Author: admin

ಬೈಂದೂರು ಬಂಟರ ಯಾನೆ ನಾಡವರ ಸಂಘ (ರಿ) ಇದರ 30ರ ಸಂಭ್ರಮದ ಅಂಗವಾಗಿ ನೀಡಲ್ಪಡುವ ವಿವಿಧ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅತ್ಯುತ್ತಮ ಇಂಜಿನೀಯರಿಂಗ್ ವಿದ್ಯಾರ್ಥಿ, ಅತ್ಯುತ್ತಮ ವೈದ್ಯಕೀಯ ವಿದ್ಯಾರ್ಥಿ, ಅತ್ಯುತ್ತಮ ವಾಣಿಜ್ಯ ವಿದ್ಯಾರ್ಥಿ, ಅತ್ಯುತ್ತಮ ಸರ್ವತೋಮುಖ ಪ್ರತಿಭಾನ್ವಿತ ವಿದ್ಯಾರ್ಥಿನಿ, ಅತ್ಯುತ್ತಮ ಕಾನೂನು ವಿದ್ಯಾರ್ಥಿ, ಅತ್ಯುತ್ತಮ ದಂತ ವೈದ್ಯಕೀಯ ವಿದ್ಯಾರ್ಥಿ, ಅತ್ಯುತ್ತಮ ಬಿ.ಎಸ್ಸಿ (ಕೃಷಿ)/ಪಿ.ಯು.ಸಿ (ವಿಜ್ಞಾನ) ವಿದ್ಯಾರ್ಥಿ, ಅತ್ಯುತ್ತಮ ಕ್ರೀಡಾ ವಿದ್ಯಾರ್ಥಿ, ಯಾವುದೇ ಕ್ಷೇತ್ರದಲ್ಲಿನ ಉನ್ನತ ಸಾಧನೆಗಾಗಿ, ವಿವಿಧ ಕ್ಷೇತ್ರದಲ್ಲಿನ ಸರ್ವತೋಮುಖ ಪ್ರತಿಭೆಗಾಗಿ (ವಿದ್ಯಾರ್ಥಿನಿ) ಅತ್ಯುತ್ತಮ ಬಿ.ಇ. (ಎಲೆಕ್ಟ್ರಾನಿಕ್ಸ್) ಅಥವಾ ಇತರೆ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ, “ಶಾಸ್ತ್ರೀಯ ಸಂಗೀತ” ದಲ್ಲಿ ವಿಶೇಷ ಸಾಧನೆಗಾಗಿ, ಅತ್ಯುತ್ತಮ ಪಶು ವಿಜ್ಞಾನ ವಿದ್ಯಾರ್ಥಿ ಅಥವಾ ಪಶು ವಿಜ್ಞಾನ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ, ಅತ್ಯುತ್ತಮ ವೈದ್ಯಕೀಯ ವಿದ್ಯಾರ್ಥಿನಿ, ಅತ್ಯುತ್ತಮ ನೇತ್ರ ವೈದ್ಯ ಅಥವಾ ಯಾವುದೇ ವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, “ಶಾಸ್ತ್ರೀಯ ನೃತ್ಯ”ದಲ್ಲಿನ ವಿಶೇಷ ಸಾಧನೆಗಾಗಿ ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿ ಗ್ರಾಮೀಣ ಪ್ರತಿಭಾನ್ವಿತ ವಿದ್ಯಾರ್ಥಿನಿ, ವಾಣಿಜ್ಯ ವಿಷಯದಲ್ಲಿ ಪದವಿ…

Read More

ನಾವು ಹಾಕಿದ ಶೂಸ್ ಒಳಗೆ ಪುಟ್ಟ ಪುಟ್ಟ ಕಲ್ಲುಗಳು ಸೇರಿಕೊಂಡಿದ್ದರೆ ಹೇಮಾಮಾಲಿನಿಯ ಕೆನ್ನೆಯಷ್ಟು ನುಣುಪಾದ ರಸ್ತೆಯಲ್ಲಿ ನಡೆದರೂ ಕಲ್ಲು ಕಾಲಿಗೆ ಚುಚ್ಚುತ್ತದೆ. ಶೂಸ್ ಒಳಗೇ ಕಲ್ಲಿದೆ ಎನ್ನುವುದನ್ನೇ ತಿಳಿಯದೆ ನಾವು ರಸ್ತೆಯನ್ನೇ ದೂರುತ್ತಾ ಅಥವಾ ರಸ್ತೆಯನ್ನೇ ಬದಲಿಸಿ ನಡೆದರೂ ಕಲ್ಲು ಚುಚ್ಚದೆ ಇರುವುದಿಲ್ಲ. ಸಮಸ್ಯೆಯ ಮೂಲ ಯಾವುದು ಅಂತ ತಿಳಿದರೆ ಮತ್ತೆ ಪರಿಹಾರ ಇದ್ದೇ ಇರುತ್ತದೆ. ಅದೆಷ್ಟೋ ಜನರ ಸಮಸ್ಯೆಗಳು ಹೀಗೇ ಪುಟ್ಟ ಪುಟ್ಟವುಗಳು. ಆದರೆ ಸಮಸ್ಯೆಯ ಮೂಲವನ್ನು ಹುಡುಕೋದಿಲ್ಲ. ಕೆಲವೊಮ್ಮೆ ಅದು ಗೊತ್ತಿದ್ದರೂ ಅದನ್ನು ಪರಿಹರಿಸಿಕೊಳ್ಳೋ ಬಗ್ಗೆ ಯೋಚನೆಯೂ ಮಾಡೋದಿಲ್ಲ. ಸಮಸ್ಯೆಗಳ ಜೊತೆಗೇ ಬದುಕುವ ಮತ್ತು ಅದೇ ತಮ್ಮೆಲ್ಲ ಹಿನ್ನಡೆಗೆ ಕಾರಣ ಎಂದು ತಮ್ಮನ್ನು ಹಳಿದುಕೊಳ್ಳುವ ಆದರೆ ಅದನ್ನು ಬದಲಿಸಿಕೊಳ್ಳದೆ ಬದುಕುವ ಹತ್ತಾರು ಮಂದಿ ನಮ್ಮ ಸುತ್ತಲೇ ಇರುತ್ತಾರೆ. ಅವರು ಬದಲಾಗುವುದಿಲ್ಲ. ಯಾರೋ ಬಂದು ನಮ್ಮನ್ನ ಉದ್ದಾರ ಮಾಡಲಿ ಎಂದು ಯಾರು ಬಯಸುತ್ತಾರೋ ಅವರೆಂದಿಗೂ ಉದ್ದಾರವಾಗುವುದಿಲ್ಲ. ಯಾಕೆಂದರೆ ಯಾರನ್ನೋ ಉದ್ಧಾರ ಮಾಡೋಕೆ ಯಾರೂ ಬರುವುದಿಲ್ಲ. ಲೇಖನ : ವಸಂತ್ ಗಿಳಿಯಾರ್

Read More

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಮೂಡುದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ, ಮೂಡಬಿದಿರೆ ಅನೇಕ ರಾರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದೆ. ದಕ್ಷಿಣ ಕನ್ನಡದ ಜಿಲ್ಲೆಯ 8 ತಾಲೂಕುಗಳಲ್ಲಿ ಮೂಡುಬಿದಿರೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕರ‍್ಯನಿರ್ವಹಿಸುತ್ತಿದೆ. ಇಂದು ಮೂಡುಬಿದಿರೆಯಲ್ಲಿ ಅಸೋಸಿಯೇಶನ್ ನಿರ್ಮಾಣವಾಗುವುದರ ಮೂಲಕ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್ ಮಾತನಾಡಿ, ಹಿಂದಿನ ಕಾಲದಲ್ಲಿ ಹೆಚ್ಚಿನ ಖರ್ಚಿಲ್ಲದೆ ಆಡುತ್ತಿದ್ದ ಆಟ ಕಬಡ್ಡಿ.…

Read More

ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಮಂಗಳೂರಿನ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ವರ್ಷದ 4ನೇ ನೇತ್ರ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಮೊದಲು ನಡೆಸಿದ ಒಂಬತ್ತು ಶಿಬಿರಗಳಲ್ಲಿ 1,478 ಜನರಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 784 ಜನರಿಗೆ ಉಚಿತ ಕನ್ನಡಕ ನೀಡಲಾಗಿತ್ತು. ಈ ಪೈಕಿ 221 ಜನರಿಗೆ ಶಸ್ತ್ರಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದ್ದು, 109 ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದವು. ಈ ವರ್ಷವೂ ಇದೇ ಹಾದಿಯಲ್ಲಿ ಸಾಗುತ್ತಾ ಈಗಾಗಲೇ ಮೂರು ಶಿಬಿರಗಳು ನಡೆದಿದ್ದು, ಇಂದು ನಡೆದ 4ನೇ ಶಿಬಿರವು ಸೇರಿದಂತೆ ಒಟ್ಟು 470 ಜನರು ತಪಾಸಣೆಗೆ ಒಳಪಟ್ಟಿದ್ದಾರೆ. 235 ಜನರಿಗೆ ಕನ್ನಡಕ ವಿತರಿಸಲಾಗಿದೆ ಮತ್ತು 45 ಜನರಿಗೆ ಶಸ್ತ್ರಚಿಕಿತ್ಸೆಯ ಶಿಫಾರಸ್ಸು ಮಾಡಲಾಗಿದೆ. ಇವರಲ್ಲಿ 11 ಜನರಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ, ಖ್ಯಾತ ಲೇಖಕಿ ಶ್ರೀಮತಿ ವೈದೇಹಿ ವಿರಚಿತ ನಾಯಿಮರಿ ನಾಟಕದ ಪ್ರದರ್ಶನವನ್ನು ಜೂನ್ 18 ರಿಂದ 23 ರವರೆಗೆ, ಪ್ರತಿದಿನ ಸಂಜೆ 6.45 ಕ್ಕೆ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್‌ನಲ್ಲಿರುವ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ಈ ನಾಟಕವು ಈಗಾಗಲೇ ಕಳೆದ ಹನ್ನೆರಡು ವರ್ಷಗಳಲ್ಲಿ ರಾಜ್ಯಾದ್ಯಂತ 127 ಪ್ರದರ್ಶನ ಕಂಡಿರುತ್ತದೆ. ಆಳ್ವಾಸ್ ನಲ್ಲಿ ಶಿಕ್ಷಣ ಪಡೆಯಲು ದೇಶದ ನಾನಾ ಕಡೆಗಳಿಂದ ಈ ವರ್ಷ ಹೊಸದಾಗಿ ಬಂದಿರುವ ಮೂರೂವರೆ ಸಾವಿರ ವಿದ್ಯಾರ್ಥಿಗಳು ಹಾಗೂ ಆಸಕ್ತ ಸಾರ್ವಜನಿಕರಿಗಾಗಿ ಈ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಜೀವನ ಪ್ರೀತಿ, ಪರಿಸರ ಕಾಳಜಿ, ಪ್ರಾಣಿಪಕ್ಷಿ ಮೇಲಿನ ಮಮತೆ ಇತ್ಯಾದಿಗಳ ಮೂಲಕ ಶೈಕ್ಷಣಿಕ ಅರಿವು ಮೂಡಿಸುವ ಈ ನಾಯಿಮರಿ ನಾಟಕ , ಕಲಾವಿದರ ಪರಿಪಕ್ವ ಅಭಿನಯ,ಸುಶ್ರಾವ್ಯ ಸಂಗೀತದಿAದ ಕೂಡಿದ ವಿಶೇಷ ಪ್ರಯೋಗವಾಗಿದ್ದು ಮಕ್ಕಳ ರಂಗಭೂಮಿಯಲ್ಲೇ ಅತ್ಯಂತ ಶ್ರೇಷ್ಠ ಪ್ರಯೋಗ…

Read More

ಯಾವುದೇ ಭೇದ ಭಾವವಿಲ್ಲದೆ ಆತಿಥ್ಯ ನೀಡುವುದರಲ್ಲಿ ಬಂಟರ ಸಮುದಾಯ ಹೆಸರುವಾಸಿಯಾಗಿದೆ. ಈ ಸಮುದಾಯದವರು ಅತ್ಯಂತ ಶ್ರಮಜೀವಿಗಳು. ಅತಿಥಿ ದೇವೋ ಭವ ಎನ್ನುವ ಹಾಗೆ ಅತಿಥಿಗಳನ್ನು ದೇವರ ರೀತಿ ಭಾವಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಬಂಟರ ಯಾನೆ ನಾಡವರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4 ರ ನ್ಯೂ ಗಾಂಧಿ ನಗರದಲ್ಲಿ ನವೀಕೃತಗೊಂಡಿರುವ ಬಂಟರ ಭವನದ ಉದ್ಘಾಟನಾ ಸಮಾರಂಭ ಹಾಗೂ ಮಾಣಿಕ್ಯ ಸಂಭ್ರಮದಲ್ಲಿ ಮಾತನಾಡಿದ ಸಚಿವರು, ಚಿಕ್ಕ ವಯಸ್ಸಿನಲ್ಲೇ ಮನೆಬಿಟ್ಟು ಹೋಗಿ ಸ್ವಂತ ಕಾಲ ಮೇಲೆ ನಿಲ್ಲುವ ಸ್ವಾಭಿಮಾನಿಗಳು. ದೇಶದ ವಿವಿಧೆಡೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಸಂಸ್ಕೃತಿ ಕಲೆಯಲ್ಲಿ ನಿಮ್ಮ ಸಮಾಜಕ್ಕೆ ಇರುವ ಆಸಕ್ತಿ ನೋಡಿ ಮಂತ್ರ ಮುಗ್ಧಳಾಗಿದ್ದೇನೆ. ಈ ಸಮುದಾಯದವರು ನಿಸ್ವಾರ್ಥಿಗಳು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವುದು ನನ್ನ ಪೂರ್ವ ಜನ್ಮದ ಪುಣ್ಯ. ಉಡುಪಿ ಶ್ರೀ ಕೃಷ್ಣ, ಕಟೀಲು ದುರ್ಗಾಪರಮೇಶ್ವರಿ, ಕಾಪು ಮಾರಿಗುಡಿ ದೇವರ ದರ್ಶನ ಭಾಗ್ಯ…

Read More

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಜೂನ್ 21ರಂದು ಸಾಯಂಕಾಲ 3.30 ಕ್ಕೆ ಸಯನ್ ನಿತ್ಯಾನಂದ ಸಭಾಗೃಹದ ವೇದಿಕೆಯಲ್ಲಿ ಬಾಂಬೆ ಬಂಟ್ಸ್ ಅಸೋಸಿಯೇಶನ್ ಸಂಸ್ಥೆಯ ಅಧ್ಯಕ್ಷರಾದ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆ ಹಾಗೂ ಮಾರ್ಗದರ್ಶನದೊಂದಿಗೆ ಯೋಗ ದಿನಾಚರಣೆಯು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಗೋಲ್ಡ್ ಮೆಡಲ್ ಪಡೆದ ಹಾಗೂ “ದೇವಾಡಿಗ ರತ್ನ” ಪ್ರಶಸ್ತಿಗೆ ಭಾಜನರಾದ ಯೋಗ ಗುರು ಜಯಂತಿ ದೇವಾಡಿಗರವರು ವಿಶೇಷವಾಗಿ ಆಗಮಿಸಿ ಸಹಕರಿಸಲಿದ್ದಾರೆ. ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ, ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ, ಯೋಗದ ಹೊಲಬ ನೀನೆತ್ತ ಬಲ್ಲೆ. ವಚನಕಾರರಾದ ಅಲ್ಲಮ ಪ್ರಭುಗಳ ಈ ಸಾಲುಗಳು ಸರಳವಾಗಿ ಹೇಳುವುದೇನೆಂದರೆ, ವ್ಯಕ್ತಿಯು ಯೋಗದ ಮೂಲಕ ಅಗ್ನಿ, ಉದಕ, ವಾಯು ಮತ್ತು ಆಕಾಶದಂತಹ ಪ್ರಕೃತಿಯ ಶಕ್ತಿಗಳನ್ನು ತನ್ನ ಅಧೀನದಲ್ಲಿ ತರಬಹುದು ಅಥವಾ ಅವುಗಳೊಂದಿಗೆ ಸಾಮರಸ್ಯದಿಂದ ಬದುಕಬಹುದು. ಅಲ್ಲದೇ ಇದು ಯೋಗದ ಅಂತಿಮ ಗುರಿ ಅಥವಾ ಉದ್ದೇಶವನ್ನು ಸೂಚಿಸುತ್ತದೆ ಮತ್ತು ಯೋಗದ ಶಕ್ತಿಯ ಬಗ್ಗೆ ತಿಳಿಸುತ್ತದೆ. ಯೋಗವು…

Read More

ಮುಂಬಯಿಯ ಪ್ರಸಿದ್ಧ ಲೆಕ್ಕ ಪರಿಶೋಧಕ ಸಂಸ್ಥೆಯಾದ ಸದಾಶಿವ ಶೆಟ್ಟಿ & ಕಂಪನಿಯ ಸಿ.ಎ ಸದಾಶಿವ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಬಂಟರ ಸಂಘ ಮುಂಬಯಿಯ ಮಾಜಿ ಕಾರ್ಯದರ್ಶಿಯಾಗಿ, ಸಮಾಜ ಸೇವಕರಾಗಿ ಹೆಸರು ವಾಸಿಯಾಗಿರುವ ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಇಲ್ಲಿ ಒಬ್ಬ ಮುಂಜಾನೆ ಮಳೆ, ಗಾಳಿ, ಬಿಸಿಲು,ಎನ್ನದೆ ಕೈಯಲ್ಲಿ “ರಸ್ತೆಯಲ್ಲಿ ಕಸ ಬಿಸಾಡಬೇಡಿ” ಎಂಬ ಒಂದು ಬೋರ್ಡ್ ಹಿಡಿದುಕೊಂಡು ನಿಂತಿದ್ದಾನೆ. ಯಾರಾದರೂ ಇವನ ಬಗ್ಗೆ ಯೋಚಿಸಿದ್ದೀರಾ? ಎಲ್ಲರೂ ಬದಲಾಗುತ್ತಾರೆ ಎಂಬುದು ಅವನ ಕನಸು. ಆದರೆ “ಕೆಲವರಾದರೂ ಬದಲಾಗಬಹುದು” ಎಂಬ ನಂಬಿಕೆಯೇ ಅವನ ತಾಳ್ಮೆಯ ಶಕ್ತಿ, ಅವನ ನಿಲ್ಲುವ ಉದ್ದೇಶ. ಅವನು ನಾಯಕನೂ ಅಲ್ಲ, ನಟನೂ ಅಲ್ಲ ಪ್ರಖ್ಯಾತ ವ್ಯಕ್ತಿಯು ಅಲ್ಲ. ಆದರೆ ಆತ ಪರಿಸರದ ಬದಲಾವಣೆಗೆ ಹೊಸದೊಂದು ಹೆಜ್ಜೆ ಹಾಕುತ್ತಿರುವ ಸಾಮಾನ್ಯ ನಾಗರಿಕ.! ಈತನ ಹೆಸರು ನಾಗರಾಜ್. ಆದರೆ ಆತನು ತೋರಿಸುತ್ತಿರುವ ರಸ್ತೆ ಬದಿಯ ಹೋರಾಟ, ಸಾವಿರ ಸಂಕಷ್ಟದ ವೀರಗಾಥೆಗೂ ಕಡಿಮೆಯಲ್ಲ. ಹೆಸರು ಮಾತ್ರ ಸಾಮಾನ್ಯ. ಆದರೆ ಹೃದಯ ಸರ್ವಜ್ಞನಷ್ಟು ಗಂಭೀರ. ಅಡ್ಯಾರಿನಿಂದ ಫರಂಗಿಪೇಟೆಯ ನಡುವೆ ಆತ ರಸ್ತೆ ಬದಿಯಲ್ಲಿ ನಿಂತಿದ್ದನ್ನು ಕಂಡರೂ ಕಾಣದಂತೆ ಹೋಗಬೇಡಿ. ಒಂದು ನಿಮಿಷ ಅವನನ್ನು ಮಾತನಾಡಿಸಿ ಅವನ ಕಾಳಜಿಗೆ ಧನ್ಯವಾದ ತಿಳಿಸಿ. ಪ್ರತಿಯೊಂದು ದಿನವೂ ನಾವು ನೋಡುತ್ತೇವೆ. ನೋಡಿದರೂ ನೋಡದಂತೆ ಸಾಗುತ್ತೇವೆ. ಒಬ್ಬ ರಸ್ತೆಯ ಬದಿಯಲ್ಲಿ…

Read More

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಇದೇ ಬರುವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ನಗರದ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ಜರಗಲಿರುವುದು ಎಂದು ಯಕ್ಷಗಾನ ಅಭ್ಯಾಸ ಕೇಂದ್ರದ ಸಂಚಾಲಕರಾದ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸುತ್ತಾ, ಜೂನ್ 29 ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ನಡೆಯುವ ಕಾರ್ಯಕ್ರಮಗಳಲ್ಲಿ ದಶಮ ಸಂಭ್ರಮದ ಪ್ರಯುಕ್ತ ಯುಎಇಯ ಏಳು ಮಂದಿ ಸಾಧಕರಿಗೆ ಮತ್ತು ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಇತ್ತೀಚಿಗೆ ನಗರದ ಫಾರ್ಚೂನ್ ಪ್ಲಾಜಾದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಯುತ ದಿನೇಶ್ ಶೆಟ್ಟಿ ಕೊಟ್ಟಿಂಜರವರು ಯಕ್ಷಗಾನ ಅಭ್ಯಾಸ ಕೇಂದ್ರದ ವತಿಯಿಂದ ಅದ್ದೂರಿಯ ಸಂಮಾನಕ್ಕೆ ಪಾತ್ರರಾಗಲಿರುವ ಸಾಧಕರ ವಿವರವನ್ನು ಮಾಧ್ಯಮದ ಮುಂದೆ ಇಟ್ಟರು. ವಿವರ ಹೀಗಿದೆ. ಸಂಘಟನೆ ಕ್ಷೇತ್ರ : ಸರ್ವೋತ್ತಮ ಶೆಟ್ಟಿಯವರು ಯುಎಇಯಲ್ಲಿ ತುಳು ಕನ್ನಡ ಸಂಘ ಸಂಸ್ಥೆಗಳ…

Read More