Author: admin
ಮಹಾರಾಷ್ಟ್ರದ ಪ್ರತಿಷ್ಠಿತ ಜಾತೀಯ ಸಂಘ ಸಂಸ್ಥೆಗಳಲ್ಲೊಂದಾದ ಬಂಟರ ಸಂಘ ಮುಂಬಯಿ ಇದರ ಸಮಾಜ ಕಲ್ಯಾಣ ಸಮಿತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಜೂನ್ 7 ರಂದು ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10ರಿಂದ ಅಪರಾಹ್ನ 2ರ ತನಕ ನಡೆಯಲಿದೆ. ಬಹಳಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ, ವಿಶೇಷ ಚೇತನರುಗಳಿಗೆ ಮತ್ತು ವಿಧವೆಯರಿಗೆ ಆರ್ಥಿಕ ನೆರವು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ದತ್ತು ಸ್ವೀಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮತ್ತು ಸಾಧನೆಗೈಯ್ಯುತ್ತಿರುವ ವಿದ್ಯಾರ್ಥಿಗಳು, ಸಾಧಕರುಗಳಿಗೆ ಆರ್ಥಿಕ ನೆರವು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗೌರವಾರ್ಪಣೆ ಹೀಗೆ ಅನೇಕ ಸಮಾಜಪರ ಕಾರ್ಯಗಳು ಅಂದು ನಡೆಯಲಿವೆ. ಈ ಅರ್ಥಪೂರ್ಣ ಕಾರ್ಯಕ್ರಮ ದಿವಂಗತ ವಾಸು ಕೆ. ಶೆಟ್ಟಿಯವರ ಸ್ಮರಣಾರ್ಥ ಚರಿಶ್ಮಾ ಬಿಲ್ಡರ್ಸ್ ನ ಕಾರ್ಯಾಧ್ಯಕ್ಷ ಸುಧೀರ್ ವಿ. ಶೆಟ್ಟರ ಪ್ರಮುಖ ಪ್ರಾಯೋಜಕತ್ವದಲ್ಲಿ ನಡೆಯಲಿದೆ. ಈ ಸಮಾಜಪರ ಮಾತ್ರವಲ್ಲ, ಸಂಘದ ಬಹುದೊಡ್ಡ ಕಾರ್ಯಕ್ರಮ ಆಗಿರುವ ಬೃಹತ್…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮದ ರಾಷ್ಟ್ರೀಯ ಕಲಾ ಸಮ್ಮೇಳನ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ನಾಡೋಜ ಜಿ. ಶಂಕರ್ ಅವರು, ಕಳೆದ 10 ವರ್ಷಗಳಿಂದ ಪಟ್ಲ ಫೌಂಡೇಶನ್ ಟ್ರಸ್ಟ್ ಜನಮೆಚ್ಚಿದ ಕೆಲಸವನ್ನು ಮಾಡುತ್ತಾ ಬಂದಿದೆ. ಈಗಿನ ಪೀಳಿಗೆ ಯಕ್ಷಗಾನ ಕಲೆಯ ಬಗ್ಗೆ ಅಷ್ಟಾಗಿ ಅಭಿರುಚಿಯನ್ನು ಹೊಂದಿಲ್ಲ. ಆದರೆ ಪಟ್ಲರ ಕಾರ್ಯ ಸಾಧನೆಯಿಂದ ಯಕ್ಷಗಾನ ಇಂದು ಯುವ ಮನಸುಗಳಿಗೂ ಆಪ್ತವಾಗಿದೆ. ಉಡುಪಿಯಲ್ಲೂ ನಮ್ಮ ಟ್ರಸ್ಟ್ ಪಟ್ಲರ ಜೊತೆಗೆ ಕೈಜೋಡಿಸಲಿದೆ. ಇದೊಂದು ಒಳ್ಳೆಯ ಕಾರ್ಯಕ್ರಮ. ಪಟ್ಲರ ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ದುಡಿದಾಗ ಕಲಾವಿದರ ಬದುಕು ಹಸನಾಗುತ್ತದೆ ಎಂದರು. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತಾಡಿ, ಯಕ್ಷಗಾನ ಮಲೆನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುನ್ನತ ಕಲೆ. ನಮ್ಮ ಕ್ಷೇತ್ರದ ಮಕ್ಕಳಿಗೆ ಯಕ್ಷಗಾನ ಕಲಿಸುತ್ತಿರುವ ಪಟ್ಲ ಸತೀಶ್ ಶೆಟ್ಟಿಯವರು ಅಭಿನಂದನಾರ್ಹರು. ಇಂತಹ ಕಾರ್ಯಕ್ಕೆ ನಾವೆಲ್ಲರೂ ಬೆಂಬಲ…
ಒಮ್ಮೊಮ್ಮೆ ಹೀಗೂ ಆಗುವುದು. 2025ರ ಐಪಿಎಲ್ನ ಕ್ವಾಲಿಫೈಯರ್ ಪಂದ್ಯದಲ್ಲಿ ಆಗಿದ್ದು ಅದೇ. ಕೆಂಪು ಗುಲಾಬಿಯನ್ನು ಕೀಳಲು ಹೋದ ಪ್ರೀತಿಯ ಹುಡುಗರಿಗೆ ಮುಳ್ಳು ಚುಚ್ಚಿದ್ದು ಗೊತ್ತೇ ಆಗಲಿಲ್ಲ. ಗೊತ್ತಾದಾಗ ಡಿಂಪಲ್ ರಾಣಿಯ ಹುಡುಗರ ಮನಸ್ಸು ಕೈ ಜಾರಿ ಹೋಗಿದೆ. ಐಪಿಎಲ್ನಲ್ಲಿ ಭಗ್ನ ಪ್ರೇಮದ ವೇದನೆಯಲ್ಲಿರುವ ಬೆಂಗಳೂರು ಹುಡುಗರ ಭಾಗ್ಯದ ಬಾಗಿಲು ತೆರೆದಂತಿದೆ. ಹೌದು, ಆರ್ ಸಿಬಿ ಅಂದ್ರೆ ಸೂಜಿಗಲ್ಲಿನಂತೆ ಸೆಳೆಯುವ ಅಯಸ್ಕಾಂತ. ಸೋತರೆ ಕಣ್ಣೀರು. ಗೆದ್ದರೆ ಪರಮಾನಂದ. ಕಪ್ ಗೆಲ್ಲದಿದ್ರೂ ಚಿಂತೆ ಇಲ್ಲ. ಯಾಕಂದ್ರೆ ಅದು ಎಂದೆಂದಿಗೂ ಮುಗಿಯದ ಅಮರ ಪ್ರೇಮ. ಒಂದು ರೀತಿಯಲ್ಲಿ ಮೋಹದ ಬಲೆಯೊಳಗೆ ಬಿದ್ದ ಪ್ರೀತಿಯ ಹಾಗೇ. ಆರ್ ಸಿಬಿ ಅಭಿಮಾನಿಗಳ ಪ್ರೀತಿಯ ಅಭಿಮಾನ, ತಾಳ್ಮೆ, ಸಂಯಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಪ್ರತಿಷ್ಠೆ, ಆತ್ಮಾಭಿಮಾನಕ್ಕೆ ದಕ್ಕೆಯಾದ್ರೂ ಡೋಂಟ್ಕೇರ್. ಎಷ್ಟೇ ಟೀಕೆ, ಹೀಯಾಳಿಸಿದ್ರೂ ಪರವಾಗಿಲ್ಲ. ಒಂದಲ್ಲ ಒಂದು ದಿನ ಗೆದ್ದೇ ಗೆಲ್ತೀವಿ ಅನ್ನೋ ಬಲವಾದ ನಂಬಿಕೆ ರೆಡ್ ಆರ್ಮಿಯಲ್ಲಿದೆ. ಪ್ರತಿ ಸಲ ಈ ಬಾರಿ ಕಪ್ ನಮ್ದೆ ಅಂತ…
ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಐದು ಸಾವಿರ ರ್ಯಾಂಕ್ನ ಒಳಗೆ ಹಾಗೂ 13 ಜನ ವಿದ್ಯಾರ್ಥಿಗಳು ಹತ್ತು ಸಾವಿರ ರ್ಯಾಂಕ್ನ ಒಳಗಡೆ ಸ್ಥಾನ ಪಡೆದಿದ್ದಾರೆ. ಕೆಟಗರಿ ವಿಭಾಗದಲ್ಲಿ ಆಕಾಶ ಪೂಜಾರ್ (924 ರ್ಯಾಂಕ್), ತನುಶ್ರೀ ಹೆಚ್ಟಿ (1295 ರ್ಯಾಂಕ್), ಪುನೀತ್ ಕುಮಾರ್ ಬಿಜಿ(2030 ರ್ಯಾಂಕ್), ತುಷಾರ್ ಘನಶ್ಯಾಮ್ (3027 ರ್ಯಾಂಕ್), ಸುಮಿತ್ (3359 ರ್ಯಾಂಕ್) ಮೋಹನ್ ಶಿವಶಂಕರ್ ಪೈ (3510 ರ್ಯಾಂಕ್), ಜೀವನ್ ಪಿ ವಿ (4164 ರ್ಯಾಂಕ್), ಪಾಡುರಂಗ ಜಿವಿ (4222 ರ್ಯಾಂಕ್), ರೋಶನ್ ಶೆಟ್ಟಿ (5857 ರ್ಯಾಂಕ್), ಗಣೇಶ್ (6073 ರ್ಯಾಂಕ್), ಭಾನು ಹರ್ಷ (6485 ರ್ಯಾಂಕ್), ಶೋಹೆಬ್ ರೆಹ್ಮಾನ್ (7184 ರ್ಯಾಂಕ್), ವಿಜೇತ್ ಜಿ ಗೌಡ (8993 ರ್ಯಾಂಕ್ ) ಪಡೆದಿದ್ದಾರೆ. ಒಟ್ಟು ಸಂಸ್ಥೆಯ 20 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ಸಾಧನೆ…
ಅಂಧೇರಿ ಪಶ್ಚಿಮದ ಲೋಖಂಡ್ವಾಲ ಆಜಾದ್ ನಗರ, ಭಕ್ತಿ ವೇದಾಂತ ಸ್ಕೂಲ್ ಸಮೀಪದ ಶಾಸ್ತ್ರಿ ನಗರ, 105 ವಿಕ್ಟೋರಿಯಾ ಬಿಲ್ಡಿಂಗ್ ಬಿ/25 ರ ನಿವಾಸಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹರಿಪ್ರಸಾದ್ ಬಿ. ಶೆಟ್ಟಿ (54) ಅವರು ಮೇ 19 ರಂದು ನಿಧನರಾಗಿದ್ದಾರೆ. ತುಂಗಾ ಹಾಸ್ಪಿಟಲ್ ಮತ್ತು ತಿರುಮಲ ಫುಡ್ ಇಂಡಸ್ಟ್ರೀಸ್ ನ ನಿರ್ದೇಶಕರಾಗಿದ್ದ ಅವರು ಮಧ್ವ ಗುತ್ತು ದಿವಂಗತ ಭೋಜ ಎಂ. ಶೆಟ್ಟಿ ಮತ್ತು ಬೈಲು ಕೊಳಂಬೆ ವಸಂತಿ ಬಿ. ಶೆಟ್ಟಿ ದಂಪತಿಯ ಜೇಷ್ಠ ಪುತ್ರರಾಗಿದ್ದರು. ಮೃತರು ಪತ್ನಿ ಕಾಂತಿ ಎಚ್. ಶೆಟ್ಟಿ, ಇಬ್ಬರು ಪುತ್ರರಾದ ಆದರ್ಶ್, ಅಭಿಷೇಕ್ ಮತ್ತು ಇಬ್ಬರು ಸಹೋದರರಾದ ರಾಜೇಶ್ ಬಿ. ಶೆಟ್ಟಿ ( ಜವಾಬ್ ನ ಅಧ್ಯಕ್ಷರು ಹಾಗೂ ತುಂಗಾ ಹಾಸ್ಪಿಟಲ್ ನ ನಿರ್ದೇಶಕರು) ಮತ್ತು ಡಾ. ಸತೀಶ್ ಬಿ. ಶೆಟ್ಟಿ (ತುಂಗಾ ಹಾಸ್ಪಿಟಲ್ ನ ನಿರ್ದೇಶಕರು) ಮತ್ತು ಡಾ. ಸತೀಶ್ ಬಿ. ಶೆಟ್ಟಿ (ತುಂಗಾ ಹಾಸ್ಪಿಟಲ್ ನ ಸಿಎಂಡಿ) ಹಾಗೂ ಸಹೋದರಿ ಪೂಜಾ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು, ಸತೀಶ್ ಪಟ್ಲರಿಗೆ ಅವರ ಕಂಠವೇ ದೇವರು, ಆದರೆ ಯಕ್ಷಗಾನ ಕಲಾವಿದರಿಗೆ ಸತೀಶ್ ಪಟ್ಲರೇ ದೇವರು. ಯಕ್ಷಗಾನ ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ. ಎಂದಿಗೂ ಯಾರ ಮುಂದೆಯೂ ಕೈಚಾಚುವುದಿಲ್ಲ. ಅವರ ಸ್ವಾಭಿಮಾನದ ಬದುಕು ಹಾಗಿರುತ್ತದೆ. ಇಂತಹ ಕಲಾವಿದರಿಗೆ ನೆರವಾಗಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಸ್ಥಾಪಿಸಿ ರಾತ್ರಿ ಹಗಲು ಕಲಾವಿದರ ನೋವಿಗೆ ಸ್ಪಂದಿಸಿದರು. ಅವರು ಪ್ರಾರಂಭದಲ್ಲಿ ನನ್ನ ಬಳಿ ತೊಟ್ಟಿಲು ಕೇಳಿದಾಗ ನಾನು ಹಿಂದೆ ಮುಂದೆ ಯೋಚಿಸದೆ ಬೆಳ್ಳಿ ತೊಟ್ಟಿಲು ನೀಡಿದೆ. ನಂತರ ನನ್ನ ಜೀವನದಲ್ಲಿ ವ್ಯವಹಾರದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡೆ. ನಾವೆಲ್ಲರೂ ಅವರು ಮಾಡುವ ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ. ಅವರ ಸಮಾಜಮುಖಿ ಚಿಂತನೆ,…
ಪುಣೆಯ ಬಂಟರ ಸಂಘದ ಯುವ ವಿಭಾಗದ ನೂತನ ಸಮಿತಿಯ ಪ್ರಥಮ ಸಭೆಯು ಮೇ 25ರಂದು ಪುಣೆ ಶಿವಾಜಿನಗರದ ಕೋರೋನೆಟ್ ಹೋಟೆಲ್ ನಲ್ಲಿ ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಬಂಟರ ಸಂಘದ ಯುವ ವಿಭಾಗದ ನೂತನ ಸಮಿತಿಯ ಉಪಾಧ್ಯಕ್ಷರುಗಳಾದ ನಿಶಾನ್ ಶೆಟ್ಟಿ, ಶ್ರಾವ್ಯಾ ಎಸ್ ಶೆಟ್ಟಿ, ಕಾರ್ಯದರ್ಶಿ ಜಿತೇಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ನಿಧಿ ಹೆಗ್ಡೆ ಹಾಗೂ ಕಾರ್ಯಕಾರಿ ಸಮಿತಿ ಪ್ರಮುಖರುಗಳಾದ ಧೀರ್ ಶೆಟ್ಟಿ, ಸುಮೀತ್ ಶೆಟ್ಟಿ, ಪ್ರಾಣೇಶ್ ಶೆಟ್ಟಿ, ಅಕ್ಷಯ್ ಶೆಟ್ಟಿ, ಅಭಿಜಿತ್ ಶೆಟ್ಟಿ, ದೃತಿ ಶೆಟ್ಟಿ, ಸುಚೀತ್ ಶೆಟ್ಟಿ, ದಿಶಾಂಕ್ ಶೆಟ್ಟಿ, ಹೃತಿಕ್ ಶೆಟ್ಟಿ, ಅಕ್ಷತಾ ರೈ, ಸಾನ್ಯಾ ಶೆಟ್ಟಿ, ಖುಶಿ ಶೆಟ್ಟಿ, ಸಾಗರ್ ಶೆಟ್ಟಿ, ಶರಣ್ ಶೆಟ್ಟಿ, ಸಾನ್ವಿ ಶೆಟ್ಟಿ, ಅಕ್ಷಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.2025 -27 ರ ಸಾಲಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಸ್ವಾಗತಿಸಲಾಯಿತು ಹಾಗೂ ಅಭಿನಂದಿಸಲಾಯಿತು. ಯುವ ವಿಭಾಗದ ಕಾರ್ಯಕಾರಿ ಸಮಿತಿಯ ಸದಸ್ಯರ ಕೂಡುವಿಕೆಯಲ್ಲಿ ನಡೆದ ಸಭೆಯಲ್ಲಿ ಪುಣೆ ಬಂಟರ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಕಟೀಲು ದುರ್ಗಾಪರಮೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರು, ಇಂದು ಮೂರು ವೇದಿಕೆಗಳಲ್ಲಿ ನಿರಂತರ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮ ಇಷ್ಟೊಂದು ಯಶಸ್ವಿಯಾಗಿ ನಡೆಯಬೇಕಾದರೆ ಕೇಂದ್ರೀಯ ಸಮಿತಿಯ ಪ್ರತೀ ಪದಾಧಿಕಾರಿಗಳು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಶ್ರಮವಿದೆ. ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪಟ್ಲ ಫೌಂಡೇಶನ್ ದಾನಿಗಳ ನೆರವಿನಿಂದ ಇನ್ನಷ್ಟು ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಎಲ್ಲರ ಒಗ್ಗಟ್ಟಿನಲ್ಲಿ ಮಾತ್ರ ಸಾಧ್ಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಮಾತಾಡಿ, ನನಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಭಾಗವಾಗಿರಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಇದಕ್ಕಾಗಿ ಎಲ್ಲಾ ಪದಾಧಿಕಾರಿಗಳು, ದೇಶ ವಿದೇಶದಲ್ಲಿರುವ ಘಟಕದ ಪದಾಧಿಕಾರಿಗಳಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ. ಪಾರ್ತಿಸುಬ್ಬರಿಂದ…
ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ‘ಸತಿ ಉಲೂಪಿ’ ಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು.ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ ಮೇಳಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿದ್ದು…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪೋಷಕರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಭಾರತೀಯ ಸಂಸ್ಕೃತಿಯ ನೆಲೆಯಲ್ಲಿ ಜೀವನಕ್ಕಾಗಿ ಶಿಕ್ಷಣವನ್ನು ನೀಡುವುದು ನಮ್ಮ ಗುರಿಯಾಗಿದೆ. ಪೋಷಕರು ಜಿ ಎಮ್ನ ಮೇಲೆ ಇಟ್ಟ ಭರವಸೆಯನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತೇವೆ. ಪೋಷಕರು ಮನೆಯಲ್ಲಿ ಮಕ್ಕಳಿಗೆ ಪ್ರೀತಿಯ ಜೊತೆಗೆ ಹೆಚ್ಚಿನ ಸಮಯವನ್ನು ಕೊಡಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಮಕ್ಕಳ ಆಸಕ್ತಿಯ ವಿಷಯಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದು ಸುಸಂಸ್ಕೃತರನ್ನಾಗಿಸುವುದು ಪೋಷಕರ, ಶಿಕ್ಷಕರ ಕರ್ತವ್ಯವಾಗಿದೆ. ಎಲ್ಲರೂ ಮಕ್ಕಳ ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ಜಿ ಎಮ್ ಮಕ್ಕಳಿಗೆ ಜೀವನ ಕೌಶಲ್ಯದ ಜೊತೆಗೆ ವ್ಯಕ್ತಿತ್ವ ಬೆಳವಣಿಗೆಗೆ ಪ್ರಾಮುಖ್ಯತೆ ನೀಡುತ್ತದೆ ಎಂದರು. ಶಾಲಾ ವಿಭಾಗದ ಮುಖ್ಯಸ್ಥರು ಶಾಲಾ ಚಟುವಟಿಕೆಗಳು, ಪೋಷಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ,…















