Author: admin

ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ಚೇತನ್ ಗೌಡ ಎನ್. ಎಸ್. ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್‌ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್‌, ಸಾನಿಕ ಕೆ. ಎನ್. ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ. ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ‍್ಯಾಂಕ್‌, ಎಂ. ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ 20743ನೇ ರ‍್ಯಾಂಕ್‌, ಸಾಚಿ ಶಿವಕುಮಾರ್ ಕಡಿ 24728ನೇ ರ‍್ಯಾಂಕ್‌ , ಶ್ರೀರಕ್ಷಾ 28163ನೇ ರ‍್ಯಾಂಕ್‌ , ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ‍್ಯಾಂಕ್‌ , ಹರ್ಷಿತ್ ರಾಜು ಹೆಚ್. ಎಂ.. ಸಾಮಾನ್ಯ ವಿಭಾಗದಲ್ಲಿ 31140ನೇ ರ‍್ಯಾಂಕ್‌ , ಪ್ರೀತಿ ಸಿ. ಎಲ್. ಸಾಮಾನ್ಯ ವಿಭಾಗದಲ್ಲಿ 31939ನೇ ರ‍್ಯಾಂಕ್‌…

Read More

ಕೆ.ಸಿ.ಇ.ಟಿ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ತರುಣ್ ಸುರಾನಾನಿಗೆ ರಾಷ್ಟ್ರ ಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ 2403 ನೇ ರ್ಯಾಂಕ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇ.ಅಡ್ವನ್ಸ್ಡ್ 2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ್ಯಾಂಕ್ ಗಳಿಸಿದ್ದಾರೆ. ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( ಕೆಟಗರಿಯಲ್ಲಿ429 ರ್ಯಾಂಕ್),ಮನೋಜ್ ಕಾಮತ್( 3911 ) (ಜನರಲ್ ಇ.ಡಬ್ಲು.ಎಸ್ 394ರ್ಯಾಂಕ್). ಆಕಾಶ್ ಪ್ರಭು (5105 ), ಚಿಂತನ್ ಮೇಗಾವತ್ (6375 ) (ಕೆಟಗರಿಯಲ್ಲ್ಲಿ142 ರ್ಯಾಂಕ್),ವಿಷ್ಣು ಧರ್ಮಪ್ರಕಾಶ್ (8565) ರ್ಯಾಂಕ್ ಗಳಿಸಿದ್ದಾರೆ. ಒಟ್ಟು ಹನ್ನೆರಡು ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎ.ಪಿ.ಜಿ.ಇ.ಟಿ ಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Read More

ಪುಣೆ ಬಂಟರ ಸಂಘದ ನೂತನ ಸಮಿತಿಯ ಪ್ರಥಮ ಸಭೆಯು ಮೇ 27ರಂದು ಪುಣೆ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಸಂಘದ ಗೌರವಾಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಸುಲತಾ ಎ ಶೆಟ್ಟಿ ಮತ್ತು ಸಮಿತಿಯ ಪದಾಧಿಕಾರಿಗಳಾದ ಮೋಹನ್ ಶೆಟ್ಟಿ, ಸತೀಶ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ ಎರ್ಮಾಳ್, ಪ್ರಭಾಕರ್ ಶೆಟ್ಟಿ, ಗಣೇಶ್ ಶೆಟ್ಟಿ, ಮಾಧವ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ ನಿಟ್ಟೆ, ವಿವೇಕಾನಂದ ಶೆಟ್ಟಿ, ಶೇಖರ್ ಶೆಟ್ಟಿ, ಗಣೇಶ್ ಪೂಂಜಾ, ರವಿ ಶೆಟ್ಟಿ ಕಾಪು, ಉದಯ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ಮಹಿಳಾ ವಿಭಾಗದ ಪ್ರಮುಖರಾದ ನೀನಾ ಬಿ ಶೆಟ್ಟಿ, ವೀಣಾ ಪಿ ಶೆಟ್ಟಿ, ಗೀತಾ ಅರ್…

Read More

ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ.ಎಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ನೆತ್ತರೆಕೆರೆ’ ತುಳು ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು, ಸಿನಿಮಾ ರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದ್ದು ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಹೀಗಾಗಿ ಸಿನಿಮಾವನ್ನು ಜೂನ್ ಕೊನೆಯ ವಾರದಲ್ಲಿ ತೆರೆ ಕಾಣಿಸಲು ಚಿತ್ರ ತಂಡ ಸಿದ್ದತೆ ಮಾಡಿಕೊಂಡಿದೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ , ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಸುಮನ್ ತಲ್ವಾರ್, ಲಂಚುಲಾಲ್ ಕೆ.ಎಸ್ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಪೃಥ್ವಿನ್ ಪೊಳಲಿ, ಯುವ ಶೆಟ್ಟಿ, ಅನಿಲ್ ಉಪ್ಪಳ, ಪುಷ್ಪರಾಜ್ ಬೊಳ್ಳಾರು, ವಿಜಯ ಮಯ್ಯ, ನೀತ್ ಪೂಜಾರಿ, ಉತ್ಸವ್ ವಾಮಂಜೂರು, ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ, ಭವ್ಯಾ ಪೂಜಾರಿ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು,…

Read More

ಶಿಕ್ಷಣ ನಿಂತ ನೀರಲ್ಲ. ಪ್ರತೀ ದಿನವೂ ಹೊಸ ಹೊಸ ಬದಲಾವಣೆಯೊಂದಿಗೆ ನವೀನ ಚಿಂತನೆಗಳೊಂದಿಗೆ ಸಾಗುತ್ತಿದೆ. ಒಂದು ಸುಭದ್ರವಾದ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು. ಉತ್ತಮವಾದ ಶಿಕ್ಷಕ ಮಾತ್ರ ಅತ್ಯುತ್ತಮವಾದ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯವಾದ್ದರಿಂದ ಈ ಸಮಾಜವು ಯಾವಾಗಲೂ ಸಮರ್ಥವಾದ ಶಿಕ್ಷಕ ವರ್ಗವನ್ನು ಸದಾ ನಿರೀಕ್ಷಿಸುತ್ತದೆ. ಹಾಗಾಗಿ ಶಿಕ್ಷಕರಿಗೆ ಕಾಲ ಕಾಲಕ್ಕೆ ಅಗತ್ಯವಾದ ತರಬೇತಿಗಳನ್ನು ನೀಡಿದಾಗ ಶಿಕ್ಷಕರು ಬೋಧನೆಗೆ ಸಂಬಂಧಿಸಿದ ಹಲವಾರು ಕೌಶಲಗಳನ್ನು ಪಡೆದು ಉತ್ತಮ ಗುಣಮಟ್ಟದ ಬೋಧನೆ ಮಾಡಲು ಸಾಧ್ಯವಾಗಿ ಮಕ್ಕಳು ಕಲಿಕೆಯಲ್ಲಿ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಹೇಳಿದರು. ಇವರು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರು ದಿನಗಳು ನಡೆದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇ 26 ,27 ಮತ್ತು 28ರಂದು ನಡೆದ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ಬೋಧನೆಗೆ ಅಗತ್ಯವಾದ ಕೌಶಲಗಳನ್ನು ಕಲಿಸಲಾಯಿತು. ಮೊದಲ ದಿನದ…

Read More

ಬೆಂಗಳೂರಿನ ಎಂ.ವಿ ಆಡಿಟೋರಿಯಂನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ 70 ನೇ ವಾರ್ಷಿಕೋತ್ಸವದಲ್ಲಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಪುಣೆಗಳಲ್ಲಿ ಹೋಟೆಲ್ ಉದ್ಯಮ ಸ್ಥಾಪಿಸಿರುವ ಶ್ರೀ ಪಂಜುರ್ಲಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ರಾಜೇಂದ್ರ ವಿ ಶೆಟ್ಟಿ ಅವರಿಗೆ ಪ್ರತಿಷ್ಠಿತ ಹೋಟೆಲ್ ಉದ್ಯಮದ ಶ್ರೇಷ್ಠ ಪ್ರಶಸ್ತಿಯಾದ ಆತಿಥ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ| ನಿರ್ಮಲಾನಂದನಾಥ ಶ್ರೀ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಶಾಸಕ ಡಾ. ಅಶ್ವಥ್ ನಾರಾಯಣ, ಕರ್ನಾಟಕ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಮಧುಕರ್ ಶೆಟ್ಟಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read More

ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನೆಮಾದ ಟೀಸರನ್ನು ನಟ, ನಿರ್ದೇಶಕ ಡಾ|ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ಟೀಸರನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನೆಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ. ಟೀಸರ್ ನಮ್ಮನ್ನು ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ. ಸಿನೆಮಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ ಎಂದು ಅವರು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ತುಳು ಕಲಾಭಿಮಾನಿಗಳು ಈ ಸಿನೆಮಾವನ್ನು ನೋಡಿ ಚಿತ್ರ ತಂಡವನ್ನು ಬೆಂಬಲಿಸಬೇಕೆಂದು ಚಿತ್ರತಂಡ ವಿನಂತಿಸಿದೆ. ನಿರ್ಮಾಪಕ ಪ್ರತೀಕ್ ಯು. ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ಹಾಗೂ ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಈ ಸಂಧರ್ಭ ಉಪಸ್ಥಿತರಿದ್ದರು.

Read More

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕೃಷಿ ವಿಜ್ಞಾನ ವಿಭಾಗದಲ್ಲಿ ಪ್ರಸ್ತುತಿ ಶೆಟ್ಟಿ 222ನೇ ರ‍್ಯಾಂಕ್ ಪಡೆಯುವ ಮೂಲಕ ಸಾಧನೆ ಮೆರೆದಿದ್ದಾಳೆ. ಕುಂದಾಪುರದ ಸುಣ್ಣಾರಿಯಲ್ಲಿರುವ ಎಕ್ಸಲೆಂಟ್‌ ಪಿ.ಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಪ್ರಸ್ತುತಿ ಶೆಟ್ಟಿ 222ನೇ ರ‍್ಯಾಂಕ್ ಪಡೆಯುವ ಮೂಲಕ ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾಳೆ. ಬೈಂದೂರು ತಾಲೂಕಿನ ಗುಡ್ಡೆಯಂಗಡಿ ಆಲೂರು ಶ್ರೀ ಮೂಕಾಂಬಿಕ ಹಳ್ಳಿ ಜನ್ಮನೆ ನಿವಾಸಿ ಹಾಗೂ ಅಮವಾಸ್ಯೆಬೈಲಿನ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ್‌ ಶೆಟ್ಟಿ ಹಾಗೂ ಪ್ರತಿಮಾ ಶೆಟ್ಟಿ ದಂಪತಿಯ ಪುತ್ರಿಯಾದ ಪ್ರಸ್ತುತಿ ಶೆಟ್ಟಿಯ ಸಾಧನೆಗೆ ಎಕ್ಸಲೆಂಟ್‌ ಪಿ.ಯು ಕಾಲೇಜಿನ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿ ಕಾಲೇಜಿನಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಂ.ಎಂ ಹೆಗ್ಡೆ ಎಜ್ಯುಕೇಶನಲ್‌ ಟ್ರಸ್ಟ್‌ ಇದರ ಅಧ್ಯಕ್ಷರಾದ ಮೊಳಹಳ್ಳಿ ಮಹೇಶ್‌ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್‌ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಸನ್ ಮ್ಯಾಟ್ರಿಕ್ಸ್ ಸಿನಿಮಾಸ್ ಮತ್ತು ಫಿಲ್ಮ್ ವೀಲ್ ಸ್ಟುಡಿಯೋಸ್ ಅರ್ಪಿಸುವ “ಸ್ಕೂಲ್ ಲೀಡರ್” ಸಿನಿಮಾ ನಗರದ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಯಾಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಸಿಎ ಎಸ್ ಎಸ್ ನಾಯಕ್ ಅವರು, ಇದು ನಿರ್ಮಾಪಕ ಸತ್ಯೇಂದ್ರ ಪೈ ಅವರ ಮೂರನೇ ಸಿನಿಮಾ. ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಒತ್ತಡದಿಂದ ಹೊರಬಂದು ಹೇಗೆ ಜೀವನದಲ್ಲಿ ಸಾಧನೆ ಮಾಡಬಹುದು ಅನ್ನುವುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕನ್ನಡ ಶಾಲೆಗಳ ಇಂದಿನ ಪರಿಸ್ಥಿತಿಯನ್ನು ಮನ ಮುಟ್ಟುವಂತೆ ಚಿತ್ರಿಸಲಾಗಿದೆ. ಎಲ್ಲರೂ ಸಿನಿಮಾ ನೋಡಿ ಮಕ್ಕಳನ್ನು ಪ್ರೋತ್ಸಾಹಿಸಿ ಎಂದರು. ಬಳಿಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, ಸ್ಕೂಲ್ ಲೀಡರ್ ಹೈಸ್ಕೂಲ್ ಜೀವನದ ಕಥೆ ಎಲ್ಲರಿಗೂ ಈ ಸಿನಿಮಾ ಖಂಡಿತ ಇಷ್ಟವಾಗುತ್ತದೆ, ಎಲ್ಲರೂ ಸಿನಿಮಾ ನೋಡಿ ಎಂದು ಶುಭ ಹಾರೈಸಿದರು.ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಪೆನ್ಸಿಲ್ ಬಾಕ್ಸ್ ಕೊಟ್ಟಿದ್ದ ಚಿತ್ರ ನಿರ್ದೇಶಕ ರಝಾಕ್ ಪುತ್ತೂರು ಈಗ ಸ್ಕೂಲ್ ಲೀಡರ್ ನಂತಹ ಉತ್ತಮ…

Read More

ಗಣಿತನಗರ : ಡಾ.ಸುಧಾಕರ್ ಶೆಟ್ಟಿಯವರ ಪರಿಕಲ್ಪನೆಯಲ್ಲಿ ಜ್ಞಾನಸುಧಾ ಸಂಸ್ಥೆಯು ಉತ್ತಮ ಶಿಕ್ಷಣದ ಜೊತೆಯಲ್ಲಿ ದೇಶಪ್ರೇಮಿಗಳನ್ನು ನಿರ್ಮಿಸುತ್ತಿರುವ ಕಾರ್ಯ ಪ್ರಶಂಸನೀಯ. ಉತ್ತಮ ಫಲಿತಾಂಶದ ಮೂಲಕ ರಾಜ್ಯದ ಮಾದರಿ ಸಂಸ್ಥೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ನುಡಿದರು. ಅವರು ಕಾರ್ಕಳ ಜ್ಞಾನಸುಧಾದ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವದ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಕ್ಷೇತ್ರದ ಶಾಸಕ ಶ್ರೀ ವಿ. ಸುನಿಲ್ ಕುಮಾರ್‍ರವರು ಮೌಲ್ಯಗಳನ್ನು ಕೊಡುವಲ್ಲಿ ಮತ್ತು ಸಂಸ್ಕಾರ ಕೊಡುವಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಬಹಳ ದೊಡ್ಡ ಹೆಜ್ಜೆಯನ್ನಿಡುತ್ತಿದೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿಯ ಉಪಕುಲಪತಿಗಳಾದ ಪ್ರೊ.ಫೆಸರ್ ಡಾ| ಪಿ.ಎಲ್.ಧರ್ಮ ಮಾತನಾಡಿ ಯುವಮನಸುಗಳಲ್ಲಿ ದೇಶಪ್ರೇಮವನ್ನು ತುಂಬುವ ಕಾರ್ಯದ ಜೊತೆಗೆ, ಜ್ಞಾನಸುಧಾ ಪರಿವಾರ ಅತ್ಯುತ್ತಮ ನಾಗರಿಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಕಾರ್ಯದಲ್ಲಿ…

Read More