Author: admin
ಮಣಿಪುರ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಎರಡು ದಿನಗಳ ಅದ್ದೂರಿ ಸಮಾರಂಭಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಲೋಕಕಲ್ಯಾಣಕ್ಕೆ ತೆರೆದಿಟ್ಟ ಅರಿವಿನ ಹೆಬ್ಬಾಗಿಲು ಆಗಿರುವ ಭಾರತಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಆಚರಿಸುವುದು ಸಂಭ್ರಮದ ಸಾರ್ಥಕ ಕ್ಷಣ. ಸಮಾಜದ ಕಟ್ಟ ಕಡೆಯ ಮಗುವನ್ನೂ ಅಕ್ಷರ ಪ್ರಪಂಚಕ್ಕೆ ತೆರೆದುಕೊಳ್ಳುವಲ್ಲಿ ನೀಡಿರುವ ಸೇವೆಯು ಪ್ರಶಂಸನೀಯ ಎಂದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕನ್ನಡ ಶಾಲೆಯೊಂದರ 100 ವರ್ಷದ ಸಂಭ್ರಮ ನಿಜಕ್ಕೂ ಸ್ಥಾಪಕರ ಸೇವಾ ಮನೋಭಾವದ ನೈಜ ಪರಿಶ್ರಮಕ್ಕೆ ಸಂದ ಮೌಲ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಸ್ತಾವನೆಗೈದು ಶಾಲೆ ನಡೆದು ಬಂದ ದಾರಿ ಬಗ್ಗೆ ಮಾಹಿತಿ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಶಾಬನ್ ಬ್ಯಾರಿ, ಸಾಧಕರಾದ ರಾಘು ಪೂಜಾರಿ ಕಲ್ಮಂಜೆ, ಸಮಾಜ ಸೇವಕ ಅಶೋಕ್ ಶೆಟ್ಟಿ, ಸೆಲಿನ್…
ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಜರಗಿದ ಅಂತರ್ ರಾಜ್ಯ ಮಟ್ಟದ ಬಂಟರ ಕ್ರೀಡಾಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘವು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಹಾಗೂ ಕಬಡ್ಡಿ ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಾಲಿಬಾಲ್ ಪಂದ್ಯಾಟದಲ್ಲಿ ಗುರುಪುರ ಬಂಟರ ಮಾತೃ ಸಂಘದ ಅನೀಶ್ ರೈ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಮನೋಹರ್ ಎಸ್ ಶೆಟ್ಟಿ ಸಾಯಿರಾಧ ಹಾಗೂ ಪಡುಬಿದ್ರಿ ಬಂಟರ ಸಂಘದ ಪದಾಧಿಕಾರಿಗಳು ಗುರುಪುರ ಬಂಟರ ಮಾತೃ ಸಂಘಕ್ಕೆ ಟ್ರೋಫಿ ಹಾಗೂ ನಗದನ್ನು ವಿತರಿಸಿದರು. ಈ ಸಂಧರ್ಭ ಸಂಘದ ಆಟಗಾರರ ಜೊತೆಗೆ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ, ಮಾಜಿ ಸಂಚಾಲಕ ಸುದರ್ಶನ್ ಶೆಟ್ಟಿ ಪೆರ್ಮಂಕಿ, ಯುವ ವಿಭಾಗದ ಅಧ್ಯಕ್ಷ ಸಂದೀಪ್ ಆಳ್ವ ಕೊಳವೂರು,…
ಡಾ. ಅವಿನ್ ಆಳ್ವರವರು ಮಂಗಳೂರು ಶಾಖೆಯ ಭಾರತೀಯ ವೈದ್ಯಕೀಯ ಸಂಘದ (IMA) ಕಾರ್ಯದರ್ಶಿಯಾಗಿದ್ದು, 2023 -24ನೇ ಸಾಲಿನ ಕರ್ನಾಟಕ ರಾಜ್ಯದ ಅತ್ಯುತ್ತಮ ಕಾರ್ಯದರ್ಶಿ ಮತ್ತು ಭಾರತದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಎಂಬ ಎರಡು ಪ್ರತಿಷ್ಠಿತ ಗೌರವಗಳನ್ನು ಗಳಿಸಿದ್ದಾರೆ. ಈ ಪ್ರಶಸ್ತಿಗಳು ಕ್ರಮವಾಗಿ ಕರ್ನಾಟಕ ರಾಜ್ಯ ಮಂಡಳಿ ಮತ್ತು ನವದೆಹಲಿಯ IMA ಕೇಂದ್ರ ಕಚೇರಿಯಿಂದ ಪ್ರದಾನ ಮಾಡಲ್ಪಟ್ಟಿವೆ. ಈ ಪ್ರಶಸ್ತಿಗಳು ವೈದ್ಯಕೀಯ ಕ್ಷೇತ್ರದಲ್ಲಿ ಅವರ ಅಪರೂಪದ ಶ್ರೇಷ್ಠ ನಾಯಕತ್ವ, ಅಪಾರ ಸೇವಾ ಮನೋಭಾವ ಮತ್ತು ಉತ್ತಮ ಕೊಡುಗೆಗಳಿಗೆ ನೀಡಲಾದ ಗೌರವವಾಗಿದೆ. ಡಾ. ಅವಿನ್ ಆಳ್ವರವರು 11 ತಿಂಗಳ ಅವಧಿಯಲ್ಲಿ 123 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ಮಂಗಳೂರನ್ನು ಕರ್ನಾಟಕದ 180 IMA ಶಾಖೆಗಳಲ್ಲಿಯೇ ಮೊದಲ ಸ್ಥಾನಕ್ಕೆ ತಂದು ನಿಲ್ಲಿಸಿದರು. ರಾಷ್ಟ್ರೀಯ ಮಟ್ಟದಲ್ಲಿ ಅವರು 28 ರಾಜ್ಯಗಳು ಮತ್ತು ಸುಮಾರು 3000 ಶಾಖೆಗಳ ನಡುವೆ ಅಗ್ರಸ್ಥಾನ ಪಡೆದು ವೈಶಿಷ್ಟತೆಯನ್ನು ಸಾಧಿಸಿದ್ದಾರೆ.
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಹೇಮಂತ್ ರೈ ಮನವಳಿಕೆಗುತ್ತು
ಕುಕ್ಕೆ ಸುಬ್ರಹ್ಮಣ್ಯ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎರಡನೆ ಎ ದರ್ಜೆಯ ದೇವಸ್ಥಾನವಾದ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಹೇಮಂತ್ ರೈ ಮನವಳಿಕೆಗುತ್ತು ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿರುವ ಹೇಮಂತ್ ರೈ ಅವರು ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ.
ಮೂಡುಬಿದಿರೆ: ಹಣ ಸಂಪಾದಿಸುವುದು, ಪದವಿ ಪಡೆದುಕೊಳ್ಳುವುದು ಮಾತ್ರ ಶಿಕ್ಷಣದ ಉದ್ದೇಶವಲ್ಲ. ನಮ್ಮನ್ನು ನಾವು ಸವ್ಯಸಾಚಿಯನ್ನಾಗಿ ಮಾಡುವುದೇ ಶಿಕ್ಷಣದ ಉದ್ದೇಶ ಎಂದು ಕ್ವಿಜ್ ಮಾಸ್ಟರ್, ಲೇಖಕ ಡಾ| ನಾ. ಸೋಮೇಶ್ವರ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶುಕ್ರವಾರ ಮೂಡುಬಿದಿರೆಯ ಸೌಟ್ಸ್-ಗೈಡ್ಸ್ ಕನ್ನಡ ಭವನದ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೊಬ್ಬರ ಕುಶಲ ಕ್ಷೇಮ ವಿಚಾರಿಸುವುದು ಭಾರತೀಯ ಸಂಸ್ಕೃತಿ. ಪೋಷಕರು ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು. ಇಂತಹ ಮೂಲಭೂತ ವಿಚಾರಗಳನ್ನು ಮಕ್ಕಳಿಗೆ ಕಲಿಸುವುದು ಪೋಷಕರ ಕರ್ತವ್ಯ ಮಾತ್ರವಲ್ಲ ಧರ್ಮವೂ ಆಗಿದೆ ಎಂದರು. ನಮ್ಮ ಮೆದುಳಿನ ರಚನೆಯಲ್ಲಿ ಅರೆಗೋಳ ಎಂಬ ಭಾಗವಿದೆ. ಎಡ ಅರೆಗೋಳವು ಸದಾ ಲೆಕ್ಕಾಚಾರಗಳಂತಹ ತಾರ್ಕೀಯ ವಿಚಾರಗಳ ಬಗ್ಗೆ ಯೋಚಿಸುತ್ತದೆ. ಅದು ಯಾವುದೇ ಭಾವನೆ, ಮಾತಿನ ವೈಖರಿಗೆ ಬಲಿಯಾಗುವುದಿಲ್ಲ. ಬಲ ಅರೆಗೋಳ ಭಾವನೆಗಳಿಗೆ…
ಮಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿ ಶಾಖೆಯ ನವೀಕೃತ, ಹವಾನಿಯಂತ್ರಿತ ಕಚೇರಿ ಉದ್ಘಾಟನೆಯು ಗುರುವಾರ ನೆರವೇರಿತು. ಕಲ್ಸಂಕ ವಿದ್ಯಾಸಮುದ್ರತೀರ್ಥ ರಸ್ತೆ ಬಳಿಯ ಸತೀಶ್ಚಂದ್ರ ಬಿಲ್ಡಿಂಗಿನ ನೆಲಮಹಡಿಯಲ್ಲಿ ಸೊಸೈಟಿಯ ನಿರ್ದೇಶಕ ಹಾಗೂ ಉಡುಪಿ ಶಾಖಾ ಉಸ್ತುವಾರಿ ನಿರ್ದೇಶಕ ರವೀಂದ್ರನಾಥ ಜಿ. ಹೆಗ್ಡೆ ನವೀಕೃತ ಕಚೇರಿ ಉದ್ಘಾಟಿಸಿ, ಕೆ.ಬಿ. ಜಯಪಾಲ ಶೆಟ್ಟಿಯವರು ಶ್ರಮ ವಹಿಸಿ ಸ್ಥಾಪಿಸಿದ ಸೊಸೈಟಿಯು ಕೆ. ಜೈರಾಜ್ ಬಿ. ರೈ ಸಮರ್ಥ ನೇತೃತ್ವದಲ್ಲಿ ಮುನ್ನಡೆಯುತ್ತಿದ್ದು 1,050 ಕೋಟಿ ರೂ. ವ್ಯವಹಾರ ಹೊಂದಿದೆ. 13 ಜಿಲ್ಲಾ ಪ್ರಶಸ್ತಿ, ಆರು ರಾಜ್ಯ ಪ್ರಶಸ್ತಿ, ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ಸೊಸೈಟಿ ಪಡೆದಿದ್ದು ಅಧ್ಯಕ್ಷ ಕೆ. ಜೈರಾಜ್ ಬಿ. ರೈ ದಕ್ಷ ನಾಯಕತ್ವ, 15 ನಿರ್ದೇಶಕರ ಮಾರ್ಗದರ್ಶನ, ಗ್ರಾಹಕರ ಸಹಕಾರ, ಸಿಬ್ಬಂದಿಗಳ ಶ್ರಮ ಸ್ಮರಣೀಯ ಎಂದರು. ಹವಾನಿಯಂತ್ರಿತ ವ್ಯವಸ್ಥೆಗೆ ಉಡುಪಿ ಶಾಖಾ ಕಟ್ಟಡ ಮಾಲೀಕರಾದ ಪ್ರೇಮಲತಾ ಎಸ್. ಹೆಗ್ಡೆ ಚಾಲನೆ ನೀಡಿದರು. ಸೊಸೈಟಿಯ ಉಡುಪಿ ಶಾಖಾ ಸಲಹಾ ಸಮಿತಿ ಸದಸ್ಯರಾದ…
ಬಂಟರ ಸಂಘ ಪುಣೆಯ ಸುವರ್ಣ ಮಹೋತ್ಸವ ಆಚರಣೆಗೆ ಪೂರಕವಾಗಿ ಕೆ.ಎಸ್.ಎಚ್ ಟ್ರೋಫಿ- 2025 ಅಂತರಾಷ್ಟ್ರೀಯ ಬಂಟರ ಕ್ರೀಡಾಕೂಟವು ಜನವರಿ 5ರಂದು ಬೆಳಿಗ್ಗೆ 8ರಿಂದ ಪುಣೆಯ ಅಂತಾರಾಷ್ಟ್ರೀಯ ಕ್ರೀಡಾ ಸಂಕುಲ ಬಾಲೆವಾಡಿಯ ಶ್ರೀ ಶಿವಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ದೇಶ ವಿದೇಶದಲ್ಲಿರುವ ಬಂಟ ಕ್ರೀಡಾಪಟುಗಳಿಗೆ ವಾಲಿಬಾಲ್, ಥ್ರೋಬಾಲ್, ಕಬಡ್ಡಿ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ಅಂತಾರಾಷ್ಟ್ರೀಯ ಕ್ರೀಡಾ ಕೂಟದ ಆಯೋಜನೆಯಂತೆ ವಿಜೃಂಭಣೆಯಿಂದ ನಡೆಯಲಿದೆ. ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವದ ಗೌರವಾಧ್ಯಕ್ಷರಾದ ಕೆ.ಎಸ್.ಎಚ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ನ ಸಿ.ಎಂ.ಡಿ ಕುಶಲ್ ಹೆಗ್ಡೆಯವರ ಪ್ರಾಯೋಜಕತ್ವದಲ್ಲಿ ಕ್ರೀಡಾಕೂಟವು ನಡೆಯುತ್ತಿದ್ದು, ವಿಜೇತರಾದವರಿಗೆ ಕೆ.ಎಸ್.ಎಚ್ ಟ್ರೋಫಿ ಹಾಗೂ ನಗದು ಬಹುಮಾನ ಪಡೆಯಲಿದ್ದಾರೆ. ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆಯವರ ಸಭಾಧ್ಯಕ್ಷತೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಕ್ರೀಡಾ ಕೂಟದ ಉದ್ಘಾಟನೆಯನ್ನು ಮಹಾರಾಷ್ಟ್ರ ಸರಕಾರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾಡಲಿದ್ದು, ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ…
ಬಂಟರ ಸಂಘ ಪಡುಬಿದ್ರಿ ಹಾಗೂ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಹಯೋಗದೊಂದಿಗೆ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ -2024 ಡಿಸೆಂಬರ್ 29ರಂದು ಪಡುಬಿದ್ರಿಯಲ್ಲಿ ದಿವಂಗತ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಜರಗಿತು. ಹಲವಾರು ವಿಶೇಷತೆಗಳ ವೈಭವದಿಂದ ನಡೆದ ಈ ಕ್ರೀಡಾಕೂಟದಲ್ಲಿ ಆಕರ್ಷಕ ಪಥಸಂಚಲನ, ವಾಲಿಬಾಲ್, ತ್ರೋಬಾಲ್, ಕಬಡ್ಡಿ, ಹಗ್ಗ ಜಗ್ಗಾಟ ಪಂದ್ಯಾಟಗಳು ಜರಗಿತು. ಕಬಡ್ಡಿ ಪಂದ್ಯಾಟದಲ್ಲಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಯುವ ಉದ್ಯಮಿ, ಕಲ್ಯಾ ಗುರ್ಮೆದಬೈಲು ಹಿರಿಯಣ್ಣ ಶೆಟ್ಟಿ ಮತ್ತು ಲೀಲಾ ಶೆಟ್ಟಿ ದಂಪತಿಗಳ ಪುತ್ರ ಗಣೇಶ್ ಶೆಟ್ಟಿ ಡೊಂಬಿವಲಿ ಮಾಲಕತ್ವದ ತನಿಷ್ಕಾ ಮುಂಬಯಿ ತಂಡವು ಗೆದ್ದು ಟ್ರೋಫಿ ಹಾಗೂ 1,00,001 ರೂಪಾಯಿಯನ್ನು ತನ್ನದಾಗಿಸಿಕೊಂಡಿತು. ಮುಂಬಯಿ ಬಂಟರ ಸಂಘದ ನಿಕಟಪೂರ್ವ ಮಹಿಳಾ ಅಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಪಡುಬಿದ್ರಿ ಬಂಟರ ಸಂಘದ ಪದಾಧಿಕಾರಿಗಳು ವಿಜೇತ ತಂಡ ತನಿಷ್ಕಾ ಮುಂಬಯಿ ತಂಡಕ್ಕೆ ಬಹುಮಾನವನ್ನು…
ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ ಮೂಡುತ್ತದೆ. ಬಂಟ ಸಮಾಜಕ್ಕೆ ಸಮಾಜದ ನೇತೃತ್ವ ವಹಿಸುವ ವಿಶೇಷ ಶಕ್ತಿಯಿದೆ. ಇಂತಹ ಅವಕಾಶಗಳ ಮೂಲಕ ಮತ್ತಷ್ಟು ಕಾರ್ಯಗಳಾಗಲಿ ಎಂದು ಕರ್ನಾಟಕ ವಿಧಾನಸಭಾ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಪಡುಬಿದ್ರಿ ಬಂಟರ ಸಂಘದ ವತಿಯಿಂದ ಪಡುಬಿದ್ರಿ ಬಂಟರ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯ 66ರ ಬದಿಯಲ್ಲಿರುವ ದಿ. ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಜರಗಿದ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ -2024 ಇದರ ಪಥಸಂಚನಲದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಸಿ.ಎಂ.ಡಿ. ಡಾ| ಕೆ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬಂಟರಿಗೆ ಗುರುಗಳ ಅವಶ್ಯಕತೆಯಿಲ್ಲ. ಅವರು ಏಕಲವ್ಯರಂತೆ ಗುರು ಇಲ್ಲದೆಯೂ ವಿದ್ಯೆ ಕಲಿಯುವ ತಾಕತ್ತು ಬಂಟ ಸಮಾಜಕ್ಕಿದೆ. ಭೂ ಸುಧಾರಣೆ ಕಾನೂನಿನ ಮೂಲಕ ಭೂಮಿ ಕಳೆದುಕೊಂಡರೂ ಪರ ಊರಿಗೆ ತೆರಳಿ ಆರ್ಥಿಕ ಸದೃಢತೆಯನ್ನು ಸಾಧಿಸಿದ…
ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಫೆಬ್ರವರಿ 7,8,9 ರಂದು ನಡೆಯಲಿರುವ ಯುವ ಬಂಟರ ಸಂಘ ಮಂಗಳೂರು ಇದರ ವತಿಯಿಂದ ನಡೆಯಲಿರುವ ಬಂಟ್ಸ್ ಪ್ರೀಮಿಯರ್ ಲೀಗ್ -2025 ಸೀಸನ್ 2 ಟಿ-10 ಮಾದರಿಯ ಕ್ರಿಕೆಟ್ ಪಂದ್ಯಾವಳಿಯ ಬ್ರೋಷರನ್ನು ನಗರದ ವುಡ್ ಲ್ಯಾಂಡ್ ಸಭಾಂಗಣದಲ್ಲಿ ಇತ್ತೀಚೆಗೆ ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ ಶೆಟ್ಟಿಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಪಿಎಲ್ ಟೂರ್ನಿಯ ಸಲಹೆಗಾರರಾದ ರಾಜ್ ಗೋಪಾಲ ರೈ ಮಾತನಾಡುತ್ತಾ, ಬಂಟ್ಸ್ ಪ್ರೀಮಿಯರ್ ಲೀಗ್ ಮೂಲಕ ಯುವ ಬಂಟರ ಜೊತೆ ಬಂಟ ಸಮಾಜದ ಸಂಘಟನೆ ಕ್ರೀಡೆಗೆ ಸಹಕಾರಿಯಾಗಲಿ. ಬಂಟ ಸಮಾಜ ತಮ್ಮ ಸಮಾಜದ ಅಭಿವೃದ್ಧಿಯ ಜೊತೆ ಇತರ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದ ಸಮಾಜ. ನಾವು ಬೆಳೆಯುತ್ತಾ ಇತರರನ್ನು ಬೆಳೆಸೋಣ ಎಂದರು. ಕಾವೂರು ಬಂಟರ ಸಂಘದ ಅಧ್ಯಕ್ಷ ಹಾಗೂ ಕ್ರೀಡಾ ಪಟು ಆನಂದ ಶೆಟ್ಟಿಯವರು ಮಾತನಾಡುತ್ತಾ, ಕುಟುಂಬ ಬಾಂಧವ್ಯ ಸಂಬಂಧ ಶಿಥಿಲವಾಗುತ್ತಿರುವ ಈ ಕಾಲಘಟ್ಟದಲ್ಲಿ ಕ್ರೀಡೆ ನಮ್ಮೆಲ್ಲರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಮತ್ತು ದೈಹಿಕ,…














