Author: admin
ಮುಂಬೈ:- ಸಾಹಿತ್ಯವಲಯದಲ್ಲಿ ಮುಂಬಯಿ ತುಳು-ಕನ್ನಡಿಗರ ಸಾಧನೆ ಅಪೂರ್ವವಾದುದು. ಮುಂಬಯಿ ಮಹಾನಗರದಲ್ಲಿ ಪುಸ್ತಕ ಪ್ರಕಟಣೆ ಸವಾಲಿನ ಕೆಲಸ. ಮುಂಬಯಿಯಲ್ಲಿ ಸಾಹಿತ್ಯದ ಕೃಷಿ ಪುಸ್ತಕ ರೂಪದಲ್ಲಿ ಫಲ ನೀಡಬೇಕೆಂದರೆ ಪ್ರಕಾಶಕರ ಕೊರತೆ ಇತ್ತು. ಮುಂಬಯಿ ಮಹಾನಗರದಲ್ಲಿ ಪುಸ್ತಕ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆಂಬ ಅಭಿಲಾಷೆ ಇತ್ತು. ಲೇಖಕರು ತಮ್ಮ ಪುಸ್ತಕಗಳನ್ನು ಪ್ರಕಟಿಸಲು ಅನುಕೂಲವಾಗಬೇಕೆಂಬ ಉದ್ದೇಶದಿಂದ 2004ರಲ್ಲಿ ಅಭಿಜಿತ್ ಪ್ರಕಾಶನವನ್ನು ಸ್ಥಾಪಿಸಿದೆ. ನಂತರ ಲೇಖಕರ ಅಭೂತಪೂರ್ವ ಸ್ಪಂದನೆ ಈ ಪ್ರಕಾಶನ ಸಂಸ್ಥೆಯ ಬೆಳವಣಿಗೆಗೆ ಕಾರಣವಾಗಿದೆ. ಈ ಎರಡು ದಶಕಗಳಲ್ಲಿ ಹಿರಿಕಿರಿಯ ಲೇಖಕರ ಬೇರೆ ಬೇರೆ ಪ್ರಕಾರದ ಪುಸ್ತಕಗಳು ಬೆಳಕು ಕಂಡು ವಿದ್ವಾಂಸರ ಗಮನ ಸೆಳೆದಿದೆ. ಉತ್ತಮ ಪುಸ್ತಕಗಳು ಅಭಿಜಿತ್ ಪ್ರಕಾಶನ ಹೊರತಂದಿದೆ ಎಂಬ ಸಮಧಾನವಿದೆ ಎಂದು ಅಭಿಜಿತ್ ಪ್ರಕಾಶನದ ಸಂಚಾಲಕರಾದ ಪ್ರೊ.ಜಿ.ಎನ್.ಉಪಾಧ್ಯ ಅವರು ಅಭಿಪ್ರಾಯ ಪಟ್ಟರು. ಅವರು ಮೇ 25ರಂದು ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗ ಹಾಗೂ ಕನಕ ಸಭಾ ಫರ್ಮಫಾರ್ಮಿಂಗ್ ಆರ್ಟ್ಸ್ ಸೆಂಟರ್ ಇವರ ಸಂಯುಕ್ತ ಆಶ್ರಯದಲ್ಲಿ ಚೆಂಬೂರಿನ ಬಾಲವಿಕಾಸ ಸಭಾಗೃಹದಲ್ಲಿ ನಡೆದ ಅಭಿಜಿತ್ ಪ್ರಕಾಶನದ…
ಅಹ್ಮದ್ ನಗರದ ಉದ್ಯಮಿ, ಕಲಾಪೋಷಕ ಮತ್ತು ಧಾರ್ಮಿಕ, ಸಾಮಾಜಿಕ ಸೇವಾಕರ್ತ ಕೆ.ಕೆ. ಶೆಟ್ಟಿ ಅವರು ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಕಲ್ಚರಲ್ ಆರ್ಗನೈಸೇಷನ್ ಸಂಸ್ಥೆಯು ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ ಸೇವೆಗಾಗಿ ಕೆ.ಕೆ. ಶೆಟ್ಟರಿಗೆ ಈ ಪ್ರಶಸ್ತಿಯನ್ನು ಘೋಷಿಸಿದೆ. ಸೇವಾ ಸಾಧಕ: ಮೂಲತಃ ಕುಂಬಳೆಯವರಾದ ಕುತ್ತಿಕ್ಕಾರು ಕಿಂಜ್ಞಣ್ಣ ಶೆಟ್ಟಿ ಅವರು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಪೂರೈಸಿ 1980 ರಲ್ಲಿ ಅಹ್ಮದ್ ನಗರ ಸೇರಿದರು. ಹೋಟೆಲು ಉದ್ಯಮಕ್ಕೆ ತೊಡಗಿದ ಅವರು ಪ್ರಸ್ತುತ ತಮ್ಮ ಶಬರಿ ಇಂಡಸ್ಟ್ರಿಯಲ್ ಕ್ಯಾಟರಿಂಗ್ ಮೂಲಕ 55 ಕ್ಕೂ ಮಿಕ್ಕಿ ಕ್ಯಾಂಟೀನ್ ಗಳನ್ನು ನಡೆಸುತ್ತಿದ್ದಾರೆ. 1990 ರಲ್ಲಿ ಅಹ್ಮದ್ ನಗರದಲ್ಲಿ ಸುಂದರ ಅಯ್ಯಪ್ಪ ಮಂದಿರ ಕಟ್ಟಿಸಿ ಅದರ ಸ್ಥಾಪಕ ಅಧ್ಯಕ್ಷರಾದರು. 2020 ರಲ್ಲಿ ತಮ್ಮ ಹುಟ್ಟೂರು ಮುಂಡಪಳ್ಳದಲ್ಲಿ ನೂತನ ಶ್ರೀ ರಾಜರಾಜೇಶ್ವರಿ ದೇವಸ್ಥಾನವನ್ನು ನಿರ್ಮಿಸಿ ಅದರ ಆಡಳಿತ ಮೊಕ್ತೇಸರರಾಗಿದ್ದಾರೆ. ಅಡೂರು, ಮಧೂರು, ಕನ್ಯಾನ ಕ್ಷೇತ್ರಗಳ ಜೀರ್ಣೋದ್ದಾರ ಕಾರ್ಯದಲ್ಲಿ ಪ್ರಮುಖ ಕೆಲಸಗಳನ್ನು ತಾವೇ…
ಮುಂಬಯಿ, ಜೂ.02: ಬಂಟರೆಲ್ಲರೂ ದಾನಿಗಳಾಗಿದ್ದಾರೆ. ಆದರೆ ಕೆಲವರು ಆರ್ಥಿಕವಾಗಿ ಆಶಕ್ತರಿರಬಹುದು. ಬಂಟರಲ್ಲಿ ಸ್ವಾಭಿಮಾನ ಎಂದಿದೆ. ಯಾರಲ್ಲೂ ಕೈಚಾಚಿ ಸಣ್ಣವರಾಗುವ ಬಂಟರಿಲ್ಲ. ಆದರೂ ಅವಶ್ಯಕತೆಗೆ ಸ್ವಾಭಿಮಾನದಿಂದ ಹೊರಬಂದು ಸದೃಢರಾಗಿ ಸಮಾಜದ ಮುಂದೆ ಸ್ವತಂತ್ರರಾಗಿ ಬಾಳೋಣ. ಮುಂಬಯಿ ಬಂಟರಿಗೆ ಕೊಟ್ಟು ಗೊತ್ತಿದೆ ಹೊರತು ಪಡೆದು ಗೊತ್ತಿಲ್ಲ ಅನ್ನಿಸುತ್ತದೆ. ಅದರಲ್ಲೂ ಶೈಕ್ಷಣಿಕ, ಆರೋಗ್ಯ ಕಾಳಜಿಗಾಗಿ ಸ್ಪಂದಿಸಿ ದೇಣಿಗೆ ನೀಡುವುದು ಖುಷಿಯ ಕೆಲಸವಾಗಿದೆ. ಕಳೆದ ಸುಮಾರು 24 ವರ್ಷಗಳಿಂದ ನಡೆದು ಬರುತ್ತಿರುವ ಈ ಸಾಮಾಜಿಕ ಕ್ಷೇಮಾಭಿವೃದ್ಧಿ ಆರ್ಥಿಕ ಸಹಾಯಾಸ್ತ ಕಾರ್ಯಕ್ರಮ ಸಂತಸ, ನೆಮ್ಮದಿದಾಯಕವಾಗಿದೆ. ಅಗತ್ಯವುಳ್ಳವರಿಗೆ ನೀಡುವುದೇ ಧರ್ಮವಾಗಿದೆ. ಪಡೆದವರು ಮುಂದೆ ಪಡೆಯುವರಿಗೆ ಸಹಾಯಸ್ತ ನೀಡಬೇಕು. ಆವಾಗಲೇ ಸ್ವೀಕೃತ ಋಣ ಸಂದಾಯ ಸಾಧ್ಯ. ಶಿಕ್ಷಣ, ಆರೋಗ್ಯಕ್ಕೆ ನೀಡಿದ ದಾನ ಯಾವೊತ್ತೂ ಪುಣ್ಯಾಧಿಯಾಗಿದ್ದು ಇನ್ನೂ ಇಂತಹ ಪುನೀತ ಸೇವೆಯಲ್ಲಿ ಕೈ ಜೋಡಿಸೋಣ. ಸಮಾಜದ ಸಮಸ್ತ ಬಾಂಧವರ ಒಗ್ಗೂಡುವಿಕೆಯೇ ಸಮುದಾಯದ ಆಸ್ತಿಯಾಗಿದ್ದು ನಾವೂ ಒಗ್ಗೂಡಿ ಬಂಟಶಕ್ತಿ ಬಲಶಾಲಿಯಾಗಿಸೋಣ ಎಂದು ಎಂ ಆರ್ ಜಿ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ನ ಕಾರ್ಯಾಧ್ಯಕ್ಷ, ಆಡಳಿತ ನಿರ್ದೇಶಕ…
ಬಂಟರ ಸಂಘ (ರಿ) ಸುರತ್ಕಲ್ ಇದರ 24 ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜೂನ್ 9 ರಂದು ಭಾನುವಾರ ಸಂಜೆ 5 ಗಂಟೆಗೆ ಬಂಟರ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, 10.30 ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸುರತ್ಕಲ್ ಬಂಟರ ಸಂಘದ ಗ್ರಾಮವಾರು ಸಾಂಸ್ಖೃತಿಕ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ, ಸಹಾಯಹಸ್ತ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ. ಸಮಾರಂಭವನ್ನು ಮುಂಬಯಿ ವಿ.ಕೆ. ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ ವೈ ಭರತ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ “ಪಟ್ಲ ಸಂಭ್ರಮ 2024” ಅದ್ದೂರಿಯಾಗಿ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ, ಪಟ್ಲ ಸಂಭ್ರಮ ಹಿಂದೆಂದಿಗಿಂತಲೂ ಅದ್ದೂರಿಯಾಗಿ ಯಶಸ್ವಿಯಾಗಿ ನಡೆಯಲು 40 ಘಟಕಗಳು ಅವಿರತವಾಗಿ ದುಡಿದಿರುವುದೇ ಕಾರಣವಾಗಿದೆ. ಬಂಧುಗಳ ಸಹಕಾರಕ್ಕಾಗಿ ಸದಾ ಚಿರಋಣಿಯಾಗಿದ್ದೇನೆ. ನನ್ನನ್ನು ಪ್ರೀತಿಸುವ ಬಂಧುಗಳನ್ನು ನನ್ನ ಹೃದಯದಲ್ಲಿ ಆರಾಧಿಸುತ್ತೇನೆ ಎಂದು ಭಾವನಾತ್ಮಕವಾಗಿ ನುಡಿದರು. ಎಲ್ಲರೂ ಸ್ವಇಚ್ಛೆಯಿಂದ ದುಡಿದಿದ್ದಾರೆ. ಚಲನಚಿತ್ರ ನಟ ಕಿಚ್ಚ ಸುದೀಪ್ ಸಮಾರಂಭದಲ್ಲಿ ಭಾಗವಹಿಸಿರುವುದರಿಂದ ಜನರನ್ನು ನಿಯಂತ್ರಿಸಲು ಸ್ವಲ್ಪ ಕಷ್ಟವಾಯಿತು. ಫೌಂಡೇಶನ್ ನ ಕಾರ್ಯಕ್ರಮವನ್ನು ನೋಡಿ ಕಿಚ್ಚ ಸುದೀಪ್ ಮೆಚ್ಚಿಕೊಂಡಿದ್ದಾರೆ. ಮುಂದಿನ ವರ್ಷ ಪಟ್ಲ ಸಂಭ್ರಮದ ದಶಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಎಷ್ಟು ದಿನ ಮಾಡಬೇಕು, ಕಾರ್ಯಕ್ರಮ ಯಾವ ರೀತಿ ನಡೆಯಬೇಕು ಎಂಬುದನ್ನು ಎಲ್ಲಾ ಘಟಕಗಳ ಮುಖ್ಯಸ್ಥರನ್ನು ಕರೆದು ಚರ್ಚಿಸಲಾಗುವುದು…
ಮೂಡುಬಿದಿರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವೃತ್ತಿಪರ ಕೋರ್ಸಗಳ ಪ್ರವೇಶಕ್ಕಾಗಿ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಮೊದಲ 10 ರ್ಯಾಂಕ್ನಲ್ಲಿ ಇಬ್ಬರು, ಮೊದಲ 50ರಲ್ಲಿ ಒಂಬತ್ತು, ಮೊದಲ 100ರಲ್ಲಿ 21, ಮೊದಲ 200ರಲ್ಲಿ 48, 300ರಲ್ಲಿ 85, 400ರಲ್ಲಿ 117, 500ರಲ್ಲಿ 157, 1000ದ ಒಳಗೆ 516, 2000ದ ಒಳಗೆ 1048, 3000ದ ಒಳಗೆ 1773, 4000ದ ಒಳಗೆ 2107, 5000ದ ಒಳಗೆ 2656 ವಿದ್ಯಾರ್ಥಿಗಳು ರ್ಯಾಂಕ್ ಪಡೆದುಕೊಂಡಿದ್ದಾರೆ.ಪ್ರಮುಖವಾಗಿ ಇಂಜಿನಿಯರಿಂಗ್ ವಿಭಾಗದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೊದಲ 1000 ರ್ಯಾಂಕ್ಗಳಲ್ಲಿ 24 ವಿದ್ಯಾರ್ಥಿಗಳು, ಮೊದಲ 5000 ರ್ಯಾಂಕ್ನ ಒಳಗೆ 273 ವಿದ್ಯಾರ್ಥಿಗಳು, ಮೊದಲ 10000 ರ್ಯಾಂಕ್ಗಳಲ್ಲಿ ಒಟ್ಟು 738 ವಿದ್ಯಾರ್ಥಿಗಳು ರ್ಯಾಂಕ್ನ್ನು ಪಡೆದಿದ್ದು, ಇವೆರೆಲ್ಲರೂ ರಾಜ್ಯದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೀಟು ಪಡೆಯಲು ಅರ್ಹತೆ ಪಡೆದಿದ್ದಾರೆ. ವರುಣ್ ವಿ- ಪಶು ವೈದ್ಯಕೀಯದಲ್ಲಿ 3ನೇ ರ್ಯಾಂಕ್, ಕೃಷಿಯಲ್ಲಿ 5 ರ್ಯಾಂಕ್, ಸಾಗರ್- ಕೃಷಿಯಲ್ಲಿ…
ವಿದ್ಯಾಗಿರಿ: ‘ಮಕ್ಕಳಲ್ಲಿ ಕಲಿಕಾಸಕ್ತಿ ಮೂಡಿಸುವುದು ಶಿಕ್ಷಕರ ಹಾಗೂ ಪಾಲಕರ ಕರ್ತವ್ಯ ಎಂದು ಆಳ್ವಾಸ್ ಕಾ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು. ಆಳ್ವಾಸ್ ಕಾಲೇಜಿನ ಪದವಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪದವಿ ಕಾಲೇಜಿನ ದೃಶ್ಯ-ಶ್ರವಣ ಸಭಾಂಗಣದಲ್ಲಿ ಶನಿವಾರ ನಡೆದ 2024ನೇ ಸಾಲಿನ ‘ಶಿಕ್ಷಕ- ರಕ್ಷಕರ ಸಭೆ’ ಯಲ್ಲಿ ಅವರು ಮಾತನಾಡಿದರು. ಪದವಿ ಕಲಿಯುವ ಹಂತವು ನಮ್ಮನ್ನು ಎತ್ತರಕ್ಕೇರಿಸುವ ಒಂದು ಮೆಟ್ಟಿಲು ಅಥವಾ ಪಾತಾಳಕ್ಕಿಳಿಸುವ ಮೆಟ್ಟಿಲೂ ಆಗಬಹುದು. ಅದು ವಿದ್ಯಾರ್ಥಿಗಳ ಮೇಲೆ ನಿಂತಿರುತ್ತದೆ. ನಾವು ಇಲ್ಲೇಕೆ ಇದ್ದೇವೆ? ಈ ವಿಭಾಗವನ್ನು ಆಯ್ಕೆ ಮಾಡಿರುವುದು ಏಕೆ? ಇದೆಲ್ಲವನ್ನೂ ಸರಿಯಾಗಿ ಅರಿತಿರಬೇಕು. ಪ್ರತಿಯೊಬ್ಬರು ಅವರ ಬೆಳವಣಿಗೆ, ಏರಿಳಿತ, ಜ್ಞಾನದ ಮಟ್ಟ ಎಲ್ಲದಕ್ಕೂ ಅವರವರೇ ಕಾರಣರಾಗಿರುತ್ತಾರೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ‘ಮಕ್ಕಳ ಸವಾರ್ಂಗೀಣ ಪ್ರಗತಿಗಾಗಿ ಶೈಕ್ಷಣಿಕ ಸಂಸ್ಥೆ ಕಾರ್ಯನಿರ್ವಹಿಸಬೇಕು. ಕೇವಲ ಜ್ಞಾನ ನೀಡುವ ಕಾರ್ಯವಾಗದೇ ಮಕ್ಕಳ ಮನಸ್ಸು ಕಟ್ಟುವ ಕಾರ್ಯವಾಗಬೇಕು. ಪಾಲಕರೇ ಮಕ್ಕಳ ಮೊದಲ ಶಿಕ್ಷಕರಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳ ಎರಡನೇ ಪಾಲಕರಾಗಬೇಕು. ವ್ಯಕ್ತಿತ್ವ…
ರಾಜ್ಯದಾದ್ಯಂತ ಜೂನ್ 3 ರಂದು ನಡೆಯಲಿರುವ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹೆಬ್ರಿ ಬೀಡುವಿನ ಹೃದ್ರೋಗ ಶಸ್ತ್ರ ಚಿಕಿತ್ಸಾ ತಜ್ಞ ಪ್ರೊ.ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ವರ್ದಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಾಥಮಿಕ ಶಾಲಾ ಹಂತದಿಂದ ವೃತ್ತಿ ಶಿಕ್ಷಣ ಕಾಲೇಜು, ವಿವಿಧ ಹಂತಗಳ ಶೈಕ್ಷಣಿಕ ಸಂಸ್ಥೆಗಳ, ಭಾಷಾ ಮಾಧ್ಯಮದ, ಬೋಧಕ ವೃಂದದ, ಬೋಧಕೇತರರ, ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳ, ಆಡಳಿತ ಮಂಡಳಿಗಳ ಬಹುಮುಖಿ ಸಮಸ್ಯೆಗಳನ್ನು ಆಯಾ ವರ್ಗದಲ್ಲಿ ತಜ್ಞರೆನಿಸಿದವರಿಂದ ಸಲಹೆ ಮಾರ್ಗದರ್ಶನ ಪಡೆದು ಶಾಶ್ವತ ಪರಿಹಾರ ಕ್ರಮಗಳನ್ನು ರೂಪಿಸಲು ಕಾರ್ಯೋನ್ಮುಖವಾಗುವ ಭರವಸೆಯನ್ನು ನೀಡಿದ್ದಾರೆ ಹಾಗೂ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲು ಸಹಕಾರ, ಮಾರ್ಗದರ್ಶನ ಮತ್ತು ಉತ್ತೇಜನ ನೀಡುವಂತೆ ಮತದಾರರಲ್ಲಿ ಕೇಳಿಕೊಂಡರು. ಉಡುಪಿ, ಮಣಿಪಾಲ ಮತ್ತು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದು ಎಂ.ಬಿ.ಬಿ.ಎಸ್, ಎಂ.ಎಸ್ ( ಸರ್ಜರಿ ) ಮತ್ತು ಎಂ.ಸಿ.ಎಚ್ (ಸಿ.ಟಿ.ವಿ.ಎಸ್) ಪದವಿ…
ಕಾಸರಗೋಡು ಜಿಲ್ಲೆಯ ಕುಂಬಳೆ ಮುಳ್ಳೇರಿಯ ಮಾರ್ಗದ ಬದಿಯಲ್ಲಿ ಮುರಕಲ್ಲು ಗುಡ್ಡದಲ್ಲಿ ಒಂದು ಉಮಾಮಹೇಶ್ವರಿ ದೇವಾಲಯವಿದೆ. ಸಾಧಾರಣ ನಾಲ್ಕು ದಶಕದ ಹಿಂದೆ ಗುಡ್ಡದ ಸಮತಟ್ಟು ಪ್ರದೇಶದಲ್ಲಿ ಮುಳಿಹುಲ್ಲು ಹೊದಿಸಿದ ಒಂದು ಸಣ್ಣ ಗುಡಿ. ಅದರ ಹತ್ತಿರದಲ್ಲಿ ಒಂದು ದೇವರ ಅಡುಗೆ ಮನೆ ಅದರ ಪಕ್ಕದಲ್ಲಿ ಒಂದು ಪುಟ್ಟ ಬಾವಿ. ಒಪ್ಪತ್ತಿನ ಪೂಜೆ ವರ್ಷದ ಮಹಾ ಶಿವರಾತ್ರಿಗೆ ಊರವರೆಲ್ಲಾ ಸೇರಿ ಸಮಾರಾಧನೆ ಮಾಡಿ ಹೋಗುತ್ತಿದ್ದರು. 1980 ನಂತರ ಆರ್ಥಿಕ ಸ್ಥಿತಿ ಉತ್ತಮಗೊಂಡಂತೆ ಈ ಊರಿನ ಆಸ್ತಿಕ ಭಕ್ತರೆಲ್ಲಾ ಪ್ರಶ್ನೆ ಚಿಂತಿಸಿ ಜೀರ್ಣಾವಸ್ಥೆಯಲ್ಲಿದ್ದ ದೇವಾಲಯವನ್ನು ಕೆಡಿಸಿ ಉತ್ತಮ ರೀತಿಯಲ್ಲಿ ಧಾರ್ಮಿಕ ವಿಧಿ ವಿಧಾನದಂತೆ ನೂತನ ದೇವಾಲಯ ನಿರ್ಮಾಣವಾಯಿತು. ಹೆಚ್ಚು ಕಮ್ಮಿ 1990 ರಿಂದ 2015 ರವರೆಗೆ ನಾನಾ ಊರುಗಳಿಂದ ಇಷ್ಟಾರ್ಥ ಸಿದ್ಧಿಗಾಗಿ ಭಕ್ತ ಸಾಗರವೇ ಹರಿದು ಬರುತ್ತಿತ್ತು. ಇಲ್ಲಿನ ಸ್ಥಳ ಮಹಾತ್ಮೆ ಎಂದರೆ ವಿವಾಹ ಭಾಗ್ಯ ಸಿದ್ಧಿಸುವುದು. ಅಂದರೆ ಸನ್ನಿಧಿಗೆ ಬಂದು ದೇವರ ಮುಂದೆ ಅರಿಕೆ ಪ್ರಾರ್ಥನೆ ಮಾಡಿಕೊಂಡರೆ ವರ್ಷದ ಒಳಗಾಗಿ ಮಾಂಗಲ್ಯ ಭಾಗ್ಯ ಲಭಿಸುವುದೆಂದು…
ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ.ಲಿ. ಮುಂಬಯಿಯ ಸಿಎಂಡಿ ಬೆಳ್ಳಾಡಿ ಅಶೋಕ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ವಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಅವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು. ಇನ್ನು ಮುಂದೆ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.