Author: admin

ಕೇಂದ್ರ ಲೋಕಸೇವಾ ಆಯೋಗವು (UPSC) 2024 ರಲ್ಲಿ ನಡೆಸಿದ ನಾಗರೀಕ ಸೇವಾ ಪರೀಕ್ಷೆಯಲ್ಲಿ ಯೂನಿವರ್ಸಲ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆದ 10 ಅಭ್ಯರ್ಥಿಗಳು ತೇರ್ಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯ IAS/IPS/IFS ಹಾಗೂ ಇತರೆ ವರ್ಗದ 8025 ಕ್ಕೂ ಅಧಿಕ ಅಧಿಕಾರಿಗಳನ್ನು ಕಳೆದ 24 ವರ್ಷಗಳಲ್ಲಿ ಯೂನಿವರ್ಸಲ್ ಸಂಸ್ಥೆ ನೀಡಿದೆ. ಉತ್ತೀರ್ಣರಾದ ಎಲ್ಲಾ ಅಭ್ಯರ್ಥಿಗಳಿಗೆ ಯೂನಿವರ್ಸಲ್ ಕೋಚಿಂಗ್ ಸೆಂಟರ್ ನ ಆಡಳಿತ ನಿರ್ದೇಶಕ ಆರ್ ಉಪೇಂದ್ರ ಶೆಟ್ಟಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹೆಸರು ವಾಸಿಯಾಗಿರುವ ಉಡುಪಿ ಮೂಲದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ತನ್ನ ಇತ್ತೀಚಿನ ಪಾಕಶಾಲೆಯ ಪರಿಕಲ್ಪನೆಯ ಭವ್ಯವಾದ “ಬೋಟ್ ಮ್ಯಾನ್ ಹಬ್” ಉದ್ಘಾಟನೆಯಾಗಲಿದೆ. ಎಪ್ರಿಲ್ 23 ಸಂಜೆ 7 ಗಂಟೆಗೆ ಖುಸೈಸ್ ನಾ ಫಾರ್ಚೂನ್ ಗ್ರಾಂಡ್ ಹೋಟೆಲ್ ನಲ್ಲಿ ಎಲ್ಲಾ ರೀತಿಯಲ್ಲೂ ಬಿನ್ನವಾಗಿಸಿ ವೈಶಿಷ್ಟ್ಯಮಯ ಸಮುದ್ರಹಾರ ರೆಸ್ಟೋರೆಂಟ್ ಅಧಿಕೃತ “ಬೋಟ್ ಮ್ಯಾನ್ ಹಬ್” ಕರಾವಳಿ ಭಾಗದ ಅನುಭವ ನೀಡಲಿದೆ. ಉದ್ಯಮಿ ಡಾ. ರೊನಾಲ್ಡ್ ಕೋಲಾಸೋರವರು “ಬೋಟ್ ಮ್ಯಾನ್ ಹಬ್” ರೆಸ್ಟೋರೆಂಟ್ ನ್ನು ಉದ್ಘಾಟಿಸಲಿದ್ದಾರೆ. ಗಾಯಕಿ ಗೋವಾದ ನಟಿ ರೀಟಾ ರೋಸ್ ಮತ್ತು ಉದ್ಯಮಿ, ಸಂಘಟಕರಾದ ಸರ್ವೋತ್ತಮ ಶೆಟ್ಟಿ ಅಬುಧಾಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. “ಬೋಟ್ ಮ್ಯಾನ್ ಹಬ್”ರೆಸ್ಟೋರೆಂಟ್ ಮಂಗಳೂರು, ಗೋವಾ ಮತ್ತು ಮಹಾರಾಷ್ಟ್ರದ ಮಾಲ್ವನ್ ನಗರದ ಶ್ರೀಮಂತ ಕರಾವಳಿ ಸಂಪ್ರದಾಯಗಳಿಂದ ಪ್ರೇರಿತವಾಗಲಿದೆ. ಈ ಮೂರು ಪ್ರಾದೇಶಿಕ ಪಾಕ ಪದ್ದತಿಗಳ ಒಂದು ಭಕ್ಷ್ಯ ಪಟ್ಟಿ ಮತ್ಸ ಪ್ರಿಯರ ಸ್ವಾದಿಷ್ಟತೆಯ ಖಾದ್ಯಗಳನ್ನು ಆಸ್ವಾದಿಸುವರನ್ನು…

Read More

ಬೈಂದೂರು ಬಂಟರ ಸಂಘದ ವತಿಯಿಂದ ರಾಜ್ಯ ಮಟ್ಟದಲ್ಲಿ ಎಂಟನೇ ರ‍್ಯಾಂಕ್‌ ವಿಜೇತೆ ಸನ್ನಿಧಿ ಎಂ ಶೆಟ್ಟಿ ಅವರಿಗೆ ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ ಅವರು ನಗದು ಪುರಸ್ಕಾರ ಹಾಗೂ 30ರ ಸಂಭ್ರಮದ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಕುಂದಾಪುರ ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ ಹೇರಿಕುದ್ರು ಸುನಿಲ್ ಕುಮಾರ್ ಶೆಟ್ಟಿ, ಉದ್ಯಮಿ ದಿಗಂತ ಶೆಟ್ಟಿ ಮತ್ತು ಸನ್ನಿಧಿಯ ಪೋಷಕರು ಉಪಸ್ಥಿತರಿದ್ದರು.

Read More

ಜಗತ್ತಿನ ಅತ್ಯಂತ ಪ್ರಾಚೀನ ಯುದ್ಧಕಲೆ ಎಂದು ಖ್ಯಾತಿ ಪಡೆದ ಕಳರಿ ಪೈಟ್ ತುಳುನಾಡಿನಿಂದಲೇ ಉದ್ಭವವಾಗಿದೆ ಎಂಬುದು ಹೆಮ್ಮೆಯ ವಿಷಯ. ಹಿಂದೆ ದ.ಕ, ಕಣ್ಣೂರು, ವಯನಾಡು ಮತ್ತು ಕೊಝೀಕೋಡ್‌ ಭಾಗಗಳನ್ನೊಳಗೊಂಡ ಭಾಗವನ್ನು ತುಳುನಾಡು ಎಂದು ಕರೆಯಲಾಗುತ್ತಿತ್ತು. ಈ ಪ್ರದೇಶವು ಯುದ್ಧಕಲೆ ಅಭ್ಯಾಸದ ಪ್ರಬಲ ಕೇಂದ್ರವಾಗಿತ್ತು. ಕೇರಳದಲ್ಲೂ ಇದನ್ನು “ತುಳುನಾಡನ್ ಕಳರಿ” ಎಂದೇ ಕರೆಯುತ್ತಾರೆ. ಪುರಾವೆಗಳ ಪ್ರಕಾರ, ಹಲವಾರು ರಾಜರು ಹಾಗೂ ಸೇನಾ ನಾಯಕರು ತುಳುನಾಡಿಗೆ ಬಂದು ಕಲರಿ ಪೈಟ್ ಕಲಿತಿದ್ದರು. ಕೋಟಿ ಚೆನ್ನಯರು ಗರಡಿಗಳ ಮೂಲಕ ಈ ಕಲೆಯ ಉಳಿವಿಗೆ ಶ್ರಮಿಸಿದರು. ಅವರ ಗುರು ನಾನಯ್ಯರಿಗೆ ಕೇರಳದ ರಾಜರು ಗ್ರಾಮಗಳನ್ನು ದತ್ತವಾಗಿ ನೀಡಿದ ದಾಖಲೆಗಳೂ ಇವೆ. ಅದೇ ರೀತಿ ಅವಳಿ ವೀರರಾದ ಮುದ್ದ ಕಳಲೆರ್, ಕಾನದ ಕಟದೆರ್ ಇವರ ಶೌರ್ಯಗಳು ಕಳರಿಯಿಂದಲೇ ಬೆಳೆದು ಬಂದಿದೆ.ಕಲರಿ ಪೈಟ್‌ನಲ್ಲಿ 108 ಮರ್ಮ ಬಿಂದುಗಳಲ್ಲಿ 64ಕ್ಕೆ ಸಂಬಂಧಪಟ್ಟ ಮರ್ಮ ವಿದ್ಯೆಗಳು ಪ್ರಮುಖ. ಇದು ದೇಹ ಹಾಗೂ ಮನಸ್ಸಿಗೆ ಆರೋಗ್ಯ ನೀಡುವುದಲ್ಲದೆ, ಯುದ್ಧ ತಂತ್ರಗಳು, ಕಣ್ಕಟ್ಟು ವಿದ್ಯೆ, ಗೆರಿಲ್ಲ…

Read More

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪಿ.ಯು ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿಯವರು ಮಾತನಾಡಿ, ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು ನಡೆಸುವುದು ನಿಜಕ್ಕೂ ಒಂದು ಸವಾಲಿನ ಸಂಗತಿ. ಸಮಾಜಮುಖಿ ಚಿಂತನೆಯ ಸದುದ್ದೇಶದಿಂದ ಬೇಸಿಗೆ ಶಿಬಿರವನ್ನು ಈ ಸಂಸ್ಥೆಯು ಆಯೋಜಿಸಿರುವುದು ಇತರರಿಗೆ ಮಾದರಿ. ಜೀವನದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನೆಡೆದಾಗ ನಮ್ಮ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ. ಮಕ್ಕಳು ಈ ಶಿಬಿರದಲ್ಲಿ ಕಲಿಸುವ ಎಲ್ಲಾ ಚಟುವಟಿಕೆಗಳನ್ನು, ವಿಚಾರಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಂಡು ಸವಾಲುಗಳನ್ನು ಎದುರಿಸುವ ಗುಣವನ್ನು ಕಲಿಯಬೇಕು. ಆ ಮೂಲಕ ಯಶಸ್ಸು ಕಂಡು ತನ್ನ ಗುರಿ ಉದ್ದೇಶಗಳನ್ನು…

Read More

ಮೂಡುಬಿದಿರೆ: ‘ಮಕ್ಕಳಿಗೆ ಸಮಯ ನೀಡಿ , ಬೆನ್ತಟ್ಟಿ ಬೆಳೆಸಿ ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ ಸೋಮವಾರ ಆಯೋಜಿಸಿದ್ದ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ ‘ಚಿಣ್ಣರ ಮೇಳ – 2025’ ಉದ್ಘಾಟಿಸಿ ಅವರು ಮಾತನಾಡಿದರು. ‘ಬದುಕಿನಲ್ಲಿ ಎಲ್ಲರೂ ನಟರೇ. ಆದರೆ, ಅಭಿನಯ ವಿಭಿನ್ನ’. ಮಕ್ಕಳಿಗೆ ಸಮಯ ನೀಡುವುದು ಎಂದರೆ ಅವರ ಭಾವನೆಗಳಿಗೆ ಸ್ಪಂದಿಸುವುದು, ಮುಕ್ತವಾಗಿ ಸಂವಹನ ನಡೆಸುವುದು. ಮಕ್ಕಳಲ್ಲಿ ಅಡಗಿರುವ ಆತಂಕ, ಭಯ, ತುಂಟಾಟ, ಪ್ರತಿಭೆಯನ್ನು ಸರಿಯಾದ ಸಮಯದಲ್ಲಿ ಗುರುತಿಸುವುದು ಬಹಳ ಅವಶ್ಯಕ ಎಂದರು. ಮನುಷ್ಯ ಸಮಾಜಜೀವಿ. ಸಮಾಜದ ಜೊತೆ ಬೆರೆತಾಗಲೇ ನೆಮ್ಮದಿ, ಯಶಸ್ಸು ಎಲ್ಲವೂ ಸಾಧ್ಯ. ಮಕ್ಕಳು ಮಾತನಾಡಬೇಕು. ಎಲ್ಲರೊಂದಿಗೆ ಬೆರೆಯುವಂತೆ ಮಾಡಲು ಇಂತಹ ಶಿಬಿರ ಪೂರಕವಾಗಿರಲಿದೆ ಎಂದು ತಿಳಿಸಿದರು. ವಿದ್ವಾನ್ ಚಂದ್ರಶೇಖರ ನಾವಡ ಮಾತನಾಡಿ,…

Read More

ವಿದ್ಯಾಗಿರಿ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈಜುಕೊಳ ಆವರಣದಲ್ಲಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಈಜುಗಾರರಿಗೆ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುವಂತ ವ್ಯವಸ್ಥೆ ಕಲ್ಪಿಸಬೇಕು ಎಂದರು. ದಕ್ಷಿಣ ಕನ್ನಡ ಈಜುಗಾರರ ಸಂಘದ ಅಧ್ಯಕ್ಷ ಯತೀಶ್ ಬೈಕಂಪಾಡಿ…

Read More

ಪ್ರತಿಷ್ಠಿತ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಶಮೀನಾ ಆಳ್ವ ಅವರು ಆಯ್ಕೆಯಾಗಿದ್ದಾರೆ. ಅವರು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ಮುಲ್ಕಿ ವಿಜಯ ಕಾಲೇಜು ವಿಶ್ವಸ್ಥ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃದ್ಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ತುಳುನಾಡು ಬಂಟರ ಮಹಿಳಾ ಸಂಘದ ಅಧ್ಯಕ್ಷೆ, ತುಳುವೆರೆ ಆಯನ ಕೂಟ (ರಿ)ದ ಅಧ್ಯಕ್ಷೆಯಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ವಿಜಯ ಕಾಲೇಜು ಅಲೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಶಮೀನಾ ಆಳ್ವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಾ ಎ ಸದಾನಂದ ಶೆಟ್ಟಿ, ತುಳು ವರ್ಲ್ಡ್ ಸ್ಥಾಪಕಾಧ್ಯಕ್ಷ ಡಾ ರಾಜೇಶ್ ಆಳ್ವ ಮತ್ತಿತರರು ಅಭಿನಂದಿಸಿದ್ದಾರೆ.

Read More

ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ, ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಇಂತಹ ಬೇಸಿಗೆ ಶಿಬಿರಗಳು ಮಕ್ಕಳು ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿ ಎಂದು ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಹೇಳಿದರು. ಇವರು ಕೋಟೇಶ್ವರ ಯಡಾಡಿ ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ‘ಮಂಥನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರ ನಟಿ ಸಂಗೀತ ಶೃಂಗೇರಿ ಮಾತನಾಡುತ್ತಾ, ನಾವೆಲ್ಲರೂ ದ್ವೇಷವನ್ನು ಬಿಟ್ಟು ಮನುಷ್ಯತ್ವಕ್ಕೆ…

Read More

“ಧರ್ಮ ದೈವ” ತುಳು ಚಿತ್ರದ ನಿರ್ದೇಶಕರ ಎರಡನೇ ಚಿತ್ರ “ಧರ್ಮ ಚಾವಡಿ” ತುಳು ಚಿತ್ರದ ಟೀಸರ್ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿದ್ದು, ಸಿನಿಮಾ ಹೊಸ ನಿರೀಕ್ಷೆ ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು. ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿ ಹಾಕಿದೆ. ಎಂ.ರ್.ಟಿ ಯೂಟ್ಯೂಬ್ ಚಾನೆಲ್ ನಲ್ಲಿ ಟೀಸರ್ ಬಿಡುಗಡೆ ಗೊಂಡಿದೆ. ಟೀಸರ್ ಬಿಡುಗಡೆ ಸಮಾರಂಭದಲ್ಲಿ ತುಳು ಸಿನಿಮಾ ರಂಗದ ಗಣ್ಯರು ಭಾಗವಹಿಸಿದ್ದರು. ಟೀಸರ್ ಬಗ್ಗೆ ಎಲ್ಲರೂ ಕುತೂಹಲ ವ್ಯಕ್ತಪಡಿಸಿದ್ದರು. ನಿರ್ದೇಶನ, ಛಾಯಾಗ್ರಹಣ, ಸಂಕಲನ ಹಾಗೂ ಹಿನ್ನೆಲೆ ಸಂಗೀತ, ಕಲರ್ ಗ್ರೇಡಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು. ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ನಡೆದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ನಿರ್ಮಾಪಕ, ನಿರ್ದೇಶಕರಾದ ಪ್ರಕಾಶ್ ಪಾಂಡೇಶ್ವರ ಉದ್ಘಾಟನೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಟೀಸರ್ ಬಿಡುಗಡೆಯನ್ನು ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಡೆಸಿಕೊಟ್ಟು ಧರ್ಮ ಚಾವಡಿ…

Read More