Author: admin
ಆಗಸ್ಟ್ 10 ರಂದು ಕಾರ್ಕಳ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಕಳ ಹೆಬ್ರಿ ತಾಲೂಕು ಬಂಟರ ಸಂಘ, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ಹಾಗೂ ಕಾರ್ಕಳ ಯುವ ಬಂಟರ ಸಂಘದ ವತಿಯಿಂದ ನಡೆಯಲಿರುವ ಆಟಿಡೊಂಜಿ ಕೆಸರ್ದ ಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜುಲೈ 01 ರಂದು ಕಾರ್ಕಳ ತಾಲೂಕು ಸಂಚಾಲಕರಾದ ವಿಜಯ ಶೆಟ್ಟಿಯವರು ಬಿಡುಗಡೆಗೊಳಿಸಿದರು. ಸನ್ಮಾನ, ಕ್ರೀಡೆಗಳು ಮತ್ತು ಪ್ರತಿಭಾ ಪುರಸ್ಕಾರ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಂಟ ಸಮಾಜಕ್ಕೆ ಮಾತ್ರ ಸೀಮಿತವಾಗಿದ್ದು, ಈ ಕಾರ್ಯಕ್ರಮದಲ್ಲಿ ಕಾರ್ಕಳ ಬಂಟ ಮಹಿಳಾ ತ್ರೋಬಾಲ್ ತರಬೇತುದಾರ ನವೀನ್ ಚಂದ್ರ ನಾಯಕ್ ಅವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಹೆಗ್ಡೆ, ಯುವ ಬಂಟರ ಸಂಘದ ಅಧ್ಯಕ್ಷ ಅವಿನಾಶ್ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಣಂಜಾರು ಗ್ರಾಮದ ಮಡಿಬೆಟ್ಟು ಅನುದಾನಿತ ಶಾಲಾ ಮಕ್ಕಳಿಗೆ ಉಚಿತವಾಗಿ ಮೈತ್ರಿ ಸೇವಾ ಸಂಘದ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಪೆಲತ್ತೂರು ಫ್ರೆಂಡ್ಸ್ ವತಿಯಿಂದ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶ್ರೀಯುತ ಶಿವಪ್ರಸಾದ್ ಹೆಗ್ಡೆ, ಟ್ರಸ್ಟಿನ ಸದಸ್ಯರಾದ ವಿಕ್ರಂ ಹೆಗ್ಡೆ, ಶಶಿಧರ ಶೆಟ್ಟಿ ಕೆಂಜೂರು, ಹರಿದಾಸ ಹೆಗ್ಡೆ, ಶಾಲಾ ಸಂಚಾಲಕರಾದ ಸಿ.ಎ. ಚಂದನ್ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್ ಪ್ರಭು, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಯುತ ಸುಧೀರ್ ಹೆಗ್ಡೆ, ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷ ಸುರೇಶ್ ಶೆಟ್ಟಿ, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಸ್ಥೆಯ ಟ್ರಸ್ಟಿಯವರಾದ ವಿಕ್ರಂ ಹೆಗ್ಡೆಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೈತ್ರಿ ಸೇವಾ ಸಂಘ ಹಾಗೂ ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು ಸಂಸ್ಥೆಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ…
ಅರಬ್ ಸಂಯುಕ್ತ ಸಂಸ್ಥಾನ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ., ಯು.ಎ.ಇ.ಯ ಸರ್ವಪ್ರಥಮ ಮತ್ತು ಏಕೈಕ ಸಮಗ್ರ ಯಕ್ಷಗಾನ ಅಭ್ಯಾಸ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ೨೦೧೫ ರಲ್ಲಿ ದುಬಾಯಿಯಲ್ಲಿ ಪ್ರಾರಂಭವಾಗಿರುವ ಈ ಸಂಸ್ಥೆಯ ದಶಮಾನೋತ್ಸವ – ೨೦೨೫ ಸಂಭ್ರಮ ಇಂಡಿಯನ್ ಹೈಸ್ಕೂಲ್ ಶೇಖ್ ರಾಶೀದ್ ಆಡಿಟೋರಿಯಂ ದುಬಾಯಿಯಲ್ಲಿ ನಡೆಯಿತು. ಯಕ್ಷಾಗಾನ ಚೌಕಿ ಪೂಜೆ ಮಹಾ ಮಂಗಳಾರತಿ ನಂತರ ಭವ್ಯ ಮೆರವಣಿಗೆಯ ಮೂಲಕ ದಶಮಾನೋತ್ಸವ ಯಕ್ಷಗಾನದ ಭಾಗವತರು ಹಾಗೂ ಹಿಮ್ಮೇಳ ಮುಮ್ಮೇಳದ ಕಲಾವಿದರು, ಯಕ್ಷಶ್ರೀರಕ್ಷ ಪ್ರಶಸ್ತಿ ಪುರಸ್ಕöತರು ಹಾಗೂ ದಶಮಾನೋತ್ಸವದ ಹತ್ತು ಮಂದಿ ಸಾಧಕರನ್ನು ವೇದಿಕೆಗೆ ಬರಮಾಡಿ ಕೊಳ್ಳಲಾಯಿತು ಹತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈಯವರ ಶಿಲ್ಪಕಲೆ, ಚಿತ್ರಕಲೆ, ಲೇಖಕ ಮತ್ತು ಬರಹಗಾರರಾಗಿ, ಕಳೆದ ನಾಲ್ಕು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಗುರುತ್ತಿಸಿ “ಕಲಾಮಾಧ್ಯಮ” ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಯಕ್ಷಧ್ರುವ ಫೌಂಡೆಶನ್ ಅಧ್ಯಕ್ಷರು ಶ್ರೀ…
‘ವೈದ್ಯೋ ನಾರಾಯಣೊ ಹರಿಃ’ ಎಂಬ ಮಾತೊಂದಿದೆ. ವೈದ್ಯರಾದವನು ದೇವರಿಗೆ ಸಮಾನರಾದವರು. ರೋಗಿಯು ತನ್ನ ಅಂತರಂಗವನ್ನು ಬಿಚ್ಚಿಡುವುದು ವೈದ್ಯನ ಮುಂದೆ ಮಾತ್ರ. ಇಂದು ವೈದ್ಯರಾದ ಡಾ. ಎ.ಎ ಶೆಟ್ಟಿ ಎಂದೇ ಖ್ಯಾತರಾದ ಅಸೋಡು ಅನಂತರಾಮ ಶೆಟ್ಟಿಯವರನ್ನು ಪರಿಚಯಿಸುತ್ತಿದ್ದೇನೆ. ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಅಸೋಡು ಎಂಬ ಗ್ರಾಮ ಪರಿಸರದಲ್ಲಿ ಹುಟ್ಟಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಮುಗಿಸಿ, ಕೇವಲ ಒಂದು ಸಾವಿರ ರೂಪಾಯಿ ಹಿಡಿದುಕೊಂಡು ಲಂಡನ್ ಗೆ ಹೋದ ಇವರು ಇಂದು ಪ್ರಪಂಚದ ಟಾಪ್ 10 ವೈದ್ಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಹೆಮ್ಮೆಯ ಬಂಟ. ಅಸೋಡು ಅನಂತರಾಮ ಶೆಟ್ಟಿ ಅವರ ಬಗ್ಗೆ ಅನೇಕ ಕಡೆಗಳಲ್ಲಿ, ಜಾಲತಾಣಗಳಲ್ಲಿ, ಸಮೂಹ ಮಾಧ್ಯಮಗಳಲ್ಲಿ, ಹುಟ್ಟೂರಿನ ಸನ್ಮಾನದಲ್ಲಿ ನೋಡಿ ಒಮ್ಮೆ ಅವರನ್ನು ಭೇಟಿ ಆಗಬೇಕೆಂಬ ಆಸೆ ಆಗಿತ್ತು. ವಿಸ್ಮಯವೇ ಎಂಬಂತೆ ಅಂದು ಹಾಲಾಡಿಯ ಯುವ ಮೆರಿಡಿಯನ್ ಸಭಾಭವನದ ರೆಸಾರ್ಟ್ ನಲ್ಲಿ ಅವರನ್ನು ಭೇಟಿಯಾಗಲು ಹೋದಾಗ ನನ್ನನ್ನು ಕರೆದು ಅತ್ಯಂತ ಆತ್ಮೀಯವಾಗಿ ಮಾತನಾಡಿಸಿದರು. ಅಂದು ಅವರೊಂದಿಗೆ ಮಾತನಾಡಿ ಅವರಿಗೆ ನಮಸ್ಕರಿಸಿದ ಆ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ 2025- 26 ನೇ ಸಾಲಿನ ಯಕ್ಷಗಾನ ತರಗತಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ ಇಲ್ಲಿ ರವಿವಾರ ಆರಂಭಗೊಂಡಿತು. ತರಗತಿಯನ್ನು ಪಟ್ಲ ಫೌಂಡೇಶನ್ ಎಕ್ಕಾರ್ ಘಟಕದ ಗೌರವಾಧ್ಯಕ್ಷರಾದ ರತ್ನಾಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಪುಟ್ಟಸ್ವಾಮಿ ಸಭೆಯನ್ನುದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ್, ಎಕ್ಕಾರು ಘಟಕದ ಕಾರ್ಯದರ್ಶಿ ಸತೀಶ್ ಶೆಟ್ಟಿ, ಯಕ್ಷಗಾನ ಶಿಕ್ಷಕರಾದ ವರುಣ್ ಆಚಾರ್ಯ, ಸಂಸ್ಥೆಯ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಕ್ಷರಾದ ಜಕೀಯ ಬತೂಲ್ ಯಕ್ಷಗಾನದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕ ಭೀಮಶಂಕರ ಸ್ವಾಗತಿಸಿದರು. ಅಧ್ಯಾಪಕ ಸಂಗಮೇಶ್ ವಂದಿಸಿದರು. ಉಪನ್ಯಾಸಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜುಲೈ 12 ರಂದು ಪುತ್ತೂರು ಎಂ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿರುವ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜುಲೈ 01 ರಂದು ಜರಗಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ಬಂಟರ ಭವನದ ಬಂಟರ ಚಾವಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಬಳಿಕ ಸರಳ ರೀತಿಯ ಸಭಾ ಕಾರ್ಯಕ್ರಮ ನಡೆಯಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜುಲೈ 12 ರಂದು ಜರಗಲಿರುವ ಪೆರ್ಮೆದ…
ಎಂಪಿಎಂಎಲ್ಎ ನ್ಯೂಸ್ ವತಿಯಿಂದ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00 ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್ಹಾಲ್) ದಲ್ಲಿ ನಡೆಯಿತು. ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು, ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಸೌಹಾರ್ದತೆಯಲ್ಲಿ ಕೊರತೆಯಿದೆ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜ ಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ…
೨೦೨೪-೨೫ರ ಸಾಲಿನಲ್ಲಿ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆ ಹೊಂದಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಹೆಮ್ಮೆಯ ಸಂಸ್ಥೆಯಾಗಿದೆ. ಅಷ್ಟೇ ಅಲ್ಲದೇ ೨೦೨೫ರ ಸಾಲಿನ ಸಿಎಸ್ ಪರೀಕ್ಷೆಯಲ್ಲಿಯೂ ನಿರೀಕ್ಷೆಗೂ ಮೀರಿ ತೇರ್ಗಡೆಯ ಫಲಿತಾಂಶ ಪಡೆದು, ಇಡೀ ಉಡುಪಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂಕ ಪಡೆದಿದ್ದು ನಮ್ಮ ಎಕ್ಸಲೆಂಟ್ ಸಂಸ್ಥೆ ಆಗಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಎಲ್ಲಾ ಅತ್ಯುತ್ತಮ ಸಾಧನೆ ಮಾಡಲು ಸಿಎ, ಸಿಎಸ್ & ಸಿಎಮ್ಎ ಫೌಂಡೇಶನ್ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಸತತವಾಗಿ ತರಬೇತಿಯನ್ನು ನೀಡುತ್ತಾ ಬಂದಿರುವುದರಿ0ದ ಸಾಧ್ಯವಾಗಿದೆ. ದಿನಾಂಕ: ೩೦-೬-೨೦೨೫ರಂದು ಎಕ್ಸಲೆಂಟ್ ಸಂಸ್ಥೆಯ ಆವರಣದಲ್ಲಿ ಸಿಎ, ಸಿಎಸ್ & ಸಿಎಮ್ಎ ಫೌಂಡೇಶನ್ ತರಗತಿಯ ಉದ್ಘಾಟನೆಯನ್ನು ಪ್ರಖ್ಯಾತ ತರಬೇತುದಾರರಾದ ನಾಗೇಂದ್ರ ಭಕ್ತ ಅವರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಲಾಯಿತು. ಈ ಸುಸಂದರ್ಭ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಶ್ರೀಯುತರು, ವಿದ್ಯಾರ್ಥಿಗಳ ಕಲಿಕೆಯ ತವಕ ಮತ್ತು ಸಂಸ್ಕಾರದ ಬಗ್ಗೆ ತಿಳಿಸಿ, ಸಿಎ, ಸಿಎಸ್, ಸಿಎಮ್ಎ ಫೌಂಡೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಮಗ್ರವಾಗಿ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2021ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ‘ಸಂಪನ್ನಂ‘ ಬೀಳ್ಕೊಡುಗೆ ಸಮಾರಂಭ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಡಾ. ಎಂ. ಮೋಹನ ಆಳ್ವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ನಿರಂತರ ಸಫಲತೆಯನ್ನು ಸಾಧಿಸಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಪದವಿಯನ್ನು ಕೇವಲ ಪಡೆದುಕೊಳ್ಳಬೇಕು ಎಂಬುದಕ್ಕೆ ಮಾತ್ರ ಸೀಮಿತರಾಗದೆ, ಅದನ್ನು ಉಳಿಸಿಕೊಂಡು, ತಾವು ಅಪೇಕ್ಷಿಸಿದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಮತ್ತಷ್ಟು ಬೆಳೆಯಬೇಕಾದ ಜವಾಬ್ದಾರಿಯೂ ಇದೆ ಎಂದರು. ಇಂದಿನ ಯುಗದಲ್ಲಿ ಆಯುರ್ವೇದದ ಜೊತೆಗೆ ವೈಜ್ಞಾನಿಕ, ತಾಂತ್ರಿಕ ಮತ್ತು ಸಂಶೋಧನಾ ವಿಚಾರಗಳನ್ನು ಸಮನ್ವಯಗೊಳಿಸಿ ಹೊಸ ದಿಕ್ಕಿನಲ್ಲಿ ಉತ್ತಮ ಸಾಧನೆಗಳನ್ನು ಮಾಡಬಹುದಾದ ಅನೇಕ ಅವಕಾಶಗಳು ಲಭ್ಯವಿವೆ. ಅಂತಹ ಅವಕಾಶಗಳನ್ನು ವಿದ್ಯಾರ್ಥಿಗಳೇ ತಾವಾಗಿ ಅನ್ವೇಷಿಸಿ, ಮುಂದಕ್ಕೆ ಸಾಗಬೇಕಾಗಿದೆ. ಇಂದಿನಿಂದ ನೀವು ಹೊಸ ಜಗತ್ತಿಗೆ ಹೆಜ್ಜೆ ಇಡುತ್ತಿರುವಿರಿ. ಆ ಜಗತ್ತು…
ಪ್ರತಿಷ್ಠಿತ ಶಿರ್ವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಸಮಾಜಸೇವಕ ಕುತ್ಯಾರು ಕೇಂಜ ಅಬ್ಬೆಟ್ಟು ಗುತ್ತು ಸಾಯಿನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ಪ್ರಗತಿಪರ ಕೃಷಿಕರಾಗಿ, ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.















