Author: admin

ಬಂಟ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಬಂಟರ ಸಂಘಗಳ ಸಹಕಾರದ ಜೊತೆ ಪೋಷಕರ ಪ್ರೋತ್ಸಾಹವೂ ಅತ್ಯಗತ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು. ಅವರು ಮುಚ್ಚೂರಿನ ಮಿಥಿಲಾ ಸಭಾಭವನದಲ್ಲಿ ಮುಚ್ಚೂರು ಕೊಂಪದವು ಬಂಟರ ಸಂಘದ ತೃತೀಯ ವಾರ್ಷಿಕೋತ್ಸವ ಸಂದರ್ಭ ಬಂಟರಿಂದ ಬಂಟರಿಗಾಗಿ ಶಿಕ್ಷಣ ಮತ್ತು ಆರೋಗ್ಯ ಚಿಕಿತ್ಸಾ ಸಹಾಯ ಯೋಜನೆ ‘ಬೊಲ್ಪು’ ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿ.ಎ. ಅಶೋಕ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಸಹಕಾರ ನೀಡುವ ಅಗತ್ಯ ಇದೆ ಎಂದರು. ಮುಚ್ಚೂರು ಕೊಂಪದವು ಬಂಟರ ಸಂಘದ ಅಧ್ಯಕ್ಷ ಬಿ. ವಿದ್ಯಾಧರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದು, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಬಿ. ಜೈರಾಜ್ ರೈ, ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಗುತ್ತಿಗೆದಾರ ಸಂತೋಷ್ ಕುಮಾರ್ ಹೆಗ್ಡೆ, ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಕಾವೂರು ಬಂಟರ ಸಂಘದ ಅಧ್ಯಕ್ಷ…

Read More

ಮಂದಾರ್ತಿ ಸೇವಾ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದೆ. 1925ರ ಜನವರಿ 14ರಂದು ಶಿರೂರು ಗ್ರಾಮದಲ್ಲಿ ಊರಿನ ಹಿರಿಯರು ಸಹಕಾರಿ ಸಂಘವನ್ನು ಆರಂಭಿಸಿದ್ದರು. ಮೊದಲ ವರ್ಷ ಸಂಘವು 24 ಮಂದಿ ಸದಸ್ಯರು, 59 ರೂ. ಪಾಲು ಬಂಡವಾಳ, 25 ರೂ. ಠೇವಣಿ, 50 ರೂ. ಹೊರ ಬಾಕಿ ಸಾಲ, 10 ರೂ. ಜಿಲ್ಲಾ ಬ್ಯಾಂಕಿನ ಸಾಲ ಹೊಂದಿತ್ತು. ಅನಂತರ ಸರ್ವರ ಸಹಕಾರದಿಂದ ಹಂತ ಹಂತವಾಗಿ ಬೆಳೆದು, ಹೆಗ್ಗುಂಜೆ ಗ್ರಾಮದ ಮಂದಾರ್ತಿಗೆ ಸ್ಥಳಾಂತರಗೊಂಡು ಮಂದಾರ್ತಿ ಸೇವಾ ಸಹಕಾರಿ ಸಂಘ ಎನ್ನುವ ಹೆಸರಿನಿಂದ ಹೆಮ್ಮರವಾಯಿತು. 1964-65 ರಲ್ಲಿ ಗೋದಾಮು ರಚನೆ, 71-72 ರಲ್ಲಿ ಆಡಳಿತ ಕಚೇರಿ ನಿರ್ಮಾಣ, 86ರಲ್ಲಿ ನಡೂರಿನಲ್ಲಿ ಗೋಧಾಮು ಹಾಗೂ ಪ್ರಥಮ ಶಾಖೆ ರಚಿಸಲಾಯಿತು. 90ರಲ್ಲಿ ಶೀಲೂರಿನಲ್ಲಿ 2ನೇ ಶಾಖೆ, 2023ರಲ್ಲಿ ಕೇಂದ್ರ ಸ್ಥಾನದಲ್ಲಿ ನೂತನ ಸುಸಜ್ಜಿತ ಸಹಕಾರಿ ಸೌಧ ನಿರ್ಮಾಣಗೊಂಡಿತು. ಪ್ರಸ್ತುತ 2.98 ಕೋಟಿ ರೂ. ಪಾಲು ಬಂಡವಾಳ, 106 ಕೋಟಿ ರೂ. ಠೇವಣಿ, 33.48 ಕೋಟಿ ರೂ. ವಿನಿಯೋಗ, 2.33…

Read More

ಕರ್ನಾಟಕ ಸರಕಾರ ರಾಜ್ಯ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಈ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಈಶಾನ್ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಚಟುವಟಿಕೆ ಆಧಾರಿತ ಬೋಧನೆಯು ಮಕ್ಕಳ ವೈಜ್ಞಾನಿಕ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮತ್ತು ಶಾಲೆಯಲ್ಲಿ ಆಯೋಜಿಸುವ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಗಳು ಮಕ್ಕಳು ಕಲಿಕೆಯಲ್ಲಿ ಸೃಜನಶೀಲವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ. ಈಗಾಗಲೇ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ…

Read More

ನೆಲ್ಲಿಕಾರು : ನೆಲ್ಲಿಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶತಮಾನೋತ್ಸವದ ಸಂಭ್ರಮ. 2025ರ ಏಪ್ರಿಲ್ ಅಥವಾ ಮೇ ಮೊದಲ ವಾರದಲ್ಲಿ ಎರಡು ದಿನಗಳ ‘ಶತಮಾನೋತ್ಸವ ಸಂಭ್ರಮ’ ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಶಾಲೆಯ ಗತ ವರ್ಷದ ನೆನಪಿನಲ್ಲಿ ಶಾಲಾ ಶತಮಾನೋತ್ಸವ ಸಮಿತಿಯು ಸ್ಮರಣ ಸಂಚಿಕೆಯನ್ನು ಪ್ರಕಟಿಸುವ ಆಶಯವನ್ನು ಹೊಂದಿದೆ. ಇದಕ್ಕಾಗಿ ಶಾಲೆಯ ಹಳೆ ವಿದ್ಯಾರ್ಥಿಗಳಿಂದ ಬರಹಗಳನ್ನು ಆಹ್ವಾನಿಸುತ್ತಿದೆ. ಶಾಲೆಯಲ್ಲಿ ಓದಿದ ಊರ-ಪರ ಊರುಗಳಲ್ಲಿ ನೆಲೆಸಿರುವ ಇಲ್ಲಿ ಕಲಿತ ಬಾಲ್ಯದ ನೆನಪುಗಳನ್ನು, ಪ್ರಭಾವ ಬೀರಿದ ಶಿಕ್ಷಕರನ್ನು ಕುರಿತಂತೆ, ಊರಿನ ಜೀವನ ಪ್ರೀತಿಯನ್ನು ಪದಪುಂಜಗಳಲ್ಲಿ ವ್ಯಕ್ತಪಡಿಸುವುದಕ್ಕೆ ಅವಕಾಶವಿದೆ. ಹಾಗೆಯೇ ತಮ್ಮಲ್ಲಿ ಶಾಲೆಗೆ ಸಂಬಂಧ ಪಟ್ಟಂತೆ ಸ್ಮರಣೀಯ ಭಾವಚಿತ್ರಗಳಿದ್ದಲ್ಲಿ ಶತಮಾನೋತ್ಸವ ಸ್ಮರಣಾ ಸಂಚಿಕೆ ಸಂಪಾದಕರಿಗೆ ಕಳುಹಿಸಿ ಕೊಡಲು ಕೋರಲಾಗಿದೆ. 2024ರ ಡಿಸೆಂಬರ್ 31ರ ಒಳಗೆ nellikarusanthosh92@gmail.com ಅಥವಾ 9449444240 ಈ ಸಂಪರ್ಕ ಸಂಖ್ಯೆಗೆ ಕಳುಹಿಸಿಕೊಡಲು ತಮ್ಮಲ್ಲಿ ವಿನಂತಿಸುತ್ತಿದ್ದೇವೆ.

Read More

ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, “ಪಿಲಿಪಂಜ” ಸಿನಿಮಾದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ಇತ್ತೀಚೆಗೆ ನಡೆಯಿತು. ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, “ಪಿಲಿಪಂಜ” ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿ ಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ. ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್…

Read More

ಶಿಕ್ಷಣ ತಜ್ಞ, ಸಂಘಟನಾ ಚತುರ, ತುಂಬೆ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ.ಎನ್ ಗಂಗಾಧರ ಆಳ್ವರಿಗೆ 2024-25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಶಿಕ್ಷಕ ವೃತ್ತಿಯಲ್ಲಿದ್ದ ಕುಟುಂಬದಲ್ಲಿ ಜನಿಸಿರುವ ಗಂಗಾಧರ ಅಳ್ವರ ತಂದೆ ಕೇಪು ನಾರಾಯಣ ಆಳ್ವ ಹಾಗೂ ತಾಯಿ ಕೇಪು ಸುಶೀಲ ಎನ್ ಆಳ್ವ ತಮ್ಮ ತಂದೆ ಹಾಗೂ ಅಜ್ಜಿ ಶಿಕ್ಷಕರಾಗಿದ್ದರು. ಪ್ರಾಥಮಿಕ ಶಿಕ್ಷಣವನ್ನು ಅನಂತಾಡಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಕಾಲೇಜನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿ ಪೂರೈಸಿದರು. ಪದವಿ ಶಿಕ್ಷಣವನ್ನು ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿ ಮಂಗಳೂರು ವಿಶ್ವವಿದ್ಯಾನಿಲಯದಿಂದ 1966ರಲ್ಲಿ ಅರ್ಥಶಾಸ್ತ್ರದ ಸ್ನಾತಕೋತ್ತರ ಪದವಿಯನ್ನು ಪಡೆದರು. ಬಿ.ಎಡ್. ಪದವಿಯನ್ನು ಅಣ್ಣಾಮಲೈ ವಿ.ವಿ.ಯಿಂದ ಪಡೆದು ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಸಾಮಾಜಿಕ,…

Read More

ನವೆಂಬರ್ 1: ಎಲ್ಲೆಡೆ ಕನ್ನಡಗೀತೆಗಳ ಮಾರ್ದನಿ, ಹಳದಿ ಕೆಂಪು ಬಣ್ಣಗಳಿಂದ ಅಲಂಕೃತಗೊಂಡ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಕನ್ನಡ ಧ್ವಜವನ್ನು ಅರಳಿಸಿ ಮಾತನಾಡಿ, ಕರುನಾಡು ಸಂಸ್ಕೃತಿಯ ಬೀಡು, ಕನ್ನಡ ಸಾಹಿತ್ಯವನ್ನು ಮಕ್ಕಳು ಓದಬೇಕು. ಕನ್ನಡ ಕಂಪನ್ನು ಎಲ್ಲೆಡೆ ಪಸರಿಸಬೇಕು. ಕುವೆಂಪುರವರ ವಿಶ್ವಮಾನವ ಸಂದೇಶವನ್ನು ಪಾಲಿಸಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭ ಹಾರೈಸಿ ಮಾತನಾಡಿ ನಾವು ನಮ್ಮ ನಾಡಿನ ನೆಲ, ಜಲ ಶ್ರೀಮಂತ ಸಂಸ್ಕೃತಿಯನ್ನು ತಿಳಿಯಬೇಕು. ಇಂದಿನ ತಂತ್ರಜ್ಞಾನದ ಯುಗದಲ್ಲಿ ಕನ್ನಡದ ಜೊತೆಗೆ ಅನ್ಯ ಭಾಷೆಗಳ ಕಲಿಕೆ ಅನಿವಾರ್ಯವಾಗಿದೆ. ಆದರೆ ಯಾವಾಗಲೂ ಕನ್ನಡಿಗರು ಎನ್ನುವ ಆತ್ಮಾಭಿಮಾನ, ಹೆಮ್ಮೆ ನಮ್ಮಲ್ಲಿ ಇರಬೇಕೆಂದರು. ಕಾರ್ಯಕ್ರಮದಲ್ಲಿ ವಿಶ್ವನಾಥ್ ಪ್ರಭು, ತ್ಯಾಗೀಶ್ಚಂದ್ರ ಶೆಟ್ಟಿ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿರಿದ್ದರು.

Read More

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ, ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು “ರಂಗಮಿತ್ರ ಪತ್ರಕರ್ತ” ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಾಳ ಜಗನ್ನಾಥ ಶೆಟ್ಟಿ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳು ಸಿನಿಮಾ ರಂಗದ ಸಮಗ್ರ ಮಾಹಿತಿಯುಳ್ಳ ತುಳು ಸಿನಿಮಾವಲೋಕನ ಕೃತಿಯನ್ನು ರಚಿಸಿರುವುದನ್ನು ಸನ್ಮಾನ ಸಮಾರಂಭದಲ್ಲಿ ನೆನಪಿಸಲಾಯಿತು.

Read More

ಮೂಡುಬಿದಿರೆ: ಅರೆ ವೈದ್ಯಕೀಯ ರಾಷ್ಟ್ರೀಯ ಆಯೋಗದ ಕರ್ನಾಟಕ ರಾಜ್ಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ, ಅರೆ ವೈದ್ಯಕೀಯ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಪ್ರವೇಶಗಳನ್ನು ಪ್ರಮಾಣೀಕರಿಸುವುದು, ಶೈಕ್ಷಣಿಕ ಮತ್ತು ಸೇವಾ ಗುಣಮಟ್ಟವನ್ನು ಖಾತ್ರಿಪಡಿಸುವುದು, ಗರಿಷ್ಠ ದಾಖಲಾತಿಯನ್ನು ನಿರ್ಧರಿಸುವುದು ಹಾಗೂ ಮೂಲಸೌಕರ್ಯಗಳನ್ನು ಭದ್ರಪಡಿಸುವುದರ ಜೊತೆಗೆ ಪದವಿಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಕೌನ್ಸಿಲ್‌ನಲ್ಲಿ ನೋಂದಣಿಗೆ ಅವಕಾಶ ನೀಡುವುದು ಇವರ ಪ್ರಮುಖ ಆದ್ಯತೆಗಳಾಗಿವೆ ಎಂದು ತಿಳಿಸಿದರು. ಮೂಡುಬಿದಿರೆಯ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ಕಾಲೇಜ್ ಆಫ್ ಫಿಸಿಯೋಥೆರಪಿ, ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್, ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ಸ್ ಮತ್ತು ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳ ‘ವಾರ್ಷಿಕ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅರೆ ವೈದ್ಯಕೀಯ ಕ್ಷೇತ್ರವು ವ್ಯಾಪಕವಾದ ವೃತ್ತಿ ಅವಕಾಶಗಳನ್ನು ಹೊಂದಿದೆ. 51ಕ್ಕೂ ಹೆಚ್ಚು ಕೋರ್ಸ್ಗಳನ್ನು ಇದು ಒಳಗೊಂಡಿದೆ. ಕಾಲೇಜಿನ ಅವಧಿಯಲ್ಲಿ ಕಲಿಯುವ ತಾಂತ್ರಿಕ ಕೌಶಲ್ಯಗಳು, ಸಂಘಟನಾ ಚತುರತೆ ಹಾಗೂ ಮೌಲ್ಯಗಳನ್ನು…

Read More

ಉಡುಪಿ : ದ ನ್ಯಾಶನಲ್ ಸ್ಪೋರ್ಟ್ಸ್ ಪ್ರೊಮೊಶನ್ ಆರ್ಗನೈಸೇಶನ್ (ಎನ್.ಎಸ್.ಪಿ.ಒ) ಧಾರವಾಡದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಫುಟ್ ಬಾಲ್ ಟೂರ್ನ್‍ಮೆಂಟ್‍ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣೀತ್ ಯು. ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರು ಅಯ್ಯಪ್ಪ ನಗರದ ಉಮೇಶ್ ಶೆಟ್ಟಿ ಹಾಗೂ ಪ್ರಮೀಳಾ ದಂಪತಿಗಳ ಸುಪತ್ರ.

Read More