Author: admin

ತೆಂಕು ಬಡಗು ಯಕ್ಷಗಾನದ ಹವ್ಯಾಸಿ ವೇಷಧಾರಿ, ಹೋಟೆಲ್ ಉದ್ಯಮಿ ಮತ್ತು ಸಾಮಾಜಿಕ ಸೇವಾ ಕಾರ್ಯಕರ್ತ ಪಣಿಯೂರುಗುತ್ತು ಕರುಣಾಕರ ಶೆಟ್ಟಿ ಅವರು 2024 -25 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ನೌಕೆ ಆರ್ಯಭಟ ಉಪಗ್ರಹ ಉಡ್ಡಯನವಾದ ವರ್ಷವೇ ಸ್ಥಾಪನೆಗೊಂಡ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50 ವರ್ಷಗಳನ್ನು ಪೂರೈಸಿದ್ದು, ಪ್ರತಿವರ್ಷದಂತೆ ಈ ಬಾರಿಯೂ ದೇಶ ವಿದೇಶದ ಅನನ್ಯ ಸಾಧಕರನ್ನು ಗುರುತಿಸಿ ಈ ವಿಶೇಷ ಪ್ರಶಸ್ತಿಯನ್ನು ನೀಡುತ್ತಿದೆ. ಸುಮಾರು ನಾಲ್ಕು ದಶಕಗಳ ರಂಗಾನುಭವ ಹೊಂದಿದ ಪಣಿಯೂರು ಅವರು ಭರತನಾಟ್ಯವನ್ನೂ ಅಭ್ಯಸಿಸಿದ್ದಾರೆ. ತುಳು ಕನ್ನಡ ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಉಡುಪಿಯ ‘ರಂಗಸ್ಥಳ’ ಮತ್ತು ಮಂಗಳೂರಿನ ‘ಯಕ್ಷಾಂಗಣ’ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿಯುತ್ತಿದ್ದಾರೆ. ತುಳುನಾಡಿನ ವಿಶಿಷ್ಟ ಆಚರಣೆಯಾದ ದೈವರಾಧನೆಯಲ್ಲಿ ಮಧ್ಯಸ್ಥರಾಗಿ ನುಡಿಕಾರರಾಗಿಯೂ ಅವರು ಪರಿಣತರು. ಕರುಣಾಕರ ಶೆಟ್ಟರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾಡಳಿತವು 2019- 20 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಅವರಿಗೆ ನೀಡಿದೆ.…

Read More

ಮುಂಬಯಿ:- ಭಕ್ತಿ ಮತ್ತು ಭಗವಂತನ ನಡುವಿನ ನಿರೂಪಣೆ ವಚನ ಸಾಹಿತ್ಯದಲ್ಲಿ ಕಂಡು ಬರುತ್ತದೆ. ಭಕ್ತಿ ಎನ್ನುವುದು ಅಹಂನಿಂದ ಹೊರಬರುವ ಸ್ಥಿತಿ. ಅಹಂಕಾರದ ನಿರಾಕರಣೆಯೇ ಭಕ್ತಿಯ ತತ್ವವಾಗಿರುತ್ತದೆ. ಮನುಷ್ಯನ ನಡುವಿನ ಅಂತರವನ್ನು ಉಂಟುಮಾಡುವ ಸ್ಥಿತಿಗತಿಯನ್ನು ನಿರಾಕರಿಸಬೇಕು. ಆ ಕೆಲಸವನ್ನು ಭಕ್ತಿ ಮಾಡುತ್ತದೆ. ಬಸವಣ್ಣ ಭಕ್ತಿ ಭಂಡಾರಿ. ಮರೆಯುವ, ಬೆರೆಯುವ, ತಲ್ಲೀನತೆಯಲಿ ತನ್ಮಯವಾಗುವುದೇ ಭಕ್ತಿ. ಸಾಹಿತ್ಯದ ಓದು ನಮ್ಮಲ್ಲಿ ಎಲ್ಲರನ್ನು ಸಮಾನ ಭಾವದಿಂದ ನೋಡುವ ಮನೋಭಾವವನ್ನು ನೀಡುತ್ತದೆ. ಭಕ್ತ ಮತ್ತು ಭಗವಂತನ ನಡುವಿನ ಸಂಬಂಧ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಹನ್ನೆರಡನೆಯ ಶತಮಾನದಲ್ಲಿ ವಚನಕಾರರು ವಿಶೇಷವಾಗಿ ಬಸವಣ್ಣ ಅದಕ್ಕೆ ಹೊಸ ಆಯಾಮವನ್ನು ನೀಡಿದರು ಎಂದು ಮಂಗಳೂರು ವಿಶ್ವವಿದ್ಯಾಲಯಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಶಿವರಾಮ ಶೆಟ್ಟಿ ಅವರು ಅಭಿಪ್ರಾಯ ಪಟ್ಟರು. ಅವರು ಎಪ್ರಿಲ್ 30ರಂದು ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಭಕ್ತಿ ಭಂಡಾರಿ ಬಸವಣ್ಣನ ಕುರಿತು ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಸಾಹಿತಿ, ಸಂಶೋಧಕರಾದ…

Read More

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಎಸ್.ಪಿ. ಅಜಿತ್ ಪ್ರಸಾದ್, ಇಂದಿನ ಯುವಪೀಳಿಗೆಗೆ ಪ್ರಾಚೀನ ಕನ್ನಡ ಸಾಹಿತ್ಯವನ್ನು ತಲುಪಿಸುವ ಕರ‍್ಯವನ್ನು ನಾವು ಮಾಡಬೇಕು. ನಾವು ಆಡುವ ಮಾತುಗಳು ಎದುರಿನವರಿಗೆ ಸಹ್ಯವಾಗಿರಬೇಕು. ಕಲಿಸುವ ಶಿಕ್ಷಕರಿಗೆ ಕನ್ನಡದ ಮೇಲೆ ಪ್ರೀತಿ ಇಲ್ಲದೆ ಹೋದರೆ, ಮಕ್ಕಳಲ್ಲಿ ಕನ್ನಡದ ಮೇಲೆ ಪ್ರೀತಿ ಮೂಡಲು ಸಾಧ್ಯವಿಲ್ಲ. ನಾಡು ಅರ್ಥವನ್ನ ಪಡೆದುಕೊಳ್ಳಬೇಕಾದರೆ ನುಡಿ ಗಟ್ಟಿಯಾಗಿರ ಬೇಕು, ನಾಡನ್ನ ಬಿಟ್ಟು ನುಡಿಯಿಲ್ಲ, ನುಡಿಯನ್ನ ಬಿಟ್ಟು ನಾಡಿಲ್ಲ . ಇಂದು ಕನ್ನಡ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳುತ್ತಾ ಬರುತ್ತಿದೆ, ಇದಕ್ಕೆ ನಾವೇ ಕಾರಣ. ಕನ್ನಡ ನಮ್ಮ ಹೃದಯದ ಭಾಷೆ. ನಾವು ಯಾವಾಗ ನಮ್ಮ ಮಾತೃಭಾಷೆ ಸಂಪರ್ಕವನ್ನು ಕಳೆದುಕೊಳ್ಳುತ್ತೇವೆ ಮಾತನಾಡಲು ಯಾವಾಗ ಹಿಂಜರಿಯುತ್ತೇವೆ ಆಗ ನಾವು ನಮ್ಮತನವನ್ನು ಕಳೆದುಕೊಂಡ…

Read More

ಅದೊಂದು ಹಳೆಕಾಲದ ನಾಗ ಬನ. ಬನದ ಸುತ್ತಮುತ್ತ ಹಸಿರಿನ ಛತ್ರವನ್ನೇ ಬಿಡಿಸಿಟ್ಟ ಹಾಗೆ ಹಬ್ಬಿರುವ ಮರಗಿಡಗಳು. ಸೂರ್ಯನ ಕಿರಣವನ್ನು ಬನದೊಳಗೆ ಇಣುಕಲು ಬಿಡಲಾರೆವು ಎನ್ನುವಂತೆ ದಟ್ಟೈಸಿರುವ ಬ್ರಹ್ಮ ಗಾತ್ರದ ಮರಗಳು.ಆ ಬೃಹತ್ ವೃಕ್ಷಗಳು ಮಾನವ ತೋಳು ಬೆಸೆದಂತೆ ಪ್ರಾಕೃತಿವಾಗಿ ಬೆಸೆದಿಟ್ಟ ಬೇರು ಬಿಳಲುಗಳ ನಡುವೆ ಒಂದಷ್ಟು ಜಾಗದಲ್ಲಿ ನಿಲ್ಲಿಸಿರುವ ನಾಗನ ಬಿಂಬವಿರುವ ಕಲ್ಲುಗಳು. ಹಚ್ಚ ಹಸುರಿನ ಪ್ರಕೃತಿಯ ನಡುವೆ ಮೇಳೈಸಿರುವ ನಾನಾ ಹಕ್ಕಿಗಳ ಇಂಚರ, ಬನದೊಳಗೆ ಮನಸ್ಸಿಗೆ ಆಹ್ಲಾದತೆ ನೀಡುವ ಬಗೆ ಬಗೆಯ ಹೂಗಳ ಗಂಧ, ದೂರದಲ್ಲಿ ನೀಲಿ ನೀಲಿಯಾಗಿ ಗೋಚರಿಸುವ ಪಶ್ಚಿಮ ಘಟ್ಟಗಳು. ಒಟ್ಟಿನಲ್ಲಿ ಹೃನ್ಮನ ಮುದಗೊಳಿಸುವ ಪ್ರಕೃತಿಯ ಸುಂದರ ವರ್ಣ ಚಿತ್ತಾರದ ನಡುವೆ ನಿಗೂಢವಾಗಿ ಕಾಣುವ ಆ ನಾಗ ಬನದಲ್ಲಿ, ಅದೆಷ್ಟು ತಲೆಮಾರುಗಳು ಹಾಲೆರೆದು ನಾಗನನ್ನು ಪೂಜಿಸಿ ಪಾವನರಾಗಿ ಹೋಗಿದ್ದರೋ ಯಾರಿಗೂ ಗೊತ್ತಿಲ್ಲ. ದೊಡ್ಡ ಕೂಡುಕಟ್ಟಿನ ಕುಟುಂಬದವರ ನಾಗ ಬನವಾದುದರಿಂದ ವರ್ಷಾಂಪ್ರತಿ ಪೂಜೆ ಸಲ್ಲಿಸಲು ಸೇರುವ ಕುಟುಂಬಿಕರ ಸಂಖ್ಯೆ ಅಪಾರ. ಪೂಜೆ ಮಾಡಲು ಬಂದವರ ಕಾಲಿಗೆ ಮೆತ್ತಿಕೊಳ್ಳುವ ಬನದ…

Read More

ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ನೂತನ ಶಾಖೆ ‘ದಿ ಬೋಟ್ ಮ್ಯಾನ್ ಹಬ್ ರೆಸ್ಟೋರೆಂಟ್ ಉದ್ಘಾಟನೆಗೊಂಡಿದೆ. ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಉದ್ಯಮಿ ಡಾ ರೋನಾಲ್ಡ್ ಕೊಲಾಸೋ, ಉದ್ಯಮಿ ಹುಸೈನ್ ಅಬ್ಬಾಸ್, ಭಾರತೀಯ ಗಾಯಕಿ ಗೋವಾದ ಖ್ಯಾತಿ ನಟಿ ರೀಟಾ ರೋಸ್ ಮಾಡಿದರು. ಯುಎಇ ಯ ತುಳು-ಕನ್ನಡ ಸಂಘಟಕ ಸರ್ವೋತ್ತಮ ಶೆಟ್ಟಿ, ಅಬುಧಾಬಿ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರಾಚಿ ಶೆಟ್ಟಿ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಯುಎಇ ಯ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಯವರ ಆತ್ಮೀಯ ಸ್ನೇಹಿತರು ಪಾಲ್ಗೊಂಡಿದ್ದರು. ಉದ್ಘಾಟನಾ ಸಮಾರಂಭಕ್ಕೆ ಮುನ್ನ ದುಬೈ ಸೇಂಟ್ ಮೇರಿ ಕ್ಯಾಥೋಲಿಕ್ ಚರ್ಚ್ ಗುರುಗಳಾದ ಫಾ. ಮೈಕೆಲ್ ಕಾರ್ಡೋಜ್ ಮತ್ತು BAPS ಹಿಂದೂ ಮಂದಿರ ಅಬುಧಾಬಿಯ ಬಹುಶ್ರುತದಾಸ್ ಜಿ ಸ್ವಾಮೀಜಿ ರೆಸ್ಟೋರೆಂಟ್ ಗೆ ಶುಭವನ್ನು ಹಾರೈಸಿದರು. ಆಡಳಿತ ನಿರ್ದೇಶಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅತಿಥಿ ಆಭಾಗ್ಯತರನ್ನು…

Read More

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 13ರಂದು ನಡೆಯಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ಐಆರ್‌ಸಿಎಸ್)ಯ ಕೇಂದ್ರ ಕಚೇರಿಯ ವಾರ್ಷಿಕ ಮಹಾ ಸಭೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ದ.ಕ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ. ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧ್ಯಕ್ಷರಾದ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಅಧ್ಯಕ್ಷತೆಯಲ್ಲಿ, ರೆಡ್‌ಕ್ರಾಸ್ ಕೇಂದ್ರ ಕಚೇರಿಯ ಚೇರ್ಮನ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.

Read More

ಮೂಡಬಿದ್ರಿ: ‘ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ ವಿರಾಸತ್ ಗಳಲ್ಲದೆ ಇತರ ಹಲವಾರು ರಾಜ್ಯ – ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು – ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ’ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ಜರಗಿದ ‘ಸಿರಿಪರ್ಬ – 2025’ ತುಳು ಸಾಂಸ್ಕೃತಿಕ ಉತ್ಸವದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತುಳು ತಲೆಯೆತ್ತಿ ನಿಲ್ಲಲಿ: ‘ ಶಿಕ್ಷಣ ಸಂಸ್ಥೆಗಳಲ್ಲಿ ತುಳು ಮಾತನಾಡಲು ತೀವ್ರ ವಿರೋಧವಿದ್ದ ಕಾಲವಿತ್ತು; ಆದರೆ ಈಗ ಅದು ಬದಲಾಗಿದೆ. ಪ್ರಾಥಮಿಕ ಹಂತದಿಂದ ಕಾಲೇಜಿನವರೆಗೆ…

Read More

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಎನ್‍ಸಿಆರ್‍ಟಿಇ ಪಠ್ಯಕ್ರಮದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಯೋಜಿತ ವ್ಯವಸ್ಥೆಯಲ್ಲಿ ಪರಿಣಾಮಕಾರಿ ತರಬೇತಿ ನೀಡಲಾಗುತ್ತದೆ. ಪದವಿಪೂರ್ವ ಕಾಲೇಜಿಗೆ ಪ್ರಾಂಶುಪಾಲರ ನೇತೃತ್ವವಿದ್ದು 15 ಶೈಕ್ಷಣಿಕ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತೀ ವಿಭಾಗಕ್ಕೂ ಒಬ್ಬ ಮುಖ್ಯ ವ್ಯವಸ್ಥಾಪಕರಿದ್ದು ಅವರ ಮೇಲುಸ್ತುವಾರಿಯಲ್ಲಿ 20ಕ್ಕೂ ಅಧಿಕ ಉಪನ್ಯಾಸಕರ ತಂಡ ಮತ್ತು ಪ್ರತ್ಯೇಕ ಶಿಕ್ಷಕೇತರ ತಂಡಗಳು ಕಾರ್ಯನಿರ್ವಹಿಸುತ್ತವೆ. ಪ್ರತೀ ದಿನ 1.30 ಗಂಟೆಗಳ ಡೌಟ್ ಕ್ಲಿಯರಿಂಗ್ ಸೆಶನ್‍ಗಳು ನಡೆಯುತ್ತವೆ. ಬೆಳಿಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಲಿಕಾ ಅವಧಿಯನ್ನು ಮೀಸಲಿಡಲಾಗಿದೆ. ಪದವಿಪೂರ್ವ ತರಗತಿಗಳ ಸರಿಸುಮಾರು 6 ರಿಂದ 7 ಸಾವಿರ ವಿದ್ಯಾರ್ಥಿಗಳು ಈ ಕಲಿಕಾ ಅವಧಿಗಳಲ್ಲಿ ಅಭ್ಯಾಸ ನಿರತರಾಗುತ್ತಾರೆ. ವಿದ್ಯಾರ್ಥಿಗಳ ಯೋಗಕ್ಷೇಮವನ್ನು ನೋಡಿಕೊಳ್ಳಲು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳ ತಂಡವು ಅವಿರತವಾಗಿ ಕಾರ್ಯನಿರ್ವಹಿಸುತ್ತದೆ. ಈ ವಿದ್ಯಾರ್ಥಿಕೇಂದ್ರಿತ ಶೈಕ್ಷಣಿಕ ವ್ಯವಸ್ಥೆ ವಿದ್ಯಾರ್ಥಿಗಳ ಉನ್ನತಿಗೆ ಸದಾ ಸಹಕರಿಯಾಗಿದೆ. ಇಂದು ಜನಮಾನಸದಲ್ಲಿ ಮನೆಮಾತಾಗಿರುವ ಇಂತಹ ವಿನೂತನ ಹಾಗೂ ಪರಿಣಾಮಕಾರಿ ಶೈಕ್ಷಣಿಕ ವ್ಯವಸ್ಥೆಯನ್ನು ಕರ್ನಾಟಕಕ್ಕೆ ಪರಿಚಯಿಸಿದ ಕೀರ್ತಿ ಆಳ್ವಾಸ್‍ಗೆ ಸಲ್ಲುತ್ತದೆ. ಪ್ರತಿಭಾನ್ವಿತ ಮತ್ತು ನುರಿತ…

Read More

ಪಿಂಪ್ರಿ-ಚಿಂಚ್ವಾಡ್ ಪರಿಸರದ ಹಿರಿಯ ಹೋಟೆಲ್ ಉದ್ಯಮಿ, ಸಮಾಜಸೇವಕ, ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದಲ್ಲಿ ಬಹಳಷ್ಟು ಸಕ್ರಿಯರಾಗಿದ್ದ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ರಮೇಶ್ ಡಿ ಶೆಟ್ಟಿಯವರು ಮೇ 7 ರಂದು ನಿಧನರಾದರು. ಉದ್ಯಮಿ, ಸಮಾಜ ಸೇವಕರಾದ ವಿಶ್ವನಾಥ್ ಡಿ ಶೆಟ್ಟಿಯವರ ಸಹೋದರರಾಗಿರುವ ರಮೇಶ್ ಶೆಟ್ಟಿಯವರ ನಿಧನಕ್ಕೆ ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶೋಕ ವ್ಯಕ್ತಪಡಿಸಿದ್ದಾರೆ.

Read More

ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ‌ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿ ಹಿಡಿದ ಸುಧಾಕರ್ ಬನ್ನಂಜೆಯವರು ಕತೆ, ಚಿತ್ರಕತೆ, ಸಂಭಾಷಣೆ ಹಾಡು ಬರೆದು ನಿರ್ದೇಶನ ಮಾಡಿದ್ದಾರೆ. ತುಳು ಮೂಲದ ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ವಿ ಮನೋಹರ್ ಇದಕ್ಕೆ ಸಂಗೀತ ನೀಡಿದ್ದಾರೆ. ತುಳುನಾಡಿನ ಅಪ್ಪಟ ಪ್ರತಿಭೆ ತಮ್ಮ ಲಕ್ಷ್ಮಣ ಕಲಾ ನಿರ್ದೇಶನ, ಕೆ. ಗಿರೀಶ್ ಕುಮಾರ್ ಸಂಕಲನ, ಶಂಕರ್ ರವಿಕಿಶೋರ್ ಛಾಯಾಗ್ರಹಣ. ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ಲು ಸಹ ನಿರ್ದೇಶಕರಾಗಿ ದುಡಿದಿದ್ದಾರೆ. ಸ್ನೇಹಕೃಪಾ ಲಾಂಚನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸಿ ಗಿರೀಶ್ ಪೂಜಾರಿ ಸಹಕಾರದೊಂದಿಗೆ ಸುಧಾಕರ ಬನ್ನಂಜೆ ನಿರ್ಮಿಸಿರುವ ಈ ಚಿತ್ರದ ಇತರ ಸಹ ನಿರ್ಮಾಪಕರು ಮಮತಾ ಎಸ್…

Read More