Author: admin

ಪಡುಬಿದ್ರಿ ಬಂಟರ ಸಂಘ ಮತ್ತು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಆಗಸ್ಟ್ 25 ರಂದು ಭಾನುವಾರ ಒಂದು ದಿನದ ಯುವಕರಿಗೆ ಮತ್ತು ಮಹಿಳೆಯರಿಗೆ ಒಂದು ದಿನದ “ವೃತ್ತಿ ಅಭಿವೃದ್ಧಿ ಮತ್ತು ಉದ್ಯಮಶೀಲತಾ ನಾವೀನ್ಯತೆ ತರಬೇತಿ ಕಾರ್ಯಕ್ರಮ” ನಡೆಯಲಿದೆ. ಈ ಕಾರ್ಯಕ್ರಮ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ನಡೆಯಲ್ಲಿದ್ದು, ಇದರ ಉದ್ಘಾಟನೆಯನ್ನು ಎಂ.ಆರ್.ಜಿ ಗ್ರೂಪ್ ನ ಛೇರ್ಮನ್ ಡಾ| ಕೆ. ಪ್ರಕಾಶ್ ಶೆಟ್ಟಿಯವರು ಮಾಡಲಿದ್ದು, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ಧಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಗ್ರಾಮೀಣ ಬಂಟರ ಸಂಘ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಎರ್ಮಾಳ್ ಶಶಿಧರ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ್ ಜಿ ಹೆಗ್ಡೆ, ಸುರೇಶ್ ಶೆಟ್ಟಿ, ಸಾಂತೂರು ಭಾಸ್ಕರ್ ಶೆಟ್ಟಿ, ನವೀನ್ ಚಂದ್ರ…

Read More

ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬನ್ನಾಡಿ ಗ್ರಾಮದ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಆಗಸ್ಟ್ 26 ರಂದು ಆಚರಿಸಲಿದ್ದು, ಆಗಸ್ಟ್ 27 ರಂದು ಸಮಯ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯ ತನಕ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಮುದ್ದುಕೃಷ್ಣ ಸ್ಪರ್ಧೆಯು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆಯವರ ಮುಂದಾಳತ್ವದಲ್ಲಿ ನಡೆಯಲಿದೆ. ಸ್ಪರ್ಧೆಯು 0 ರಿಂದ 2 ವರ್ಷ, 2 ರಿಂದ 4 ವರ್ಷ ಮತ್ತು 4 ರಿಂದ 6 ವರ್ಷದೊಳಗಿನ ಮಕ್ಕಳಿಗೆ 3 ವಿಭಾಗಗಳಿದ್ದು, ಪ್ರತೀ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಪ್ರತೀ ಮಕ್ಕಳಿಗೂ ಪ್ರಶಂಸನಾ ಪತ್ರ ನೀಡಲಾಗುವುದು. ಸ್ಪರ್ಧಾಳುಗಳಿಗೆ 1 ನಿಮಿಷದ ಕಾಲಾವಕಾಶ ನೀಡಲಾಗುವುದು. ವಿನೂತನ ಮಾದರಿಯ ವೇಷಭೂಷಣವನ್ನು ಸ್ಪರ್ಧಾಳುಗಳಿಗೆ ರಿಯಾಯಿತಿ ದರದಲ್ಲಿ (ರೂ.150/- ರಿಂದ ಪ್ರಾರಂಭ) ವ್ಯವಸ್ಥೆ ಮಾಡಲಾಗುವುದು. ಇಲ್ಲವೇ ಸ್ವತಃ ಪೋಷಕರೇ ಮಾಡಿಸಿಕೊಂಡು ಬರಬಹುದು. ಆಗಸ್ಟ್ 27 ರಂದು ಬೆಳಿಗ್ಗೆ ಗಂಟೆ 8:30…

Read More

ವಿದ್ಯಾಗಿರಿ: ಆಳ್ವಾಸ್ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 3.36 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2023-24 ನೇ ಸಾಲಿನ 8ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 150 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 50 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.20 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 3876 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಆಳ್ವಾಸ್ ಸಂಸ್ಥೆಯು ಖಾಸಗಿ ದೋರಣೆಯೊಂದಿಗೆ ಕೆಲಸ ನಿರ್ವಹಿಸಿದರೂ, ಸಮಾಜದ ಪರಿಕಲ್ಪನೆಯಲ್ಲಿ ಸರ್ವರ ಹಿತ…

Read More

ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 18 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೆಲ್ ನ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ಜರಗಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟೆಂಬರ್ 7ರಿಂದ 9ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, 20 ವರ್ಷಗಳ ಹಿಂದೆ ಆರಂಭಗೊಂಡ ಇಲ್ಲಿನ ಗಣೇಶೋತ್ಸವ ದೇವರ ಆಶೀರ್ವಾದ ಹಾಗೂ ನೂರಾರು ಕಾರ್ಯಕರ್ತರ ಸಹಕಾರದಿಂದ ಜಿಲ್ಲೆಯ ಮಾದರಿ ಗಣೇಶೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿಯ ಗಣೇಶೋತ್ಸವವೂ ಎಂದಿನಂತೆ ಶೃದ್ದಾ ಭಕ್ತಿಯಿಂದ ಜರಗಲಿದ್ದು ಯಶಸ್ವಿಯಾಗಿ ನಡೆಯಲು ಸರ್ವರ ಸಹಕಾರ ಯಾಚಿಸಿದರು. ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಅವರು 3 ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮಗಳ…

Read More

ಲಕುಮಿ ಸಿನಿ ಕ್ರಿಯೇಷನ್ಸ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ಕಲಿ” ತುಳು ಸಿನಿಮಾದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು, “ತುಳು ಭಾಷೆಯ ಉಳಿವಿಗಾಗಿ ತುಳು ನಾಟಕ ಮತ್ತು ಸಿನಿಮಾಗಳ ಪಾತ್ರ ಹೆಚ್ಚಿನದಾಗಿದೆ. ಇದ್ಕಕಾಗಿ ಶ್ರಮ ಪಡುತ್ತಿರುವ ಲೈಟ್ ಬಾಯ್ ನಿಂದ ಹಿಡಿದು ಎಲ್ಲರನ್ನೂ ಈ ಸಂದರ್ಭದಲ್ಲಿ ನೆನೆಯಬೇಕಿದೆ. “ಅನರ್ಕಲಿ” ತುಳು ಸಿನಿಮಾ ಚೆನ್ನಾಗಿದೆ ಎಂದು ಈಗಾಗಲೇ ಪ್ರೇಕ್ಷಕರು ಬೆನ್ನು ತಟ್ಟಿದಾರೆ. ಒಂದು ಒಳ್ಳೆಯ ಪ್ರಯತ್ನವನ್ನು ತುಳುನಾಡಿನ ಪ್ರೇಕ್ಷಕರು ಖಂಡಿತಾ ಬೆಂಬಲಿಸುತ್ತಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು. ನವನೀತ್ ಶೆಟ್ಟಿ ಕದ್ರಿ ಮಾತನಾಡಿ, “ನಾವು ಬಾಲ್ಯದಲ್ಲಿ ನೋಡುತ್ತಿದ್ದ ಅನರ್ಕಲಿ ವೇಷವನ್ನು ಮತ್ತೊಮ್ಮೆ ತುಳುನಾಡಿನ ಜನರಿಗೆ ಪರಿಚಯಿಸಲು ಚಿತ್ರತಂಡ ಮುಂದಾಗಿದೆ. ಚಿತ್ರ ನೋಡಿದವರು ಪ್ರಶಂಸೆಯ ಮಾತನಾಡಿದ್ದಾರೆ. ಇದು ನಿಜಕ್ಕೂ ಖುಷಿಯ…

Read More

ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗ. ಪಠ್ಯದೊಂದಿಗೆ ಕ್ರೀಡೆಯಂತಹ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿ ಕೊಂಡಾಗ ಅವರಲ್ಲಿ ಸ್ವಯಂ ಶಿಸ್ತು ಬೆಳೆಯುತ್ತದೆ. ಇಂದಿನ ದಿನಗಳಲ್ಲಿ ದೇಹ ಮತ್ತು ಮನಸ್ಸು ಸದೃಢವಾಗಲು ವಿದ್ಯಾರ್ಥಿಗಳು ಆಟವಾಡುವುದನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ದ್ಯಾವಲ್ ಬೆಟ್ಟು ಹೇಳಿದರು. ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ವಾಣಿ ಆರ್ ಶೆಟ್ಟಿ ಹಾಲಾಡಿ, ಶಿಕ್ಷಣ ಸಂಯೋಜಕರಾದ ಶೇಖರ್ ಯು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕುಂದಾಪುರ ವಲಯಾಧ್ಯಕ್ಷರಾದ ಗಣೇಶ್ ಕುಮಾರ್ ಶೆಟ್ಟಿ, ಕುಂದಾಪುರ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಕನ್ಯ, ಉಡುಪಿ…

Read More

ಮೂಡುಬಿದಿರೆ:ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ದಿ ಇಂಡಸ್ ಅನ್ಟ್ರಾಪ್ರೀನ್ಯೂವರ್ಸ್ ಘಟಕ(ಟಿಐಇ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶೈಕ್ಷಣಿಕ ಒಡಂಬಡಿಕೆ ಮಾಡಿಕೊಳ್ಳಲಿವೆ. ಈ ಒಡಂಬಡಿಕೆಯ ಭಾಗವಾಗಿ ಇಂಡಸ್ ಅನ್ಟ್ರಾಪ್ರೀನ್ಯೂವರ್ಸ್ ಸಂಸ್ಥೆಯ ‘ಟಿಐಇ ಎಲೈಟ್’’ ಎಂಬ ವಿನೂತನ ಕಾರ್ಯಕ್ರಮವು ಆಳ್ವಾಸ್‍ನ ಸಂಸ್ಥೆಗಳಲ್ಲಿ 2024-25ನೇ ಶೈಕ್ಷಣಿಕ ಅವಧಿಯಲ್ಲಿ ಅನುಷ್ಠಾನಗೊಳ್ಳಲಿದೆ. ಟಿಐಇ ಜೊತೆಗಿನ ಒಡಂಬಡಿಕೆಯ ಮೂಲಕ ಆಳ್ವಾಸ್ ಸಂಸ್ಥೆಯು ಕರಾವಳಿ ಭಾಗದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶೈಕ್ಷಣಿಕ ವಲಯ ಹಾಗೂ ಉದ್ಯೋಗ ಮಾರುಕಟ್ಟೆಯ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಔದ್ಯೋಗಿಕವಲಯದ ಸ್ಪಷ್ಟ ಚಿತ್ರಣವನ್ನು ವಿದ್ಯಾಭ್ಯಾಸದ ಅವಧಿಯಲ್ಲಿ ನೀಡಲು ಈ ಒಡಂಬಡಿಕೆ ಸಹಕಾರಿಯಾಗಲಿದೆ. ಮಂಗಳೂರಿನ ಟಿಐಇ ಸಂಸ್ಥೆಯು 1960ರ ಕರ್ನಾಟಕ ಸೊಸೈಟಿ ನಿಬಂಧನೆಗಳ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಲಾಭರಯಿತ ಸಂಸ್ಥೆಯಾಗಿದ್ದು, ಕರಾವಳಿ ಭಾಗದಲ್ಲಿ ಹೆಚ್ಚಿನ ಉದ್ದಿಮೆಗಳು ಸ್ಥಾಪನೆಗೆ ಪ್ರೋತ್ಸಾಹ ನೀಡುವುದರ ಮೂಲಕ ಈ ಭಾಗವನ್ನು ಭಾರತದ ಸಿಲಿಕಾನ್ ಬೀಚ್ ಮಾಡುವ ಗುರಿಯನ್ನು ಹೊಂದಿದೆ. ಮಂಗಳೂರು ಹಾಗೂ ಉಡುಪಿ ಭಾಗದ 100ಕ್ಕೂ ಅಧಿಕ ಕಂಪೆನಿಗಳು ಈ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆಯು ಮಂಗಳೂರಿನ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೂಲ್ಕಿಯಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣವಾಗುತ್ತಿರುವ ತೋನ್ಸೆ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ, ಕನ್ಯಾನ ಸದಾಶಿವ ಶೆಟ್ಟಿ ಹವಾ ನಿಯಂತ್ರಿತ ಸಭಾಂಗಣ ರಚನೆಯಾಗಲಿದೆ ಎಂದರು. ಸುಮಾರು 1,200 ಆಸನಗಳ ಸೌಲಭ್ಯ ಇರುವ ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣವನ್ನು ನಿರ್ಮಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 2025 ರ ಎಪ್ರಿಲ್ ತಿಂಗಳಲ್ಲಿ ಸಭಾಂಗಣವನ್ನು ನಿರ್ಮಾಣ ಮಾಡಿ ಸಮಾಜಕ್ಕೆ ಅರ್ಪಿಸಲಾಗುವುದು. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅಗತ್ಯ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಒಂದು ಸುಸಜ್ಜಿತ ಹವಾ ನಿಯಂತ್ರಿತ ಸಭಾಂಗಣದ ಅಗತ್ಯ ಇದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ದಾನಿಗಳ…

Read More

ಅಖಿಲ ಭಾರತ ತುಳು ಒಕ್ಕೂಟವು ತುಳು ಭಾಷೆ, ಸಂಸ್ಕೃತಿ ಅಭಿವೃದ್ಧಿ ನೆಲೆಯಲ್ಲಿ ಸ್ಥಾಪಿಸಲ್ಪಟ್ಟಿದ್ದು ದೇಶದಾದ್ಯಂತ ಸುಮಾರು 46 ತುಳು ಸೇವಾ ಸಂಸ್ಥೆಗಳು ಇದರ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿವೆ. ತುಳು ಭಾಷೆಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳು, ಸಮಾರಂಭಗಳು, ಸಮ್ಮೇಳನಗಳು ದೇಶ ವಿದೇಶದಲ್ಲಿ ನಡೆಯುತ್ತಿದೆ. ಇದೇ ಬರುವ ಅಗಸ್ಟ್ 24, ಶನಿವಾರದಂದು ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ ಎಂದು ಸಂಘಟನೆಯ ಅಧ್ಯಕ್ಷ ಎ.ಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಅಂದು ಬೆಳಗ್ಗೆ 8.30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪುರಭವನದವರೆಗೆ ತುಳುವೆರ ದಿಬ್ಬಣ ಮೆರವಣಿಗೆ ನಡೆಯಲಿದೆ. ಇದರಲ್ಲಿ ಸುಮಾರು 8 ಜಾನಪದ ಕಲಾಕೂಟಗಳು ಭಾಗವಹಿಸಲಿವೆ. ಈ ಸಮಾರಂಭವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಲಯನ್ ದಿವಾಕರ ಶೆಟ್ಟಿ ಸಾಂಗ್ಲಿ, ನಗ್ರಿಗುತ್ತು ರೋಹಿತ್‌ ಶೆಟ್ಟಿ, ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬಯಿ ಇವರುಗಳು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಕಂಬಳ ಕೂಟದಲ್ಲಿ ಹೆಸರುವಾಸಿಯಾದ ನಂದಳಿಕೆ ಶ್ರೀಕಾಂತ…

Read More

ಕರಾವಳಿ ಕರ್ನಾಟಕದ ಹೆಸರಾಂತ ಸಾಹಿತಿ, ಕವಿ, ಲೇಖಕ ಮತ್ತು ಯಕ್ಷಗಾನ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ನೂತನ ಕೃತಿಗಳೆರಡು ಮುಂಬಯಿ ವಿದ್ಯಾ ವಿಹಾರ್ ಪೂರ್ವದ ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ಮಂದಿರದಲ್ಲಿ ಆಗಸ್ಟ್ 24 ರಂದು ಶನಿವಾರ ಸಂಜೆ ಗಂ.4 ಕ್ಕೆ ಅನಾವರಣಗೊಳ್ಳಲಿವೆ. ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ನೇತೃತ್ವದ ಅಜೆಕಾರು ಕಲಾಭಿಮಾನಿ ಬಳಗದ ವತಿಯಿಂದ ಪ್ರಸಕ್ತ ವರ್ಷ ನಡೆಯಲಿರುವ ಸರಣಿ ತಾಳಮದ್ದಳೆ ಉದ್ಘಾಟನಾ ಸಮಾರಂಭದಲ್ಲಿ ಈ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ‘ಸೃಷ್ಟಿಸಿರಿಯಲ್ಲಿ ಪುಷ್ಪವೃಷ್ಠಿ’ ಕನ್ನಡ ಕವನ ಸಂಕಲನ : ಕವಿ ಕುಕ್ಕುವಳ್ಳಿಯವರು ಬೇರೆ ಬೇರೆ ಸಂದರ್ಭಗಳಲ್ಲಿ ರಚಿಸಿದ ವಿವಿಧ ಕನ್ನಡ ಕವನಗಳು ಭಾವ ಸಿರಿ, ಗಾನಸಿರಿ, ಭಕ್ತಿಸಿರಿ ಎಂಬ ಮೂರು ವಿಭಾಗಗಳಲ್ಲಿ ಪ್ರಕಟವಾಗಿರುವ ‘ಸೃಷ್ಟಿ ಸಿರಿಯಲ್ಲಿ ಪುಷ್ಪವೃಷ್ಠಿ’ : ಭಾವ ಅನುಭಾವ ಗೀತೆಗಳ ಗುಚ್ಛವನ್ನು ಅಂಬಿಕಾ ಮಂದಿರದ ಧರ್ಮದರ್ಶಿ ವೇ.ಮೂ ಪೆರ್ಣಂಕಿಲ ಹರಿದಾಸ ಭಟ್ ಅನಾವರಣಗೊಳಿಸುವರು. ‘ಸೀಯನ’ ತುಳು ಗೊಂಚಿಲ್ : ಮಾತೃಭಾಷೆ ತುಳುವಿನಲ್ಲಿ ಸಬಿ ಸೀಯನ,…

Read More