Author: admin
ಈ ಬಾರಿಯ ಮಹಾರಾಷ್ಟ್ರ ಎಸ್ ಎಸ್ ಸಿ ಬೋರ್ಡ್ ಪರೀಕ್ಷೆಯಲ್ಲಿ ಹೊರನಾಡ ಕನ್ನಡಿಗರ ಹೆಮ್ಮೆಯ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಿತ ಮಂಜುನಾಥ ವಿದ್ಯಾಲಯ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಿಗೆ ಉತ್ತಮ ಫಲಿತಾಂಶ ಬಂದಿದೆ. ಕನ್ನಡ ಮಾಧ್ಯಮದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಪ್ರತಿಶತ ಫಲಿತಾಂಶ ತಂದಿರುತ್ತಾರೆ. ಅವರಲ್ಲಿ 4 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶೇ. 92 ಅಂಕಗಳೊಂದಿಗೆ ಸ್ನೇಹ ರಾಜು ಭಂಡಾರೆ ಪ್ರಥಮ, ಜಯಂತಿ ತಾರಾಸಿಂಗ್ ಚವ್ಹಾನ್ ಶೇ. 81.40 ಅಂಕಗಳೊಂದಿಗೆ ದ್ವಿತೀಯ, ಅರ್ಜುನ್ ಸುನೀಲ್ ರಾಠೋಡ್ ಶೇ. 79 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.ಆಂಗ್ಲ ಮಾಧ್ಯಮದಲ್ಲಿ ಒಟ್ಟು 139 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 74 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ…
ಭಾರತೀಯ ರಕ್ಷಣಾ ಪಡೆಗಳಿಗೆ ಸೇರಿ ದೇಶ ಸೇವೆ ಮಾಡ ಬಯಸುವ ನಾಗರಿಕರಿಗೆ ಅನುಕೂವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾದೇಶಿಕ ಸೇನಾ ನೇಮಕಾತಿ(TA) ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿ ಪ್ರಾರಂಭವಾಗಿದ್ದು, ದಾಖಲಾತಿ ಪ್ರಕ್ರಿಯೆ ಮುಂದುವರೆದಿದೆ. ಈಗಾಗಲೇ ರಕ್ಷಣಾ ಪಡೆಗಳ ನೇಮಕಾತಿಗಳಲ್ಲಿ ಭರ್ಜರಿ ಯಶಸ್ಸನ್ನು ಪಡೆದು ಮುನ್ನಡೆಯುತ್ತಿರುವ ವಿ. ಅಕಾಡೆಮಿಯಲ್ಲಿ ಪ್ರಾದೇಶಿಕ ಸೇನಾ ನೇಮಕಾತಿ (Teritorial Army)ಯ ಪೂರ್ವ ಸಿದ್ದತಾ ತರಬೇತಿ ಪ್ರಾರಂಭವಾಗಿದ್ದು, ತರಬೇತಿಯು ಲಿಖಿತ ಪರೀಕ್ಷೆ ಮತ್ತು ಮೈದಾನ ತರಬೇತಿಯನ್ನು ಒಳಗೊಂಡಿದ್ದು ಲಿಖಿತ ಪರೀಕ್ಷೆಯ ತರಬೇತಿಯು ನೇರ ತರಗತಿ/ಆನ್ಲೈನ್ ತರಗತಿಯ ಮೂಲಕ ನಡೆಯಲಿದೆ. ಮೈದಾನ ತರಬೇತಿಯು ನೇರ ತರಗತಿಯ ಮೂಲಕ ಮಾತ್ರ ನಡೆಯುತ್ತದೆ (ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ದಾಖಲಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ತಿಳಿಸಲಾಗುತ್ತದೆ). ಈ ನೇಮಕಾತಿಗೆ ಸಂಬಂದಿಸಿದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು,T A ನೇಮಕಾತಿಗಳಲ್ಲಿ ವಿವಿಧ ಹಂತಗಳಿದ್ದು, SSLC, PUC, DEGREE ವಿದ್ಯಾರ್ಹತೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ನಡೆಯಲಿದ್ದು ಈ ಎಲ್ಲಾ ವಿದ್ಯಾರ್ಹತೆಗೆ…
ಯಕ್ಷಗಾನ ಕ್ಷೇತ್ರದ ಚರಿತ್ರ ನಟ, ರಾಜ್ಯ- ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಮೇರು ಕಲಾವಿದ ದಿ| ಅಳಿಕೆ ರಾಮಯ್ಯ ರೈ ಅವರ ಹೆಸರಿನಲ್ಲಿ ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಪ್ರತಿ ವರ್ಷ ನೀಡುವ ಅಳಿಕೆ ಯಕ್ಷ ಸಹಾಯ ನಿಧಿಗೆ 2024 – 25 ನೇ ಸಾಲಿಗೆ ಹಿರಿಯ ಯಕ್ಷಗಾನ ಕಲಾವಿದ, ತೆಂಕುತಿಟ್ಟಿನ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಯಕ್ಷಗಾನ ವಿದ್ವಾಂಸರಾದ ಡಾ. ಎಂ.ಪ್ರಭಾಕರ ಜೋಶಿ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಹಿರಿಯ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅವರನ್ನೊಳಗೊಂಡ ಸಲಹಾ ಸಮಿತಿಯ ಸೂಚನೆಯಂತೆ ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಸಹಾಯ ನಿಧಿ ನೀಡಲಾಗುವುದು ಎಂದು ಅಳಿಕೆ ರಾಮಯ್ಯ ರೈ ಪುತ್ರ ಹಾಗೂ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾ ಪ್ರಸಾದ್ ರೈ ಅವರು ಮೇ 15 ರಂದು ನಗರದ ಪತ್ರಿಕಾ ಭವನದಲ್ಲಿ ಜರಗಿದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಟ್ರಸ್ಟ್ ಸಲಹಾ ಸಮಿತಿ ಸಂಚಾಲಕ ಪ್ರೊ.…
ಖೇಲೋ ಇಂಡಿಯಾ 2025 ರಲ್ಲಿ ಭಾಗವಹಿಸಿದ ಮಂಗಳೂರು ಬಂಟ್ಸ್ ಹಾಸ್ಟೆಲ್ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚಿಂತನ್ ಎಸ್. ಶೆಟ್ಟಿ ಈಜು ಚಾಂಪಿಯನ್ಶಿಪ್ನಲ್ಲಿ 2 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.ಮೇ 5 ರಿಂದ ಮೇ 9 ರವರೆಗೆ ಬಿಹಾರದ ಗಯಾದಲ್ಲಿ ಖೇಲೋ ಇಂಡಿಯಾ 2025 ನಡೆದಿದ್ದು, ಅದರಲ್ಲಿನ ಈಜು ಚಾಂಪಿಯನ್ಶಿಪ್ನಲ್ಲಿ ಚಿಂತನ್ ಎಸ್. ಶೆಟ್ಟಿ ಸ್ಪರ್ಧಿಸಿ 2 ಚಿನ್ನ ಮತ್ತು 4 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಬೆಂಗಳೂರಿನ ಸರ್ಜಾಪುರದ ಲಕ್ಷ್ಯನ್ ಅಕಾಡೆಮಿ ಆಫ್ ಸ್ಪೋರ್ಟ್ಸ್ ನ ಕೋಚ್, ನಿರೂಪ್ ಮತ್ತು ರೋಹಿತ್ ಅವರಿಂದ ತರಬೇತಿ ಪಡೆಯುತ್ತಿರುವ ಚಿಂತನ್ ಶೆಟ್ಟಿ ಶಶಿಧರ್ ಶೆಟ್ಟಿ ಮತ್ತು ಹರಿಣಾಕ್ಷಿ ಶೆಟ್ಟಿ ಅವರ ಪುತ್ರ.
ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಟಾಸ್” ತುಳು ಮತ್ತು ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ಶರವು ಶ್ರೀ ಮಹಾಗಣಪತಿ ದೇವಸ್ಥಾದ ಪ್ರಧಾನ ಅರ್ಚಕರಾದ ರಾಘವೇಂದ್ರ ಶಾಸ್ತ್ರಿ ಆಶೀರ್ವಚನ ನೀಡಿದರು. ಡಾ| ದೇವದಾಸ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸುತ್ತೇಜ್ ಶೆಟ್ಟಿ, ಕ್ಯಾಟ್ಕಾದ ಅಧ್ಯಕ್ಷ ಲಂಚೂಲಾಲ್, ಶರ್ಮಿಳಾ ಕಾಪಿಕಾಡ್, ಶೋಭರಾಜ್ ಪಾವೂರು, ಬಾಳ ಜಗನ್ನಾಥ ಶೆಟ್ಟಿ, ಮಣಿಕಾಂತ್ ಕದ್ರಿ, ಅನೂಪ್ ಸಾಗರ್, ಯತೀಶ್ ಪೂಜಾರಿ, ನಿತೇಶ್ ಸುವರ್ಣ, ಕೃತಿ ಶೆಟ್ಟಿ, ಚೈತ್ರ ಶೆಟ್ಟಿ ಉಪಸ್ಥಿತರಿದ್ದರು.ರಾಜ್ಯ ಪ್ರಶಸ್ತಿ ಪುರಸ್ಜೃತ ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ಕಾಪಿಕಾಡ್ ನಿರ್ದೇಶನ ಮತ್ತು ಅಭಿನಯದ ಟಾಸ್ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ತಾರಾಗಣದಲ್ಲಿ ಡಾ| ದೇವದಾಸ್ ಕಾಪಿಕಾಡ್, ಅರ್ಜುನ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್…
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ (ಅSಇಇಖಿ) ರವರು 03 ಮೇ, 2025 ರಲ್ಲಿ ನಡೆಸಿದ ಅSಇಇಖಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಹಾರಿಕ ಗೌಡ ಆರ್. ಬಿ.(153), ಇಯಾನ್ ಪೌಲ್(147), ಬಸವ ಪ್ರಸಾದ್ ಕಾಜಿ(142), ಪೂರ್ಣ ಭಟ್ ಕೆ.ಎಲ್(141), ಸೃಜನ್ ಎಸ್.ಭಟ್(140), ಲಿಖಿತ್ ರೆಡ್ಡಿ ಎಚ್.ಎಂ(140), ರಕ್ಷಿತಾ ಆರ್.ಕಾಮತ್(135), ರೇಷ್ಮಾ ಜಿ.ಕೆ.(135) ಅಭಿಷೇಕ್ ಉಮಾದಿ(131), ಕೀರ್ತಿ ಪೈ(129), ಶ್ರದ್ಧಾ ಪಿ.ಅಂಗಡಿ(125), ಎಚ್.ಎ ಅದನ್ ಬೆಳ್ಳಿಯಪ್ಪ(125), ಪ್ರಭವ್ ಜಿ. ಶೆಟ್ಟಿ(121), ಆರ್ಯ ಬಿ.ವಿ(120), ಅಪ್ಸರ್ ಪಾಹಿಮ್(120), ಧನ್ಯಶ್ರೀ ಶೆಟ್ಟಿ(119), ಸೌರವ್ ರವಿ ಶೇಟ್(116), ಪೃಥ್ವಿ ಜಾಜಿ(115), ಸಾತ್ವಿಕ್ ಯು.ಆರ್(114), ಕನಿಷ್ಕ ಸೇನ್ ಎಸ್(113), ಸಪಲಿಗ ಸ್ವಾತಿ ತಿಮ್ಮಪ್ಪ(111), ಶ್ರೀಕಾರ್ ದುಬೀರ(111), ವಜ್ರ ಗೌಡ(110), ಶ್ರೇಯಸ್ ವಿ.ರೆಡ್ಡಿ(110), ಅನನ್ಯ ರಾಜೇಶ್(109, ಬಿಪಿನ್ ಗೌಡ(108), ಎಸ್. ನಂದನ್(106), ವಿ.ಎಸ್. ವೈಭವ್(105), ಕೆ.ವೈ ದಿಲೀಪ್(103),…
ಪಟ್ಲ ಸತೀಶ್ ಶೆಟ್ಟಿಯವರ ಮೇಲಿನ ಅಭಿಮಾನದಿಂದ ಮತ್ತು ನಿರಂತರ ಅವರು ಮಾಡುತ್ತಿರುವ ಸಮಾಜ ಸೇವೆಯನ್ನು ನೋಡಿ ಭಾವುಕರಾಗಿ ಮುಂಬೈ ಉದ್ಯಮಿ, ಸಮಾಜ ಸೇವಕ ಕುಸುಮೋದರ ಡಿ. ಶೆಟ್ಟಿಯವರು 1 ಕೋಟಿ ರೂಪಾಯಿಗಳ ಬೃಹತ್ ದೇಣಿಗೆಯನ್ನು ಘೋಷಿಸಿ ಫೌಂಡೇಶನ್ ನ ಮಹಾದಾನಿಗಳಲ್ಲೊರ್ವರಾಗಿ ಕಲೆ, ಕಲಾವಿದರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಮುಂದಾಗಿದ್ದಾರೆ. ಸ್ನೇಹಪರ ಧೋರಣೆ, ಔಧಾರ್ಯತೆ, ಸಾಮಾಜಿಕ ಕಳಕಳಿ ಎಲ್ಲದಕ್ಕೂ ಮಿಗಿಲಾಗಿ ನಿರಾಡಂಬರದ ಸರಳ, ಸಜ್ಜನಿಕೆಯ, ನೇರ ನಡೆನುಡಿಯ ಸಹೃದಯಿ ವ್ಯಕ್ತಿಯಾಗಿ, ಛಲಗಾರರಾಗಿ ತಮ್ಮ ಪ್ರಾಮಾಣಿಕ ನಿಲುವುಗಳಿಂದ ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿರುವ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತರಾದ ಕುಸುಮೋದರ ಶೆಟ್ಟಿಯವರು ತಮ್ಮ ಬದುಕನ್ನೇ ಸಮಾಜ ಸೇವೆಗಾಗಿ ಮೀಸಲಿಟ್ಟವರು. ಜನ ಸಾಮಾನ್ಯರ ಕಲ್ಯಾಣಕ್ಕಾಗಿ ತಮ್ಮ ತಾಯಿಯ ಹೆಸರಿನಲ್ಲಿ ಭವಾನಿ ಫೌಂಡೇಶನ್ ಟ್ರಸ್ಟ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ಸಾವಿರಾರು ಮಂದಿ ಅಶಕ್ತ ಕುಟುಂಬದ ಬಾಳಿಗೆ ಬೆಳಕಾದವರು. ವೈದ್ಯಕೀಯ ನೆರವು, ವಿಧವಾ ವೇತನ, ಬಡ ಹೆಣ್ಮಕ್ಕಳ ಮದುವೆಗೆ ನೆರವು, ಶೈಕ್ಷಣಿಕ ನೆರವು, ಅಶಕ್ತರ ಮನೆ ನಿರ್ಮಾಣಕ್ಕೆ ನೆರವು ಸೇರಿದಂತೆ…
ಮನುಷ್ಯನ ಜೀವನದಲ್ಲಿ ಹಲವು ಸವಾಲುಗಳಿರುತ್ತದೆ. ಅದನ್ನು ಮೆಟ್ಟಿ ನಿಲ್ಲುವ ತಾಕತ್ತು ನಮ್ಮಲ್ಲಿರಬೇಕು. ಧರ್ಮ, ಆರಾಧನೆ ಜತೆಗೆ ಕುಟುಂಬ ಸ್ನೇಹ ನಮ್ಮಲಿರಬೇಕು ಎಂದು ಮುಂಬಯಿ ಉದ್ಯಮಿ ಮೋಹನ್ ಚೌಟ ಮಧ್ಯ ನುಡಿದರು. ಅವರು ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ಸೇವಾ ಸಂಘ ಮಧ್ಯ ಇವರ 53 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅಭಿವೃದ್ದಿ ನಮ್ಮ ಗುರಿಯಾಗಬೇಕು : ಅನಿಲ್ ಶೆಟ್ಟಿ ಸೂರಿಂಜೆ ಮುಖ್ಯ ಅತಿಥಿಯಾಗಿ ಬಾಗವಹಿಸಿದ್ದ ಮುಂಬಯಿ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ ಮಾತನಾಡಿ, ಮನುಷ್ಯ ತನ್ನ ಜೀವನದಲ್ಲಿ ಉತ್ತಮ ಕಾರ್ಯ ಆಯೋಜಿಸಬೇಕು. ಮಾನವ ಅಭಿವೃದ್ಧಿಗೆ ಪೂರಕವಾದ ಕಾರ್ಯ ಚಟುವಟಿಕೆ ನಾವು ಮಾಡಬೇಕು. ಅಭಿವೃದ್ಧಿ ನಮ್ಮ ಗುರಿಯಾಗಬೇಕು ಎಂದರು. ಮುಂಬಯಿ ವಕೀಲರಾದ ದಿನಕರ ಕೆ ಶೆಟ್ಟಿ ಮಧ್ಯ, ಚೇಳ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಮುಂಬಯಿ ಉದ್ಯಮಿ ರಮೇಶ್ ಶೆಟ್ಟಿ ಸಾಣೂರು ಮಧ್ಯ, ಮುಂಬಯಿ ಉದ್ಯಮಿ ಕುಟ್ಟಿ ಶೆಟ್ಟಿ ಬಗ್ಗಣ್ಣಮನೆ…
ಮುಂಬಯಿ ವಿಶ್ವವಿದ್ಯಾಲಯ, ಪ್ರಸಕ್ತ ಸಾಲಿನ ಕನ್ನಡ ಎಂ.ಎ, ತರಗತಿಯ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯವು ಕನ್ನಡ ಎಂ.ಎ (ಸೆಮಿಸ್ಟರ್, ರೆಗ್ಯೂಲರ್) ಪ್ರಥಮ ವರ್ಷದ ತರಗತಿ (2025-2026ನೆಯ ಸಾಲಿನ) ಅಧ್ಯಯನಕ್ಕೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ,ಬಿ. ಟೆಕ್ ಮೊದಲಾದ ಪದವಿ ಪಡೆದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ತರಗತಿಗೆ ಹಾಜರಾತಿ ಕಡ್ಡಾಯವಿರುತ್ತದೆ. ಅಧ್ಯಯನ, ಪ್ರವೇಶಕ್ಕೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ಸರ್ವ ಪ್ರಥಮರಾದ ವಿದ್ಯಾರ್ಥಿಯೊಬ್ಬರಿಗೆ ಎಂ.ಬಿ ಕುಕ್ಯಾನ್ ಚಿನ್ನದ ಪದಕವನ್ನು ಸಹ ವಿಶ್ವವಿದ್ಯಾಲಯದಿಂದ ನೀಡಲಾಗುತ್ತದೆ. ಆನ್ಲೈನ್ ಮೂಲಕ ಪ್ರವೇಶದ ಅರ್ಜಿಗಳನ್ನು ತುಂಬುವುದು ಅನಿವಾರ್ಯ. ಆಸಕ್ತ ಅರ್ಹ ಅಭ್ಯರ್ಥಿಗಳು ಸ್ವಲಿಖಿತ ಅರ್ಜಿಯನ್ನು ಹಾಗೂ ಎಲ್ಲಾ ದಾಖಲೆಗಳ ಪ್ರತಿಯನ್ನು Dr. G. N. Upadhya, Head, Department of Kannada, University of Mumbai, Ranade Bhavan, Vidyanagari, Santacruz(East), Mumbai 400 098 Email: kannadadepartment@gmail.com ವಿಳಾಸಕ್ಕೆ ಜೂನ್ 3ರೊಳಗೆ ಕಳುಹಿಸಬಹುದು. https://mu.samarth.edu.in/index.php/site/login…
‘ತುಳುನಾಡಿನ ಗುತ್ತು ಬಾಳಿಕೆಗಳು ತಮ್ಮ ಶಿಷ್ಟಾಚಾರವನ್ನು ಮೀರದೆ ಪರಂಪರಾಗತವಾದ ಆಚಾರ ವಿಚಾರಗಳನ್ನು ಗೌರವಿಸುತ್ತಿರುವುದು ಒಂದು ಉತ್ತಮ ಲಕ್ಷಣ. ದೈವಗಳ ಚಾವಡಿ, ನಾಗ ಸಾನಿಧ್ಯ, ತರವಾಡು ಮನೆಗಳನ್ನು ಪುನರ್ ನಿರ್ಮಿಸಿ ತಮ್ಮವರೆಲ್ಲರನ್ನೂ ಒಂದೆಡೆ ಸೇರಿಸಲು ಉಪಕ್ರಮಿಸಿರುವುದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಹಬ್ಬ ಹರಿದಿನಗಳನ್ನು ಒಂದೇ ಕಡೆ ಎಲ್ಲರೂ ಒಟ್ಟಾಗಿ ಆಚರಿಸುತ್ತಿರುವುದು ಕೌಟುಂಬಿಕ ಏಕತೆಯನ್ನು ಬಲಪಡಿಸಿದೆ’ ಎಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಕಾಸರಗೋಡಿನ ಪಾರಕಟ್ಟೆಯಲ್ಲಿ ಚೆಂಗಳ ಗುತ್ತು ಶ್ರೀ ವಿಷ್ಣುಮೂರ್ತಿ ಧೂಮಾವತಿ ಹಾಗೂ ಪರಿವಾರದೈವಗಳ ಪ್ರತಿಷ್ಠೆ, ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಳಶದ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.’ಚೆಂಗಳ ಗುತ್ತು ಕುಟುಂಬಕ್ಕೆ ಸೇರಿದ 400ಕ್ಕೂ ಮಿಕ್ಕಿದ ಸದಸ್ಯರು ಒಟ್ಟುಗೂಡಿ ನಿರ್ಮಿಸಿದ ನೂತನ ತರವಾಡು ಮನೆ ಮತ್ತು ದೈವಾಲಯಗಳು ಅವರ ಶ್ರದ್ಧಾಭಕ್ತಿಯ ಪ್ರತೀಕ’ ಎಂದವರು ನುಡಿದರು. ಇದೇ ಸಂದರ್ಭದಲ್ಲಿ ಉಮೇಶ್ ಶೆಟ್ಟಿ ಮನ್ನಿಪ್ಪಾಡಿ ಸಂಪಾದಿಸಿದ ‘ಜೀಟಿಗೆ’ ಸ್ಮರಣ ಸಂಚಿಕೆಯನ್ನು…















