Author: admin

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಪುತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾ ಅಧಿಕಾರಿ ಸುಧೀರ್ ಕುಮಾರ್ ಕೆ. ರವರು ಆಯ್ಕೆ ಪ್ರಕ್ರಿಯೆ ನಡೆಸಿ ನಿರ್ದೇಶಕರ ಹೆಸರನ್ನು ಘೋಷಣೆ ಮಾಡಿದ್ದಾರೆ. ಶಶಿಕುಮಾರ್ ರೈ ಬಾಲ್ಯೊಟ್ಟುರವರು ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿದ್ದು, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, 8 ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರ್ಲತ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ…

Read More

ಮುಂಬಯಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಮಾನಸ್ ವಿ.ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಂ.ಸಿ.ಸಿ ಕಾಲೇಜ್ ಮುಲುಂಡ್ ಇಲ್ಲಿ ಪದವೀಧರರಾಗಿದ್ದು ಥಾಣೆಯ ವಾಗ್ಲೇ ಎಸ್ಟೇಟ್‌ನ ಹೆಸರಾಂತ ಸಿಎ ಕಂಪನಿಯಲ್ಲೊಂದಾದ ಪಂಕಜ್ ಪರೇಖ್ ಆಂಡ್ ಕಂಪೆನಿಯಲ್ಲಿ ಆರ್‌ಟಿಕಲ್‌ಸಿಫ್‌ನ್ನು ಮಾಡುತ್ತಿದ್ಡಾರೆ.  ಮಾನಸ್ ಶೆಟ್ಟಿ ಇವರು ಬೋಳ ಪರಾರಿ ವಿನಯ್ ಪಿ.ಶೆಟ್ಟಿ ಮತ್ತು ಮೂಲ್ಕಿ ಕಕ್ಕ ಪರಾರಿ ರೇಷ್ಮಾ ವಿ.ಶೆಟ್ಟಿ ದಂಪತಿ ಸುಪುತ್ರರಾಗಿದ್ದಾರೆ.

Read More

ಮುಂಬಯಿ: ಕರುನಾಡಿನಲ್ಲಿ ಆಚರಿಸುವ ಕರ್ನಾಟಕ ರಾಜ್ಯೋತ್ಸವವು ಬರೇ ಕರ್ನಾಟಕದಲ್ಲಿ ಅಲ್ಲ ಇಡೀ ಭಾರತ ದೇಶದಲ್ಲಿ ಎಲ್ಲ ಕನ್ನಡಿಗರು ಒಟ್ಟಿಗೆ ಸೇರಿ ಆಚರಿಸುತ್ತಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯೋತ್ಸವಕ್ಕೆ ತುಂಬಾ ಮಹತ್ವವಿದೆ. ಯಾಕೆಂದರೆ ನಮಗೆ ನಮ್ಮ ರಾಜ್ಯದ ಮೇಲೆ ಇರುವ ಪ್ರೀತಿ ಮತ್ತು ಜನ್ಮಭೂಮಿಯಲ್ಲಿರುವಂತಹ ವಿಶ್ವಾಸ. ಈ ಸಡಗರವನ್ನು ಇಂದಿಲ್ಲಿ ಮುಂಬಯಿಯಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣ. ಸಾಂಸ್ಕೃತಿಕ ಕಾರ್ಯಕ್ರಮ ಕಾಣುವಾಗ ಕನ್ನಡ, ನಮ್ಮ ರಾಜ್ಯ, ಸಂಸ್ಕೃತಿ ಏನೆಂದು  ಭಾವೀ ಜನಾಂಗಕ್ಕೆ ತಿಳಿಸಿ ಕೊಟ್ಟಂತಾಗುವುದು ಜೊತೆಗೆ ಅವರನ್ನು ಕನ್ನಡಕ್ಕೆ ಸೇರಿಸಿದಂತಾಗುವುದು. ಎಲ್ಲಾ ಕನ್ನಡಿಗರು ಒಟ್ಟಿಗೆ ಸೇರಬೇಕು. ನಮ್ಮ ರಾಜ್ಯದ ಪ್ರೀತಿಯನ್ನು ತೋರಿಸಬೇಕು. ಅಲ್ಲಿಯ ಸಂಸ್ಕೃತಿಯನ್ನು ಮುಂಬಯಿಯಲ್ಲಿ ಬೆಳೆಸಿ, ಊಳಿಸಬೇಕು ಎಂದು ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ತಿಳಿಸಿದರು. ಇಂದಿಲ್ಲಿ ಭಾನುವಾರ ಮಧ್ಯಾಹ್ನ ಕುರ್ಲಾ ಪೂರ್ವದ ಚುನ್ನಾಭಟ್ಟಿ ಇಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಒಕ್ಕಲಿಗರ ಸಂಘ…

Read More

ವಿದ್ಯಾಗಿರಿ: ನಿಮ್ಮ ಅಮೂಲ್ಯ ಸಮಯವನ್ನು ನಿಮ್ಮ ಮಕ್ಕಳಿಗಾಗಿ ಮೀಸಲಿಡಿ. ದಿನಕ್ಕೆ ಕನಿಷ್ಠ ೩೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್ ಒಕ್ಕೂಟದ ಮುಖ್ಯಸ್ಥ ಶ್ವೇತಾದ್ವೀಪ ದಾಸ ಹೇಳಿದರು. ಆಳ್ವಾಸ್  ಕೃಷಿ ಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಆಳ್ವಾಸ್ ಕಿಂಡರ್‌ಗಾರ್ಟನ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಮಕ್ಕಳಿಗೆ ಸ್ಮಾರ್ಟ್ ಫೋನ್, ಅಲೆಕ್ಸಾ, ಲ್ಯಾಪ್‌ಟಾಪ್‌ಗಿಂತಲೂ ಮುಖ್ಯವಾದ್ದದ್ದು ಪೋಷಕರ ಸಮಯ. ಮಕ್ಕಳ ಜೊತೆ ಕುಳಿತು ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ. ಇದರಿಂದ ಮಕ್ಕಳಿಗೂ ಹೊಸ ವಿಷಯಗಳ ಕುರಿತು ತಿಳಿಯುವ ಕುತೂಹಲ ಹೆಚ್ಚುತ್ತದೆ ಎಂದರು. ನಿಮ್ಮ ಕನಸುಗಳನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ಅವರೇ ಸ್ವಯಂ ಕನಸು ಕಾಣಲಿ ಎಂದು ಸಲಹೆ ನೀಡಿದರು.   ಮಕ್ಕಳ ಪೋಷಣಾ ವಿಧಾನ ಬದಲಾಗುತ್ತಾ ಇರುತ್ತದೆ. ಪ್ರತಿ ಹಂತದಲ್ಲೂ ಯಾವ ವಿಷಯ ಮಕ್ಕಳಿಗೆ ಒಳಿತು -ಕೆಡುಕು ಎಂಬುದನ್ನು ತಿಳಿದುಕೊಳ್ಳಬೇಕು.ನಿರಾಕರಣೆಯನ್ನೂ ಸ್ವೀಕರಿಸುವ ಮನೋಭಾವ ಮಕ್ಕಳಲ್ಲಿ ವೃದ್ಧಿಯಾಗಬೇಕು. ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೂ ಮಾತನಾಡುವ ಅಭ್ಯಾಸ ಬೆಳಿಸಿದಾಗ ಅವರ ಜ್ಞಾನಶಕ್ತಿಯು ಹೆಚ್ಚುತ್ತದೆ ಎಂದರು. ಆಳ್ವಾಸ್ ಶಿಕ್ಷಣ…

Read More

ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಠದ ನೂತನ ಸಂಚಾಲಕರಾಗಿ ಬೋಳ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 28ರಂದು ಸಹಕಾರ ಭಾರತಿಯ ರಾಜ್ಯಾಧ್ಯಕ್ಷರಾದ ಪ್ರಭುದೇವ ಆರ್ ಮಾಗನೂರ್ ಅವರು ಉಡುಪಿ ಕಿಸಾನ್ ಸಭಾ ಸಭಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಸಹಕಾರ ಭಾರತಿ ಕಾರ್ಯಕಾರಿಣಿಯಲ್ಲಿ ರಾಜ್ಯದ ಹಾಲು ಪ್ರಕೋಷ್ಠದ ನೂತನ ಸಂಚಾಲಕರಾಗಿ ಬೋಳ ಸದಾಶಿವ ಶೆಟ್ಟಿ ಅವರ ಆಯ್ಕೆಯನ್ನು ಘೋಷಿಸಿ ಜವಾಬ್ದಾರಿಯನ್ನು ನೀಡಿದರು. ಬೋಳ ಸದಾಶಿವ ಶೆಟ್ಟಿಯವರು ಕಳೆದ ಎರಡು ಅವಧಿಗಳಲ್ಲಿ ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಈ ಸಂದರ್ಭ ರಾಜ್ಯದ ನೂತನ ಪ್ರಧಾನ ಕಾರ್ಯದರ್ಶಿಗಳಾದ ಸಾಣೂರು ನರಸಿಂಹ ಕಾಮತ್, ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ, ರಾಜ್ಯ ಸಂಘಟನಾ ಪ್ರಮುಖರಾದ ಮಂಜುನಾಥ, ರಾಜ್ಯ ಮಹಿಳಾ ಪ್ರಮುಖರಾದ ವಿದ್ಯಾ ಪೈ, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಮಂಜುನಾಥ ಎಸ್. ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯಕ್ ಹಾಗೂ ಸಂಘಟನಾ ಕಾರ್ಯದರ್ಶಿ ಸುಜಿತ್ ಶೆಟ್ಟಿ ಉಪಸ್ಥಿತರಿದ್ದರು.

Read More

ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದ 8ನೇ ವರ್ಷದ ‘ಮಂಗಳೂರು ಕಂಬಳ’ಕ್ಕೆ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಇಂದು (ಡಿ.28) ಚಾಲನೆ ನೀಡಲಾಯಿತು. ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಅವರು ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಮೇಲ್ಮನೆ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ. ವಿ.ಕುಲಪತಿ ಪಿ.ಎಲ್ ಧರ್ಮ, ಚಿತ್ತರಂಜನ್, (ಬ್ರಹ್ಮಬೈದರ್ಕಳ ಗರೋಡಿ), ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಟೀಲು ಅನಂತ ಪದ್ಮನಾಭ ಆಸ್ರಣ್ಣ, ಜಯರಾಮ್ ಶೆಟ್ಟಿ, ಕಾರ್ಪೊರೇಟರ್ ಕಿರಣ್ ಕೋಡಿಕಲ್, ಮಂಗಳೂರು ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್…

Read More

ಕರಾವಳಿಯ ಯಕ್ಷಗಾನ ಕಲೆಯನ್ನು ಪ್ರಸ್ತುತ ಕಾಲಘಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಪಸರಿಸುತ್ತಿರುವ ಹಾಗೂ ತನ್ಮೂಲಕ ಯಕ್ಷಗಾನದ ಕಲಾವಿದರಿಗಲ್ಲದೇ ಇತರೇ ವಿವಿಧ ಪ್ರಕಾರದ ಅಶಕ್ತರ ಬಾಳಿಗೆ ಬೆಳಕಾಗಿ ಮೂಡಿಬಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ 10ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರಗಿಸುವ ಕುರಿತಾಗಿ ಫೌಂಡೇಶನ್ನಿನ ಮಹಾದಾನಿಗಳ, ಮಹಾಪೋಷಕರ, ಟ್ರಸ್ಟಿಗಳ, ವಿವಿಧ ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳ ಹಾಗೂ ಪಟ್ಲ ಅಭಿಮಾನಿಗಳ ಸಮಲೋಚನಾ ಸಭೆಯು ಪ್ರತಿಷ್ಠಿತ ಗೋಲ್ಡ್ ಪಿಂಚ್ ಹೋಟೆಲ್ ಸಭಾಂಗಣದಲ್ಲಿ ಜರಗಿತು. ಸಭೆಯ ವೇದಿಕೆಯಲ್ಲಿ ಟ್ರಸ್ಟಿನ ಗೌರವಾಧ್ಯಕ್ಷರು, ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿ, ಡಾ| ಕೆ ಪ್ರಕಾಶ್ ಶೆಟ್ಟಿ (MRG Group), ಟ್ರಸ್ಟಿನ ಸಂಚಾಲಕರಾದ ಐಕಳ ಹರೀಶ್ ಶೆಟ್ಟಿ, ಮಹಾಪೋಷಕರಾದ ಕೆ.ಎಂ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಸಂತೋಷ್ ಶೆಟ್ಟಿ ಪೂನಾ, ಕರ್ನಿರೆ ವಿಶ್ವನಾಥ ಶೆಟ್ಟಿ, ಸವಣೂರು ಸೀತಾರಾಮ ರೈಯವರು ಉಪಸ್ಥಿತರಿದ್ದು, ದಶಮಾನೋತ್ಸವ ಸಂಭ್ರಮವು ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮವಾಗಲಿ, ಕಾರ್ಯಕ್ರಮದ ಯಶಸ್ಸಿಗೆ ಗರಿಷ್ಠ ಮೊತ್ತದ ದೇಣಿಯನ್ನು ನೀಡಿ…

Read More

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ 2024ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಮುನಿಯಾಲು ಮುಡಾಯಿ ಕುಡೂರು ಶಂಕರ ಶೆಟ್ಟಿ ಮತ್ತು ಸುಶೀಲ ಶೆಟ್ಟಿ ದಂಪತಿ ಪುತ್ರ ಭರತ್ ಎಸ್. ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಇವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮುನಿಯಾಲಿನಲ್ಲಿ ಪಿಯುಸಿ ವಿದ್ಯಾಭ್ಯಾಸವನ್ನು ಭುವನೇಂದ್ರ ಕಾಲೇಜಿನಲ್ಲಿ ಪೂರೈಸಿದ್ದಾರೆ. ಸಿಎ ಪರೀಕ್ಷೆ ತರಬೇತಿಯನ್ನು ಪುಣೆಯಲ್ಲಿ ಪಡೆದಿರುತ್ತಾರೆ.

Read More

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ನಗರ ಪ್ರದೇಶ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡುತ್ತಿದ್ದು, ದಕ್ಷಿಣ ಕನ್ನಡ, ಉಡುಪಿಯ ಪ್ರಮುಖ ನಗರಗಳ ಮಂದಿ ಮಾದಕ ದ್ರವ್ಯದ ನಶೆಯಲ್ಲಿ ತೇಲಾಡುವುದು ಹೆಚ್ಚಾಗುತ್ತಿದೆ. ಹಿಂದೊಮ್ಮೆ ಸಭ್ಯಸ್ಥರ ನಾಡೆಂದೇ ಖ್ಯಾತಿ ಹೊಂದಿದ್ದ ಕರಾವಳಿಯಲ್ಲಿ ಈಗ ಯುವ ಜನರು ದಾರಿ ತಪ್ಪುತ್ತಿದ್ದಾರೆ. ಕರಾವಳಿ ಅಂದರೆ ಶಿಕ್ಷಣಕ್ಕೆ ಹೆಸರುವಾಸಿ. ಇಲ್ಲಿರುವ ಶಿಕ್ಷಣ ಸಂಸ್ಥೆಗಳು ತಮ್ಮ ಅತ್ಯುತ್ತಮ ಮೌಲ್ಯಯುತ ಶಿಕ್ಷಣಕ್ಕೆ ಹೆಸರುವಾಸಿ. ಹೀಗಾಗಿ ರಾಜ್ಯ, ಅನ್ಯರಾಜ್ಯದ ವಿದ್ಯಾರ್ಥಿಗಳು ಉಡುಪಿ, ಮಣಿಪಾಲ, ಮಂಗಳೂರು ನಗರಗಳತ್ತ ಮುಖ ಮಾಡುತ್ತಿದ್ದಾರೆ. ವರ್ಷಂಪ್ರತಿ ಸಹಸ್ರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಇನ್ನು ಡ್ರಗ್ಸ್, ಗಾಂಜಾ, ಮದ್ಯಪಾನ ಹೀಗೆ ಹಲವು ಕೆಟ್ಟ ಚಟಗಳು ಯುವಕರ ಜೀವನವನ್ನು ಬಲಿ ಪಡೆಯುತ್ತಿದೆ. ಆ ಮೂಲಕ ನಗರದ ಸ್ವಾಸ್ಥ್ಯ ಹಾಳಾಗುತ್ತಿದೆ. ಇಂದು ಬುದ್ಧಿವಂತರ ಜಿಲ್ಲೆಯಲ್ಲಿ ಯುವಕರು ಹಾಳಾಗುತ್ತಿದ್ದು ಮುಂದೆ ಯಾವ ಮಟ್ಟಕ್ಕೆ ಪರಿಣಾಮ ಬೀರುತ್ತೆ ಅನ್ನುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು…

Read More

ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಶಿವಮೊಗ್ಗ ಬಂಟರ ಸಂಘದ ಸದಸ್ಯರಾದ ಸುರೇಶ್ ಶೆಟ್ಟಿ ಹಾಗೂ ಸವಿತಾ ಎಸ್ ಶೆಟ್ಟಿಯವರ ಪುತ್ರ ಶಬರೀಶ್ ಎಸ್ ಶೆಟ್ಟಿ ಅವರು ನವೆಂಬರ್ 2024 ರಲ್ಲಿ ನಡೆದ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸಿಎ ಪದವಿಯನ್ನು ಪಡೆದಿದ್ದಾರೆ. ಇವರು ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಅನಿಲ್ ಶೆಟ್ಟಿ ಅವರ ಸಹೋದರನ ಪುತ್ರರಾಗಿದ್ದಾರೆ.

Read More