Author: admin
ಶ್ರೀಮಂತರೆಲ್ಲ ದಾನಿಗಳಾಗಿರುವುದಿಲ್ಲ. ಹಾಗಾಗಿರುತ್ತಿದ್ದರೆ ಬಂಗಾರದ ಹೂವಿಗೆ ಪರಿಮಳ ಸೇರಿದಂತಾಗುತ್ತಿತ್ತು. ಇದಕ್ಕೆ ಹೃದಯ ಶ್ರೀಮಂತಿಕೆ ಬೇಕಾಗುತ್ತದೆ. ಕೊಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂಬ ಸತ್ಯದ ಅರಿವು ಇದ್ದ ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಅವರು ಹೃದಯ ಶ್ರೀಮಂತಿಕೆ ಇರುವಲ್ಲಿ ಉಳಿದ ಸಿರಿವಂತಿಕೆ ತಾನೇ ತಾನಾಗಿ ಬಂದು ಸೇರಿಕೊಳ್ಳುತ್ತದೆ ಎಂಬ ಸಿದ್ಧಾಂತದಲ್ಲಿ ಆಚಲ ನಂಬಿಕೆ ಇಟ್ಟವರು. ಆರ್ಥಿಕ ಶ್ರೀಮಂತರಾದರೂ, ದಾನ ಗುಣವೂ ರಕ್ತದಲ್ಲಿ ಸೇರಿಕೊಂಡಿರುವ ಅಪರೂಪದ ವ್ಯಕ್ತಿತ್ವ ಶೆಟ್ಟರದ್ದು. ದನಿ ಉಡುಗಿ ಹೋದ ಬಡವರ ದನಿಯಾಗಿ, ಧಣಿಯಾಗಿ, ದಾನಿಯಾಗಿ ಬಡವರ ದಮನಿಸದೆ ದನಿ ಅಡಗಿಸದೆ ದಾನದಿತಾರನಾಗಿ ಖ್ಯಾತಿವೆತ್ತ ಮಾನವತಾವಾದಿ ಕೂಳೂರು ಕನ್ಯಾನ ಸದಾಶಿವ ಶೆಟ್ಟರು. ಉದಾರ ದಾನಿ ಸದಾಶಿವ ಕೆ ಶೆಟ್ಟರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿಯ ಕನ್ಯಾನದ ಕೂಳೂರಿನವರು. ಫಕೀರ ಶೆಟ್ಟಿ ಲೀಲಾವತಿ ದಂಪತಿಯರಿಗೆ ಸುಪುತ್ರನಾಗಿ ಜನಿಸಿದ ಶೆಟ್ಟರು ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿ ಪೂರೈಸಿ ಪದವಿ ವ್ಯಾಸಂಗವನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮುಗಿಸಿದರು. ಬಳಿಕ ಮೈಸೂರಿನ ಮಾನಸ…
ಜೀವನವನ್ನು ಸಹಜವಾಗಿ ಆಸ್ವಾಧಿಸುವುದನ್ನು ಕಲಿಸುವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಮೂಡಿಸುವ ಕಲೆ, ನಾಟಕಗಳ ಮೂಲಕ ವಿಶ್ವ ಸಾಂಸ್ಕೃತಿಕ ಪರಂಪರೆಗೆ ರಂಗಭೂಮಿ ನೀಡಿದ ಕೊಡುಗೆ ಅಪಾರ ಎಂದು ಯಕ್ಷಕಲಾ ರಂಗದ ಅಧ್ಯಕ್ಷ ವಿಜಯ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಯಕ್ಷ ರಂಗಾಯಣ ಕಾರ್ಕಳ ಹಾಗೂ ರಂಗ ಸಂಸ್ಕೃತಿ ಕಾರ್ಕಳ ಇದರ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಜುನಾಥ ಪೈ ಸಭಾಂಗಣದಲ್ಲಿ ಮಾರ್ಚ್ 20 ರಿಂದ 35 ರವರೆಗೆ ನಡೆದ 11 ನೆಯ ವರ್ಷದ ಬಿ ಗಣಪತಿ ಪೈ ರಂಗೋತ್ಸವ ‘ಮಾಗಿ ಸುಗ್ಗಿ’ ನಾಟಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಈ ಸಂಧರ್ಭ ಭೂಮಿಕಾ ಹಾರಾಡಿ ಮತ್ತು ನಾಟಕ ತಂಡದ ನಿರ್ದೇಶಕ ರಾಮ್ ಶೆಟ್ಟಿಯವರನ್ನು ಗೌರವಿಸಲಾಯಿತು. ರಂಗ ಸಂಸ್ಕೃತಿಯ ಅಧ್ಯಕ್ಷ ನಿತ್ಯಾನಂದ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾಟಕೋತ್ಸವ ಸಂಚಾಲಕ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಉಪಸ್ಥಿತರಿದ್ದರು.
ಮೇ ತಿಂಗಳಿನಲ್ಲಿ ನಡೆಯುವ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಅಗ್ರಹಾರ ಬೀದಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಅವರು ಆಯ್ಕೆಯಾಗಿದ್ದಾರೆ.ದೇವಸ್ಥಾನದ ವಠಾರದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಸುದರ್ಶನ್ ಬಲ್ಲಾಳ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಉಳಿದಂತೆ ಗೌರವಾಧ್ಯಕ್ಷರಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಂಕರ ಶೆಟ್ಟಿ ಬಡಾಜೆ, ಉದ್ಯಮಿ ಸತೀಶ್ ಭಂಡಾರಿ ಕುಳತ್ತಬೆಟ್ಟು, ಕಾರ್ಯಾಧ್ಯಕ್ಷರಾಗಿ ಸೀತಾರಾಮ ಸಾಲ್ಯಾನ್, ಕಾರ್ಯದರ್ಶಿಯಾಗಿ ಸದಾನಂದ ಗೌಡ ನಾವೂರು, ಉಪಾಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಜಯಪ್ರಕಾಶ್ ಬಂಟ್ವಾಳ, ಲೋಕನಾಥ ಶೆಟ್ಟಿ ಬಿ.ಸಿ.ರೋಡು, ಇಂದಿರಾ ಸೂರಜ್ ನಾವೂರು ಬೀದಿ, ಶೇಖರ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ತೇಜ್ ಪಾಲ್ ಜೈನ್, ಶ್ರೀಹರಿ ಕಾರಂತ್, ವೇಣುಗೋಪಾಲ ಆಚಾರ್ಯ, ಸತೀಶ್ ಕರ್ಕೇರ, ಕೋಶಾಧಿಕಾರಿಯಾಗಿ ಸುದರ್ಶನ್ ಬಲ್ಲಾಳ್, ಗೌರವ ಸಲಹೆಗಾರರಾಗಿ ಗಂಗಾಧರ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.ದೇವಳದ ಜೀಣೋದ್ದಾರ ಸಮಿತಿಯನ್ನು ಈ ಮೊದಲೇ ರಚಿಸಲಾಗಿದ್ದು, ಮಾಜಿ ಸಚಿವ ಬಿ. ರಮಾನಾಥ…
ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯ ಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಪುತ್ತೂರು ಟೌನ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯದ ಶೇಖರ ಶೆಟ್ಟಿ ಇವರು ಮಾತನಾಡಿ, ಸೋಲು ಗೆಲುವಿನ ಪಯಣದಲ್ಲಿ ಮಕ್ಕಳನ್ನು ಸೋಲಲು ಬಿಡಿ. ಸೋತ ನಂತರ ಗೆಲುವು ಪಡೆದುಕೊಳ್ಳುವುದು ಗೆಲುವಿನ ಪ್ರಥಮ ದಾರಿಯಾಗಿರುತ್ತದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿ ಮಾಡಿ ಎಂದು ಅಭಿಪ್ರಾಯಪಟ್ಟರು. ಗುರುವಿನ ಗುಲಾಮನಾಗುವ ತನಕ ದೊರೆಯದನ್ನ ಮುಕುತಿ ಎಂಬ ಪುರಂದರದಾಸರ ಕೀರ್ತನೆಯನ್ನು ಈ ಸಂದರ್ಭದಲ್ಲಿ ನೆನಪಿಸಿಕೊಂಡರು. ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಅಧ್ಯಕ್ಷರಾದ ಜಯಂತ ನಡುಬೈಲು, ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಕಾಲೇಜು ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ಪಾತ್ರ ಎಷ್ಟಿದೆಯೋ ಅಷ್ಟೇ ಮಹತ್ವವಾದ ಪಾತ್ರ ಪೋಷಕರದ್ದು ಆಗಿರುತ್ತದೆ ಎಂದು ಬಂದಿರುವ ಎಲ್ಲಾ ಪೋಷಕರಿಗೂ ಮನದಟ್ಟು ಮಾಡಿದರು. ಈ ಶೈಕ್ಷಣಿಕ ಸಾಲಿನ ನೂತನ ರಕ್ಷಕ…
ವಿದ್ಯಾಗಿರಿ:ಸಮಾಜದಿಂದ ಎಲ್ಲವನ್ನು ಪಡೆದು, ಸಮಾಜಕ್ಕೆ ಹಿಂತಿರುಗಿಸುವ ಬದ್ಧತೆಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಇದು ದೇಶದ ಸಮತೋಲಿತ ಬೆಳವಣಿಗೆಗೆ ಸಹಕಾರಿ ಎಂದು ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್. ಮರಿಯಪ್ಪ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಮಾನವಿಕ ವಿಭಾಗ ಕುವೆಂಪು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ‘ಪ್ರಥ್ವಿ ಪರ್ವ’ ರಾಷ್ಟೀಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಕೊಡುಗೆ ಕೇವಲ ಆರ್ಥಿಕ ನೆರವಿನ ಮೂಲಕ ಮಾತ್ರ ಆಗಬೇಕೆಂದಿಲ್ಲ. ಪರಿಸರದ ರಕ್ಷಣೆ ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ನಮ್ಮ ಭವಿಷ್ಯ ಪೀಳಿಗೆಗೆ ಉಚಿತವಾಗಿ ನೀಡಬಹುದಾದ ಅಮೂಲ್ಯ ಕೊಡುಗೆಯಾಗಿದೆ. ನಾವಿಂದು ಪ್ರಕೃತಿ ಯಿಂದ ಎಲ್ಲವನ್ನು ಪಡೆದು, ಅದೇ ಪ್ರಕೃತಿಯನ್ನು ನಾಶ ಮಾಡಲು ಹೊರಟಿದ್ದೇವೆ. ಪರಿಸರದ ಸಂರಕ್ಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡದಿದ್ದರೆ ಭವಿಷ್ಯದಲ್ಲಿ ಹಲವು ಸಂಕಟಗಳನ್ನು ಎದುರಿಸಬೇಕಾಗುತ್ತದೆ. “ನಾವು ಪ್ರಕೃತಿಯನ್ನು ಸಂರಕ್ಷಿಸಿದರೆ, ಅದು ನಮ್ಮನ್ನು ಸಂರಕ್ಷಿಸುತ್ತದೆ” ಎಂಬ ಸತ್ಯವನ್ನು ಅರಿಯಬೇಕಿದೆ. ನೈಸರ್ಗಿಕ ಸಂಪನ್ಮೂಲಗಳನ್ನು ಮಿತವಾಗಿ ಬಳಸಬೇಕು. ನಾವು ಬಳಸುವ ಪ್ರತಿಯೊಂದು ವಸ್ತುವಿನಲ್ಲಿ…
ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು. ಕೆ.ಎಂ.ಸಿ ಮಣಿಪಾಲದ ಕಮ್ಯುನಿಟಿ ಮೆಡಿಸಿನ್ ವಿಭಾಗದ ಪ್ರೊಫೆಸರ್ ಡಾ. ಮುರಳಿಧರ ಎಮ್. ಕುಲಕರ್ಣಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಮಾತನಾಡಿ ಯು.ಕೆ.ಜಿ ಮಕ್ಕಳ ಶಿಕ್ಷಣದ ಮೊದಲ ಹಂತವಾಗಿದೆ. ನಿಮ್ಮ ಮಕ್ಕಳನ್ನು ಜಿ ಎಮ್ ಸಂಸ್ಥೆಗೆ ಸೇರಿಸಿ ಅವರ ಸಾಧನೆಗೆ ಉತ್ತಮ ಅಡಿಪಾಯ ಹಾಕಿದ್ದೀರಿ. ಮಕ್ಕಳಿಗೆ ಒತ್ತಡವನ್ನು ಹೇರದೆ ಅವರ ಆಸಕ್ತಿಯ ವಿಷಯವನ್ನು ಪ್ರೋತ್ಸಾಹಿಸಬೇಕು. ಅವರು ಸಮಾಜದ ಹಿತವನ್ನು ಕಾಯುವ ಕೆಲಸವನ್ನು ಮಾಡುವಂತೆ ಉತ್ತೇಜಿಸಬೇಕು. ಮಕ್ಕಳು ಹೆಚ್ಚಾಗಿ ನೋಡಿ ಕಲಿಯುವುದರಿಂದ ಶಿಕ್ಷಕರು ಮತ್ತು ಪೋಷಕರು ಮಗುವಿನಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸಲು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿರಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿ ಮಾತನಾಡಿ ಮಕ್ಕಳಿಗೆ ತಮ್ಮ ಪೋಷಕರೇ ಆದರ್ಶ ವ್ಯಕ್ತಿಗಳಾಗಿರುತ್ತಾರೆ. ಪಾಲಕರು ಮಕ್ಕಳೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಬೇಕು. ಅವರ ಕಲಿಕೆಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ…
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರಾಯೋಜಿಸುತ್ತಿರುವ ವಾರ್ಷಿಕ ವಂದನಾ ಪ್ರಶಸ್ತಿ 2025 ಕ್ಕೆ ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಡಾ| ಕೆ. ಪ್ರಕಾಶ್ ಶೆಟ್ಟಿ ಅವರು ಹೋಟೆಲ್ ಉದ್ಯಮದಲ್ಲಿ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಹಾಗೂ ಅಮೂಲ್ಯ ಕೊಡುಗೆ ಮತ್ತು ಗಣನೀಯ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾರ್ಚ್ 28ರಂದು ರಾತ್ರಿ 8:00 ಗಂಟೆಗೆ ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ಜರಗುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿ ಡಾ. ದೇವದಾಸ್ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಪ್ರಶಸ್ತಿಯು ಪ್ರಶಸ್ತಿ ಫಲಕ, ಪ್ರಶಸ್ತಿ ಪ್ರಮಾಣ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಪ್ರಶಸ್ತಿ ಪ್ರಧಾನ ಮಾಡುವರು. ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಿಯಾನ್ ಪಿಂಟೋ ಅಧ್ಯಕ್ಷತೆ ವಹಿಸುವರು. ರೋಟರಿ ಜಿಲ್ಲಾ 3181ರ…
ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಇನ್ನಾ ಗ್ರಾಮದ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ 2025 – 28 ನೂತನ ಅಧ್ಯಕ್ಷರಾಗಿ ದಿವಾಕರ್ ಆರ್. ಶೆಟ್ಟಿ ಕಾಚೂರ ಪರಾಡಿ ಅವರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ದೇವಳದ ಸಂಪೂರ್ಣ ಪ್ರಭಾರವನ್ನು ಹಸ್ತಾಂತರಿಸುವಂತೆ ಆಡಳಿತಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಹಾಯಕ ಆಯುಕ್ತೆ ಟಿ. ಎನ್. ಮಂಜುಳಾ ತಿಳಿಸಿದ್ದಾರೆ. ಸಮಿತಿಯ ಸದಸ್ಯರಾಗಿ ಜಯ ಎಸ್. ಕೋಟ್ಯಾನ್ ಬೈಲುಮನೆ, ಹರೀಶ್ ಶೆಟ್ಟಿ ದಡ್ಡು ಮನೆ, ವಿಮಲಾ ರವಿ ಮಡ್ಮಣ್, ಸುಜಾತ ಗಿರಿಯಪ್ಪ ಪೂಜಾರಿ, ಮಂಜುಳಾ ಕುಶ ಮೂಲ್ಯ, ಗಣೇಶ್ ಆಚಾರ್ಯ, ಮಹೇಶ್ ಪುತ್ರನ್ ಇರ್ಮಾಡಿ ಆಯ್ಕೆಯಾಗಿದ್ದಾರೆ.
ವಂಜಾರ ಕಟ್ಟೆ ಆಂಗ್ಲ ಮಾಧ್ಯಮ ಶಾಲೆಯ ಹೊಸ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಮಾರ್ಚ್ 27 ಬೆಳಿಗ್ಗೆ 9:30ಕ್ಕೆ ನಡೆಯಿತು. ವೈದಿಕ ವೃಂದದವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ ಕೇವಲ ಒಂದು ಕಟ್ಟಡವಲ್ಲ, ಇದು ಗ್ರಾಮೀಣ ಭಾಗದ ಅನೇಕ ಮಕ್ಕಳ ಕನಸುಗಳನ್ನು ನನಸಾಗಿಸುವ ಜ್ಞಾನ ಮಂದಿರ, ಭವಿಷ್ಯದ ಪೀಳಿಗೆಗಳಿಗೆ ಗುರಿಯನ್ನು ರೂಪಿಸುವ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಸಾಂಸ್ಕೃತಿಕವಾಗಿ, ಅಕ್ಷರ ದೀಪ ಬೆಳಗಿಸುವ ದೇಗುಲ. ಈ ನಿಟ್ಟಿನಲ್ಲಿ ಎಲ್ಲರ ಪ್ರೇರಣೆ ಜೊತೆಗೆ, ಸ್ಪೂರ್ತಿಯ ಬೆಂಬಲದ ಅಗತ್ಯವಿದೆ ಎಂದು ಶಾಲಾ ಸಂಚಾಲಕರಾದ ಅಕ್ಷಯ ಅಡ್ಯಂತಾಯ ತಿಳಿಸಿದರು.ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥ ಅಶೋಕ ಅಡ್ಯಂತಾಯ, ರಶ್ಮಿತಾ ಅಡ್ಯಂತಾಯ, ಕರುಣಾಕರ ಶೆಟ್ಟಿ, ಲೇಖಾ ಪಕ್ಕಲ, ಸೋಮಶೇಖರ್ ಶೆಟ್ಟಿ, ಪ್ರೋ ಪದ್ಮನಾಭ ಗೌಡ, ಕಾರ್ತಿಕ ಆಳ್ವ, ವಂಜಾರ ಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ಜಗದೀಶ್ ಆಚಾರ್, ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಪ್ರಕಾಶ್, ಹಳೆ ವಿದ್ಯಾರ್ಥಿ ಸಂಘದ…
ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ಪವಿತ್ರ ಅವರು ಅಧಿಕಾರ ಹಸ್ತಾಂತರಿಸಿದರು. ಈ ನೂತನ ವ್ಯವಸ್ಥಾಪನಾ ಸಮಿತಿಯಲ್ಲಿ ಅಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಅರ್ಚಕರಾಗಿ ಗೋಪಾಲಕೃಷ್ಣ ಭಟ್, ಸದಸ್ಯರಾಗಿ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ್ ಅಂಚನ್, ಸತೀಶ್, ಶ್ರೀಮತಿ ಮಮತಾ ಶೆಟ್ಟಿ ಹಾಗೂ ಶ್ರೀಮತಿ ಅನುಷಾ ಅವರು ಅಧಿಕಾರ ಸ್ವೀಕರಿಸಿದರು. ಈ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಪ್ಪೂರು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ತೆಂಕನಿಡಿಯೂರು ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾಯ್ಕ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಸುರೇಶ್ ನಾಯಕ್, ಶರತ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉದಯ್, ಉಮೇಶ್ ಪೂಜಾರಿ, ಉಡುಪಿ…















