Author: admin

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಅಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್  ನ ಹೊಸ ಘಟಕವನ್ನು ಉದ್ಘಾಟಿಸಲಾಯಿತು. ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, “ಇಂತಹ ಅಂತರರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು. ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಟೈ , ಸಿಐಐ  ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು.ಲಿಮಿಟೆಡ್  ನ ನಿರ್ದೇಶಕ ಹರ್ಷಿತ್ ಶೆಟ್ಟಿ ಮಾತನಾಡಿ, “ನಮ್ಮ ಕಂಪನಿ…

Read More

ಪ್ರತಿಷ್ಠಿತ ಬಾಂಬೆ ಬಂಟ್ಸ್ ಅಸೋಸಿಯೇಶನ್ 1982ರಲ್ಲಿ ಸಮಾನ ಮನಸ್ಕರಿಂದ, ಸ್ವಜಾತಿ ಬಾಂಧವರನ್ನು ಒಗ್ಗೂಡಿಸಿ, ಮೈತ್ರಿ ಒಗ್ಗಟ್ಟನ್ನು ಬೆಳೆಸಿ, ಸಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಹಾಗೂ ಧಾರ್ಮಿಕ ಬೆಳವಣಿಗೆಯ ಉದ್ದೇಶವನ್ನೇ ಮುಖ್ಯ ಧ್ಯೇಯವನ್ನಾಗಿ ಹುಟ್ಟು ಹಾಕಿದ ಸಂಸ್ಥೆ. ಇಂದಿಗೂ ಅದೇ ರೀತಿಯಲ್ಲಿ ವರ್ಷಂಪ್ರತಿ ಸಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಮತ್ತು ಧಾರ್ಮಿಕ ವಿಚಾರವಾಗಿ ಬೇರೆ ಬೇರೆ ಸಾಮಾಜಿಕ ಕೆಲಸ ಕಾರ್ಯಗಳನ್ನು, ಶೈಕ್ಷಣಿಕ ನೆರವು, ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಾ ಬಂದಿದೆ. ಅದಲ್ಲದೇ ಧಾರ್ಮಿಕ ಜಾಗ್ರತಿಯನ್ನು ಮೂಡಿಸುವ ಉದ್ದೇಶದಿಂದ ಭಜನೆ, ಕುಣಿತ ಭಜನೆ, ಲಲಿತ ಸಹಸ್ರನಾಮಾರ್ಚನೆ, ಗುರುಪೂರ್ಣಿಮೆ ಮುಂತಾದ ಧಾರ್ಮಿಕತೆಗೆ ಸಂಬಂಧ ಪಟ್ಟ ಕಾರ್ಯಕ್ರಮಗಳನ್ನು ಆಚರಿಸುತ್ತದೆ. ಆ ಧಾರ್ಮಿಕ ಬೆಳವಣಿಗೆಯ ನಿಟ್ಟಿನಿಂದ ಬಾಂಬೆ ಬಂಟ್ಸ್ ಅಸೋಸಿಯೇಶನ್ ಅದರ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯ ಸಿ ಶೆಟ್ಟಿ ಮತ್ತು ಶಶಿಧರ ಶೆಟ್ಟಿಯವರ ಮುತುವರ್ಜಿಯಿಂದ ಮತ್ತು ಅಧ್ಯಕ್ಷ ನ್ಯಾ. ಡಿ.ಕೆ ಶೆಟ್ಟಿ ಹಾಗೂ ಎಲ್ಲಾ ಪಧಾದಿಕಾರಿಗಳ ಬೆಂಬಲದೊಂದಿಗೆ ಈ ಬಾರಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 24 ರವರೆಗೆ…

Read More

ಸಾರ್ವಜನಿಕರ ಬಹು ಬೇಡಿಕೆಯ ರಸ್ತೆಯಾದ ಕುಳಾಯಿ ಕಾನ ಬ್ರಿಡ್ಜ್ ರಸ್ತೆಗೆ ಸುಮಾರು 26 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂಧರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ವರುಣ್ ಚೌಟ, ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಸುನಿಲ್ ಕುಳಾಯಿ, ಮಹಾ ಶಕ್ತಿಕೇಂದ್ರ ಸುರತ್ಕಲ್ 1 ಮತ್ತು 2ರ ಬಿಜೆಪಿಯ ನಿಕಟ ಪೂರ್ವ ಮನಪಾ ಸದಸ್ಯರು, ಬಿಜೆಪಿ ಮುಂಖಡರು, ವಾರ್ಡ್ ಅಧ್ಯಕ್ಷರು, ಕಾರ್ಯದರ್ಶಿ, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪ್ರಮುಖ ಕಾರ್ಯಕರ್ತರು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Read More

ಮೀರಾ ಭಾಯಂದರ್ ಪರಿಸರದ ಜನಪ್ರಿಯ ಸಂಘಟಕ, ಸಮಾಜ ಸೇವಕ, ಬಂಟ್ಸ್ ಫೋರಂ ಮೀರಾ ಭಾಯಂದರ್ ಸಮಿತಿಯ ಸಕ್ರಿಯ ಸದಸ್ಯ, ಭಗವಾನ್ ನಿತ್ಯಾನಂದ ಸೇವಾ ಟ್ರಸ್ಟ್ ಇದರ ಪದಾಧಿಕಾರಿ, ಭಾಜಪ ದಕ್ಷಿಣ ಭಾರತೀಯ ಘಟಕದ ಸದಸ್ಯ, ದಹಿಸರ್ ವೈಶಾಲಿ ನಗರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿ ಇದರ ಅಧ್ಯಕ್ಷ, ತನ್ನ ಸ್ನೇಹ ಪರ ವ್ಯಕ್ತಿತ್ವದಿಂದ ಜನಾನುರಾಗಿ ಆಗಿದ್ದ ಹೊಟೇಲ್ ಉದ್ಯಮಿ ಚಿರಂಜೀವಿ ಸುರೇಶ್ ಶೆಟ್ಟಿಯವರು ನಿಧನರಾಗಿದ್ದಾರೆ. ಸುರೇಶ್ ಶೆಟ್ಟಿಯವರ ನಿಧನಕ್ಕೆ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಗೌರವ ಸಂಪಾದಕರಾದ ಅರುಣ್ ಶೆಟ್ಟಿ ಎರ್ಮಾಳ್, ವ್ಯವಸ್ಥಾಪಕ ಸಂಪಾದಕ ಕೆ ಆರ್ ಶೆಟ್ಟಿ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಹೋಟೆಲು ಉದ್ಯಮಿ ಗಣೇಶ್ ಶೆಟ್ಟಿ ತನಿಷ್ಕ, ಬಂಟ್ಸ್ ಫೋರಂ ಅಧ್ಯಕ್ಷ ಉದಯ ಶೆಟ್ಟಿ ಮಲಾರಬೀಡು ತೀವ್ರ ಸಂತಾಪ ಸೂಚಿಸಿದ್ದಾರೆ.

Read More

ಮುಂಬಯಿ: ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 20ರ ಶನಿವಾರ ಮಧ್ಯಾಹ್ನ 2ರಿಂದ  ಜೆ.ಪಿ ನಾಯಕ್ ಭವನ, ಮುಂಬೈ ವಿಶ್ವವಿದ್ಯಾಲಯ ಸಾಂತಾಕ್ರೂಜ್(ಪೂ) ಮುಂಬೈ ಇಲ್ಲಿ ಕನ್ನಡ ವಿಭಾಗದ ನಲ್ವತ್ತೇಳರ ಸಂಭ್ರಮ, ಕೃತಿ ಬಿಡುಗಡೆ, ಗೌರವಾರ್ಪಣೆ, ಪದವಿ ಪ್ರದಾನ ಕಾರ್ಯಕ್ರಮ  ನಡೆಯಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ಐಕಳ ಹರೀಶ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮುಂಬೈ ವಿಶ್ವವಿದ್ಯಾಲಯದಲ್ಲಿ ಕನ್ನಡದ ಕಂಪು (ಕನ್ನಡ ವಿಭಾಗದ ಕಿರು ಸಾಧನೆಯ ಅವಲೋಕನ)  ಕೃತಿ ಬಿಡುಗಡೆಯನ್ನು ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಬೈ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಜಿ.ಎನ್.ಉಪಾಧ್ಯ ಅವರು ವಹಿಸಲಿದ್ದಾರೆ. ಇದೇ  ಸಂದರ್ಭದಲ್ಲಿ ಮುಂಬೈ ಕನ್ನಡ ಸಂಸ್ಥೆಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ. ಶತಕೋತ್ತರ ಸಾಧನೆಯ ಸಂಸ್ಥೆಗಳಾದ ಶ್ರೀಮದ್ಭಾರತ ಮಂಡಳಿ,  ಮೊಗವೀರ ವ್ಯವಸ್ಥಾಪಕ ಮಂಡಳಿ,  ಬಿ. ಎಸ್  ಕೆ. ಬಿ ಅಸೋಸಿಯೇಷನ್,  ದೇವಾಡಿಗರ ಸಂಘ, ಮೈಸೂರು ಅಸೋಸಿಯೇಷನ್, ಬಂಟರ ಸಂಘ ಮೊದಲಾದ…

Read More

ಒಂದು ಕಾಲದಲ್ಲಿ ನಮ್ಮೂರಿನ ಗುಡ್ಡ ಪ್ರದೇಶಗಳಲ್ಲಿ ಧಾರಾಳವಾಗಿ ಮುಳಿಹುಲ್ಲುಗಳು ಬೆಳೆಯುತ್ತಿದ್ದ ಕಾರಣ, ಹಳ್ಳಿಗಳ ಬಹುತೇಕ ಎಲ್ಲಾ ಮನೆಗಳೂ ಮುಳಿ ಹುಲ್ಲಿನದ್ದಾಗಿದ್ದವು. 1865 ರಲ್ಲಿ ಮಂಗಳೂರಿನಲ್ಲಿ ಜರ್ಮನಿಯ ಬಾಸೆಲ್ ಮಿಶನ್ ಕಂಪನಿಯವರು ನಮ್ಮಲ್ಲಿ ಧಾರಾಳವಾಗಿ ದೊರಕುತ್ತಿದ್ದ ಆವೆಮಣ್ಣಿನಿಂದ ಜರ್ಮನಿಯ ಛಾವಣಿ ಹಂಚು ತಯಾರಿಕಾ ತಂತ್ರಜ್ಞಾನವನ್ನು ಬಳಸಿ, ಹಂಚಿನ ಕಾರ್ಖಾನೆಯನ್ನು ಸ್ಥಾಪಿಸಿದರು. ಆವಾಗ ಕೆಲವೊಂದೆಡೆ ಬೆರಳೆಣಿಕೆಯ ಒಂದೆರಡು ಹಂಚಿನ ಮನೆಗಳು ಗೋಚರಿಸಲಾರಂಭಿಸಿದವು. ಬಳಿಕ ಮಂಗಳೂರಿನಲ್ಲಿ ಹಲವಾರು ಹಂಚಿನ ಕಾರ್ಖಾನೆಗಳು ತಲೆಯೆತ್ತಿ ಉತ್ಕೃಷ್ಟ ಗುಣಮಟ್ಟದ ಹಂಚುಗಳನ್ನು ತಯಾರಿಸಿ ಅವುಗಳು ಮಂಗಳೂರು ಹಂಚುಗಳೆಂದೇ ಜಗದ್ವಿಖ್ಯಾತಿಯನ್ನು ಪಡೆದವು. ಆ ಹೊತ್ತಿಗೆ ಹೆಚ್ಚಿನ ಹಳ್ಳಿಗಳ ಜನರೂ ವಿದ್ಯಾವಂತರಾಗಿ ಸುಸಂಸ್ಕೃತರಾಗಿ ಅಭಿವೃದ್ಧಿಯ ಪಥದಲ್ಲಿ ಸಾಗಲು ಪ್ರಾರಂಭಿಸಿದರು. ಕಾಲಕ್ರಮೇಣ ಹಳ್ಳಿಗಳಲ್ಲಿ ಮುಳಿ ಹುಲ್ಲಿನ ಮನೆಗಳೆಲ್ಲವೂ ಮಾಯವಾಗಿ ಹಂಚಿನ ಮನೆಗಳು ಗೋಚರಿಸಲಾರಂಭಿಸಿದವು. ಇಂದಿನ ಕಾಲಘಟ್ಟದಲ್ಲಿ ನಮ್ಮೂರಿನಲ್ಲಿ ಹಂಚಿನ ಮನೆಗಳೂ ಮಾಯವಾಗಿ ಬಲವರ್ಧಿತ ಸಿಮೆಂಟ್ ಕಾಂಕ್ರೀಟ್ ನ (Reinforced Cement Concrete -RCC) ಮನೆಗಳೇ ತಲೆಎತ್ತಿವೆ. ಆದರೆ ಕೆಲವೆಡೆ ಈಗಲೂ ಒಂದೆರಡು ಹಂಚಿನ ಮನೆಗಳು ಅಪರೂಪಕ್ಕೆ…

Read More

ಶ್ರೀ ಧವಲಾ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ, ಲಯನ್ಸ್ ಕ್ಲಬ್ ಮೂಡುಬಿದಿರೆ ಮತ್ತು ರೋಟರಿ ಕ್ಲಬ್ ಮೂಡುಬಿದರೆ ಟೆಂಪಲ್ ಟೌನ್ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಎವಿ ಹಾಲ್ ನಲ್ಲಿ ಸೆಪ್ಟೆಂಬರ್ 17ರಂದು ಜರಗಿತು. ಶಿಬಿರವನ್ನು ಉದ್ಘಾಟಿಸಿದ ಡಿಜೆವಿವಿ ಸಂಘದ ಕಾರ್ಯದರ್ಶಿ ಅಭಿಜಿತ್ ಎಂ ಶುಭ ಹಾರೈಸಿದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ, ಎಷ್ಟೇ ಹಣವಿದ್ದರೂ ರಕ್ತದ ಉತ್ಪಾದನೆ ಸಾಧ್ಯವಿಲ್ಲ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ರಕ್ತದ ಅವಶ್ಯಕತೆಯನ್ನು ಅರಿತು ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದೆ ಬರಬೇಕಾಗಿರುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದರು. ಲಯನ್ಸ್ ಕ್ಲಬ್ ಮೂಡುಬಿದಿರೆಯ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆಯವರು ಮಾತನಾಡಿ, ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಇಂದು ಎಲ್ಲಾ ಕಡೆ ಕಾಣಿಸುತ್ತಿದ್ದು, ಆಸ್ಪತ್ರೆ ಸೇರಿರುವ ವ್ಯಕ್ತಿ ಬದುಕಿ ಉಳಿದು ಬರಬೇಕಾದರೆ ರಕ್ತದ ಅಗತ್ಯವಿದೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ ಪಾರ್ಶ್ವನಾಥ ಆಜ್ರಿಯವರು ಮಾತನಾಡಿ,…

Read More

ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ದೇವಸ್ಥಾನದ ನೇತೃತ್ವದಲ್ಲಿ ನಮ್ಮ ಫ್ರೆಂಡ್ಸ್ ಸಹಕಾರದೊಂದಿಗೆ ಮುದ್ದುಕೃಷ್ಣ ಸ್ಪರ್ಧೆ ನೆರವೇರಿತು. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಮುದ್ದುಕೃಷ್ಣ ಸ್ಪರ್ಧೆಯಿಂದ ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಲು ಹಾಗೂ ಮುದ್ದು ಮಕ್ಕಳಲ್ಲಿ ದೇವರನ್ನು ಕಾಣುವ ಕಾರಣದಿಂದ ಮುದ್ದುಕೃಷ್ಣ ಸ್ಪರ್ಧೆ ಅರ್ಥಪೂರ್ಣ ಎಂದು ಹೇಳಿದರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಲ್ಲಡ್ಕ ಕೋರಿಬೆಟ್ಟು ಗುತ್ತು ಸುರೇಂದ್ರ ಎಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಕೃಷ್ಣ ಪೂಜಾರಿ ಬಂಡ್ರೊಟ್ಟು, ಸುಜಾತ ಸಬೋಧ ಶೆಟ್ಟಿ, ನಲಿನಾಕ್ಷಿ ಸಪಲಿಗ, ಕಿನ್ನಿಗೋಳಿ ರೋಟರಿ ಅಧ್ಯಕ್ಷ ಸಾಯಿನಾಥ ಶೆಟ್ಟಿ, ನಮ್ಮ ಫ್ರೆಂಡ್ಸ್ ನ ಗೌರವ ಸಲಹೆಗಾರರಾದ ಉದಯ ಮುಂಡ್ಕೂರು, ಶರತ್ ಶೆಟ್ಟಿ, ಆನಂದ ಸಾಲಿಯಾನ್, ಮುಂಡ್ಕೂರು ಭಾರ್ಗವ ಜೆಸಿಐ ನ ಅಧ್ಯಕ್ಷ ವಸಂತ, ತೀರ್ಪುಗಾರರಾದ ನೇಹ, ಪಾವನ ಕಾಮತ್ ಮತ್ತಿತರರು ಉಪಸ್ಥಿತರಿದ್ದರು. ಸಂಘಟಕ ಅರುಣ್ ರಾವ್ ಕಾರ್ಯಕ್ರಮ…

Read More

ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕøತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅಂತಹ ಸಾಧನೆಗಳ ಹಾದಿಯ ದಾಖಲೆಗಳ ಸರಮಾಲೆಗಳ ಗರಿಯತ್ತ ಸಾಗುತ್ತಾ, ದಿನಾಂಕ 13-09-2025ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಾಲಿಬಾಲ್ ಪ್ರತಿಭೆಗಳಾದ ದೇವಿಪ್ರಸಾದ್ ಮತ್ತು ಆರ್ಯನ್ ಹೆಚ್.ಎ ರವರು ತಾಲೂಕು ತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ. ಈ ನಮ್ಮ ಸಂಸ್ಥೆಯ ಹೆಮ್ಮೆಯ ವಾಲಿಬಾಲ್ ಆಟಗಾರರಾದ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುವುದರ ಜೊತೆಗೆ ಜಿಲ್ಲಾಮಟ್ಟದಲ್ಲಿಯೂ ಸಾಧನೆಯನ್ನು ಮಾಡಿ ಆಯ್ಕೆಗೊಳ್ಳುವಂತೆ ಹಾರೈಸಿದ್ದಾರೆ.

Read More

ಮೂಡುಬಿದಿರೆ: ಸೂಕ್ಷ್ಮಜೀವಿಗಳನ್ನು ಕೇವಲ ರೋಗಕಾರಕರೆಂದು ನೋಡುವ ಬದಲು, ಅವು ಪ್ರಕೃತಿಯ ಸಮತೋಲನ ಮತ್ತು ಮಾನವ ಬದುಕಿಗೆ ನೀಡುವ ಕೊಡುಗೆಯನ್ನು ಅರ್ಥಮಾಡಿಕೊಂಡಾಗ ಮಾತ್ರ ನಾವು ಆರೋಗ್ಯಕರ ಹಾಗೂ ಸಮೃದ್ಧ ಸಮಾಜವನ್ನು ಕಟ್ಟಬಹುದು ಎಂದು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ವಿಭಾಗದ ಸಹಪ್ರಾಧ್ಯಾಪಕಿ ಡಾ. ದಿವ್ಯಶ್ರೀ ಎಂ.ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸೂಕ್ಷ್ಮಜೀವಿಗಳ ದಿನಾಚರಣೆಯ ಅಂಗವಾಗಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗ ಆಯೋಜಿಸಿದ್ದ ಅತಿಥಿ ಉಪನ್ಯಾಸದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಪನ್ಯಾಸದಲ್ಲಿ ಸೂಕ್ಷ್ಮಜೀವಿಗಳಿಂದ ಪಡೆಯಬಹುದಾದ ಅನೇಕ ಉಪಯೋಗಗಳ ಕುರಿತಂತೆ ವಿವರಿಸಿದರು. ಸಾಮಾನ್ಯವಾಗಿ ಸೂಕ್ಷ್ಮಜೀವಿಗಳನ್ನು ಕೇಳಿದಾಗ ಅನೇಕರು ರೋಗಗಳೊಂದಿಗೆ ಅವುಗಳನ್ನು ಸಂಬ0ಧಿಸುತ್ತಾರೆ. ನಿಜಕ್ಕೂ ಕೆಲವೆಡೆ ಸೂಕ್ಷ್ಮಜೀವಿಗಳು ಅಪಾಯಕಾರಿ, ಆದರೆ ಅದಕ್ಕಿಂತ ಹೆಚ್ಚಿನವು ಮಾನವನ ಬದುಕಿಗೆ ಅತ್ಯಗತ್ಯವಾದವುಗಳೇ ಆಗಿವೆ. ನಮ್ಮ ಕರುಳಿನಲ್ಲಿ ಕೋಟ್ಯಾಂತರ ಸೂಕ್ಷ್ಮಜೀವಿಗಳು ವಾಸಿಸುತ್ತಿದ್ದು, ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುತ್ತವೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಆರೋಗ್ಯಕರ ಜೀವನಕ್ಕೆ ನೆರವಾಗುತ್ತವೆ. ದೈನಂದಿನ ಜೀವನದಲ್ಲಿ ಹಾಲಿನ ಉತ್ಪನ್ನಗಳು – ಮೊಸರು, ಚೀಸ್, ಬೆಣ್ಣೆ ಮುಂತಾದವುಗಳ ತಯಾರಿಕೆಯಲ್ಲಿ ಸೂಕ್ಷ್ಮಜೀವಿಗಳೇ…

Read More