Author: admin

ವಿದ್ಯಾಗಿರಿ: ‘ಜೀವನದಲ್ಲಿ ಒಮ್ಮೆಯಾದರೂ ರಕ್ತದಾನಿಯಾಗಿ, ಅದು ನೀವು ಸಮಾಜಕ್ಕೆ ನೀಡುವ ಅತ್ಯುತ್ತಮ ಸೇವೆಯಾಗುತ್ತದೆ’ ಎಂದು  ಲಯನ್ಸ್ 317ಡಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಗೀತಾ ರಾವ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಆರೋಗ್ಯ ಕೇಂದ್ರ, ಮಂಗಳೂರಿನ ಕೆಎಂಸಿ ಆಸ್ಪತ್ರೆ, ವೆನ್‌ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆ, ನಿಡ್ಡೋಡಿ ಲಯನ್ಸ್ ಕ್ಲಬ್, ಆಳ್ವಾಸ್ ಚಿಗುರು ವಿದ್ಯಾರ್ಥಿ ವೇದಿಕೆ, ಆಳ್ವಾಸ್ ಎನ್‌ಎಸ್‌ಎಸ್, ಆಳ್ವಾಸ್ ರೆಡ್‌ಕ್ರಾಸ್ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನವು ಶ್ರೇಷ್ಠ ದಾನವಾಗಿದ್ದು, ಅತ್ಯಂತ ಕಠಿಣ ಸಂದರ್ಭದಲ್ಲಿ ರಕ್ತದಾನ ಮಾಡಿ ನೆರವಾಗುವುದು ಅತ್ಯುತ್ತಮ ಸೇವೆಯಾಗಿದೆ ಎಂದರು. ಆಳ್ವಾಸ್ ಕಾಲೇಜು ಶಿಕ್ಷಣದ ಜೊತೆ ಸಂಸ್ಕೃತಿ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿದ್ದು, ಮಾನವೀಯ ಮೌಲ್ಯಗಳಿಗೆ ಒತತ್ತು ನೀಡುತ್ತಿದೆ. ರಕ್ತದಾನದಂತಹ    ಸಮಾಜ ಕಾರ್ಯಗಳ ಮೂಲಕ ನವ ಪೀಳಿಗೆಗೆ ಮಾದರಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ನಿಡ್ಡೋಡಿ ಲಯನ್ ಕ್ಲಬ್…

Read More

ಅಪರೂಪದ ಅವಕಾಶ ಸದುಪಯೋಗಪಡಿಸಿಕೊಳ್ಳಿ : ಕಾರ್ಕಳ ಬಿ.ಇ.ಓ. ಶ್ರೀ ಭಾಸ್ಕರ್ ಟಿ ದೇಶದ ಯುವ ಪೀಳಿಗೆಯನ್ನು ಸದೃಢ ನಾಯಕರನ್ನಾಗಿ ರೂಪಿಸಲು ರಚಿಸಿರುವ ಎನ್ ಎಸ್ ಎಸ್ ಸ್ವಯಂ ಸೇವಕರಾಗಿ ಶಿಬಿರಗಳಲ್ಲಿ ಭಾಗವಹಿಸುವುದು ಅಪರೂಪದ ಅವಕಾಶ ಇದರಲ್ಲಿ ಸಕ್ರೀಯವಾಗಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಿ ಎಂದು ಕಾರ್ಕಳದ ಬಿ.ಇ.ಓ. ಭಾಸ್ಕರ್ ಟಿ ಯವರು ಹೇಳಿದರು. ಇವರು ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿ, ಪದವು ಇಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಶಿಕ್ಷಣ ನೈಜ ಶಿಕ್ಷಣ : ಸವಿತಾ ಎರ್ಮಾಳ್ ಶಿಬಿರದ ದಿಕ್ಸೂಚಿ ಭಾಷಣ ಮಾಡಿದ ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಇವರು ಮಾತನಾಡಿ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳನ್ನು ಪ್ರಕೃತಿ ಶಿಕ್ಷಣಗಳೊಂದಿಗೆ ಕಲಿಸುವ ಮಾಧ್ಯಮವಾಗಿದೆ. ಜ್ಞಾನಸುಧಾದ ಎನ್.ಎಸ್.ಎಸ್. ಈ ನಿಟ್ಟಿನಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತ 10ನೇ ಶಿಬಿರವನ್ನು ನಡೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಜ್ಞಾನಸುಧಾದ ಡಾ.ಸುಧಾಕರ ಶೆಟ್ಟಿ ಸಮಾಜಕ್ಕೆ ಮಾದರಿ : ನವೀನ್ ನಾಯಕ್ ವಿದ್ಯಾರ್ಥಿಗಳ…

Read More

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು ಮತ್ತು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 47 ಚಿನ್ನ, 17 ಬೆಳ್ಳಿ ಮತ್ತು 07 ಕಂಚಿನ ಪದಕಗಳೊಂದಿಗೆ 71 ಪದಕದೊಂದಿಗೆ 4 ಕ್ರೀಡಾಕೂಟದ ನೂತನ ಕೂಟ ದಾಖಲೆಯನ್ನು ನಿರ್ಮಿಸುವ ಮೂಲಕ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಶಸ್ತಿ, ಪ್ರೌಢಶಾಲಾ 14ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ಪ್ರೌಢಶಾಲಾ 17ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯೊಂದಿಗೆ ಕ್ರೀಡಾಕೂಟದ ಸಮಗ್ರ ಚಾಂಪಿಯನ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ: ಬಾಲಕರ ವಿಭಾಗ : ಸುಭಾಷ್ ಎ…

Read More

ಪ್ರತಿಯೊಂದು ಕ್ರೀಡಾ ತಂಡಕ್ಕೂ ಮೆಂಟರ್‌ ಇರುತ್ತಾರೆ. ಅವರ ಮುಖ್ಯ ಪಾತ್ರ, ತಂಡಕ್ಕೆ ಮಾರ್ಗದರ್ಶನ ಮತ್ತು ಸಲಹೆಯನ್ನು ನೀಡುವುದು, ತಮ್ಮ ಅನುಭವ ಮತ್ತು ನೈಪುಣ್ಯತೆಯನ್ನ ತಂಡದ ಕ್ರೀಡಾಳುಗಳಿಗೆ ನೀಡುತ್ತ ತಂಡವನ್ನ ಗೆಲುವಿನ ಹಂತಕ್ಕೆ ಕೊಂಡೊಯ್ಯುವುದು. ಅವರು ಕ್ರೀಡಾಳುಗಳಿಗೆ ಸ್ಫೂರ್ತಿ ತುಂಬುವ ಪರಿ, ತಂಡವನ್ನು ಮುನ್ನೆಡೆಸುವ ರೀತಿ, ಮಾರ್ಗದರ್ಶನ ನೀಡುವ ವಿಧಾನ, ಇವರ ವಿವಿಧ ರೀತಿಯ ಪ್ರಯತ್ನಗಳು ತಂಡದ ಗೆಲುವಿನಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ರೀತಿಯ ಕಾರ್ಯತಂತ್ರಗಳನ್ನು ಕಾರ್ಪೋರೇಟ್‌ ಕಂಪೆನಿಗಳಲ್ಲಿ ಉದ್ಯೋಗಿಗಳ ಸಾಮರ್ಥ್ಯ ಹೆಚ್ಚಿಸಲು ಮತ್ತು ಉದ್ಯೋಗಿಗಳು ಇನ್ನೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು, ಕೆಲವು ತರಬೇತಿ ಕಾರ್ಯಾಗಾರಗಳನ್ನ ಹಮ್ಮಿಕೊಳ್ಳುತ್ತಾರೆ. ಇಲ್ಲಿ ನೀಡುವ ತರಬೇತಿಗಳಿಂದ ಕಂಪೆನಿಯ ಉತ್ಪಾದಕತೆಯೂ ಹೆಚ್ಚಾಗುತ್ತದೆ ಮತ್ತು ಉದ್ಯೋಗಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸುತ್ತದೆ. ಉದ್ಯೋಗಿಗಳ ವೈಯುಕ್ತಿಕ ಮಟ್ಟದಲ್ಲಿ ನೋಡುವುದಾದರೆ, ಈ ತರಬೇತಿ ಕಾರ್ಯಾಗಾರಗಳು ಸಂವಹನ ಕೌಶಲವನ್ನು ಹೆಚ್ಚಿಸುತ್ತದೆ, ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ, ಕಠಿನ ಸಮಯದಲ್ಲಿ ಪರಿಸ್ಥಿತಿ ನಿಭಾಯಿಸುವಂತಹ ಸಾಮರ್ಥ್ಯವನ್ನು ನೀಡುತ್ತದೆ. ಉದ್ಯೋಗಿಗಳ ಪರಸ್ಪರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತುಕೊಂಡು ಸಹಕರಿಸಲು ಅನುವು ಮಾಡಿಕೊಡುತ್ತದೆ.…

Read More

ಕಷ್ಟಪಟ್ಟು ಕೆಲಸ ಮಾಡುವ ವ್ಯಕ್ತಿಗೆ, ಸೂಕ್ತ ಮಾರ್ಗದರ್ಶನ, ಸಲಹೆಗಳು ಉತ್ತಮ ವೇಗೋತ್ಕರ್ಷದಂತೆ ಕೆಲಸ ಮಾಡಬಲ್ಲದು ಎಂಬುದಕ್ಕೆ ನಿತ್ಯಾನಂದ ಶೆಟ್ಟಿ ಮಂದಾರ್ತಿಯವರ ಸಾಧನೆಯೇ ಸಾಕ್ಷಿ. ಬೆಂಗಳೂರಿನ ದೊಡ್ಡ ಬಾಣಸವಾಡಿಯಲ್ಲಿ ‘ಉಡುಪಿ ಶ್ರೀ ಮಂದಾರ್ತಿ ವೈಭವ’ ಎಂಬ ಸುಸಜ್ಜಿತ ರೆಸ್ಟೋರೆಂಟ್ ಮತ್ತು ಪಾರ್ಟಿ ಹಾಲ್ ವ್ಯವಸ್ಥೆಗೊಳಿಸಿರುವ ನಿತ್ಯಾನಂದ ಶೆಟ್ಟಿಯವರು, ಆ ಸುತ್ತಲಿನ ಜನರ ಮೆಚ್ಚುಗೆ ಗಳಿಸಿದ್ದಾರೆ. ಜೊತೆಗೆ ಕೇಳಿದ ಕಡೆ ಗುಣಮಟ್ಟದ ಆಹಾರ ಸರಬರಾಜು ಮಾಡುವ ವ್ಯವಸ್ಥೆಯನ್ನು ರೂಢಿಸಿಕೊಂಡಿದ್ದು, ಬೆಂಗಳೂರಿನ ಯಾವುದೇ ಭಾಗಕ್ಕೆ ರುಚಿಕರ ಆಹಾರ, ತಿಂಡಿ ತಿನಿಸುಗಳನ್ನು ಸಮಯಕ್ಕೆ ಸರಿಯಾಗಿ ಸರಬರಾಜು ಮಾಡಬಲ್ಲರು. ಇತ್ತೀಚೆಗೆ ದೊಡ್ಡ ಬಾಣಸವಾಡಿಯಲ್ಲಿ ಆರಂಭಗೊಂಡಿರುವ ‘ಉಡುಪಿ ಶ್ರೀ ಮಂದಾರ್ತಿ ವೈಭವ’ ಈಗಾಗಲೇ ಜನ ಮೆಚ್ಚುಗೆ ಗಳಿಸಿದ್ದು, ಇಲ್ಲಿನ ತಿನಿಸುಗಳ ರುಚಿಗೆ ಜನರು ಮಾರು ಹೋಗಿದ್ದಾರೆ. ದೊಡ್ಡ ಬಾಣಸವಾಡಿಯಲ್ಲಿ ‘ಉಡುಪಿ ಶ್ರೀ ಮಂದಾರ್ತಿ ವೈಭವ, ರೆಸ್ಟೋರೆಂಟ್ ಆರಂಭಿಸಲು ಸ್ಪೂರ್ತಿ ಎಲ್ಲಿಂದ ಬಂತು ಎಂದು ಕೇಳಿದಾಗ, ಅವರಾಡಿದ ಮಾತುಗಳು ಹೃದಯಸ್ವರ್ಶಿ. ವಿಶ್ವವಾಣಿಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ನನ್ನಲ್ಲಿದ್ದ ಉದ್ಯಮಶೀಲತೆಯನ್ನು…

Read More

 ಮೂಡುಬಿದಿರೆ: 2024 ಸೆಪ್ಟೆಂಬರ್‍ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬಿ.ಕಾಂ. ವಿದ್ಯಾರ್ಥಿಯಾದ ಸುಶಾಂತ್ 380 ಅಂಕಗಳೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ 36ನೇ ರ‍್ಯಾಂಕ್‌ ಗಳಿಸಿರುತ್ತಾರೆ. ಇವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ರಿತ್ವಿಕ್ ಜೆ ಶೆಟ್ಟಿ (327), ಸ್ಮಿತಾ ಎಸ್ ಹೆಗ್ಡೆ (301) ಮತ್ತು ಜ್ಯೋತಿ(300) ಇವರು ಗ್ರೂಪ್ -01 ಮತ್ತು ಗ್ರೂಪ್ -02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇಂಟರ್‍ಮೀಡಿಯಟ್ ಗ್ರೂಪ್ -01 ವಿಭಾಗದಲ್ಲಿ ಕಿರಣ್ (167), ಶ್ರೀರಕ್ಷಾ (165) ಮತ್ತು ಪ್ರೀತಮ್ ವಿ ನಾಯ್ಕ್ (150) ಇವರು ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್ -02 ವಿಭಾಗದಲ್ಲಿ ಮಯೂರಿ (173), ಕಲ್ಪನಾ ಗಜಾನನಾ ಹೆಗ್ಡೆ (170), ಸಿ ಶ್ರೇಯಾಂಕ್ ನಾಯಕ್ (164), ಪಲ್ಲವಿ ಆರ್ (160), ವಿಕ್ರಾಂದ್ ಪುಂಡಲೀಕ್ (159), ಪಾಯಲ್ ಜೆ ಬಂಗೇರಾ (155), ಅನನ್ಯ ಕೆ (151), ಸ್ಪರ್ಶ…

Read More

ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುವುದು ಸಹಕಾರಿ ಕ್ಷೇತ್ರದಿಂದ ಮಾತ್ರ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು. ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಮಂದಾರ್ತಿ ರಥಬೀದಿಯಲ್ಲಿ ನಡೆದ ಶತಸಾರ್ಥಕ್ಯ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ, ಸ್ಮರಣ ಸಂಚಿಕೆ ಬಿಡುಗಡೆ ಬಿಡುಗಡೆ ಮಾಡಿ ಭಾನುವಾರ ಮಾತನಾಡಿದರು. ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, 1925 ರಲ್ಲಿ ಆರಂಭಗೊಂಡ ಸಂಘವನ್ನು ಎಲ್ಲರೂ ತಮ್ಮ ಶ್ರಮದಿಂದ ಕಟ್ಟಿ ಬೆಳೆಸಿದ್ದಾರೆ. ಹಿಂದಿನ ಎಲ್ಲಾ ಅಧ್ಯಕ್ಷರು, ಸಿಇಒ ಉತ್ತಮ ಸೇವೆ ಸಲ್ಲಿಸಿದ್ದಾರೆ. ಸಿಬ್ಬಂದಿಯ ವಿನಯ, ವಿಧೇಯತೆಯಿಂದ ಸಂಸ್ಥೆ ಸೇವೆ ಸಲ್ಲಿಸುತ್ತಾ ಬಂದಿದ್ದರಿಂದ ಮತ್ತು ಗ್ರಾಹಕರ ಸಹಕಾರದಿಂದ ಇಂದು 100 ಕೋಟಿ ಠೇವಣಿ ಸಂಗ್ರಹ ಮಾಡಲು ಸಾಧ್ಯವಾಯಿತು ಎಂದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್ ಗಳ ಕಾನೂನು ಮತ್ತು ಭಾಷೆಯ ಗೊಂದಲಗಳಿಂದ ವಾಣಿಜ್ಯ ಬ್ಯಾಂಕ್…

Read More

ಮಣಿಪುರ ಗ್ರಾಮದಲ್ಲಿರುವ ಕುಂತಳ ನಗರದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘ ಇವರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನ ವತಿಯಿಂದ ಎಂ ಆರ್ ಜಿ ಗ್ರೂಪ್‌ನ ಪ್ರಾಯೋಜಕತ್ವದಲ್ಲಿ 3 ನೇ ಬಾರಿಗೆ ಬೃಹತ್ ಎರಡು ದಿನಗಳ ಉದ್ಯೋಗ ಮೇಳ ನವೆಂಬರ್ 16 (ಶನಿವಾರ) ಮತ್ತು 17 (ಭಾನುವಾರ) ರಂದು ನಡೆಯಲಿದೆ ಎಂದು ಗ್ರಾಮೀಣ ಬಂಟರ ಸಂಘದ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿಯವರು ತಿಳಿಸಿದರು. ಅವರು ಕಾಪು ಪತ್ರಿಕಾ‌ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಬಾರಿ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಕಾರ್ಯಕ್ರಮವನ್ನು ನವೆಂಬರ್ 16 ರಂದು ಶನಿವಾರ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ ಮಣಿಪುರ ಉಡುಪಿ ಇವರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನಲ್ಲಿ ಎಂ ಆರ್ ಜಿ ಗ್ರೂಪ್ ಇದರ ಛೇರ್ಮನ್ ಡಾ| ಕೆ ಪ್ರಕಾಶ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದರು, ಮಂತ್ರಿಗಳು ಶಾಸಕರು, ಮಾಜಿ ಶಾಸಕರು ಮತ್ತು ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ.…

Read More

ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ಸಂಜೆ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್ ಬಂಟರ ಸಂಘದ ನಿರ್ದೇಶಕ, ಉದ್ಯಮಿ ಗಿರೀಶ್ ಎಂ.ಶೆಟ್ಟಿ ಕಟೀಲು ಅವರು, “ಯಕ್ಷಗಾನಕ್ಕೆ ಇಂದು ಬಹಳಷ್ಟು ಗೌರವವಿದೆ. ಮಕ್ಕಳು ಇಂದಿನ ಕಾಲದಲ್ಲಿ ಯಾಕೆ ಯಕ್ಷಗಾನ ಕಲಿಯಬೇಕು ಅನ್ನುವ ಬಗ್ಗೆ ನಾವು ಯೋಚಿಸಬೇಕು. ಯಾಕೆಂದರೆ ಈ ಕಲೆ ಎಲ್ಲರಿಗೂ ಒಲಿಯುವುದಿಲ್ಲ. ಯಕ್ಷಗಾನ ಮಕ್ಕಳ ಸ್ಮರಣಶಕ್ತಿಯ ಜೊತೆ ಜ್ಞಾನವನ್ನು ಹೆಚ್ಚಿಸುತ್ತದೆ. ಸುರತ್ಕಲ್ ನ ಮಕ್ಕಳು ಪುಣ್ಯವಂತರು. ಯಕ್ಷಗುರು ರಾಕೇಶ್ ರೈ ಅವರಂತಹ ಗುರು ಅವರಿಗೆ ಸಿಕ್ಕಿದ್ದಾರೆ. ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು“ ಎಂದರು. ಸಂಘದ ನಿಕಟಪೂರ್ವ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಮಾತನಾಡಿ, “ಯಕ್ಷಗಾನಕ್ಕೆ ಜಾತಿ ಮತದ ಹಂಗಿಲ್ಲ. ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಕ್ಷಗಾನ ಕಲೆಗೆ ಮನ್ನಣೆ ಸಿಗುತ್ತಿದೆ. ಇದು ನಿಜಕ್ಕೂ…

Read More

ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಲಾಸಂಭ್ರಮವಾಗಿ ಇದೇ ನವೆಂಬರ್ 11ರಿಂದ 17ರ ವರೆಗೆ ನಡೆಯುವ 12ನೇ ವರ್ಷದ ನುಡಿ ಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ರಲ್ಲಿ ಸಾಧಕ ಕಲಾವಿದರ ಸಮ್ಮಾನ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಕೀರ್ತಿಶೇಷ ಕಲಾವಿದರ ಸಂಸ್ಮರಣಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಈ ಸಂದರ್ಭ ನವೆಂಬರ್ 12 ರಂದು ತೆಂಕು ತಿಟ್ಟಿನ ಹಿರಿಯ ಕಲಾವಿದ ಅರುವ ಕೊರಗಪ್ಪ ಶೆಟ್ಟರಿಗೆ ದಿ.ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಪ್ರಶಸ್ತಿ ಮತ್ತು ದಿನಾಂಕ 17ರಂದು ಸಮಾರೋಪ ಸಮಾರಂಭದಲ್ಲಿ ಹವ್ಯಾಸಿ ಭಾಗವತ ಮತ್ತು ಪ್ರಸಂಗಕರ್ತ ಕೆ.ಎಸ್. ಮಂಜುನಾಥ ಶೇರೆಗಾರ್ ಹರಿಹರಪುರ ಅವರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ನೀಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಹಾಗೂ ಕರ್ನಾಟಕ ಯಕ್ಷ ಭಾರತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ. ತೆಂಕುತಿಟ್ಟು ಯಕ್ಷಗಾನದಲ್ಲಿ ರಂಗಸ್ಥಳದ ರಾಜ ಎಂದೇ ಖ್ಯಾತರಾದ ಅರುವ ಕೊರಗಪ್ಪ ಶೆಟ್ಟರು…

Read More