Author: admin
ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈರವರು ಚುನಾಯಿತರಾಗಿದ್ದಾರೆ. ಜೆಸಿಐ ಮುಳಿಯ ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ ಉಪಾಧ್ಯಕ್ಷ ಚುನಾವಣಾ ಅಧಿಕಾರಿ ಜೇಸಿ ಸುಹಾಸ್ ಮರಿಕೆ, ರಾಷ್ಟ್ರೀಯ ಸಂಯೋಜಕಿ ಜೇಸಿ ಸ್ವಾತಿ ಜೆ ರೈ, ಪೂರ್ವ ಅಧ್ಯಕ್ಷರಾದ ಜೇಸಿ ಶಶಿರಾಜ್ ರೈ, 2024 ರ ಸಾಲಿನ ಅಧ್ಯಕ್ಷ ಮೋಹನ್ ಕೆ ರವರುಗಳು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ ಜೇಸಿ ಮುರಳಿ ಶ್ಯಾಮ್, ಜೇಸಿ ವಿಶ್ವ ಪ್ರಸಾದ್ ಸೇಡಿಯಾಪು, ಜೇಸಿ ಜಗನ್ನಾಥ್ ರೈ ,ಜೇಸಿ ಶರತ್ ಕುಮಾರ್ ರೈ , ಜೇಸಿ ವಸಂತ್ ಜಾಲಾಡಿ , ಜೇಸಿ ಗೌತಮ್ ರೈ, ಜೇಸಿ ಮನೋಹರ್ ಕೆ, 2024 ರ ಕಾರ್ಯದರ್ಶಿ ಜೇಸಿ ಆಶಾ ಮುತ್ಲಾಜೆ ಹಾಗೂ ಜೇಸಿ ಸದಸ್ಯರೆಲ್ಲರೂ ಉಪಸಿತರಿದ್ದರು. 2025ರ ಸಾಲಿಗೆ ಅಧ್ಯಕ್ಷರಾಗಿ ನಿಯೋಜನೆಗೊಂಡ ಭಾಗ್ಯೇಶ್ ರೈರವರು ತನ್ನನ್ನು ಆಯ್ಕೆ…
ಕರ್ನಾಟಕದ ಗಡಿನಾಡು ಕಾಸರಗೋಡಿನಲ್ಲಿ ಬಹಳಷ್ಟು ಮಂದಿ ಕನ್ನಡಿಗರು ಇದ್ದುದರಿಂದ ಅದು ಕರ್ನಾಟಕ ರಾಜ್ಯಕ್ಕೆ ಸೇರಬೇಕೆಂದು ಖ್ಯಾತ ಕವಿ ಕಯ್ಯಾರ ಕಿಞ್ಞಣ್ಣ ರೈ ಸಹಿತ ಹಲವಾರು ಮಂದಿ ಹೋರಾಟ ಮಾಡಿದ್ದರು. ಆದರೆ ಕೇರಳ ಸರಕಾರವು ಕಾಸರಗೋಡನ್ನು ಕೇರಳ ರಾಜ್ಯದ ಒಂದು ಜಿಲ್ಲೆಯನ್ನಾಗಿ ಘೋಷಿಸಿದ ಮೇಲೆ ಕರ್ನಾಟಕ ರಾಜ್ಯದೊಂದಿಗೆ ವಿಲೀನವಾಗುವುದು ತಪ್ಪಿದರೂ ಕನ್ನಡದ ಕಂಪು ಈಗಲೂ ಪಸರಿಸುತ್ತಲೇ ಇದೆ. ಇದೇ ಬರುವ ನವೆಂಬರ್ 10 ನೇ ತಾರೀಕು ಕಾಸರಗೋಡಿನ ಮೀಪುಗುರಿ ಎಲ್ ಪಿ ಶಾಲೆಯ ಪ್ರದೇಶದಲ್ಲಿ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವು ಜರುಗಲಿದೆ. ಕರ್ನಾಟಕ ರಾಜ್ಯದ ಮತ್ತು ಕೇರಳ ರಾಜ್ಯದ ಶಾಲೆಗಳ ಒಂದು ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸೇರಿ ತಮ್ಮ ಪ್ರತಿಭೆಯನ್ನು ಪ್ರಸ್ತುತ ಪಡಿಸಲಿದ್ದಾರೆ. ಈ ಸಮ್ಮೇಳನದಲ್ಲಿ ಖ್ಯಾತ ಸಾಹಿತಿಗಳು, ಮಂತ್ರಿಗಳು, ಶಾಸಕರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸ್ವಾಮಿಗಳು, ಪೋಲೀಸ್ ಅಧಿಕಾರಿಗಳು, ಕಾಲೇಜುಗಳ ಪ್ರಿನ್ಸಿಪಾಲರುಗಳು ಮತ್ತು ಉಪನ್ಯಾಸಕರು, ಯಕ್ಷಗಾನ, ನಾಟಕ ಮತ್ತು ಸಂಗೀತಗಾರರು ಇತ್ಯಾದಿ ಘಟಾನಾಘಟಿಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರುಗು ನೀಡುವುದಲ್ಲದೇ,…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬಯಿ ಬಂಟರ ಸಂಘದ ಸಹಯೋಗದಲ್ಲಿ ಮುಂಬಯಿಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ” ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ. ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿಕೊಂಡಿದ್ದು ಸುಮಾರು 75 ಸಾವಿರಕ್ಕೂ ಮಿಕ್ಕಿ ಸಮಾಜ ಬಾಂಧವರು ಪಾಲ್ಗೊಂಡು ಯಶಸ್ವಿಯಾಗಿ ನಡೆದಿದೆ. ಮಂಬಯಿ ನಗರದಲ್ಲಿ 3 ವರ್ಷಗಳ ಹಿಂದೆ ಒಕ್ಕೂಟದ ಬಂಟ ಸಮ್ಮಿಲನ ಯಶಸ್ವಿಯಾಗಿ ನಡೆದಿದೆ. ಈ ವರ್ಷ ಮುಂಬಯಿ ಮಹಾನಗರದಲ್ಲಿ ಜಾಗತಿಕ ಮಟ್ಟದ ಬಂಟ ಸಮಾಜದ ಬಂಧುಗಳನ್ನು ಒಟ್ಟು ಸೇರಿಸುವ ಮಹಾನ್ ಉದ್ದೇಶದೊಂದಿಗೆ ಡಿಸೆಂಬರ್ 7ರಂದು ಶನಿವಾರ ಕುರ್ಲಾ ಪೂರ್ವದ ಬಂಟರ ಭವನದಲ್ಲಿ “ವಿಶ್ವ ಬಂಟರ ಸಮಾಗಮ” ಜಾಗತಿಕ ಮಟ್ಟದ ಕಾರ್ಯಕ್ರಮ ಬೆಳಿಗ್ಗೆಯಿಂದ ಸಂಜೆವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಒಕ್ಕೂಟದ ವಿಶೇಷ…
ಒಂದು ಕ್ಷೇತ್ರದ ಪ್ರಗತಿ ಎನ್ನುವುದು ಕೇವಲ ಅಲ್ಲಿನ ಅಭಿವೃದ್ಧಿ ಕಾರ್ಯ ಅಥವಾ ರಾಜಕೀಯ ಚಟುವಟಿಕೆಯಿಂದ ಮಾತ್ರ ಗುರುತಿಸುವುದಿಲ್ಲ. ಬದಲಾಗಿ ಜನರ ಅಭಿಲಾಷೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಕೂಡ ಜನಸಾಮಾನ್ಯರ ಕರ್ತವ್ಯ. ಬೈಂದೂರು ಉತ್ಸವದ ಮೂಲಕ ಹೊಸ ಪರಿಕಲ್ಪನೆಯ ಅನಾವರಣವಾಗಿದೆ. ಈ ಮೂಲಕ ಬೈಂದೂರು ಇನ್ನಷ್ಟು ಹೊಸತನಕ್ಕೆ ತೆರೆದುಕೊಂಡಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸಮೃದ್ಧ ಬೈಂದೂರು ಟ್ರಸ್ಟ್ ಇದರ ವತಿಯಿಂದ ಬೈಂದೂರು ಗಾಂಧಿ ಮೈದಾನದಲ್ಲಿ ನಡೆದ ಬೈಂದೂರು ಉತ್ಸವ 2024 ಸಮಾರೋಪ ಸಮಾರಂಭದಲ್ಲಿ ಈ ಮಾತುಗಳನ್ನಾಡಿದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೈಂದೂರು ಉತ್ಸವ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ಜಾಗತಿಕ ಮಟ್ಟದಲ್ಲಿ ಬೈಂದೂರಿನ ಹಿರಿಮೆ ಹೆಚ್ಚಿಸಿದೆ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಜನರ ಸಹಭಾಗಿತ್ವ ಮುಖ್ಯ. ಆಗ ಮಾತ್ರ ಕಾರ್ಯಕ್ರಮ ಯಶಸ್ಸು ಕಾಣುತ್ತದೆ. ಬೈಂದೂರು ಉತ್ಸವದಲ್ಲಿ ಹರಿದು ಬಂದ ಲಕ್ಷಾಂತರ ಜನಸಮೂಹ ನೋಡಿದಾಗ ಅದ್ಭುತ ಯಶಸ್ಸಿನ ಸಂತೃಪ್ತಿಯಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ…
ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಶತಸಾರ್ಥಕ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷ ಗಂಗಾಧರ ಶೆಟ್ಟಿ, ಆಶಾ ಜಿ. ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ನಿರ್ದೇಶಕ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಹಿರಿಯಡ್ಕ ರೈತರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಇನ್ನಂಜೆ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ರಾಜೇಶ್ ರಾವ್, ಹೆಗ್ಗುಂಜೆ ಗ್ರಾಪಂ ಅಧ್ಯಕ್ಷ ರಾಮಕೃಷ್ಣ, ಕಾಡೂರು ಗ್ರಾಪಂ…
ಇಂದು ಶಿಕ್ಷಣ ಸಂಸ್ಥೆಗಳು ದೇಶದ ಭವಿಷ್ಯದ ಭದ್ರ ಬುನಾದಿಗೆ ಕಾರಣವಾಗಿವೆ. ಹೆಚ್ಚು ಹೆಚ್ಚು ಉತ್ತಮ ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಶಿಕ್ಷಣ ಸರ್ವರಿಗೂ ಸಿಗುವಂತಾಗಬೇಕು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ನೀಡಿದರೆ ಅದುವೇ ಅಮೂಲ್ಯ ಆಸ್ತಿಯಾಗುತ್ತದೆ. ಇಂದಿನ ಯುವ ಪೀಳಿಗೆಗೆ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯನ್ನು ಪರಿಚಯಿಸುವುದು ಅತ್ಯಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಕೋಟೇಶ್ವರ ಯಡಾಡಿ ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹೆಗ್ಗದ್ದೆ ಸ್ಟುಡಿಯೋ ಯೂಟ್ಯೂಬ್ ಚಾನಲ್ ನ ಸಂದೀಪ್ ಶೆಟ್ಟಿ ಮಾತನಾಡುತ್ತಾ “ಮಕ್ಕಳು ಎಳವೆಯಲ್ಲಿಯೇ ಕನಸು ಕಾಣಬೇಕು ಮತ್ತು ನನಸಾಗಿಸಲು ಪ್ರಯತ್ನಿಸಬೇಕು” ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡಿ, ಮಕ್ಕಳಿಗೆ ನಮ್ಮ ನಾಡಿನ ಆಚಾರ ವಿಚಾರಗಳನ್ನು ತಿಳಿಸುವುದು…
ಅಂಬಾಭವಾನಿ ಕ್ರಾಕರ್ಸ್ ಕಾರ್ಕಳ, ಈ ಬಾರಿಯ ದೀಪಾವಳಿ ಹಬ್ಬದ ಪ್ರಯುಕ್ತ ನಡೆಸಿದ ಪಟಾಕಿ ಮಾರಾಟದಲ್ಲಿ ಬಂದ ಲಾಭಾಂಶದಲ್ಲಿ ಈ ಬಾರಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಅಧಿಕ ಅಂಕ ಪಡೆದ ಕಾರ್ಕಳ ತಾಲೂಕಿನ ಆಟೋ ಚಾಲಕರ 50 ಮಂದಿ ಮಕ್ಕಳಿಗೆ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಮೂಲಕ ತಲಾ ರೂ. 5,000 ದಂತೆ ಒಟ್ಟು ರೂಪಾಯಿ 2,50,000 ಮೊತ್ತ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ. 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚಿನ ಅಂಕ ಪಡೆದ ಆಟೋ ಚಾಲಕರ ಮಕ್ಕಳು ಮತ್ತು ಪೋಷಕರು ಸಂಸ್ಥೆಯನ್ನು ಸಂಪರ್ಕಿಸಿ ವಿವರಗಳನ್ನು ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅವಿನಾಶ್ ಶೆಟ್ಟಿಯವರನ್ನು ಸಂಪರ್ಕಿಸಬಹುದು. 9844552182
“ಸಾಧನೆ” ಎಂದರೇನು ಎಂಬ ಪ್ರಶ್ನೆಯನ್ನು ಯಾರಿಗಾದರೂ ಕೇಳಿದರೇ ಬರುವ ಉತ್ತರ ಬಹಳ ವಿಭಿನ್ನವಾಗಿರುತ್ತದೆ. ಕೆಲವರಿಗೆ ಕಾರು, ಬಂಗಲೆ ಅಥವಾ ಹಣ ಮಾಡುವುದೇ ಸಾಧನೆಯಾದರೆ, ಹೆಸರು ಹಾಗೂ ಕೀರ್ತಿಗಳಿಸುವುದೇ ಇನ್ನು ಕೆಲವರಿಗೆ ಸಾಧನೆ ಆಗಿರುತ್ತದೆ. ಮತ್ತಷ್ಟು ಕೆದಕಿದರೆ ಅವರಿಂದ ಬರುವ ಉತ್ತರವೇನೆಂದರೆ ಅವರು ಗಳಿಸಿದ ಆ ವಸ್ತುಗಳ ಬಗ್ಗೆ, ಕೀರ್ತಿ ಮತ್ತು ಯಶಸ್ಸಿನ ಕುರಿತು ಸಮಾಜಕ್ಕೆ ತಿಳಿಸಿ, ಅದೇ ಸಮಾಜ ಅವರ ಸ್ಥಾನಮಾನವನ್ನು ಅವರ ಹಣ, ಕಾರು, ಬಂಗಲೆ, ಯಶಸ್ಸು, ಕೀರ್ತಿಯಿಂದ ಅಳೆದು ತೂಗಿ ನೀಡುವ ಪಟ್ಟವೇ ಸಾಧನೆಯಾಗಿರುತ್ತದೆ ಹೊರತು ಅದರಿಂದ ಕಿಂಚಿತ್ತೂ ತೃಪ್ತಿ ಅವರಿಗೆ ಸಿಕ್ಕಿರುವುದಿಲ್ಲ. ಅನಂತರದ ಬದುಕು ಆ ಪಟ್ಟವನ್ನು ಉಳಿಸಿಕೊಳ್ಳುವುದರೊಂದಿಗೆ ಮುಂದುವರೆಯುತ್ತಿರುತ್ತದೆ, ಸಾಧನೆಯ ಹಾದಿ ತಪ್ಪಿ ಹೋಗಿರುತ್ತದೆ. ನಿಮ್ಮಲ್ಲಿ ಹಣವಿರಲಿ ಇಲ್ಲದಿರಲಿ, ನೀವು ವಾಸಿಸುವ ಮನೆ, ವಾಹನ, ಬಟ್ಟೆಯ ತನಕ ಎಲ್ಲವನ್ನು ಗಮನಿಸಿ ನಿಮಗೊಂದು ಸ್ಥಾನ ಕಲ್ಪಿಸಿಕೊಡುತ್ತದೆ ಈ ಸಮಾಜ. ಹಾಗಾಗಿ ನಮಗೆ ಗೊತ್ತಿಲ್ಲದಂತೆ ನಾವು ತೋರಿಕೆಯ ಜೀವನ ಶೈಲಿಯನ್ನು ನಮ್ಮದಾಗಿಸಿಕೊಳ್ಳುತ್ತಾ ಹೋಗುತ್ತೇವೆ. ಸಮಾಜ ನಿರ್ಧರಿಸುವ ಆ ಒಂದು…
2024 ರ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ನವೆಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು ಜನರ ಬದುಕಿಗೆ ಬೆಳಕಾದ ಅಭಿವೃದ್ಧಿಯ ರೂವಾರಿ, ಧೈವ ದೇವಸ್ಥಾನಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿ, ಕರಾವಳಿಯ ನೂರಾರು ಸಂಘ ಸಂಸ್ಥೆಗಳಿಗೆ ನೆರವಿನ ಶಕ್ತಿ ನೀಡಿದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಒಲಿದು ಬಂದಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸಮಾರಂಭ ಜರಗಲಿದೆ ಎಂದು ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀರಾ ರೋಡ್ ನಿವಾಸಿಯಾದ ಕಳತ್ತೂರು ಅಂಗಡಿಗುತ್ತು ವೀರೇಂದ್ರ ವಿ ಶೆಟ್ಟಿ ಮತ್ತು ಶೀರೂರು ಮೂಡುಮನೆ ಸುಕನ್ಯಾ ವಿ ಶೆಟ್ಟಿ ದಂಪತಿಯ ಮಗನಾದ ಪ್ರಖ್ಯಾತ್ ವಿ ಶೆಟ್ಟಿಯವರಿಗೆ ನವೆಂಬರ್ 1 ರಂದು ಮಂಗಳೂರಿನಲ್ಲಿ 2024 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಇವರಿಗೆ ಕಲೆ, ಸಂಗೀತ, ಕ್ರೀಡೆ, ಶಿಕ್ಷಣ ಇವೆಲ್ಲದರಲ್ಲಿ ತುಂಬಾ ಆಸಕ್ತಿ ಇದ್ದು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಮತ್ತು ಹಲವಾರು ಬಂಗಾರದ ಪದಕವನ್ನು ಗೆದ್ದಿರುತ್ತಾರೆ. 2020 ರಲ್ಲಿ ಬಂಟರ ಸಂಘ ಮುಂಬಯಿ ಏರ್ಪಡಿಸಿದ “ಚಿಣ್ಣರ ಚಿಲಿಪಿಲಿ” ಎಂಬ ಫ್ಯಾಷನ್ ಶೋನಲ್ಲಿ ಭಾಗವಹಿಸಿ 2 ನೇ ಸ್ಥಾನವನ್ನು ಪಡೆದಿದ್ದರು. ಹಾಗೆಯೇ ಓದಿನಲ್ಲೂ ಸಹ ಮುಂದಿದ್ದು SSC ಯಲ್ಲಿ 93%, HSC ಯಲ್ಲಿ 88% ಅಂಕವನ್ನು ಪಡೆದು ಪಾಸಾದರು. MHT CET ಪರೀಕ್ಷೆಯಲ್ಲಿ 99 ಅಂಕವನ್ನು ಪಡೆದು ಭಾರತದ ಅತ್ಯಂತ ಕಠಿಣ ಪರೀಕ್ಷೆಯಾದ Jee Mains ಪರೀಕ್ಷೆಯಲ್ಲಿ 98.50 ಅಂಕವನ್ನು ಪಡೆದು ಸುರತ್ಕಲ್ ಎನ್…