Author: admin

2023-24ನೇ ಸಾಲಿಗೆ ರೂ. 12.01 ಕೋಟಿ ಲಾಭ, ಶೇ. 25 ಡಿವಿಡೆಂಡ್: ಕೆ. ಜೈರಾಜ್ ಬಿ. ರೈ, ಆಧ್ಯಕ್ಷರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 30ನೇ ವಾರ್ಷಿಕ ಮಹಾಸಭೆ, ಸ0ಘದ ಅಧ್ಯಕ್ಷರಾದ          ಶ್ರೀ ಕೆ. ಜೈರಾಜ್ ಬಿ. ರೈಯವರ ಅಧ್ಯಕ್ಷತೆಯಲ್ಲಿ ಮ0ಗಳೂರಿನ ಉರ್ವ ಸೆ0ಟನರಿ ಚರ್ಚ್ ಹಾಲ್‍ನಲ್ಲಿ ದಿನಾ0ಕ 01.09.2024ರ0ದು ಜರಗಿತು. ಸ0ಘವು 31.03.2024ಕ್ಕೆ ಅ0ತ್ಯವಾದ, 2023-24ನೇ ಸಾಲಿನಲ್ಲಿ ರೂ.12.01 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ  ಶೇ. 25 ಡಿವಿಡೆ0ಡ್‍ನ್ನು ನೀಡಲು ಮಹಾಸಭೆಯಲ್ಲಿ ನಿರ್ಧರಿಸಿದೆ. ಸಂಘದ ಅಧ್ಯಕ್ಷರಾದ ಶೀ ಕೆ. ಜೈರಾಜ್ ಬಿ. ರೈಯವರು 2023-24ನೇ ಸಾಲಿನ ಆಡಳಿತ ಮಂಡಳಿಯ ವರದಿ ಮತ್ತು ಕಾರ್ಯಯೋಜನೆಗಳನ್ನು ಮಂಡಿಸಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಠೇವಣಾತಿ ಮತ್ತು ಸಾಲ ಸೇರಿದಂತೆ ಒಟ್ಟು ಸಾರ್ವಕಾಲಿಕ ದಾಖಲೆಯ ರೂ. 151 ಕೋಟಿ ವೃದ್ಧಿಯನ್ನು ದಾಖಲಿಸಿ, 31/03/2024ಕ್ಕೆ ರೂ.533 ಕೋಟಿ ಠೇವಣಾತಿ, ರೂ.453 ಕೋಟಿ ಸಾಲ, ರೂ.986 ಕೋಟಿ ಮೀರಿದ ಒಟ್ಟು ವ್ಯವಹಾರ,…

Read More

ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯದ 2024 – 25ನೇ ಸಾಲಿನ ಬಿ.ಕಾಂ. ಆರನೇ ಸೆಮಿಸ್ಟರ್‍ನ ಎಲ್ಲಾ ವಿಷಯಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ ಶೆಟ್ಟಿ ಪೂರ್ಣ ಅಂಕ ಗಳಿಸಿದ್ದಾಳೆ. ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಇದು ದಾಖಲೆಯಾಗಿದೆ. ಇಂಡಿಯನ್ ಅಕೌಂಟಿಂಗ್ ಸ್ಟಾಂಡರ್ಡ್-2, ಇನ್‍ವೆಸ್ಟ್‍ಮೆಂಟ್ ಮ್ಯಾನೆಜ್‍ಮೆಂಟ್, ಅಡ್ವಾನ್ಸ್ಡ್ ಫೈನಾನ್ಶಿಯಲ್ ಮ್ಯಾನೆಜ್‍ಮೆಂಟ್, ಇನ್‍ಕಂ ಟ್ಯಾಕ್ಸ್ ಲಾ ಆ್ಯಂಡ್ ಪ್ರಾಕ್ಟೀಸ್ 2, ಮ್ಯಾನೆಜ್‍ಮೆಂಟ್ ಅಕೌಂಟಿಂಗ್, ಅಸೆಸ್‍ಮೆಂಟ್ ಆಫ್ ಪರ್ಸನ್ಸ್ ಅದರ್ ದೆನ್ ಇಂಡಿವಿಜ್ಯುವಲ್ಸ್ ಆ್ಯಂಡ್ ಫೈಲಿಂಗ್ ಐಟಿಆರ್ಸ್, ಹಾಗೂ ಮಿನಿ ಪ್ರಾಜೆಕ್ಟ್ ವಿಷಯಗಳಲ್ಲಿ ಪೂರ್ಣಾಂಕ ಗಳಿಸಿದ್ದಾಳೆ. ಅವಳ ಒಟ್ಟಾರೆ ಸರಾಸರಿ ಅಂಕವು ಶೇಕಡಾ 95.54 ಇದೆ. ಕಾಲೇಜಿನ ಕ್ಯಾಂಪಸ್ ಸಂದರ್ಶನದಲ್ಲಿ ಟಿಸಿಎಸ್ ಕಂಪೆನಿಗೆ ಉತ್ತಮ ವೇತನದೊಂದಿಗೆ ಆಯ್ಕೆಯಾಗಿದ್ದಾಳೆ. ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯಳಾಗಿದ್ದಳು. ಮೂಡುಬಿದಿರೆ ದರೆಗುಡ್ಡೆ ನಿವಾಸಿಗಳಾದ ದಿನೇಶ ಶೆಟ್ಟಿ ಹಾಗೂ ಜಯಶ್ರೀ ಶೆಟ್ಟಿ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಶ್ಲಾಘಿಸಿದ್ದಾರೆ.

Read More

ಮೂಡುಬಿದಿರೆ: ರಾಷ್ಟ್ರೀಯ ಸೇವಾ ಯೋಜನೆ ನೀಡುವಂತಹ ಕೌಟುಂಬಿಕ ಅನುಭವ ಬೇರೆ ಯಾವುದೇ ಸಂಘಟನೆ ನೀಡಲಾರದು ಎಂದು ಮೂಡುಬಿದರೆ ಶ್ರೀ ಧವಲಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೋಅಜಿತ್ ಪ್ರಸಾದ್ ಅಭಿಪ್ರಾಯಪಟ್ಟರು. ಅವರು ಶಿವರಾಮ ಕಾರಂತ ವೇದಿಕೆಯಲ್ಲಿ, ಶನಿವಾರ ಆಳ್ವಾಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಸಮುದಾಯದ ಸಾಮಥ್ರ್ಯವನ್ನು ಸರಿಯಾಗಿ ಬಳೆಸಿಕೊಳ್ಳಲು ಆರಂಭಗೊಂಡಿದ್ದೇ ರಾಷ್ಟ್ರೀಯ ಸೇವಾ ಯೋಜನೆ ಮೂಲಕ. 1969 ರಲ್ಲಿ ಎನ್.ಎಸ್.ಎಸ್ ಶುರುವಾದಾಗ ಅಂದಿನ ಯುವಕರ ಪ್ರಮುಖ ಆಕರ್ಷಣೆ ಎನ್‍ಎಸ್‍ಎಸ್ ಆಗಿತ್ತು. ಸಾಮಾಜಿಕ ಕಳಕಳಿ, ಬದ್ಧತೆ ಮತ್ತು ಉತ್ತರದಾಯಿತ್ವದ ಗುಣಗಳನ್ನು ಎನ್.ಎಸ್.ಎಸ್ ನೀಡುತ್ತದೆ. ವ್ಯಕ್ತಿತ್ವ ವಿಕಸನವೆಂದರೆ ದೌರ್ಬಲ್ಯಗಳನ್ನು ಕಡಿಮೆಗೊಳಿಸಿ ಧನಾತ್ಮಕ ಚಿಂತನೆಯನ್ನು ಹೆಚ್ಚಿಸಿಕೊಳ್ಳುವುದಾಗಿದೆ. ಜೀವನವೆಂದರೆ ನಮಗಾಗಿ ಬದುಕೋದಲ್ಲ. ಇತರರ ಜೊತೆಗೆ ಬದುಕುತ್ತಾ, ಬೆಳೆಯುತ್ತಾ ಹೋಗುವ ವಿಶ್ವ ಪ್ರಜ್ಞೆ. ಆಗ ಮಾತ್ರ ನಮ್ಮಲ್ಲಿ ಸಮಷ್ಟಿ ಮನೋಭಾವ ಬೆಳೆಯಲು ಸಾಧ್ಯ ಎಂದರು. ಎನ್.ಎಸ್.ಎಸ್. ಸ್ವಯಂಸೇವಕನ ಪ್ರಾಥಮಿಕ ಅರ್ಹತೆಯೇ 120 ಘಂಟೆಗಳ ಕಾರ್ಯಕ್ರಮದಲ್ಲಿ ಕ್ರಿಯಾತ್ಮಕವಾಗಿ ಭಾಗಿಯಾಗುವುದರ ಜೊತೆಗೆ…

Read More

ಗಣೇಶ ಚತುರ್ಥಿಯನ್ನು ತುಳುನಾಡಿನ ಜನರು “ಚೌತಿ ಹಬ್ಬ’ ಎಂದು ಸಂಭ್ರಮದಿಂದ ಆಚರಿಸುತ್ತಾರೆ . ಇದು ತುಳುನಾಡಿನ ಪ್ರದೇಶದ ಜನತೆಗೂ , ಗಣಪತಿ ದೇವರಿಗೂ ಪ್ರೀತಿಯ ಕೊಂಡಿಯಾಗಿದೆ . ಇದು ಊರಿನ ಎಲ್ಲಾ ದೈವ – ದೇವಸ್ಥಾನಕ್ಕೆ ಸಲ್ಲುವ ಪರ್ವ . ಈ ಸಂದರ್ಭದಲ್ಲಿ ಈ ಪ್ರದೇಶದ ವಿಶಿಷ್ಟವಾದ ಸಂಪ್ರದಾಯವೆಂದರೆ ಚೌತಿ ಆಚರಣೆಯಲ್ಲಿ ಗಣೇಶನನ್ನು ಸಂಕೇತಿಸಲು ಯಾವುದೇ ಕೃತಕ ರಾಸಾಯನಿಕ ಮೂರ್ತಿಯನ್ನಿಡದೆ ಕಬ್ಬನ್ನು ಬಳಸಿ ಅದನ್ನೇ ದೇವರು ಎಂದು ಪ್ರತಿನಿಧಿಸುವುದು. ತುಳುನಾಡು ಪ್ರದೇಶದ ಹಲವಾರು ಪದ್ಧತಿಗಳಂತೆ ಇದು ಕೂಡ ಕೃಷಿ ಪದ್ಧತಿಗಳಿಗೆ ಬಲವಾದ ಸಂಬಂಧವನ್ನು ಹೊಂದಿದೆ ಮತ್ತು  ಪ್ರಕೃತಿ ಮಾತೆಯ ಗೌರವಕ್ಕೆ ಕಾರಣವಾಗಿದೆ . ಈ ಎಲ್ಲಾ ಆಚರಣೆಗಳನ್ನು ಜೈವಿಕ ವಿಘಟನೆಯ ವಸ್ತುಗಳೊಂದಿಗೆ ನಡೆಸಲಾಗುತ್ತದೆ .ಇದರಿಂದ ಸಾಮಾನ್ಯವಾಗಿ ಸುತ್ತು ಮುತ್ತಲಿನ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಚೌತಿ ಆಚರಣೆಯಲ್ಲಿ ಕಬ್ಬಿನ ಗಣೇಶ : ಚೌತಿ ಆಚರಣೆಯ ಅಂಗವಾಗಿ ತುಳುವರು ಕಬ್ಬಿನ ತುಂಡುಗಳಿಂದ ಪಿರಮಿಡ್ ರಚನೆಯನ್ನು ರಚಿಸಿ ,ಅದರಲ್ಲಿ ಭಗವಂತನನ್ನು ಪ್ರತಿನಿಧಿಸುತ್ತಾರೆ. ಕಬ್ಬು ಗಣಪತಿಗೆ ಅತಿ…

Read More

ಗ್ರಾಮೀಣ ಪ್ರದೇಶದ ಶಿಕ್ಷಣ ವ್ಯವಸ್ಥೆಯೊಂದಿಗೆ, ಉದ್ಯೋಗ ಕ್ಷೇತ್ರದಲ್ಲಿ ಹತ್ತಾರು ಉದ್ಯೋಗ ಮೇಳಗಳನ್ನು, ವಿವಿಧ ಕ್ಷೇತ್ರದಲ್ಲಿ ಲಭ್ಯವಿರುವ ಖಾಸಗಿ ಉದ್ಯೋಗ ಅವಕಾಶಗಳಿಗೆ ಸಾವಿರಾರು ನೇರ ಸಂದರ್ಶನಗಳ ಮೂಲಕ ಯುವ ಜನತೆಗೆ ಉದ್ಯೋಗ ಕೊಡಿಸುವಲ್ಲಿ ವಿದ್ಯಾಮಾತಾ ಅಕಾಡೆಮಿ ತುಂಬಾನೇ ಮಹತ್ತರ ಕಾರ್ಯನಿರ್ವಹಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಸಿದ್ಧಿ ಪಡೆದಿರುವ ಸಂಸ್ಥೆಯಾಗಿ ಹೊರ ಹೊಮ್ಮಿದೆ. ರಾಜ್ಯ ಮಟ್ಟದಲ್ಲಿ ಮೂರು ಉದ್ಯೋಗ ಮೇಳವನ್ನು ಆಯೋಜಿಸಿ, ಹತ್ತಕ್ಕೂ ಮಿಕ್ಕಿದ ಗ್ರಾಮೀಣ ಉದ್ಯೋಗ ಮೇಳದ ಜೊತೆಗೆ ಸಾವಿರಾರು ಸಂದರ್ಶನದೊಂದಿಗೆ ನೂರಾರು ಕಾರ್ಯಗಾರ ಮೂಲಕ ಕಳೆದ ಆರು ವರ್ಷಗಳಲ್ಲಿ ಅತೀ ಕಡಿಮೆಯೆಂದರೂ ಆರು ಸಾವಿರ ಮೀರಿ ಉದ್ಯೋಗಕಾಂಕ್ಷಿಗಳಿಗೆ ವಿದ್ಯಾಮಾತಾ ಮೂಲಕ ಉದ್ಯೋಗ ಲಭಿಸಿದ್ದು, ಇವೆಲ್ಲವೂ ಅಕಾಡೆಮಿಯ ಪರಿಶ್ರಮಕ್ಕೆ ಸಿಕ್ಕ ಅಮೂಲ್ಯ ಉಡುಗೊರೆಯಾಗಿದೆ. ಗ್ರಾಮೀಣ ಭಾಗದ ಬಹುತೇಕ ವಿದ್ಯಾರ್ಥಿಗಳು ಸರಕಾರಿ ಹುದ್ದೆಯನ್ನೇರುವ ಅವರ ಪುಟ್ಟ ಕನಸುಗಳನ್ನು ನನಸಾಗಿಸಲು ವಿಫಲರಾಗುತ್ತಿರುವುದನ್ನು ಮನಗಂಡು ವಿದ್ಯಾಮಾತಾ ಫೌಂಡೇಶನ್ ಇದರ ಆಶ್ರಯದಲ್ಲಿ ವಿದ್ಯಾಮಾತಾ ಅಕಾಡೆಮಿ ಪ್ರಾರಂಭಿಸಲಾಗಿತ್ತು. ಈ ಅಕಾಡೆಮಿ ಮೂಲಕ ಸರಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಉದ್ಯೋಗ…

Read More

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ದಿ. ಡಾ. ಉದಯ್ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿ, ಅವಿನಾಶ್ ಶೆಟ್ಟಿಯವರು ಪ್ರೇರಣಾದಾಯಕ ಕೆಲಸವನ್ನು ಮಾಡುತ್ತಿದ್ದು ಕಳೆದ ಬಾರಿಯೂ ಮಕ್ಕಳಿಗೆ ನೋಟ್ ಪುಸ್ತಕ ಬ್ಯಾಗ್ ಕೊಡುವ ಮೂಲಕ ಕೆಲಸ ಮಾಡಿದ್ದರು. ಈ ಬಾರಿ ವಿದ್ಯಾರ್ಥಿ ವೇತನವನ್ನು ನೀಡುವುದರ ಮೂಲಕ ಮತ್ತೆ ಶಿಕ್ಷಣ ಪ್ರೇಮವನ್ನು ಮೆರೆದಿದ್ದಾರೆ. ಅಮ್ಮನ ನೆರವು ಇಲ್ಲದೇ ನಾವ್ಯಾರು ಬದುಕಲು ಸಾಧ್ಯವಿಲ್ಲ. ಅಂತಹ ಅಮ್ಮನ ನೆನಪಲ್ಲಿ ಟ್ರಸ್ಟ್ ಆರಂಭ ಮಾಡಿದ್ದು ಒಳ್ಳೆಯ ಸಂಗತಿ ಎಂದು ಅವರು ಶ್ಲಾಘಿಸಿದರು. ಬಳಿಕ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸ್ಥಾಪಕರಲ್ಲಿ ಓರ್ವರಾದ ಗುಣರಾಜ್ ಶೆಟ್ಟಿಯವರು, ಶಿಕ್ಷಣ ನಮಗೇನು ಕೊಟ್ಟಿದೆ ಅನ್ನುವುದಕ್ಕಿಂತ ಕಲಿತ ಶಿಕ್ಷಣದಿಂದ…

Read More

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಆಳ್ವಾಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ್ಯಕ್ರಮ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ- ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ. ಅದನ್ನು ಅವರು ಅರಿತುಕೊಳ್ಳಬೇಕು ಎಂದರು. ಸಿಎಯನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಆರಂಭಿಕ ಹಂತದಲ್ಲೇ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಎಲ್ಲಾ ಅವಕಾಶಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪದವಿ ಪೂರ್ವ ಹಂತದಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು. ಸಿಎ ಕಾರ್ತಿಕೇಯ ಶೆಣೈ ಮಾತನಾಡಿ ಸಿಎ ಆರಂಭಿಕ ಹಂತದಿಂದ ಹಿಡಿದು ಕೊನೆಯ ತನಕ ಎಲ್ಲಾ ಪರೀಕ್ಷೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಸಿಎ ಗೌತಮ್ ನಾಯಕ್ ಮಾತನಾಡಿ ಈ ಕಾರ್ಯಕ್ರಮವನ್ನು…

Read More

ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ವಿಶೇಷ ಸಾಧಕರಿಗೆ ಸನ್ಮಾನ, ವಿವಿಧ ಕ್ಷೇತ್ರಗಳ 14 ಸಾಧಕರಿಗೆ ಪ್ರಶಸ್ತಿ ಪ್ರಧಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಕಾರ್ಯಕ್ರಮ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಪುತ್ತೂರು ತಾಲೂಕಿನ ಎಲ್ಲಾ ಬಂಟರ ಸಂಪೂರ್ಣ ಸಹಕಾರದಿಂದ ಇದು ಸಾಧ್ಯವಾಯಿತು. ಈ ಕಾರ್ಯಕ್ರಮ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಇದಕ್ಕಾಗಿ ಎಲ್ಲರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಪುತ್ತೂರು ಬಂಟರ ಸಂಘದ ಅಧ್ಯಕ್ಷರಾದ ಕಾವು ಹೇಮನಾಥ್ ಶೆಟ್ಟಿ ಯವರು ಹೇಳಿದರು. ಬಂಟ ಜನಗಣತಿ ಕೆಲಸ ನಡೆಯುತ್ತಿದೆ. ಅದನ್ನು ಆದಷ್ಟು ಬೇಗ ಮುಗಿಸಬೇಕು. ಅದಕ್ಕಾಗಿ ಎಲ್ಲರೂ ಸಹಕಾರ ನೀಡಬೇಕು. ಕಷ್ಟದಲ್ಲಿರುವ ಬಂಟರ ಕೈ ಹಿಡಿದು ಮೇಲೆತ್ತುವ ಪ್ರಯತ್ನ ಮಾಡೋಣವೆಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಮಾತೃ ಸಂಘದ ತಾಲೂಕು ಸಂಚಾಲಕರಾದ ಕುಂಬ್ರ ದುರ್ಗಾಪ್ರಸಾದ್ ರೈ, ನಿಕಟಪೂರ್ವ ಸಂಚಾಲಕ ದಯಾನಂದ ರೈ ಮನವಳಿಕೆಯವರು ಸಂದರ್ಭೋಚಿತವಾಗಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ ವರದಿ ವಾಚಿಸಿದರು. ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜರವರು “ಆಟಿಡೊಂಜಿ ಬಂಟೆರೆ ಸೇರಿಗೆ”…

Read More

ಹಳ್ಳಿಯ ಹಳೆಯ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ವಿಶ್ವದಲ್ಲಿ ಗುರುತಿಸಿಕೊಂಡಿದ್ದಾರೆ. ಕಾರಣ ಅವರು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸಿಕೊಳ್ಳುತ್ತಿದ್ದರು. ಈಗಿನ ಮಕ್ಕಳಿಗೆ ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದರೂ ಧೈರ್ಯ, ಆತ್ಮಸ್ಥೈರ್ಯ ಕಡಿಮೆಯಾಗುತ್ತಿದೆ. ನನ್ನ ಮಾತಾ ಪಿತರ ಸದ್ಗುಣದ ಭಾವದಿಂದ ತಾನು ಉನ್ನತ ಶಿಕ್ಷಣವನ್ನು ಪಡೆದೆ. ಅದಕ್ಕೆ ನನ್ನ ತಾಯಿ ಕಾರಣ. ಹಳ್ಳಿಯ ಜೀವನದಲ್ಲಿ ಉನ್ನತ ಶಿಕ್ಷಣ ನೀಡುವುದು ಬಹಳಷ್ಟು ಕಷ್ಟಕರ. ಆದರೆ ನನಗೆ ಮುಂಬಯಿ ಮತ್ತು ಊರಿನ ಬಂಟರ ಸಂಘಗಳು ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಿದ ಕಾರಣ ನನ್ನ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿಲ್ಲ. ನಾನಿಂದು ಉನ್ನತ ಮಟ್ಟದಲ್ಲಿ ಉದ್ಯಮವನ್ನು ಕಟ್ಟಿಕೊಂಡು ರಾಜ್ಯ ದೇಶದ ಪ್ರಶಸ್ತಿಗಳು ನನಗೆ ಲಭಿಸಿದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಸಮಾಜ ನನಗೆ ನೀಡುತ್ತಿರುವ ಗೌರವ, ಸನ್ಮಾನಗಳು ಎಲ್ಲಾ ಪ್ರಶಸ್ತಿಗಿಂತಲೂ ಉನ್ನತ ಮಟ್ಟದಲ್ಲಿದೆ. ನಾನಿಂದು ಬಂಟರ ಸಂಘಗಳಿಗೆ, ದೇವಸ್ಥಾನಗಳಿಗೆ, ಶಿಕ್ಷಣಕ್ಕೆ ಎಲ್ಲಾ ರೀತಿಯಲ್ಲಿ ಆದಾಯದ ಪಾಲನ್ನು ಸಮಾಜಕ್ಕೆ ನೀಡುತ್ತಾ ಬಂದಿದ್ದೇನೆ ಎಂದು ಬಾಂಬೆ ಬಂಟ್ಸ್ ಅಸೋಸಿಯೇಷನ್ ನ…

Read More

ಯುವ ಬಂಟರ ಸಂಘ (ರಿ) ಕಂಬಳಕಟ್ಟ ಕೊಡವೂರು ಆಯೋಜಿಸಿದ್ದ “ಆಟಿ ಒಂಜಿ ನೆಂಪು – ವನಸ್ ತಿನಸ್ ಪಿರಾಕುದ ಗೊಬ್ಬುಲು ಕಾರ್ಯಕ್ರಮವು ಆಗಸ್ಟ್ 11 ರಂದು ರವಿವಾರ ಕಂಬಳಕಟ್ಟ ಕಂಬಳಮನೆ ಹಾಗೂ ತೆಂಕುಮನೆ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಇವರು ಗಿಡ ನೆಡುವುದರ ಮುಖೇನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಕೃತೀಯ ವಸ್ತುಗಳೆಲ್ಲವೂ ಉಪಯೋಗಕ್ಕೆ ಬಾರದೇ ಇರದು. ಪ್ರಕೃತಿಯಲ್ಲಿ ದೊರೆಯುವ ವಸ್ತುಗಳ ಔಷಧೀಯ ಗುಣಗಳನ್ನು ನಾವು ತಿಳಿಯುವುದೇ ಈ ಆಟಿ ತಿಂಗಳಿನ ಆಹಾರ ಪದ್ಧತಿಯಿಂದ. ಆದರೇ ನಮ್ಮ ಈಗಿನ ಪ್ರಕೃತಿ ಬಗೆಗಿನ ನಿರ್ಲಕ್ಷ್ಯವೇ ಈಗ ನಡೆಯುತ್ತಿರುವ ಹಲವು ಪ್ರಕೃತಿ ವಿಕೋಪಗಳಿಗೆ ಕಾರಣ ಎಂದರು. ಇನ್ನೋರ್ವ ಮುಖ್ಯ ಅತಿಥಿ ಡಾ| ಕೆ.ಆರ್. ಶೆಟ್ಟಿ ತುಳು ಅಧ್ಯಯನ ಕೇಂದ್ರ ನಿಟ್ಟೆ ಪರಿಗಣಿತ ವಿಶ್ವ ವಿದ್ಯಾನಿಲಯ ಇದರ ಪ್ರಭಾರ ಮುಖ್ಯಸ್ಥರಾದ ಡಾ| ಸಾಯಿ ಗೀತಾ ಅವರು, ತುಳು ಸಂಸ್ಕೃತಿ…

Read More