Author: admin
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ ತೋನ್ಸೆ ಪುಷ್ಕಳ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು, ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್, ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರ ನಾಯ್ಕ ಮಾಡೂರು ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಡಾ ಎಂ ಪ್ರಭಾಕರ ಜೋಶಿ, ಜಬ್ಬಾರ್ ಸಮೋ ಸಂಪಾಜೆ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ, ಪ್ರೊ ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಆಯ್ಕೆಯಾದರು.ಇದೇ ಸಂದರ್ಭದಲ್ಲಿ ಜೂನ್ 1 ರಂದು…
ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದಿಲ್ ರಾಜ್ ಆಳ್ವ ಆಯ್ಕೆಯಾಗಿದ್ದಾರೆ. ದಿಲ್ ರಾಜ್ ಆಳ್ವ ಅವರು ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಕ್ರೀಯರಾಗಿದ್ದಾರೆ. ಅವರು ದ.ಕ. ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಸಮಾಜಪರ ಚಿಂತನೆಯುಳ್ಳ ದಿಲ್ ರಾಜ್ ಆಳ್ವರವರು ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈಗ ಕದ್ರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಶ್ರೀಯುತ ಬಿ. ಜಯಕರ ಶೆಟ್ಟಿಯವರು ಮಾತನಾಡಿ, ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣಕ್ಕಾಗಿ ಸರಕಾರವು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆರಂಭಿಸಿದೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಅನಾವರಣಗೊಳಿಸುವ ಪ್ರಯತ್ನ ಆಗಬೇಕು. ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಬೇಸಿಗೆ ಶಿಬಿರಗಳು ಕೂಡ ಮಕ್ಕಳಿಗೆ ಉತ್ತಮ ವೇದಿಕೆಯಾಗಿದ್ದು ಅಲ್ಲಿ ಕಲಿಸಿಕೊಡುವ ಕೌಶಲಗಳು, ಸಂಸ್ಕಾರವನ್ನು ಮಕ್ಕಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಂಡು ಭವಿಷ್ಯದ ಉತ್ತಮ ಪ್ರಜೆಗಳಾಗಿ ಬಾಳುವಂತಾಗಬೇಕು ಎಂದರು. ರಘುಸನ್ ಟೈಲ್ಸ್…
ರಕ್ಷಾ ರಾಮ್ಚಂದ್ರ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಮೊದಲ ಸ್ಥಾನ ಗಣಿತ ನಗರ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ನಾಯಕ್ ರಕ್ಷಾ ರಾಮಚಂದ್ರ 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿರುತ್ತಾರೆ. ಇವರು ಮೂಲಗಣಿತ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕವನ್ನು, ಇಂಗ್ಲಿಷ್ನಲ್ಲಿ 98 ಹಾಗೂ ಹಿಂದಿಯಲ್ಲಿ 99 ಅಂಕ ಪಡೆದಿದ್ದಾರೆ. ಈಕೆ ಬೈಲೂರು ನಿವಾಸಿಯಾದ ರಾಮ್ಚಂದ್ರ ನಾಯಕ್ ಮತ್ತು ಅನುಪಮ ನಾಯಕ್ ದಂಪತಿಗಳ ಸುಪುತ್ರಿ. ವಿಜ್ಞಾನ ವಿಭಾಗದಲ್ಲಿ ಆಸ್ತಿ ಎಸ್ ಶೆಟ್ಟಿ 596 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಜಿಲ್ಲೆಗೆ ಮೊದಲ ಸ್ಥಾನಿಯಾಗಿ ಹೊರಹೊಮ್ಮಿದ್ದರು. ಸಂಸ್ಥೆಯು ಮರುಮೌಲ್ಯಮಾಪನದ ಮೂಲಕ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 37 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮೊದಲ ಹತ್ತು…
ಮೂಡುಬಿದಿರೆ: ಭಾರತ ದೇಶ ಮಾತ್ರವಲ್ಲದೇ ಇಡೀ ಜಗತ್ತಿಗೆ ಡ್ರಗ್ಸ್ ಅತ್ಯಂತ ಅಪಾಯಕಾರಿ ವ್ಯವಸ್ಥೆಯಾಗಿ ಮಾರ್ಪಟ್ಟಿದೆ. ಇಂದಿನ ಯುವಕರು, ವಿದ್ಯಾರ್ಥಿಗಳು ನಶೆಗಾಗಿ ಸೇವನೆ ಮಾಡುವುದರಿಂದ ತಮ್ಮ ಜೀವನವನ್ನು ತಾವೇ ಹಾಳು ಮಾಡುಕೊಳ್ಳುತ್ತಿದ್ದಾರೆ. ಭಾರತದ ಶಕ್ತಿಯೇ ಯುವಕರು. ದೇಶದ ಯುವಶಕ್ತಿಯನ್ನು ಡ್ರಗ್ಸ್ ಮುಕ್ತರನ್ನಾಗಿಸಲು ಎಲ್ಲರೂ ಕೈ ಜೋಡಿಸಿಬೇಕು ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸಮಾಜಕಾರ್ಯ ವಿಭಾಗದ ‘ರಜತ ಮಹೋತ್ಸವ’ದ ಅಂಗವಾಗಿ ಸುಂದರಿ ಆನಂದ ಆಳ್ವ ಕ್ಯಾಂಪಸ್ನಿಂದ ಮೂಡುಬಿದಿರೆ ತಾಲೂಕು ಕಚೇರಿಯವರೆಗೆ ಮಂಗಳವಾರ ನಡೆದ “ಮಾದಕ- ದ್ರವ್ಯ ವಿರೋಧಿ ಜಾಗೃತಿ ಜಾಥಾ” ದಲ್ಲಿ ಪಾಲ್ಗೊಂಡು ಮಾತನಾಡಿದರು. ಮೂಡುಬಿದಿರೆಯ ವಿವಿಧ ಕಾಲೇಜು ಮತ್ತು ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಮುಕ್ತ ಜಾಥಾ ನಿರ್ಮಿಸಲು ನಡೆಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾದಲ್ಲಿ ಕಾಲ್ನಡಿಗೆಯ ಮೂಲಕ ಪಾಲ್ಗೊಂಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು. ಡ್ರಗ್ಸ್ನಿಂದ ವಿದ್ಯಾರ್ಥಿಗಳು ಸಂಪೂರ್ಣವಾಗಿ ದೂರವಿದ್ದು ಡ್ರಗ್ಸ್ ಸೇವನೆ ಮಾಡುವವರನ್ನು ವಿರೋಧಿಸಬೇಕು ಎಂದು ತಿಳಿಸಿದರು. ಮೂಡುಬಿದಿರೆ ಸರ್ಕಲ್ ಇನ್ಸ್ಪೆಕ್ಟರ್…
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಮಾತನಾಡಿ, ನಮ್ಮ ಬದುಕಿಗೆ ಅಗತ್ಯವಾದ ಕಲೆಗಳನ್ನು, ತತ್ವಗಳನ್ನು, ಕೌಶಲಗಳನ್ನು, ಬೇಸಿಗೆ ಶಿಬಿರದಲ್ಲಿ ಕಲಿಸಿ ಕೊಡುತ್ತಾರೆ. ಅವುಗಳನ್ನು ಮಕ್ಕಳು ಜೀವನದುದ್ದಕ್ಕೂ ಅಳವಡಿಸಿಕೊಂಡು ಬದುಕನ್ನು ಇನ್ನಷ್ಟು ಸರಳವಾಗಿಸಿ ಉಲ್ಲಾಸಮಯವಾಗಿರಿಸಿಕೊಳ್ಳಬಹುದು. ಶಿಕ್ಷಣದಲ್ಲಿ ಪಾಠ ಅಧ್ಯಯನದ ಜೊತೆ ಬದುಕನ್ನು ಕಟ್ಟಿ ಕೊಡುವ ಪಠ್ಯೇತರ ಚಟುವಟಿಕೆಗಳ ಕಲಿಕೆ ಅತ್ಯಗತ್ಯ. ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯವಾಗಿದೆ. ಈ ತರಬೇತಿ ಕಾರ್ಯಕ್ರಮಗಳು, ಮಾಹಿತಿ ಕಾರ್ಯಕ್ರಮಗಳು, ಚಟುವಟಿಕೆಗಳು ನಮ್ಮ ಬದುಕನ್ನು ಪರಿಪೂರ್ಣತೆಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ. ಈ ಸಂಸ್ಥೆಯು ಇಂತಹ ಒಂದು ಉತ್ಕೃಷ್ಟ ಮಟ್ಟದ ಬೇಸಿಗೆ ಶಿಬಿರವನ್ನು…
ನಿಮ್ಮ ಪ್ರೀತಿ ಪಾತ್ರರೊಂದಿಗೆ ಶಾಂತತೆಯಿಂದ ಸಮಯ ಕಳೆಯಲು ತಕ್ಕ ಸ್ಥಳವನ್ನು ಹುಡುಕುತ್ತಿದ್ದೀರಾ? ಮಂಗಳೂರಿನ ಪ್ರಸಿದ್ಧ ಕಟೀಲು ದೇವಾಲಯದ ಬಳಿ ಇರುವ ಎಸ್ಬಿಎಸ್ ಫಾರ್ಮ್ಹೌಸ್ (ಸುಗಂಧಿ ಬೋಜ ಶೆಟ್ಟಿ ಫಾರ್ಮ್ಹೌಸ್) ನಿಮಗೆ ಸರಿಯಾದ ಆಯ್ಕೆ. ಇದು ನಗರದ ಓಡಾಟದಿಂದ ದೂರವಿದ್ದು, ನಿಸರ್ಗದ ಸೌಂದರ್ಯವನ್ನು ಅನುಭವಿಸಲು ಮತ್ತು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಅಮೂಲ್ಯ ಕ್ಷಣಗಳನ್ನು ರಚಿಸಲು ಶಾಂತವಾದ ಪರಿಸರವನ್ನು ನೀಡುತ್ತದೆ. ನಿಸರ್ಗದ ಸೌಂದರ್ಯದಲ್ಲಿ ವಿಶ್ರಾಂತಿ : ಎಸ್ಬಿಎಸ್ ಫಾರ್ಮ್ಹೌಸ್ ಹಸಿರು ಹೊಲಗಳು, ಎತ್ತರದ ಮರಗಳು ಮತ್ತು ತಾಜಾ ಗಾಳಿಯಿಂದ ಆವರಿತವಾಗಿದೆ. ಇಲ್ಲಿ ನೀವು ದಿನನಿತ್ಯದ ಒತ್ತಡ ಮತ್ತು ಗದ್ದಲವನ್ನು ಮರೆತು, ನಿಜವಾದ ವಿಶ್ರಾಂತಿಯ ಅನುಭವ ಪಡೆಯಬಹುದು. ಮರಗಳ ನೆರಳಿನಲ್ಲಿ ಕುಳಿತುಕೊಳ್ಳುವುದು ಅಥವಾ ಹುಲ್ಲಿನ ಮೇಲೆ ನಡೆಯುವುದು, ಇದಕ್ಕೆಲ್ಲ ನಿಸರ್ಗದ ಶಾಂತಿಯೇ ಸಾಥಿ. ಇದು ಶಾಂತವಾದ ಸ್ಥಳವಾದರೂ, ತುಂಬಾ ಸುಲಭವಾಗಿ ತಲುಪಬಹುದಾಗಿದೆ. ಕಿನ್ನಿಗೋಳಿ, ಮುಲ್ಕಿ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಜ್ಪೆ) ಇವೆಲ್ಲದರ ಹತ್ತಿರವಿರುವ ಈ ಸ್ಥಳ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಸಹ ಸುಲಭವಾದ…
ಟೀಚರ್ರು ಬುಕ್ ಹಿಡ್ಕೊಂಡ್ ಏನೋ ಹೇಳ್ಕೊಡ್ತಾ ಇದಾರೆ. ನಾವ್ ಓದುತ್ತ ಇದ್ದೇವೆ ಅನ್ನೋ ಮೈಂಡ್ ಸೆಟ್. ಓದಿದ್ವಾ.. ಪರೀಕ್ಷೆ ಬರೆದ್ವಾ… ಮಾರ್ಕ್ಸ್ ಬಂತಾ… ಅಷ್ಟೇ… ಅಷ್ಟೇ… (ಬರಿಯ ಓದಿನಿಂದ ಏನೇನೂ ಪ್ರಯೋಜನವಿಲ್ಲ ಎಂಬುದನ್ನರಿಯದ ಮಕ್ಕಳು) ಕೌಶಲ್ಯ ಹೀನತೆ : ಸ್ಕಿಲ್ ಸೆಟ್ ಎಂಬ ಪದ ಪರಿಚಯವೇ ಇಲ್ಲದ ಅಕಾಡೆಮಿಕ್ಸ್… ತತ್ಪರಿಣಾಮವಾಗಿ ಕೌಶಲ್ಯ ಹೀನರಾಗಿ ಹೊರಬರುತ್ತಿರೋ ವಿದ್ಯಾರ್ಥಿಗಳು. (ಶಿಕ್ಷಣದಲ್ಲಿ ಯಾವುದೇ ರೀತಿಯ ಸ್ಕಿಲ್ ಸೆಟ್ ಹೇಳಿಕೊಡದ ಶಾಲಾ ಕಾಲೇಜುಗಳು. ವಿದ್ಯಾರ್ಥಿ ದೆಸೆಯಲ್ಲಿ ಯಾವುದೇ ಕೆಲಸ ಕಲಿಯಲು ಆಸಕ್ತಿ ತೋರದ. ಸದಾ ಮೊಬೈಲ್ ಉಜ್ಜಿಕೊಂಡು ಬಿದ್ದಿರುವ ಹುಡುಗರು. ಎರಡು ಕತ್ತೆ ವಯಸ್ಸಾದ್ರೂ ಅವರನ್ನು ಮಗೂ… ಮಗೂ ಅಂತ ಮುದ್ದು ಮಾಡಿಕೊಂಡೇ ಇರೋ ಪೇರೆಂಟ್ಸು ಮೂವರೂ ಸಮಾನ ದ್ರೋಹಿಗಳು) ಗುರಿಹೀನ ಯುವಜನತೆ : ನೋ ಏಮ್ ಇನ್ ಲೈಫ್… ಕೆಲಸಕ್ಕೆ ಬಾರದ ಸರ್ಟಿಫಿಕೇಟುಗಳನ್ನು ಹಿಡಿದುಕೊಂಡು ಬರೋಬ್ಬರಿ ಇಪ್ಪತ್ತೊಂದು ವರ್ಷ ಶಾಲೆಗೆ ಮಣ್ಣು ಹೊತ್ತು ಹೊರಬಂದು ಒಂದು ಟೀ ಕಾಫಿ ತಯಾರಿಸಲು ಅರಿವಿಲ್ಲದೆ ಕೆಕರುಮಕರಾಗಿ ಅತ್ತಿತ್ತ ನೋಡುವ…
ಜ್ಞಾನ ಎನ್ನುವುದು ಸರ್ವಶ್ರೇಷ್ಠ ಸಂಪತ್ತು. ಅ ಸಂಪತ್ತು ನಮ್ಮದಾಗಬೇಕಾದರೆ ಹೆಚ್ಚು ಹೆಚ್ಚು ಪುಸ್ತಕಗಳ ಓದು ಅಗತ್ಯ. ಎಲ್ಲ ಹವ್ಯಾಸಗಳಿಗಿಂತಲೂ ಉತ್ತಮವಾಗಿರುವಂತದ್ದು ಓದಿನ ಅಭ್ಯಾಸ. ಪುಸ್ತಕಗಳನ್ನು ನಮ್ಮ ಉತ್ತಮ ಸ್ನೇಹಿತನನ್ನಾಗಿಸಿಕೊಂಡರೆ ಬಾಳಿಗೆ ಬೆಳಕ ತೋರಿಸಬಲ್ಲದು; ಮನುಷ್ಯನನ್ನು ಯಶಸ್ಸಿನ ಉತ್ತುಂಗಕ್ಕೇರಿಸಬಲ್ಲದು; ನಮ್ಮಲ್ಲಿ ಆತ್ಮವಿಶ್ವಾಸವನ್ನೂ ಹೆಚ್ಚಿಸಬಲ್ಲದು. ಮನುಕುಲದ ಬೆಳವಣಿಗೆಯಲ್ಲಿಯೂ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತವೆ. ಓದುವುದು ಮಾನವನ ಜೀವನದ ಚಿರಂತನ ದಾಹ.. ಒಮ್ಮೆ ಅಂಟಿದ ಓದಿನ ನಂಟು ಬಾಳ ಹೊತ್ತಗೆಯಲ್ಲಿ ಸ್ಥಿರವಾಗಿರುತ್ತದೆ. ಓದು ನಮ್ಮ ಜೀವನದ ಅವಿಭಾಜ್ಯ ಅಂಗ ಎಂದರೆ ತಪ್ಪಾಗಲಾರದು. ಬೆಳಿಗ್ಗೆ ಎದ್ದ ತಕ್ಷಣ ಪತ್ರಿಕೆ ಮನೆಬಾಗಿಲಿಗೆ ಬರುವುದು ತಡವಾದರೆ ಏನೋ ಚಡಪಡಿಕೆ. ನಮಗೆ ಬೇಕಾದ ಪುಸ್ತಕವೊಂದು ಸಿಗದೇ ಇದ್ದಾಗ ಏನೋ ಕಿರಿಕಿರಿ. ಲೈಬ್ರೆರಿಗಳಲ್ಲಿ, ಪುಸ್ತಕದ ಅಂಗಡಿಗಳಲ್ಲಿ ಸಿಗದೇ ಹೋದಾಗ ಅವರಿವರಿಗೆ ಸಂದೇಶ, ದೂರವಾಣಿ ಮಾಡಿಯಾದರೂ ಮಾಡಿ ಆ ಪುಸ್ತಕವನ್ನು ಕಷ್ಟ ಪಟ್ಟು ಸಂಗ್ರಹಿಸಿ ಓದಿದಾಗ ಆಗುವ ಆನಂದವನ್ನು ಬಣ್ಣಿಸಲಾಗದು.ಲ ಒಟ್ಟಿನಲ್ಲಿ ಈ ‘ಓದು’ ಎಂಬ ಎರಡಕ್ಷರದಲ್ಲಿ ಮಾಂತ್ರಿಕ ಶಕ್ತಿ ಇದೆ. ನಾವು ಏನೋ…
ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ ಕಾಟಿಪಳ್ಳ ಇಲ್ಲಿ ಎಪ್ರಿಲ್ 18 ರಿಂದ 26 ರವರೆಗೆ ಬ್ರಹ್ಮಕಲಶೋತ್ಸವ, ಬ್ರಹ್ಮ ರಥೋತ್ಸವ, ನಾಗಮಂಡಲೋತ್ಸವ ನಡೆಯುತ್ತಿದ್ದು, ಪ್ರತೀ ದಿನ ಧಾರ್ಮಿಕ ಸಮಾರಂಭ ನಡೆಯುತ್ತಿದೆ. ಎಪ್ರಿಲ್ 22 ರಂದು ನಡೆದ ಧಾರ್ಮಿಕ ಸಮಾರಂಭದಲ್ಲಿ ಮಹಾದಾನಿ, ಮುಂಬಯಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಅನಿಲ್ ಶೆಟ್ಟಿ ತೇವು ಸೂರಿಂಜೆ ಅವರನ್ನು ಸನ್ಮಾನಿಸಲಾಯಿತು. ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರುವ ಅನಿಲ್ ಶೆಟ್ಟಿ ಅವರ ಸೇವಾ ಸಾಧನೆಯನ್ನು ಗುರುತಿಸಿ ಗಣೇಶಪುರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭ ಥಾಣೆ ಬಂಟ್ಸ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಎಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ ದೇವೇಂದ್ರ ಕೆ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.















