Author: admin

ಕಾರ್ಕಳ/ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024- 25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ತಾನಿಗಳಾದ ಕಾರ್ಕಳ ಜ್ಞಾನಸುಧಾಧದ ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಕು.ಸಹನಾ ನಾಯಕ್ ಮತ್ತು ತನ್ವಿ ರಾವ್ ಇವರೊಂದಿಗೆ…

Read More

ಶತಾಯುಷಿ ಪರೀಕ ಚೆನ್ನಿಬೆಟ್ಟು ಸರಸ್ವತಿ ಸೂರಪ್ಪ ಹೆಗ್ಡೆ ಅವರಿಗೆ ಆತ್ರಾಡಿ ಪರೀಕ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನುಡಿನಮನ ಕಾರ್ಯಕ್ರಮ ನಡೆಸಲಾಯಿತು. ಕಲ್ಲಾಡಿ ಶಂಕರ ಟಿ. ಶೆಟ್ಟಿ ಓಂತಿಬೆಟ್ಟು ಅವರು, ಸರಸ್ವತಿಯವರ ಪ್ರೀತಿ, ಮಮತೆ, ಅತಿಥಿ ಸತ್ಕಾರ, ದಾನ, ಧರ್ಮ ಹಾಗೂ ಅವರ ಸದ್ಗುಣಗಳ ಬಗ್ಗೆ ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕ ಪ್ರೊ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಸರಸ್ವತಿಯವರ ಪುತ್ರ ಸರ್ವೋತ್ತಮ ಶೆಟ್ಟಿ ಅಬುಧಾಬಿ ನುಡಿನಮನ ಸಲ್ಲಿಸಿದರು. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಅಂಜಾರು ತೆಂಕಬಿಲ್ ಭಾರತಿ ಹೆಗಡೆ ಸ್ವಾಗತಿಸಿದರು.

Read More

ಇದೇ ಮೊದಲ ಬಾರಿಗೆ ಯಕ್ಷಗಾನದ ಕಥೆಯನ್ನು ಇಟ್ಟುಕೊಂಡು ‘ವೀರ ಚಂದ್ರಹಾಸ’ ಸಿನಿಮಾ ಮೂಡಿಬಂದಿದೆ. ರವಿ ಬಸ್ರೂರು ನಿರ್ದೇಶನದ ಈ ಸಿನಿಮಾದಲ್ಲಿ ನಿಜವಾದ ಯಕ್ಷಗಾನ ಕಲಾವಿದರು ನಟಿಸಿದ್ದಾರೆ. 50 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಏಪ್ರಿಲ್ 18ರಂದು ಈ ಸಿನಿಮಾ ತೆರೆಕಾಣಲಿದೆ. ಖ್ಯಾತ ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರು ಅವರು ಸಿನಿಮಾ ನಿರ್ದೇಶನದಲ್ಲೂ ಆಸಕ್ತಿ ಹೊಂದಿದ್ದಾರೆ. ಈಗ ಅವರು ‘ವೀರ ಚಂದ್ರಹಾಸ’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ದಕ್ಷಿಣ ಕನ್ನಡ ಭಾಗದ ಸಂಸ್ಕೃತಿಯ ಪ್ರತೀಕವಾದ‌ ಯಕ್ಷಗಾನ ಕಲೆಯ ಹಿರಿಮೆಯನ್ನು ಜಗತ್ತಿಗೆ ಹೇಳಲು ಈ ಸಿನಿಮಾ ಮಾಡಿದ್ದಾರೆ. ಯಕ್ಷಗಾನ ಪ್ರಸಂಗ ಆಧಾರಿತವಾಗಿ ‘ವೀರ ಚಂದ್ರಹಾಸ’ ಸಿನಿಮಾ ಮೂಡಿಬಂದಿದೆ. ಎನ್​.ಎಸ್. ರಾಜ್​ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಹೊಂಬಾಳೆ ಫಿಲಂಸ್ ಮೂಲಕ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಇತ್ತೀಚೆಗೆ ‘ವೀರ ಚಂದ್ರಹಾಸ’ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಕುಂದಾಪುರದ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ನಡೆಯಿತು. ಈ ವೇಳೆ ಯಕ್ಷಗಾನ ಕಲಾವಿದರನ್ನು ಗೌರವಿಸಲಾಯಿತು. ಈ ವೇಳೆ ರವಿ ಬಸ್ರೂರು ಅವರು…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರಿಂದ ಪ್ರೊ. ಎಂ. ಎಲ್. ಸಾಮಗರು ದಾನವಾಗಿ ನೀಡಿರುವ ನಿವೇಶನದಲ್ಲಿ ಯಕ್ಷಗಾನ ಕಲಾವಿದರಿಗೋಸ್ಕರ ನಿರ್ಮಾಣಗೊಳ್ಳಲಿರುವ ಗೃಹ ಸಮುಚ್ಚಯ “ಯಕ್ಷಧ್ರುವ ಪಟ್ಲಾಶ್ರಯ” ಇದರ ಭೂಮಿ ಪೂಜೆಯು ಏಪ್ರಿಲ್ 19 ರಂದು (ಶನಿವಾರ) ಬೆಳಗ್ಗೆ 10 ಘಂಟೆಗೆ ಶೃಂಗೇರಿ ಶ್ರೀ ಶಾರದಾ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳವರ ಅಮೃತ ಹಸ್ತದಿಂದ ಉಡುಪಿ ಕೊಡವೂರಿನ ಲಕ್ಷ್ಮೀ ನಗರ ಗರ್ಡೆಯಲ್ಲಿ ಸಂಪನ್ನಗೊಳ್ಳಲಿದೆ. ಆ ಪ್ರಯುಕ್ತ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಪಟ್ಲ ಸತೀಶ ಶೆಟ್ಟಿ, ತೋಟದಮನೆ ದಿವಾಕರ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ವಿದ್ವಾನ್ ದಾಮೋದರ ಶರ್ಮ ಬಾರ್ಕೂರು, ಭುವನಪ್ರಸಾದ ಹೆಗ್ಡೆ, ಸುಧಾಕರ ಆಚಾರ್ಯ, ಹರೀಶ ಜೋಷಿ, ತ್ರಿಲೋಚನ ಶಾಸ್ತ್ರೀ, ವಿಶ್ವನಾಥ ಶ್ಯಾನುಭಾಗ್, ಆನಂದ ಶೆಟ್ಟಿ, ರತನ್ ರಾಜ್ ರೈ, ಇಂಜಿನಿಯರ್ ನಾಗರಾಜ ಐತಾಳ್ ಹಾಗೂ ರೋಶನ್ ಉಪಸ್ಥಿತರಿದ್ದರು.

Read More

ಲಕ್ಷ್ಮಣ ಫಲವು ಸೀತಾಫಲದ ಜಾತಿಗೆ ಸೇರಿದೆ. ಮಳೆಗಾಲದಲ್ಲಿ ಲಕ್ಷ್ಮಣ ಫಲ ಹೇರಳವಾಗಿ ಬೆಳೆಯುತ್ತದೆ. ಹಣ್ಣು ದುಂಡಗೆ ಅಥವಾ ಹೃದಯದ ಆಕಾರದಲ್ಲಿದ್ದು, ದೀವಿ ಹಲಸಿನ ಗಾತ್ರದಷ್ಟಿರುತ್ತದೆ. ಮೈಮೇಲೆ ಮುಳ್ಳಿನಂಥ ರಚನೆಯನ್ನು ಹೊಂದಿದೆ. ಒಳಭಾಗ ಬಿಳಿ. ಲಕ್ಷ್ಮಣ ಫಲದ ಸೇವನೆ ಆರೋಗ್ಯಕ್ಕೆ ಉತ್ತಮ. ಇದರಲ್ಲಿ ದೇಹ ಪೋಷಣೆಗೆ ಬೇಕಾದಂತಹ ಪ್ರೊಟೀನ್‌, ವಿಟಮಿನ್‌ಗಳು ಲಭ್ಯವಿರುತ್ತವೆ. ಊಟದ ನಂತರ ಈ ಹಣ್ಣನ್ನು ತಿನ್ನುವುದರಿಂದ ಜೀರ್ಣಶಕ್ತಿ ವೃದ್ಧಿಯಾಗುವುದು. ಹಣ್ಣನ್ನು ತಿನ್ನುತ್ತಾರೆ. ಬಲಿತ ಕಾಯಿಯನ್ನು ತರಕಾರಿಯಾಗಿ ಬಳಸಬಹುದು. ಇದು ವಿಶಿಷ್ಟವಾದ, ಕೆನೆ ವಿನ್ಯಾಸ ಮತ್ತು ಉಷ್ಣವಲಯದ ಸುವಾಸನೆಗಾಗಿ ಮಾತ್ರವಲ್ಲದೆ ಅದರ ಐತಿಹಾಸಿಕ ಮತ್ತು ಸಂಭಾವ್ಯ ಆರೋಗ್ಯ ಪ್ರಯೋಜನಗಳಿಗೂ ಗಮನಾರ್ಹವಾದ ಹಣ್ಣಾಗಿದೆ. ದಕ್ಷಿಣ ಅಮೇರಿಕಾ, ಆಫ್ರಿಕಾ ಮತ್ತು ಆಗ್ನೇಯ ಏಷ್ಯಾದ ಮಳೆಕಾಡುಗಳಿಂದ ಹುಟ್ಟಿಕೊಂಡ ಈ ಹಸಿರು, ಮುಳ್ಳು ಹಣ್ಣನ್ನು ಶತಮಾನಗಳಿಂದಲೂ ಸಾಂಪ್ರದಾಯಿಕ ಔಷಧದಲ್ಲಿ ಬಳಸಲಾಗುತ್ತಿದೆ. ಇದರ ಬಳಕೆಯು ನಿದ್ರೆಗೆ ಸಹಾಯ ಮಾಡುವುದರಿಂದ ಹಿಡಿದು ಸೋಂಕುಗಳ ವಿರುದ್ಧ ಹೋರಾಡುವವರೆಗೆ ಇರುತ್ತದೆ. ⚫ ಆರೋಗ್ಯ ಉಪಯೋಗಗಳು ಲಕ್ಷ್ಮಣಫಲ ಕ್ಯಾನ್ಸರಿಗೆ ರಾಮಬಾಣವೆಂದು ಸಂಶೋಧನೆಗಳಿಂದ ದೃಢಪಟ್ಟಿದೆ. ಲಕ್ಷ್ಮಣಫಲದ…

Read More

ಕೈಯೂರು ಶ್ರೀ ಕ್ಷೇತ್ರ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಎ.ಕೆ. ಜಯರಾಮ ರೈಯವರಿಗೆ ಅಣಿಲೆ ತರವಾಡು ಕುಟುಂಬದ ವತಿಯಿಂದ ಏಪ್ರಿಲ್ 6 ರಂದು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಎ.ಕೆ. ಜಯರಾಮ ರೈಯವರು ಮಾತನಾಡಿ, ಅಣಿಲೆ ತರವಾಡು ಕುಟುಂಬ ಸಣ್ಣ ಕುಟುಂಬವಾಗಿದ್ದು, ಈ ತರವಾಡು ಕುಟುಂಬದ ಎಲ್ಲಾ ಸದಸ್ಯರು ಒಗ್ಗೂಡಿ ವಾರ್ಷಿಕ ಕಾರ್ಯಕ್ರಮದಲ್ಲಿ ಭಾಗಿಗಳಾಗುತ್ತಿರುವುದು ತುಂಬಾ ಸಂತೋಷ ತಂದಿದೆ. ಮುಂದೆ ಅಣಿಲೆ ತರವಾಡು ಕುಟುಂಬದ ವತಿಯಿಂದ ಅನೇಕ ಅಭಿವೃದ್ಧಿ ಕೆಲಸಗಳು ಆಗಲಿದ್ದು, ಎಲ್ಲರೂ ಸಹಕಾರವನ್ನು ನೀಡಬೇಕಾಗಿ ವಿನಂತಿಸಿ, ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ಸಂಧರ್ಭ ಅಣಿಲೆ ತರವಾಡು ಕುಟುಂಬದ ಯಜಮಾನ ಅಣಿಲೆ ಕರ್ಪುಡಿಕಾನ ರಾಮಕೃಷ್ಣ ರೈ, ಅಣಿಲೆ ತರವಾಡು ಧರ್ಮ ದೈವ ಸೇವಾ ಸಮಿತಿ ಟ್ರಸ್ಟ್ ನ ಕೋಶಾಧಿಕಾರಿ ಶಶಿಧರ್ ಅಣಿಲೆ, ಮಾಜಿ ಸೈನಿಕ ಅಮ್ಮಣ್ಣ ರೈ ದೇರ್ಲ, ಭಾರತಿ ರೈ, ಅಮೂಲ್ಯ ರೈ, ಪಿ.ಬಿ. ಅಮ್ಮಣ್ಣ ರೈ ಪಾಪೆಮಜಲು, ಪದ್ಮನಾಭ ಆಳ್ವ ಅಣಿಲೆ, ಎ.ಕೆ. ತಿಮ್ಮಪ್ಪ…

Read More

ವಿಜ್ಞಾನ ವಿಭಾಗ : ಆಸ್ತಿ ಎಸ್ ರಾಜ್ಯಕ್ಕೆ 4ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ವಾಣಿಜ್ಯ ವಿಭಾಗ : ಸಹನಾ ಮತ್ತು ತನ್ವಿ ರಾಜ್ಯಕ್ಕೆ 6ನೇ ಹಾಗೂ ಜಿಲ್ಲೆಗೆ 2ನೇ ಸ್ಥಾನ ಜ್ಞಾನಸುಧಾದ 722 ವಿಶಿಷ್ಟ ಶ್ರೇಣಿ ಗಣಿತನಗರ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 29 ವಿದ್ಯಾರ್ಥಿಗಳು 10ರೊಳಗಿನ ರ್ಯಾಂಕ್ ಪಡೆದಿದ್ದು, ಕಾರ್ಕಳ ಜ್ಞಾನಸುಧಾದ ವಿಜ್ಞಾನ ವಿಭಾಗದ ಆಸ್ತಿ ಎಸ್ 596 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು, ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ 595 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ಸ್ಥಾನಿಯಾಗಿ ಹಾಗೂ ಜಿಲ್ಲೆಗೆ 2ನೇ ಸ್ಥಾನವನ್ನು ಪಡೆದಿರುತ್ತಾರೆ. ಕಾರ್ಕಳ ಜ್ಞಾನಸುಧಾದ ಮಯೂರ್ ಗೌಡ, ಭಾರ್ಗವ್ ಎಚ್ ನಾಯಕ್, ವಿಷ್ಣು ಜಿ…

Read More

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ‍್ಯಾಂಕ್‌ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ. ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಹಾಗೂ ಪ್ರೇಕ್ಷಾ ಎಂ. ಎಸ್. 597 ಅಂಕಗಳೊAದಿಗೆ ತೃತೀಯ ಸ್ಥಾನ, ಪದ್ಮಾವತಿ ಮಲ್ಲೇಶಪ್ಪ 596 ಅಂಕಗಳೊAದಿಗೆ 4ನೇ ಸ್ಥಾನ, ದರ್ಶನ್ ಶೆಟ್ಟಿ 595 ಅಂಕಗಳೊAದಿಗೆ 5ನೇ ಸ್ಥಾನ, ವೈಭವ್ ಎಂ, ಚೈತನ್ಯ, ಸ್ಪಂದನ 594 ಅಂಕಗಳೊAದಿಗೆ 6ನೇ ಸ್ಥಾನ, ವರ್ಷಾ 593 ಅಂಕಗಳೊAದಿಗೆ 7ನೇ ಸ್ಥಾನ, ನೇತ್ರಾ ಪಾಲ್, ಸೃಷ್ಟಿ, ಚಿನ್ಮಯಿ, ಪ್ರಣಾಮ್ ಶೆಟ್ಟಿ, ಸುಧಾಂಶು,…

Read More

ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಾ ಪ್ರತಿಫಲಾಪೇಕ್ಷೆ ಇಲ್ಲದೇ ಕನ್ಯಾನ ಸದಾಶಿವ ಶೆಟ್ಟರ ಸಮಾಜ ಸ್ಪಂದನೆಯ ಕಲ್ಯಾಣ ಕಾರ್ಯ ಅನುಕರನೀಯವಾಗಿದೆ. ಅವರಿಗೆ ಅರ್ಹವಾಗಿಯೇ ಮಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿರುವುದರಿಂದ ಅವರ ಸಾಮಾಜಿಕ ಚಟುವಟಿಕೆ ನಿರಂತರವಾಗಿ ನಡೆಯಲಿ. ಇಂತಹ ಮಾನವೀಯ ಸಂಬಂಧದ ವ್ಯಕ್ತಿತ್ವದವರು ಸಮಾಜದಲ್ಲಿ ಹೆಚ್ಚಬೇಕು ಎಂದು ಆಧ್ಯಾತ್ಮಿಕ ವಿಶ್ವಗುರು, ಅಂತರಾಷ್ಟ್ರೀಯ ವಾಸ್ತು ತಜ್ಞರಾದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಬೆಂಗಳೂರಿನ ಆಶ್ರಮಕ್ಕೆ ಭೇಟಿ ನೀಡಿದ ಸಮಾಜ ಸೇವಕ ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಆಶೀರ್ವಾದ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನಿಂದ ಗೌರವಿಸಲ್ಪಟ್ಟಿರುವ ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಆಶ್ರಮದಿಂದ ವಿಶೇಷವಾಗಿ ಶಾಲು ಹೊದಿಸಿ, ಸ್ವರಣಿಕೆ ನೀಡಿ ಗೌರವಿಸಿದರು. ಚಿತ್ರನಟ ಹಾಗೂ ನಿರ್ಮಾಪಕ ಪಡುಬಿದ್ರಿ ಗುರುರಾಜ್ ಹೆಗ್ಡೆ, ಆಶ್ರಮದ ನಿರ್ದೇಶಕರಾದ ರಜನಿ ಸಿ. ಭಟ್, ರಾಘವ್ ಸೂರ್ಯ, ರಾಹುಲ್ ಸಿ ಭಟ್, ಆಶ್ರಮದ ಸಂಚಾಲಕ ಪುನೀತ್ ಕೃಷ್ಣ ಮತ್ತಿತರರು…

Read More

ಪುತ್ತೂರು ಹಾರಾಡಿಯ ಮೂಕಾಂಬಿಕಾ ಗ್ಯಾಸ್ ಏಜೆನ್ಸಿಸ್ ಸಂಸ್ಥೆಯ ಮಾಲಕ ಸಂಜೀವ ಆಳ್ವ ಇವರು ವಿವೇಕಾನಂದ ಕನ್ನಡ ಶಾಲೆಯ ‘ಅನ್ನಪೂರ್ಣ’ ಮಕ್ಕಳ ಮಧ್ಯಾಹ್ನದ ಬಿಸಿ ಊಟ ಯೋಜನೆಗೆ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಅಶೋಕ ಕುಂಬಳೆ, ಪ್ರೌಢ ವಿಭಾಗದ ಮುಖ್ಯ ಶಿಕ್ಷಕರಾದ ಆಶಾ ಬೆಳ್ಳಾರೆ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ನಳಿನಿ ವಾಗ್ಲೆ ಇವರು ಎರಡು ಲಕ್ಷ ರೂಪಾಯಿ ಚೆಕ್ ಅನ್ನು ಸ್ವೀಕರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಶಾಲಾ ಆಡಳಿತ ಮಂಡಳಿ, ಪೋಷಕ, ಶಿಕ್ಷಕ ಹಾಗೂ ವಿದ್ಯಾರ್ಥಿ ವೃಂದದವರ ಪರವಾಗಿ ಸಂಜೀವ ಆಳ್ವ ಹಾರಾಡಿಯವರಿಗೆ ಕೃತಜ್ಞತೆ ಅರ್ಪಿಸಿದರು

Read More