Author: admin
ಬಂಟ ಸಮಾಜದವರು ಮುಂದುವರಿದಿದ್ದಾರೆ ಎನ್ನುವುದು ತಪ್ಪು. ಬಂಟರಲ್ಲಿ ಅರ್ಧಾಂಶದಷ್ಟು ಬಡವರಿದ್ದಾರೆ. ಎಲ್ಲಾ ಬಂಟರ ಸಂಘಗಳು ಶ್ರೀಮಂತವಾಗಿದ್ದು ಬಡವರಿಗೆ, ಆರ್ಥಿಕ ಶೈಕ್ಷಣಿಕವಾಗಿ ನೆರವಾಗಲು ಸರ್ವೆ ನಡೆಸಬೇಕು. ಸಂಘಗಳು ನೀಡುವ ಸಹಾಯ ದುರುಪಯೋಗವಾಗದಂತೆ ಎಚ್ಚರಿಕೆಯೂ ಅಗತ್ಯ ಎಂದು ಬೆಂಗಳೂರಿನ ಡಿವೈಎಸ್ಪಿ ದಿನಕರ ಶೆಟ್ಟಿ ಪಡ್ರೆ ಅಭಿಪ್ರಾಯಪಟ್ಟರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘದ 25ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ವಿತರಣೆ, ವಿದ್ಯಾರ್ಥಿವೇತನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು. ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಸಿಎಂಡಿ ಡಾ| ಕನ್ಯಾನ ಸದಾಶಿವ ಶೆಟ್ಟಿ, ಪೂಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿದರು. ಡಾ| ಕನ್ಯಾನ ಸದಾಶಿವ ಶೆಟ್ಟಿ, ದಿನಕರ ಶೆಟ್ಟಿ ಪಡ್ರೆ, ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ…
ಶುಭಾ ಶೆಟ್ಟಿ ಪ್ರೊಡಕ್ಷನ್ ಲಾಂಛನದಡಿಯಲ್ಲಿ ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ನಿರ್ಮಾಣದಲ್ಲಿ ಶೋಧನ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ತರವಾಡ್’ ತುಳು ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ಮಂದಿರದಲ್ಲಿ ನಡೆಯಿತು. ಸಮಾರಂಭವನ್ನು ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್ ಬೈಲ್ ಮತ್ತು ಪ್ರಕಾಶ್ ಪಾಂಡೇಶ್ವರ್ ಉದ್ಘಾಟಿಸಿದರು. ತುಳುವಿನಲ್ಲಿ ವಿಭಿನ್ನ ಕತೆಯನ್ನು ಒಳಗೊಂಡ ತರವಾಡ್ ಸಿನಿಮಾಕ್ಕೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದರು. ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳುವಿನಲ್ಲಿ ತೆರೆ ಕಾಣುವ ಎಲ್ಲಾ ಸಿನಿಮಾಗಳಿಗೂ ಪ್ರೇಕ್ಷಕರ ಪ್ರೋತ್ಸಾಹ ಇರಲಿ ಎಂದರು. ಸಮಾರಂಭದಲ್ಲಿ ಸಂತೋಷ್ ಶೆಟ್ಟಿ ಪಲ್ಲವಿ, ಗೋಪಿನಾಥ ಭಟ್, ಬಿಕೆ ಶೆಟ್ಟಿ, ಮಿಥುನ್ ಹೆಗ್ಡೆ, ನವೀನ್ ಚಂದ್ರ ಜೆ ಶೆಟ್ಟಿ, ಸಂಜಯ್ ಶೆಟ್ಟಿ, ವಿಠಲ್ ಶೆಟ್ಟಿ ಕನಕಪಾಡಿ, ಗುರು ಶೆಟ್ಟಿ, ಪ್ರಸನ್ನ ಶೆಟ್ಟಿ, ಅನಿಲ್ ರಾಜ್ ಉಪ್ಪಲ, ನಿತಿನ್ ರೈ ಕುಕ್ಕುವಳ್ಳಿ, ಭರತ್ ಶೆಟ್ಟಿ, ದೇವರಾಜ ಶೆಟ್ಟಿ, ಪಿಬಿ ಹೆಗ್ಡೆ, ಶ್ರೀನಾಥ್ ಹೆಗ್ಡೆ, ನವೀನ್…
ಆಗಸ್ಟ್ 10 ರಂದು ಕಾರ್ಕಳ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಕಳ ಹೆಬ್ರಿ ತಾಲೂಕು ಬಂಟರ ಸಂಘ, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ಹಾಗೂ ಕಾರ್ಕಳ ಯುವ ಬಂಟರ ಸಂಘದ ವತಿಯಿಂದ ನಡೆಯಲಿರುವ ಆಟಿಡೊಂಜಿ ಕೆಸರ್ದ ಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜುಲೈ 01 ರಂದು ಕಾರ್ಕಳ ತಾಲೂಕು ಸಂಚಾಲಕರಾದ ವಿಜಯ ಶೆಟ್ಟಿಯವರು ಬಿಡುಗಡೆಗೊಳಿಸಿದರು. ಸನ್ಮಾನ, ಕ್ರೀಡೆಗಳು ಮತ್ತು ಪ್ರತಿಭಾ ಪುರಸ್ಕಾರ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಂಟ ಸಮಾಜಕ್ಕೆ ಮಾತ್ರ ಸೀಮಿತವಾಗಿದ್ದು, ಈ ಕಾರ್ಯಕ್ರಮದಲ್ಲಿ ಕಾರ್ಕಳ ಬಂಟ ಮಹಿಳಾ ತ್ರೋಬಾಲ್ ತರಬೇತುದಾರ ನವೀನ್ ಚಂದ್ರ ನಾಯಕ್ ಅವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಹೆಗ್ಡೆ, ಯುವ ಬಂಟರ ಸಂಘದ ಅಧ್ಯಕ್ಷ ಅವಿನಾಶ್ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಣಂಜಾರು ಗ್ರಾಮದ ಮಡಿಬೆಟ್ಟು ಅನುದಾನಿತ ಶಾಲಾ ಮಕ್ಕಳಿಗೆ ಉಚಿತವಾಗಿ ಮೈತ್ರಿ ಸೇವಾ ಸಂಘದ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಪೆಲತ್ತೂರು ಫ್ರೆಂಡ್ಸ್ ವತಿಯಿಂದ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶ್ರೀಯುತ ಶಿವಪ್ರಸಾದ್ ಹೆಗ್ಡೆ, ಟ್ರಸ್ಟಿನ ಸದಸ್ಯರಾದ ವಿಕ್ರಂ ಹೆಗ್ಡೆ, ಶಶಿಧರ ಶೆಟ್ಟಿ ಕೆಂಜೂರು, ಹರಿದಾಸ ಹೆಗ್ಡೆ, ಶಾಲಾ ಸಂಚಾಲಕರಾದ ಸಿ.ಎ. ಚಂದನ್ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್ ಪ್ರಭು, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಯುತ ಸುಧೀರ್ ಹೆಗ್ಡೆ, ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷ ಸುರೇಶ್ ಶೆಟ್ಟಿ, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಸ್ಥೆಯ ಟ್ರಸ್ಟಿಯವರಾದ ವಿಕ್ರಂ ಹೆಗ್ಡೆಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೈತ್ರಿ ಸೇವಾ ಸಂಘ ಹಾಗೂ ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು ಸಂಸ್ಥೆಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ…
ಅರಬ್ ಸಂಯುಕ್ತ ಸಂಸ್ಥಾನ ಯಕ್ಷಗಾನ ಅಭ್ಯಾಸ ಕೇಂದ್ರ ಯು.ಎ.ಇ., ಯು.ಎ.ಇ.ಯ ಸರ್ವಪ್ರಥಮ ಮತ್ತು ಏಕೈಕ ಸಮಗ್ರ ಯಕ್ಷಗಾನ ಅಭ್ಯಾಸ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ೨೦೧೫ ರಲ್ಲಿ ದುಬಾಯಿಯಲ್ಲಿ ಪ್ರಾರಂಭವಾಗಿರುವ ಈ ಸಂಸ್ಥೆಯ ದಶಮಾನೋತ್ಸವ – ೨೦೨೫ ಸಂಭ್ರಮ ಇಂಡಿಯನ್ ಹೈಸ್ಕೂಲ್ ಶೇಖ್ ರಾಶೀದ್ ಆಡಿಟೋರಿಯಂ ದುಬಾಯಿಯಲ್ಲಿ ನಡೆಯಿತು. ಯಕ್ಷಾಗಾನ ಚೌಕಿ ಪೂಜೆ ಮಹಾ ಮಂಗಳಾರತಿ ನಂತರ ಭವ್ಯ ಮೆರವಣಿಗೆಯ ಮೂಲಕ ದಶಮಾನೋತ್ಸವ ಯಕ್ಷಗಾನದ ಭಾಗವತರು ಹಾಗೂ ಹಿಮ್ಮೇಳ ಮುಮ್ಮೇಳದ ಕಲಾವಿದರು, ಯಕ್ಷಶ್ರೀರಕ್ಷ ಪ್ರಶಸ್ತಿ ಪುರಸ್ಕöತರು ಹಾಗೂ ದಶಮಾನೋತ್ಸವದ ಹತ್ತು ಮಂದಿ ಸಾಧಕರನ್ನು ವೇದಿಕೆಗೆ ಬರಮಾಡಿ ಕೊಳ್ಳಲಾಯಿತು ಹತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಶ್ರೀ ಬಿ. ಕೆ. ಗಣೇಶ್ ರೈಯವರ ಶಿಲ್ಪಕಲೆ, ಚಿತ್ರಕಲೆ, ಲೇಖಕ ಮತ್ತು ಬರಹಗಾರರಾಗಿ, ಕಳೆದ ನಾಲ್ಕು ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಗುರುತ್ತಿಸಿ “ಕಲಾಮಾಧ್ಯಮ” ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಯಕ್ಷಧ್ರುವ ಫೌಂಡೆಶನ್ ಅಧ್ಯಕ್ಷರು ಶ್ರೀ…
‘ವೈದ್ಯೋ ನಾರಾಯಣೊ ಹರಿಃ’ ಎಂಬ ಮಾತೊಂದಿದೆ. ವೈದ್ಯರಾದವನು ದೇವರಿಗೆ ಸಮಾನರಾದವರು. ರೋಗಿಯು ತನ್ನ ಅಂತರಂಗವನ್ನು ಬಿಚ್ಚಿಡುವುದು ವೈದ್ಯನ ಮುಂದೆ ಮಾತ್ರ. ಇಂದು ವೈದ್ಯರಾದ ಡಾ. ಎ.ಎ ಶೆಟ್ಟಿ ಎಂದೇ ಖ್ಯಾತರಾದ ಅಸೋಡು ಅನಂತರಾಮ ಶೆಟ್ಟಿಯವರನ್ನು ಪರಿಚಯಿಸುತ್ತಿದ್ದೇನೆ. ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಅಸೋಡು ಎಂಬ ಗ್ರಾಮ ಪರಿಸರದಲ್ಲಿ ಹುಟ್ಟಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಮುಗಿಸಿ, ಕೇವಲ ಒಂದು ಸಾವಿರ ರೂಪಾಯಿ ಹಿಡಿದುಕೊಂಡು ಲಂಡನ್ ಗೆ ಹೋದ ಇವರು ಇಂದು ಪ್ರಪಂಚದ ಟಾಪ್ 10 ವೈದ್ಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಹೆಮ್ಮೆಯ ಬಂಟ. ಅಸೋಡು ಅನಂತರಾಮ ಶೆಟ್ಟಿ ಅವರ ಬಗ್ಗೆ ಅನೇಕ ಕಡೆಗಳಲ್ಲಿ, ಜಾಲತಾಣಗಳಲ್ಲಿ, ಸಮೂಹ ಮಾಧ್ಯಮಗಳಲ್ಲಿ, ಹುಟ್ಟೂರಿನ ಸನ್ಮಾನದಲ್ಲಿ ನೋಡಿ ಒಮ್ಮೆ ಅವರನ್ನು ಭೇಟಿ ಆಗಬೇಕೆಂಬ ಆಸೆ ಆಗಿತ್ತು. ವಿಸ್ಮಯವೇ ಎಂಬಂತೆ ಅಂದು ಹಾಲಾಡಿಯ ಯುವ ಮೆರಿಡಿಯನ್ ಸಭಾಭವನದ ರೆಸಾರ್ಟ್ ನಲ್ಲಿ ಅವರನ್ನು ಭೇಟಿಯಾಗಲು ಹೋದಾಗ ನನ್ನನ್ನು ಕರೆದು ಅತ್ಯಂತ ಆತ್ಮೀಯವಾಗಿ ಮಾತನಾಡಿಸಿದರು. ಅಂದು ಅವರೊಂದಿಗೆ ಮಾತನಾಡಿ ಅವರಿಗೆ ನಮಸ್ಕರಿಸಿದ ಆ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ 2025- 26 ನೇ ಸಾಲಿನ ಯಕ್ಷಗಾನ ತರಗತಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ ಇಲ್ಲಿ ರವಿವಾರ ಆರಂಭಗೊಂಡಿತು. ತರಗತಿಯನ್ನು ಪಟ್ಲ ಫೌಂಡೇಶನ್ ಎಕ್ಕಾರ್ ಘಟಕದ ಗೌರವಾಧ್ಯಕ್ಷರಾದ ರತ್ನಾಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಪುಟ್ಟಸ್ವಾಮಿ ಸಭೆಯನ್ನುದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ್, ಎಕ್ಕಾರು ಘಟಕದ ಕಾರ್ಯದರ್ಶಿ ಸತೀಶ್ ಶೆಟ್ಟಿ, ಯಕ್ಷಗಾನ ಶಿಕ್ಷಕರಾದ ವರುಣ್ ಆಚಾರ್ಯ, ಸಂಸ್ಥೆಯ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಕ್ಷರಾದ ಜಕೀಯ ಬತೂಲ್ ಯಕ್ಷಗಾನದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕ ಭೀಮಶಂಕರ ಸ್ವಾಗತಿಸಿದರು. ಅಧ್ಯಾಪಕ ಸಂಗಮೇಶ್ ವಂದಿಸಿದರು. ಉಪನ್ಯಾಸಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.
ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜುಲೈ 12 ರಂದು ಪುತ್ತೂರು ಎಂ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿರುವ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜುಲೈ 01 ರಂದು ಜರಗಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ಬಂಟರ ಭವನದ ಬಂಟರ ಚಾವಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಬಳಿಕ ಸರಳ ರೀತಿಯ ಸಭಾ ಕಾರ್ಯಕ್ರಮ ನಡೆಯಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜುಲೈ 12 ರಂದು ಜರಗಲಿರುವ ಪೆರ್ಮೆದ…
ಎಂಪಿಎಂಎಲ್ಎ ನ್ಯೂಸ್ ವತಿಯಿಂದ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00 ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್ಹಾಲ್) ದಲ್ಲಿ ನಡೆಯಿತು. ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು, ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಸೌಹಾರ್ದತೆಯಲ್ಲಿ ಕೊರತೆಯಿದೆ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜ ಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ…
೨೦೨೪-೨೫ರ ಸಾಲಿನಲ್ಲಿ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆ ಹೊಂದಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಹೆಮ್ಮೆಯ ಸಂಸ್ಥೆಯಾಗಿದೆ. ಅಷ್ಟೇ ಅಲ್ಲದೇ ೨೦೨೫ರ ಸಾಲಿನ ಸಿಎಸ್ ಪರೀಕ್ಷೆಯಲ್ಲಿಯೂ ನಿರೀಕ್ಷೆಗೂ ಮೀರಿ ತೇರ್ಗಡೆಯ ಫಲಿತಾಂಶ ಪಡೆದು, ಇಡೀ ಉಡುಪಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂಕ ಪಡೆದಿದ್ದು ನಮ್ಮ ಎಕ್ಸಲೆಂಟ್ ಸಂಸ್ಥೆ ಆಗಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಎಲ್ಲಾ ಅತ್ಯುತ್ತಮ ಸಾಧನೆ ಮಾಡಲು ಸಿಎ, ಸಿಎಸ್ & ಸಿಎಮ್ಎ ಫೌಂಡೇಶನ್ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಸತತವಾಗಿ ತರಬೇತಿಯನ್ನು ನೀಡುತ್ತಾ ಬಂದಿರುವುದರಿ0ದ ಸಾಧ್ಯವಾಗಿದೆ. ದಿನಾಂಕ: ೩೦-೬-೨೦೨೫ರಂದು ಎಕ್ಸಲೆಂಟ್ ಸಂಸ್ಥೆಯ ಆವರಣದಲ್ಲಿ ಸಿಎ, ಸಿಎಸ್ & ಸಿಎಮ್ಎ ಫೌಂಡೇಶನ್ ತರಗತಿಯ ಉದ್ಘಾಟನೆಯನ್ನು ಪ್ರಖ್ಯಾತ ತರಬೇತುದಾರರಾದ ನಾಗೇಂದ್ರ ಭಕ್ತ ಅವರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಲಾಯಿತು. ಈ ಸುಸಂದರ್ಭ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಶ್ರೀಯುತರು, ವಿದ್ಯಾರ್ಥಿಗಳ ಕಲಿಕೆಯ ತವಕ ಮತ್ತು ಸಂಸ್ಕಾರದ ಬಗ್ಗೆ ತಿಳಿಸಿ, ಸಿಎ, ಸಿಎಸ್, ಸಿಎಮ್ಎ ಫೌಂಡೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಮಗ್ರವಾಗಿ…















