Author: admin
ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಮ್ಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿ ಜಿಲ್ಲೆಯಲ್ಲಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು ನೂರು ದಿನ ಪೂರೈಸಿದೆ. ಸಿನಿಮಾಕ್ಕೆ ಬಹುತೇಕ ಎಲ್ಲಾ ಟಾಕೀಸ್ ಗಳಲ್ಲಿ ಅಭೂತಪೂರ್ವ ಸ್ಪಂದನೆ ಸಿನಿಮಾಗೆ ಸಿಕ್ಕಿದೆ. ಈಗಾಗಲೇ ಗಲ್ಫ್ ದೇಶಗಳಲ್ಲಿ ಪ್ರೀಮಿಯರ್ ಶೋ ನಡೆದಿದ್ದು, ಮತ್ತೆ ಮತ್ತೆ ಈ ಸಿನಿಮಾ ಬಿಡುಗಡೆಗೆ ಗಲ್ಪ್ ದೇಶಗಳಿಂದ ಬೇಡಿಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು, ಮುಂಬೈ, ಮಸ್ಕತ್, ಬೆಹರಿನ್ , ಸೌದಿ ಅರೇಬಿಯಾಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. 100 ದಿನ ಪೂರೈಸಿದ ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ತಂಡದ ಮತ್ತೊಂದು ಕೊಡುಗೆ ‘ಮಿಡಲ್ ಕ್ಲಾಸ್ ಫ್ಯಾಮಿಲಿ’ಯು ಪ್ರೇಕ್ಷಕರ ಮನ ಗೆದ್ದು ಭರ್ಜರಿ 100 ದಿನ ಪೂರೈಸಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ದೇಶಕ ರಾಹುಲ್ ಅಮೀನ್ ‘ರಾಜ್ ಸೌಂಡ್ಸ್…
ಚೇಳ್ಯಾರ್ ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವ ಮೇ 14 ಮತ್ತು ಮೇ 15 ರಂದು ಜರಗಲಿದೆ. ಮೇ 14 ರಂದು ಬೆಳಿಗ್ಗೆ 7-00 ಗಂಟೆಗೆ ಮೀನು ಹಿಡಿಯುವಿಕೆ, ನಂತರ ಮೂಲಸ್ಥಾನದಲ್ಲಿ ಗಣಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 5-00 ರಿಂದ ಯಕ್ಷಗಾನ ಬಯಲಾಟ, ರಾತ್ರಿ 9-00 ಕ್ಕೆ ಬ್ರಹ್ಮಸ್ಥಾನದಲ್ಲಿ ತಂಬಿಲ, ಕುಮಾರ ಸಿರಿಗಳ ದರ್ಶನ, ದೈವಗಳ ಭಂಡಾರ ಮೂಲಸ್ಥಾನಕ್ಕೆ ಹೋಗುವುದು. ಮೇ 15 ರಂದು ಬೆಳಿಗ್ಗೆ 5-00 ಕ್ಕೆ ಧರ್ಮರಸು ಉಳ್ಳಾಯ, ಇಷ್ಟದೇವತೆ, ಬಬ್ಬರ್ಯ, ಪರಿವಾರ ದೈವಗಳಿಗೆ ನೇಮೋತ್ಸವ, ನಂತರ ನಾಗದೇವರಿಗೆ ತಂಬಿಲ, ಜಾರಂದಾಯ ಕೊಡಮಣಿತ್ತಾಯ ದೈವಗಳಿಗೆ ಜೋಡಿ ನೇಮೋತ್ಸವ, ಕೋರ್ದಬ್ಬು ದೈವದ ಭೇಟಿ, ದೈವಗಳಿಗೆ ಸಾಮೂಹಿಕ ಹೂವಿನ ಪೂಜೆ, ಅನ್ನಸಂತರ್ಪಣೆ, ರಾತ್ರಿ 8-00 ಕ್ಕೆ ಪ್ರಸನ್ನ ಶೆಟ್ಟಿ ಬೈಲೂರು ರಚಿಸಿ ನಿರ್ದೇಶಿಸಿದ “ಅಷ್ಟಮಿ” ನಾಟಕ ಪ್ರದರ್ಶನ ನಡೆಯಲಿದೆ. ವಿಶೇಷವಾಗಿ “ತುಳುನಾಡ ಸಂತೆ” ಎರಡು ದಿನ ಜರಗಲಿದೆ ಎಂದು ದೈವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ತೋಕೂರುಗುತ್ತು…
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಫರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಸೆಮಿಫೈನಲ್ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್ಗೆ ಅರ್ಹತೆ ಪಡೆದುಕೊಂಡಿತು. ಫೈನಲ್ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಮಹಿಳಾ ತಂಡವು ಸೆಮಿಫೈನಲ್ ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ವತಿಯಿಂದ ಅಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಒಂದು ದಿನದ ರಾಷ್ಟ್ರಿಯ ಸಮ್ಮೇಳನ ‘’ಆಂಟಿಮೈಕ್ರೊಬಿಯಲ್ ರೆಸಿಸ್ಟೆನ್ಸ್-ಗ್ಲೋಬಲ್ ಥ್ರೆಟ್ಸ್, ಲೋಕಲ್ ಆ್ಯಕ್ಷನ್ಸ್, ಒನ್ ಹೆಲ್ತ್ ಸೊಲ್ಯೂಷನ್ಸ್-2025’’ (ಎಎಂಆರ್-ಜಿಎಲ್ಒಎಚ್) ನಡೆಯಿತು. ಕರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತುಮಕೂರು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಿ ಪ್ರಕಾಶ್, ಆಂಟಿಮೈಕ್ರೋಬಿಯಲ್ ರೆಸಿಸ್ಟೆನ್ಸ್ ಎಂಬುದು ವೈರಸ್, ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಪರೋಪಜೀವಿಗಳು ಮೊದಲಾದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧವನ್ನು ತೋರಿಸುವ ಸಾಮರ್ಥ್ಯವನ್ನು ಹೊಂದಿದ ಸ್ಥಿತಿಯಾಗಿದೆ. 2011 ರಲ್ಲಿಯೇ ವಿಶ್ವ ಆರೋಗ್ಯ ಸಂಸ್ಥೆಯು “ಆಂಟಿ ಮೈಕ್ರೊಬಿಯಲ್ ಪ್ರತಿರೋಧವನ್ನು-ಇಂದು ಕ್ರಮವಿಲ್ಲದಿದ್ದರೆ, ನಾಳೆ ಚಿಕಿತ್ಸೆ ಇಲ್ಲ’’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡಿತ್ತು. ಇಂದು ಆಳ್ವಾಸ್ ಸಂಸ್ಥೆಯು ಆಂಟಿ ಮೈಕ್ರೊಬಿಯಲ್ ಪ್ರತಿರೋಧದ ಕುರಿತು ಹೆಚ್ಚಿನ ಜ್ಞಾನವನ್ನು ನೀಡುವ ಸಲುವಾಗಿ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ. ಆರೋಗ್ಯವೃತ್ತಿಪರರಾಗಿ ನಾವು ಈ ಎಲ್ಲಾ ಆಂಟಿ ಮೈಕ್ರೊಬಿಯಲ್ ಪ್ರತಿರೋಧದ ಸಮಗ್ರ ಮಾಹಿತಿಯನ್ನು ಪಡೆದುಕೊಂಡು, ಅದು ಹೇಗೆ ಪರಿಣಾಮ…
ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ 8ನೇ ಪುಣ್ಯ ಸಂಸ್ಮರಣೆ : 40 ಅಶಕ್ತರಿಗೆ, 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ರೂ 10 ಲಕ್ಷ ಆರ್ಥಿಕ ಸಹಾಯ ವಿತರಣೆ
ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ ಚಾರಿಟೇಬಲ್ ಫೌಂಡೇಶನ್, ಪಾಪ್ಯುಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆ ಆಶ್ರಯದಲ್ಲಿ ಸಂಸ್ಥೆಯ ಸ್ಥಾಪಕ ಕಾರ್ಯಾಧ್ಯಕ್ಷ ಹಾಗೂ ಸಂಚಾಲಕರಾಗಿದ್ದ ದಿ. ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ ಅವರ 8ನೇ ಪುಣ್ಯ ಸಂಸ್ಮರಣಾ ಕಾರ್ಯಕ್ರಮವು ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಫೌಂಡೇಷನ್ ಹಾಗೂ ಪ್ರೌಢಶಾಲೆಯ ಸಂಚಾಲಕರಾದ ಕೆ. ಕರುಣಾಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪಾಪ್ಯುಲರ್ ಜಗದೀಶ ಸಿ ಶೆಟ್ಟಿಯವರ ಪ್ರತಿಮೆಗೆ ಹೂ ಹಾರ ಹಾಗೂ ಪುಷ್ಪ ನಮನ ಸಲ್ಲಿಸಿದರು. ಬಳಿಕ 40 ಮಂದಿ ಆಶಕ್ತರಿಗೆ ಹಾಗೂ 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒಟ್ಟು 10 ಲಕ್ಷರೂ. ಸಹಾಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಂಟ್ಸ್ ವೆಲ್ಫೇರ್ ಟ್ರಸ್ಟಿನ ಹಾಗೂ ಪಾಪ್ಯುಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲಾ ಕಾರ್ಯದರ್ಶಿ ಗೋಪಿನಾಥ ಹೆಗ್ಡೆ ಪಾಪ್ಯುಲರ್ ಜಗದೀಶ ಸಿ.ಶೆಟ್ಟಿಯವರ ಆದರ್ಶ, ಮಾರ್ಗದರ್ಶನ ನಮಗೆ ದಾರಿದೀಪ. ಉತ್ತಮ ಶಿಕ್ಷಣ ಸಂಸ್ಥೆಯಾಗಬೇಕು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಆಶಕ್ತರಿಗೆ ಧನ ಸಹಾಯ ಅವರ ಕನಸು ಈಡೇರಿಸುವ ಪ್ರಾಮಾಣಿಕ…
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಶ್ರೀ ಅರಸು ಮುಂಡಿತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಮಂಗಳೂರಿನ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಹೊರಡಿಸಿರುತ್ತಾರೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರನ್ನಾಗಿ ಪಜೀರು ಅಜೆಕಳಗುತ್ತು ಪ್ರದೀಪ್ ಆಳ್ವ ಕದ್ರಿ ಆಯ್ಕೆ ಮಾಡಲಾಗಿದೆ. ಸದಸ್ಯರಾಗಿ ಸುಬ್ರಾಯ ಪೂಜಾರಿ ಭಂಡಾರಮನೆ, ಜಗದೀಶ್ ಆಳ್ವ ಕುವೆತ್ತಬೈಲು, ವಿಶ್ವಾಸ್ ರೈ ಬಂಗದಾರೆಗುತ್ತು, ಪುರಂದರ ವಜಲಗುಡ್ಡೆ, ಸರಸ್ವತಿ ಅಡ್ಕ, ಭಾರತಿ ಗಟ್ಟಿ ಕೊರಂತೋಡಿ, ರಂಗನಾಥ ಪೂಂಜ ಅಜೆಕಳಗುತ್ತು, ರಮೇಶ್ ಸಪಲ್ಯ ಗಾಣದಮನೆ ಇವರುಗಳನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು. ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ದಶಮ ಸಂಭ್ರಮ ಕಾರ್ಯಕ್ರಮದ ಕುರಿತು ಬಲ್ಲಾಲ್ ಬಾಗ್ ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಟ್ಲ ದಶಮ ಸಂಭ್ರಮದ ಹಿನ್ನಲೆಯಲ್ಲಿ ಎಲ್ಲಾ ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿ ಕೊಡಲಾಗುವುದು. ಕಳೆದ 10 ವರ್ಷಗಳಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ 15 ಕೋಟಿ ರೂಪಾಯಿ ಮೊತ್ತದ ಸೇವಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಪ್ರತೀ ವರ್ಷ ಹಣ ಸಂಗ್ರಹಿಸುವುದನ್ನು ಬಿಟ್ಟು 10 ಕೋಟಿ ರೂಪಾಯಿ ಹಣವನ್ನು ಸಂಗ್ರಹಿಸುವ ಗುರಿ ಹೊಂದಿದೆ. ಎಲ್ಲಾ ಘಟಕಗಳು ಕನಿಷ್ಠ ಹತ್ತು ಮಂದಿ ಟ್ರಸ್ಟಿಗಳನ್ನು ಮಾಡಿ ಫೌಂಡೇಶನ್ ಟ್ರಸ್ಟ್ ಗೆ…
ತೆಂಕು ಬಡಗು ಯಕ್ಷಗಾನದ ಹವ್ಯಾಸಿ ವೇಷಧಾರಿ, ಹೋಟೆಲ್ ಉದ್ಯಮಿ ಮತ್ತು ಸಾಮಾಜಿಕ ಸೇವಾ ಕಾರ್ಯಕರ್ತ ಪಣಿಯೂರುಗುತ್ತು ಕರುಣಾಕರ ಶೆಟ್ಟಿ ಅವರು 2024 -25 ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ನೌಕೆ ಆರ್ಯಭಟ ಉಪಗ್ರಹ ಉಡ್ಡಯನವಾದ ವರ್ಷವೇ ಸ್ಥಾಪನೆಗೊಂಡ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50 ವರ್ಷಗಳನ್ನು ಪೂರೈಸಿದ್ದು, ಪ್ರತಿವರ್ಷದಂತೆ ಈ ಬಾರಿಯೂ ದೇಶ ವಿದೇಶದ ಅನನ್ಯ ಸಾಧಕರನ್ನು ಗುರುತಿಸಿ ಈ ವಿಶೇಷ ಪ್ರಶಸ್ತಿಯನ್ನು ನೀಡುತ್ತಿದೆ. ಸುಮಾರು ನಾಲ್ಕು ದಶಕಗಳ ರಂಗಾನುಭವ ಹೊಂದಿದ ಪಣಿಯೂರು ಅವರು ಭರತನಾಟ್ಯವನ್ನೂ ಅಭ್ಯಸಿಸಿದ್ದಾರೆ. ತುಳು ಕನ್ನಡ ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಉಡುಪಿಯ ‘ರಂಗಸ್ಥಳ’ ಮತ್ತು ಮಂಗಳೂರಿನ ‘ಯಕ್ಷಾಂಗಣ’ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ದುಡಿಯುತ್ತಿದ್ದಾರೆ. ತುಳುನಾಡಿನ ವಿಶಿಷ್ಟ ಆಚರಣೆಯಾದ ದೈವರಾಧನೆಯಲ್ಲಿ ಮಧ್ಯಸ್ಥರಾಗಿ ನುಡಿಕಾರರಾಗಿಯೂ ಅವರು ಪರಿಣತರು. ಕರುಣಾಕರ ಶೆಟ್ಟರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾಡಳಿತವು 2019- 20 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಅವರಿಗೆ ನೀಡಿದೆ.…
ಮುಂಬಯಿ:- ಭಕ್ತಿ ಮತ್ತು ಭಗವಂತನ ನಡುವಿನ ನಿರೂಪಣೆ ವಚನ ಸಾಹಿತ್ಯದಲ್ಲಿ ಕಂಡು ಬರುತ್ತದೆ. ಭಕ್ತಿ ಎನ್ನುವುದು ಅಹಂನಿಂದ ಹೊರಬರುವ ಸ್ಥಿತಿ. ಅಹಂಕಾರದ ನಿರಾಕರಣೆಯೇ ಭಕ್ತಿಯ ತತ್ವವಾಗಿರುತ್ತದೆ. ಮನುಷ್ಯನ ನಡುವಿನ ಅಂತರವನ್ನು ಉಂಟುಮಾಡುವ ಸ್ಥಿತಿಗತಿಯನ್ನು ನಿರಾಕರಿಸಬೇಕು. ಆ ಕೆಲಸವನ್ನು ಭಕ್ತಿ ಮಾಡುತ್ತದೆ. ಬಸವಣ್ಣ ಭಕ್ತಿ ಭಂಡಾರಿ. ಮರೆಯುವ, ಬೆರೆಯುವ, ತಲ್ಲೀನತೆಯಲಿ ತನ್ಮಯವಾಗುವುದೇ ಭಕ್ತಿ. ಸಾಹಿತ್ಯದ ಓದು ನಮ್ಮಲ್ಲಿ ಎಲ್ಲರನ್ನು ಸಮಾನ ಭಾವದಿಂದ ನೋಡುವ ಮನೋಭಾವವನ್ನು ನೀಡುತ್ತದೆ. ಭಕ್ತ ಮತ್ತು ಭಗವಂತನ ನಡುವಿನ ಸಂಬಂಧ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಹನ್ನೆರಡನೆಯ ಶತಮಾನದಲ್ಲಿ ವಚನಕಾರರು ವಿಶೇಷವಾಗಿ ಬಸವಣ್ಣ ಅದಕ್ಕೆ ಹೊಸ ಆಯಾಮವನ್ನು ನೀಡಿದರು ಎಂದು ಮಂಗಳೂರು ವಿಶ್ವವಿದ್ಯಾಲಯಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಶಿವರಾಮ ಶೆಟ್ಟಿ ಅವರು ಅಭಿಪ್ರಾಯ ಪಟ್ಟರು. ಅವರು ಎಪ್ರಿಲ್ 30ರಂದು ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಭಕ್ತಿ ಭಂಡಾರಿ ಬಸವಣ್ಣನ ಕುರಿತು ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ಸಾಹಿತಿ, ಸಂಶೋಧಕರಾದ…
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಎಸ್.ಪಿ. ಅಜಿತ್ ಪ್ರಸಾದ್, ಇಂದಿನ ಯುವಪೀಳಿಗೆಗೆ ಪ್ರಾಚೀನ ಕನ್ನಡ ಸಾಹಿತ್ಯವನ್ನು ತಲುಪಿಸುವ ಕರ್ಯವನ್ನು ನಾವು ಮಾಡಬೇಕು. ನಾವು ಆಡುವ ಮಾತುಗಳು ಎದುರಿನವರಿಗೆ ಸಹ್ಯವಾಗಿರಬೇಕು. ಕಲಿಸುವ ಶಿಕ್ಷಕರಿಗೆ ಕನ್ನಡದ ಮೇಲೆ ಪ್ರೀತಿ ಇಲ್ಲದೆ ಹೋದರೆ, ಮಕ್ಕಳಲ್ಲಿ ಕನ್ನಡದ ಮೇಲೆ ಪ್ರೀತಿ ಮೂಡಲು ಸಾಧ್ಯವಿಲ್ಲ. ನಾಡು ಅರ್ಥವನ್ನ ಪಡೆದುಕೊಳ್ಳಬೇಕಾದರೆ ನುಡಿ ಗಟ್ಟಿಯಾಗಿರ ಬೇಕು, ನಾಡನ್ನ ಬಿಟ್ಟು ನುಡಿಯಿಲ್ಲ, ನುಡಿಯನ್ನ ಬಿಟ್ಟು ನಾಡಿಲ್ಲ . ಇಂದು ಕನ್ನಡ ತನ್ನ ಅಸ್ತಿತ್ವವನ್ನ ಕಳೆದುಕೊಳ್ಳುತ್ತಾ ಬರುತ್ತಿದೆ, ಇದಕ್ಕೆ ನಾವೇ ಕಾರಣ. ಕನ್ನಡ ನಮ್ಮ ಹೃದಯದ ಭಾಷೆ. ನಾವು ಯಾವಾಗ ನಮ್ಮ ಮಾತೃಭಾಷೆ ಸಂಪರ್ಕವನ್ನು ಕಳೆದುಕೊಳ್ಳುತ್ತೇವೆ ಮಾತನಾಡಲು ಯಾವಾಗ ಹಿಂಜರಿಯುತ್ತೇವೆ ಆಗ ನಾವು ನಮ್ಮತನವನ್ನು ಕಳೆದುಕೊಂಡ…















