Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ ಒಂದರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ಜರಗಲಿರುವ ಆಮಂತ್ರಣ ಪತ್ರಿಕೆಯನ್ನು ದುಬೈನಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಯುಎಇಯ ಕನ್ನಡ ತುಳು ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.ಯುಎಇ ಘಟಕದ ಸಂಚಾಲಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಕಳೆದ ಒಂಬತ್ತು ವರ್ಷಗಳಿಂದ ಹದಿನೆಂಟು ಕೋಟಿ ರೂಪಾಯಿಗಳಷ್ಟು ಮಿಕ್ಕಿ ಅಶಕ್ತ ಕಲಾವಿದರಿಗೆ ವಿದ್ಯಾಭ್ಯಾಸ, ಆರೋಗ್ಯ, ಮನೆ ನಿರ್ಮಾಣ, ಮನೆ ರಿಪೇರಿ, ಇನ್ಸ್ಯೂರೆನ್ಸ್ ಗಳನ್ನು ನೀಡಿ ಒಳ್ಳೆಯ ಕಾರ್ಯಕ್ರಮಗಳನ್ನು ನೀಡುತ್ತ ಬಂದಿದೆ. ದಶಮಾನೋತ್ಸವ ಸಂಭ್ರಮದಲ್ಲಿರುವ ಟ್ರಸ್ಟ್ ಹತ್ತು ಕೋಟಿ ರೂಪಾಯಿ ಸಂಗ್ರಹ ಮಾಡುವ ಉತ್ತಮವಾದ ಯೋಜನೆಗೆ ಕೈ ಹಾಕಿದೆ. ಯುಎಇಯಲ್ಲಿ ಇರುವ ಎಲ್ಲರೂ ಈ ಯೋಜನೆಗೆ ಕೈ ಜೋಡಿಸಬೇಕೆಂದು ವಿನಂತಿಸುತ್ತ ಜೂನ್ ಒಂದರಂದು ದಿನಂಪೂರ್ತಿ ನಡೆಯಲಿರುವ ಕಾರ್ಯಕ್ರಮದಲ್ಲಿ ತಾವೆಲ್ಲರೂ ಬಾಗವಹಿಸಬೇಕಾಗಿ…
ಆಳ್ವಾಸ್ ಸಿಬಿಎಸ್ಇ ಫಲಿತಾಂಶ: ಆಳ್ವಾಸ್ನ 29 ವಿದ್ಯಾರ್ಥಿಗಳು 95% ಕ್ಕೂ ಹೆಚ್ಚು, 114 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಅಂಕದ ಸಾಧನೆ
ಮೂಡುಬಿದಿರೆ: ಸಿಬಿಎಸ್ಇ ಈ ಬಾರಿಯ ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಸತತ ಐದನೇ ವರ್ಷ ಆಳ್ವಾಸ್ ಶಾಲೆಯು 100% ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶಾಲೆಯ 29 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಶಾಲೆಯಿಂದ 95 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದವರ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಳ್ವಾಸ್ ಪ್ರಥಮ ಸ್ಥಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಅಮೋಘ್ ಬಿಲ್ಲೂರ್, ದೀಕ್ಷಾ ಹೆಚ್ ಕೆ (98%), ಹರ್ಷಿತಾ ಎಸ್ ಪಾಟೀಲ್, ಪ್ರಜ್ವಲ್ ಕುಮಾರ್ ಬಿರಾದರ್, ಅದಿತಿ ಭಟ್, ಸಂದೀಪ್, ಶಿವನಂದ (97%), ಮನಸ್ವಿ, ದರ್ಶ ಧಾರ್ಮಿಕ್, ಚೇತನ್ ಎಸ್, ಚಿನ್ಮಯಿ ಎಂ, ನಿಸರ್ಗ ಎಸ್, ಅನ್ವಿತ್ ಆರ್, ಸಮರ್ಥ ಜೋಷಿ, ತುನುಶ್ರೀ ಜಿ ಆರ್, ಪೂನಮ್ ಸಾತಿ, ಅನುಷಾ ರಾಜೇಂದ್ರ (96%), ಕಿರಣ್ ಸಾರ್ವಿ, ಕಾರ್ತಿಕ್ ಎಸ್, ಅಭಿಜ್ಞಾ ರಾವ್,…
2024-25 ನೇ ಸಾಲಿನ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಪಲಿತಾಂಶ ಪ್ರಕಟಗೊಂಡಿದ್ದು, ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಿಂದ ಒಟ್ಟು 284 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅತ್ಯುತ್ತಮ ಫಲಿತಾಂಶದೊಂದಿಗೆ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಅತ್ಯುತ್ತಮ ಫಲಿತಾಂಶ ಪಡೆದ ಶಾಲಾ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿರುತ್ತದೆ. ಶಾಲೆಯ ಈ ಶೈಕ್ಷಣಿಕ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್, ಆಡಳಿತ ಮಂಡಳಿಯ ಸದಸ್ಯರು, ಶೈಕ್ಷಣಿಕ ನಿರ್ದೇಶಕರು ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರು ಮತ್ತು ಪೋಷಕರನ್ನು ಅಭಿನಂದಿಸಿದರು. ಪ್ರಾಂಶುಪಾಲರು
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಅಭೂತಪೂರ್ವ ಕಾರ್ಯವೈಖರಿಯನ್ನು ಮೆಚ್ಚಿ ಫೌಂಡೇಶನ್ ನ ಗೌರವಾಧ್ಯಕ್ಷರಾದ ಮಹಾದಾನಿ, ಗೌರವಾನ್ವಿತ ಡಾ| ಕೆ ಸದಾಶಿವ ಶೆಟ್ಟಿಯವರು ಫೌಂಡೇಶನ್ ಟ್ರಸ್ಟ್ ಗೆ ಮೂರು ಕೋಟಿ ರೂಪಾಯಿಗಳ ದೊಡ್ಡ ದೇಣಿಗೆಯನ್ನು ಘೋಷಿಸಿದ್ದಾರೆ. ಕನ್ಯಾನ ಸದಾಶಿವ ಶೆಟ್ಟಿಯವರು ಪಟ್ಲ ಫೌಂಡೇಶನ್ ನ ಗೌರವಾಧ್ಯಕ್ಷರಾದ ನಂತರ ಟ್ರಸ್ಟಿನ ಕಾರ್ಯ ಯೋಜನೆಗಳು ನಾಗಾಲೋಟದಲ್ಲಿ ಮುಂದುವರಿಯುತ್ತಿದ್ದು ಕಲಾಭಿಮಾನಿಗಳ ಹಾಗೂ ಸಂಘಟಕರಿಂದ ಪ್ರಶಂಸೆಯ ಸುರಿಮಳೆ ಹರಿದು ಬರುತ್ತಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ “ಪಟ್ಲ ದಶಮ” ಸಂಭ್ರಮದ ಸಮಾಲೋಚನಾ ಸಭೆಯ ದಿನದಂದು ಫೌಂಡೇಶನ್ ನ ಎಲ್ಲಾ ಮಹಾದಾನಿಗಳು ಮತ್ತು ಫೌಂಡೇಶನ್ ನ ಪದಾಧಿಕಾರಿಗಳ ಸಮ್ಮುಖದಲ್ಲಿ ಪಟ್ಲ ಫೌಂಡೇಶನ್ ನ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಡಾ| ಕೆ. ಪ್ರಕಾಶ್ ಶೆಟ್ಟಿ ಮತ್ತು ಅಧ್ಯಕ್ಷರಾಗಿ ಬರೋಡ ಶಶಿಧರ ಶೆಟ್ಟಿ ಅವರು ಜವಾಬ್ದಾರಿಯನ್ನು ಬಹಳ ಪ್ರೀತಿಯಿಂದ ವಹಿಸಿಕೊಂಡಿದ್ದರು. ದಶಮಾನೋತ್ಸವದ ಮುಖ್ಯ ಧ್ಯೇಯವಾಗಿ ಕನಿಷ್ಠ 10 ಕೋಟಿ ರೂಪಾಯಿ…
ನಾನು ಮದುವೆಗೆ ಹೋದಾಗ ವಧು-ವರರಿಗೆ ಅಕ್ಷತೆ ಹಾಕುವುದಿಲ್ಲ. ನನ್ನ ಗೆಳೆಯರಿಗೂ ಗೊತ್ತಿದೆ. ನಾನು ಇತ್ತೀಚೆಗಿನ ವರ್ಷದಲ್ಲಿ ಮೆಹಂದಿ ಕಾರ್ಯಕ್ರಮಕ್ಕೂ ಹೋಗುವುದಿಲ್ಲ. ತೀರಾ ಬೇಕಾದವರು, ಅವರ ಮದುವೆಯ ದಿವಸ ನಾನು ಊರಲ್ಲಿ ಇಲ್ಲ ಅಂತಾದರೆ ಹೋಗಿ ಶುಭಾಶಯ ಹೇಳಿ ಬರುತ್ತೇನೆ. ಮದುವೆಯ ದಿವಸ ಅಕ್ಷತೆಯನ್ನ ಎಂದೂ ಹಾಕುವುದಿಲ್ಲ. ಅಷ್ಟೇ ಅಲ್ಲದೆ ಆ ಎಡಂತರ ಬಂದ ಕೆಟ್ಟ ಸಂಪ್ರದಾಯವನ್ನ ನಿಲ್ಲಿಸುವ ಪಣ ತೊಟ್ಟಿದ್ದೇನೆ. ಮದುವೆಯಲ್ಲಿ ಅಕ್ಷತೆ ಹಾಕುವ ಸಂಪ್ರದಾಯ ನಿಜಕ್ಕೂ ಹಿಂದಿನಿಂದಲೂ ಬಂದದ್ದಾ? ಕೇಳಿದರೆ ಖಂಡಿತ ಇಲ್ಲ ಎನ್ನುವುದನ್ನ ಹಲವು ಹಿರಿಯರನ್ನ, ಶಾಸ್ತ್ರ ಬಲ್ಲವರನ್ನ ಕೇಳಿಯೇ ನಾನಿಲ್ಲಿ ದಾಖಲಿಸುತ್ತಿದ್ದೇನೆ. ಚಪ್ಪಲಿಯಡಿ ಅಕ್ಕಿ ಕಾಳುಗಳು ನಾವು ಅನ್ನ ಮತ್ತು ಅಕ್ಕಿಯನ್ನ ದೇವರು ಅಂತಲೇ ಪೂಜಿಸಿದವರು, ಅನ್ನ ಬ್ರಹ್ಮ ಎನ್ನುತ್ತೇವೆ. ನಾವೆಲ್ಲವೂ ಅನ್ನಮೂಲದಿಂದಲೇ ಬಂದವರು. ಭಗವದ್ಗೀತೆ ಓದಿದವರಿಗೆ ಅನ್ನದ ಮಹತ್ವ ಅರ್ಥವಾದೀತು.ಇರಲಿ. ಮದುವೆಯಲ್ಲಿ ತಾಳಿ ಕಟ್ಟುವ ವೇಳೆಯಲ್ಲಿ ಪುರೋಹಿತರ ಸಮೇತ ಕುಟುಂಬ ವರ್ಗ ಅಕ್ಷತೆ ಹಾಕುವ ಸಂಪ್ರದಾಯವಿತ್ತು. ಈಗಲೂ ಇದೆ. ಅದು ಸರಿಯೂ ಹೌದು. ಅದು ಅಲ್ಲಿಗೇ…
ಶಿರ್ವ ಮಾರಿಗುಡಿ ಶ್ರೀ ಮಹಮ್ಮಾಯಿ ಅಮ್ಮನವರ ಸಾನಿದ್ಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.ಈ ಸಂದರ್ಭದಲ್ಲಿ ಎಂ.ಆರ್.ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ, ಹೆರಂಭ ಕೆಮಿಕಲ್ಸ್ ನ ಸಿಎಂಡಿ ಡಾ| ಸದಾಶಿವ ಶೆಟ್ಟಿ ಕನ್ಯಾನ, ಉದಯ ಸುಂದರ ಶೆಟ್ಟಿ, ವೆಜ್ ಟ್ರೀಟ್ ಹೊಟೇಲ್ಸ್ ನ ಸಿಎಂಡಿ ರವಿ ಸಾಧು ಶೆಟ್ಟಿ, ಉದ್ಯಮಿ ನಿತ್ಯಾನಂದ ಹೆಗ್ಡೆ, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್, ಬೆಂಗಳೂರು ಬಂಟರ ಸಂಘದ ಶ್ರೀಮತಿ ಕಾಂತಿ ಶೆಟ್ಟಿ, ಸಂಗೀತಾ ಮುಂತಾದ ಅತಿಥಿ ಗಣ್ಯರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾಗಿರಿ: ಸಂಶೋಧನಾ ಪ್ರಸ್ತಾವನೆಯನ್ನು ಬರೆಯುವ ಮುನ್ನ ಬಾಹ್ಯ ನಿಧಿಯ ಕುರಿತು ಅರಿತುಕೊಳ್ಳುವುದು ಹೆಚ್ಚು ಅವಶ್ಯ ಎಂದು ಕೋಟ ಜನತಾ ಫಿಶ್ ಮಿಲ್ ಮತ್ತು ಆಯಿಲ್ ಉತ್ಪನ್ನಗಳ ವಿಭಾಗದ ಹಿರಿಯ ವ್ಯವಸ್ಥಾಪಕ ಡಾ ಚಂದ್ರ ಎಂ ವಿ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗದ ವತಿಯಿಂದ ರಾಷ್ಟೀಯ ತಂತ್ರಜ್ಞಾನ ದಿನದ ಅಂಗವಾಗಿ ಮಂಗಳವಾರ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡ ‘ನ್ಯೂಟ್ರಿಗೇಟ್: ವೈದ್ಯಕೀಯ ಒಳನೋಟಗಳು ಮತ್ತು ಉತ್ಪನ್ನ ನಾವೀನ್ಯತೆಗಳ ಪ್ರದರ್ಶನ ಕುರಿತು ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಶೋಧನೆಯ ಮೊದಲ ಹಂತವಾಗಿ ಸೂಕ್ತ ಫಂಡಿಂಗ್ ಏಜೆನ್ಸಿಯನ್ನು ಗುರುತಿಸಿ, ಯೋಜನಾ ಅಭಿವೃದ್ಧಿ ಮತ್ತು ಪ್ರಾಯೋಜಕ ವ್ಯವಸ್ಥೆಯ ಮುಖ್ಯ ಕೌಶಲ್ಯಗಳನ್ನು ಅರ್ಥ ಮಾಡಿಕೊಂಡು, ಬಳಿಕ ಸಂಶೋಧನಾ ಪ್ರಸ್ತಾವನೆಯನ್ನು ಬರೆಯಲು ಮುಂದಾಗಬೇಕು ಎಂದು ತಿಳಿಸಿದರು. ಬಹುಮುಖ್ಯವಾಗಿ ಸಂಶೋಧನಾ ಪ್ರಸ್ತಾವನೆಯ ಆರಂಭಿಕ ಹಂತದಲ್ಲಿಯೇ ನಿರ್ವಹಣಾ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು.ಸಂಶೋಧನೆಯಲ್ಲಿ ಸಾಹಿತ್ಯ ವಿಮರ್ಶಿಸುವ ಸಂದರ್ಭದಲ್ಲಿ ಭಾರತೀಯ ವಿಜ್ಞಾನಿಗಳಿಗೆ ಮೊದಲ ಆದ್ಯತೆ ಇರಲಿ…
ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ “ನವೋದಯ ಸ್ವ ಸಹಾಯ ಗುಂಪುಗಳ 25ನೇ ವರ್ಷದ ರಜತ ಸಂಭ್ರಮ”ದ ಕಾರ್ಯಕ್ರಮವು ಮೇ 10 ರಂದು ಗೋಲ್ಡ್ ಫಿಂಚ್ ಸಿಟಿ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರದ ಥಾವರ್ ಚಂದ್ ಗೆಹ್ಲೊಟ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಡಿ.ಕೆ. ಶಿವಕುಮಾರ್, ಡಾ.ವೀರೇಂದ್ರ ಹೆಗ್ಗಡೆ, ಡಾ. ಎಂ.ಎನ್ ರಾಜೇಂದ್ರಕುಮಾರ್, ಯು ಟಿ. ಖಾದರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಶೋಕ್ ಕುಮಾರ್ ರೈ ಪುತ್ತೂರು, ವೇದವ್ಯಾಸ್ ಕಾಮತ್, ಐವನ್ ಡಿಸೋಜ, ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ರಮಾನಾಥ್ ರೈ, ಮಿಥುನ್ ರೈ, ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಇವರುಗಳು ಜೊತೆಗಿದ್ದರು. ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಟ್ರಸ್ಟ್ ನ ಸಂಸ್ಥಾಪಕರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ರವರು ಗೌರವಿಸಿದರು. ಈ ಸಂದರ್ಭದಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು,…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ನೂತನ ಕಿನ್ನಿಗೋಳಿ ಘಟಕದ ಉದ್ಘಾಟನೆಯು ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಟಪದ ಬಳಿ ನಡೆಯಿತು. ಕಟೀಲು ಕ್ಷೇತ್ರದ ಅರ್ಚಕರಾದ ವೇದಮೂರ್ತಿ ಲಕ್ಷ್ಮೀನಾರಾಯಣ ಅಸ್ರಣ್ಣರವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ನೂತನ ಕಿನ್ನಿಗೋಳಿ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಡ್ಕೂರು ಕ್ಷೇತ್ರದ ಅರ್ಚಕ ರಾಮದಾಸ ಆಚಾರ್ಯ, ಸುರಗಿರಿ ಕ್ಷೇತ್ರದ ಪ್ರಧಾನ ಅರ್ಚಕ ವಿಶ್ವೇಶ್ವರ ಭಟ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ, ಮಲ್ಲಿಕಾ ಯಶವಂತ ಶೆಟ್ಟಿ ಬಳಕುಂಜಗುತ್ತು, ಧನಂಜಯ ಶೆಟ್ಟಿಗಾರ ದುಬೈ, ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಯಾದವ ದೇವಾಡಿಗ, ಧನಪಾಲ ಶೆಟ್ಟಿ ತಾಳಿಪಾಡಿ…
ಮಂಗಳೂರಿನ ಬಳ್ಳಾಲ್ ಬಾಗ್ ಪತ್ತುಮಡಿ ಸೌಧದಲ್ಲಿ ನೂತನವಾಗಿ ರಚಿತವಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕದ ಸಭೆಯು ಅಧ್ಯಕ್ಷರಾದ ರಾಜಾರಾಮ ಹೊಳ್ಳ ಕೈರಂಗಳ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಹವ್ಯಾಸಿ ಘಟಕದಿಂದ ಪ್ರತಿ ತಿಂಗಳಲ್ಲಿ ಒಂದು ಕಾರ್ಯಕ್ರಮವನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವ ಬಗ್ಗೆ, ಯಕ್ಷಗಾನ ಸಂಘಗಳ ಅರ್ಹ ಸದಸ್ಯರನ್ನು ಘಟಕಕ್ಕೆ ಸೇರ್ಪಡೆಗೊಳಿಸುವುದರೊಂದಿಗೆ ಆಯಾಯ ಪರಿಸರದಲ್ಲಿ ಯಕ್ಷಗಾನೀಯ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚರ್ಚಿಸಲಾಯಿತು. ಜೂನ್ 1ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದು ಮತ್ತು ಹವ್ಯಾಸಿ ಕಲಾವಿದರ ಮಾಹಿತಿ ಸಂಗ್ರಹಣೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಘಟಕದ ಗೌರವಾಧ್ಯಕ್ಷರಾದ ಮಧುಕರ ಭಾಗವತ ಕುಳಾಯಿ, ಉಪಾಧ್ಯಕ್ಷರಾದ ತೋನ್ಸೆ ಪುಷ್ಕಲ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕೋಶಾಧಿಕಾರಿ ವಿಜಯ ಶಂಕರ ಆಳ್ವ ಮಿತ್ತಲಿಕೆ, ಸಹ ಕಾರ್ಯದರ್ಶಿ ಗಣೇಶ್ ಬಿ ಕುಂಜತ್ತೂರು, ಸಹ ಸಂಚಾಲಕರಾದ ಹರಿಶ್ಚಂದ್ರ ನಾಯ್ಗ ಮಾಡೂರು ಭಾಗವಹಿಸಿದ್ದರು. ಘಟಕದ ಸಂಚಾಲಕರಾದ ಸದಾಶಿವ…















