Author: admin

ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ನೂತನ ಶಾಖೆ ‘ದಿ ಬೋಟ್ ಮ್ಯಾನ್ ಹಬ್ ರೆಸ್ಟೋರೆಂಟ್ ಉದ್ಘಾಟನೆಗೊಂಡಿದೆ. ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಉದ್ಯಮಿ ಡಾ ರೋನಾಲ್ಡ್ ಕೊಲಾಸೋ, ಉದ್ಯಮಿ ಹುಸೈನ್ ಅಬ್ಬಾಸ್, ಭಾರತೀಯ ಗಾಯಕಿ ಗೋವಾದ ಖ್ಯಾತಿ ನಟಿ ರೀಟಾ ರೋಸ್ ಮಾಡಿದರು. ಯುಎಇ ಯ ತುಳು-ಕನ್ನಡ ಸಂಘಟಕ ಸರ್ವೋತ್ತಮ ಶೆಟ್ಟಿ, ಅಬುಧಾಬಿ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರಾಚಿ ಶೆಟ್ಟಿ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಯುಎಇ ಯ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಪ್ರವೀಣ್ ಕುಮಾರ್ ಶೆಟ್ಟಿಯವರ ಆತ್ಮೀಯ ಸ್ನೇಹಿತರು ಪಾಲ್ಗೊಂಡಿದ್ದರು. ಉದ್ಘಾಟನಾ ಸಮಾರಂಭಕ್ಕೆ ಮುನ್ನ ದುಬೈ ಸೇಂಟ್ ಮೇರಿ ಕ್ಯಾಥೋಲಿಕ್ ಚರ್ಚ್ ಗುರುಗಳಾದ ಫಾ. ಮೈಕೆಲ್ ಕಾರ್ಡೋಜ್ ಮತ್ತು BAPS ಹಿಂದೂ ಮಂದಿರ ಅಬುಧಾಬಿಯ ಬಹುಶ್ರುತದಾಸ್ ಜಿ ಸ್ವಾಮೀಜಿ ರೆಸ್ಟೋರೆಂಟ್ ಗೆ ಶುಭವನ್ನು ಹಾರೈಸಿದರು. ಆಡಳಿತ ನಿರ್ದೇಶಕ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅತಿಥಿ ಆಭಾಗ್ಯತರನ್ನು…

Read More

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 13ರಂದು ನಡೆಯಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ಐಆರ್‌ಸಿಎಸ್)ಯ ಕೇಂದ್ರ ಕಚೇರಿಯ ವಾರ್ಷಿಕ ಮಹಾ ಸಭೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ದ.ಕ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ. ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧ್ಯಕ್ಷರಾದ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಅಧ್ಯಕ್ಷತೆಯಲ್ಲಿ, ರೆಡ್‌ಕ್ರಾಸ್ ಕೇಂದ್ರ ಕಚೇರಿಯ ಚೇರ್ಮನ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.

Read More

ಮೂಡಬಿದ್ರಿ: ‘ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ ವಿರಾಸತ್ ಗಳಲ್ಲದೆ ಇತರ ಹಲವಾರು ರಾಜ್ಯ – ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು – ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ’ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ಜರಗಿದ ‘ಸಿರಿಪರ್ಬ – 2025’ ತುಳು ಸಾಂಸ್ಕೃತಿಕ ಉತ್ಸವದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತುಳು ತಲೆಯೆತ್ತಿ ನಿಲ್ಲಲಿ: ‘ ಶಿಕ್ಷಣ ಸಂಸ್ಥೆಗಳಲ್ಲಿ ತುಳು ಮಾತನಾಡಲು ತೀವ್ರ ವಿರೋಧವಿದ್ದ ಕಾಲವಿತ್ತು; ಆದರೆ ಈಗ ಅದು ಬದಲಾಗಿದೆ. ಪ್ರಾಥಮಿಕ ಹಂತದಿಂದ ಕಾಲೇಜಿನವರೆಗೆ…

Read More

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಎನ್‍ಸಿಆರ್‍ಟಿಇ ಪಠ್ಯಕ್ರಮದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಯೋಜಿತ ವ್ಯವಸ್ಥೆಯಲ್ಲಿ ಪರಿಣಾಮಕಾರಿ ತರಬೇತಿ ನೀಡಲಾಗುತ್ತದೆ. ಪದವಿಪೂರ್ವ ಕಾಲೇಜಿಗೆ ಪ್ರಾಂಶುಪಾಲರ ನೇತೃತ್ವವಿದ್ದು 15 ಶೈಕ್ಷಣಿಕ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತೀ ವಿಭಾಗಕ್ಕೂ ಒಬ್ಬ ಮುಖ್ಯ ವ್ಯವಸ್ಥಾಪಕರಿದ್ದು ಅವರ ಮೇಲುಸ್ತುವಾರಿಯಲ್ಲಿ 20ಕ್ಕೂ ಅಧಿಕ ಉಪನ್ಯಾಸಕರ ತಂಡ ಮತ್ತು ಪ್ರತ್ಯೇಕ ಶಿಕ್ಷಕೇತರ ತಂಡಗಳು ಕಾರ್ಯನಿರ್ವಹಿಸುತ್ತವೆ. ಪ್ರತೀ ದಿನ 1.30 ಗಂಟೆಗಳ ಡೌಟ್ ಕ್ಲಿಯರಿಂಗ್ ಸೆಶನ್‍ಗಳು ನಡೆಯುತ್ತವೆ. ಬೆಳಿಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಲಿಕಾ ಅವಧಿಯನ್ನು ಮೀಸಲಿಡಲಾಗಿದೆ. ಪದವಿಪೂರ್ವ ತರಗತಿಗಳ ಸರಿಸುಮಾರು 6 ರಿಂದ 7 ಸಾವಿರ ವಿದ್ಯಾರ್ಥಿಗಳು ಈ ಕಲಿಕಾ ಅವಧಿಗಳಲ್ಲಿ ಅಭ್ಯಾಸ ನಿರತರಾಗುತ್ತಾರೆ. ವಿದ್ಯಾರ್ಥಿಗಳ ಯೋಗಕ್ಷೇಮವನ್ನು ನೋಡಿಕೊಳ್ಳಲು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳ ತಂಡವು ಅವಿರತವಾಗಿ ಕಾರ್ಯನಿರ್ವಹಿಸುತ್ತದೆ. ಈ ವಿದ್ಯಾರ್ಥಿಕೇಂದ್ರಿತ ಶೈಕ್ಷಣಿಕ ವ್ಯವಸ್ಥೆ ವಿದ್ಯಾರ್ಥಿಗಳ ಉನ್ನತಿಗೆ ಸದಾ ಸಹಕರಿಯಾಗಿದೆ. ಇಂದು ಜನಮಾನಸದಲ್ಲಿ ಮನೆಮಾತಾಗಿರುವ ಇಂತಹ ವಿನೂತನ ಹಾಗೂ ಪರಿಣಾಮಕಾರಿ ಶೈಕ್ಷಣಿಕ ವ್ಯವಸ್ಥೆಯನ್ನು ಕರ್ನಾಟಕಕ್ಕೆ ಪರಿಚಯಿಸಿದ ಕೀರ್ತಿ ಆಳ್ವಾಸ್‍ಗೆ ಸಲ್ಲುತ್ತದೆ. ಪ್ರತಿಭಾನ್ವಿತ ಮತ್ತು ನುರಿತ…

Read More

ಪಿಂಪ್ರಿ-ಚಿಂಚ್ವಾಡ್ ಪರಿಸರದ ಹಿರಿಯ ಹೋಟೆಲ್ ಉದ್ಯಮಿ, ಸಮಾಜಸೇವಕ, ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದಲ್ಲಿ ಬಹಳಷ್ಟು ಸಕ್ರಿಯರಾಗಿದ್ದ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ರಮೇಶ್ ಡಿ ಶೆಟ್ಟಿಯವರು ಮೇ 7 ರಂದು ನಿಧನರಾದರು. ಉದ್ಯಮಿ, ಸಮಾಜ ಸೇವಕರಾದ ವಿಶ್ವನಾಥ್ ಡಿ ಶೆಟ್ಟಿಯವರ ಸಹೋದರರಾಗಿರುವ ರಮೇಶ್ ಶೆಟ್ಟಿಯವರ ನಿಧನಕ್ಕೆ ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶೋಕ ವ್ಯಕ್ತಪಡಿಸಿದ್ದಾರೆ.

Read More

ಬಹು ನಿರೀಕ್ಷೆಯ “ಗಂಟ್ ಕಲ್ವೆರ್” ತುಳು ಚಿತ್ರ ಇದೇ ಬರುವ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ‌ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿ ಹಿಡಿದ ಸುಧಾಕರ್ ಬನ್ನಂಜೆಯವರು ಕತೆ, ಚಿತ್ರಕತೆ, ಸಂಭಾಷಣೆ ಹಾಡು ಬರೆದು ನಿರ್ದೇಶನ ಮಾಡಿದ್ದಾರೆ. ತುಳು ಮೂಲದ ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ವಿ ಮನೋಹರ್ ಇದಕ್ಕೆ ಸಂಗೀತ ನೀಡಿದ್ದಾರೆ. ತುಳುನಾಡಿನ ಅಪ್ಪಟ ಪ್ರತಿಭೆ ತಮ್ಮ ಲಕ್ಷ್ಮಣ ಕಲಾ ನಿರ್ದೇಶನ, ಕೆ. ಗಿರೀಶ್ ಕುಮಾರ್ ಸಂಕಲನ, ಶಂಕರ್ ರವಿಕಿಶೋರ್ ಛಾಯಾಗ್ರಹಣ. ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ಲು ಸಹ ನಿರ್ದೇಶಕರಾಗಿ ದುಡಿದಿದ್ದಾರೆ. ಸ್ನೇಹಕೃಪಾ ಲಾಂಚನದಲ್ಲಿ ಉಪ್ಪಳ ರಾಜಾರಾಮ ಶೆಟ್ಟಿ ಅರ್ಪಿಸಿ ಗಿರೀಶ್ ಪೂಜಾರಿ ಸಹಕಾರದೊಂದಿಗೆ ಸುಧಾಕರ ಬನ್ನಂಜೆ ನಿರ್ಮಿಸಿರುವ ಈ ಚಿತ್ರದ ಇತರ ಸಹ ನಿರ್ಮಾಪಕರು ಮಮತಾ ಎಸ್…

Read More

ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಹಿರಿಯ ಸಾರಿಗೆ ಉದ್ಯಮಿ ಎ.ಕೆ ಜಯರಾಮ ಶೇಖ ಅವರು 50ನೇ ವರ್ಷದ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಪ್ರಸ್ತುತ 80 ವರ್ಷ ಪ್ರಾಯದವರಾದ ಹಿರಿಯ ಸಮಾಜ ಸೇವಕ ಎ.ಕೆ. ಜಯರಾಮ ಶೇಖರದ್ದು ಸಾರಿಗೆ ಮತ್ತು ಆಟೋಮೊಬೈಲ್ ಉದ್ಯಮದಲ್ಲಿ ದೊಡ್ಡ ಹೆಸರು. ಬಂಟ್ವಾಳ ತಾಲೂಕಿನ ಅರ್ಕುಳ ಕುಂಪನ ಮಜಲಿನಲ್ಲಿ ದಿ. ಮಿಜಾರು ಬಾಬು ಶೇಖ ಮತ್ತು ಲಕ್ಷ್ಮಿ ಅವರ ನಾಲ್ಕು ಮಕ್ಕಳಲ್ಲಿ ಮೂರನೆಯವರಾಗಿ ಜನವರಿ 15, 1944 ರಂದು ಅವರು ಜನಿಸಿದರು. ಫರಂಗಿಪೇಟೆಯ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿ ತಮ್ಮ ಸೋದರ ಮಾವ ಎ.ಕೆ. ನಾರಾಯಣ ಶೆಟ್ಟಿಯವರ ಆಶ್ರಯದಲ್ಲಿ ಬೆಳೆದರು. ಹಲವಾರು ಸಂಕಷ್ಟಗಳನ್ನು ಎದುರಿಸಿ 1962 ರಲ್ಲಿ ಬಸ್ ಕಂಡಕ್ಟರ್ ಆಗಿ ವೃತ್ತಿಜೀವನ ಆರಂಭಿಸಿದರು. ಬಳಿಕ ಕೆಲಕಾಲ ಹೋಟೆಲ್ ವ್ಯವಹಾರವನ್ನು ನಡೆಸಿದರು. ಆಟೋಮೋಟಿವ್ ಉದ್ಯಮದಲ್ಲಿ…

Read More

ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ದಿ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ ನೀಡಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಕಳ ಹೆಬ್ರಿ ವಲಯದ ಸಂಚಾಲಕರಾದ ವಿಜಯ್ ಶೆಟ್ಟಿಯವರು ತಮ್ಮ ವೈಯುಕ್ತಿಕ 1 ಲಕ್ಷ ರೂಪಾಯಿ ಸಹಾಯಧನವನ್ನು ಸುಹಾಸ್ ಹೆತ್ತವರಿಗೆ ನೀಡಿ ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಸೂರ್ಯಕಾಂತ್ ಶೆಟ್ಟಿ, ಹಿತೇಶ್ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಸುಹಾಸ್ ಶೆಟ್ಟಿ, ದೇವೇಂದ್ರ ಶೆಟ್ಟಿ, ರಾಕೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Read More

ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಭಾಗ್ಯೆಶ್ ರೈ ಸಾರಥ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ಮತ್ತು K SET) ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಸರಕಾರವು 2025ರ ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುತ್ತದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET/ K-SET) ಹಾಗೂ ಸರಕಾರಿ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯ 190ಕ್ಕೂ ಅಧಿಕ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ರಾಷ್ಟ್ರೀಯ ಮಟ್ಟದಲ್ಲಿ ಉಪನ್ಯಾಸಕರಾಗಲು ನಡೆಯಲಿರುವ ಅರ್ಹತಾ ಪರೀಕ್ಷೆಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಮತ್ತು ಪ್ರಸ್ತುತ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಕೆ ಸೆಟ್ ಪಾಸಾದರೆ…

Read More

ದಕ್ಷಿಣ ಭಾರತ ಕುಸ್ತಿ ಸಂಘದ 2025 – 29ರ ಸಾಲಿನ ಉಪಾಧ್ಯಕ್ಷರಾಗಿ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘದಲ್ಲಿ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯ ದೊರೆತಂತಾಗಿದೆ.ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಪ್ರತಿಷ್ಠಿತ ಬೆಳ್ಳಿಪಾಡಿ ಮನೆತನದವರಾಗಿರುವ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರನಾಗಿರುವ ಉದ್ಯಮಿ ಗುಣರಂಜನ್ ಶೆಟ್ಟಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿ, ನಾಲ್ಕು ವರ್ಷದ ನಂತರ ಚುನಾವಣೆ ನಡೆದಿದ್ದು ಕರ್ನಾಟಕ ಎಲ್ಲಾ ವಿಭಾಗಗಳಲ್ಲೂ ತನ್ನ ಚಾಪು ಮೂಡಿಸುತ್ತಿದೆ. ಕುಸ್ತಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ದಕ್ಷಿಣ ಭಾರತಕ್ಕೆ ಉತ್ತಮ ಪ್ರಾತಿನಿಧ್ಯ ದೊರಕಿಸಿಕೊಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

Read More