರೂರು ದೊಡ್ಮನೆ, ಚಂದ್ರಶೇಖರ್ ಶೆಟ್ಟಿ ಹೊರ್ಲೆಮನೆ, ಅಣ್ಣಪ್ಪ ಪೂಜಾರಿ ಕಮ್ತಾಡಿಮನೆ, CRP ರಾಮನಾಥ್ ಮೇಸ್ತ, ಪ್ರದೀಪ್ ಶೆಟ್ಟಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಹೆರಿಯಣ್ಣ ಮಡಿವಾಳ, ಶಾಲಾ ಮುಖ್ಯೋಪಾಧ್ಯಾಯಿನಿ ಶೈಲಜಾ, ಸಮೃದ್ಧ ಬೈಂದೂರು ತಂಡದ ಸದಸ್ಯರಾದ ಶೋಧನ್ ಮಲ್ಪೆ ಉಪಸ್ಥಿತರಿದ್ದರು. ಕಪ್ಪಾಡಿ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೆಶನ್ ವತಿಯಿಂದ ವಿತರಿಸಲಾಯಿತು. ಸ್ವಯಂಸ್ಫೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ ಶೆಟ್ಟಿ ಜಡ್ಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ತಮ್ಮ ತಂದೆಯವರು ಓದಿದ ಶಾಲೆ ಜೊತೆಗೆ ಗ್ರಾಮೀಣ ಪ್ರದೇಶವಾದ ಕಪ್ಪಾಡಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸ್ಮಾರ್ಟ್ ಕ್ಲಾಸ್…

Read More

ವಿದ್ಯಾಗಿರಿ: ‘ಸ್ವಾಯತ್ತ ಎಂಬುದು ಶಿಕ್ಷಣ ಸಂಸ್ಥೆಯ ಸ್ವಯಂ ಪರಿಕಲ್ಪನೆಗಳ ಸಾಕಾರಕ್ಕೆ ದೊರೆತ ಮಹತ್ತರ ಜವಾಬ್ದಾರಿ. ಇಲ್ಲಿ ಬೋಧಕರು ನಿರಂತರ ವಿದ್ಯಾರ್ಥಿಗಳಾಗಬೇಕು’ ಎಂದು ಮಂಗಳೂರಿನ ಡಾ.ಶಿವರಾಮ ಕಾರಂತ ನಿಸರ್ಗ ಧಾಮದ ವಿಜ್ಞಾನ ವಿಭಾಗದ ನಿರ್ದೇಶಕ ಡಾ.ಕೆ.ವಿ.ರಾವ್ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ (ಸ್ವಾಯತ್ತ) ಶುಕ್ರವಾರ ನಡೆದ ಆಂತರಿಕ ಮೌಲ್ಯ ಖಾತರಿ ಕೋಶ (ಐಕ್ಯುಎಸಿ)ದ ಸಭೆಯಲ್ಲಿ ಅವರು ಮಾತನಾಡಿದರು. ‘ಸಂಸ್ಥೆಗಳು ತಮ್ಮ ಸಾಮರ್ಥ್ಯ, ದೌರ್ಬಲ್ಯ, ಅವಕಾಶ ಹಾಗೂ ಅಪಾಯದ (ಸ್ವೊಟ್) ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಂಡಾಗ ಪ್ರಗತಿ ಕಾಣಲು ಸಾಧ್ಯ. ದೂರದೃಷ್ಟಿ, ಸಮಯ ನಿರ್ಬಂಧಿತ ಗುರಿ, ನಿರಂತರ ಕಲಿಕೆ ಇರಬೇಕು’ ಎಂದ ಅವರು, ‘ಕಾಲೇಜು ಎಂದರೆ ಕೇವಲ ಕಟ್ಟಡವಲ್ಲ. ಅದೊಂದು ಜೀವಂತಿಕೆಯ ಅಸ್ತಿತ್ವ’ ಎಂದರು. ‘ಕೈಗಾರಿಕೆಗಳ ಜೊತೆ ಸಂಬAಧ, ಔದ್ಯೋಗಿಕ ತರಬೇತಿ, ಕೌಶಲ ವೃದ್ಧಿ, ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ಪಕ್ವತೆಯಲ್ಲಿ ಆಳ್ವಾಸ್ ಯಾವಾಗಲೂ ಮಾದರಿ’ ಎಂದು ಬಣ್ಣಿಸಿದರು. ಯೆನೆಪೋಯಾ ಪರಿಗಣಿತ ವಿಶ್ವವಿದ್ಯಾಲಯ ಆಯುಷ್ ಸಂಶೋಧನಾ ಕೇಂದ್ರದ ವಿಜ್ಞಾನಿ ಹಾಗೂ…

Read More

ವಿದ್ಯಾಗಿರಿ: ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ನ ಸೇವೆಯ ಧ್ಯೇಯದಿಂದ ವ್ಯಕ್ತಿ ನಿರ್ಮಾಣ ಸಾಧ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡದ ಜಿಲ್ಲೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಹೇಳಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ರೋವರ್ಸ್ ಮತ್ತು ರೇಂಜರ್ಸ್ 2024-25ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನಕ್ಕೆ ಬೇಕಾದ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕಲಿಯಲು ಸಾಧ್ಯ. ಇಲ್ಲಿ ನಡೆಯುವ ಶಿಬಿರಗಳು ವಿದ್ಯಾರ್ಥಿಗಳ ಜೀವನಕ್ಕೆ ಅವಶ್ಯವಾದ ಪಾಠಗಳನ್ನು ಹೇಳಿಕೊಡುತ್ತವೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯುಕ್ತ ಡಾ.ಮೋಹನ ಆಳ್ವ ಅವರ ಶ್ರಮದಿಂದ ಜಿಲ್ಲಾ ಘಟಕವು ಮುಂಚೂಣಿಯಲ್ಲಿದೆ. ಆಳ್ವಾಸ್ ಸಾಂಸ್ಕೃತಿಕ ಜಾಂಬೂರಿಯು ಇಡೀ ವಿಶ್ವವೇ ಮೂಡುಬಿದಿರೆಯತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಪಠ್ಯದ ಕಲಿಕೆಯ ಜೊತೆಗೆ ಪಠ್ಯತರ ಚಟುವಟಿಕೆಗಳು ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಇದರಿಂದ ವಿದ್ಯಾರ್ಥಿಗಳ ಮನಸ್ಥಿತಿ…

Read More

ವಿದ್ಯಾಗಿರಿ: 21ನೇ ಶತಮಾನದಲ್ಲಿ ಜನರಿಗೆ ಆಯುರ್ವೇದದ ಮಹತ್ವ ತಿಳಿಯುತ್ತಿರುವುದು ಸಂತಸದ ಬೆಳವಣಿಗೆ ಎಂದು ಆಳ್ವಾಸ್  ಹೆಲ್ತ್ ಸೆಂಟರ್‌ನ ಸ್ತ್ರೀ ರೋಗ ತಜ್ಞೆ ಡಾ. ರೇವತಿ ಭಟ್ ಹೇಳಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸ್ನಾತಕೋತ್ತರ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ವತಿಯಿಂದ ಪ್ರಾಜ್ಞಾ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ‘ಎಂಡೊಮೆಟ್ರಿಯೊಸಿಸ್- ಒಂದು ಸಂಯೋಜಿತ ವಿಧಾನ’ ಕಾರ್ಯಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಆಯುರ್ವೇದ ಕ್ಷೇತ್ರದಲ್ಲಿ ಹೆಚ್ಚು ಕಾರ್ಯಗಾರ ಹಾಗೂ ವಿಚಾರ ಸಂಕಿರಣಗಳು ನಡೆಯಬೇಕು. ಇದರಿಂದ ಪಡೆದ ಜ್ಞಾನವನ್ನು ನಾವು ಇತರರಿಗೆ ತಿಳಿಸುವ ಅವಶ್ಯಕತೆ ಇದೆ. ಪ್ರಸ್ತುತ ವರ್ತಮಾನದಲ್ಲಿ ಜನರು ಸಾಕ್ಷಿಗಳನ್ನು ಹೆಚ್ಚು ನಂಬುತ್ತಾರೆ. ಹಾಗಾಗಿ ಸಾಕ್ಷಿಗಳ ಜೊತೆ ಆಯುರ್ವೇದದ ಬಗೆಗೆ ಜನರಿಗೆ ಖಾತರಿ ಪಡಿಸಬೇಕು ಎಂದು ಹೇಳಿದರು. ನಮ್ಮ ಹಿಂದಿನ ತಲೆಮಾರಿನ ಜನರಿಗೆ ಪ್ರಕೃತಿಯಲ್ಲಿ ದೊರೆಯುವ ಔಷಧಿಗಳ ಬಗ್ಗೆ ಅಪಾರ ಜ್ಞಾನವಿದ್ದರೂ ಅವರು ಆ ಜ್ಞಾನವನ್ನು ಮುಂದಿನ ತಲೆಮಾರಿಗೆ ಪಸರಿಸಿಲ್ಲ. ಆದರೆ ಈ…

Read More