Author: admin
ಚಿಣ್ಣರ ಬಿಂಬ ಚಾರಿಟೇಬಲ್ ಟ್ರಸ್ಟ್ : ಕನ್ನಡದ ಜೊತೆ ಸಂಸ್ಕೃತಿ ಸಂಸ್ಕಾರ ಕಲಿಕೆಯ 2025 -26 ರ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿಣ್ಣರಬಿಂಬ ಸಂಸ್ಥೆಯು ಮಹಾರಾಷ್ಟ್ರದ ಮರಾಠಿ ಮಣ್ಣಿನಲ್ಲಿ ಕನ್ನಡದ ಕಲರವವನ್ನು ಮಾಡುತ್ತಾ, ಚಿಣ್ಣರ ಮುಖೇನ ಕನ್ನಡದ ತೇರನ್ನು ಎಳೆಯುವುದರ ಜೊತೆಗೆ ಅದರ ಕಂಪನ್ನು ಎಲ್ಲೆಡೆ ಪಸರಿಸುತ್ತಿರುವ ಕೆಲಸವನ್ನು ಮಾಡುತ್ತಿದೆ. ಇದು ತುಳು ಕನ್ನಡಿಗರಾದ ನಮಗೆಲ್ಲಾ ಹೆಮ್ಮೆಯ ವಿಷಯ. ಚಿಣ್ಣರಬಿಂಬ ಚಿಣ್ಣರಿಗೆ ಸಂಸ್ಕೃತಿ ಸಂಸ್ಕಾರವನ್ನು ಕಲಿಸುವ ಒಂದು ವಿದ್ಯಾಲಯ ಎಂದರೂ ತಪ್ಪಾಗಲಾರದು. ಮಕ್ಕಳಿಗೆ ನಾಡು, ನುಡಿ, ಸಂಪ್ರದಾಯದ ಜೊತೆಗೆ ಗುರು ಹಿರಿಯರಿಗೆ ಗೌರವ, ಭ್ರಾತೃತ್ವದ ಭಾವ, ಶಿಸ್ತು, ಸಮಯ ಪರಿಪಾಲನೆ, ರಾಷ್ಟ್ರಪ್ರೇಮ, ಧಾರ್ಮಿಕತೆ, ಆಧ್ಯಾತ್ಮಿಕತೆಯ ಅರಿವು, ಹಬ್ಬ ಹರಿದಿನಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸುವುದು ಈ ಸಂಸ್ಥೆಯ ವೈಶಿಷ್ಟ್ಯತೆಯಾಗಿದೆ. ಇಲ್ಲಿ ಯಾವುದೇ ಜಾತಿ, ಧರ್ಮಗಳ ಭೇದವಿಲ್ಲ. ಸುಮಾರು 6 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಮುಕ್ತ ವಾತಾವರಣದಲ್ಲಿ ಬೆಳೆಯುವ ನೆಮ್ಮದಿಯ ತಾಣವೆಂದರೂ ಅತಿಶಯೋಕ್ತಿಯಾಗಲಾರದು. ಸುಮಾರು 23 ವರ್ಷಗಳ ಮೊದಲು ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿರುವ ತುಳು ಕನ್ನಡಿಗರ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವ ಆ ಸಮಯದಲ್ಲಿ ಮಕ್ಕಳ ಹಿತಾಸಕ್ತಿಯ ಬಗ್ಗೆ ಯೋಚನೆಯನ್ನು ಮಾಡುತ್ತಾ ಅವರ ಭವಿಷ್ಯದ…
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ (ಎನ್ಜಿಒ) ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಎಂ ಶೆಟ್ಟಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಒತ್ತಾಯಿಸಿ ಮನವಿ ಪತ್ರವನ್ನು ಮಂಗಳೂರು ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್ವಿ ಐಎಎಸ್ ಮತ್ತು ಪೊಲೀಸ್ ಆಯುಕ್ತ ಶ್ರೀ ಸುಧೀರ್ ಕುಮಾರ್ ರೆಡ್ಡಿ ಐಪಿಎಸ್ ಅವರಿಗೆ ಸಲ್ಲಿಸಿದರು.ಸಮಿತಿಯ ರಾಜ್ಯ ಸಂಯೋಜಕ ಶ್ರೀ ಜಗದೀಶ್ ಅಧಿಕಾರಿ ಕೆ ಪಿ ಮತ್ತು ಉಪಾಧ್ಯಕ್ಷ ಶ್ರೀ ಅರುಣ್ ಪ್ರಕಾಶ್ ಶೆಟ್ಟಿ ಮತ್ತು ಸದಸ್ಯ ಶ್ರೀ ಶಕೀಬ್ ಈ ಸಂದರ್ಭದಲ್ಲಿ ಹಾಜರಿದ್ದರು.
ಸಮಾಜದ ಸರ್ವ ವರ್ಗ ಗೌರವಿಸುವ ವೃತ್ತಿ ಅದು ಶಿಕ್ಷಕ ವೃತ್ತಿ. ಕಾರಣ ಒಂದು ಆರೋಗ್ಯವಂತ ಸಮಾಜ ತನ್ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಬಹುದೊಡ್ಡ ಪಾತ್ರ ಉತ್ತಮ ಶಿಕ್ಷಕರದ್ದು. ಇಂದಿನ ಮಕ್ಕಳು ನಾಳಿನ ಜನಾಂಗ ಅವರನ್ನು ಯೋಗ್ಯ ನಾಗರೀಕರನ್ನಾಗಿ ರಾಷ್ಟ್ರದ ಯೋಗ್ಯ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಶಿಕ್ಷಕರಿಗಿದೆ. ಹೀಗೆ ತನ್ನ ವೃತ್ತಿ ಗೌರವ ಹಾಗೂ ಸಾಮಾಜಿಕ ಹೊಣೆಗಳನ್ನು ಅರ್ಥ ಮಾಡಿಕೊಂಡು ತನ್ನ ಜೀವನದ ಮೂರೂವರೆ ದಶಕಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ಸಾರ್ಥಕ ಸೇವೆ ಸಲ್ಲಿಸಿ, ನಿವೃತ್ತರಾದ ಮೇಲೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡು ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಹಾಗೂ ರಾಜ್ಯಸ್ತರದ ಪ್ರಶಸ್ತಿಗಳಿಗೆ ಭಾಜನರಾದ ಅಪರೂಪದ ನಿವೃತ್ತ ಶಿಕ್ಷಕ ಕೆ. ರವೀಂದ್ರ ರೈಯವರು ಪ್ರತಿಷ್ಠಿತ ಉಳ್ಳಾಲ ವಲಯ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ. ಸಾಹಿತಿಯಾಗಿ, ಸಂಘಟಕರಾಗಿ, ಕಾರ್ಯಕ್ರಮ ಸಂಯೋಜಕರಾಗಿ, ನಿರ್ವಾಹಕರಾಗಿ, ಕೃಷಿಕರಾಗಿ ಬಹುಮುಖಿ ಸಾಧನೆಯ ಮುಖಾಂತರ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ ಹರೇಕಳದ ರಾಮಕೃಷ್ಣ ಫ್ರೌಢ ಶಾಲೆಯ…
ಯಕ್ಷ ಶಿಕ್ಷಣವು ವಿದ್ಯಾರ್ಥಿಗಳಿಗೆ ಮೊಳಕೆಯಿಂದಲೇ ಲಭ್ಯವಾದರೆ ಅದು ಹೆಮ್ಮರವಾಗಿ ಬಹುಕಾಲ ಉಳಿಯುತ್ತದೆ. ಲಕ್ಷಾಂತರ ಜನರು ಯಕ್ಷಗಾನ ಕಲೆಯ ಅಭಿಮಾನಿಗಳು ಅದರ ಸೇವೆಯ ಆರಾಧಕರು ಯಕ್ಷಗಾನದಲ್ಲಿ ಅರ್ಥಗಾರಿಕೆ ಮಾತುಗಾರಿಕೆ ಮೊದಲಾದ ನೀತಿ ನಿಯಮಗಳಿವೆ. ಶಿಕ್ಷಣ ರಂಗದಲ್ಲಿ ನೀಡುವ ಶಿಸ್ತಿನ ಜೊತೆಗೆ ಯಕ್ಷಗಾನವು ದೈಹಿಕ ವ್ಯಾಯಾಮವನ್ನು ಹೆಚ್ಚಿಸುತ್ತದೆ. ಇದರಿಂದ ಕಲಿಕೆಯಲ್ಲಿ ಏಕಾಗ್ರತೆ ಶಿಸ್ತು ಸ್ಮರಣೆ ಹೆಚ್ಚಾಗುತ್ತದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಇದರ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡುತ್ತಾ ಅನೇಕ ಕಲಾವಿದರು, ಶಿಕ್ಷಣ ಸಂಸ್ಥೆಗಳು ಇದರಿಂದ ಸಹಾಯವನ್ನು ಪಡೆದುಕೊಂಡು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಆದ್ದರಿಂದ ‘ಯಕ್ಷ ಶಿಕ್ಷಣ’ ವಿದ್ಯಾರ್ಥಿಗಳಿಗೆ ಬಹು ಅಗತ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಕಟೀಲು ಎಕ್ಕಾರು ಘಟಕದ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು ಹೇಳಿದರು. ಯಕ್ಷಗಾನ ಜ್ಞಾನ ವೃದ್ಧಿಸುವ ಕಲೆಯಾಗಿ, ಸಾಂಸ್ಕೃತಿಕ ಸಾಂಪ್ರದಾಯಿಕ ಪರಂಪರೆಯಾಗಿ, ಬದುಕಿಗೆ ವೃತ್ತಿ ಮತ್ತು ಪ್ರವೃತ್ತಿಯ ಶಕ್ತಿಯಾಗಿ, ನಮ್ಮ ಇರುವಿಕೆಯ ಬದುಕಿನ ತೇಜಸ್ಸನ್ನು ಹೆಚ್ಚಿಸಲು ಸಹಕಾರಿ. ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯ ಬೆಳೆಸುವ ಕಲೆಯಾಗಿ…
ಮೂಡುಬಿದಿರೆ ಲಯನ್ಸ್ ಕ್ಲಬ್ ಪದಗ್ರಹಣ ಕಾರ್ಯಕ್ರಮವು ಜುಲೈ 02 ರಂದು ಹೋಟೆಲ್ ಪಂಚರತ್ನ ಇಂಟರ್ನ್ಯಾಷನಲ್ ನಲ್ಲಿ ನೆರವೇರಿತು. ಪದಗ್ರಹಣ ಅಧಿಕಾರಿಯಾಗಿ ಪೂರ್ವ ರಾಜ್ಯಪಾಲರಾದ ಲಯನ್ ವಸಂತ್ ಕುಮಾರ್ ಶೆಟ್ಟಿಯವರು ಭಾಗವಹಿಸಿದ್ದರು. 2025 – 26 ರ ಸುವರ್ಣ ಮಹೋತ್ಸವದ ಅವಧಿಗೆ ಅಧ್ಯಕ್ಷರಾಗಿ ಶಿವಪ್ರಸಾದ್ ಹೆಗ್ಡೆ ಕಣಂಜಾರು ಅಧಿಕಾರವನ್ನು ಸ್ವೀಕರಿಸಿದರು. ಕಾರ್ಯದರ್ಶಿಗಳಾಗಿ ಲಯನ್ ಓಸ್ವಾಲ್ಡ್ ಡಿಕೋಸ್ಟ, ಕೋಶಾಧಿಕಾರಿಗಳಾಗಿ ಲಯನ್ ಹರೀಶ್ ತಂತ್ರಿ, ಲಿಯೋ ಕ್ಲಬ್ಬಿನ ಅಧ್ಯಕ್ಷರಾಗಿ ಪ್ರಖ್ಯಾತ್ ಹೆಗ್ಡೆ, ಕಾರ್ಯದರ್ಶಿಗಳಾಗಿ ಸ್ವಯಂ ಎಸ್ ಪೂಜಾರಿ, ಕೋಶಾಧಿಕಾರಿಗಳಾಗಿ ಶಶಾಂಕ್ ಅಧಿಕಾರವನ್ನು ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಬೋನವೆಂಚರ್ ಮೆನೇಜಸ್, ಪ್ರಾಂತ್ಯಾಧ್ಯಕ್ಷರಾದ ಲಯನ್ ಜಗದೀಶ್ಚಂದ್ರ ಡಿ.ಕೆ, ವಲಯಾಧ್ಯಕ್ಷರಾದ ಲಯನ್ ಜೋಸ್ಸಿ ಮೆನೇಜಸ್, ಲಯನ್ ಮೇಲ್ವಿನ್ ಸಲ್ದಾನ್ಹ, ಮಾಜಿ ಕಾರ್ಯದರ್ಶಿಗಳಾದ ವಿನೋದ್ ಡೇಸಾ ಕೋಶಾಧಿಕಾರಿಗಳಾದ ಪ್ರಶಾಂತ್ ಶೆಟ್ಟಿ, ಪ್ರಾಂತ್ಯದ ಎಲ್ಲಾ ಎಂಟು ಕ್ಲಬ್ ಗಳ ಅಧ್ಯಕ್ಷರುಗಳು ಹಾಗೂ ಕ್ಲಬ್ಬಿನ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಇಲ್ಲಿನ ಪಿಯುಸಿ ಮತ್ತು ಹತ್ತನೇ ತರಗತಿಯಲ್ಲಿ 90 ಶೇಕಡಕ್ಕಿಂತ ಅಧಿಕ ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವರವರು ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಎಂದೂ ಕೀಳರಿಮೆ ಇರಬಾರದು. ಪ್ರತಿಭೆಗಳಿರುವುದು ಹಳ್ಳಿಗಳಲ್ಲಿಯೇ. ಸಮಾಜದಲ್ಲಿ ಸವಾಲನ್ನು ಎದುರಿಸಬಲ್ಲವರು ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು. ಮಕ್ಕಳ ಭವಿಷ್ಯದ ಬಗ್ಗೆ ಸದಾ ಚಿಂತಿಸುತ್ತಿರುವ, ಶ್ರಮಪಡುತ್ತಿರುವ ಹೆತ್ತವರನ್ನು ಎಂದೂ ನಿರಾಶೆಗೊಳಿಸದಿರಿ ಎಂದರು. ಮುಖ್ಯ ಅತಿಥಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ನೆಲ್ಲಿ ಇಲ್ಲಿಯ ಮೊಕ್ತೇಸರರಾದ ಸುನಿಲ್ ಕೆ ಆರ್ ರಾಷ್ಟ್ರೀಯತೆ ಮತ್ತು ಸಂಸ್ಕಾರವನ್ನು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಸಂದೀಪ್ ಕುಡ್ವ, ನ್ಯಾಯವಾದಿಗಳಾದ ನಂದಿನಿ ಶೆಟ್ಟಿ ಹಾಗೂ…
ಇತ್ತೆಡ್ದ್ ಐವ ಐವತ್ತೈನ್ ವರ್ಸ ದುಂಬು, ನಮ್ಮ ಊರೆಂಚ ಇತ್ತುಂಡ್? ಅರಿಕ್ ಮುಡಿಕ್ ನಲ್ಪ ರುಪಾಯಿ ಆಂಡ್, ಬಾರಿ ಚಡ್ತೆದ ಇಸಯ. ಸಾಲೆದ ಚರ್ಚಾ ಸ್ಪರ್ಧೆಡ್ ಒರ್ತಿ ಪಂಡೊಲು “ಬರುವ ವರ್ಷ ಅಕ್ಕಿಗೆ ಐವತ್ತಾದರೂ (ರುಪಾಯಿ) ಆಶ್ಚರ್ಯ ಪಡಬೇಕಾಗಿಲ್ಲ”. ಆಲ್ ಪಂಡ್ ದ್ ರಡ್ಡೇ ವರ್ಸಡ್ ಒಂಜಿ ಮುಡಿ (42 ಸೇರ್, 40 ಕಿಲ) ಕ್ ಐವ ಆಂಡ್. ಇತ್ತೆ ಐವ ವರ್ಸೊಡ್ ಬೊಕ್ಕ ಕಿಲೋಕು ಐವ ಆತ್ಂಡ್. ಆ ಕಾಲೊಡು ಪೆಟ್ರೋಲ್ ದ ಕಿರಯ ನಂಕ್ ದಾಲ ಬೂರ್ದು ಪೋತುಜಿ. ಎಚ್ಚಿನಗಲೆಡ ರಡ್ಡ್ ರಡ್ಡೇ ಕಾರ್ ಇತ್ತಿನಿ. ನೀರುಳ್ಳಿ, ಬಟಾಟೆದ ಕಿರಯ ಏರ್ಂಡಲಾ ತಗ್ಗ್ಂಡಲಾ ನಮ ಮಂಡೆ ಬೆಚ್ಚ ಮಲ್ತೊಂದು ಇತ್ತುಜ. ಬಟಾಟೆ ನಮ ಊರುಡು ಬಾರಿ ಅಪರೂಪ ಅಪಗ, ತಂಬಟೆ ಇಪ್ಪೆರೆನೇ ಇತ್ತುಜಿ. ನೀರುಳ್ಳಿಲಾ ಲೆಕ್ಕೊಡು ತಿನೊಂದು ಇತ್ತ. ಆಂಡ ಅರಿ ಪಿರಿಯ ಆಂಡಾ ಬಂಙದಗುಲು ಬದುಕುನು ಎಂಚ ಪನ್ಪಿನ ಪಾತೆರ ಕೊಡೀ ಕಡೆ. ರೆಡಿಯೋನೇ ಇತ್ತುಜಿ. ಮಂಗಳೂರು…
ಕಳೆದ ಮೇ ತಿಂಗಳಿನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಹಲವು ರ್ಯಾಂಕ್ಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳಾದ ಸಂತೋಷ ಎಂ ದ್ವಿತೀಯ ರ್ಯಾಂಕ್, ತೇಜಸ್ ತೃತೀಯ ರ್ಯಾಂಕ್, ಮೋನಿಷಾ 8 ನೇ ರ್ಯಾಂಕ್ ಹಾಗೂ ಅದೇ ವಿಭಾಗದ ಕಿರಣ್ ವಿ 9 ನೇ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಹಾಗೂ ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದ ಶ್ಲಾಘಿಸಿದೆ.
ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರಿನ ಅಧಿಕೃತ ವೆಬ್ಸೈಟ್ bansbyndoor.com ಹಾಗೂ ನೂತನ ಗ್ರಂಥಾಲಯದ ಲೋಕಾರ್ಪಣೆ ಸಮಾರಂಭವು ಜೂನ್ 29 ರಂದು ಬೈಂದೂರಿನ ಬಂಟರ ಭವನದಲ್ಲಿ ವಿಜೃಂಭಣೆಯಿಂದ ಜರಗಿತು. ಈ ಸಮಾರಂಭವನ್ನು ಮಾನ್ಯ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು. ಅವರು ಲ್ಯಾಪ್ಟಾಪ್ನಲ್ಲಿ ಬಟನ್ ಒತ್ತುವ ಮೂಲಕ ವೆಬ್ಸೈಟ್ನ್ನು ಲೋಕಾರ್ಪಣೆಗೊಳಿಸಿ, ನಂತರ ಜ್ಯೋತಿ ಬೆಳಗಿಸುವ ಮೂಲಕ ಗ್ರಂಥಾಲಯದ ಪ್ರಾರಂಭಕ್ಕೆ ಸಾಂಕೇತಿಕ ಚಾಲನೆ ನೀಡಿದರು. ಅದಷ್ಟೇ ಅಲ್ಲದೆ, ಗ್ರಂಥಾಲಯದ ಆರಂಭಿಕ ಪುಸ್ತಕ ಸಂಗ್ರಹವನ್ನೂ ಅವರು ಬಿಡುಗಡೆ ಮಾಡಿದರು. bansbyndoor.com ವೆಬ್ಸೈಟ್ ಮುಖಾಂತರ ವಿದ್ಯಾರ್ಥಿವೇತನ, ಸಾಧಕರ ಸನ್ಮಾನ ಹಾಗೂ ಸಂಘದ ವಿವಿಧ ಸಮಾಜಮುಖಿ ಯೋಜನೆಗಳ ಮಾಹಿತಿ ತಂತ್ರಜ್ಞಾನ ಪ್ರಯುಕ್ತ ಸಮಾಜದ ಸದಸ್ಯರಿಗೆ ಸುಲಭವಾಗಿ ಲಭ್ಯವಾಗಲಿದೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಈ ವೇದಿಕೆಯಿಂದ ಸಂಘದ ಕಾರ್ಯವೈಭವ ಹೆಚ್ಚಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಸಾಲ್ಗದ್ದೆ ಶಶಿಧರ್ ಶೆಟ್ಟಿ ವಹಿಸಿದ್ದರು. ಉಪಾಧ್ಯಕ್ಷರಾದ ಜಗದೀಶ್ ಶೆಟ್ಟಿ ಕುದ್ರುಕೊಡು,…
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ (ಹಳೆ) ಆವರಣದಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ. ರೆಡ್ಕ್ರಾಸ್ ದ.ಕ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ರಾಜ್ಯಪಾಲ ಹಾಗೂ ರೆಡ್ಕ್ರಾಸ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಥಾವರ್ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲು ಆಗಮಿಸುವಂತೆ ಆಹ್ವಾನಿಸಿದರು. ರೆಡ್ಕ್ರಾಸ್ ದ.ಕ ಜಿಲ್ಲಾ ಘಟಕದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ರಾಜ್ಯಪಾಲರು ಉದ್ಘಾಟನೆಗೆ ಆಗಮಿಸುವುದಾಗಿ ತಿಳಿಸಿದರು. ರೆಡ್ಕ್ರಾಸ್ ರಾಜ್ಯ ಘಟಕದ ಚೇರ್ಮನ್ ಬಸ್ರೂರು ರಾಜೀವ್ ಶೆಟ್ಟಿ ಈ ಸಂಧರ್ಭ ಉಪಸ್ಥಿತರಿದ್ದರು.















